Subscribe to Updates
Get the latest creative news from FooBar about art, design and business.
- “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ
- ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಉರುಳಿ ತಾಯಿ–ಮಗಳು ಸ್ಥಳದಲ್ಲೇ ಸಾವು
- ಗುಜರಾತ್ ಮಾದರಿ ನಮಗೆ ಬೇಡ, ಕರ್ನಾಟಕ ಇಡೀ ದೇಶಕ್ಕೆ ಮಾದರಿ: ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
- ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
Author: admin
ತುರುವೇಕೆರೆ: ಪಟ್ಟಣದ ಹೃದಯ ಭಾಗದಲ್ಲಿರುವ ಕೆ ಈರಣ್ಣಯ್ಯ ಬಯಲು ರಂಗಮಂದಿರದಲ್ಲಿ ,ಇಂದು ನಡೆದ ಭೀಮೋತ್ಸವ ಕಾರ್ಯಕ್ರಮ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಇನ್ನು ಈ ಕಾರ್ಯಕ್ರಮವನ್ನು ತುರುವೇಕೆರೆ ಪಟ್ಟಣದಲ್ಲಿರುವ ಶ್ರೀ ಆದಿಜಾಂಭವ ಕ್ಷೇಮಾಭಿವೃದ್ಧಿ ಸೇವಾ ಸಮಿತಿ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ ಮೂರ್ತಿ ಸಿ ಎಸ್ ರವರು ಆಯೋಜನೆ ಮಾಡಲಾಗಿದ್ದು. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೊಮ್ಮಗ ರಾಜರತ್ನಂ ಅಂಬೇಡ್ಕರ್ ರವರ ಆಗಮನ ಸಂಚಲನ ಮೂಡಿಸಿತ್ತು , ಕಾರ್ಯಕ್ರಮದ ಉದ್ಘಾಟನೆಯನ್ನು ರಾಜರತ್ನ ಅಂಬೇಡ್ಕರ್ ಹಾಗೂ ಸಚಿವರಾದ ಸತೀಶ್ ಜಾರಕಿಹೊಳಿ, ಜೊತೆಗೆ ದಿವ್ಯ ಸಾನಿಧ್ಯ ವಹಿಸಿದ್ದ ಜ್ಞಾನಪ್ರಕಾಶ್ ಸ್ವಾಮೀಜಿ, ಸಂಜಯ್ ಕುಮಾರ್ ಸ್ವಾಮೀಜಿ ಅವರು, ತಮಟೆ ಬಡಿಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಕಾರ್ಯಕ್ರಮದ ರೂವಾರಿ ಹಾಗೂ ಅಧ್ಯಕ್ಷತೆಯನ್ನು ವಹಿಸಿದ್ದ ಮೂರ್ತಿ ಸಿ.ಎಸ್. ಅವರು , ಸರ್ಕಾರಕ್ಕೆ ಜಾತಿಗಣತಿ ಮತ್ತು ಎ.ಜೆ. ಸದಾಶಿವ ಆಯೋಗ ಜಾರಿ ಮಾಡುವಂತೆ ಒತ್ತಾಯಿಸಿದರು. ಈ ಕಾರ್ಯಕ್ರಮದಲ್ಲಿ ವಿವಿಧ ತಾಲೂಕುಗಳ ದಲಿತ…
ನ್ಯೂಜಿಲೆಂಡ್ ನಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಮೂಲದ ರೇಡಿಯೋ ನಿರೂಪಕ ಹರ್ನೆಕ್ ಸಿಂಗ್ ಅವರನ್ನು ಹತ್ಯೆ ಮಾಡಲು ಮೂವರು ಖಲಿಸ್ತಾನ್ ಭಯೋತ್ಪಾದಕರು ಪ್ರಯತ್ನಿಸಿದರು. ಅವರು ಖಲಿಸ್ತಾನ್ ಸಿದ್ಧಾಂತದ ವಿರುದ್ಧ ಮಾತನಾಡುತ್ತಿದ್ದಾರೆಂದು ಕೋಪಗೊಂಡ ಹಿನ್ನೆಲೆ ಡಿಸೆಂಬರ್ 23ರಂದು ಖಲಿಸ್ತಾನಿ ಉಗ್ರಗಾಮಿಗಳು ಆತನ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ಕೊಲೆ ಯತ್ನದಲ್ಲಿ ಭಾಗಿಯಾಗಿದ್ದ ಸರ್ವಜೀತ್ ಸಿದ್ದು (27) ಹಾಗೂ ಸಹಚರರಾಗಿದ್ದ ಆಫ್ರೆಂಡ್ ನಿವಾಸಿ ಸುಖಪ್ರೀತ್ ಸಿಂಗ್ (44) ಎಂಬಾತನಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ನಾಯಕ ವಿಶಾಲ್ ಇತ್ತೀಚೆಗೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಡ್ ಸರ್ಟಿಫಿಕೇಶನ್ ವಿರುದ್ಧ ಆರೋಪ ಮಾಡಿದ್ದು ಗೊತ್ತೇ ಇದೆ. ಇದರ ಪರಿಣಾಮವಾಗಿ ಸಿಬಿಐ ಸಿಬಿಎಫ್ಸಿಯ ಮುಂಬೈ ಶಾಖೆಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದೆ. ಆ ಪ್ರಕರಣದ ತನಿಖೆಯ ಭಾಗವಾಗಿ ಇತ್ತೀಚೆಗೆ ವಿಶಾಲ್ ಸಿಬಿಐ ಮುಂದೆ ಹಾಜರಾಗಿದ್ದರು. “ಇದು ನನಗೆ ಸಂಪೂರ್ಣ ಹೊಸ ಅನುಭವ. ನನ್ನ ಜೀವನದಲ್ಲಿ ಸಿಬಿಐ ಕಚೇರಿಗೆ ಹೋಗುತ್ತೇನೆ ಎಂದು ನಾನು ಭಾವಿಸಿರಲಿಲ್ಲ. ರೀಲ್ ಲೈಫ್ ನಲ್ಲಿ ಮಾತ್ರವಲ್ಲ. ನಿಜ ಜೀವನದಲ್ಲೂ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವ ಅಗತ್ಯವಿದೆ” ಎಂದರು.
ನಟ, ನಿರ್ದೇಶಕ ರಿಷಬ್ ಶೆಟ್ಟಿ ತಾವೇ ನಿರ್ದೇಶಿಸಿ ನಟಿಸಿರುವ “ಕಾಂತಾರ” ಸಿನೆಮಾ ಕಳೆದ ವರ್ಷ ಬಿಡುಗಡೆಯಾಗಿ ಭಾರೀ ಯಶಸ್ಸನ್ನು ಪಡೆಯಿತು. ಸದ್ಯ ಅವರು ಈ ಚಿತ್ರದ ಪ್ರಿಕ್ವೆಲ್ ಚಿತ್ರೀಕರಣದಲ್ಲಿದ್ದು, ಕುತೂಹಲಕರ ಮಾಹಿತಿಯೊಂದು ಹೊರಬಿದ್ದಿದೆ. ಇತ್ತೀಚಿನ ಮಾಹಿತಿ ಪ್ರಕಾರ ರಿಷಬ್ ಶೆಟ್ಟಿ ಪ್ರಿಕ್ವೆಲ್ ಗೆ ಹೆಚ್ಚು ಸಂಭಾವನೆ ಪಡೆಯಲಿದ್ದಾರೆ ಎಂದು ವರದಿಯಾಗಿದೆ. ಕಾಂತಾರ ಚಿತ್ರಕ್ಕೆ 4 ಕೋಟಿ ರೂ. ತೆಗೆದುಕೊಂಡಿರುವ ರಿಷಬ್ ಶೆಟ್ಟಿ, ಪ್ರೀಕ್ವೆಲ್ ಗೆ 100 ಕೋಟಿ ರೂ. ಪಡೆಯಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ಆದರೆ ಈ ಬಗ್ಗೆ ರಿಷಬ್ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
ಪ್ರಾಚೀನ ಸಂಪತ್ತು ಪಾಕಿಸ್ತಾನದಲ್ಲಿ ಕಂಡು ಬಂದಿದೆ. ಬರೋಬ್ಬರಿ 2,000 ವರ್ಷಗಳಷ್ಟು ಹಳೆಯದಾದ ನಾಣ್ಯಗಳನ್ನು ಒಳಗೊಂಡಿರುವ ಅತ್ಯಂತ ಅಪರೂಪದ ನಿಧಿ ಇದಾಗಿದೆ. ಈ ನಿಧಿಯಲ್ಲಿನ ಅನೇಕ ನಾಣ್ಯಗಳು ತಾಮ್ರದಿಂದ ಮಾಡಲ್ಪಟ್ಟಿದೆ. ಇದು ಬೌದ್ಧ ದೇವಾಲಯಗಳ ಗೋರಿಗಳಲ್ಲಿ ಕಂಡು ಬಂದಿದೆ. ಮಧ್ಯ ಆಗ್ನೆಯ ಪಾಕಿಸ್ತಾನದಲ್ಲಿ ಕ್ರಿ.ಪೂ. 2600 ರ ಮೊಹೆಂಜೋದಾರೋ ಕಾಲದ ಬೃಹತ್ ರಚನೆಗಳಲ್ಲಿ ಇದು ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.
ಪ್ರೀತಿ ಪ್ರೇಮದ ನೆಪದಲ್ಲಿ ಯುವಕನೊಬ್ಬ ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುವುದರ ಜತೆಗೆ ಅವರಿಂದ ಹಣವನ್ನು ಲೂಟಿ ಮಾಡಿರುವ ಆರೋಪ ಕೇಳಿ ಬಂದಿರುವ ಘಟನೆ ಹಾಸನದ ಸಕಲೇಶಪುರದಲ್ಲಿ ನಡೆದಿದೆ. ಆರೋಪಿಯನ್ನು ಶರತ್ ಎಂದು ಗುರುತಿಸಲಾಗಿದ್ದು, ಆತ ಯುವತಿಯೊಬ್ಬಳ ಜತೆ ಪ್ರೀತಿ ನಾಟಕವಾಡಿ ದೈಹಿಕ ಸಂಬಂಧ ಬೆಳೆಸಿದ್ದ. ಈ ನಡುವೆ ಆತ ಮತ್ತೊಂದು ಹುಡುಗಿಯ ಜತೆ ಸುತ್ತಾಡುವುದನ್ನು ಕಂಡು ಆಕೆ ಪ್ರಶ್ನಿಸಿದ್ದಳು. ಆತ ಎರಡನೇ ಯುವತಿ ವಿಡಿಯೋ ಕಾಲ್ ನಲ್ಲಿರುವಾಗಲೇ ಮೊದಲನೇ ಯುವತಿಗೆ ಮನಬಂದಂತೆ ಥಳಿಸಿದ್ದ ಎನ್ನಲಾಗಿದೆ.
ಅರಿಶಿಣ ಬೆಳೆಯಲ್ಲಿ ಗಾಂಜಾ ಕೃಷಿ ಮಾಡುತ್ತಿದ್ದ ತಂದೆ-ಮಗನನ್ನು ಪೊಲೀಸರು ಬಂಧಿಸಿರುವ ಘಟನೆ ಚಾಮರಾಜನಗರ ಹನೂರು ತಾಲೂಕಿನ ಆನೆಗುಂದಿ ಗ್ರಾಮದದಲ್ಲಿ ನಡೆದಿದೆ. ಅರಿಶಿಣ ತೋಟದಲ್ಲಿ ಎಸ್. ಬಾಲು(65) ಮತ್ತು ಮಹಾಲಿಂಗ(35) ಎಂಬ ತಂದೆ-ಮಗ ಅಕ್ರಮವಾಗಿ ಗಾಂಜಾ ಕೃಷಿ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಅಪರಿಚಿತರು ಪೊಲೀಸರಿಗೆ ಮಾಹಿತಿ ನೀಡಿದ್ದು ಅರಿಶಿಣ ಬೆಳೆ ಮಧ್ಯದಲ್ಲಿ ನೆಟ್ಟಿದ್ದ ಸುಮಾರು 2 ಲಕ್ಷ ಮೌಲ್ಯದ 95 ಗಾಂಜಾ ಗಿಡಗಳನ್ನು (34 ಕೆಜಿ) ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸಲಾರ್ ಚಿತ್ರ, ಶ್ರೀಮುರುಳಿ ಅಭಿನಯದ ಉಗ್ರಂ ಚಿತ್ರದ ರಿಮೇಕ್ ಎಂಬ ವಿಚಾರವನ್ನು ಸಂಗೀತ್ ನಿರ್ದೇಶಕ ರವಿ ಬಸೂರು ಈ ಹಿಂದೆಯೇ ಒಪ್ಪಿಕೊಂಡಿದ್ದರು. ‘ಸಲಾರ್’ ಸೆಟ್ಟೇರಿದ ಸಂದರ್ಭದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ರವಿ ಬಸೂರು ಅವರಿಗೆ ‘ಇದು ಉಗ್ರಂ ರಿಮೇಕಾ’ ಎಂದು ಪ್ರಶ್ನೆ ಕೇಳಲಾಯಿತು. ಇದಕ್ಕೆ ನೇರವಾಗಿ ಉತ್ತರಿಸಿದ್ದ ರವಿ ಬನ್ನೂರು, ‘ಅದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಆದರೆ, ರಿಮೇಕ್ ಆದರೂ ಇವರು ಹೇಗೆ ಮಾಡುತ್ತಾರೆ ಅನ್ನೋದು ನಿಮಗೆ ಗೊತ್ತಿದೆ’ ಎಂದಿದ್ದರು. ಟ್ರೇಲರ್ ನೋಡಿದ ಅನೇಕರು ಈ ಮಾತನ್ನು ನೆನಪಿಸಿಕೊಳ್ಳುತ್ತಿದ್ದಾರೆ.
ಚೀನಾದಲ್ಲಿ ನ್ಯುಮೋನಿಯಾ ವೈರಸ್ ಉಲ್ಬಣವಾಗಿದ್ದು, ಈಗಾಗಲೇ ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಉಸಿರಾಟ ತೊಂದರೆ ಅನುಭವಿಸುತ್ತಿರುವ ರೋಗಿಗಳ ಮಾಹಿತಿ ಸಂಗ್ರಹ ಮಾಡುತ್ತಿದೆ. ಜೊತೆಗೆ ವೈದ್ಯಕೀಯ ಸೇವೆ ಒದಗಿಸಲು ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ತಯಾರಿ ನಡೆಸುತ್ತಿದೆ. ಇನ್ನು ಡಿ.4ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದೆ. ಈ ವೇಳೆ ವೈರಸ್ ಬಗ್ಗೆ ಎಚ್ಚರ ವಹಿಸಲು ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಕಂಟ್ರೋಲ್ ರೂಂ ತೆರೆಯಲಾಗಿದೆ.
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಇಲ್ಲಿಯವರೆಗೆ ಬಂದಿರುವ ಎಲ್ಲಾ ಎಕ್ಸಿಟ್ ಪೋಲ್ ಗಳನ್ನು ನೋಡಿದರೆ ತೆಲಂಗಾಣ ಮತ್ತು ಛತ್ತೀಸ್ ಗಢದಲ್ಲಿ ಮಾತ್ರ ನೇರವಾಗಿ ಸರ್ಕಾರ ರಚನೆಯಾಗುತ್ತಿದೆ. ಇವೆರಡನ್ನು ಹೊರತುಪಡಿಸಿ ಮಧ್ಯಪ್ರದೇಶ, ರಾಜಸ್ಥಾನ, ಮಿಜೋರಾಂ ರಾಜ್ಯಗಳಲ್ಲಿ ನಡೆದಿರುವ ವಿಭಿನ್ನ ಎಕ್ಸಿಟ್ ಪೋಲ್ ಗಳನ್ನು ಗಮನಿಸಿದರೆ ಅತಂತ್ರ ಫಲಿತಾಂಶ ಹೊರ ಬೀಳುವ ಸಾಧ್ಯತೆ ಇದೆ. ಆದರೆ, ಮಧ್ಯಪ್ರದೇಶದಲ್ಲಿ ಅತಂತ್ರ ಅಸೆಂಬ್ಲಿಯಾಗುವ ಸಾಧ್ಯತೆ ತೀರಾ ಕಡಿಮೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.