Author: admin

ಮುಂಬೈ:  ಡ್ರಗ್ಸ್‌ ಗಾಗಿ ತಮ್ಮ ಇಬ್ಬರು ಮಕ್ಕಳನ್ನು ₹ 74 ಸಾವಿರಕ್ಕೆ ಮಾರಾಟ ಮಾಡಿದ್ದ ದಂಪತಿಯನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ದಂಪತಿಯನ್ನು ಶಬ್ಬಿರ್‌ ಖಾನ್‌ ಹಾಗೂ ಸಾನಿಯಾ ಖಾನ್‌ ಎಂದು ಗುರುತಿಸಲಾಗಿದೆ. ಇವರ ಜೊತೆಗೆ ಮಕ್ಕಳ ಮಾರಾಟಕ್ಕೆ ನೆರವು ನೀಡಿದ್ದ ಶಕೀಲ್‌ ಮತ್ತು ಉಷಾ ಎಂಬುವರನ್ನು ಸಹ ಬಂಧಿಸಲಾಗಿದೆ. ಮಕ್ಕಳನ್ನು ಮಾರಾಟ ಮಾಡಿದ್ದ ದಂಪತಿ ಮಾದಕ ವಸ್ತು ವ್ಯಸನಿಗಳಾಗಿದ್ದರು. ಇವರು ಡ್ರಗ್ಸ್‌ ಪಡೆಯುವ ಸಲುವಾಗಿ 74 ಸಾವಿರಕ್ಕೆ ಮಕ್ಕಳನ್ನು ಮಾರಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಒಂದು ತಿಂಗಳ ಹೆಣ್ಣು ಮಗುವನ್ನು ರಕ್ಷಣೆ ಮಾಡಲಾಗಿದೆ. 2 ವರ್ಷ ಬಾಲಕನಿಗಾಗಿ ತನಿಖೆ ಮಾಡಲಾಗುತ್ತಿದ್ದು ಎರಡು ದಿನಗಳಲ್ಲಿ ಬಾಲಕನ ‍ಪತ್ತೆ ಮಾಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಹೆಣ್ಣು ಮಗುವನ್ನು ₹14 ಸಾವಿರಕ್ಕೆ, ಗಂಡು ಮಗುವನ್ನು ₹ 60 ಸಾವಿರಕ್ಕೆ ಮಾರಾಟ ಮಾರಿದ್ದರು. ಘಟನೆ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ರಾಮನಗರ: ಲೋಕಸಭೆ ಚುನಾವಣೆವರೆಗೂ ಈ ಸರಕಾರ ಜಾತಿಗಣತಿ ನಾಟಕ ಆಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಟೀಕಿಸಿದರು. ರಾಮನಗರದಲ್ಲಿ ವಕೀಲರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಜಾತಿ ಗಣತಿ ವರದಿಯನ್ನು ಸರಕಾರ ಇನ್ನೂ ನಾಲ್ಕು ತಿಂಗಳು ಅಧ್ಯಯನ ಮಾಡಲಾಗುವುದು ಎಂದು ಹೇಳುತ್ತಿದೆ. ನನ್ನ ಪ್ರಕಾರ ಲೋಕಸಭೆ ಚುನಾವಣೆ ತನಕ ಇದು ಏನೂ ಆಗಲ್ಲ. ಯಾರೂ ಗಾಬರಿ ಆಗಬೇಕಾದ ಅವಶ್ಯಕತೆ ಇಲ್ಲ. ಈ ಸರಕಾರದ ಕೈಯಲ್ಲಿ ಏನೂ ಆಗಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು. ಇದೇ ಸಿದ್ದರಾಮಯ್ಯ ಅವರು 2018ರಲ್ಲಿ ಕಾಂತರಾಜು ವರದಿ ಕೊಡಲು ಬಂದಾಗ ಆ ವರದಿಯನ್ನು ಕುಮಾರಸ್ವಾಮಿ ಸ್ವೀಕರಿಸಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ, ಆಗಲೇ ವರದಿ ಸಿದ್ದವಾಗಿತ್ತಲ್ವಾ? ನಿಮ್ಮ ಸರಕಾರ ಬಂದು 6 ತಿಂಗಳಾಗಿದೆ, ಇನ್ನೂ ಯಾಕೆ ವರದಿ ಸ್ವೀಕಾರ ಮಾಡಿಲ್ಲ ಎಂದು ಅವರು ನೇರವಾಗಿ ಸಿದ್ದರಾಮಯ್ಯ ಅವರನ್ನೇ ಪ್ರಶ್ನೆ ಮಾಡಿದರು.

Read More

ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸಚಿವಸಂಪುಟ ಹಿಂದಕ್ಕೆ ಪಡೆದಿದೆ. ಇದು ಸಂವಿಧಾನ ವಿರೋಧಿ ಕ್ರಮ. ರಾಜ್ಯಪಾಲರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ. ರವಿ ಅವರು ಮನವಿ ಮಾಡಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿ ಬ್ಲ್ಯಾಕ್‍ಮೇಲ್ ಪಾಲಿಟಿಕ್ಸ್ ನಡೆದಿದೆ. ಅದರ ಅಂಗವಾಗಿ ಇಡೀ ಸಂಪುಟ, ಜನ ಏನೆಂದುಕೊಳ್ಳುವರೋ ಎಂಬುದನ್ನು ಯೋಚಿಸದೆ ಕೆಟ್ಟ ಪರಂಪರೆಗೆ ನಾಂದಿ ಹಾಡಿದೆ ಎಂದು ಆರೋಪಿಸಿದರು. ಇಲ್ಲಿ ಬಿಜೆಪಿ, ಕಾಂಗ್ರೆಸ್ ಪ್ರಶ್ನೆ ಬರುವುದಿಲ್ಲ. ತನಿಖೆ ರದ್ದು ಎಂದರೆ ನ್ಯಾಯಾಂಗ ವ್ಯವಸ್ಥೆ ತಿರಸ್ಕರಿಸಿದಂತೆ ಎಂದ ಅವರು, ಇದು ಆಲಿಬಾಬಾ ಔರ್ ಚಾಲೀಸ್ ಚೋರ್ ಎಂಬಂತಿದೆ. ಒಬ್ಬ ಭ್ರಷ್ಟ ಆರೋಪಿಯ ಸಮರ್ಥನೆಗೆ ಇಡೀ ಕ್ಯಾಬಿನೆಟ್ ನಿಂತದ್ದು ಕರ್ನಾಟಕದ ಘನತೆಗೆ ಕಪ್ಪು ಚುಕ್ಕಿ ಇಟ್ಟಂತೆ. ಇದು ಪ್ರಜಾಪ್ರಭುತ್ವದ ಮೇಲೆ ವಿಶ್ವಾಸ…

Read More

ತೂಕ ಮತ್ತು ಸಕ್ಕರೆಯನ್ನು ನಿಯಂತ್ರಣದಲ್ಲಿಡುವ ಕಪ್ಪು ಎಳ್ಳಿನ ಔಷಧೀಯ ಗುಣ ಬಲ್ಲೀರಾ..?    ಕಪ್ಪು ಎಳ್ಳನ್ನು ವಿವಿಧ ಭಕ್ಷ್ಯಗಳಲ್ಲಿ ಮಸಾಲೆಯಾಗಿ ಬಳಸಲಾಗುತ್ತದೆ. ಅವುಗಳ ರುಚಿಯೂ ವಿಭಿನ್ನವಾಗಿರುತ್ತದೆ. ಇದು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಹಲವಾರು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಇದನ್ನು ಪ್ರಾಚೀನ ಕಾಲದಿಂದಲೂ ಬಳಸಲಾಗುತ್ತದೆ. ಈ ಬೀಜಗಳು ಕ್ಯಾನ್ಸರ್, ತೂಕ ಹೆಚ್ಚಾಗುವುದು, ಮಧುಮೇಹ, ಬೊಜ್ಜು, ಹೃದ್ರೋಗ ಮತ್ತು ಸ್ಕೂಲಕಾಯತೆಯಂತಹ ಅನೇಕ ದೀರ್ಘಕಾಲದ ಪರಿಸ್ಥಿತಿಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ರಕ್ತದಲ್ಲಿನ ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚಿಲಸು ಖರ್ಜೂರ ಸೇವಿಸಿ ರಕ್ತಹೀನತೆಯ ಸಮಸ್ಯೆ ಬಹುತೇಕ ಮಹಿಳೆಯರಲ್ಲಿ ಕಂಡುಬರುತ್ತದೆ. ರಕ್ತಹೀನತೆ ಎಂದರೆ ದೇಹದಲ್ಲಿ ರಕ್ತದ ಕೊರತೆ ಇರುವುದು. ಖರ್ಜೂರವು ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣವನ್ನು ಹೆಚ್ಚಿಸುವ ಮೂಲಕ ರಕ್ತಹೀನತೆಯ ಸಮಸ್ಯೆ ನಿವಾರಿಸುತ್ತದೆ. ಖರ್ಜೂರದಲ್ಲಿ ಕಬ್ಬಿಣಾಂಶವು ಕಂಡುಬರುತ್ತದೆ. ಇದು ದೇಹದಲ್ಲಿ ಹಿಮೋಗ್ಲೋಬಿನ್ ಹೆಚ್ಚಿಸುತ್ತದೆ. ದೇಹಕ್ಕೆ ರಕ್ತವನ್ನು ಪೂರೈಸುತ್ತದೆ. ಖಾಲಿ ಹೊಟ್ಟೆಯಲ್ಲಿ ಖರ್ಜೂರವನ್ನು ತಿನ್ನುವುದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ.

Read More

ಬೆಂಗಳೂರು: ಡಿ.ಕೆ. ಶಿವಕುಮಾರ್ ದೆಹಲಿ ನಿವಾಸಗಳ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ದುಬೈಗೆ ತೆರಳಲು ಅನುಮತಿ ಕೋರಿ ಡಿಸಿಎಂ ಡಿ.ಕೆ. ಶಿವಕುಮಾರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಐಟಿ ಪ್ರಕರಣದಲ್ಲಿ ಆರೋಪಿಯಾಗಿರುವ ಡಿ.ಕೆ. ಶಿವಕುಮಾರ್ ವಿಶ್ವಸಂಸ್ಥೆಯ ಪರಿಸರ ಸಮ್ಮೇಳನದಲ್ಲಿ ಭಾಗವಹಿಸಲು ತೆರಳಬೇಕಿದೆ. ಹೀಗಾಗಿ ನ.29ರಿಂದ ಡಿ.3ರವರೆಗೆ ತೆರಳಲು ಅನುಮತಿ ಕೋರಿದ ಅರ್ಜಿಯನ್ನು ವಿಚಾರಣೆ ನಡೆಸಿ ನ್ಯಾಯಾಧೀಶೆ ಜೆ. ಪ್ರೀತ್ ಅವರು ಅನುಮತಿ ನೀಡಿದ್ದಾರೆ.

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಧು ಚಂದ್ರ ಕಾಲ ಮುಕ್ತಾಯವಾಗಿದೆ. ಈ ಆರು ತಿಂಗಳ ಕಾಲಾವಧಿಯಲ್ಲಿ ವಿರೋಧ ಪಕ್ಷದ ಸಮರ್ಥವಾದ ನಾಯಕರು ಇಲ್ಲದೆ ಎರಡು ಅಧಿವೇಶನಗಳನ್ನು ಸರ್ಕಾರ ಪೂರ್ಣಗೊಳಿಸಿದೆ. ಈಗ ಚಳಿಗಾಲದ ಅಧಿವೇಶನ ಡಿಸೆಂಬರ್ 4ರಿಂದ ಬೆಳಗಾವಿಯಲ್ಲಿ ನಡೆಯಲಿದ್ದು ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ವಿರೋಧ ಪಕ್ಷದ ನಾಯಕರನ್ನಾಗಿ ಅಳದು ತೂಗಿ ಆರ್ ಅಶೋಕ್ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಬಿಎಸ್ ವೈ ಅವರ ಪುತ್ರ ಬಿಎಸ್ ವೈ ವಿಜಯೇಂದ್ರ ಈಗ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಬಿಜೆಪಿಯ ಈ ಜೋಡೆತ್ತುಗಳಿಗೆ ಸವಾಲುಗಳು ಸರಮಾಲೆಯೇ ಮುಂದಿದೆ ಈ ಕಡೆ ಸರ್ಕಾರದ ವೈಫಲ್ಯ ಮತ್ತು ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಲು ಪ್ರತಿಪಕ್ಷದ ನಾಯಕ ಹಾಗೂ ರಾಜ್ಯ ಅಧ್ಯಕ್ಷರ ಹೆಗಲ ಮೇಲಿದೆ ಅದರ ಜೊತೆಗೆ ಸ್ವಹಪಕ್ಷದ ಶಾಸಕರು ಆಪರೇಷನ್ ಹಸ್ತಕ್ಕೆ ಗುರಿಯಾಗುವ ಸಂಭವ ಹೆಚ್ಚಾಗಿದೆ. ಅವರನ್ನು ಪಕ್ಷದಲ್ಲಿ…

Read More

ಶಿವಮೊಗ್ಗ: ಶಾಲೆಯೊಂದರಲ್ಲಿ ಬ್ರಾಹ್ಮಣ ಬಾಲಕಿಗೆ ಒತ್ತಾಯಪೂರ್ವಕವಾಗಿ ಮೊಟ್ಟೆ ತಿನ್ನಿಸಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪೋಷಕರು ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ಶಾಲೆಯೊಂದರಲ್ಲಿ 2ನೇ ತರಗತಿ ಒದುತ್ತಿರುವ ವಿದ್ಯಾರ್ಥಿನಿಗೆ ಶಿಕ್ಷಕರು ಒತ್ತಾಯ ಮಾಡಿ ಮೊಟ್ಟೆ ತಿನ್ನಿಸಿದ್ದಾರೆ. ಒಲ್ಲದೆ ಮೊಟ್ಟೆ ತಿಂದಿದ್ದರಿಂದ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು ಮನಸ್ಸಿಗೂ ಘಾಸಿಯಾಗಿದೆ ಎಂದು ವಿದ್ಯಾರ್ಥಿನಿಯ ಪೋಷಕರು ತಿಳಿಸಿದ್ದಾರೆ.

Read More

ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆಗಳ ಹೆಸರಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ರಾಜಸ್ಥಾನದ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಮೋದಿಯನ್ನು ಜೇಬುಗಳ್ಳ ಎಂದು ಲೇವಡಿ ಮಾಡಿದ್ದರು. ವಯನಾಡ್ ಸಂಸದರ ವಿರುದ್ಧ ಬಿಜೆಪಿ ಸಲ್ಲಿಸಿರುವ ದೂರಿನ ಆಧಾರದ ಮೇಲೆ ಆಯೋಗದ ಕ್ರಮ ಕೈಗೊಳ್ಳಲಾಗಿದೆ. ದೂರಿನಲ್ಲಿನ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ನೋಟಿಸ್‌ನಲ್ಲಿ ಕೋರಲಾಗಿದೆ. ಶುಕ್ರವಾರ ಸಂಜೆ 6 ಗಂಟೆಯೊಳಗೆ ವಿವರಣೆಯನ್ನು ಸಲ್ಲಿಸುವಂತೆಯೂ ಆಯೋಗವು ರಾಹುಲ್‌ಗೆ ಸೂಚಿಸಿದೆ. ರಾಜಕೀಯ ವಿರೋಧಿಗಳ ವಿರುದ್ಧ ಸುಳ್ಳು ಆರೋಪ ಮಾಡುವುದು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ಚುನಾವಣಾ ಆಯೋಗ ನೋಟಿಸ್‌ ನಲ್ಲಿ ತಿಳಿಸಿದೆ. ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ವೇಳೆ ರಾಹುಲ್ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಸುಳ್ಳು ಆರೋಪ ಮಾಡಿದ್ದಾರೆ ಎಂದು ಬಿಜೆಪಿ ದೂರಿನಲ್ಲಿ ಆರೋಪಿಸಲಾಗಿದೆ.

Read More

ಮಹಿಳೆಯರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಗರದ ಕಮಿಷನರ್ ಕಚೇರಿ ಬಳಿ ಕಮಾಂಡ್ ಕೇಂದ್ರ ನಿರ್ಮಿಸಲಾಗಿದೆ. ಕೇಂದ್ರ ಸರ್ಕಾರ ನಿರ್ಭಯಾ ನಿಧಿಯಡಿ ರೂಪಿಸಲಾದ ₹ 450 ಕೋಟಿ ವೆಚ್ಚದ ಬಹುಮಹಡಿ ಕಟ್ಟಡದಲ್ಲಿ ಕಮಾಂಡ್ ಕೇಂದ್ರ ನಿರ್ಮಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಿರ್ಭಯಾ ಯೋಜನೆಯಡಿ ಬೆಂಗಳೂರು, ಅಹಮದಾಬಾದ್, ಚೆನ್ನೈ, ದೆಹಲಿ, ಹೈದರಾಬಾದ್, ಕೋಲ್ಕತ್ತಾ, ಲಖನೌ, ಮುಂಬೈ ನಗರಗಳಲ್ಲಿ ಸೇಫ್ ಸಿಟಿ ಯೋಜನೆ ಜಾರಿಯಾಗುತ್ತಿದೆ. ಕಮಾಂಡ್ ಸೆಂಟರ್‌ನ್ನೂ ಅನುಷ್ಠಾನಗೊಳಿಸಲಾಗುತ್ತಿದೆ. ವರದಿ: ಆಂಟೋನಿ

Read More

ತೆಲಂಗಾಣ ಚುನಾವಣೆ ಹಿನ್ನೆಲೆ ಸಚಿವ ಜಮೀರ್ ಅಹ್ಮದ್ ಖಾನ್ ತಂಗಿದ್ದ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಹೈದರಾಬಾದ್ ಪಾರ್ಕ್ ಹಟ್ ಹೋಟೆಲ್ ಮೇಲೆ ಈ ದಾಳಿ ನಡೆದಿದೆ. ತಡರಾತ್ರಿ ರೇಡ್ ಮಾಡಿದ್ದಕ್ಕೆ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾಳಿ ನಡೆಸಿ ಯಾವುದೇ ಕುರುಹು ಇಲ್ಲದೆ ಪೊಲೀಸರು ಹಿಂತಿರುಗಿದ್ದಾರೆ. ತೆಲಂಗಾಣ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಹಾಗೂ ಬಿಎಸ್ಆರ್ ಸೋಲುವ ಭಯದಿಂದ ದಾಳಿ ಮಾಡಿಸಿದೆ ಎಂದು ಜಮೀರ್ ಆರೋಪಿಸಿದ್ದಾರೆ.

Read More