Subscribe to Updates
Get the latest creative news from FooBar about art, design and business.
- “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ
- ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಉರುಳಿ ತಾಯಿ–ಮಗಳು ಸ್ಥಳದಲ್ಲೇ ಸಾವು
- ಗುಜರಾತ್ ಮಾದರಿ ನಮಗೆ ಬೇಡ, ಕರ್ನಾಟಕ ಇಡೀ ದೇಶಕ್ಕೆ ಮಾದರಿ: ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
- ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
Author: admin
ಬೆಂಗಳೂರು: ಯುವಕನೋರ್ವ ನೂರಾರು ಯುವತಿಯರ ಜೊತೆ ಚಾಟಿಂಗ್ ಮಾಡಿ, ನಕಲಿ ಖಾತೆ ಸೃಷ್ಟಿಸಿ ಸಿಕ್ಕಿಬಿದ್ದಿದ್ದಾನೆ. ಈ ಖದೀಮನ ಹೆಸರು ರಾಘವೇಂದ್ರ. ಉತ್ತರಹಳ್ಳಿಯ ನಿವಾಸಿಯಾಗಿರುವ ರಾಘವೇಂದ್ರ ನೋಡಲು ಡೀಸೆಂಟ್ ಹುಡುಗನ ಥರ ಕಾಣಿಸಿದರೂ ಮಹಾನ್ ಕಿಲಾಡಿ. ಅಲ್ಲದೇ ಸೈಬರ್ ಕಳ್ಳ ಕೂಡ. ಇನ್ಸ್ಟಾಗ್ರಾಂನಲ್ಲಿ ಯುವತಿಯರ ಫೋಟೋ, ರೀಲ್ಸ್ ವೀಡಿಯೋಗಳನ್ನು ಕದ್ದು, ಫೇಸ್ ಬುಕ್ ನಲ್ಲಿ ನಕಲಿ ಖಾತೆ ಸೃಷ್ಟಿಸಿ ನೂರಾರು ಜನರಿಂದ ಹಣ ಹಾಕಿಸಿಕೊಂಡು ಮೋಸ ಮಾಡುತ್ತಿದ್ದ ಖತರ್ನಾಕ್ ಸೈಬರ್ ಕಳ್ಳ ಇದೀಗ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಯುವತಿಯರ ಫೋಟೋಗಳನ್ನ ಬಳಸಿಕೊಂಡು ರಾಘವೇಂದ್ರ ಬ್ಲಾಕ್ ಮೇಲ್ ಮಾಡುತ್ತಿದ್ದ. ವೇಶ್ಯಾವಾಟಿಕೆ ದಂಧೆಗೂ ಈ ಫೋಟೋಗಳನ್ನು ಶೇರ್ ಮಾಡುತ್ತಿದ್ದ. ಇಂತಹ ಖದೀಮನ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟರೇ ಸಂತ್ರಸ್ತ ಯುವತಿಗೆ ಕಾಂಪ್ರಮೈಸ್ ಮಾಡಿಕೊಳ್ಳಿ ಎಂದು ಒತ್ತಡ ಹಾಕುತ್ತಿದ್ದಾರೆ. ಕೃತ್ಯವೆಸಗಿದ ರಾಘವೇಂದ್ರನ ಮೊಬೈಲ್ ಫೋನ್ ಪೊಲೀಸರು ವಶ ಪಡಿಸಿಕೊಂಡು ಪರಿಶೀಲನೆ ಮಾಡಿದಾಗ ನೂರಾರು ಯುವತಿಯರಿಗೆ ಚಾಟಿಂಗ್ ಮಾಡಿದ್ದು, ಹಣ ಹಾಕಿಸಿಕೊಂಡಿರುವುದು, ನಕಲಿ…
ಸಂವಿಧಾನ ದಿನಾಚರಣೆಯ ಅಂಗವಾಗಿ ಮಲ್ಲೇಶ್ವರದ ಯಶವಂತಪುರದಲ್ಲಿರುವ ಸಂವಿಧಾನ ವೃತ್ತದ ಬಳಿ ಇರುವ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಶಾಸಕ ಅಶ್ವಥ್ ನಾರಾಯಣ ಮಾಲಾರ್ಪಣೆ ಮಾಡಿದರು. ಇದೇ ವೇಳೆ, ನೆರೆದಿದ್ದ ಜನತೆಯೊಂದಿಗೆ ಸಂವಿಧಾನದ ಮಹತ್ವದ ಕುರಿತು ವಿಶೇಷ ಮಾಹಿತಿ ಹಂಚಿಕೊಂಡರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾಜಿ ವಿಧಾನಸಭಾ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಎಲ್ಲರಿಗೂ ಹೃತ್ತೂರ್ವಕ ಧನ್ಯವಾದ ತಿಳಿಸಿದರು. ಬೆಂಗಳೂರಿನ ಯಶವಂತಪುರ ಸಂವಿಧಾನ ವೃತ್ತದ ಬಳಿ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಅವರ ಸಹಿತ ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಆಧುನಿಕ ಭಾರತದ ಕನಸು ಕಂಡ ಎಲ್ಲರನ್ನು ಗೌರವಪೂರ್ವಕವಾಗಿ ಸ್ಮರಿಸೋಣ ಎಂದು ಕರೆ ನೀಡಿದರು.
ಬೆಂಗಳೂರು: ನಕಲಿ ಟಿಕೆಟ್ ತೋರಿಸಿ ಮಹಿಳೆಯೊಬ್ಬಳು ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ ಘಟನೆ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಕ್ರಮವಾಗಿ ವಿಮಾನ ನಿಲ್ದಾಣ ಪ್ರವೇಶಿಸಿದ್ದ ಮಹಿಳೆಯನ್ನು ಹರ್ಪಿತ್ ಕೌರ್ ಸೈನಿ ಎಂದು ಗುರುತಿಸಲಾಗಿದೆ. ಮಹಿಳೆ ಆಯುಷ್ ಶರ್ಮ ಎಂಬಾತನನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಬಂದಿದ್ದಳು. ಈ ವೇಳೆ ನಕಲಿ ಟಿಕೆಟ್ ತೋರಿಸಿ ಪಿಇಎಸ್ಸಿವರೆಗೂ ಹೋಗಿದ್ದಳು. ಬಳಿಕ ಲ್ಯಾಪ್ಟಾಪ್ ಕಳೆದುಹೋಗಿದೆ ಎಂದು ಹೊರಗೆ ಬಂದಿದ್ದಳು. ಈ ವೇಳೆ ಅನುಮಾನಗೊಂಡ ಸಿಬ್ಬಂದಿ ಟಿಕೆಟ್ ಪರಿಶೀಲನೆ ನಡೆಸಿದಾಗ ನಕಲಿ ಟಿಕೆಟ್ ಎನ್ನುವುದು ತಿಳಿದು ಬಂದಿದೆ.ಈ ಸಂಬಂಧ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು: ಕಳೆದರಡು ದಿನಗಳ ಹಿಂದೆ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಪತ್ತೆ ಮಾಡಿದ್ದ ಭ್ರೂಣಹತ್ಯೆ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಕಳೆದ ಎರಡು ವರ್ಷದ ಆರೋಪಿಗಳ ಹತ್ಯೆ (ಗರ್ಭಪಾತ) ನಡೆಸಿ 5 ಕೋಟಿ ಹಣ ಸಂಪಾದನೆ ಮಾಡಿದ್ದರಂತೆ. ಭ್ರೂಣ ಯಾವುದು ಎಂದು ಪತ್ತೆ ಮಾಡಲು 20 ರಿಂದ 25 ಸಾವಿರ ರೂ. ಭ್ರೂಣ ಹೊರ ತೆಗೆಯಲು 20 ರಿಂದ 25 ಸಾವಿರ ಚಾರ್ಜ್ ಮಾಡಲಾಗಿತ್ತು. 100% ನಿಖರ ರಿಸಲ್ಟ್ ಕೊಡ್ತಾರೆ ಎಂಬ ಆಧಾರದ ಮೇಲೆ ಇವರಿಗೆ ಕಸ್ಟಮರ್ಸ್ ಕೂಡ ಹೆಚ್ಚಾಗುತ್ತಿದ್ದಾರಂತೆ. ಕಳೆದ ಎರಡು ವರ್ಷಗಳಲ್ಲಿ 5 ಕೋಟಿಗೂ ಹೆಚ್ಚು ವಹಿವಾಟು ನಡೆಸಿದ್ದಾರಂತೆ. ಈ ಬಗ್ಗೆ ಸುಳಿವು ಪಡೆದ ಪೊಲೀಸರು ಗರ್ಭಿಣಿಯ ಜೊತೆ ಹೋಗಿ ಸ್ಟಿಂಗ್ ಆಪರೇಷನ್ ಮಾಡಿದ್ದು, ಭ್ರೂಣ ಪತ್ತೆ ಜಾಗ ಪತ್ತೆ ಮಾಡಲು ಜಿಪಿಎಸ್ ಸಹ ಬಳಸಿ, ಗರ್ಭಿಣಿಯರಿದ್ದ ಕಾರಿಗೆ ಜಿಪಿಎಸ್ ಅಳವಡಿಸಿ ನಿಖರ ಲೊಕೇಶನ್ ಪತ್ತೆ ಮಾಡಿದ್ದರು. ಆರೋಪಿ ನವೀನ್ ಪ್ರತೀ ಬಾರಿ ಆಲೆ ಮನೆಗಳು, ತೋಟದ ಮನೆಗಳ ಸ್ಥಳವನ್ನು ಚೇಂಜ್…
ಮೂರನೇ ಹಡಗು ಇಂಫಾಲ್ ಅನ್ನು ವಿತರಿಸಲಾಗಿದ್ದು, ನಾಲ್ಕನೇ ಹಡಗು ಸೂರತ್ ಸಜ್ಜುಗೊಳಿಸುವ ಸುಧಾರಿತ ಹಂತದಲ್ಲಿದೆ. ಹಡಗನ್ನು ಸ್ಥಳೀಯ ಉಕ್ಕಿನ DMR 249A ಬಳಸಿ ನಿರ್ಮಿಸಲಾಗಿದೆ ಮತ್ತು ಇದು ಭಾರತದಲ್ಲಿ ನಿರ್ಮಿಸಲಾದ ಅತಿದೊಡ್ಡ ಡೆಸ್ಟ್ರಾಯರ್ ಗಳಲ್ಲಿ ಒಂದಾಗಿದೆ, ಒಟ್ಟಾರೆ ಉದ್ದ 164 ಮೀಟರ್ ಮತ್ತು 7500 ಟನ್. ನೌಕೆಯು 312 ವ್ಯಕ್ತಿಗಳ ಸಿಬ್ಬಂದಿಗೆ ಅವಕಾಶ ಕಲ್ಪಿಸುತ್ತದೆ, 4000 ನಾಟಿಕಲ್ ಮೈಲ್ಗಳ ಸಹಿಷ್ಣುತೆಯನ್ನು ಹೊಂದಿದೆ ಮತ್ತು ಪ್ರದೇಶದ ಕಾರ್ಯಾಚರಣೆಯ ಹೊರಗೆ ವಿಸ್ತೃತ ಮಿಷನ್ ಸಮಯದೊಂದಿಗೆ ವಿಶಿಷ್ಟವಾದ 42 ದಿನಗಳ ಕಾರ್ಯಾಚರಣೆಯನ್ನು ಕೈಗೊಳ್ಳಬಹುದು. ಕಡಲ ಸಂಪ್ರದಾಯಗಳು ಮತ್ತು ನೌಕಾ ಪದ್ಧತಿಗಳ ಪ್ರಕಾರ, ಭಾರತೀಯ ನೌಕಾ ಹಡಗುಗಳು ಮತ್ತು ಜಲಾಂತರ್ಗಾಮಿಗಳಿಗೆ ಪ್ರಮುಖ ನಗರಗಳು, ಪರ್ವತ ಶ್ರೇಣಿಗಳು, ನದಿಗಳು, ಬಂದರುಗಳು ಮತ್ತು ದ್ವೀಪಗಳ ಹೆಸರನ್ನು ಇಡಲಾಗಿದೆ. ಭಾರತೀಯ ನೌಕಾಪಡೆಯು ತನ್ನ ಇತ್ತೀಚಿನ ಮತ್ತು ತಾಂತ್ರಿಕವಾಗಿ ಸುಧಾರಿತ ಯುದ್ಧನೌಕೆಗೆ ಐತಿಹಾಸಿಕ ನಗರವಾದ ಇಂಫಾಲ್ ಹೆಸರನ್ನು ಇಡುವುದರ ಬಗ್ಗೆ ಅಪಾರವಾಗಿ ಹೆಮ್ಮೆಪಡುತ್ತದೆ. ಇದು ಭಾರತದ ಈಶಾನ್ಯ ಪ್ರದೇಶದ ನಗರಕ್ಕೆ ಹೆಸರಿಸಲಾದ ಮೊದಲ…
ಉತ್ತರ ಪ್ರದೇಶದಲ್ಲಿ 12ನೇ ತರಗತಿ ವಿದ್ಯಾರ್ಥಿಯ ಮುಖದ ಮೇಲೆ ಯುವಕರ ಗುಂಪೊಂದು ಮೂತ್ರ ವಿಸರ್ಜನೆ ಮಾಡಿರುವ ಘಟನೆ ನಡೆದಿದೆ. ಸಂಬಂಧಿಕರ ಮನೆಯಿಂದ ಹಿಂತಿರುಗುವಾಗ ಯುವಕನನ್ನು ಅಪಹರಿಸಿದ ನಂತರ ಹಿಂಸಾಚಾರ ನಡೆಸಲಾಗಿದೆ. ವಿದ್ಯಾರ್ಥಿಗೆ ಯುವಕರು ಮಾರಣಾಂತಿಕವಾಗಿ ಥಳಿಸಿದ್ದಾರೆ. ಘಟನೆಯ ಬಳಿಕ ಪೊಲೀಸರು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 13 ರಂದು ಉತ್ತರ ಪ್ರದೇಶದ ಮೀರತ್ ನಲ್ಲಿ ಈ ಘಟನೆ ನಡೆದಿದೆ. ಯುವಕರು ವಿದ್ಯಾರ್ಥಿಗೆ ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ವಿಡಿಯೋ ಇದೀಗ ಹೊರಬಿದ್ದಿದೆ. ಮೊದಲ ವಿಡಿಯೋದಲ್ಲಿ ಆರೋಪಿಗಳಲ್ಲಿ ಒಬ್ಬ ವಿದ್ಯಾರ್ಥಿಯ ತಲೆ ಮತ್ತು ಬೆನ್ನಿಗೆ ಪದೇ ಪದೇ ಹೊಡೆಯುತ್ತಿರುವುದನ್ನು ಕಾಣಬಹುದು. ಇತರರು ಬಾಲಕನ ಸುತ್ತಲೂ ನಿಂತು ವಿದ್ಯಾರ್ಥಿಗೆ ಹೊಡೆಯದಂತೆ ಮನವಿ ಮಾಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಇದೇ ಕೃತ್ಯದ ಮುಂದುವರಿದ 2ನೇ ವಿಡಿಯೋ ಅತ್ಯಂತ ಆಘಾತಕಾರಿಯಾಗಿ ಕಂಡು ಬಂದಿದ್ದು, ವಿದ್ಯಾರ್ಥಿ ಮುಖದ ಮೇಲೆ ಪಾಪಿಗಳು ಮೂತ್ರ ವಿಸರ್ಜನೆ ಮಾಡುತ್ತಿರುವುದು ಕಂಡು ಬಂದಿದೆ. ವಿದ್ಯಾರ್ಥಿಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು…
ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಹಾಗೂ ಅಪಾಯಕಾರಿ ವಿದ್ಯುತ್ ಕಂಬಗಳು ತಮ್ಮ ಭಾಗದಲ್ಲಿ ಕಂಡುಬಂದರೆ ಬೆಸ್ಕಾಂ ಅಥವಾ ಪೊಲೀಸ್ ಸಹಾಯವಾಣಿಗೆ ಮಾಹಿತಿ ನೀಡುವಂತೆ ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಕೋರಿದ್ದಾರೆ. ನಗರದಲ್ಲಿ ಭಾನುವಾರ ನಡೆದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ಬೆಸ್ಕಾಂ ಸಹಾಯವಾಣಿ 1912 ಅಥವಾ ಪೊಲೀಸ್ ಸಹಾಯವಾಣಿ 112ಗೆ ಕರೆ ಮಾಡಿ ತಿಳಿಸಬಹುದು. ಇದರಿಂದ ತಕ್ಷ
ಬೆಂಗಳೂರು: ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 3500 ಕ್ಕೂ ಹೆಚ್ಚು ಅರ್ಜಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ಸ್ವೀಕರಿಸಿ, ಪರಿಹಾರಕ್ಕೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿರುತ್ತಾರೆ. ಬೆಳಿಗ್ಗೆ 10.00 ಗಂಟೆಗೆ ಆರಂಭಗೊಂಡು, ಜನಸ್ಪಂದನ ಕಾರ್ಯಕ್ರಮವು ಜನರ ಸಮಸ್ಯೆಯ ಪರಿಹಾರಕ್ಕೆ ಉತ್ತಮ ವೇದಿಕೆ ಆಯಿತು. ಮಧ್ಯಾಹ್ನದ ಊಟದ ಬಿಡುವಿನಲ್ಲಿ ಊಟಕ್ಕೆಂದು ಮನೆಗೆ ತೆರಳಲು ಎದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳಿಕ ಅಹವಾಲು ಬಂದಿರುವವರ ಸಂಖ್ಯೆ ಇನ್ನೂ ಬಹಳಷ್ಟಿದೆ ಎಂದು ಮಾಹಿತಿ ಲಭ್ಯವಾದ ಕೂಡಲೇ ಅಹವಾಲು ಸ್ವೀಕರಿಸುವ ಟೇಬಲ್ಲಿಗೇ ಊಟ ತರಿಸಿಕೊಂಡು ಅಲ್ಲೇ ಕುಳಿತು ಊಟ ಸೇವಿಸಿದರು. ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಅಧಿಕಾರಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನ ಕಾರ್ಯಕ್ರಮವು ಎರಡು ತಿಂಗಳ ಹಿಂದಯೇ ನಡೆಯಬೇಕಿತ್ತು. ಜಿಲ್ಲಾ ಉಸ್ತುವಾರಿ ಸಚಿವರಿಗೂ ಸಹ ತಮ್ಮ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲು ಪತ್ರವನ್ನು ಬರೆದು ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲು…
ಕೊರಟಗೆರೆ: ಪಟ್ಟಣದ ಹಿಂದೂ ಸಾದರ ಸಮುದಾಯ ಭವನದಲ್ಲಿ ಏರ್ಪಡಿಸಿರುವ ಕೊರಟಗೆರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿರುವ ಕನ್ನಡ ನುಡಿ ನಮನ,ಪತ್ರಿಕಾ ದಿನಾಚರಣೆ,ಪತ್ರಿಕೆ ವಿತರಕರಿಗೆ ಜರ್ಕಿನ್ ವಿತರಣೆ ಹಾಗೂ ಸಾಧಕ ಮಹಿಳೆಯರಿಗೆ ಸನ್ಮಾನ ಮಾಡುತ್ತಿರುವ ಕಾರ್ಯಕ್ರಮದಲ್ಲಿ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ. ಪರಮೇಶ್ವರ್ ರವರು ಭಾಗವಹಿಸುತ್ತಿದ್ದಾರೆ.. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಹಾಗೂ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಹಾಗೂ ದತ್ತಿ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಮಾಡಲಾಗುವುದು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊರಟಗೆರೆ ಇವರ ವತಿಯಿಂದ ಕೊರಟಗೆರೆಯ ಹಿಂದೂ ಸಾದರ ಸಮುದಾಯ ಭವನದಲ್ಲಿ ಆಯೋಜಿಸಲಾಗಿರುವ ಕನ್ನಡ ನುಡಿ ನಮನ ಹಾಗೂ ಪತ್ರಕರ್ತರ ದಿನಾಚರಣೆಯ ಸಮಾರಂಭಕ್ಕೆ ಜಿಲ್ಲೆಯ ಪತ್ರಕರ್ತರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರತಿವರ್ಷ 25 ಲಕ್ಷ ಹಣವನ್ನ ಜೀವನಪರ್ಯಂತ ಮುಡಿಪಾಗಿಟ್ಟ ಸಜ್ಜನಿಕೆಯ ರಾಜಕಾರಣಿ ಕರ್ನಾಟಕ ಸರ್ಕಾರದ ಗೃಹ ಮಂತ್ರಿಗಳಾದ ಡಾ ಜಿ ಪರಮೇಶ್ವರ್ ಅವರಿಗೆ ಕೃತಜ್ಞತಾ ಸಲ್ಲಿಕೆ ಹಾಗೂ ಮಹಿಳಾ ಸಾಧಕರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು. ಇದನ್ನು ಸೆರೆ ಹಿಡಿದ ಉರಗ ತಜ್ಞ ಕೆ.ಝಕರಿಯ್ಯ ಎಂಬುವವರು ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಎರಡು-ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿತ್ತು. ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿಯ ಕೆ.ಝಕರಿಯಾ ಅವರು ಅಲ್ಲಿಗೆ ತೆರಳಿ ಸುಮಾರು ಒಂದು ಗಂಟೆಯಷ್ಟು ಕಾರ್ಯಾಚರಣೆಯ ಬಳಿಕ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಗುಂಡ್ಯ ಬಳಿ ದಟ್ಟಾರಣ್ಯಕ್ಕೆ ಬಿಟ್ಟಿದ್ದಾರೆ.