Author: admin

ಹಿರಿಯ ಪತ್ರಕರ್ತ ಎಂ.ಕೆ. ಹೆಗಡೆ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿಶೇಷಾಧಿಕಾರಿ ಮತ್ತು ಮಾಧ್ಯಮ ಸಲಹೆಗಾರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪತ್ರಿಕಾ ರಂಗದಲ್ಲಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಇವರು ನಾಡಿನ ಹೆಸರಾಂತ ಪತ್ರಿಕೆಗಳಾದ ಕನ್ನಡಪ್ರಭ, ವಿಜಯವಾಣಿ , ವಿಜಯ ಕರ್ನಾಟಕ, ಸೇರಿದಂತೆ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯ ರಾಗಿರುವ ಇವರು ಪ್ರಗತಿ ವಾಹಿನಿ ಸುದ್ದಿ ಸಂಸ್ಥೆ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಮೂಲತಃ ಶಿರಸಿ ತಾಲೂಕಿನ ಹೆಗಡೆಕಟ್ ಕಲ್ಮನಿ ಮೂಲದವರಾಗಿದ್ದಾರೆ. ಇವರು ಈಗ ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ, ಇವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರ ವಿಶೇಷಾಧಿಕಾರಿ ಮತ್ತು ಮಾಧ್ಯಮ ಸಲಹೆಗಾರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

Read More

ಮಣಿಪುರದಲ್ಲಿ ಶುಕ್ರವಾರ ನಡೆದ ಗುಂಡಿನ ದಾಳಿಗೆ ಕೇಂದ್ರ ಸೇನೆಯೇ ಕಾರಣ ಎಂದು ರಾಜ್ಯ ಸರ್ಕಾರ ಆರೋಪಿಸಿದೆ. ತೆಂಗನೌಪಾಲ್ ಜಿಲ್ಲೆಯ ಪಲ್ಲೆಲ್‌ ನಲ್ಲಿ ನಡೆದ ಗುಂಡಿನ ದಾಳಿಗೆ ಕೇಂದ್ರ ಪಡೆಗಳ ಪ್ರಚೋದನಕಾರಿ ಕ್ರಮವೇ ಕಾರಣ. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸಹ ನಾಗರಿಕರ ವಿರುದ್ಧ ಸೇನೆಯ ಅನಗತ್ಯ ಕ್ರಮಗಳನ್ನು ಖಂಡಿಸಿದರು. ಪಲ್ಲೇಲಿಯಲ್ಲಿ ಸಶಸ್ತ್ರ ದಾಳಿಕೋರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಹೊಸ ದಾಳಿಯ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯದ ಪರಿಸ್ಥಿತಿಯನ್ನು ನಿರ್ಣಯಿಸಲು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯು ಕೇಂದ್ರ ಸೇನೆಯ ವಿರುದ್ಧ ತೀವ್ರ ಟೀಕೆಗೆ ಗುರಿಯಾಗಿದೆ. ಶನಿವಾರ ಸಂಜೆ ರಾಜಧಾನಿ ಇಂಫಾಲದಲ್ಲಿ ಸಭೆ ನಡೆಯಿತು. ನಾಗರಿಕರ ವಿರುದ್ಧ ಕೇಂದ್ರ ಭದ್ರತಾ ಪಡೆಗಳ ಪ್ರಚೋದನಕಾರಿ ಕ್ರಮಗಳನ್ನು ರಾಜ್ಯ ಸರ್ಕಾರ ಖಂಡಿಸಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲು ನಿರ್ಧರಿಸಲಾಗಿದೆ. ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯಿದೆಯಡಿ ‘ಡಿಸ್ಟರ್ಬ್ಡ್ ಏರಿಯಾ’…

Read More

ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಪತ್ನಿ ಅಕ್ಷತಾ ಮೂರ್ತಿ ಅವರು ಭೇಟಿ ನೀಡಿದರು. ಅಕ್ಷರಧಾಮದಲ್ಲಿ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಅತಿಥಿಗಳನ್ನು ಸ್ವಾಗತಿಸಿದರು. ಆತಿಥ್ಯದ ಸಂಕೇತವಾಗಿ ರುದ್ರಾಕ್ಷಿ, ಭಗವದ್ಗೀತೆಯ ಪ್ರತಿ ಮತ್ತು ಹನುಮಾನ್ ಚಾಲೀಸಾ ನೀಡಿ ಗೌರವಿಸಲಾಯಿತು. ರಿಷಿ ಸುನಕ್ ದಂಪತಿ, ದೇವಸ್ಥಾನದಲ್ಲಿ ಆರತಿ ಮಾಡಿದರು. ಅಕ್ಷರಧಾಮದ ಸಂತರನ್ನು ಭೇಟಿ ಮಾಡಿ ಕೆಲ ಹೊತ್ತು ಸಮಾಲೋಚನೆ ನಡೆಸಿದರು.

Read More

ವರದಕ್ಷಿಣೆಗಾಗಿ ಗರ್ಭಿಣಿಯನ್ನು ಬಾವಿಗೆ ತಳ್ಳಿದ ಪತಿ. ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವರದಕ್ಷಿಣೆಗಾಗಿ ಯುವಕ ತನ್ನ ಪತ್ನಿಯನ್ನು ಬಾವಿಗೆ ಎಸೆದಿದ್ದಾನೆ. ಘಟನೆಯಲ್ಲಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿಯನ್ನು ಬಾವಿಗೆ ಎಸೆದ ಬಳಿಕ ವಿಡಿಯೋ ಚಿತ್ರೀಕರಿಸಿ ಪೋಷಕರಿಗೆ ಕಳುಹಿಸಿ ವರದಕ್ಷಿಣೆ ಕೇಳಿದ್ದಾನೆ. ಯುವತಿ ಬಾವಿಯಲ್ಲಿ ಹಗ್ಗದಿಂದ ನೇಣು ಹಾಕಿಕೊಂಡಿರುವುದು ದೃಶ್ಯಾವಳಿಯಲ್ಲಿದೆ. ಎರಡು ಗಂಟೆಗಳ ನಂತರ ಮಹಿಳೆಯನ್ನು ಬಾವಿಯಿಂದ ಹೊರಗೆ ತರಲಾಯಿತು. ಪತಿ ರಾಕೇಶ್ ಅವರೇ ಪತ್ನಿಯನ್ನು ಹಗ್ಗದಿಂದ ಬಾವಿಯಿಂದ ಹೊರತೆಗೆದಿದ್ದಾರೆ. ಘಟನೆಯ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆಯಾದ ವಿಡಿಯೋದಲ್ಲಿ, ಬಾವಿಯೊಳಗೆ ಪತ್ನಿ ಹಗ್ಗದಿಂದ ನೇತಾಡುತ್ತಿರುವುದನ್ನು ಮತ್ತು ರಾಕೇಶ್ ಅವರ ಪಾದಗಳು ಬಾವಿಯ ಮೇಲಿನ ದೃಶ್ಯಗಳನ್ನು ಚಿತ್ರೀಕರಿಸುವುದನ್ನು ನೋಡಬಹುದು. ಮೂರು ವರ್ಷಗಳ ಹಿಂದೆ ಇಬ್ಬರು ಮದುವೆಯಾಗಿದ್ದರು. ವರದಕ್ಷಿಣೆಗಾಗಿ ಪತಿ ಮತ್ತು ಆತನ ಪೋಷಕರು ಯುವತಿಗೆ ನಿರಂತರವಾಗಿ ಹಿಂಸೆ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ದೂರಿನ ಮೇರೆಗೆ ಪೊಲೀಸರು ರಾಕೇಶ್ ವಿರುದ್ಧ ಸೆಕ್ಷನ್ 498-ಎ, 323 ಮತ್ತು 506 ಅಡಿಯಲ್ಲಿ ಪ್ರಕರಣ…

Read More

ಚಿತ್ರದುರ್ಗ: ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಐವರು ಮೃತಪಟ್ಟಿದ್ದಾರೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ನಿಧರಾಗಿದ್ದಾರೆ. ಮತ್ತೊಬ್ಬರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವುಗೀಡಾಗಿದ್ದಾರೆ. ಐವರಿಗೆ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ರಾಯಚೂರಿನ ಮಾಬಮ್ಮ(35), ಮಸ್ಕಿ ಮೂಲದ ರಮೇಶ್(40)‌, ಬೆಂಗಳೂರು ಮೂಲದ ಪಾರ್ವತಮ್ಮ(45) ಸೇರಿ ಐವರು ನಿಧನರಾಗಿದ್ದಾರೆ. ಇನ್ನು ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಬಂಗಾಳಕೊಲ್ಲಿಯಲ್ಲಿ ಭೂಕಂಪ. ಭಾರತೀಯ ಕಾಲಮಾನ ಮಧ್ಯಾಹ್ನ 1:29ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು 4.4 ತೀವ್ರತೆಯನ್ನು ವರದಿ ಮಾಡಿದೆ. ಭೂಕಂಪವು ಭೂಮಿಯ ಮೇಲ್ಮೈಯಿಂದ 70 ಕಿಮೀ ವ್ಯಾಪ್ತಿಯಲ್ಲಿ ಸಂಭವಿಸಿದೆ. ಅಧಿಕೇಂದ್ರವು 9.75 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 84.12 ಡಿಗ್ರಿ ಪೂರ್ವ ರೇಖಾಂಶದಲ್ಲಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ಭಾರತದಲ್ಲಿ ಭೂಕಂಪಗಳನ್ನು ಸೂಚಿಸುವ ಮತ್ತು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. NCS ಅಡಿಯಲ್ಲಿ 155 ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ.

Read More

ಕರ್ನಾಟಕದಲ್ಲಿ ಭಾರತ್ ಜೋಡೆಯಾತ್ರೆ, ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಬಲ ಮತ್ತು ಉತ್ಸಾಹವನ್ನು ತುಂಬಿತ್ತು ಅದರ ಫಲ ಸ್ಮೃತಿಯಾಗಿ 2023 ರಲ್ಲಿ ಪ್ರಚಂಡ ಬಹುಮತ ದಿಂದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಭಾರತ್ ಜೋಡು ಯಾತ್ರೆ ವರ್ಷಾಚರಣೆ ಕಾರ್ಯಕ್ರಮದ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024ರಲ್ಲಿ ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆ. ಯಾಕೆಂದರೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳು ಈಗ ಜನರಿಗೆ ತಲುಪುತ್ತಾ ಇವೆ ಮತ್ತು 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿಗಳನ್ನು ಪೂರೈಸಿರುವ ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ ಎನ್ನುವುದರಲ್ಲಿ ಸಂಶಯವಿಲ್ಲ. ಜನ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಮ್ಮೆ ಕೇಂದ್ರ ಸರ್ಕಾರ ರಚನೆ ಮಾಡುವುದಕ್ಕೆ ಆಶೀರ್ವಾದ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ್ ಕಾಂಗ್ರೆಸ್ ಅಧ್ಯಕ್ಷರಾದ ವಿನಯ್ ನವಲಗಟ್ಟಿ, ಹಾಗೂ ಕಾಂಗ್ರೆಸ ನಾಯಕಿ ಆಯುಷಾ ಸನದಿ ಉಪಸ್ಥಿತರಿದ್ದರು.

Read More

ಕರ್ನಾಟಕ ಚುನಾವಣೆಯಲ್ಲಿ ‘ಐದು ಗ್ಯಾರಂಟಿ’ ಯೋಜನೆಗಳ ಮೂಲಕ ಗೆದ್ದು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ಇದೀಗ ತೆಲಂಗಾಣದಲ್ಲೂ ಇದೇ ಪ್ರಯೋಗಕ್ಕೆ ಮುಂದಾಗಿದೆ. ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಐದು ಗ್ಯಾರಂಟಿಗಳ ಘೋಷಣೆಗೆ ವೇದಿಕೆ ಸಜ್ಜಾಗಿದೆ. ಸೆಪ್ಟೆಂಬರ್ 17 ರಂದು ನಡೆಯಲಿರುವ ರ‍್ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ  ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಐದು ಚುನಾವಣಾ ಗ್ಯಾರಂಟಿಗಳನ್ನು ಘೋಷಿಸಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಮತ್ತು ಸಂಸದ ಎ. ರೇವಂತ್ ರೆಡ್ಡಿ  ತಿಳಿಸಿದ್ದಾರೆ. ಹೊಸದಾಗಿ ರಚಿಸಲಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮೊದಲ ಸಭೆಯು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ  ಸೆಪ್ಟೆಂಬರ್ 16 ರಂದು ಹೈದರಾಬಾದ್‌ ನಲ್ಲಿ ನಡೆಯಲಿದೆ.  ಸೆಪ್ಟೆಂಬರ್ 17 ರಂದು ನಡೆಯಲಿರುವ ವಿಸ್ತೃತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯು ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥರನ್ನು ಒಳಗೊಂಡಿರುತ್ತದೆ ಎಂದು ಕಾಂಗ್ರೆಸ್ ಈಗಾಗಲೇ ಘೋಷಿಸಿದೆ.

Read More

ತುಮಕೂರು: ಕೆರೆಯಲ್ಲಿ ಈಜಲು ಹೋಗಿದ್ದ  ಇಬ್ಬರು ಬಾಲಕರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂಟಲಗೆರೆಯಲ್ಲಿ ನಡೆದಿದೆ. ತಿಮ್ಮನಹಳ್ಳಿ ನಿವಾಸಿಗಳಾದ ರಾಕೇಶ್(14), ಧನುಷ್(15) ಮೃತ ಬಾಲಕರಾಗಿದ್ದಾರೆ.  ಬಾಲಕರ ಸಾವಿನ ಹಿನ್ನೆಲೆಯಲ್ಲಿ ಮೃತ ಬಾಲಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ, ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಮಾತನಾಡಿ, ಭೂಮಿಯ ಮೇಲಿನ ಯಾವ ಶಕ್ತಿಯೂ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಸನಾತನ ಧರ್ಮವನ್ನು ಅಂತ್ಯಗೊಳಿಸಲು ಯತ್ನಿಸಿದವರು ಎಂದಿಗೂ ಯಶಸ್ವಿಯಾಗಲಿಲ್ಲ ಎಂದರು. ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಹೇಳಿಕೆಗೆ ಜೈ ರಾಮ್ ಠಾಕೂರ್ ಪ್ರತಿಕ್ರಿಯಿಸಿದ್ದಾರೆ. ಭಾರತ ಒಕ್ಕೂಟದ ಬುದ್ಧಿಜೀವಿಗಳು ಮತ್ತು ನಾಯಕರು ಮೌನವಾಗಿರುವ ಮೂಲಕ ಇಂತಹ ಹೇಳಿಕೆಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಠಾಕೂರ್ ಆರೋಪಿಸಿದರು. ಸನಾತನ ಧರ್ಮವನ್ನು ಕೆಣಕುವ ಮೂಲಕ ಕಾಂಗ್ರೆಸ್ ತನ್ನ ಇತರ ವಿರೋಧ ಪಕ್ಷಗಳ ಮನಸ್ಥಿತಿಯನ್ನು ಬಯಲು ಮಾಡಿದೆ. ಐ.ಎನ್.ಡಿ.ಐ.ಎ ಬ್ಲಾಕ್ ನ ಮುಖಂಡರು ಸನಾತನ ಧರ್ಮದ ವಿರುದ್ಧ ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಕಳೆದ 1000 ವರ್ಷಗಳಿಂದ ಇಂತಹ ಪ್ರಯತ್ನಗಳು ನಡೆದಿವೆ ಆದರೆ ಯಶಸ್ವಿಯಾಗಲಿಲ್ಲ ಎಂಬುದನ್ನು ಸನಾತನ ಧರ್ಮದ ಮೇಲೆ ಆಕ್ರಮಣ ಮಾಡಲು ಮತ್ತು ದೂಷಿಸಲು ಪ್ರಯತ್ನಿಸುವವರು ಅರ್ಥಮಾಡಿಕೊಳ್ಳಬೇಕು. ಹಿರಿಯ ಕಾಂಗ್ರೆಸ್ ನಾಯಕ ಮತ್ತು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್…

Read More