Author: admin

ಬೆಳಗಾವಿ: ಬಿಜೆಪಿ ಮುಖಂಡ ಪೃಥ್ವಿ ಸಿಂಗ್‌ ಗೆ ಚಾಕುವಿನಿಂದ ಇರಿದ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರನನ್ನು ಕೂಡಲೇ ಬಂಧನಕ್ಕೊಳಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಚಾಕುವಿನಿಂದ  ಇರಿತಕ್ಕೊಳಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೃಥ್ವಿ ಸಿಂಗ್ ಅವರನ್ನು ನಿನ್ನೆ ವಿಜಯೇಂದ್ರ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಚನ್ನರಾಜ್ ಹಟ್ಟಿಹೊಳಿ ಅವರ ಗನ್‌ ಮ್ಯಾನ್ ಹಾಗೂ ಅವರ ಬಲಗೈ ಬಂಟ ಇಬ್ಬರೂ ಪೃಥ್ವಿ ಸಿಂಗ್‌ ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಹಟ್ಟಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದು, ಹೀಗಾಗಿಯೇ ಹಗಲು ಹೊತ್ತಿನಲ್ಲಿ ಈ ರೀತಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿದರು. ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲೇ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿರುವುದು ದುರಾದೃಷ್ಟಕರ ಸಂಗತಿ. ಪೃಥ್ವಿ ಸಿಂಗ್ ಅವರ ಮೇಲಿನ ಹಲ್ಲೆಗೆ…

Read More

ಭವಾನಿ ರೇವಣ್ಣ ಆಡಿದ ಮಾತುಗಳಿಂದ ಯಾರಿಗಾದರೂ ನೋವಾಗಿದ್ದರೆ ರಾಜ್ಯದ ಜನರಿಗೆ ಪತ್ನಿಯ ಪರವಾಗಿ ನಾನೇ ಕ್ಷಮೆ ಕೇಳುತ್ತೇನೆ ಎಂದು ಹೆಚ್‌.ಡಿ. ರೇವಣ್ಣ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಹೆಚ್‌ಡಿ ರೇವಣ್ಣ, ಬೈಕ್ ಚಾಲಕನಿಗೆ ಹೆಚ್ಚು ಕಡಿಮೆ ಆಗಿದ್ದರೆ ಏನಾಗುತ್ತಿತ್ತು? ಭವಾನಿಯವರು ಏನೂ ಅಹಂಕಾರದ ಮಾತಾಡಿಲ್ಲ. ಭವಾನಿಯವರು ಯಾರದ್ದೋ ಸ್ನೇಹಿತರ ಕಾರಿನಲ್ಲಿ ಹೋಗಿದ್ದರು. ಅವರು ಅಪಘಾತ ಸಂಭವಿಸಿದಾಗ ಸಿಟ್ಟಿನಲ್ಲಿ ಮಾತನಾಡಿದ್ದಾರೆ. ನಮ್ಮ ಕುಟುಂಬ ಯಾರಿಗೂ ನೋವು ಆಗುವ ಕೆಲಸ ಮಾಡಿಲ್ಲ ಎಂದು ಹೇಳಿದರು. ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ಏನಾಗುವುದು? ಅದರ ವೀಡಿಯೋವನ್ನು ಬೇಕಂತಲೇ ಯಾರೋ ವೈರಲ್ ಮಾಡಿದ್ದಾರೆ. ಅವರು ಬೈಕ್‌ನವನ ಪ್ರಾಣದ ಬಗ್ಗೆ ಮಾತನಾಡಿಲ್ಲ. ಇವರದ್ದೇ ಪ್ರಾಣ ಹೋಗಿದ್ದರೆ ಏನು ಮಾಡುವುದು? ಅದರಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ. ಬೇಕಿದ್ದರೆ ಭವಾನಿ ಹತ್ತಿರನೂ ಕ್ಷಮೆ ಕೇಳಿಸೋಣ ಬಿಡಿ ಎಂದು ಹೇಳಿಕೆ ನೀಡಿದರು.

Read More

ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದು ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ ಬಿ  ಖಂಡ್ರೆ ಹೇಳಿದರು. ವಿಧಾನಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯೆ ಡಾ. ತೇಜಸ್ವಿನಿ ಗೌಡ ಅವರು, ಆನೆ ಹಾವಳಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆನೆಗಳು ಜನವಸತಿ ಪ್ರದೇಶಕ್ಕೆ ಬರುವುದನ್ನು ತಡೆಯಲು ಅನೆ ಕಂದಕ ನಿರ್ಮಾಣ, ರೇಲ್ವೇ ಬ್ಯಾರಿಕೇಡ್ ‌ಗಳ ಅಳವಡಿಕೆಯನ್ನು ಮಾಡಲಾಗುವುದು ಎಂದರು.

Read More

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಳ ಚಳಿಗಾಲ ಅಧಿವೇಶನ ವೀಕ್ಷಣೆಗೆ ಆಗಮಿಸುವ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿ ವಿಶೇಷ ಆತಿಥ್ಯ ನೀಡಲಾಯಿತು. ಕಲಾಪ ವೀಕ್ಷಣೆಗೆ ತಂಡೋಪತಂಡವಾಗಿ ಆಗಮಿಸುವ ಮಕ್ಕಳನ್ನು ಸುವರ್ಣ ವಿಧಾನಸೌಧದ ಉತ್ತರ ದ್ವಾರದ ಬಳಿಯ ಆಡಿಟೋರಿಯಂನಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ಕುರಿತು ಅರಿವು ಮೂಡಿಸಲಾಗುತ್ತಿದೆ. ಇದಲ್ಲದೇ ರಾಜ್ಯದ ಕಲೆ-ಸಂಸ್ಕೃತಿ, ಪ್ರವಾಸೋದ್ಯಮ ಕುರಿತ ಕಿರುಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ. ಚಳಿಗಾಲ ಅಧಿವೇಶನದ ಮೊದಲ ದಿನವಾದ ಸೋಮವಾರ(ಡಿ.4) ಸುವರ್ಣ ವಿಧಾನಸೌಧದ ಆಡಿಟೋರಿಯಂನಲ್ಲಿ ಮಕ್ಕಳಿಗೆ ಸಂವಿಧಾನ ಪೀಠಿಕೆ ಓದಿಸಲಾಯಿತು. ಇದಾದ ಬಳಿಕ ಸಂಪನ್ಮೂಲ ವ್ಯಕ್ತಿಗಳು ಸಂವಿಧಾನದಲ್ಲಿ ತಿಳಿಸಿರುವಂತಹ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳ ಕುರಿತು ತಿಳಿಸಿಕೊಟ್ಟರು. ಮಕ್ಕಳು ದೇಶದ ಭವಿಷ್ಯ. ಆದ್ದರಿಂದ ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವ, ಶಾಸಕಾಂಗ ಮತ್ತಿತರ ವಿಷಯಗಳ ಬಗ್ಗೆ ತಿಳಿಸಿಕೊಡಬೇಕು ಎಂಬುದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರ ಆಶಯ ಆಗಿದೆ. ಅವರ ಆಶಯದಂತೆ ಕಾರ್ಯರೂಪಕ್ಕೆ ತರಲಾಗಿರುತ್ತದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅತ್ಯಂತ ಮುತುವರ್ಜಿಯಿಂದ ಮಕ್ಕಳಿಗೆ ಉತ್ತಮ ವ್ಯವಸ್ಥೆಯನ್ನು ಕಲ್ಪಿಸುವ…

Read More

ಹಾಸನ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೀಡಾಗಿದೆ. ರೆಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ, ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿದ್ದರಿಂದ ಸಾಕಾನೆ ಅರ್ಜುನ ಮೃತಪಟ್ಟಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ದಾಳಿ ಮಾಡಿದೆ. ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿ ಮಾಡುತ್ತಿದ್ದಂತೆ ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ. ಕೊನೆಗೆ ಒಂಟಿಸಲಗದ ಜೊತೆ ಅರ್ಜುನ ಆನೆಯು ಒಂಟಿಯಾಗಿ ಹೋರಾಟ ನಡೆಸಿದೆ. ಈ ಕಾಳಗ ಆರಂಭವಾಗುತ್ತಿದ್ದಂತೆ ಅರ್ಜುನನ ಮೇಲಿನಿಂದ ಮಾವುತ ಇಳಿದು ಓಡಿದ್ದಾರೆ. ಅರ್ಜುನ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. 22 ವರ್ಷಗಳ ಕಾಲ ದಸರಾದಲ್ಲಿ ಭಾಗವಹಿಸಿದ್ದ ಸಾಕಾನೆ…

Read More

ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಜೆಪಿ ನಗರದ ಪಬ್‌ ನಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದ ವೇಳೆ ಪಾಕ್‌ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಗುರಪ್ಪನಪಾಳ್ಯ ನಿವಾಸಿಗಳಾದ ಇನಾಯತ್ ಉಲ್ಲಾ, ಸೈಯದ್ ಮುಬಾರಕ್ ಬಂಧಿತ ಆರೋಪಿಗಳು. ಜೆ.ಪಿ. ನಗರ ಮೊದಲನೇ ಹಂತದಲ್ಲಿರುವ ಮೋಖಹಾಲಿಕ್ ಪಬ್‌ನಲ್ಲಿ‌ ಭಾರತ ಮತ್ತು ಆಸ್ಟ್ರೇಲಿಯಾ ಮ್ಯಾಚ್‌ ವೀಕ್ಷಿಸುತ್ತಿದ್ದಾಗ ಆರೋಪಿಗಳು ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದಾರೆ. ಇದಕ್ಕೆ ಅಲ್ಲಿದ್ದ ಕೆಲವರು ಆಕ್ಷೇಪಿಸಿದ್ದಾರೆ. ಆದರೂ ಅವರು ಕೂಗಾಡಿದ್ದಾರೆ. ಹೀಗಾಗಿ ಅಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಜೆ.ಪಿ ನಗರ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮದ್ಯಪಾನದ ನಶೆಯಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ದೇವೆ ಎಂದು ಆರೋಪಿಗಳು ವಿಚಾರಣೆ ವೇಳೆ ಹೇಳಿದ್ದಾರೆ.

Read More

ಬೆಂಗಳೂರು: ಕನ್ನಡದ ಜನಪ್ರಿಯ ಹಿರಿಯ ನಟಿ ಲೀಲಾವತಿ ವಯೋ ಸಹಜ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು  ಸೋಲದೇವನಹಳ್ಳಿಯಲ್ಲಿ ಇರುವ ಹಿರಿಯ ನಟಿ  ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಲೀಲಾವತಿ ಅವರ ಚಿಕಿತ್ಸೆಯ ಅಗತ್ಯ ಕಂಡುಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು. ಲೀಲಾವತಿ ಅವರು ಆರೋಗ್ಯವಂತರಾಗಿದ್ದಾಗ ಜಮೀನು ವಿಚಾರವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಭೇಟಿಯಾಗುತ್ತಿದ್ದರು. ಈಗ ವಯೋಸಹಜವಾಗಿ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಅವರು ಒಬ್ಬ ನೈಜ ಪ್ರತಿಭೆಯ ಕಲಾವಿದೆ. ಅವರ ಮಗ ವಿನೋದ್ ರಾಜ್ ಕೂಡ ತಾಯಿಯನ್ನು ಕಾಳಜಿಯಿಂದ ಆರೈಕೆ ಮಾಡುತ್ತಿದ್ದಾರೆ. ಸರ್ಕಾರದಿಂದ ಏನೇ ಸಹಾಯದ ಅಗತ್ಯವಿದ್ದರು ಅದನ್ನು ಒದಗಿಸಲಾಗುವುದು ಎಂದು ಹೇಳಿದರು. ಇದೇ ವೇಳೆ ಪ್ರತಿಕ್ರಿಯಿಸಿದ ವಿನೋದ್ ರಾಜ್, ಸಿದ್ದರಾಮಯ್ಯ ಅವರ ತಾಯಿ ಆರೋಗ್ಯದ ಬಗ್ಗೆ ಪ್ರೀತಿಯಿಂದ ವಿಚಾರಿಸಿದ್ದಾರೆ ಎಂದು ತಿಳಿಸಿದರು. ಅಲ್ಲದೇ, ಅರಣ್ಯಾಧಿಕಾರಿಯಿಂದ ತೊಂದರೆ ವಿಚಾರವನ್ನು ಸಿಎಂ ಗಮನಕ್ಕೆ ತಂದಿದ್ದೇನೆ.  ನಮ್ಮದು…

Read More

ಬೆಂಗಳೂರು: ಅತ್ತೆಯ ಕಿರುಕುಳ ತಾಳಲಾರದೆ ನವವಿವಾಹಿತ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ. ಅನುಷಾ(23) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಗದೂರು ಗ್ರಾಮದ ಅನುಷಾ, ಪಕ್ಕದ ಊರಿನ ಪ್ರವೀಣ್ ಎಂಬುವವರೊಂದಿಗೆ 2 ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಒಂದು ವರ್ಷದಿಂದ ಅನುಷಾ ಹಾಗೂ ಪ್ರವೀಣ್ ಪರಿಚಯವಾಗಿ ಪರಸ್ಪರ ಪ್ರೀತಿಸುತ್ತಿದ್ದರು. ಈಕೆ ಪಾಲಕರ ವಿರೋಧದ ನಡುವೆಯೂ 2 ತಿಂಗಳ ಹಿಂದೆ ಮನೆ ಬಿಟ್ಟು ಬಂದು ಪ್ರವೀಣ್ ಜತೆ ಮದುವೆ ಆಗಿ ಸಿಂಗಯ್ಯನಪಾಳ್ಯದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಇವರ ಜತೆಗೆ ಪ್ರವೀಣ್ ತಾಯಿ ನಾಗಮ್ಮ ಇದ್ದರು. ಅನುಷಾ ಮನೆಯಲ್ಲೇ ಇದ್ದಳು. ಆದರೆ ಅತ್ತೆಯ ಅತಿಯಾದ ಕಿರುಕುಳದಿಂದಾಗಿ ಅನುಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  

Read More

ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಅರಿಶಿಣವು ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ದೇಹದಿಂದ ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತವನ್ನು ತೆಗೆದುಹಾಕಲು ಇದು ಅತ್ಯಂತ ಪರಿಣಾಮಕಾರಿ ಮಾರ್ಗವೆಂದು ಪರಿಗಣಿಸಲಾಗಿದೆ. ಸಂಧಿವಾತದಂತಹ ದೀರ್ಘಕಾಲದ ಜಂಟಿ ನೋವನ್ನು ಕಡಿಮೆ ಮಾಡಲು ಅರಿಶಿಣವನ್ನು ಸಹ ಉಪಯುಕ್ತವೆಂದು ಪರಿಗಣಿಸಲಾಗುತ್ತದೆ. ಪ್ರತಿ ಭಾರತೀಯ ಅಡುಗೆಮನೆಯಲ್ಲಿ ನೀವು ಸುಲಭವಾಗಿ ಅರಿಶಿಣವನ್ನು ಕಾಣಬಹುದು. ಇದನ್ನು ಬಹುತೇಕ ಎಲ್ಲಾ ಆಹಾರಗಳಲ್ಲಿ ಬಳಸಲಾಗುತ್ತದೆ, ಇದರ ಹೊರತಾಗಿ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ. ಪ್ರೋಟೀನ್, ಕ್ಯಾಲ್ಸಿಯಂ, ಫೈಬರ್, ಕಬ್ಬಿಣ, ತಾಮ್ರ, ಸತು ಮುಂತಾದ ಅನೇಕ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ. ಆದರೆ ಆಹಾರದಲ್ಲಿ ಅತಿಯಾದ ಅರಿಶಿಣವನ್ನು ಬಳಸುವುದರಿಂದ ಹಲವಾರು ಅನಾನುಕೂಲತೆಗಳಿವೆ ಎಂದು ನಿಮಗೆ ತಿಳಿದಿದೆಯೇ? ಇದರ ದುಷ್ಪರಿಣಾಮಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳೋಣ: ಹೊಟ್ಟೆಯ ಸಮಸ್ಯೆಗಳು: ಅರಿಶಿಣವು ಹೊಟ್ಟೆಗೆ ತುಂಬಾ ಹಾನಿಕಾರಕವೆಂದು ಪರಿಗಣಿಸಲಾಗಿದೆ. ನಿಮ್ಮ ಆಹಾರದಲ್ಲಿ ನೀವು ಹೆಚ್ಚಿನ ಪ್ರಮಾಣದಲ್ಲಿ ಅರಿಶಿಣವನ್ನು ಬಳಸಿದರೆ, ಅದು ಹೊಟ್ಟೆ ನೋವು ಮತ್ತು ಸೆಳೆತವನ್ನು ಉಂಟು ಮಾಡಬಹುದು. ಮೂತ್ರಪಿಂಡದ…

Read More

ನವದೆಹಲಿ: ಭಾರತೀಯ ವಾಯುಪಡೆಯ ಪಿಲಾಟಸ್ ಪಿಸಿ 7 ಎಂಕೆ -2 ತರಬೇತಿ ವಿಮಾನವು ತೆಲಂಗಾಣದ ಮೇಡಕ್ ಜಿಲ್ಲೆಯ ತೂಪ್ರಾನ್ ನ ರಾವೆಲ್ಲಿ ಗ್ರಾಮದಲ್ಲಿ ಅಪಘಾತಕ್ಕೀಡಾಗಿದ್ದು, ಇಬ್ಬರು ಪೈಲಟ್‌ ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಮಾನವು ದುಂಡಿಗಲ್ ವಾಯುಪಡೆ ಅಕಾಡೆಮಿಯಿಂದ ಹೊರಟಿತ್ತು. ಐಎಎಫ್ ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ ನಲ್ಲಿ ಈ ಘಟನೆಯ ಬಗ್ಗೆ ಪೋಸ್ಟ್ ಮಾಡಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪೈಲಟ್ ಗಳ ಸಾವಿಗೆ ಸಂತಾಪ ಸೂಚಿಸಿದ್ದು, “ಹೈದರಾಬಾದ್ ಬಳಿ ನಡೆದ ಈ ಅಪಘಾತದಿಂದ ದುಃಖಿತನಾಗಿದ್ದೇನೆ. ಇಬ್ಬರು ಪೈಲಟ್ಗಳು ಪ್ರಾಣ ಕಳೆದುಕೊಂಡಿರುವುದು ತೀವ್ರ ದುಃಖ ತಂದಿದೆ. ಈ ದುರಂತದ ಸಮಯದಲ್ಲಿ, ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ” ಎಂದು ಟ್ವೀಟ್ ಮಾಡಿದ್ದಾರೆ. ವರದಿಗಳ ಪ್ರಕಾರ, ಕೆಲವೇ ನಿಮಿಷಗಳಲ್ಲಿ ವಿಮಾನವು ಸುಟ್ಟು ಬೂದಿಯಾಯಿತು. ಏತನ್ಮಧ್ಯೆ, ಐಎಎಫ್ ವಿಮಾನದಲ್ಲಿ ಎಷ್ಟು ಜನರು ಇದ್ದರು ಎಂದು ಸ್ಥಳೀಯರಿಗೆ ಖಚಿತವಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More