Subscribe to Updates
Get the latest creative news from FooBar about art, design and business.
- “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ
- ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಉರುಳಿ ತಾಯಿ–ಮಗಳು ಸ್ಥಳದಲ್ಲೇ ಸಾವು
- ಗುಜರಾತ್ ಮಾದರಿ ನಮಗೆ ಬೇಡ, ಕರ್ನಾಟಕ ಇಡೀ ದೇಶಕ್ಕೆ ಮಾದರಿ: ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
- ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
Author: admin
ಗೃಹಲಕ್ಷ್ಮಿ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದ್ದು, ಇದಕ್ಕಾಗಿ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಅದಾಲತ್ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬಾಲ ಭವನದಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಸಮಾರಂಭದ ಬಳಿಕ ಮಾತನಾಡಿದ ಸಚಿವರು, ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಈ ಯೋಜನೆ ತಲುಪಿದ್ದು, ಪಿಡಿಓ , ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಭೆನಡೆಸಿ ಹಣ ಹಾಕುವ ವ್ಯವಸ್ಥೆ ಮಾಡಲಾಗುವುದು ಎಂದರು. ಈಗಾಗಲೇ ಮೂರು ಕಂತಿನ ದುಡ್ಡು ಬಾರದೇ ಇದ್ದವರಿಗೆ ಏಕಕಾಲಕ್ಕೆ ಆರು ಸಾವಿರ ದುಡ್ಡು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದರು. ಗೃಹಲಕ್ಷ್ಮಿ ಯೋಜನೆಗೆ ಸುಮಾರು 50 ಸಾವಿರ ತೆರಿಗೆದಾರರು ಕೂಡ ಅರ್ಜಿ ಹಾಕಿದ್ದು, ಅರ್ಜಿಗಳನ್ನು ನಿರಾಕರಿಸಿ ಡಿಲೀಟ್ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲಗಿಯಲ್ಲಿ 135 ವರ್ಷಗಳ ಹಿಂದೆ ಕನ್ನಡ ಮಾದರಿ ಪ್ರಾಥಮಿಕ ಶಾಲೆ ಇತ್ತು. ಈ ಶಾಲೆ ಕಳೆದ ಕೆಲವರ್ಷಗಳಿಂದ ಮಳೆಗಾಲದಲ್ಲಿ ಸೋರಲಾರಂಭಿಸಿದೆ. ಆದರೆ, ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಾಲೆಯ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ, ವಿದ್ಯಾರ್ಥಿಗಳು ತಾವು ಕಲಿತ ಶಾಲೆ ದುರಸ್ತಿಗೆ ತಾವೇ ಮುಂದೆ ಬಂದಿದ್ದಾರೆ. ಮಾಜಿ ವಿದ್ಯಾರ್ಥಿಗಳ ಸಂಘ ಕಟ್ಟಿಕೊಂಡು ಶಾಲೆಯ ದುರಸ್ತಿಗೆ ನಿಂತಿದ್ದಾರೆ.
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಮೂವರನ್ನು ಪಂಜಾಬ್ನಲ್ಲಿ ಬಂಧಿಸಲಾಗಿದೆ. ಐಎಸ್ ಐ ಬೆಂಬಲಿತ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದನ್ನು ಬಂಧಿಸಲಾಗಿದೆ. ಇವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ. ಪಂಜಾಬ್ ನ ಬಟಿಂಡಾದಿಂದ ಉಗ್ರರನ್ನು ಹಿಡಿಯಲಾಗಿದೆ. ಬಟಿಂಡಾದಲ್ಲಿನ ಕೌಂಟರ್ ಇಂಟಲಿಜೆನ್ಸ್ ತಂಡ ಈ ಕಾರ್ಯಾಚರಣೆಯ ಹಿಂದೆ ಇತ್ತು. ಬಂಧಿತ ಮೂವರು ವ್ಯಕ್ತಿಗಳು ಸಂಗ್ರೂರ್ ಜೈಲಿನಲ್ಲಿರುವ ಯುಎಪಿಎ ಆರೋಪಿಗಳಿಗೆ ಸಂಬಂಧಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬಂಧಿತರಿಂದ 8 ಪಿಸ್ತೂಲ್ ಗಳು, 9 ಮ್ಯಾಗಜೀನ್ ಗಳು ಮತ್ತು 30 ಬುಲೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಮೂವರ ವಿರುದ್ಧ ಬಟಿಂಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಂಪಿನಲ್ಲಿ ಉಳಿದವರ ಪತ್ತೆಗಾಗಿ ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಪಂಜಾಬ್ ಪೊಲೀಸರು ಭಯೋತ್ಪಾದನಾ ಘಟಕಗಳ ವಿರುದ್ಧ ನಿಗಾವನ್ನು ತೀವ್ರಗೊಳಿಸಿದ್ದಾರೆ. ದೀಪಾವಳಿಯ ನಂತರ, ಪೊಲೀಸರು ಅಂತಹ 8 ಕ್ಕೂ ಹೆಚ್ಚು ಭಯೋತ್ಪಾದಕ ಘಟಕಗಳನ್ನು ಪತ್ತೆ ಮಾಡಿದರು. ಅವರು ಸೆಲೆಬ್ರಿಟಿಗಳು, ಉದ್ಯಮಿಗಳು ಮತ್ತು ಪೊಲೀಸ್…
ಕಂಬಳಕ್ಕೆ 228 ಜೊತೆ ಕೋಣಗಳು ರಿಜಿಸ್ಟರ್ ಆಗಿವೆ ಎಂದು ಶಾಸಕ ಆಶೋಕ್ ರೈ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಶು ಇಲಾಖೆಯಿಂದ ಪರ್ಮಿಷನ್ ತೆಗೆದುಕೊಂಡಿದ್ದೇವೆ. ಕೋಣಗಳ ಆಹಾರ ಮತ್ತು ನೀರಿನ ಬಗ್ಗೆ ಕೋಣಗಳ ಯಜಮಾನರು ನೋಡಿಕೊಳ್ಳುತ್ತಾರೆ. ಕಂಬಳದ ಟ್ರಾಕ್ ಬಗ್ಗೆ ಒಳ್ಳೆಯ ಅಭಿಪ್ರಾಯ ಕೇಳಿ ಬಂದಿವೆ. ಈ ಕೋಣಗಳಲ್ಲಿ 50 ಬಗೆಯ ಕೋಣಗಳ ರೆಕಾರ್ಡ್ ಮಾಡಿವೆ. ಕಂಬಳಕ್ಕೆ ಹೊಸ ಕೋಣಗಳನ್ನ ಖರೀದಿ ಮಾಡಲಾಗಿದೆ. 180 ಸ್ಟಾಲ್ ಗಳನ್ನ ಹಾಕಲಾಗಿದೆ. ಎರಡು ದಿನ ನಿರಂತರವಾಗಿ ನಡೆಯಲಿದೆ ಎಂದರು. ಕಂಬಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ನೀಡಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿವಿಐಪಿ, ವಿಐಪಿಗೆ ಸೆಪೆರೇಟ್ ವ್ಯವಸ್ಥೆ ಮಾಡಲಾಗಿದೆ. ಕಂಬಳದಲ್ಲಿ ಗೆದ್ದವರಿಗೆ ಮೊದಲ ಬಹುಮಾನ 16 ಗ್ರಾಂ ಚಿನ್ನ 1 ಲಕ್ಷ ನಗದು ನೀಡಲಾಗುತ್ತದೆ. ದ್ವಿತೀಯ ಸ್ಥಾನಕ್ಕೆ 8 ಗ್ರಾಮ್ ಚಿನ್ನ, 50 ಸಾವಿರ ಕೊಡಲಾಗುತ್ತದೆ. ತೃತೀಯ ಸ್ಥಾನಕ್ಕೆ 4 ಗ್ರಾಂ ಚಿನ್ನ 25 ಸಾವಿರ ನಗದನ್ನ ಬಹುಮಾನವಾಗಿ…
ರಾತ್ರಿ ಮಲಗುವ ಮುನ್ನ ಪಾಸ್ಟಾ, ಅನ್ನ ಮತ್ತು ಆಲೂಗಡ್ಡೆ ಇರುವ ಆಹಾರವನ್ನು ಸೇವಿಸಬಾರದು. ಇವುಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮತ್ತು ಇನ್ಸುಲಿನ್ ಮಟ್ಟವು ಹೆಚ್ಚಾಗುತ್ತದೆ ಮತ್ತು ದೇಹದ ಚಯಾಪಚಯ ಕಡಿಮೆಯಾಗುತ್ತದೆ. ರಾತ್ರಿಯಲ್ಲಿ ಮಸಾಲೆಯುಕ್ತ ಆಹಾರವನ್ನು ಸೇವಿಸುವುದರಿಂದ ಎದೆಯುರಿ ಉಂಟಾಗುತ್ತದೆ. ಊಟದ ಸಮಯದಲ್ಲಿ ಎಣ್ಣೆಯುಕ್ತ ಮತ್ತು ಕೊಬ್ಬಿನ ಆಹಾರವನ್ನು ಸೇವಿಸುವುದರಿಂದ ಅವು ಸರಿಯಾಗಿ ಜೀರ್ಣವಾಗುವುದಿಲ್ಲ. ರಾತ್ರಿ ಚಾಕಲೇಟ್ ತಿಂದರೆ ಅದರಲ್ಲಿರುವ ಕೆಫೀನ್ ನಿದ್ದೆ ಬರದಂತೆ ತಡೆಯುತ್ತದೆ.
ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ಕಿತ್ತಗನೂರು ಗ್ರಾಮದಲ್ಲಿ ನೂತನವಾಗಿ ಗ್ರಂಥಾಲಯ ನಿರ್ಮಾಣ ಕಾರ್ಯಕ್ಕೆ ಶಾಸಕಿ ಮಂಜುಳಾ ಲಿಂಬಾವಳಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲ್ಲೂಕು ಕಾರ್ಯನಿರ್ವಾಹ ಅಧಿಕಾರಿ ವಸಂತ್ ಕುಮಾರ್, ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಬಿ. ಎನ್. ನಟರಾಜ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ ಸ್ವಾಮಿ, ಉಪಾಧ್ಯಕ್ಷರಾದ ಶ್ರೀ ನವೀನ ರೆಡ್ಡಿ ಸೇರಿದಂತೆ ಪಂಚಾಯತ್ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ಕಿತ್ತಗನೂರು ಗ್ರಾಮ ಪಂಚಾಯತಿ ಗ್ರಾಮ ಸಭೆಯಲ್ಲಿ ಶಾಸಕಿ ಮಂಜುಳಾ ಲಿಂಬಾವಳಿ ಭಾಗವಹಿಸಿದರು. ಈ ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಇರುವ ಕುಂದುಕೊರತೆ ಬಗ್ಗೆ ಚರ್ಚಿಸಿ, ಅವುಗಳ ನಿವಾರಣೆಗೆ ಶೀಘ್ರವಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಗ್ರಾಮದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸಹಾಯ ಧನ ವಿತರಿಸಲಾಯಿತು.
ಬೆಂಗಳೂರಿನ ಅರಕೆರೆಯಲ್ಲಿ ಶ್ರೀ ಮಾರಿಯಮ್ಮ ದೇವಿಯ ಊರಹಬ್ಬ ಕಾರ್ಯಕ್ರಮ ನಡೆಯಿತು. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಅರಕೆರೆಯ ಶ್ರೀ ಮಾರಿಯಮ್ಮ ದೇವಿಯ ಊರಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಸತೀಶ್ ರೆಡ್ಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಸರ್ವರಿಗೂ ದೇವಿಯ ಅನುಗ್ರಹ ದೊರೆಯಲಿ ಎಂದು ಪ್ರಾರ್ಥಿಸಲಾಯಿತು ಎಂದರು. ಈ ಸಂದರ್ಭದಲ್ಲಿ ಮಾಜಿ ನಗರಸಭಾ ಸದಸ್ಯರಾದ ಮುರಳಿ, ಗ್ರಾಮದ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಅರಕೆರೆಯ ವಾರ್ಡ-193 ರ ಬಿಬಿಎಂಪಿ ಅರಕೆರೆ ಉಪವಿಭಾಗದ ಕಚೇರಿಯಲ್ಲಿ ಅರಕೆರೆ ಮೈಕೋ ಲೇಔಟ್ ನಿವಾಸಿಗಳ ಜನಸಂಪರ್ಕ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಸ್ಥಳೀಯ ನಿವಾಸಿಗಳು ಎದುರಿಸುತ್ತಿರುವ ಕುಂದುಕೊರತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕ ಸತೀಶ್ ರೆಡ್ಡಿ ಸೂಕ್ತವಾದ ಪರಿಹಾರ ಒದಗಿಸುವಂತೆ ಸೂಚಿಸಿದರು. ಈ ವೇಳೆ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಪುರುಷೋತ್ತಮ್ ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
ಟಿವಿ ಆಫ್ ಮಾಡಿದ್ದಕ್ಕೆ ತಂದೆ ಮಗನನ್ನು ಕೊಂದಿದ್ದಾನೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ತಂದೆ ಗಣೇಶ್ ಪ್ರಸಾದ್ ನನ್ನು ಪೊಲೀಸರು ಬಂಧಿಸಿದ್ದು, ಕುಡಿದ ಮತ್ತಿನಲ್ಲಿದ್ದ ಗಣೇಶ್ ಮೊಬೈಲ್ ಚಾರ್ಜರ್ ನ ಕೇಬಲ್ ನಿಂದ ಮಗನ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಎನ್ ಡಿಟಿವಿ ವರದಿ ಮಾಡಿದೆ. ದೀಪಕ್ ನಿಶಾದ್ ಎಂಬ ಯುವಕ ಕೊಲೆಯಾದ. ಕೊಲೆಯ ನಂತರ, ಅವರು ಸ್ಥಳದಿಂದ ತಪ್ಪಿಸಿಕೊಂಡರು ಆದರೆ ನಂತರ ಕಾನ್ಪುರ ಪೊಲೀಸರು ಬಂಧಿಸಿದರು. ತಂದೆ-ಮಗ ಆಗಾಗ್ಗೆ ಕುಡಿದ ಮತ್ತಿನಲ್ಲಿ ಜಗಳವಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವಾರ ದೀಪಕ್ ಥಳಿಸಿದಾಗ ತಾಯಿ ಮನೆ ಬಿಟ್ಟು ಹೋಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಗಣೇಶ್ ಪ್ರಸಾದ್ ವಿಶ್ವಕಪ್ ಫೈನಲ್ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸುತ್ತಿದ್ದ. ಆದರೆ ಡಿನ್ನರ್ ರೆಡಿ ಮಾಡಿ ಮ್ಯಾಚ್ ನೋಡಿದ್ರೆ ಸಾಕು ಎಂದು ಮಗ ದೀಪಕ್ ನಿಶಾದ್ ಕೇಳಿದ್ದಾನೆ. ಆದರೆ ಮ್ಯಾಚ್ ನೋಡುವುದರಲ್ಲಿ ಮಗ್ನನಾಗಿದ್ದ ತಂದೆ ಇದನ್ನು…
ಬೆಳ್ಳುಳ್ಳಿಯಿಂದ ಎಷ್ಟೆಲ್ಲಾ ಪ್ರಯೋಜನ ಇದೆ ತಿಳ್ಕೊಳ್ಳಿ: ಅಡುಗೆಯಲ್ಲಿ ಬಳಸುವ ಬೆಳ್ಳುಳ್ಳಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ದೇಹದಲ್ಲಿರುವ ಕೊಬ್ಬನ್ನು ಕರಗಿಸುವ ಶಕ್ತಿ ಇದಕ್ಕಿದೆ. ಇದರಲ್ಲಿರುವ ಸಾವಯವ ಸಲ್ಪರ್ ಡ್ರಗ್ ಅಲಿಸಿನ್ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಅದರಲ್ಲೂ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಹೃದಯದ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ಚರ್ಮವನ್ನು ರಕ್ಷಿಸುತ್ತದೆ. ಬೆಳ್ಳುಳ್ಳಿಯು ಬಿಪಿಯನ್ನು ನಿಯಂತ್ರಣದಲ್ಲಿಡಲು ಪರಿಣಾಮಕಾರಿಯಾಗಿರುತ್ತದೆ ಮತ್ತು ರಕ್ತ ಪರಿಚಲನೆಯು ಸುಗಮವಾಗಿರುತ್ತದೆ. ಕೊತ್ತಂಬರಿ ಸೊಪ್ಪಿನ ಆರೋಗ್ಯ ಪ್ರಯೋಜನಗಳು: ಕೊತ್ತಂಬರಿ ಸೊಪ್ಪನ್ನು ಆಹಾರದಲ್ಲಿ ಸೇರಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಕೊತ್ತಂಬರಿ ಸೊಪ್ಪು ತಿಂದರೆ ಬಿಪಿ ಕಡಿಮೆಯಾಗುತ್ತದೆ. ಕೊತ್ತಂಬರಿಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವಲ್ಲಿ ಉಪಯುಕ್ತ. ಕೊತ್ತಂಬರಿ ಸೊಪ್ಪು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ದೇಹದ ಜೀವಕೋಶಗಳನ್ನು ರಕ್ಷಿಸುತ್ತಾರೆ. ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಇದು ಹೃದಯ ಸಮಸ್ಯೆಗಳನ್ನು ತಡೆಯುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಪ್ರತಿದಿನ ಒಂದು ಚಮಚ ತುಪ್ಪ ತಿನ್ನಿ, ಹಲವು ಪ್ರಯೋಜನಗಳನ್ನ ಪಡೆಯಿರಿ: ತುಪ್ಪ ಆರೋಗ್ಯಕರ ಕೊಬ್ಬನ್ನು ಹೊಂದಿರುತ್ತದೆ. ಈ ಕೊಬ್ಬು ವಿಟಮಿನ್ ಎ,…
ಬೆಂಗಳೂರು: ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರ ಸಾವನ್ನಪ್ಪಿದ್ದಾರೆ. ಈ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದ ಶ್ರೀನಿವಾಸ ರೆಡ್ಡಿಗೆ ಸೇರಿದ ಸನ್ ಶೈನ್ ಹೋಲ್ಡಿಂಗ್ ಕಂಪನಿಯಲ್ಲಿ ನಡೆದಿದೆ. ಬಿಹಾರ ಮೂಲದ ಸಹೋದರರಾದ ಚಂದನ್ ರಾಜ್ ಬನ್ ಸಿಂಗ್(31), ಪಿಂಟು ರಾಜ್ ಬನ್(22) ಮೃತ ದುರ್ದೈವಿಗಳು. ಆ್ಯಸಿಡ್ ಹಾಕಿ ವಾಟರ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ನೀರಿನ ಸಂಪ್ ನಲ್ಲೇ ಮೃತಪಟ್ಟಿದ್ದಾರೆ. ಕಾರ್ಮಿಕರ ರಕ್ಷಣೆಗೆ ಮುಂದಾಗಿದ್ದ ಜಗದೀಶ್, ಶ್ರೀನಿವಾಸರೆಡ್ಡಿ ಅಸ್ವಸ್ಥರಾಗಿದ್ದಾರೆ.