Author: admin

ಕೌಶಲ್ಯ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರಿಗೆ ರಿಲೀಫ್. 371 ಕೋಟಿ ವಂಚನೆ ಪ್ರಕರಣದಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಗ್ಯ ಸಮಸ್ಯೆಗಳ ಆಧಾರದ ಮೇಲೆ ಜಾಮೀನು ನೀಡಲಾಗಿದೆ. ನಾಯ್ಡು ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ ಮಲ್ಲಿಕಾರ್ಜುನ ರಾವ್ ಅವರು ತೀರ್ಪು ಪ್ರಕಟಿಸಿದರು. ಮೊಹರು ಮಾಡಿದ ಕವರ್‌ ನಲ್ಲಿ ವೈದ್ಯಕೀಯ ವಿವರಗಳನ್ನು ಎಸಿಬಿ ನ್ಯಾಯಾಲಯ ಮತ್ತು ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಅಕ್ಟೋಬರ್ ಆರಂಭದಲ್ಲಿ, ಚಂದ್ರಬಾಬು ನಾಯ್ಡು ಅವರ ಬಲಗಣ್ಣಿನ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ನಾಲ್ಕು ವಾರಗಳ ಮಧ್ಯಂತರ ವೈದ್ಯಕೀಯ ಜಾಮೀನು ನೀಡಲಾಯಿತು. ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯಲಿರುವ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸದಂತೆ ನ್ಯಾಯಾಲಯವು ನಾಯ್ಡು ಅವರನ್ನು ನಿರ್ಬಂಧಿಸಿಲ್ಲ ಎಂಬುದು ಗಮನಾರ್ಹ. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ಕೌಶಲ ಅಭಿವೃದ್ಧಿ ನಿಗಮದ…

Read More

ತುಮಕೂರು: ಜಿಲ್ಲಾ ಪೊಲೀಸ್ ಇಲಾಖೆಯ ಗಸ್ತು ವಾಹನವಾಗಿರೋ 112 ವಾಹನವನ್ನೆ ವ್ಯಕ್ತಿಯೊಬ್ಬ ಅಪಹರಿಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ನಡೆದಿದೆ. ಮುನಿಯ ಎಂಬಾತನೇ 112 ವಾಹನವನ್ನು ಅಪಹರಿಸಿದ ಅಸಾಮಿ ಆಗಿದ್ದಾನೆ. ತಡರಾತ್ರಿ ಗ್ರಾಮದ ಸಹೋದರಿಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಈ ವೇಳೆ ಆರೋಪಿ ಸಹೋದರ 112 ಗೆ ಕರೆ ಮಾಡಿದ್ದನು. ಜಗಳ ಬಿಡಿಸಲು ಗ್ರಾಮಕ್ಕೆ 112 ವಾಹನದಲ್ಲಿ ಪೊಲೀಸರು ಬಂದಿದ್ದರು. ಈ ವೇಳೆ 112 ವಾಹನದ ಹಿಂಬದಿಯ ಗಾಜನ್ನು ಮುನಿಯ ಹೊಡೆದು ಹಾಕಿದ್ದಾನೆ. ಕಾರು ನಿಲ್ಲಿಸಿ ಹಿಂಬದಿಯ ಗಾಜು ನೋಡಲು ಹೋದ ಪೊಲೀಸರು, ಈ ವೇಳೆ ವೇಗವಾಗಿ ಕಾರು ಓಡಿಸಿಕೊಂಡು ಮುನಿಯ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಸತತ ಮೂರು ಗಂಟೆಗಳ ಕಾಲ ಪೊಲೀಸರು ಹುಡುಕಾಟ ನಡೆಸಿದರೂ 112 ವಾಹನ ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ನಂತರ ತುಮಕೂರು ತಾಲೂಕಿನ ಹೆಬ್ಬೂರು ಬಳಿ 112 ವಾಹನ ಪತ್ತೆಯಾಗಿದೆ. ಸಿಎಸ್ ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಹೋದರಿಬ್ಬರ ಗಲಾಟೆ ನಡೆದಿತ್ತು. ಆರೋಪಿಯನ್ನು ಪೊಲೀಸರು…

Read More

ಏಕದಿನ ಕ್ರಿಕೆಟ್ ವಿಶ್ವಕಪ್‌ ನಲ್ಲಿ ಭಾರತ ಸೋಲಿನ ನಂತರ 23 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಹುಲ್ ಲೋಹರ್ ಎಂಬ ಯುವಕನ ಸಾವಿನ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಕುಟುಂಬವೊಂದು ಆರೋಪ ಮಾಡಿದೆ. ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. 23 ವರ್ಷದ ರಾಹುಲ್ ಗಾರ್ಮೆಂಟ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಭಾನುವಾರ ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯ ವೀಕ್ಷಿಸಲು ಹೊರಡಲಾಗಿತ್ತು. ಭಾರತ ಸೋತ ಬಳಿಕ ಕೊಠಡಿಗೆ ನುಗ್ಗಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದವರು ಹೇಳುತ್ತಾರೆ. ಘಟನೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ. ರಾಹುಲ್‌ ಗೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಜೀವನದಲ್ಲಿ ಯಾವುದೇ ತೊಂದರೆ ಇರಲಿಲ್ಲ ಮತ್ತು ಸಂತೋಷವಾಗಿದ್ದರು ಎಂದು ಕುಟುಂಬದವರು ಹೇಳುತ್ತಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read More

ತಿಪಟೂರು: ಮೂರು ಚಿರತೆ ಪ್ರತ್ಯಕ್ಷವಾಗಿದ್ದು, ಈ ಪೈಕಿ ಒಂದು ಬಾವಿಗೆ ಬಿದ್ದಿರುವ ಘಟನೆ ತಿಪಟೂರು ನಗರದ ಮಾರನ್ಗೆರೆ ಬಡಾವಣೆಯಲ್ಲಿ ನಡೆದಿದೆ. ಸಂಗಮೇಶ್ವರ ತೋಟದ ಬಾವಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ ಎಂದು ತೋಟದ ಮಾಲಿಕ ಸಂಗಮೇಶ್ ಅವರು ತಿಳಿಸಿದ್ದಾರೆ. ಒಟ್ಟು ಮೂರು ಚಿರತೆಗಳು ಪತ್ತೆಯಾಗಿವೆ. ಈ ಪೈಕಿ ಒಂದು ಬಾವಿಗೆ ಬಿದ್ದಿದೆ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ವರದಿ: ಆನಂದ್ ತಿಪ್ಟೂರ್

Read More

ತುಮಕೂರು: ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವರ ಮೇಲೆ ಹೆಜ್ಜೇನುಗಳು ದಾಳಿ ಮಾಡಿದ ಪರಿಣಾಮ ಓರ್ವ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಲಕ್ಕೇನಹಳ್ಳಿ ಗೇಟ್ ಬಳಿ ನಡೆದಿದೆ. ನಾಮಕರಣ ಕಾರ್ಯಕ್ರಮವನ್ನು ಗ್ರಾಮದ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ದಿಢೀರನೆ ದಾಳಿ ನಡೆಸಿದ ಹೆಜ್ಜೇನು ದಾಳಿ ಮಾಡಿವೆ.47 ವರ್ಷದ ವೀರಭದ್ರಯ್ಯ ಎಂಬುವರು ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೆಜ್ಜೇನು ದಾಳಿಯಾದವರಿಗೆ ಗುಬ್ಬಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಮಕರಣ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಸಮೀಪದಲ್ಲಿಯೇ ಮರದಲ್ಲಿದ್ದ ಹೆಜ್ಜೇನುಗಳು ಸಮೀಪ ಬರುತ್ತಿದ್ದಂತೆ ಜನರು ದೇವಸ್ಥಾನದ ಒಳಗೆ ಸೇರಿಕೊಂಡು ಬಾಗಿಲು ಹಾಕಿಕೊಂಡಿದ್ದರು. ನಂತರ ನಾಮಕರಣ ಕಾರ್ಯಕ್ರಮಕ್ಕೆಂದು ಬಂದಿದ್ದ ಶಿವಣ್ಣ ಎಂಬವರು ಹೊರಗಡೆ ಜನರು ಯಾರು ಇಲ್ಲದ್ದನ್ನು ಗಮನಿಸಿದ್ದಾರೆ. ಆಗ ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಿದಾಗ ದೇವಸ್ಥಾನದ ಒಳಗೆ ಸೇರಿಕೊಂಡಿದ್ದವರು ದೇಗುಲದ ಹೊರಗೆ ಜೇನುನೊಣಗಳು ಇರುವುದನ್ನು ತಿಳಿಸಿದ್ದಾರೆ. ಅಲ್ಲದೆ ತಕ್ಷಣ ದೇಗುಲದ ಒಳಗೆ…

Read More

ಬೆಂಗಳೂರು: ಬ್ಯಾಟರಾಯನಪುರದಲ್ಲಿ ಪೌರ ಕಾರ್ಮಿಕ ಕೊಲೆ ಮಾಡಿದ ಆಟೊ ಚಾಲಕ ಬಂಧಿಸಲಾಗಿದೆ. ಪ್ರಭು ಬಂಧಿತ. ಭರತ್, ಬಿಬಿಎಂಪಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆರೋಪಿ ಪ್ರಭು ಆಟೊ ಚಾಲಕ. ಇವರಿಬ್ಬರು ಪರಿಚಿತರಾಗಿದ್ದರು’ ಎಂದು ಪೊಲೀಸರು ಹೇಳಿದ್ದಾರೆ. ಪಂತರಪಾಳ್ಯದಲ್ಲಿ ವ್ಯಕ್ತಿಯೊಬ್ಬರು ನಿಧನ ಹೊಂದಿದ್ದರು. ಮನೆ ಎದುರು ಪಾರ್ಥಿವ ಶರೀರವನ್ನು ದರ್ಶನಕ್ಕೆ ಇರಿಸಲಾಗಿತ್ತು. ಅದೇ ಸ್ಥಳದಲ್ಲಿ ಭರತ್ ಹಾಗೂ ಪ್ರಭು ಒಟ್ಟಿಗೆ ಸೇರಿದ್ದರು. ಕ್ಷುಲ್ಲಕ ಕಾರಣಕ್ಕಾಗಿ ಅವರಿಬ್ಬರ ನಡುವೆ ಗಲಾಟೆ ಶುರುವಾಗಿತ್ತು. ಕೊಲೆಯಲ್ಲಿ ಅಂತ್ಯಗೊಂಡ ಗಲಾಟೆ.

Read More

ವಿಪಕ್ಷ ನಾಯಕನ ಆಯ್ಕೆಯ ಶಾಸಕಾಂಗ ಸಭೆಗೆ ಶಾಸಕ ಯತ್ನಾಳ್‌, ರಮೇಶ್ ಜಾರಕಿಹೊಳಿ ಆಗಮಿಸಿಲ್ಲ. ಈ ಕುರಿತು ಪ್ರತಿಕ್ರಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಸಭೆಗೆ ಆಗಮಿಸಿಲ್ಲ ಅಷ್ಟೇ, ಆದರೆ ಕೇಂದ್ರದಿಂದ ಬಂದ ವೀಕ್ಷಕರಿಗೆ ವಿಪಕ್ಷ ನಾಯಕ ಯಾರಾಗಬೇಕು ಎಂಬ ಅಭಿಪ್ರಾಯ ತಿಳಿಸಿ ಹೋಗಿದ್ದರು ಎಂದು ಹೇಳಿದ್ದಾರೆ. ಶಾಸಕ ಯತ್ನಾಳ್‌, ವಿಪಕ್ಷ ಸ್ಥಾನವನ್ನು ಉತ್ತರ ಕರ್ನಾಟಕದ ಶಾಸಕರಿಗೆ ನೀಡಬೇಕು ಎಂದು ಬಹಿರಂಗವಾಗಿ ಹೇಳಿದ್ದರು.

Read More

ಭಾರತದಲ್ಲಿ ಲಿಥಿಯಂ ನಿಕ್ಷೇಪಗಳು ಮತ್ತೆ ಪತ್ತೆಯಾಗಿವೆ ಜಾರ್ಖಂಡ್‌ ನ ಕೊಡೆರ್ಮಾ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಚಿನ್ನದ ನಿಕ್ಷೇಪಗಳ ಜೊತೆಗೆ ಲಿಥಿಯಂ ನಿಕ್ಷೇಪಗಳು ಕಂಡುಬಂದಿವೆ. ಈ ಲಿಥಿಯಂ ಮೀಸಲು ತುಂಬಾ ದೊಡ್ಡದಾಗಿದೆ ಎಂದು ಸಂಶೋಧಕರು ಹೇಳುತ್ತಾರೆ. ಭಾರತದಲ್ಲಿ ಲಿಥಿಯಂ ಹೊರತೆಗೆಯುವ ತಂತ್ರಜ್ಞಾನವನ್ನು ಇನ್ನೂ ಅಭಿವೃದ್ಧಿಪಡಿಸಲಾಗಿಲ್ಲವಾದ್ದರಿಂದ, ಅದನ್ನು ಹೊರತೆಗೆಯಲು ವಿದೇಶಿ ಕಂಪನಿಗಳ ಸಹಾಯವನ್ನೂ ಪಡೆಯಬಹುದು ಎಂದು ನಂಬಲಾಗಿದೆ. ಕಾಶ್ಮೀರದ ನಂತರ ಜಾರ್ಖಂಡ್ ‌ನಲ್ಲಿ ಲಿಥಿಯಂನ ಆವಿಷ್ಕಾರದೊಂದಿಗೆ, ಭಾರತವು ವಿಶ್ವದ ಅತಿದೊಡ್ಡ ಲಿಥಿಯಂ ಉತ್ಪಾದಕರಾಗಬಹುದು ಎಂದು ವರದಿಯಾಗಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಬ್ಯಾಟರಿಗಳನ್ನು ತಯಾರಿಸುವಲ್ಲಿ ಲಿಥಿಯಂ ಪ್ರಮುಖ ಅಂಶವಾಗಿದೆ. ಈ ಆವಿಷ್ಕಾರದೊಂದಿಗೆ, ಸಾವಯವ ಶಕ್ತಿಯನ್ನು ಕಡಿಮೆ ಮಾಡುವ ಪ್ರಮುಖ ಅಸ್ತ್ರವನ್ನು ಭಾರತ ಪಡೆದುಕೊಂಡಿದೆ. ಲಿಥಿಯಂ ಅನ್ನು ಏರೋಸ್ಪೇಸ್ ಉದ್ಯಮದಲ್ಲಿ ರಾಕೆಟ್ ಇಂಧನವಾಗಿ ಬಳಸಲಾಗುತ್ತದೆ. ಕೋಡರ್ಮಾದಲ್ಲಿನ ಮೈಕಾ ಬೆಲ್ಟ್‌ನಲ್ಲಿ ಮುಂದಿನ ಹಂತದ ಲಿಥಿಯಂ ಅನ್ವೇಷಣೆಗೆ ಸಿದ್ಧತೆಗಳು ನಡೆಯುತ್ತಿವೆ.ಪ್ರಾಥಮಿಕ ಪರಿಶೋಧನೆಯಲ್ಲಿ ಲಿಥಿಯಂ ಪತ್ತೆಯಾಗಿದೆ.

Read More

ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ವಿಶೇಷ ಯೋಜನೆಯನ್ನು ತರಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಟಾಪನೆಯ ಕಾಲಂ ಪೂಜೆಯನ್ನು ಭಾನುವಾರ ನೆರವೇರಿಸಿ ಅವರು ಮಾತನಾಡಿದರು. ನಾನು ಶಾಸಕಿಯಾಗಿದ್ದ ಅವಧಿಯಲ್ಲಿ ಕ್ಷೇತ್ರಕ್ಕಾಗಿ 1,800 ಕೋಟಿ ರೂ.ಗಳನ್ನು ತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಿಸಿದ್ದೇನೆ. 5 ವರ್ಷ ನಿರಂತರವಾಗಿ ಕ್ಷೇತ್ರದ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವ ಕೆಲಸ ಮಾಡಿದ್ದೇನೆ. ಆಗ ಕೊರೋನಾ, ಪ್ರವಾಹಗಳಿಂದಾಗಿ ಒಂದಿಷ್ಚು ಸಮಸ್ಯೆಯಾಯಿತು. ಆದಾಗ್ಯ ಅಭಿವೃದ್ಧಿಯನ್ನು ಮಾತ್ರ ನಿಲ್ಲಿಸಲಿಲ್ಲ. ಹಾಗಾಗಿಯೇ ಕಳೆದ ಚುನಾವಣೆಯಲ್ಲಿ ನನ್ನನ್ನು ಹಿಂದಿನ ಬಾರಿಗಿಂತ ಹೆಚ್ಚು ಮತಗಳಿಂದ ಗೆಲ್ಲಿಸಿದ್ದೀರಿ. ಇದು ಇನ್ನಷ್ಟು ಕೆಲಸ ಮಾಡಲು ನನಗೆ ಹುಮ್ಮಸ್ಸು ನೀಡಿದೆ. ಅಭಿವೃದ್ಧಿ ಕೆಲಸಗಳ ಮೂಲಕವೇ ನಿಮ್ಮ ಋಣ ತೀರಿಸುತ್ತೇನೆ ಎಂದು ಸಚಿವರು ತಿಳಿಸಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಯುವರಾಜ ಕದಂ, ಶಿವಾಜಿರಾವ್ ಅತವಾಡ್ಕರ್, ಯುವ…

Read More

ಬೆಂಗಳೂರು: ಆನ್‌ ಲೈನ್ ಹೂಡಿಕೆ ಹೆಸರಿನಲ್ಲಿ ನಗರದ ಇಬ್ಬರು ಸಾಫ್ಟ್‌ ವೇ‌ರ್ ಎಂಜಿನಿಯರ್‌ ಗಳಿಂದ ₹ 94.95 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಸೈಬ‌ರ್ ಕ್ರೈಂ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಮಹದೇವಪುರದ ಸಾಫ್ಟ್‌ ವೇರ್ ಎಂಜಿನಿಯರ್ ರಾಮ್ ತೇಜ್ (33) ಹಾಗೂ ವೈಟ್‌ ಫೀಲ್ಡ್‌ ನ ಸಾಫ್ಟ್‌ವೇರ್ ಎಂಜಿನಿಯರ್ ಸೌರಭ್ ಕುಮಾರ ಶರ್ಮಾ(40) ಅವರು ಹಣ ಕಳೆದುಕೊಂಡಿದ್ದಾರೆ. ತಮಗಾದ ವಂಚನೆ ಬಗ್ಗೆ ಪ್ರತ್ಯೇಕವಾಗಿ ಠಾಣೆಗಳಿಗೆ ದೂರು ನೀಡಿದ್ದಾರೆ. ಈ ಪ್ರಕರಣ ಪೊಲೀಸ್ ಅಧಿಕಾರಿಗಳು ದೂರನ್ನು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಸಾರ್ವಜನಿಕರು ಆನ್ಲೈನ್ ಬರುವ ಜಾಹಿರಾತು ನಂಬಿ ಮೋಸ ಹೋಗ್ಬೇಡಿ ಅಂತ ಅಧಿಕಾರಿಗಳು ತಿಳಿಸಿದ್ದಾರೆ.

Read More