Subscribe to Updates
Get the latest creative news from FooBar about art, design and business.
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
- ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
- ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
- ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
- ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
- ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
Author: admin
ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ 6 ಮಳಿಗೆಗಳಲ್ಲಿ ಪ್ಲಾಸ್ಟಿಕ್ ವಶಪಡಿಸಿಕೊಂಡು ಬೀಗ ಹಾಕಿ ಸೀಲ್ ಮಾಡಲಾಗಿದೆ. ಆದರೂ ಬಳಕೆ ಮಾಡುತ್ತಿರುವ ಹಿನ್ನೆಲೆ ಜೆಪಿ ಪಾರ್ಕ್ ವಾರ್ಡ್ ನಲ್ಲಿ ಆರ್.ಎಸ್. ವೆಜಿಟೆಬಲ್ ಮಳಿಗೆ, ಗ್ರೀನ್ ವಾಲಿ ಫಾರಂ, ಜಾಫರ್ ಫೋಟ್ ಶಾಪ್ ಹಾಗೂ ಆರ್.ಆರ್. ನಗರ ವಾರ್ಡ್ ನಲ್ಲಿ ಮಾತಾಜಿ ಡಿಪಾರ್ಟ್ಮೆಂಟಲ್ ಸ್ಟೋರ್ಸ್, ಸತೀಶ್ ಸ್ಟೋರ್ಸ್, ಕನಕಶ್ರೀ ಕ್ರೀಯೇಷನ್ಸ್ ಸೇರಿದಂತೆ ಒಟ್ಟು ಆರು ಮಳಿಗೆಗಳಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ. ಇದೆ ಬೆಂಗಳೂರು ನಗರದಲ್ಲಿ ಸಾಕಷ್ಟು ಏಕ ಬಳಕೆ ನಿಷೇದಿತ ಪ್ಲಾಸ್ಟಿಕ್ ಬಳಸುತ್ತಿರುವುದು ತಿಳಿದು ಬಂದಿದೆ. ಪೊಲೀಸ್ ಹಾಗೂ ಬಿಬಿಎಂಪಿ ಇಲಾಖೆಯ ಅಧಿಕಾರಿಗಳು, ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡು ಅಂಗಡಿ ಸೀಲ್ ಮಾಡಲಾಗುವುದು ಎಂದು ಮಾಧ್ಯಮದವರಿಗೆ ತಿಳಿಸಿದ್ದಾರೆ.
ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಸಿಲ್ಕ್ ಬೋರ್ಡ್ ಜಂಕ್ಷನ್ ಸಮೀಪದ ಮಡಿವಾಳ ಮೇಲ್ಸೇತುವೆ ಮೇಲೆ ನಡೆದಿದೆ. ಬಸ್ ಚಕ್ರ ಹರಿದ ಪರಿಣಾಮ ಸೀಮಾ(21) ಸ್ಥಳದಲ್ಲೇ ಸಾವನ್ನಪ್ಪಿದರೆ, ಒಂದೂವರೆ ವರ್ಷದ ಹೆಣ್ಣು ಮಗು ಮತ್ತು ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಬಸ್ ಡಿಕ್ಕಿಯಾದ ರಭಸಕ್ಕೆ ದಂಪತಿ ನೆಲಕ್ಕೆ ಬಿದ್ದಾಗ ಸೀಮಾ ಅವರ ಮೇಲೆ ಬಸ್ ನ ಹಿಂಬದಿ ಚಕ್ರ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಾವಯವ ಕೃಷಿ ಪದ್ಧತಿ, ಸಿರಿಧಾನ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬೆಂಗಳೂರಿನಲ್ಲಿ ಜನವರಿ 5, 6, 7 ರಂದು ಸಿರಿಧಾನ್ಯ ಮೇಳವನ್ನು ಏರ್ಪಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೊದಲನೇ ಸಿರಿಧಾನ್ಯ ಮೇಳ ನಡೆದಿದ್ದು ೨೦೧೭ ರಲ್ಲಿ. ಆಗ ಕೃಷ್ಣ ಬೈರೇಗೌಡರು ಕೃಷಿ ಸಚಿವರಾಗಿದ್ದರು. ೫ ವರ್ಷ ಸತತವಾಗಿ ಏರ್ಪಾಡು ಮಾಡಲಾಗಿತ್ತು. ಕೋವಿಡ್ ಸಂದರ್ಭದಲ್ಲಿ ಮಾಡಲಾಗಿರಲಿಲ್ಲ ಇತ್ತೀಚೆಗೆ ಸಿರಿಧಾನ್ಯಗಳು ಆರೋಗ್ಯಕ್ಕೆ ಒಳ್ಳೆಯದೆಂದು ಅರಿತಿರುವ ಜನ ಹೆಚ್ಚೆಚ್ಚು ಬಳಕೆ ಮಾಡುತ್ತಿದ್ದಾರೆ ಎಂದರು. ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸಿರಿಧಾನ್ಯಗಳ ಬಳಕೆಯ ಲಾಭಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಮೇಳಗಳು ಸಹಕಾರಿಯಾಗಿವೆ. ಸಾವಯವ ಕೃಷಿಯತ್ತ ಜನರು ಮುಖ ಮಾಡಿದ್ದು, ಸಾವಯವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದೆ. ಇಂದು ವಿಶ್ವದಲ್ಲಿ ಸಿರಿಧಾನ್ಯವನ್ನು ಆಚರಿಸಲಾಗುತ್ತಿದೆ ಎಂದರು.
ಒಂದಲ್ಲ ಎರಡಲ್ಲ ಬರೋಬ್ಬರಿ ಹತ್ತು ದಿನದಿಂದ RTO ದಲ್ಲಿ ವಾಹನಸವಾರರಿಗೆ ಸಂಕಷ್ಟ ಎದುರಾಗಿದೆ. ಸಾರಿಗೆ ಇಲಾಖೆ ಕಚೇರಿಯಲ್ಲಿ ಆಫೀಸರ್ಸ್ ಏನ್ಮಾಡ್ತಿದ್ದಾರೆ. ಆರ್ ಟಿಓ ಕಚೇರಿಗಳಲ್ಲಿ ಡಿಎಲ್- ಆರ್ಸಿಗೆ ಸ್ಮಾರ್ಟ್ ಸಮಸ್ಯೆ ಎದುರಾಗಿದೆ. ಬೆಂಗಳೂರು ಆರ್ ಟಿಓ ಕಚೇರಿಗಳಲ್ಲಿ ಡಿಎಲ್-ಆರ್ಸಿ ಕಾರ್ಡ್, ಲೈಸೆನ್ಸ್ ಕಳೆದ ಹತ್ತು ದಿನದಿಂದ ಸಿಗ್ತಿಲ್ಲ. ಕೈಗೆ ಕಾರ್ಡ್ ಸಿಗದೇ ಮನೆ ಮುಂದೆ ಬೈಕ್, ಕಾರು ನಿಂತಿದೆ. ಆರ್ ಟಿಓ ಕಚೇರಿಗಳಲ್ಲಿ ಚಾಲನಾ ಪರೀಕ್ಷೆ ಪಾಸ್ ಆದ್ರೂ ಡಿ ಎಲ್ ಸಿಗುತ್ತಿಲ್ಲ. ಆರ್ ಟಿ ಓ ಕಚೇರಿಗಳಲ್ಲಿ ಚಾಲನಾ ಪರೀಕ್ಷೆ ಪಾಸ್ ಆದ್ರೂ ಡಿ ಎಲ್ ಸಿಗುತ್ತಿಲ್ಲ. ಸ್ಮಾರ್ಡ್ ಕಾರ್ಡ್ ಗೆ ಟೆಕ್ನಿಕಲ್ ಸಮಸ್ಯೆ ತಲೆದೋರಿದೆ. ಸಾರಿಗೆ ಇಲಾಖೆ ಕಚೇರಿಗಳಲ್ಲಿ ಸ್ಮಾರ್ಡ್ ಕಾರ್ಡ್ ಗಳಿಗೆ ಸಕಾಲದಲ್ಲಿ ಚಿಪ್ ಪೂರೈಕೆಯಾಗ್ತಿಲ್ಲ. ಶೋ ರೂಂನಿಂದ ಹೊಸದಾಗಿ ವಾಹನ ಖರೀದಿಸಿದ್ರೂ ವಾಹನ ರಸ್ತೆಗಿಳಿಸದ ಸ್ಥಿತಿ ಇದೆ. ಹೀಗಾಗಿ ಬೆಂಗಳೂರು ಆರ್ ಟಿಓ ಕಚೇರಿಗಳಲ್ಲಿ ಅಧಿಕಾರಿಗಳ ವಿರುದ್ಧ ವಾಹನಸವಾರರು ಆಕ್ರೋಶ ಹೊರಹಾಕಿದ್ದಾರೆ.
ಸಂಸತ್ ನಲ್ಲಿ ಭದ್ರತಾ ವೈಪಲ್ಯ ಹಿನ್ನೆಲೆ ಸಂಸದ ಪ್ರತಾಪ್ ಸಿಂಹನನ್ನು ಬಂಧಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಭಯೋತ್ಪಾದಕರನ್ನ ಬೆಂಬಲಿಸುತ್ತಿರುವ ಬಿಜೆಪಿಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ನಕ್ಸಲೇಟ್ ವೇಷದಲ್ಲಿರುವ ಪ್ರತಾಪ್ ಸಿಂಹ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆಯುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಸಂಸದ ಪ್ರತಾಪ್ ಸಿಂಹರನ್ನ ಕೂಡಲೇ ಬಂಧಿಸಿ ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಅಲ್ಲದೇ ಭಯೋತ್ಪಾದಕರನ್ನ ಬೆಂಬಲಿಸುತ್ತಿರುವ ಬಿಜೆಪಿಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
ವರ್ಗಾವಣೆಯಾಗಿ ಹಲವು ತಿಂಗಳಾದರೂ ವರ್ಗಾವಣೆಯಾದ ಸ್ಥಳಕ್ಕೆ ವರದಿ ಮಾಡಿಕೊಳ್ಳದೇ, ಗೈರು ಹಾಜರಾದ ರಾಜ್ಯದ 44 ಪೊಲೀಸ್ ಇನ್ ಸ್ಪೆಕ್ಟರ್ ಗಳು ಕರ್ತವ್ಯ ಲೋಪವೆಸಗಿದ್ದು, ಇದೀಗ ಅಂತಹವರನ್ನ ಅಮಾನತು ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ. ವರ್ಗಾವಣೆಗೊಂಡ ಪೊಲೀಸರು ವರದಿ ಮಾಡಿ ಪಾಲನಾ ವರದಿಯನ್ನ ಪೊಲೀಸ್ ಪ್ರಧಾನ ಕಚೇರಿಗೆ ಕಳುಹಿಸಬೇಕು. ಆದರೆ, ಕೆಲ ಪೊಲೀಸ್ ಇನ್ ಸ್ಪೆಕ್ಟರ್ ಗಳು ವರ್ಗಾವಣೆಯಾಗಿ ಹಲವು ತಿಂಗಳಾದರೂ ವರ್ಗವಾದ ಸ್ಥಳಕ್ಕೆ ವರದಿ ಮಾಡಿಕೊಳ್ಳದೇ ಹಿರಿಯ ಅಧಿಕಾರಿಗಳ ಆದೇಶ ಉಲ್ಲಂಘಿಸಿದ್ದಾರೆ.
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ಸಿಬಿಐನಿಂದ ಭಾರೀ ದಾಳಿ. ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ನಿವೃತ್ತ ಸಿಬ್ಬಂದಿಯ ಮನೆ ಮತ್ತು ಸಂಸ್ಥೆಗಳಲ್ಲಿ ಶೋಧ ನಡೆಸಲಾಗಿದೆ. ಕೋಲ್ಕತ್ತಾ ಸೇರಿದಂತೆ 13 ಸ್ಥಳಗಳಲ್ಲಿ ಕೇಂದ್ರ ತನಿಖಾ ತಂಡ ತಪಾಸಣೆ ನಡೆಸುತ್ತಿದೆ ಎಂದು ವರದಿಯಾಗಿದೆ. ಇಬ್ಬರು ಮಾಜಿ ಸಿಐಎಸ್ ಎಫ್ ಸಿಬ್ಬಂದಿಯ ಮನೆ ಮತ್ತು ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದೆ. ಇಬ್ಬರೂ ಸಿಬಿಐ ರಾಡಾರ್ ನಲ್ಲಿದ್ದರು. ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಲಾಲಾ ಅಲಿಯಾಸ್ ಅನೂಪ್ ಮಾಝಿ ಜತೆ ಇವರಿಗೆ ನಿಕಟ ಸಂಬಂಧವಿರುವುದು ಪತ್ತೆಯಾಗಿದೆ. ದಕ್ಷಿಣ ಕೋಲ್ಕತ್ತಾದ ಭವಾನಿಪುರ, ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ದುರ್ಗಾಪುರ, ಕುಲ್ತಿ ಮತ್ತು ಮಾಲ್ಡಾ ಮುಂತಾದ ಸ್ಥಳಗಳಲ್ಲಿ ಏಕಕಾಲದಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯೊಂದಿಗೆ ದಾಳಿ ನಡೆದಿದೆ. ಕಲ್ಲಿದ್ದಲು ಕಳ್ಳಸಾಗಣೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈ ವರ್ಷದ ಆರಂಭದಲ್ಲಿ ಇಸಿಎಲ್ ನ ಮಾಜಿ ನಿರ್ದೇಶಕ ಮತ್ತು ಕೇಂದ್ರ ಸಿಐಎಸ್ ಎಫ್ ನ ಮಾಜಿ ಇನ್ಸ್ ಪೆಕ್ಟರ್…
ಅಲಹಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯೊಬ್ಬ ಬಾಂಬ್ ತಯಾರಿಕೆಯ ವೇಳೆ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾನೆ. ವಿಶ್ವವಿದ್ಯಾಲಯದ ಎಂಎ ವಿದ್ಯಾರ್ಥಿ ಪ್ರಭಾತ್ ಯಾದವ್ ಗಾಯಗೊಂಡಿದ್ದಾರೆ. ಹಾಸ್ಟೆಲ್ ಕೊಠಡಿಯಲ್ಲಿ ಬಾಂಬ್ ತಯಾರಿಸುವಾಗ ಬಾಂಬ್ ಸ್ಫೋಟಗೊಂಡಿದೆ. ವಿದ್ಯಾರ್ಥಿಯ ಬಲಗೈಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಅವರನ್ನು ಎಸ್ ಆರ್ ಎನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂಬ್ ಏಕೆ ತಯಾರಿಸಲಾಗಿದೆ ಎಂದು ವಿದ್ಯಾರ್ಥಿ ತನಿಖೆ ನಡೆಸುತ್ತಿದ್ದಾನೆ. ಸದ್ಯದಲ್ಲೇ ಪ್ರಭಾತ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಲಾಗುವುದು.
ಬೆಳಗಾವಿ: ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ , ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತರ ರಾಷ್ಟ್ರೀಯ ದಿನ 2023 ಮತ್ತು ಮೇಳದ ಪೂರ್ವಭಾವಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಿರಿಧಾನ್ಯಗಳ ಬಳಕೆಯ ಲಾಭಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಮೇಳಗಳು ಸಹಕಾರಿಯಾಗಿವೆ. ಸಾವಯವ ಕೃಷಿಯತ್ತ ಜನರು ಮುಖ ಮಾಡಿದ್ದು, ಸಾವಯವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದೆ. ಇಂದು ವಿಶ್ವದಲ್ಲಿ ಸಿರಿಧಾನ್ಯವನ್ನು ಆಚರಿಸಲಾಗುತ್ತಿದೆ ಎಂದರು. ಜನರಲ್ಲಿ ಹಾಗೂ ರೈತರಲ್ಲಿ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಇವುಗಳಿಗೆ ಮಾರುಕಟ್ಟೆ ಒದಗಿಸಬೇಕು. ಕಳೆದ 20 ವರ್ಷಗಳಿಂದ ಸಾವಯವ ಕೃಷಿ ಪದ್ಧತಿಗೆ ಒತ್ತು ನೀಡಲಾಗುತ್ತಿದೆ. ಅದಕ್ಕೆ ಕೃಷಿ ಇಲಾಖೆಯವರು ಪೂರಕ ಕ್ರಮಗಳನ್ನು ತೆಗೆದುಕೊಳ್ಳಲು ತಿಳಿಸಲಾಗಿದೆ ಎಂದರು.
ಶಿವಮೊಗ್ಗ: ಪ್ರತಾಪ್ ಸಿಂಹ ಅವರಂತಹ ರಾಷ್ಟ್ರಭಕ್ತ ಹಾಗೂ ಹಿಂದುತ್ವವಾದಿಯನ್ನು ಖಂಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂಸತ್ ಭವನದಲ್ಲಿ ಭಾರೀ ಭದ್ರತೆ ಇದ್ದರು ಸಹ ಕಿಡಿಗೇಡಿಗಳು ನುಗ್ಗಿ ಇಂತಹ ಕೃತ್ಯ ನಡೆಸಿದ್ದು ಬಹಳ ಆಘಾತಕಾರಿ ಮತ್ತು ಮನಸ್ಸಿಗೆ ನೋವನ್ನುಂಟು ಮಾಡುವ ಸಂಗತಿ ಎಂದು ಹೇಳಿದರು. ಸಂಸತ್ ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ವಿರುದ್ಧ ತನಿಖೆ ನಡೆಯಬೇಕು ಅಂತ ಕಾಂಗ್ರೆಸ್ ನಾಯಕರು ಆಗ್ರಹಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ನಾಯಕರಿಗೆ ಮಾಡಲು ಬೇರೆ ಕೆಲಸವಿಲ್ಲ ಪ್ರತಾಪ್ ಸಿಂಹ ನಂತಹ ರಾಷ್ಟ್ರಭಕ್ತ ಹಾಗೂ ಹಿಂದುತ್ವವಾದಿಯನ್ನು ಶಂಕಿಸುವುದು, ಖಂಡಿಸುವುದು ಕೇವಲ ಕಾಂಗ್ರೆಸ್ ಅವರಿಂದ ಮಾತ್ರ ಸಾಧ್ಯ ಎಂದು ಹೇಳಿದರು.