Subscribe to Updates
Get the latest creative news from FooBar about art, design and business.
- ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
- ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ
- ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!
- ಡಕಾಯಿತಿಗೆ ಸಂಚು: ಐವರ ಬಂಧನ
- ಪದವೀಧರರ ಮತದಾರರ ಕರಡು ಪಟ್ಟಿ ಪ್ರಕಟ
- ನ.30 ರಂದು ಅಮೋಘ ಸಂಗೀತ ಕಛೇರಿ
- ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ: ಗ್ರಾಮಸ್ಥರಿಂದ ವಿರೋಧ
- ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ
Author: admin
ಭಾರತದ ಆಧಾರ್ ವಿಶ್ವಾಸಾರ್ಹ ದಾಖಲೆಯಲ್ಲ ಎಂದು ಅಂತಾರಾಷ್ಟ್ರೀಯ ರೇಟಿಂಗ್ ಏಜೆನ್ಸಿ ಮೂಡೀಸ್ ಹೇಳಿದೆ. ಮೂಡೀಸ್ ಭದ್ರತೆ ಮತ್ತು ಗೌಪ್ಯತೆ-ಸಂಬಂಧಿತ ಅಂಶಗಳನ್ನು ಮೊದಲು ಇರಿಸುತ್ತದೆ. ಮೂಡೀಸ್ ಕೂಡ ಆಧಾರ್ ನ ಬಯೋಮೆಟ್ರಿಕ್ ವಿಶ್ವಾಸಾರ್ಹತೆಯನ್ನು 100 ಪ್ರತಿಶತವಲ್ಲ ಎಂದು ಟೀಕಿಸಿದೆ. ಆಧಾರ್ ನ್ನು ಅಂತಾರಾಷ್ಟ್ರೀಯವಾಗಿ ಪ್ರಾಥಮಿಕ ಗುರುತಿನ ದಾಖಲೆಯನ್ನಾಗಿಸುವುದು ಭಾರತದ ಬಹುಕಾಲದ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಟೀಕೆಯೊಂದಿಗೆ ಮೂಡಿ ಬಂದಿದೆ. ಬಿಸಿ ಮತ್ತು ಆರ್ದ್ರ ವಾತಾವರಣವು ಬಯೋಮೆಟ್ರಿಕ್ ಡೇಟಾದಲ್ಲಿ ದೋಷಗಳಿಗೆ ಕಾರಣವಾಗುತ್ತದೆ ಎಂದು ಮೂಡೀಸ್ ಗಮನಸೆಳೆದಿದೆ. ಈ ಸಣ್ಣಪುಟ್ಟ ದೋಷಗಳು ಸೇವಾ ನಿರಾಕರಣೆಗೆ ಕಾರಣವಾಗಿವೆ ಎಂದೂ ಮೂಡೀಸ್ ಆರೋಪಿಸಿದೆ. ಸಂಬಳ ಪಡೆಯುವ ಕಾರ್ಮಿಕರಿಗೆ ಆಧಾರ್ ಆಧಾರಿತ ಪಾವತಿ ವ್ಯವಸ್ಥೆಗೆ ಬದಲಾಯಿಸುವ ಗಡುವನ್ನು ಸರ್ಕಾರ ಐದನೇ ಬಾರಿಗೆ ವಿಸ್ತರಿಸಿದೆ. ಈ ಗಡುವನ್ನು ಡಿಸೆಂಬರ್ 2023 ರವರೆಗೆ ವಿಸ್ತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ಟೀಕೆಯೂ ಮೂಡಿ ಬಂದಿದೆ.
ಹ್ಯಾಂಗ್ಝೌ ಏಷ್ಯನ್ ಗೇಮ್ಸ್ನಲ್ಲಿ ಭಾರತ ಮೊದಲ ಚಿನ್ನ ಗೆದ್ದಿದ್ದುರುದ್ರಮಶ್ ಪಾಟೀಲ್, ಐಶ್ವರಿ ತೋಮರ್ ಮತ್ತು ದಿವ್ಯಾಂಶ್ ಪನ್ವಾರ್ ತಂಡ 10 ಮೀಟರ್ ಏರ್ ರೈಫಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಪಾಟೀಲ್ ಮತ್ತು ತೋಮರ್ ವೈಯಕ್ತಿಕ ಫೈನಲ್ಗೆ ಅರ್ಹತೆ ಪಡೆದಿದ್ದಾರೆ. ಪನ್ವಾರ್ ಕೂಡ ಟಾಪ್ 8 ರಲ್ಲಿ ಸ್ಥಾನ ಪಡೆದರು, ಆದರೆ ಎನ್ಒಸಿಯಿಂದ ಇಬ್ಬರು ಮಾತ್ರ ಫೈನಲ್ನಲ್ಲಿ ಶೂಟ್ ಮಾಡಬಹುದು. 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ವಿಶ್ವದಾಖಲೆಯೊಂದಿಗೆ ತಂಡದ ಸಾಧನೆಯಾಗಿದೆ. ಭಾರತ ತಂಡ 1893.7 ಅಂಕ ಗಳಿಸಿದೆ. ಕೊರಿಯಾ ಎರಡನೇ ಮತ್ತು ಚೀನಾ ಮೂರನೇ ಸ್ಥಾನ ಪಡೆದಿವೆ. ರೋಯಿಂಗ್ ನಲ್ಲಿ ಭಾರತವು ಏಷ್ಯನ್ ಗೇಮ್ಸ್ನಲ್ಲಿ ಮತ್ತೊಂದು ಪದಕವನ್ನು ಗೆದ್ದುಕೊಂಡಿತು, ಪುರುಷರ ನಾಲ್ಕರಲ್ಲಿ ಕಂಚು. ಜಸ್ವಿಂದರ್ ಸಿಂಗ್, ಭೀಮ್ ಸಿಂಗ್, ಪುನಿತ್ ಕುಮಾರ್ ಮತ್ತು ಆಶಿಶ್ ಪದಕ ಗೆದ್ದರು.
ಬೆಂಗಳೂರು : ಪಾರ್ಸೆಲ್ ಮೂಲಕ ಡ್ರಗ್ಸ್ ಪೂರೈಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿದ್ದರಿಂದ ವೈಟ್ಫೀಲ್ಡ್ ವಿಭಾಗದ ಪೊಲೀಸರು, ಹಲವು ಕಂಪನಿಗಳ ಗೋದಾಮುಗಳಲ್ಲಿ ಶೋಧ ಮುಂದುವರಿಸಲಾಗಿದೆ. ಕೊರಿಯರ್ ಹಾಗೂ ಪಾರ್ಸೆಲ್ನಲ್ಲಿ ಡ್ರಗ್ಸ್ ಸರಬರಾಜು ಮಾಡುತ್ತಿದ್ದಬಗ್ಗೆ ಮಾಹಿತಿ ಇತ್ತು. ಹೀಗಾಗಿ, ಹಲವು ಕಂಪನಿಗಳಿಗೆ ಸೇರಿದ್ದ 10 ಗೋದಾಮುಗಳಲ್ಲಿ ಪರಿಶೀಲನೆ ನಡೆಸಲಾಯಿತು’ ಎಂದು ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.
ಬೆಂಗಳೂರು : ವೀಲಿಂಗ್ ಮಾಡುವ ಪುಂಡರನ್ನು ರೌಡಿಗಳ ರೀತಿಯಲ್ಲೇ ಪರಿಗಣಿಸಿ ಕಠಿಣ ಕ್ರಮ ಜರುಗಿಸಲು ಚಿಂತಿಸಲಾಗಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ. ಎನ್. ಅನುಚೇತ್ ಹೇಳಿದ್ದಾರೆ. ಅಪ್ರಾಪ್ತರು ವೀಲಿಂಗ್ ಮಾಡಿ ಸಿಕ್ಕಿಬಿದ್ದರೆ ಅವರ ಪಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇನ್ನು ಸೈಲೆನ್ಸರ್ಗಳಲ್ಲಿ ಹೆಚ್ಚಿನ ಶಬ್ದ ಬರುವಂತೆ, ಕರ್ಕಶ ಧ್ವನಿಗಳನ್ನು ವಾಹನಗಳಲ್ಲಿ ಅಳವಡಿಸಿ ನವೀಕರಣ ಗೊಳಿಸುವ ಗ್ಯಾರೇಜ್ಗಳ ಮೇಲೆ ಕಣ್ಣಿಡಲಾಗಿದೆ. ಗ್ಯಾರೇಜ್ ಮಾಲೀಕರಿಗೂ ಬಿಸಿ ಮುಟ್ಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು : ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಶ್ವಾನದ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಘಟನೆ ನಡೆದಿದೆ. ಕೃತ್ಯ ಸಂಬಂಧ ಮಂಡ್ಯ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಕ ಪ್ರಾಣಿ ಜೊತೆ ಸಾರ್ವಜನಿಕ ಸ್ಥಳದಲ್ಲಿ ಅಸಹಜ ಲೈಗಿಂಕ ಕ್ರಿಯೆ ನಡೆಸಿದ ಮಂಡ್ಯ ಮೂಲದ ಮರಿಗೌಡ ಬಂಧಿತ ಆರೋಪಿಯಾಗಿದ್ದಾನೆ. ಪ್ರಾಣಿ ಕಲ್ಯಾಣ ಅಧಿಕಾರಿ ತೇಜೇಶ್ವರ್ ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ತಿಲಕ್ ನಗರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರು: ಆಂಟಿ’ ಎಂದು ಕರೆದಿದ್ದರಿಂದ ಕೋಪಗೊಂಡ ಮಹಿಳೆಯೊಬ್ಬರು ಎಟಿಎಂ ಘಟಕದ ಭದ್ರತಾ ಸಿಬ್ಬಂದಿ ಕಪಾಳಕ್ಕೆ ಹೊಡೆದು ಜೀವ ಬೆದರಿಕೆಯೊಡ್ಡಿದ್ದು, ಈ ಸಂಬಂಧ ಮಲ್ಲೇಶ್ವರ ಠಾಣೆಗೆ ದೂರು ಸಲ್ಲಿಕೆಯಾಗಿದೆ. ಎಟಿಎಂ ಘಟಕದ ಭದ್ರತಾ ಸಿಬ್ಬಂದಿಯಾಗಿರುವ 60 ವರ್ಷದ ವೃದ್ಧ, ಹಲ್ಲೆ ಹಾಗೂ ಜೀವ ಬೆದರಿಕೆ ಬಗ್ಗೆ ಇತ್ತೀಚೆಗೆ ದೂರು ನೀಡಿದ್ದಾರೆ. ಅಪರಿಚಿತ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಬೆಂಗಳೂರು : ಕಂಟೋನ್ಮಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಜಾಗದಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿ ಶಾಬಾಜ್ ಖಾನ್ನನ್ನು (26) ಹೈಗೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಜೆ. ಸಿ. ನಗರ ಮುನಿರೆಡ್ಡಿಪಾಳ್ಯದ ನಿವಾಸಿ ಶಬಾಜ್ ಖಾನ್, ಹಲವು ತಿಂಗಳಿನಿಂದ ಗಾಂಜಾ ಮಾರುತ್ತಿದ್ದ. ಸೆ. 22ರಂದು ಬೆಳಿಗ್ಗೆ ಗಸ್ತಿನಲ್ಲಿದ್ದ ಸಿಬ್ಬಂದಿ, ಆರೋಪಿಯನ್ನು ಬಂಧಿಸಿದ್ದಾರೆ. ಈತನಿಂದ 1 ಕೆ. ಜಿ 130 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಅಮೆರಿಕದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವೊಂದಕ್ಕೆ ಇನ್ಫೋಸಿಸ್ ಪ್ರತಿಷ್ಠಾನದ ಸುಧಾ ಮೂರ್ತಿ ಅವರು ಆಗಮಿಸಲಿದ್ದಾರೆ ಎಂದು ಸುಳ್ಳು ಹೇಳಿಕೊಂಡು, ಅವರ ಫೋಟೊ ಬಳಸಿ ವಂಚಿಸಿದ ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಾಗಿದೆ. ಸುಧಾ ಮೂರ್ತಿಯವರ ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಮಮತಾ ಸಂಜಯ್ ಎಂಬವರು ನೀಡಿದ ದೂರಿನನ್ವಯ ಲಾವಣ್ಯ ಹಾಗೂ ಶೃತಿ ಎಂಬಿಬ್ಬರ ವಿರುದ್ಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುನ್ನೇಕೊಳಲು ಬಳಿಯ ವಸಂತನಗರದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿ ಗಾಯಗೊಂಡಿದ್ದ ಸುಧಾಬಾಯಿ (32) ಅವರು ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾರೆ. ‘ಸೆ.17ರಂದು ಸಂಭವಿಸಿದ್ದ ಸ್ಫೋಟದಲ್ಲಿ ಸುಧಾಬಾಯಿ, ಅವರ ಪತಿ ಸೆಲ್ವಕುಮಾರ್ (54), ಮಕ್ಕಳಾದ ನಂದಿತಾ (15) ಹಾಗೂ ಮನೋಜ್ (12) ಗಾಯಗೊಂಡಿದ್ದರು. ಈ ಪೈಕಿ ತೀವ್ರವಾಗಿ ಗಾಯಗೊಂಡಿದ್ದ ಸುಧಾಬಾಯಿ ಅಸುನೀಗಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ
ಬೆಂಗಳೂರು: ಪಾರ್ಟಿಯೊಂದರಲ್ಲಿ ಖಾಸಗಿಯಾಗಿ ಪಾಲ್ಗೊಂಡಿದ್ದ 19 ಪೊಲೀಸರು, ನೃತ್ಯ ಮಾಡಿ ಅಶಿಸ್ತಿನಿಂದ ವರ್ತಿಸಿದ್ದರೆಂದು ಹೇಳಲಾಗುತ್ತಿದ್ದು, ಈ ಬಗ್ಗೆ ವಿಚಾರಣೆಗೆ ಆದೇಶಿಸಲಾಗಿದೆ. ಕಾಮಾಕ್ಷಿಪಾಳ್ಯ ಸಂಚಾರ ಠಾಣೆಯ 14 ಹಾಗೂ ಮಾಗಡಿ ರಸ್ತೆ ಸಂಚಾರ ಠಾಣೆಯ 5 ಪೊಲೀಸರು ಅಶಿಸ್ತು ತೋರಿರುವ ಆರೋಪವಿದೆ. ಈ ಬಗ್ಗೆ ವಿಚಾರಣೆ ಆರಂಭಿಸಲಾಗಿದ್ದು, ತಪ್ಪು ಕಂಡುಬಂದರೆ ಕ್ರಮ ಜರುಗಿಸಲಾಗುವುದು ಎಂದು ಸಂಚಾರ ವಿಭಾಗದ ಅಧಿಕಾರಿಯೊಬ್ಬರು ಹೇಳಿದರು.