Subscribe to Updates
Get the latest creative news from FooBar about art, design and business.
- ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
- ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ
- ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!
- ಡಕಾಯಿತಿಗೆ ಸಂಚು: ಐವರ ಬಂಧನ
- ಪದವೀಧರರ ಮತದಾರರ ಕರಡು ಪಟ್ಟಿ ಪ್ರಕಟ
- ನ.30 ರಂದು ಅಮೋಘ ಸಂಗೀತ ಕಛೇರಿ
- ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ: ಗ್ರಾಮಸ್ಥರಿಂದ ವಿರೋಧ
- ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ
Author: admin
ಭಾರತದ ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರು ತಮ್ಮ ಕುಟುಂಬದೊಂದಿಗೆ ಸಲ್ಮಾನಿಯಾ ಕಾನು ಗಾರ್ಡನ್ ನಲ್ಲಿರುವ ಗುರುದೇವ ಸೋಶಿಯಲ್ ಸೊಸೈಟಿಗೆ ಭೇಟಿ ನೀಡಿ ಬಹಾರ್ನ ಮೂರು ಶ್ರೀ ನಾರಾಯಣೀಯ ಚಳವಳಿಗಳು ಜಂಟಿಯಾಗಿ ಆಯೋಜಿಸಿದ್ದ 169 ನೇ ಗುರು ಜಯಂತಿ ಆಚರಣೆಯಲ್ಲಿ ಭಾಗವಹಿಸಿದರು. ಸೊಸೈಟಿ ಅಧ್ಯಕ್ಷ ಶ್ರೀ ಸನೀಶ ಕೂರಮುಲ್ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀ. ಬಿನುರಾಜ್ ಅವರನ್ನೂ ಬರಮಾಡಿಕೊಂಡು ಆಶೀರ್ವಚನ ನೀಡಿ ಮಾತನಾಡಿ, ಇಂದಿನ ಕಾಲದಲ್ಲಿ ಗುರುದೇವರ ವಿಚಾರಗಳು ಬಹಳ ಮುಖ್ಯ. ನಂತರ ನಡೆದ ಸಮಾರಂಭದಲ್ಲಿ ಶಿವಗಿರಿ ಮಠದ ಸ್ವಾಮಿಗಳ ಕುಟುಂಬಸ್ಥರು ಹಾಗೂ ಮಕ್ಕಳು ಹಾಗೂ ಖ್ಯಾತ ಉದ್ಯಮಿ ಹಾಗೂ ಬಿಕೆಜಿ ಹೋಲ್ಡಿಂಗ್ ಅಧ್ಯಕ್ಷ ಶ್ರೀ. ಕೆ.ಜಿ ಬಾಬುರಾಜ್ ರವರ ಉಪಸ್ಥಿತಿಯಲ್ಲಿ ಖ್ಯಾತ ಚಿತ್ರನಟಿ ಶ್ರೀಮತಿ ನವ್ಯಾ ನಾಯರ್ ಅವರು ಗುರುದೇವ ಸೋಶಿಯಲ್ ಸೊಸೈಟಿಯ ಒಂದು ವರ್ಷದ ರಜತ ಮಹೋತ್ಸವ ಆಚರಣೆಯ ಪೋಸ್ಟರ್ ಬಿಡುಗಡೆ ಸಮಾರಂಭವನ್ನು ನೆರವೇರಿಸಿದರು. ಸಮಾರಂಭದ ಉಪಾಧ್ಯಕ್ಷರಾದ ಶ್ರೀ.ಸತೀಶ್ ಕುಮಾರ್ ಧನ್ಯವಾದವಿತ್ತರು ಹಾಗೂ ಆಡಳಿತ ಮಂಡಳಿಯ ಇತರ…
ರಾಜಸ್ಥಾನದ ಭಿಲ್ವಾರಾದಲ್ಲಿ ಮಹಿಳೆಯೊಬ್ಬರನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ದೂರು, ಸುಳ್ಳು ಎಂದು ಪೊಲೀಸರು ಕಂಡುಕೊಂಡಿದ್ದಾರೆ. ಮಹಿಳೆಯ ಒಪ್ಪಿಗೆ ಮೇರೆಗೆ ಇಬ್ಬರು ವ್ಯಕ್ತಿಗಳು ಶಾರೀರಿಕ ಸಂಬಂಧದಲ್ಲಿ ತೊಡಗಿರುವುದು ಪತ್ತೆಯಾಗಿದೆ. 25ರ ಹರೆಯದ ಯುವಕ ಯುವಕನ ಜತೆ ವಾಗ್ವಾದಕ್ಕಿಳಿದು ಚಿತ್ರಹಿಂಸೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆ ನಡೆದುಕೊಂಡು ಹೋಗುತ್ತಿದ್ದಾಗ ಮೂವರು ವ್ಯಕ್ತಿಗಳು ತನ್ನನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿ ರಸ್ತೆಯಲ್ಲಿ ವಿವಸ್ತ್ರವಾಗಿ ಬಿಟ್ಟಿದ್ದಾರೆ ಎಂದು ಮಹಿಳೆ ಹೇಳಿದ್ದಾರೆ. ಆರೋಪಿಗಳು ತನಗೆ ಥಳಿಸಿದ್ದು, ಮಾನಸಿಕ ಅಸ್ವಸ್ಥ ಎಂದು ಭಾವಿಸಿ ಯಾರೂ ಸಹಾಯ ಮಾಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆ ವಿವಸ್ತ್ರವಾಗಿ ರಸ್ತೆಯಲ್ಲಿ ಬಿದ್ದಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂಧಿತ ಯುವಕ ಯುವತಿಯರನ್ನು ವಿಚಾರಣೆಗೊಳಪಡಿಸಿದಾಗ ನಕಲಿ ದೌರ್ಜನ್ಯದ ಕಥೆ ಹೊರಬಿದ್ದಿದೆ. ಮೊಬೈಲ್ ಫೋನ್ ನಲ್ಲಿನ ಕರೆ ರೆಕಾರ್ಡಿಂಗ್ ನಿಂದ, ಮಹಿಳೆ ಶನಿವಾರ ಸಂಜೆ ಅವರೊಂದಿಗೆ ಮಾತನಾಡಿ ಹಣಕ್ಕಾಗಿ ಭೇಟಿಯಾಗಲು ಒಪ್ಪಿಕೊಂಡಿದ್ದಾರೆ ಎಂದು ಕಂಡುಬಂದಿದೆ. ಮಹಿಳೆಯ ಒಪ್ಪಿಗೆಯೊಂದಿಗೆ ಇಬ್ಬರು ಪುರುಷರು ದೈಹಿಕ ಸಂಪರ್ಕದಲ್ಲಿ…
ಕೋಲ್ಕತ್ತಾದ ಸರ್ಕಾರಿ ಭೂಮಿಯಲ್ಲಿ ಗಣೇಶ ಪೂಜೆಗೆ ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿ ಸಬ್ಯಸಾಚಿ ಭಟ್ಟಾಚಾರ್ಯ ಅವರ ಪೀಠವು, ಬದುಕುವ ಹಕ್ಕು ಧಾರ್ಮಿಕ ಹಬ್ಬಗಳನ್ನು ಆಚರಿಸುವ ಹಕ್ಕನ್ನು ಒಳಗೊಂಡಿದೆ ಎಂದು ಅಭಿಪ್ರಾಯಪಟ್ಟಿದೆ. ಆರ್ಟಿಕಲ್ 21 ರ ಅಡಿಯಲ್ಲಿ ಅನುಮತಿ ಇದೆ. ಹಿಂದೂಗಳ ಹಬ್ಬವಾದ ದುರ್ಗಾ ಪೂಜೆಯನ್ನು ಹೇಳಿದ ಭೂಮಿಯಲ್ಲಿ ನಡೆಸಬಹುದಾದರೆ, ಇತರ ಧರ್ಮ ಅಥವಾ ಅದೇ ಧರ್ಮದ ಆಚರಣೆಯನ್ನು ತಡೆಯುವ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಗಣೇಶ ಪೂಜೆ ಇದಕ್ಕಿಂತ ಹೇಗೆ ಭಿನ್ನ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಸರ್ಕಾರಿ ಕಾರ್ಯಕ್ರಮಗಳಿಗೆ ಅಥವಾ ದುರ್ಗಾಪೂಜೆಗೆ ಮಾತ್ರ ಮೈದಾನ ಬಿಡಬಹುದು ಎಂಬುದು ಪ್ರಾಧಿಕಾರದ ನಿಲುವಾಗಿತ್ತು.ಅಸನ್ಸೋಲ್ ದುರ್ಗಾಪುರ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಜಮೀನಿನಲ್ಲಿ ಗಣೇಶ ಪೂಜೆಗೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಅರ್ಜಿದಾರರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಸರ್ಕಾರದ ಕಾರ್ಯಕ್ರಮಗಳನ್ನು ದುರ್ಗಾ ಪೂಜೆಯೊಂದಿಗೆ ಹೋಲಿಸುವುದೇ ದೊಡ್ಡ ಅಸಂಬದ್ಧತೆ. ಸರ್ಕಾರಿ ಕಾರ್ಯಕ್ರಮಗಳಲ್ಲಿ ದುರ್ಗಾಪೂಜೆಗೆ ಸಾಟಿಯಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಜತೆಗೆ ದುರ್ಗಾಪೂಜೆಗೂ ಈ ಮೈದಾನದಲ್ಲಿ ಅನುಮತಿ ನೀಡಲಾಗುತ್ತಿದ್ದು, ಇತರೆ…
ಕರ್ತವ್ಯಲೋಪ, ದುರ್ನಡತೆಗೆ ತೋರಿದ ಹಿನ್ನೆಲೆ ಕಗ್ಗಲಿಪುರ ಪೊಲೀಸ್ ಇನ್ಸ್ ಪೆಕ್ಟರ್ ವಿಜಯ್ ಕುಮಾರ್ ಸಸ್ಪೆಂಡ್ ಆಗಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿ DGP ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ. ವಿಜಯ್ ಕುಮಾರ್ ಅಧಿಕಾರ ದುರ್ಬಳಕೆ ಮಾಡಿ ಉದ್ಧಟತನ ತೋರುತ್ತಿದ್ದರು. ಇವರ ವಿರುದ್ಧ ಸಾಲು ಸಾಲು ದೂರುಗಳು ದಾಖಲಾಗಿತ್ತು, ದೂರು ಹಿನ್ನೆಲೆ ವಿಚಾರಣೆಗೆ ಆದೇಶಿಸಲಾಗಿತ್ತು. ವಿಚಾರಣೆಯಲ್ಲಿ ಕರ್ತವ್ಯಲೋಪ, ಅಶಿಸ್ತು ಸಾಬೀತಾಗಿದ್ದು, ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.
ಮೈತ್ರಿ ಪಕ್ಷಗಳ ವೈಯಕ್ತಿಕ ವಿಚಾರ. ಅವರು ಏನೇ ತೀರ್ಮಾನ ಮಾಡಿ ಮೈತ್ರಿ ಮಾಡಿಕೊಂಡರೂ ರಾಜ್ಯದ ಜನ ಗಮನಿಸುತ್ತಿದ್ದಾರೆ ಎಂದು ಸಂಸದ ಡಿ. ಕೆ. ಸುರೇಶ್ ಹೇಳಿದರು. ನಮ್ಮ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಆಡಳಿತದಲ್ಲಿದೆ. ದೇಶದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್ ಜಾತ್ಯತೀತ ತತ್ವದ ಮೇಲೆ ಆಡಳಿತ ಮಾಡುತ್ತಿದೆ ಎಂದರು. ಯಾರು ಹೊಂದಾಣಿಕೆ ಮಾಡಿಕೊಂಡರೂ ನಮ್ಮ ಸಿದ್ಧಾಂತದ ಮೇಲೆ ನಾವು ಹೋರಾಟ ಮಾಡುತ್ತೇವೆ. ನಮ್ಮ ಒಕ್ಕೂಟ ವ್ಯವಸ್ಥೆ ಬಲಪಡಿಸಲು ಹೋರಾಟ ಮಾಡುತ್ತೇವೆ ಎಂದರು.
ಬಿಜೆಪಿ ನಾಯಕರು ನನ್ನ ಮೇಲೆ ನಂಬಿಕೆ, ಗೌರವ, ಪ್ರೀತಿ, ವಿಶ್ವಾಸ ಇಟ್ಟಿದ್ದಾರೆ. ಹೀಗಾಗಿಯೇ, ನಾನು ದೆಹಲಿಗೆ ಹೋದಾಗ ನನ್ನನ್ನು ಬಂದು ಭೇಟಿಯಾಗಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಮಾತುಕತೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ತಿಳಿಸಿದ್ದಾರೆ. ಕಾರ್ಯಕರ್ತರ ಸಭೆಯಲ್ಲಿ ಮೈತ್ರಿಯ ಬಗ್ಗೆ ಮಾತುಕತೆ ಆಡಿರುವ ಅವರು, ಬಿಜೆಪಿ ಹೈಕಮಾಂಡ್ ನಾಯಕರು ನನಗೆ ಗೌರವ ಕೊಟ್ಟಿದ್ದಾರೆ. ಅದನ್ನು ನಾನು ಉಳಿಸಿಕೊಳ್ಳಬೇಕು. ಹೀಗಾಗಿ, ಮೈತ್ರಿ ಎಂದಿದ್ದಾರೆ. 2024ರ ಲೋಕಸಭಾ ಚುನಾವಣೆಗೆ ನಾನೇ ಟೊಂಕ ಕಟ್ಟಿ ನಿಲ್ಲುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ. ನನಗೆ ಎದ್ದು ನಿಂತು ನಿಲ್ಲಲು ಆಗದೇ ಹೋದ್ರೂ ವೀಲ್ ಚೇರ್ ನಲ್ಲಿ ಕುಳಿತು ಪ್ರಚಾರ ಮಾಡುತ್ತೇನೆ. ನನ್ನ ಪಕ್ಷವನ್ನು ಉಳಿಸಿಕೊಳ್ಳುತ್ತೇನೆ. ನನ್ನನ್ನು ನಂಬಿರುವ ಕಾರ್ಯಕರ್ತರನ್ನು ನಾನು ಕೈ ಬಿಡುವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಹೇಳಿದ್ದಾರೆ. ಕಾರ್ಯಕರ್ತರ ಸಭೆಯಲ್ಲಿ ದೇವೇಗೌಡ, ಪಕ್ಷದ ಕಾರ್ಯಕರ್ತರಿಗೆ ಈ ಮಾತನ್ನು ಹೇಳಿದ್ದಾರೆ.
ಯಡಿಯೂರಪ್ಪರಿಗೆ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಒಂದೇ ಒಂದು ಮಾತನ್ನು ಆಡದಂತೆ ಬಿಜೆಪಿ ಹೈಕಮಾಂಡ್ ನಾಯಕರು ಖಡಕ್ ಸೂಚನೆ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯನ್ನು ನಾವೇ ನಿಗಾವಹಿಸಿ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮೈತ್ರಿಯ ಬಗ್ಗೆ ತುಟಿ ಬಿಚ್ಚಬೇಡಿ ಎಂದಿದ್ದಾರೆ. ಮೈತ್ರಿ ಬಗ್ಗೆ ನಾವೇ ತಿಳಿಸುತ್ತೇವೆ. ರಾಜ್ಯದಲ್ಲಿ ಮೈತ್ರಿ ನಿಶ್ಚಿತ. ಆದ್ರೆ, ಅದನ್ನು ನಿರ್ಧರಿಸುವುದು ನಾವೇ. ನೀವು ಮೈತ್ರಿ ಬಗ್ಗೆ ಮಾತನ್ನಾಡಬೇಡಿ ಎಂದು ಖಡಕ್ ಸೂಚನೆಯನ್ನು ಬಿಜೆಪಿ ಹೈಕಮಾಂಡ್ ನಾಯಕರು ರವಾನೆ ಮಾಡಿದ್ದಾರೆ.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್ ಗೆ ಕರೆ ನೀಡಿದ್ದು ಮಧ್ಯರಾತ್ರಿಯಿಂದಲೇ ಬಂದ್ ಬಿಸಿ ಶುರುವಾಗಿದೆ. ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಸೇರಿ ವಿವಿಧ ಮಾದರಿಯ ಖಾಸಗಿ ಸಾರಿಗೆಯ ವಾಹನಗಳು ರಸ್ತೆಗೆ ಇಳಿಯುತ್ತಿಲ್ಲ. ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಒಕ್ಕೂಟ ಆಯೋಜಿಸಿದೆ. ಬಂದ್ ಯಶಸ್ಸಿಗಾಗಿ ಖಾಸಗಿ ಸಾರಿಗೆ ಒಕ್ಕೂಟ ಪಣ ತೊಟ್ಟಿದೆ. ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದ ಒಂದರಲ್ಲೇ 250ಕ್ಕೂ ಹೆಚ್ಚು ಬಸ್ ಸ್ತಬ್ದವಾಗಲಿದೆ. ಕೇವಲ ಬೆಂಗಳೂರು ಮಾತ್ರವಲ್ಲದೇ ನೆರೆಯ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರು ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ಬಂದ್ ಗೆ ಒಲಾ ಚಾಲಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಒಲಾ ಜೋನ್ ಗೆ ಟ್ಯಾಕ್ಸಿಗಳು ಬಂದಿಲ್ಲ. ಇನ್ನು ಟ್ಯಾಕ್ಸಿಗಳಿಗಾಗಿ ಜನರು ಕಾದು ಕುಳಿತಿದ್ದಾರೆ. ಬೆರಳಿಕೆಯಷ್ಟು ಟ್ಯಾಕ್ಸಿ ಚಾಲಕರು ಮಾತ್ರ ಆಗಮಿಸಿದ್ದಾರೆ. ಕೆಎಸ್ಟಿಡಿಸಿ ಟ್ಯಾಕ್ಸಿ ಓಡಾಟ ಹಿನ್ನಲೆಯಲ್ಲಿ ಕಾರ್ ಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಏರ್ಪೋರ್ಟ್ ರಸ್ತೆಯ…
ನಿಪ್ಪಾಣಿ: ಸಮಾಜದ ಯಾವುದೇ ಕೆಲಸದಲ್ಲಿ ನಾನು ಸಮಾಜದ ಮಗಳಾಗಿ ನಿರಂತರ ಇರುತ್ತೇನೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ವಿಚಾರದಲ್ಲಿ ಸ್ವಾಮಿಗಳ ಅಪೇಕ್ಷೆಯಂತೆ ಸಮಾಜ ಮತ್ತು ಸರಕಾರದ ಕೊಂಡಿಯಾಗಿ ಕೆಲಸ ಮಾಡುತ್ತೇನೆ. ಮಂಗಳವಾರ ಈ ಕುರಿತು ಮುಖ್ಯಮಂತ್ರಿಗಳ ಜೊತೆ ಸಮಗ್ರವಾಗಿ ಚರ್ಚಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ನಿಪ್ಪಾಣಿಯಲ್ಲಿ ಭಾನುವಾರ 2 ಎ ಮೀಸಲಾತಿ ಸಂಬಂಧ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪಂಚಮಸಾಲಿ ಮೀಸಲಾತಿ ಸಂಬಂಧ ಮೊದಲ ಹೋರಾಟದಿಂದ ಈಗ 6ನೇ ಹಂತದ ಹೋರಾಟದವರೆಗೂ ನಾನು ಪಾಲ್ಗೊಂಡಿದ್ದೇನೆ. ಹಾಗಾಗಿ ಈ ವಿಷಯದ ಕುರಿತು ನನಗೆ ಸಂಪೂರ್ಣಅರಿವಿದೆ. ನಮ್ಮ ಸಮಾಜಕ್ಕೆ ಮೀಸಲಾತಿ ಏಕೆ ಅಗತ್ಯ ಎನ್ನುವ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಗೆ ಮಾಡಿಕೊಡುತ್ತೇನೆ ಎಂದು ಅರು ಭರವಸೆ ನೀಡಿದರು. ಸ್ವಾಮಿಗಳು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನನ್ನು ಚನ್ನಮ್ಮ ಎಂದು ಕರೆಯುತ್ತಾರೆ. ಆದರೆ ನಾನು ಚನ್ನಮ್ಮನ…
ನವದೆಹಲಿ: ಸೂರ್ಯನ ಅಧ್ಯಯನಕ್ಕೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಉಡಾವಣೆ ಮಾಡಿರುವ ಆದಿತ್ಯ ಎಲ್1 ನೌಕೆಯನ್ನು ಮತ್ತೊಂದು ಕಕ್ಷೆಗೆ ಯಶಸ್ವಿಯಾಗಿ ಏರಿಸಲಾಗಿದೆ. ಕಕ್ಷೆ ಎತ್ತರಿಸುವ 3ನೇ ಪ್ರಕ್ರಿಯೆಯು ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ. ಯಶಸ್ವಿ ಕಾರ್ಯಾಚರಣೆಯ ನಂತರ, ಆದಿತ್ಯ ನೌಕೆಯು ಈಗ 296 ಕಿಮೀ x 71767 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಪರಿಭ್ರಮಣೆ ನಡೆಸುತ್ತಿದೆ. ಮುಂದಿನ ಕಾರ್ಯಾಚರಣೆಯನ್ನು ಸೆಪ್ಟೆಂಬರ್ 15 ರಂದು ಮುಂಜಾನೆ 2 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.