Subscribe to Updates
Get the latest creative news from FooBar about art, design and business.
- “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ
- ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಉರುಳಿ ತಾಯಿ–ಮಗಳು ಸ್ಥಳದಲ್ಲೇ ಸಾವು
- ಗುಜರಾತ್ ಮಾದರಿ ನಮಗೆ ಬೇಡ, ಕರ್ನಾಟಕ ಇಡೀ ದೇಶಕ್ಕೆ ಮಾದರಿ: ತುಮಕೂರಿನಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
- ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
Author: admin
ಜೀವಿತ ಪ್ರಮಾಣಪತ್ರವನ್ನು ನವೀಕರಿಸಲು ಹೋಗಿ ಸೈಬರ್ ಕೈಂ ಆರೋಪಿಗಳನ್ನೇ ಬ್ಯಾಂಕ್ ಸಿಬ್ಬಂದಿ ಎಂದು ನಂಬಿ ಸರ್ಕಾರಿ ದಾಖಲೆಗಳನ್ನು ಹಂಚಿಕೊಂಡ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಬರೊಬ್ಬರಿ 1.27 ಲಕ್ಷ ರೂ. ಗಳನ್ನು ಕಳೆದು ಕೊಂಡಿದ್ದಾರೆ. ಜೀವಿತ ಪ್ರಮಾಣಪತ್ರ ಎನ್ನುವುದು ಸರ್ಕಾರಿ ನೌಕರರಿಗೆ ಪಿಂಚಣಿ ಪ್ರಯೋಜನಗಳನ್ನು ಪಡೆಯುವುದನ್ನು ಮುಂದುವರಿಸಲು ಒದಗಿಸಲಾದ ಬಯೋಮೆಟ್ರಿಕ್-ಸಕ್ರಿಯ ಸೇವೆಯಾಗಿದೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮೀನುಗಾರಿಕಾ ಸಚಿವರಾದ ಮಂಕಾಳ ವೈದ್ಯ ಅವರು ಸರ್ಕಾರದ ಸಹಕಾರ ಪಡೆದು ಸಮುದಾಯದವರಿಗೆ ಸಾಕಷ್ಟು ಸೌಲಭ್ಯಗಳನ್ನು ತಲುಪಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬರೀ ಸಮುದ್ರದಲ್ಲೇ ಮೀನುಗಾರಿಕೆ ಮಾಡುವುದಕ್ಕಿಂತ ಸಿಹಿ ನೀರಿನ ಮೀನುಗಾರಿಕೆ ಮಾಡಲು ಸಮುದಾಯದವರು ಮುಂದಾಗಬೇಕು. ರಾಜ್ಯ ಸರ್ಕಾರ ಈಗಾಗಲೇ ಏತ ನೀರಾವರಿ ಮೂಲಕ ಸಾಕಷ್ಟು ಕೆರೆಗಳನ್ನು ತುಂಬಿಸಿದ್ದು ಹರಾಜಿನ ಮೂಲಕ ಹಂಚಿಕೆ ಮಾಡಲಾಗುವುದು ಎಂದರು. ಎಳೆಯ ಪ್ರಾಯದಲ್ಲಿ ನಾನು ಕೂಡ ನಮ್ಮೂರಿನ ಬಳಿಯ ಸಂಗಮದಲ್ಲಿ ಮೀನು ಹಿಡಿಯಲು ಹೋಗುತ್ತಿದ್ದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗಾಳ ಹಾಕಿ ತಾಸುಗಟ್ಟಲೆ ಕುಳಿತುಕೊಳ್ಳಲು ತಾಳ್ಮೆ ಬೇಕು. ಮಹಶೀರ್ ಮೀನು ಹಿಡಿದು ಕೆರೆಯಲ್ಲಿ ವಾಪಸ್ ಬಿಡಲು ಆಗ ಹೊರದೇಶದಿಂದಲೂ ಬರುತ್ತಿದ್ದರು. ಮೀನುಗಾರಿಕಾ ಸಮುದಾಯದವರೂ ಕೂಡ ಉತ್ತಮ ತಳಿಗಳನ್ನು ತಂದು ಸಾಕಿ ಲಾಭ ಮಾಡಬೇಕು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಜನಗಣತಿ) ವರದಿಯನ್ನು ತಿರಸ್ಕರಿಸುವಂತೆ ರಾಜ್ಯ ಒಕ್ಕಲಿಗರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದೆ. ರಾಜ್ಯ ಒಕ್ಕಲಿಗರ ಸಂಘ ಮತ್ತು ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ ಸದಸ್ಯರ ನಿಯೋಗ ಮುಖ್ಯಮಂತ್ರಿಯವರನ್ನು ಮಂಗಳವಾರ ಭೇಟಿ ಮಾಡಿ ಮನವಿ ಸಲ್ಲಿಸಿದೆ. ಒಕ್ಕಲಿಗರ ಸಂಘದ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರು ನಗರದಲ್ಲಿರುವ ಪೇಯಿಂಗ್ ಗೆಸ್ಟ್ (ಪಿ. ಜಿ) ಕಟ್ಟಡಗಳ ಬಗ್ಗೆ ಮಾಹಿತಿ ದಾಖಲಿಸಲು ವೆಬ್ ಪೋರ್ಟಲ್ ಅಭಿವೃದ್ಧಿಪಡಿಸಲಾಗಿದ್ದು, ಮಾಹಿತಿ ಭರ್ತಿ ಮಾಡಲು ಕಟ್ಟಡಗಳ ಮಾಲೀಕರಿಗೆ ಸೂಚನೆ ನೀಡಲಾಗಿದೆ’ ಎಂದು ಕಮಿಷನರ್ ಬಿ. ದಯಾನಂದ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾರತ್ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಈ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದು ಯಶಸ್ವಿಯಾದರೆ, ನಗರದ ಎಲ್ಲ ಕಡೆಯೂ ವಿಸ್ತರಣೆ ಮಾಡಲಾಗುವುದು’ ಎಂದರು. ಪಿಜಿಗಳಲ್ಲಿರುವ ಅವ್ಯವಸ್ಥೆ ಬಗ್ಗೆ ಪಿಜಿಯ ಅಕ್ಕ ಪಕ್ಕದ ಮನೆಯವರಿಂದ ಬಿಬಿಎಂಪಿಗೆ ದೂರುಗಳು ಬರುತ್ತಿವೆ. ಹೀಗಾಗಿ ಬಿಬಿಎಂಪಿ ಪಿಜಿಗಳಿಗೆ ಹೊಸ ಗೈಡ್ ಲೈನ್ ಬಿಡುಗಡೆ ಮಾಡಲು ಮುಂದಾಗಿದೆ. ಇದರ ನಡುವೆ ಈಗ ಬೆಂಗಳೂರಿನ ಪಿಜಿಗಳಿಗೆ ಅಂಕಿ ಅಂಶ ಮ್ಯಾನೇಜ್ ಮಾಡಲು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಸಲಹೆ ನೀಡಿದ್ದಾರೆ. ಜೊತೆಗೆ ಪಿಜಿ, ಹಾಸ್ಟಲ್ ಗಳಿಗೆ ವೆಬ್ ಪೋರ್ಟಲ್ ನೀಡಲಾಗಿದ್ದು ಅದಕ್ಕೆ ಪಿಜಿ ಮಾಲೀಕರು ಮಾಹಿತಿ ಅಪ್ಲೋಡ್ ಮಾಡಬಹುದು ಎಂದು ತಿಳಿಸಿದ್ದಾರೆ.
ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಸುಳ್ಳುಸುದ್ದಿಗಳು, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿರುವುದು ಕಂಡುಬಂದರೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹಸಚಿವ ಜಿ.ಪರಮೇಶ್ವರ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಪೊಲೀಸ್ ಆಯುಕ್ತಾಲಯಕ್ಕೆ ಸೋಮವಾರ(ನ.20) ಭೇಟಿ ನೀಡಿದ ಅವರು, ಸಾಮಾಜಿಕ ಜಾಲತಾಣ ನಿಗಾ ಘಟಕ, ನಿಯಂತ್ರಣ ಕೊಠಡಿಗಳನ್ನು ಖುದ್ದಾಗಿ ವೀಕ್ಷಿಸಿ ಸಲಹೆ-ಸೂಚನೆಗಳನ್ನು ನೀಡಿದರು. ಸಾಮಾಜಿಕ ಜಾಲತಾಣಗಳ ನಿಗಾ ಘಟಕಕ್ಕೆ ಭೇಟಿ ನೀಡಿದ ಅವರು, ಆಕ್ಷೇಪಾರ್ಹ ಮಾಹಿತಿ, ಸುಳ್ಳುಸುದ್ದಿಗಳು ಬಂದಾಗ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಸೂಕ್ತ ತಾಂತ್ರಿಕ ತರಬೇತಿ ಹೊಂದಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲು ಸೂಚನೆ ನೀಡಿದರು. ಇದಾದ ಬಳಿಕ ನಗರ ನಿಯಂತ್ರಣ ಕೊಠಡಿಯನ್ನು ಹಾಗೂ ವೈರ್ ಲೆಸ್ ವಿಭಾಗದ ಕಾರ್ಯಚಟುವಟಿಕೆಗಳನ್ನು ಹಾಗೂ ದಾಖಲೆ ಕೊಠಡಿಯನ್ನು ಖುದ್ದಾಗಿ ವೀಕ್ಷಿಸಿದರು. ನಿಯಂತ್ರಣ ಕೊಠಡಿಗೆ ಬರುವ ಕರೆಗಳು ಹಾಗೂ ಮಾಹಿತಿಯ ಲಾಗ್ ಪುಸ್ತಕವನ್ನು ಪರಿಶೀಲಿಸಿದರಲ್ಲದೇ ಪ್ರತಿಯೊಂದು ದಾಖಲೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.…
ಕರ್ನಾಟಕ ವಿದ್ಯುತ್ ನಿಗಮದ ಮಾಜಿ ನಿರ್ದೇಶಕ, ಅಖಿಲ ಭಾರತ ಸಾರ್ವಜನಿಕ ಸಂಪರ್ಕ ಮಂಡಳಿ ಸ್ಥಾಪಕ ಅಧ್ಯಕ್ಷ ಎಂ. ಬಿ. ಜಯರಾಮ್ ಅವರನ್ನು ಭುವನೇಶ್ವರದ ಉಟ್ಕಳ ವಿಶ್ವವಿದ್ಯಾಲಯ ಜೀವಮಾನದ ಶ್ರೇಷ್ಠ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಸಾರ್ವಜನಿಕ ಸಂಪರ್ಕ ಹಾಗೂ ಸಂವಹನದಲ್ಲಿ 45 ವರ್ಷಗಳಲ್ಲಿ ಮಾಡಿದ ಕೆಲಸವನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ನ.23ರಂದು ನಡೆಯಲಿರುವ 7ನೇ ರಾಷ್ಟ್ರೀಯ ಮಾಧ್ಯಮ ಸಮಾವೇಶದ ಸಮಾರೋಪದಲ್ಲಿ ಒಡಿಶಾದ ಮಾಧ್ಯಮ, ಸಂವಹನ ಸಚಿವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಬೆಂಗಳೂರಿನ ಕುಖ್ಯಾತ ರೌಡಿ ಕಾಡುಬೀಸನಹಳ್ಳಿ ಸೋಮನ ಕಾರು ಚಾಲಕನ ಹತ್ಯೆ ಹಾಗು ರಾಜಾನುಕುಂಟೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಗಳಲ್ಲಿ ಪೊಲೀಸರಿಗೆ ಸಿಗದೆ ಮೃತಪಟ್ಟಿರುವುದಾಗಿ ಬಿಂಬಿಸಿಕೊಂಡು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಯನ್ನು ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ಆರೋಪಿ. ಮಲ್ಲಿಕಾರ್ಜುನ ಮೃತಪಟ್ಟಿರುವ ದಾಖಲೆಗಳನ್ನು ಕುಟುಂಬಸ್ಥರು ತೋರಿಸಿದ್ದರು. ಅದರೂ ಸಹ ಅನುಮಾನಗೊಂಡ ಸಿಸಿಬಿ ಪೊಲೀಸರು ತಲಾಶ್ ನಡೆಸಿ ಬಂಧಿಸಿದ್ದಾರೆ.
ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ. 661 ಕೋಟಿ ಮೌಲ್ಯದ ಆಸ್ತಿ ಮತ್ತು 90.21 ಕೋಟಿ ಮೌಲ್ಯದ ಷೇರುಗಳನ್ನು ಇಡಿ ವಶಪಡಿಸಿಕೊಂಡಿದೆ. ದೆಹಲಿ, ಮುಂಬೈ ಮತ್ತು ಲಕ್ನೋದಲ್ಲಿ ಒಟ್ಟು 752 ಕೋಟಿ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಯಂಗ್ ಇಂಡಿಯಾದ ನಿರ್ದೇಶಕರು ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ. ಖರ್ಗೆ ಮತ್ತು ಸ್ಯಾಮ್ ಪಿತ್ರೋಡಾ ಸಹಾಯಕ ಜರ್ನಲ್ ನಿರ್ದೇಶಕರು. ಇಡಿ ಕ್ರಮವು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದೆ. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಕಾಂಗ್ರೆಸ್ ಮುಖವಾಣಿಯಾದ ನ್ಯಾಷನಲ್ ಹೆರಾಲ್ಡ್ ನ ಪ್ರಕಾಶಕರು. ಇದರ ಹಿಡುವಳಿ ಕಂಪನಿ ಯಂಗ್ ಇಂಡಿಯಾ. ಬಿಜೆಪಿಯ ಸುಬ್ರಮಣಿಯನ್ ಸ್ವಾಮಿ ಅವರು 2013ರಲ್ಲಿ ದೆಹಲಿ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಖಾಸಗಿ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ವಂಚನೆ ಮತ್ತು ಹಣ ದುರುಪಯೋಗವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ವಿಚಾರಣಾ ನ್ಯಾಯಾಲಯವು 2015ರ ಡಿಸೆಂಬರ್ ನಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಜಾಮೀನು ನೀಡಿತ್ತು.…
ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಭಾರತ ಸೋಲಿನ ನಂತರ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಬಿಜೆಪಿ ವಿರುದ್ಧ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ. ಅಹಮದಾಬಾದ್ ಬದಲಿಗೆ ಲಕ್ನೋದಲ್ಲಿ ಪಂದ್ಯ ನಡೆದಿದ್ದರೆ ಟೀಂ ಇಂಡಿಯಾ ಗೆಲ್ಲುತ್ತಿತ್ತು ಎಂದರು. ಅಖಿಲೇಶ್ ಯಾದವ್ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತವನ್ನು ಆರು ವಿಕೆಟ್ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ ತನ್ನ ಆರನೇ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಪ್ರಧಾನಿಯವರು ಡ್ರೆಸ್ಸಿಂಗ್ ರೂಮ್ ತಲುಪಿ ಆಟಗಾರರಿಗೆ ಸಾಂತ್ವನ ಹೇಳುವ ವಿಡಿಯೋ ಕಳೆದ ದಿನ ಬಿಡುಗಡೆಯಾಗಿತ್ತು. ಆ ನಂತರ ಅಖಿಲೇಶ್ ಯಾದವ್ ಪರೋಕ್ಷವಾಗಿ ಲೇವಡಿ ಮಾಡಿದರು. ಲಕ್ನೋದಲ್ಲಿ ವಿಶ್ವಕಪ್ ಫೈನಲ್ ನಡೆದಿದ್ದರೆ ಭಾರತ ಗೆಲ್ಲುತ್ತಿತ್ತು. ತಂಡವು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ವಿಷ್ಣು ದೇವರ ಆಶೀರ್ವಾದವನ್ನು ಪಡೆಯಲಿದೆ ಎಂದು ಅವರು ಹೇಳಿದರು. ಗುಜರಾತ್ ನಲ್ಲಿ (ವಿಶ್ವಕಪ್ 2023 ರ ಫೈನಲ್) ಪಂದ್ಯವು ಲಕ್ನೋದಲ್ಲಿ ನಡೆದಿದ್ದರೆ, ಅವರು (ಟೀಮ್ ಇಂಡಿಯಾ)…
ನಟಿ ತ್ರಿಶಾ ಕೃಷ್ಣ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮನ್ಸೂರ್ ಅಲಿ ಖಾನ್ ವಿರುದ್ಧ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ರಾಷ್ಟ್ರೀಯ ಮಹಿಳಾ ಆಯೋಗ, ಪ್ರಕರಣ ದಾಖಲಿಸುವಂತೆ ಡಿಜಿಪಿಗೆ ಸೂಚಿಸಿತ್ತು. ಇದನ್ನು ಕ್ರಮ ಅನುಸರಿಸಲಾಗುತ್ತದೆ. ತ್ರಿಷಾ ದೂರಿನ ಮೇರೆಗೆ ನುಂಗಂಬಾಕ್ಕಂ ಪೊಲೀಸರು ನಟನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 354ಎ ಮತ್ತು 509ರ ಅಡಿ ಪ್ರಕರಣ ದಾಖಲಿಸಲಾಗಿದೆ. ಲಿಯೋ ಚಿತ್ರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವಿಚಾರಣೆ ವೇಳೆ ನಟಿ ತ್ರಿಷಾ ವಿರುದ್ಧ ಮನ್ಸೂರ್ ಅಲಿಖಾನ್ ಅಶ್ಲೀಲ ಟೀಕೆಗಳನ್ನು ಮಾಡಿದ್ದರು. ಇದರ ವಿರುದ್ಧ ಮೊದಲು ಸಾಮಾಜಿಕ ಜಾಲತಾಣಗಳ ಮೂಲಕ ತ್ರಿಶಾ ಪ್ರತಿಕ್ರಿಯಿಸಿದ್ದರು. ಇನ್ನು ಮುಂದೆ ಈ ನಟನ ಜೊತೆ ನಟಿಸುವುದಿಲ್ಲ ಎಂದು ತ್ರಿಷಾ ಸ್ಪಷ್ಟಪಡಿಸಿದ್ದಾರೆ. ನಂತರ, ನಟಿ ಖುಷ್ಬು, ನಿರ್ದೇಶಕ ಲೋಕೇಶ್ ಕನಕರಾಜ್, ಗಾಯಕಿ ಚಿನ್ಮಯಿ ಮತ್ತು ಚಿರಂಜೀವಿ ಸೇರಿದಂತೆ ಹಲವಾರು ಗಣ್ಯರು ಮನ್ಸೂರ್ ಅಲಿ ಖಾನ್ ಅವರ ಹೇಳಿಕೆಯನ್ನು ಖಂಡಿಸಿದರು. ಮನ್ಸೂರ್ ಅಲಿ ಖಾನ್…