Author: admin

ಬೆಂಗಳೂರು: ವಿಧಾನಸಭೆಯಲ್ಲಿ ಹೇಳಿದ ವೀಡಿಯೋವನ್ನು ತಪ್ಪು ಅರ್ಥ ಬರುವಂತೆ ಬೇಕಾದಷ್ಟು ಕಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕರಾದ ಸಿ.ಟಿ.ರವಿ ಹಾಗೂ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತ ಪೂರ್ತಿ ವಿಡಿಯೋವನ್ನು ಟ್ವಿಟ್ಟರ್‌ ನಲ್ಲಿ ಹಂಚಿಕೊಂಡಿರುವ ಅವರು,  ಸಿಟಿ ರವಿ ಮತ್ತು ಅವರ ಪಕ್ಷ ಇಂಥಾ ಅಗ್ಗದ ಚೇಷ್ಠೆಗಳನ್ನು ಮಾಡಿದ್ದರ ಫಲವೇ ಇಂದು ಜನ ಅವರನ್ನು ಮನೆಯಲ್ಲಿ‌ ಮತ್ತು ಪಕ್ಷವನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ.ಆದರೂ ನಿಮಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಲಿ ಶಾಸಕರಾಗಿರುವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಸದನದಲ್ಲಿ ಕೂತು ಅಭಿವೃದ್ಧಿ ಕಾರ್ಯಗಳ ಬಗೆಗಿನ ಚರ್ಚೆಯಲ್ಲಿ ಪಾಲ್ಗೊಳ್ಳಬೇಕಿತ್ತು, ಆದರೆ ಅವರ ಗಮನವೆಲ್ಲ ವಿರೋಧ ಪಕ್ಷದ ನಾಯಕನ ಕುರ್ಚಿಯ ಮೇಲೆ ಇದೆಯೆಂದು ಕಾಣುತ್ತೆ ಎಂದಿರುವ ಮುಖ್ಯಮಂತ್ರಿ, ನಿಮ್ಮ ಮಾನ ಮರ್ಯಾದೆ ಬಗ್ಗೆ ನಿಮಗೆ ಕನಿಷ್ಠ ಕಾಳಜಿ ಇದ್ದರೆ ಶೇರ್ ಮಾಡಿರುವ ವೀಡಿಯೋ ಡಿಲೀಟ್ ಮಾಡಿ…

Read More

ಕೊರಟಗೆರೆ: ಹೊಳವನಹಳ್ಳಿ ಗ್ರಾಮ ಪಂಚಾಯತ್‌ ಅಭಿವೃದ್ಧಿಗಾಗಿ ತುಮಕೂರು ಕೃಷಿ ಉತ್ಪನ್ನ ಉಪ ಮಾರುಕಟ್ಟೆ ನಿರ್ಮಾಣ ಮಾಡಿಕೊಟ್ಟ ಅಂಗಡಿ ಮಳಿಗೆಗಳಿಗೆ  ಮೂಲ ಸೌಕರ್ಯ ಇಲ್ಲದೆ ಸೊರಗುತ್ತಿದೆ. 2016 ರಲ್ಲಿ ಎಪಿಎಂಸಿ ಮಾರುಕಟ್ಟೆ ಸಮಿತಿ ವತಿಯಿಂದ 2ಕೋಟಿ 15 ಲಕ್ಷದಲ್ಲಿ 70ಕ್ಕೂ ಅಧಿಕ ಅಂಗಡಿ ಮಳಿಗೆಗಳನ್ನ ನಿರ್ಮಾಣ ಮಾಡಿಕೊಟ್ಟರೂ ಗ್ರಾ.ಪಂ.ನಿಂದ ಮೂಲ ಸೌಕರ್ಯ ನೀಡುವಲ್ಲಿ ವಿಫಲರಾಗಿದ್ದಾರೆ. ಅಂಗಡಿ ಮಳಿಗೆಗಳನ್ನ ಮರು ಟೆಂಡರ್ ಮಾಡದ ಪರಿಣಾಮ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಕೊವಿಡ್‌ ಸಂದರ್ಭದಲ್ಲಿ ನಿಂತ  ಶುಕ್ರವಾರ ವಾರದ ಸಂತೆ ಇಲ್ಲಿಯವರೆಗೂ ಹಾರಜು ಪ್ರಕ್ರಿಯೆ ಮಾಡದೆ ಮೀನಾಮೇಷ ಎಣಿಸುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಪಿಎಂಸಿ ಮಾರುಕಟ್ಟೆಯಲ್ಲಿರುವ ಅಂಗಡಿ ಮಳಿಗೆಗಳು ಹಾಗೂ ವಾರದ ಸಂತೆಯನ್ನ ಪ್ರಾರಂಭಿಸುವಂತೆ ಸಾರ್ವಜನಿಕರ ಒತ್ತಾಯಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ

Read More

ಬೆಳಗಾವಿ ತಾಲೂಕಿನ ಹೊಸ ಹೊಂಟುಮುರಿ ಎಲ್ಲಿ ನಡೆದ ಘಟನೆ ಕುರಿತು ಬಿಜೆಪಿ ಕೇಂದ್ರ ಸಂಸದೀಯ ಮಹಿಳಾ ನಿಯೋಗ ಬೆಳಗಾವಿ ತಾಲೂಕಿನ ಹೊಂಟ್ಮುರಿಯಲ್ಲಿ ನಡೆದ ಘಟನೆಯ ಕುರಿತು ಸತ್ಯಶೋಧನೆಗಾಗಿ ಸಂಸದರಾದ ಅಫ್ರಜಿತಾ ಸಾರಂಗಿ, ಸುನಿತಾ ದಂಗ್ಗಲ, ಲಾಕೆಟ್ ಚಟರ್ಜಿ ರಂಜಿತಾ ಕೋಲಿ, ಆಶಾ ಲಾಕ್ರ ,ನೇತೃತ್ವದ ನಿಯೋಗ ಬೆಳಗಾವಿಗೆ ಆಗಮಿಸಿದ್ದು ಸಂತ್ರಸ್ತ ಮಹಿಳೆಯನ್ನು ಬೀಮ್ಸ ಆಸ್ಪತ್ರೆಯಲ್ಲಿ ನಿಯೋಗ. ಭೇಟಿಯಾಗಿದೆ. ನಿಯೋಗದ ಸದಸ್ಯರ ಅಫ್ರಜಿತಾ ಸಾರಂಗಿ ಹಾಗೂ ಲಾಕೆಟ್ ಚಟರ್ಜಿ ಸುದ್ದಿಗಾರರೊಂದಿಗೆ ಮಾತನಾಡಿ,  ಇದೊಂದು ಅಮಾನವೀಯ ಘಟನೆ ಈ ಘಟನೆಯನ್ನು ನಾವು ಖಂಡಿಸುತ್ತೇವೆ ಕಾಂಗ್ರೆಸ್ ಸರ್ಕಾರದ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿರುವುದು ಇದೊಂದು ಉದಾಹರಣೆವಾಗಿದೆ ಎಂದು ದೂರಿದರು. ಬೆಳಗಾವಿಯಲ್ಲಿ ಸರ್ಕಾರದ ಅಧಿವೇಶನ ನಡೆಯುತ್ತಿರುವಾಗ ಇಂಥದೊಂದು ಘಟನೆ ನಡೆದಿರುವುದು ಅಮಾನವೀಯ ಕೃತ್ಯವಾಗಿದೆ. ಇದಕ್ಕೆ ಸೂಕ್ತವಾದ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ನಾವು ಒತ್ತಾಯಿಸುತ್ತೇವೆ . ಸಿದ್ದರಾಮಯ್ಯ ಸರ್ಕಾರ ಮಹಿಳೆಯರ ರಕ್ಷಣೆ ಮಾಡುವುದರಲ್ಲಿ ವಿಫಲವಾಗಿದೆ ಎಂದು ಇದೇ ವೇಳೆ ಟೀಕಿಸಿದರು. ಇನ್ನೂ ಇಂಥದೊಂದು ಘಟನೆ ಮಣಿಪುರ್, ಉತ್ತರ ಪ್ರದೇಶ…

Read More

ಚೆನ್ನೈ ವಿಮಾನ ನಿಲ್ದಾಣದಲ್ಲಿ ಭಾರೀ ಮಾದಕ ದ್ರವ್ಯ ದಂಧೆ. 12 ಕೋಟಿ ಮೌಲ್ಯದ ಕೊಕೇನ್ ಅನ್ನು ಕಸ್ಟಮ್ ವಶಪಡಿಸಿಕೊಂಡಿದೆ. ನೈಜೀರಿಯನ್‌ ನಿಂದ 1,201 ಗ್ರಾಂ ಕೊಕೇನ್ ಪತ್ತೆಯಾಗಿದೆ. ಇಥಿಯೋಪಿಯಾದ ರಾಜಧಾನಿ ಅಡಿಸ್ ಅಬಾಬಾದಿಂದ ಡಿಸೆಂಬರ್ 12 ರಂದು ಚೆನ್ನೈಗೆ ಆಗಮಿಸಿದ ಪ್ರಯಾಣಿಕರಿಂದ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ಔಷಧಗಳನ್ನು ಕ್ಯಾಪ್ಸೂಲ್‌ ಗಳಲ್ಲಿ ಕಳ್ಳಸಾಗಣೆ ಮಾಡುವ ಪ್ರಯತ್ನ ನಡೆದಿದೆ. 12 ಕೋಟಿ ಮೌಲ್ಯದ 1,201 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಘಟನೆ ಕುರಿತು ಏರ್ ಕಸ್ಟಮ್ಸ್ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Read More

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ ದಲಿತ ಮಹಿಳೆಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಆಘಾತಕಾರಿ ಘಟನೆ  ನಡೆದಿದೆ. ಉತ್ತರ ಪ್ರದೇಶದಿಂದ ರಾಜಸ್ಥಾನಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ 20 ವರ್ಷದ ಯುವತಿಯೊಬ್ಬಳಿಗೆ ಕಿರುಕುಳ ನೀಡಲಾಗಿತ್ತು. ಘಟನೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ ಚಾಲಕ ಮತ್ತು ಕಂಡಕ್ಟರ್‌ ನನ್ನು ಬಂಧಿಸಲಾಗಿದೆ. ಡಿಸೆಂಬರ್ 9ರ ರಾತ್ರಿ ಈ ಘಟನೆ ನಡೆದಿದೆ. ಕಾನ್ಪುರದಿಂದ ಜೈಪುರಕ್ಕೆ ಖಾಸಗಿ ಬಸ್‌ ನಲ್ಲಿ ಯುವತಿ ಪ್ರಯಾಣಿಸುತ್ತಿದ್ದಳು. 20 ವರ್ಷದ ಮಹಿಳೆಯನ್ನು ಚಾಲಕನ ಕ್ಯಾಬಿನ್‌ ಗೆ ಕರೆದೊಯ್ದು ನಂತರ ಚಿತ್ರಹಿಂಸೆ ನೀಡಲಾಯಿತು. ಬಸ್ಸಿನೊಳಗೆ ಜೋರಾಗಿ ಸಂಗೀತ ನುಡಿಸಿದ ನಂತರ ಚಾಲಕ ಆರಿಫ್ ಯುವತಿ ಮೊದಲು ಕಿರುಕುಳ ನೀಡಿದ್ದಾನೆ. ನಂತರ ಕಂಡಕ್ಟರ್ ಲಲಿತ್ ಕೂಡ ಯುವತಿಗೆ ಕಿರುಕುಳ ನೀಡಿದ್ದಾನೆ. ಅಷ್ಟರಲ್ಲಿ ಬಾಲಕಿಯ ಕಿರುಚಾಟ ಕೇಳಿದ ಪ್ರಯಾಣಿಕರು ಕ್ಯಾಬಿನ್ ತೆರೆದು ನೋಡಿದಾಗ ಚಿತ್ರಹಿಂಸೆಯ ವಿಷಯ ತಿಳಿಯಿತು. ಬಸ್ ನಿಲ್ಲಿಸಿದ ನಂತರ ಪ್ರಯಾಣಿಕರು ಚಾಲಕನನ್ನು ಹಿಡಿದು ಅಮಾನುಷವಾಗಿ ಥಳಿಸಿದ್ದಾರೆ. ನಂತರ ಕಾನೋಟಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು…

Read More

ನಾಪತ್ತೆಯಾಗಿದ್ದ ವೃದ್ಧೆಯ ಶವ ಮನೆಯ ಬೆಡ್ ರೂಂನಲ್ಲಿ ಪ್ಲಾಸ್ಟಿಕ್ ಹಾಳೆಯಲ್ಲಿ ಸುತ್ತಿದ ಸ್ಥಿತಿಯಲ್ಲಿ ಹಾಸಿಗೆಯ ಕೆಳಗೆ ಪತ್ತೆಯಾಗಿದೆ. ದೆಹಲಿಯ ನಂದ್ ನಗರಿಯಿಂದ ಡಿಸೆಂಬರ್ 10 ರಂದು ನಾಪತ್ತೆಯಾಗಿದ್ದ 60 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ನೆಲ ಮಹಡಿಯ ಕೊಠಡಿಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಶಾದೇವಿ (60) ಮೃತರು. ಮಗ ಮಹಾವೀರ್ ಸಿಂಗ್ (33) 13 ರಂದು ನಂದ ನಗರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಡಿಸೆಂಬರ್ 10 ರಿಂದ ತನ್ನ ತಾಯಿ ಕಾಣೆಯಾಗಿದ್ದಾರೆ ಎಂದು ವರದಿ ಮಾಡಿದ್ದಾರೆ. ಮಗನ ದೂರಿನ ಪ್ರಕಾರ, ಬಾಡಿಗೆದಾರರಿಂದ ಬಾಡಿಗೆ ವಸೂಲಿ ಮಾಡಲು ನಂದನಗರಿಗೆ ಹೋಗಿದ್ದು, ನಂತರ ನಾಪತ್ತೆಯಾಗಿದ್ದಾರೆ. ಶುಕ್ರವಾರ ಸಂಜೆ ವೇಳೆಗೆ ದೆಹಲಿಯ ಹರ್ಷ್ ವಿಹಾರ್‌ನಲ್ಲಿರುವ ಆಶಾದೇವಿ ಅವರ ಕುಟುಂಬದ ಮನೆಯ ನೆಲ ಮಹಡಿಯಿಂದ ದುರ್ವಾಸನೆ ಬರಲಾರಂಭಿಸಿತು. ನೆಲಮಹಡಿಯ ಬೆಡ್ ರೂಂ ಪರಿಶೀಲಿಸಿದಾಗ ಬೆಡ್ ಬಾಕ್ಸ್ ನೊಳಗೆ ಪ್ಲಾಸ್ಟಿಕ್ ನಲ್ಲಿ ಸುತ್ತಿ ಆಶಾದೇವಿ ಶವ ಪತ್ತೆಯಾಗಿದೆ. ನಂತರ ಪೊಲೀಸರಿಗೆ ಮಾಹಿತಿ…

Read More

ಮಧ್ಯಪ್ರದೇಶದಲ್ಲಿ ಅಕ್ರಮವಾಗಿ ಮಾಂಸ ಮಾರಾಟ ಮಾಡುತ್ತಿದ್ದ ಹತ್ತು ಅಂಗಡಿಗಳನ್ನು ಬುಲ್ಡೋಜರ್‌ನಿಂದ ಒಡೆದು ಹಾಕಲಾಗಿದೆ. ಉಜ್ಜಯಿನಿಯಲ್ಲಿ ಈ ಕ್ರಮವು ಮುಖ್ಯಮಂತ್ರಿ ಮೋಹನ್ ಯಾದವ್ ಅವರ ನಿರ್ದೇಶನವನ್ನು ಅನುಸರಿಸಿ ಬಯಲು ಮಾಂಸ ಮಾರಾಟವನ್ನು ನಿಷೇಧಿಸಿದೆ. ಉಜ್ಜಯಿನಿಯಲ್ಲಿ ಅಂಗಡಿಗಳನ್ನು ಹಗಲಿನಲ್ಲಿ ಮುಚ್ಚಲಾಗುವುದು ಅಥವಾ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು. ಇನ್ನೂ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಮನೆಗಳನ್ನು ಬುಲ್ಡೋಜರ್‌ ಗಳಿಂದ ನೆಲಸಮಗೊಳಿಸಲಾಗಿದೆ. ಫಾರೂಕ್ ರೈನ್, ಬಿಲಾಲ್, ಅಸ್ಲಂ ಎಂಬುವರ ಮನೆಗಳನ್ನು ನೆಲಸಮಗೊಳಿಸಲಾಗಿದೆ. ಭೋಪಾಲ್ ಮಧ್ಯ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಬಿಜೆಪಿ ಕಾರ್ಯಕರ್ತ ದೇವೇಂದ್ರ ಠಾಕೂರ್ ಮೇಲಿನ ಹಲ್ಲೆ ಪ್ರಕರಣದಲ್ಲಿ ರೈನ್ ಪ್ರಮುಖ ಆರೋಪಿಯಾಗಿದ್ದಾನೆ. ಅವನು ಮತ್ತು ಇತರ ಕೆಲವು ಜನರು ಠಾಕೂರ್ ಅವರನ್ನು ಹ್ಯಾಕ್ ಮಾಡಿದ್ದರು. ಈ ಪ್ರಕರಣದಲ್ಲಿ ನಾಲ್ವರು ಸೇರಿ ರೈನ್ ಅವರನ್ನು ಬಂಧಿಸಲಾಗಿದ್ದು, ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ.

Read More

ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಅತೀ ದೊಡ್ಡ ಕಚೇರಿ ಸೂರತ್ ನ ‘ಡೈಮಂಡ್ ಬೋರ್ಸ್’ ಅನ್ನು ಉದ್ಘಾಟಿಸಲಿದ್ದಾರೆ. ಮೋದಿ ಅವರು ಇಂದು ಗುಜರಾತ್‌ ನ ಸೂರತ್ ಮತ್ತು ಉತ್ತರ ಪ್ರದೇಶದ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಸೂರತ್ ವಿಮಾನ ನಿಲ್ದಾಣದಲ್ಲಿ ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಟರ್ಮಿನಲ್ ಕಟ್ಟಡವು 1200 ದೇಶೀಯ ಪ್ರಯಾಣಿಕರು ಮತ್ತು 600 ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಪೀಕ್ ಅವರ್‌ ನಲ್ಲಿ ನಿರ್ವಹಿಸಲು ಸುಸಜ್ಜಿತವಾಗಿದೆ. ಪೀಕ್ ಅವರ್ ಸಾಮರ್ಥ್ಯವನ್ನು 3000 ಪ್ರಯಾಣಿಕರಿಗೆ ಮತ್ತಷ್ಟು ಹೆಚ್ಚಿಸುವ ಸಾಮರ್ಥ್ಯ ಹೊಂದಿದೆ. ಇದಾದ ಬಳಿಕ ಮೋದಿ ವಾರಣಾಸಿಗೆ ಪ್ರಯಾಣಿಸಲಿದ್ದು, ಮಧ್ಯಾಹ್ನ 3:30ಕ್ಕೆ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5:15 ರ ಸುಮಾರಿಗೆ ಅವರು ನಮೋ ಘಾಟ್‌ನಲ್ಲಿ ಕಾಶಿ ತಮಿಳು ಸಂಗಮಂ 2023 ಅನ್ನು ಉದ್ಘಾಟಿಸಲಿದ್ದಾರೆ.

Read More

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತ ತಂಡ ಇಂದು ಮೊದಲ ಪಂದ್ಯವನ್ನು ಆಡಲಿದೆ. ಮೊದಲ ಪಂದ್ಯ ಇಂದು ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ವಿಶ್ವಕಪ್ ಕ್ರಿಕೆಟ್ ಫೈನಲ್ ನಂತರ ಟೀಂ ಇಂಡಿಯಾ ಆಡುತ್ತಿರುವ ಮೊದಲ ಏಕದಿನ ಪಂದ್ಯ ಇದಾಗಿದೆ. ಇನ್ನು ಕನ್ನಡಿಗ ಕೆ.ಎಲ್. ರಾಹುಲ್’ ಆಫ್ರಿಕಾ ವಿರುದ್ಧ ನಡೆಯಲಿರುವ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಹೀಗಾಗಿ ರಾಹುಲ್ ಅವರಿಗೂ ಇದು ಮಹತ್ವದ ಸರಣಿಯಾಗಿದೆ. 2025ರಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಆಡುವ ತಂಡ ಕಟ್ಟಲು ಈಗಿನಿಂದಲೇ ತಯಾರಿ ಮಾಡಲು ಈ ಸರಣಿ ಮುಖ್ಯ ಎಂದು ಹೇಳಲಾಗಿದೆ. ಈ ಸರಣಿಯಲ್ಲಿ ಭಾರತ ತಂಡ ಜಯಿಸಿದರೆ, ರಾಹುಲ್ ಮುಂದಿನ ದಿನಗಳಲ್ಲಿ ಟೀಂ ಇಂಡಿಯಾಗೆ ಪೂರ್ಣ ಪ್ರಮಾಣದ ನಾಯಕನಾಗುವ ಅವಕಾಶದ ಬಾಗಿಲು ತೆರೆಯಲಿದೆ.

Read More

ಕೇರಳದ ಕಣ್ಣೂರಿನಲ್ಲಿ ಕೊರೋನಾಗೆ ವೃದ್ಧ ಬಲಿಯಾಗಿದ್ದಾರೆ. ದೇಶಾದ್ಯಂತ ಕೋವಿಡ್ ಹೆಚ್ಚಳದ ಆತಂಕ ಸೃಷ್ಠಿಸಿದೆ. ಕೇರಳದ ಕಣ್ಣೂರಿನಲ್ಲಿ ಕೋವಿಡ್ ಸೋಂಕಿನಿಂದಾಗಿ 80 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಹೀಗಾಗಿ ಕಣ್ಣೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೊರೋನಾ ಉಪ ತಳಿ ಜೆಎನ್.1 ಗೆ ವೃದ್ಧ ಬಲಿಯಾಗಿರುವ ವಿಷಯ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಕರ್ನಾಟಕದಲ್ಲೂ ಕೋವಿಡ್ ಆತಂಕ ಸೃಷ್ಠಿಯಾಗಿದೆ. ಕೇರಳದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಹೀಗಾಗಿ ಅಲ್ಲಿನ ಸರಕಾರ ಹೆಚ್ಚಿನ ನಿಗಾ ವಹಿಸಿದೆ.

Read More