Author: admin

ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ವೈದ್ಯಕೀಯ ಕಡ್ಡಾಯ ಗ್ರಾಮೀಣ ಸೇವಾ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನ ಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡಿಸಿದ್ದಾರೆ.‌ ಮಸೂದೆಯಲ್ಲಿ ‘ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆ’ ಎಂಬ ಪದಗಳ ಮೊದಲಿಗೆ ‘ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಲಾದಂತೆ ಅಸ್ತಿತ್ವದಲ್ಲಿರುವ ಖಾಲಿ ಹುದ್ದೆಗಳಲ್ಲಿ‘ ಎಂಬ ಪದಗಳನ್ನ ಸೇರಿಸುವ ಮೂಲಕ ತಿದ್ದುಪಡಿ ತರಲಾಗುತ್ತಿದೆ. ಈ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಮಾತ್ರ ವೈದ್ಯರ ಕಡ್ಡಾಯ ಸೇವೆಯನ್ನ ಬಳಸಿಕೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ. ಈ ಹಿಂದೆ ವೈದ್ಯರ ಕಡ್ಡಾಯ ಗ್ರಾಮೀಣ ಸೇವೆ ಕಾಯ್ದೆ ಜಾರಿಗೆ ತಂದ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇತ್ತು. ಹೀಗಾಗಿ ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದವರು. ಒಂದು ವರ್ಷ ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿ ಸರ್ಟಿಫಿಕೇಟ್ ಪಡೆಯಬೇಕು ಎಂಬ ನೀತಿಯನ್ನ ಸರ್ಕಾರ ಅನುಸರಿಸಿತ್ತು. ಆದರೆ, ಇತ್ತೀಚಿಗೆ ವೈದ್ಯಕೀಯ ಸ್ನಾತಕೋತ್ತರ…

Read More

ಉತ್ತರ ಪ್ರದೇಶ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೈದ್ಯರೊಬ್ಬರು ಪತ್ನಿ, ತನ್ನಿಬ್ಬರು ಮಕ್ಕಳನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ರಾಯ್‌ ಬರೇಲಿ ರೈಲ್ವೇ ಕಾಲೊನಿಯಲ್ಲಿ ನಡೆದಿದೆ. ರೈಲ್ವೆಯಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ನೇತ್ರ ತಜ್ಞ, 45 ವರ್ಷದ ಡಾ. ಅರುಣ್ ಕುಮಾರ್ ಈ ಕೃತ್ಯ ಎಸಗಿದ್ದಾರೆ. ಅವರನ್ನು ರಾಯ್ ಬರೇಲಿಯ ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿಯಲ್ಲಿ ನಿಯೋಜಿಸಲಾಗಿತ್ತು. ಡಾ. ಅರುಣ್ ಕುಮಾರ್ ಡಿಪ್ರೆಶನ್‌ ನಿಂದ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ . ಡಾ. ಅರುಣ್ ಕುಮಾರ್, ಪತ್ನಿ ಅರ್ಚನಾ, ಪುತ್ರಿ ಆದಿವಾ (12) ಮತ್ತು ಪುತ್ರ ಆರವ್‌ (12) ಮೃತದೇಹ ಮನೆಯೊಳಗೆ ರಕ್ತಸಿಕ್ತವಾಗಿ ಕಂಡು ಬಂದಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮನೆಯೊಳಗೆ ರಕ್ತಸಿಕ್ತವಾದ ಸುತ್ತಿಗೆ ಮತ್ತು ರಾಸಾಯನಿಕ ತುಂಬಿದ ಇಂಜೆಕ್ಷನ್‌ ಕಂಡು ಬಂದಿದೆ. ಡಾ. ಅರುಣ್ ಕುಮಾರ್ ಮೊದಲು ಮಕ್ಕಳು ಮತ್ತು ಪತ್ನಿಗೆ ಇಂಜೆಕ್ಷನ್‌ ಚುಚ್ಚಿ ಪ್ರಜ್ಞೆ ತಪ್ಪಿಸಿ…

Read More

ಲಾರಿ ಡ್ರೈವರ್ ಆಗಿದ್ದವ  ಬೆಂಗಳೂರಿನಲ್ಲಿ ಕೆಲ್ಸ ಮಾಡಿಕೊಂಡಿದ್ದ. ಅವನಿಗೆ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತಿದ್ದ. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಆತ, ನಾನು ಹೇಗಿದ್ದರೂ ಸಾಯುತ್ತೇನೆ, ಆದರೆ ನನಗಿಂತ ಮೊದಲು ನನ್ನ ಹೆಂಡತಿ ಸಾಯಲಿ ಅಂತಾ ಹತಾಶೆಯಿಂದ ಪತ್ನಿಯನ್ನ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ರಸೂಲ್ ಸಾಬ್ ಎಂಬ ವ್ಯಕ್ತಿಯು ತನಗೆ ಎರಡು ಕಿಡ್ನಿ ವೈಫಲ್ಯ ಆಗಿದೆ, ತನ್ನ ಹೆಂಡತಿ ಮೈಬುನಾ ಬಿ. (35) ತನಗೆ ಸರಿಯಾಗಿ ಆರೈಕೆ ಮಾಡುತ್ತಿಲ್ಲ, ನಾನು ದುಡಿಯುವಾಗ ಎಲ್ಲಾ ಚೆನ್ನಾಗಿತ್ತು. ಈಗ ಹಾಸಿಗೆ ಹಿಡಿದಿದ್ದೇನೆ ಅಂತಾ ನನ್ನ ಆರೈಕೆ ಮಾಡುತ್ತಿಲ್ಲ ಎಂದು, ಕೋಪಗೊಂಡು ಆಕೆ ಮಲಗಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ತಲೆಗೆ, ಕುತ್ತಿಗೆಗೆ ಕೊಡಲಿಯಿಂದ ಜೋರಾಗಿ ಹೊಡೆದು ಕೊಲೆ ಮಾಡಿದ್ದಾನೆ. ನಡು ರಾತ್ರಿ ಕೊಲೆ ಮಾಡಿ ತನ್ನ ಎರಡು ಮಕ್ಕಳನ್ನ ಕರೆದುಕೊಂಡು ತೆಕ್ಕಲಕೋಟೆ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Read More

ತುಮಕೂರು: ಡಿಸೆಂಬರ್‌ 6ಕ್ಕೆ ನಿರ್ಧಾರ ಹೇಳ್ತೇನೆ ಎಂದಿದ್ದ ಮಾಜಿ ಸಚಿವ ವಿ ಸೋಮಣ್ಣ ಈಗ ಉಲ್ಟಾ ಹೊಡೆದಿದ್ದಾರೆ, ತುಮಕೂರಿಗೆ ಆಗಮಿಸಿದ್ದ ಅವರು ಪಕ್ಷ ಸೇರ್ಪಡೆ ನಿರ್ಧಾರದ ಬಗ್ಗೆ ಗುಟ್ಟು ಬಿಟ್ಟು ಕೊಡದೇ ಮತ್ತೆ ಆಮೇಲೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ತುಮಕೂರಿನಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾತನಾಡುತ್ತಾ ತಮ್ಮ ನಿರ್ಧಾರ ತಿಳಿಸದೇ ಹೈಕಮಾಂಡ್‌ ಪ್ರತಿಕ್ರಿಯೆಗೆ ಕಾಯುತ್ತೇನೆ ಎಂದರು, ಇದರ ಜೊತೆ ಶಾಸಕ ಯತ್ನಾಳ್‌ ಬಗ್ಗೆ ನಾಲ್ಕು ಒಳ್ಳೆಯ ಮಾತನ್ನೂ ಹೇಳಿದರು. ಶಾಸಕ ಯತ್ನಾಳ್ ಸುಸಂಸ್ಕೃತ ರಾಜಕಾರಣಿ, ಅವರ ನೋವನ್ನು ನೇರವಾಗಿ ಹೇಳಿಕೊಂಡಿದ್ದಾರೆ , ಯತ್ನಾಳ್ ಅವರು ಇತ್ತೀಚೆಗೆ ಭೇಟಿಯಾಗಿಲ್ಲ, ಕಾಲ ಬಂದಾಗ ಎಲ್ಲಾ ಸರಿ ಹೋಗುತ್ತೆ.ಸತ್ಯವನ್ನು ಮರೆ ಮಾಚಲು ಸಾಧ್ಯವಿಲ್ಲ ಎಂದು ಹೇಳಿದರು. ಇನ್ನೂ 2-3 ದಿನ ಕಾಯುತ್ತೇನೆ ಡಿಸೆಂಬರ್‌ 6ಕ್ಕೆ ಅಲ್ಲ, 6ರ ನಂತರ ನಿರ್ಧಾರ ಹೇಳ್ತೇನೆ, ಇನ್ನೂ 2-3 ದಿನ ಹೈಕಮಾಂಡ್‌ ಪ್ರತಿಕ್ರಿಯೆಗೆ ಕಾಯುತ್ತೇನೆ ಎಂದು ಮಾಜಿ ಸಚಿವ ಸೋಮಣ್ಣ ಹೇಳಿದರು. 14-15 ವರ್ಷ ಮಂತ್ರಿ ಆಗಿದ್ದೆ…

Read More

ಮದ್ಯ ಸೇವನೆ ಆರೋಗ್ಯಕ್ಕೆ ಹಾನಿಕರವೆಂದು ತಿಳಿದಿದ್ದರೂ ಮಾದಕ ವ್ಯಸನಿಗಳು ಅದನ್ನು ಬಿಡುವುದಿಲ್ಲವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅನೇಕ ಸ್ವಯಂಸೇವಾ ಸಂಸ್ಥೆಗಳು ಈ ಸಮಸ್ಯೆಯನ್ನು ಪರಿಹರಿಸಲು ಶ್ರಮಿಸುತ್ತಿವೆ. ಈ ಕ್ರಮದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮತ್ತೊಂದು ಹೊಸ ಪ್ರಸ್ತಾವನೆಯನ್ನು ಮುಂದೆ ತಂದಿದೆ. ಆಲ್ಕೋಹಾಲ್ ಮತ್ತು ಸಕ್ಕರೆ ಪಾನೀಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸುವುದು ಪರಿಹಾರವಾಗಿದೆ. ಪ್ರಪಂಚದಾದ್ಯಂತದ ಅನೇಕ ದೇಶಗಳು ಅವುಗಳ ಮೇಲೆ ಕಡಿಮೆ ಸುಂಕವನ್ನು ವಿಧಿಸುತ್ತವೆ. ಆರೋಗ್ಯವನ್ನು ಕಾಪಾಡಿಕೊಳ್ಳಲು ಉತ್ತಮ ಮಾರ್ಗವೆಂದರೆ ಹೆಚ್ಚು ಆಲ್ಕೊಹಾಲ್ ಮತ್ತು ಸಕ್ಕರೆ ಪಾನೀಯಗಳ ಮೇಲೆ ತೆರಿಗೆ ವಿಧಿಸುವುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಆಲ್ಕೋಹಾಲ್ ತೆರಿಗೆ ನೀತಿ ಕೈಪಿಡಿಯನ್ನು ಬಿಡುಗಡೆ ಮಾಡಿದ್ದು, ಮದ್ಯದ ಮೇಲಿನ ತೆರಿಗೆಯನ್ನು ಹೆಚ್ಚಿಸುವುದರಿಂದ ಅದರ ಬಳಕೆಯನ್ನು ಕಡಿಮೆ ಮಾಡಬಹುದು. ಆಸ್ಪತ್ರೆಯ ದಾಖಲಾತಿಗಳು, ಸಾವುಗಳು, ಸಂಚಾರ ಉಲ್ಲಂಘನೆ ಮತ್ತು ಅಪರಾಧಗಳನ್ನು ಕಡಿಮೆ ಮಾಡಬಹುದು. ವಿಶ್ವ ಆರೋಗ್ಯ ಸಂಸ್ಥೆಯ ಪ್ರಚಾರ ನಿರ್ದೇಶಕ ರೂಡಿಗರ್ ಕ್ರೆಚ್ ಮಾತನಾಡಿ, ‘ಅನಾರೋಗ್ಯ ಉಂಟು…

Read More

ನವದೆಹಲಿ: ಮೂರು ದೊಡ್ಡ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಅದ್ಭುತ ವಿಜಯದಿಂದ ಬಿಜೆಪಿ ಸಂತೋಷವಾಗಿದೆ. ಈಗ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಕೆಲವು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ನಂಬಲಾಗಿದೆ. ಉದಾಹರಣೆಗೆ, ಪಿಎಂ-ಕಿಸಾನ್ ಕಂತನ್ನು ಹೆಚ್ಚಿಸುವ ಬಗ್ಗೆ ಘೋಷಣೆ ಮಾಡುವ ಸಾಧ್ಯತೆಯಿದೆ. ಅದೇ ರೀತಿ ಮಧ್ಯಮ ವರ್ಗದವರಿಗೂ ಮನೆ ಉಡುಗೊರೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 77 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕೂಡ ಇದನ್ನು ಸೂಚಿಸಿದ್ದಾರೆ. ವಾಸ್ತವವಾಗಿ, ವಸತಿ ಯೋಜನೆಯಡಿ ಸಾಲದ ಬಡ್ಡಿಗೆ ಸಬ್ಸಿಡಿ ನೀಡಲು ಸರ್ಕಾರ ಯೋಜಿಸುತ್ತಿದೆ. ಇತ್ತೀಚೆಗೆ, ಸುದ್ದಿ ಸಂಸ್ಥೆ ರಾಯಿಟರ್ಸ್ 5 ವರ್ಷಗಳಲ್ಲಿ 600 ಬಿಲಿಯನ್ ರೂಪಾಯಿಗಳನ್ನು (7.2 ಬಿಲಿಯನ್ ಡಾಲರ್) ಖರ್ಚು ಮಾಡಲಾಗುವುದು ಎಂದು ವರದಿಯಲ್ಲಿ ವರದಿ ಮಾಡಿದೆ. ಈ ಯೋಜನೆಯು 9 ಲಕ್ಷ ರೂ.ವರೆಗಿನ ಸಾಲಗಳಿಗೆ ವಾರ್ಷಿಕ 3-6.5% ನಡುವೆ ಬಡ್ಡಿ ಸಬ್ಸಿಡಿಯನ್ನು ನೀಡಲು ಯೋಜಿಸಿದೆ. ಇದು 20 ವರ್ಷಗಳ ಅವಧಿಗೆ 50 ಲಕ್ಷ…

Read More

ಬೆಳಗಾವಿ: ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಸ್ವತಃ ಕಾಂಗ್ರೆಸ್ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ ನೀಡಿದ್ದಾರೆ.  ಬೆಳಗಾವಿಯಲ್ಲಿ ಸ್ಪಷ್ಟನೆ ನೀಡಿರುವ ಅವರು, ಈ ಆರೋಪ ಸತ್ಯಕ್ಕೆ ದೂರವಾಗಿದ್ದಾಗಿದೆ. ಸುಳ್ಳು ಆರೋಪ ಎಂದಿದ್ದಾರೆ. ನಾವು ಹಲ್ಲೆ ಮಾಡುವ ಕೆಲಸಕ್ಕೆ ಕೈ ಹಾಕುವುದಿಲ್ಲ, ಶಿಸ್ತಿನಿಂದ ರಾಜಕೀಯ ಮಾಡುತ್ತೇವೆ. ಈ ಬಗ್ಗೆ ತನಿಖೆ ಆಗಬೇಕು ಸ್ಪಷ್ಟ ಮಾಹಿತಿ ಹೊರಬರಬೇಕು. ಹಲ್ಲೆ ಯಾರು ಮಾಡಿದರೂ ಎನ್ನುವುದರ ಬಗ್ಗೆ ಫಾರೆನ್ಸಿಕ್ ರಿಪೋರ್ಟ್ ಬರಬೇಕಾಗುತ್ತದೆ. ಪೊಲೀಸ್ ಇಲಾಖೆಯಲ್ಲಿ ಈ ಬಗ್ಗೆ ಸಾಕಷ್ಟು ಅನುಮಾನಗಳಿವೆ ಎಂದಿದ್ದಾರೆ.  ಪೃಥ್ವಿ ಸಿಂಗ್ ಒಬ್ಬ ನಟೋರಿಯಸ್ ಬ್ಲಾಕ್ ಮೇಲ್ ಮನುಷ್ಯ. ಅವನು ಸುಳ್ಳು ಹೇಳುತ್ತಿದ್ದಾನೆ. ನನ್ನ ಆತ್ನೀಯರು ಅವನ ಮನೆಗೆ ಭೇಟಿಗೆ ಹೋಗಿದ್ದು ನಿಜ. ಅವನ ಮನೆಯಲ್ಲಿ ಮೊದಲು ನಮ್ಮ ಕಚೇರಿಯಿತ್ತು. ಆ ರೆಂಟ್ ಅಗ್ರಿಮೆಂಟ್ ವಾಪಸ್ ಕೇಳಲು ನನ್ನ ಆತ್ಮೀಯರು ಹೋಗಿದ್ದರು. ಇದೇ ಸನ್ನಿವೇಶ ಇಟ್ಟುಕೊಂಡು ಆತ ದೃಶ್ಯ ಹೆಣೆದಿದ್ದಾನೆ. ಇದರಲ್ಲಿ ಯಾವುದೇ ರಾಜಕೀಯ ವೈಷಮ್ಯವಿಲ್ಲ. ಅವನಿಗೆ ರಿಕಾರ್ಡಿಂಗ್ ಮಾಡುವ…

Read More

ಪ್ರತಿ ಭಾರತೀಯ ಮನೆಯಲ್ಲಿ, ಕರಿಬೇವಿನ ಎಲೆಗಳು ಸಾಮಾನ್ಯ ಅಡುಗೆ ಪದಾರ್ಥವಾಗಿದೆ. ಈ ಎಲೆಗಳು ಅಸಂಖ್ಯಾತ ಪ್ರಯೋಜನಗಳೊಂದಿಗೆ ಬರುತ್ತವೆ, ವಿಶೇಷವಾಗಿ ನಿಮ್ಮ ಕೂದಲಿಗೆ. ಕರಿಬೇವಿನ ಎಲೆಗಳ ಅದ್ಭುತಗಳನ್ನು ಅನ್ವೇಷಿಸಿ ಮತ್ತು ಅದನ್ನು ನಿಮ್ಮ ಕೂದಲ ರಕ್ಷಣೆಯ ದಿನಚರಿಯಲ್ಲಿ ಅಳವಡಿಸಲು  ವಿಭಿನ್ನ ಮಾರ್ಗಗಳನ್ನು ಕಲಿಯಿರಿ. ಕೂದಲಿನ ಬೆಳವಣಿಗೆ ಮತ್ತು ಇತರ ಸಮಸ್ಯೆಗಳಿಗೆ ಕರಿಬೇವಿನ ಎಲೆಗಳನ್ನು ಹೇಗೆ ಬಳಸುವುದು? ಸಾಮಾನ್ಯ ಕೂದಲಿನ ಸಮಸ್ಯೆಗಳಿಗೆ ಕರಿಬೇವಿನ ಎಲೆಗಳು ಬಳಸುವ ವಿಧಾನಗಳು ಇಲ್ಲಿವೆ. ಕರಿಬೇವಿನ ಎಲೆಗಳು ಕೂದಲಿನ ಬೆಳವಣಿಗೆಯನ್ನು ಸುಧಾರಿಸುತ್ತದೆ. *ಅರ್ಧ ಕಪ್ ತಾಜಾ ಕರಿಬೇವಿನ ಎಲೆಗಳನ್ನು ಅರ್ಧ ಕಪ್ ತಾಜಾ ಮೇಥಿ ಎಲೆಗಳು ಮತ್ತು ಒಂದು ತಾಜಾ ಆಮ್ಲಾವನ್ನು ಪೇಸ್ಟ್ ಮಾಡಲು ಸೇರಿಸಿ. ನೀವು ಈ ಪೇಸ್ಟ್ ಅನ್ನು ನಿಮ್ಮ ನೆತ್ತಿಗೆ ಅನ್ವಯಿಸಬೇಕು ಮತ್ತು ಅದನ್ನು ತೊಳೆಯುವ ಮೊದಲು 30 ನಿಮಿಷಗಳ ಕಾಲ ಬಿಡಿ. ಕರಿಬೇವಿನ ಎಲೆಗಳು ಹಾನಿಗೊಳಗಾದ ಕೂದಲನ್ನು ಸರಿಪಡಿಸುತ್ತವೆ. 2    * ಅರ್ಧ ಕಪ್ ಕರಿಬೇವಿನ ಎಲೆಗಳು ಮತ್ತು ಅರ್ಧ ಕಪ್ ದಾಸವಾಳದ…

Read More

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ 12 ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದರು ತಮ್ಮ ಲೋಕಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ನೇತೃತ್ವದಲ್ಲಿ ಸಂಸದರ ನಿಯೋಗ ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿತು. ಸ್ಪೀಕರ್ ಅವರನ್ನು ಭೇಟಿ ಮಾಡಿದವರಲ್ಲಿ ಮಧ್ಯಪ್ರದೇಶದ ನರೇಂದ್ರ ತೋಮರ್, ಪ್ರಹ್ಲಾದ್ ಪಟೇಲ್, ರಿತಿ ಪಾಠಕ್, ರಾಕೇಶ್ ಸಿಂಗ್, ಉದಯ್ ಪ್ರತಾಪ್ ಸಿಂಗ್ ಸೇರಿದ್ದಾರೆ. ರಾಜಸ್ಥಾನದಿಂದ, ರಾಜೀನಾಮೆ ಸಲ್ಲಿಸಿದ ಸಂಸದರಲ್ಲಿ ರಾಜ್ಯವರ್ಧನ್ ರಾಥೋಡ್, ಕಿರೋಡಿ ಲಾಲ್ ಮೀನಾ ಮತ್ತು ದಿಯಾ ಕುಮಾರಿ ಸೇರಿದ್ದರೆ, ಅರುಣ್ ಸಾವೊ ಮತ್ತು ಗೋಮತಿ ಸಾಯಿ ಛತ್ತೀಸ್‌ ಗಢದ ಸಂಸದರಾಗಿದ್ದರು. ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ಮುಖ್ಯಮಂತ್ರಿಗಳು ತಮ್ಮ ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಈ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಸೆಮಿಫೈನಲ್ ಎಂದು ಬಿಂಬಿಸಲಾಗಿದೆ.

Read More

ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನೇ ತೆಲಂಗಾಣದ ನೂತನ ಮುಖ್ಯಮಂತ್ರಿಯನ್ನಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ಘೋಷಣೆ ಮಾಡಿದ್ದಾರೆ. ಡಿಸಿಎಂ ಆಗಿ ಯಾರನ್ನು ನೇಮಿಸಬೇಕು ಎಂದು ಶೀಘ್ರದಲ್ಲೇ ತಿಳಿಸುವುದಾಗಿ ಅವರು ಹೇಳಿದ್ದಾರೆ. ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 64 ಸ್ಥಾನಗಳನ್ನು ಗೆದ್ದು ಬೀಗಿದೆ. ಸಿಎಂ ಹೆಸರನ್ನು ಅಧಿಕೃತ ಘೋಷಣೆ ಮಾಡಲು ಹೈಕಮಾಂಡ್ ಮೊರೆ ಹೋಗಲಾಗಿತ್ತು. ಇನ್ನು ರೇವಂತ್ ರೆಡ್ಡಿ ಸಿಎಂ ಆಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Read More