Subscribe to Updates
Get the latest creative news from FooBar about art, design and business.
- ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
- ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
- ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
- ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
- ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
- ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
- “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ
- ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಉರುಳಿ ತಾಯಿ–ಮಗಳು ಸ್ಥಳದಲ್ಲೇ ಸಾವು
Author: admin
ಹಾಸನ: ನಿನ್ನೆ ಕಾಡಾನೆ ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿಯಿಂದ ಮೃತಪಟ್ಟ ಅರ್ಜುನ ಆನೆ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದ ಬಳಿ ನಡೆಯುತ್ತಿದ್ದು ಆದರೆ ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಅರ್ಜುನ ಆನೆ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. 8 ಬಾರಿ ಅಂಬಾರಿಯನ್ನು ಹೊತ್ತಿದ್ದ ಅರ್ಜುನ ಆನೆ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಅರ್ಜುನ ಆನೆ ಹೆಸರಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕು. ಆ ನಿಟ್ಟಿನಲ್ಲಿ ಸೂಕ್ತ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು, ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ದಬ್ಬಳ್ಳಿಕಟ್ಟೆ ಗ್ರಾಮದ ಬಳಿ ಅರ್ಜುನ ಆನೆಯ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು ಈ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಅಂತ್ಯಕ್ರಿಯೆ ಸ್ಥಳದಲ್ಲಿ ಪ್ರತಿಭಟನೆ ತೀವ್ರ ಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಪ್ರಹಾರ ನಡೆಸಿದ್ದಾರೆ.
ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ಪ್ರಸ್ತುತ ರೈತರ ಕೃಷಿ ಪಂಪ್ ಸೆಟ್ ಗಳಿಗೆ ದಿನನಿತ್ಯ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದರು. ವಿಧಾನಪರಿಷತ್ ನಲ್ಲಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಕೇಳಿದ ಪ್ರಶ್ನೆಗೆ ಇಂಧನ ಸಚಿವರ ಪರವಾಗಿ ಅವರು ಉತ್ತರಿಸಿದರು. ರೈತರ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ರಾಜ್ಯದ ವಿವಿಧ ಭಾಗಗಳಲ್ಲಿನ ಬೇಡಿಕೆಗಳ ಹಿನ್ನೆಲೆಯಲ್ಲಿ ಭತ್ತ ಮತ್ತು ಕಬ್ಬು ಬೆಳೆಗಳ ಕಟಾವು ಪೂರ್ವ ಅವಧಿಯಲ್ಲಿ 7 ಗಂಟೆಗಳಿಗೂ ಹೆಚ್ಚಿನ ಅವಧಿಗೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಸ್ಥಳೀಯ ಅವಶ್ಯಕತೆಗೆ ತಕ್ಕಂತೆ ಹಗಲಿನಲ್ಲಿ 4 ಗಂಟೆಗಳು ಹಾಗೂ ರಾತ್ರಿ ವೇಳೆ 3 ಗಂಟೆಗಳು ಸೇರಿ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಈ ವರ್ಷ ಬರಗಾಲವಾಗಿರುವುದರಿಂದ ಕೃಷಿ ಪಂಪ್ ಸೆಟ್ ಗಳ ವಿದ್ಯುತ್…
ವಿಶೇಷ ಔಷಧೀಯ ಗುಣಗಳನ್ನು ಹೊಂದಿರುವ ಈ ಗಿಡವನ್ನು “ದೊಡ್ಡಪತ್ರೆ” ,”ಸಾಂಬ್ರಾಣಿ ಸೊಪ್ಪು” ಅಥವಾ “ಸಂಬಾರ ಸೊಪ್ಪು” ಹೀಗೆ ಹಲವಾರು ಹೆಸರುಗಳಿಂದ ಕರೆಯಲಾಗುತ್ತದೆ. ಮಲೆನಾಡಿನಲ್ಲಿ ಹೆಚ್ಚಾಗಿ ಇದರ ಉಪಯೋಗ ಕಂಡುಬರುತ್ತದೆಯಾದರೂ ಇದರ ಔಷಧೀಯ ಗುಣಗಳಿಂದಾಗಿ ಎಲ್ಲೆಡೆ ಪರಿಚಿತ. ಹಚ್ಚ ಹಸಿರಿನಿಂದ ಕೂಡಿದ, ದಪ್ಪವಾದ ಎಲೆಗಳನ್ನು ಹೊಂದಿರುವ ಇದು ಘಾಡವಾದ ವಾಸನೆನ್ನು ಹೊಂದಿದೆ. ಎಲೆಗಳು ದಪ್ಪವಾಗಿದ್ದು, ನೀರಿನ ಅಂಶ ಹೆಚ್ಚಿರುತ್ತದೆ. ಎಲೆಗಳನ್ನು ಕೊಯ್ದು ಸ್ವಲ್ಪ ಬೆಂಕಿಯಲ್ಲಿ ಬಾಡಿಸಿ ಹಿಂಡಿದರೆ ನೀರು ಸಿಗುತ್ತದೆ. ಇದನ್ನು ಸಾಮಾನ್ಯವಾಗಿ ಹಲವಾರು ಅಡುಗೆಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದಲ್ಲದೇ ಅನೇಕ ಆರೋಗ್ಯ ಉಪಯೋಗವನ್ನು ಇದು ಹೊಂದಿದೆ. ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆಯ ಎಲೆಯನ್ನು ಬಾಡಿಸಿ ನೆತ್ತಿಯ ಮೇಲೆ ಇಟ್ಟರೆ ಜ್ವರ ಇಳಿಯುತ್ತದೆ. ದೊಡ್ಡಪತ್ರೆ ಎಲೆಗಳ ರಸ ಮತ್ತು ಅಷ್ಟೇ ಪ್ರಮಾಣದ ಎಳ್ಳೆಣ್ಣೆಯನ್ನು ನಿತ್ಯ ತಲೆಗೆ ಹಚ್ಚಿಕೊಳ್ಳುವುದರಿಂದ ಕಣ್ಣುರಿ ಕಡಿಮೆಯಾಗುತ್ತದೆ. ದೊಡ್ಡಪತ್ರೆ ಎಲೆಗಳನ್ನು ಜಜ್ಜಿ ರಸ ತೆಗೆದು ಜೇನಿನೊಂದಿಗೆ ಸೇರಿಸಿ ಕುಡಿಯುವುದರಿಂದ ಕಫ, ಬೇಧಿ ಕಡಿಮೆಯಾಗುತ್ತದೆ. ಪದೇಪದೆ ಮಕ್ಕಳಲ್ಲಿ ಕಾಡುವ ಕಫ ಕೆಮ್ಮು…
ಬೆಂಗಳೂರು: ಹೆಣ್ಣು ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮತ್ತೋರ್ವ ನರ್ಸ’ನ್ನು ಪೊಲೀಸರು ಬಂಧಿಸಿದ್ದು, ಶುಶ್ರೂಷಕಿ ಉಷಾರಾಣಿ (35) ಬಂಧಿತ ಆರೋಪಿ. ಮೈಸೂರಿನ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉಷಾರಾಣಿ, ಜಾಲದ ಪ್ರಮುಖ ಆರೋಪಿ ಡಾ. ಚಂದನ್ ಬಲ್ಲಾಳ್ ಹಾಗೂ ಚೆನ್ನೈನ ವೈದ್ಯರೊಬ್ಬರ ತಂಡದಲ್ಲಿದ್ದರು ಎನ್ನಲಾಗಿದೆ. ಭ್ರೂಣ ಹತ್ಯೆ ಕುರಿತ ಸ್ಫೋಟಕ ಮಾಹಿತಿಗಳನ್ನು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದು, ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ ಹಾಗೂ 6 ತಿಂಗಳ ಮಗುವನ್ನೂ ಹೊರತೆಗೆದಿದ್ದೇನೆಂದು ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಮಗುವನ್ನು ಹತ್ಯೆ ಮಾಡಿ ಮೆಡಿಕಲ್ ವೇಸ್ಟ್ ಗೆ ಹಾಕುತ್ತಾ ಇದ್ದರು ಎಂದು ಹೇಳಿದ್ದಾರೆ. ಈ ನಡುವ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಈ ವೇಳೆ ಎರಡು ಪ್ರಕರಣ ಸಂಬಂಧ ಇದೂವರೆಗೆ ನಡೆದಿರುವ ತನಿಖೆ ಬಗ್ಗೆ ಮಾಹಿತಿ ಪಡೆದ ಸಿಐಡಿ ತಂಡವು, ಬಳಿಕ ಎಲ್ಲಾ ದಾಖಲೆಗಳನ್ನು ತನಿಖಾಧಿಕಾರಿಗಳಿಂದ ಸ್ವೀಕರಿಸಿ ತೆರಳಿತು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಬೆಳಗ್ಗೆ 11ಗಂಟೆಗೆ ಅಧಿವೇಶನ ಆರಂಭಗೊಳ್ಳಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು,ಇತ್ತ ಸುವರ್ಣಸೌಧದ ಹೊರಗೆ, ಪ್ರತಿಭಟನಾ ಸ್ಥಳ ಸೇರಿದಂತೆ ಎಲ್ಲೆಡೆ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ. ಇನ್ನು ಅಧಿವೇಶನಕ್ಕೆ ಸೂಕ್ತ ಸಮಯಕ್ಕೆ ಆಗಮಿಸುವ ಶಾಸಕರುಗಳಿಗೆ ಕಾಫಿ ಕಪ್ ಗಿಫ್ಟ್ ಕೊಡಲಾಗುತ್ತಿದೆ. ಈ ಬಗ್ಗೆ ಸ್ವೀಕರ್ ಯುಟಿ ಖಾದರ್ ಮಾಹಿತಿ ನೀಡಿದ್ದಾರೆ. ಕಳೆದ ಅಧಿವೇಶದನಲ್ಲಿ ಮೊದಲ ಬೇಗ ಬಂದವರ ಹೆಸರನ್ನ ಕೂಗಿ ಹೇಳುತ್ತೇವೆ ಎಂದು ಹೇಳಿದ್ವಿ. ಅಂತಿಮವಾಗಿ ಯಾರು ಎಷ್ಟು ದಿನ ಬಂದಿದ್ದಾರೆ ಅವರಿಗೆ ಗಿಫ್ಟ್ ಕೊಡುವುದಾಗಿ ಹೇಳಿದ್ವಿ. ಕಳೆದ ಅಧಿವೇಶನದಲ್ಲಿ ಕೆಲವರು ಒಂದು ದಿನ, ಮತ್ತೆ ಕೆಲವರು ಐದು ದಿನ, ಹಲವರು ಹತ್ತು ದಿನವೂ ಬಂದಿದ್ದಾರೆ. ಇದಕ್ಕೆ ಅನುಗುಣವಾಗಿ ಇವರಿಗೆ ಪ್ರೋತ್ಸಾಹ ನೀಡಲು, ಗುರುತಿಸಿಕೊಳ್ಳಲು ಪ್ರಶಸ್ತಿ ನೀಡುತ್ತಿದ್ದೇವೆ. ತಡವಾಗಿ ಬರುವವರಿಗೆ ಶಿಕ್ಷೆ ವಿಧಿಸುವುದಕ್ಕಿಂತ ಈ ರೀತಿ ಉಡುಗೊರೆ ಕೊಟ್ಟು ಬೇಗ ಬರುವಂತೆ ಪ್ರೇರಣ ಮಾಡುತ್ತೇವೆ ಎಂದರು.
ಬೆಂಗಳೂರು: ಅತಿ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿರುವ ದೇಶದ ನಗರಗಳ ಪೈಕಿ ಬೆಂಗಳೂರು ಹಾಗೂ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. 2022ರ ಜನವರಿಯಿಂದ ಡಿಸೆಂಬರ್ ವರೆಗಿನ ಅಪರಾಧಗಳ ಅಂಕಿ-ಅಂಶವನ್ನು ರಾಷ್ಟ್ರೀಯ ಅಪರಾಧಗಳ ದಾಖಲೆ ಬ್ಯುರೊ (ಎನ್ ಸಿಆರ್ಬಿ) ಬಿಡುಗಡೆ ಮಾಡಿದೆ. ಅಂತರ್ಜಾಲ ಬಳಕೆ ಪ್ರಮಾಣ ಹೆಚ್ಚಾಗಿದೆ. ಆನ್ ಲೈನ್ ಮೂಲಕ ನಗದು ವರ್ಗಾವಣೆ ಸುಲಭವಾಗಿದೆ. ಇದೇ ಕಾರಣಕ್ಕೆ ವಂಚಕರು, ಆನ್ ಲೈನ್ ವ್ಯವಸ್ಥೆ ಬಳಸಿಕೊಂಡು ಜನರಿಂದ ಹಣ ದೋಚುತ್ತಿದ್ದಾರೆ.
ಅಡುಗೆ ಮನೆ ಪದಾರ್ಥ ಮಂತ್ಯೆಯಲ್ಲಿ ಹಲವಾರು ಆರೋಗ್ಯ ಪ್ರಯೋಜನಗಳು: ಆರೋಗ್ಯದಲ್ಲಿ ಸುಧಾರಣೆ ತರಲು ಅಡುಗೆ ಮನೆಯ ಪದಾರ್ಥಗಳು ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಅಂತಹ ಒಂದು ಪದಾರ್ಥಗಳಲ್ಲಿ ಮೆಂತ್ಯ ಸಹ ಒಂದು. ಮೆಂತ್ಯ ಸೇವನೆಯಿಂದ ಹಸಿವನ್ನು ನಿಯಂತ್ರಿಸುತ್ತದೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ, ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ, ಉತ್ತಮ ಜೀರ್ಣಕ್ರಿಯೆಗೆ ಸಹಕಾರಿ, ಉರಿಯೂತ ನಿವಾರಕ ಗುಣಗಳು, ಪೋಷಕಾಂಶಗಳಿಂದ ಸಮೃದ್ಧವಾಗಿದೆ, ಎದೆ ಹಾಲಿನ ಪೂರೈಕೆಯನ್ನು ಹೆಚ್ಚಿಸುತ್ತದೆ, ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ, ಕೂದಲಿನ ಬೆಳವಣಿಗೆಗೆ ಒಳ್ಳೆಯದು. ಕುಂಬಳಕಾಯಿ ಬೀಜದಲ್ಲಿದೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು: ಕುಂಬಳಕಾಯಿ ಬೀಜ ಸೇವಿಸುವುದರಿಂದ ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತದೆ. ಕುಂಬಳಕಾಯಿ ಬೀಜದಲ್ಲಿ ಮೆಗ್ನಿಶಿಯಂ ಹೆಚ್ಚಿರುವುದರಿಂದ ತಮ್ಮ ದೇಹದ ಮೂಳೆಗಳನ್ನು ಆರೋಗ್ಯಯುತವಾಗಿ ಕಾಪಾಡಿಕೊಳ್ಳಲು ನೆರವಾಗುತ್ತದೆ. ಇದರಲ್ಲಿ ಸತುವಿನಂತ ಗುಣ ಲಕ್ಷಣಗಳಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಕುಂಬಳಕಾಯಿ ಬೀಜ ಸೇವನೆಯಿಂದ ಉತ್ತಮ ನಿದ್ರೆ ಮಾಡಲು ಸಹಕಾರಿಯಾಗಿದೆ. ಇದು ಜೀರ್ಣಕ್ರಿಯೆಗೂ ಉತ್ತಮವಾಗಿದೆ.
ವಿಪಕ್ಷ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕೆಂದು ಯತ್ನಾಳ್ ಅವರ ಆಗ್ರಹವಾಗಿದ್ದು, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಎಲ್ಪಿ(ಬಿಜೆಪಿ ಶಾಸಕಾಂಗ) ಸಭೆಗೆ ಬರಲ್ಲ ಎಂದು ಖಂಡ ತುಂಡವಾಗಿ ಹೇಳಿದರು. ಬಹಳಷ್ಟು ಅನುಕೂಲ ಇದ್ದವರಿಗೆ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನನ್ನು ಮಾಡುತ್ತಾರೆ. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ. ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ . ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ.…
ಬೆಂಗಳೂರು: ನೋಂದಣಿ ಸಂಖ್ಯೆ ಫಲಕ ಮರೆಮಾಚಿದ್ದ ಶಾಲೆಯೊಂದರ ಬಸ್ ಚಾಲಕನನ್ನು ವೈಟ್ಫೀಲ್ಡ್ ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದು, ಈ ಸಂಬಂಧ ಎಫ್ಐಆರ್ ದಾಖಲಾಗಿದೆ. ವೈಟ್ಫೀಲ್ಡ್ ಮುಖ್ಯರಸ್ತೆಯಲ್ಲಿ ಶಾಲಾ ಬಸ್ ಹೊರಟಿತ್ತು. ಅದರ ನೋಂದಣಿ ಸಂಖ್ಯೆ ಫಲಕವನ್ನು ಚಾಲಕ ಮರೆ ಮಾಚಿದ್ದ. ಅದನ್ನು ಗಮನಿಸಿದ್ದ ಸ್ಥಳೀಯರೊಬ್ಬರು, ಫೋಟೊ ತೆಗೆದು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಬೆಂಗಳೂರು: ಸೂಕ್ತ ನಿರ್ವಹಣೆ ಮಾಡದ ಹಿನ್ನೆಲೆ ಬೆಂಗಳೂರಿನ ಐತಿಹಾಸಿಕ ದೇಗುಲ ಬಸವನಗುಡಿಯಲ್ಲಿರುವ ದೊಡ್ಡ ಗಣೇಶ ದೇವಸ್ಥಾನದ ವಿಮಾನಗೋಪುರದಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಕುರಿತಾಗಿ ಪತ್ರ ಬರೆದರೂ ಪುರಾತತ್ವ ಇಲಾಖೆ ಇನ್ನೂ ಕ್ರಮಕೈಗೊಂಡಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಆರೋಪಿಸಿದೆ. ಅಲ್ಲದೇ, ಮಳೆ ಏನಾದರೂ ಬಂದರೆ ಬಿಟ್ಟಿರುವ ಬಿರುಕು ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆ ಇದೆ. ಹೀಗಾಗಿ ಆದಷ್ಟು ಬೇಗ ಗೋಪುರ ಸರಿಪಡಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ.