Subscribe to Updates
Get the latest creative news from FooBar about art, design and business.
- “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ
- ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಉರುಳಿ ತಾಯಿ–ಮಗಳು ಸ್ಥಳದಲ್ಲೇ ಸಾವು
- ಗುಜರಾತ್ ಮಾದರಿ ನಮಗೆ ಬೇಡ, ಕರ್ನಾಟಕ ಇಡೀ ದೇಶಕ್ಕೆ ಮಾದರಿ: ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
- ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
Author: admin
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಿಖ್ ಧರ್ಮದ ಸಂಸ್ಥಾಪಕ ಗುರುನಾನಕ್ ದೇವ್ ಅವರ ಜನ್ಮ ವಾರ್ಷಿಕೋತ್ಸವವನ್ನು ಸ್ಮರಿಸಲು ತಮ್ಮ ಶುಭಾಶಯಗಳನ್ನು ಕಳುಹಿಸಿದ್ದಾರೆ. ಇತರರಿಗೆ ಸೇವೆ ಸಲ್ಲಿಸುವ ಮತ್ತು ಸಹೋದರತ್ವವನ್ನು ಮುನ್ನಡೆಸುವ ಬೋಧನೆಗಳಲ್ಲಿ ಅಂತರ್ಗತವಾಗಿರುವ ಶಕ್ತಿಯನ್ನು ಎತ್ತಿ ತೋರಿಸುತ್ತದೆ. ಪ್ರಧಾನಮಂತ್ರಿಯವರು ಭಾನುವಾರ ತಮ್ಮ `ಮನ್ ಕಿ ಬಾತ್~ ಪ್ರಸಾರದಲ್ಲಿ ಗುರುನಾನಕ್ ದೇವ್ ಅವರಿಗೆ ಗೌರವ ಸಲ್ಲಿಸಿದರು, ಗುರುನಾನಕ್ ಅವರ ಬೋಧನೆಗಳ ನಿರಂತರ ಪ್ರಸ್ತುತತೆಯನ್ನು ಎತ್ತಿ ತೋರಿಸಿದರು. ಗುರುನಾನಕ್ ಜಯಂತಿಯ ಆಚರಣೆಯನ್ನು ಗುರುಪುರಬ್ ಎಂದೂ ಕರೆಯುತ್ತಾರೆ, ಇದು ಸಿಖ್ ಧರ್ಮದ ಮೊದಲ ಗುರು ಗುರುನಾನಕ್ ದೇವ್ ಜಿ ಅವರ ಜನ್ಮದಿನವನ್ನು ಗೌರವಿಸುತ್ತದೆ. ಸಿಖ್ ಧರ್ಮದ ಪವಿತ್ರ ಪುಸ್ತಕ, ಗುರು ಗ್ರಂಥ ಸಾಹಿಬ್ ಅನ್ನು ಹಬ್ಬದ ಸಮಯದಲ್ಲಿ ಗಟ್ಟಿಯಾಗಿ ಪಠಿಸಲಾಗುತ್ತದೆ, ಇದು ತೀವ್ರವಾದ ಭಕ್ತಿ ಮತ್ತು ಆಧ್ಯಾತ್ಮಿಕ ಸಭೆಗಳಿಂದ ಗುರುತಿಸಲ್ಪಟ್ಟಿದೆ. ಗುರು ನಾನಕ್ ದೇವ್ ಅವರು ಸಮಾನತೆ, ಸಹಿಷ್ಣುತೆ ಮತ್ತು ಶಾಂತಿಯನ್ನು ಉತ್ತೇಜಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರು 1469 ರಲ್ಲಿ ರಾಯ್ ಭೋಯ್…
ಹಸಿ ಕೊಬ್ಬರಿ, ಪಾಲಕ್ ತಿಂದರೆ ಏನಾಗುತ್ತೆ ಗೊತ್ತಾ? ಅನೇಕ ಜನರು ಹಸಿ ಕೊಬ್ಬರಿಯನ್ನು ತಿನ್ನಲು ಇಷ್ಟಪಡುತ್ತಾರೆ. ಅಲ್ಲದೆ, ಇದನ್ನು ನಿಯಮಿತವಾಗಿ ಸಾಕಷ್ಟು ಪ್ರಮಾಣದಲ್ಲಿ ಸೇವಿಸಿದರೆ, ಅನೇಕ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ ಎಂದು ಹೇಳಲಾಗುತ್ತದೆ. ಈಗ ಪಾಲಕ್ ಸೊಪ್ಪಿನ ಆರೋಗ್ಯಕಾರಿ ಪ್ರಯೋಜನಗಳನ್ನು ತಿಳಿಯೋಣ. ನಿತ್ಯವೂ ಪಾಲಕ್ ಸೊಪ್ಪನ್ನು ತಿಂದರೆ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಮಲಬದ್ಧತೆ ಸಮಸ್ಯೆಯೂ ಕಡಿಮೆಯಾಗುತ್ತದೆ. ಇದರಲ್ಲಿರುವ ಪೋಷಕಾಂಶಗಳು ಥೈರಾಯ್ಡ್ ಅನ್ನು ಕಡಿಮೆ ಮಾಡುತ್ತದೆ. ನಿತ್ಯ 5 ಖರ್ಜೂರ ತಿಂದರೆ ದೇಹಕ್ಕೆ ಹಲವಾರು ಪ್ರಯೋಜ..! ಖರ್ಜೂರವನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ರಾತ್ರಿಯಿಡೀ ನೀರಿನಲ್ಲಿ ನೆನೆಸಿದ ಖರ್ಜೂರವನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸುಲಭವಾಗಿ ತಿನ್ನಬಹುದು. ಇದರಲ್ಲಿ ಪ್ರೋಟೀನ್, ಫೈಬರ್, ಕ್ಯಾಲ್ಸಿಯಂ, ಕಬ್ಬಿಣ, ಮ್ಯಾಂಗನೀಸ್, ಪೊಟ್ಯಾಸಿಯಮ್, ವಿಟಮಿನ್ ಕೆ ಮತ್ತು ಸೋಡಿಯಂ ಸಮೃದ್ಧವಾಗಿದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುತ್ತದೆ. ಮೂಳೆಗಳೂ ಬಲಗೊಳ್ಳುತ್ತವೆ. ಖರ್ಜೂರದಲ್ಲಿರುವ ಆಂಟಿಆಕ್ಸಿಡೆಂಟ್ಗಳು ಸ್ವತಂತ್ರ ರಾಡಿಕಲ್ಗಳಿಂದ ರಕ್ಷಿಸಲು…
ಬೆಂಗಳೂರು: ಮದ್ಯಪಾನ, ಧೂಮಪಾನ, ತಂಬಾಕು ವಿರುದ್ಧ ದಿ ಸಲೋನಿ ಶಾಲೆ ವತಿಯಿಂದ ಮ್ಯಾರಥಾನ್ ಹಮ್ಮಿಕೊಂಡಿದ್ದರು, ಸುಮಾರು 500 ಮಕ್ಕಳು, ಪೋಷಕರು, ಸಾಮಾಜಿಕ ಕಾರ್ಯಕರ್ತರು, ಶಾಲಾ ಸಿಬ್ಬಂದಿಗಳು, ಹಳೆಯ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ವಿಶ್ವಾಪ್ರಿಯಾ ಲೇಔಟ್ ಇಂದ ಪ್ರಾರಂಭವಾಗಿ ಸುಮಾರು 5 ಕಿಲೋಮೀಟರ್ ದೂರದವರೆಗೆ ಈ ಮ್ಯಾರಥಾನ್ ನಡೆಯಿತು. ಬೇಗೂರು ಪೊಲೀಸ್ ಠಾಣೆಯ ಸಿಬ್ಬಂದಿಗಳು, ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಹಾಗೂ ಜಯಶ್ರೀ ಆಸ್ಪತ್ರೆಯಿಂದ ಆಂಬುಲೆನ್ಸ್ ವ್ಯವಸ್ಥೆ ಈ ಒಂದು ಮ್ಯಾರಥಾನ್ ಗೆ ವಿಶೇಷವಾಗಿತ್ತು. ವಿದ್ಯಾರ್ಥಿ ಹಾಗೂ ಶಾಲಾ ಸಿಬ್ಬಂದಿಗಳಿಂದ ಹಲವಾರು ಸ್ಲೋಗನ್ ಗಂಟಾಗೋಷವಾಗಿ ರಸ್ತೆಯ ತುಂಬೆಲ್ಲ ಇದೆ ಸದ್ದಗಿತ್ತು,ಶಾಲಾ ಮಕ್ಕಳು ಬ್ಯಾಂಡ್ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆಯ ಗಂಟೆಯನ್ನು ಮೊಳಗುತ್ತಾ ಬಂದಿದ್ದರು. ವಿಶೇಷ ಏನೆಂದರೆ ಈ ಮ್ಯಾರಥಾನ್ ನಡೆಯುವ ಸಮಯದಲ್ಲಿ ಒಂದು ಬಾರ್ ಈ ಮಕ್ಕಳ ಕೂಗನ್ನು ನೋಡಿ ಶಟರ್ ಮುಚ್ಚಿದ್ದು ಈ ಮಕ್ಕಳ ಮ್ಯಾರಥಾನ್ ಯಶಸ್ಸಿಗೆ ಕಾರಣ. ರಸ್ತೆಯಲ್ಲಿ ಹೋಗುತ್ತಿದ್ದ ಹಲವಾರು ಜನರು ಸೆಲ್ಫಿಗಳನ್ನು ಹಾಗೂ ವಿಡಿಯೋಗಳನ್ನು ಮಾಡವ ಮೂಲಕ ತಮ್ಮ ಬೆಂಬಲವನ್ನು ಈ…
ಬಹಳ ದಿನಗಳ ಹಿಂದೆಯೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ಮಾಡಬೇಕಿತ್ತು. ಹಲವಾರು ಕಾರ್ಯಕ್ರಮಗಳು ಇದ್ದ ಕಾರಣ ಆಗಿರಲಿಲ್ಲ. ಇವತ್ತು ರಾಜ್ಯದ ಅಭಿವೃದ್ಧಿ ಉದ್ದೇಶದಿಂದ ಭೇಟಿಯಾಗಿದ್ದೇವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ತೋಟದ ಮನೆಯಲ್ಲಿ ಮಾತನಾಡಿದ ಹೆಚ್. ಡಿ ಕುಮಾರಸ್ವಾಮಿ ಅವರು, ಮುಂದೆ ಎರಡು ಪಕ್ಷಗಳು ರಾಜ್ಯದ ಅಭಿವೃದ್ಧಿಗಾಗಿ ನರೇಂದ್ರ ಮೋದಿ ಅವರು ಗೆದ್ದು ಪ್ರಧಾನಿ ಆಗುವುದಕ್ಕೆ ಸಂಘಟನೆಯಲ್ಲಿ ಪಾಲ್ಗೊಳ್ಳಲು ಇಂದಿನ ಭೇಟಿಯ ಉದ್ದೇಶವಾಗಿದೆ ಎಂದರು. ಧೃತಿಗೆಡಬೇಡಿ. ನಿಮ್ಮನ್ನು ಉಳಿಸಿ, ರಕ್ಷಣೆ ಮಾಡಿಕೊಳ್ಳುವ ಹೊಣೆ ನನ್ನದು ಎಂದು ದಾಸರಹಳ್ಳಿ ವಿಧಾನಸಭೆ ಕ್ಷೇತ್ರದ ಮುಖಂಡರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಅವರು ಧೈರ್ಯ ತುಂಬಿದರು. ಭಾನುವಾರ ತಮ್ಮನ್ನು ಭೇಟಿಯಾದ ಕ್ಷೇತ್ರದ ಮುಖಂಡರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು; ಪಕ್ಷದ ನಿಷ್ಠಾವಂತರನ್ನು ಕಡೆಗಣಿಸುವ ಪ್ರಶ್ನೆ ಇಲ್ಲ ಎಂದರು.
11 ವರ್ಷದಲ್ಲೇ ಎಎಪಿ ರಾಷ್ಟ್ರೀಯ ಪಕ್ಷವಾಗಿ ಬೆಳೆದಿದೆ. ಇದಕ್ಕೆ ಕಾರ್ಯಕರ್ತರು ಕಾರಣ, ಮೊದಲ ಚುನಾವಣೆಯಲ್ಲಿ ಸರ್ಕಾರಿ ಟೀಚರ್ ಮಗಳಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿದ್ದೇವೆ ಎಂದು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಹೇಳಿದರು. ಎಎಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು ಎಎಪಿ ಹುಟ್ಟಿದ್ದು ಬೆಂಗಳೂರಿನಲ್ಲೇ. ಬೆಂಗಳೂರಿನ ಜಿಂದಾಲ್ ನೇಚರ್ ಕೇರ್ ನಲ್ಲಿ ಪಕ್ಷ ಕಟ್ಟುವ ಬಗ್ಗೆ ಚರ್ಚೆ ನಡೆದಿದ್ದು, ಅರವಿಂದ್ ಕೇಜ್ರವಾಲ್, ಜಸ್ಟಿಸ್ ಹೆಗಡೆಯವರು ಚರ್ಚೆ ಮಾಡಿದ್ದರು ಎಂದರು. ದೇಶದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಪಕ್ಷ ಎಎಪಿ, ಕಳೆದ 10 ವರ್ಷದಿಂದ ದೆಹಲಿಯಲ್ಲಿ ಎಎಪಿ ಸೋಲಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೂ, ವಿಫಲವಾಗಿದೆ. ಅಲ್ಲಿನ ಜನ ಅರವಿಂದ ಕೇಜ್ರವಾಲ್ ಅವರನ್ನು ನಾಯಕ ಎಂದು ಒಪ್ಪಿಕೊಂಡಿದ್ದಾರೆ ಎಂದು ದೆಹಲಿ ಶಾಸಕ, ಕರ್ನಾಟಕ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ ಹೇಳಿದರು. ಎಎಪಿ ಸ್ಥಾಪನೆಯಾಗಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಯನಗರದ ಎಂಇಎಸ್ ಮೈದಾನದಲ್ಲಿ ಸಂಸ್ಥಾಪನಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಜನರ ಜೀವನ ಸುಧಾರಿಸಲು ಪಕ್ಷ ಕೆಲಸ ಮಾಡಿದೆ.
ಬೆಂಗಳೂರು: ಬ್ಯಾಂಕ್ ಗಳಲ್ಲಿ ಸಾಲ ಕೊಡಿಸುವುದಾಗಿ ಉದ್ಯಮಿಗಳಿಂದ ದಾಖಲೆ ಪಡೆದು ವಂಚಿಸುತ್ತಿದ್ದ ಯುಸೂಫ್ ಎಂಬ ಆರೋಪಿಯನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಹೋಟೆಲ್ ಉದ್ಯಮಿ ಶಾಜಿ ಕೃಷ್ಣನ್ ಎಂಬುವರಿಗೆ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಅವರಿಂದ ದಾಖಲೆಗಳನ್ನು ಪಡೆದುಕೊಂಡಿದ್ದ. ಬಳಿಕ, ಕೃಷ್ಣನ್ ಅವರನ್ನು ಬ್ಯಾಂಕ್ ಗೆ ಕರೆದೊಯ್ದು ಅರ್ಜಿಗಳಿಗೆ ಸಹಿ ಮಾಡಿಸಿಕೊಂಡಿದ್ದ.
ನೆಲಮಂಗಲ: ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದಾರೆ. ನೆಲಮಂಗಲದ ಬಳಿ ಇರುವ ಲೀಲಾವತಿ ಅವರ ನಿವಾಸಕ್ಕೆ ನಟ ದರ್ಶನ್ ಮತ್ತು ನಟ ಅಭಿಷೇಕ್ ಅಂಬರೀಶ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಲೀಲಾವತಿ ಅವರಿಗೆ ಈಗ ಮಾತನಾಡಲೂ ಕಷ್ಟವಾಗುತ್ತಿದೆ. ಕಳೆದ ಕೆಲ ದಿನಗಳಿಂದ ಚಿತ್ರ ರಂಗದ ಹಿರಿಯರು ಒಬ್ಬರ ಹಿಂದೊಬ್ಬರಂತೆ ಆಗಮಿಸಿ ಪುತ್ರ ವಿನೋದ್ ರಾಜ್ ಗೆ ಧೈರ್ಯ ತುಂಬುತ್ತಿದ್ದಾರೆ.
ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯವಾಗಿ ಬಡ್ಡಿ ದಂಧೆ ಕೋರರಿಂದ ಕಿರುಕುಳಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಮಾಹಿತಿ ಲಭ್ಯವಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರು ನಗರದ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಶವಗಳ ಅಂತಿಮ ದರ್ಶನ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೃತಪಟ್ಟಿರುವ ಕುಟುಂಬದ ಯಜಮಾನ ಗರೀಬ್ ಸಾಬ್ ಎಂಬವರು ಶಿರಾದಿಂದ ತುಮಕೂರು ನಗರಕ್ಕೆ ವಲಸೆ ಬಂದಿದ್ದರು. ತುಮಕೂರು ನಗರದಲ್ಲಿ ಚಿಕನ್ ಕಬಾಬ್ ಸೆಂಟರ್ ನಡೆಸಿಕೊಂಡು ಜೀವನ ನಡೆಸುತ್ತಿದ್ದರು. ಅಲ್ಲದೆ ವ್ಯಾಪಾರ ವಹಿವಾಟಿಗಾಗಿ ಒಂದುವರೆ ಲಕ್ಷ ರೂಗಳನ್ನು ಸಾಲವಾಗಿ ಪಡೆದಿದ್ದರೂ. ಅಲ್ಲದೆ ಪ್ರತಿ ತಿಂಗಳು ಬಡ್ಡಿ ಹಣವನ್ನು ಕಟ್ಟುತ್ತಿದ್ದರು. ಆದರೆ ಇವರ ವ್ಯಾಪಾರದಲ್ಲಿ ಹಿನ್ನಡೆಯಾಗಿದ್ದರಿಂದ ಬಡ್ಡಿ ಹಣವನ್ನು ಕಟ್ಟಲು ಸಾಧ್ಯವಾಗಿರಲಿಲ್ಲ ಆದರೆ ಬಡ್ಡಿ ದಂಧೆ ಕೋರರು ಬಡ್ಡಿ ಹಣಕ್ಕಾಗಿ ಪೀಡಿಸುತ್ತಿದ್ದರು ಎಂಬುದು ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದರು. ಡೆತ್ ನೋಟ್ ನಲ್ಲಿ ಗರೀಬ್ ಸಾಬ್ ಎಂಬುವವರು ಬರೆದಿಟ್ಟಿರುವ…
ನೆಹರು ಕುಟುಂಬದ ಕಟ್ಟಕಡೆಯ ವ್ಯಕ್ತಿಗೂ ಅಧಿಕಾರ ಕೊಡುವುದೇ ಕಾಂಗ್ರೆಸ್ ಪಕ್ಷದ ಗುರಿ. ಡಾ. ಬಿ. ಆರ್. ಅಂಬೇಡ್ಕರ್ ಅವರ ಹೆಸರನ್ನು ನುಡಿಮುತ್ತಾಗಿ ಬಳಸುವ ಕಾಂಗ್ರೆಸ್ ಪಕ್ಷವು ಗೌರವಯುತವಾಗಿ ಅವರ ಶವಸಂಸ್ಕಾರವನ್ನೂ ಮಾಡಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಬಾಬಾಸಾಹೇಬ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಇದೆಯೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ. ರಾಜ್ಯ ಎಸ್.ಸಿ. ಮೋರ್ಚಾ ವತಿಯಿಂದ ಏರ್ಪಡಿಸಿದ್ದ ‘ಸಂವಿಧಾನ ಸಮರ್ಪಣಾ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಂಗ್ರೆಸ್ಸಿಗರಿಂದ ಅಂಬೇಡ್ಕರ್ ಅವರ ಬಗ್ಗೆ ತಿಳಿದುಕೊಳ್ಳುವ ಅಗತ್ಯ ಬಿಜೆಪಿಯವರಿಗೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು. ನಗರದಲ್ಲಿ ರಾಜ್ಯ ಎಸ್.ಸಿ. ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೆಹರು ಸ್ಮಾರಕಕ್ಕೆ 30 ಎಕರೆ, ಇಂದಿರಾ ಗಾಂಧಿ ಅವರ ಸ್ಮಾರಕಕ್ಕೆ 20 ಎಕರೆ ನೀಡಿದ್ದರು. ಆದರೆ, ಸಂವಿಧಾನ ನೀಡಿದ ರಾಷ್ಟ್ರೀಯ ಸ್ಮಾರಕವನ್ನೇಕೆ ಮಾಡಿಲ್ಲ? ಅವರ ನೆನಪಾಗಲಿಲ್ಲವೇ ಎಂದರು.
ಸಾಮಾನ್ಯವಾಗಿ ಕಂಬಳದ ಬಳಿಕ ಕರಾವಳಿಯಲ್ಲಿ ಕೋಳಿ ಅಂಕ ನಡೆಯುತ್ತದೆ. ಆದರೆ ಬೆಂಗಳೂರು ಕಂಬಳದಲ್ಲಿ ಕೋಳಿ ಅಂಕವಿಲ್ಲ. ಆದರೆ ಫೈಟರ್ ಹುಂಜದ ಲಕ್ಕಿಡಿಪ್ ಕೌಂಟರ್ ತೆರೆಯಲಾಗಿದೆ. ವಿಜೇತರಿಗೆ ರುಚಿಯಾದ ಅಂಕದ ಕೋಳಿ ಸಿಗುತ್ತಿದೆ. ಸಿಲಿಕಾನ್ ಸಿಟಿಯವರಿಗೆ ಅಂಕದ ಕೋಳಿಯ ರುಚಿ ತೋರಿಸಲು ಕರಾವಳಿ ಭಾಗದಿಂದ 300ಕ್ಕೂ ಅಧಿಕ ಅಂಕದ ಹುಂಜಗಳನ್ನು ತರಲಾಗಿದೆ. ಕೋಳಿ ಅಂಕದಲ್ಲಿ ಭಾಗವಹಿಸಿ ಗೆಲುವು ಸಾಧಿಸಿದ ಕೋಳಿಗೆ ಬಂಟೆ ಹಾಗೂ ಸೋತ ಕೋಳಿಗೆ ಒಟ್ಟೆ ಎಂದು ಕರೆಯಲಾಗುತ್ತದೆ.