Subscribe to Updates
Get the latest creative news from FooBar about art, design and business.
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
- ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
- ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
- ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
- ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
- ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
Author: admin
ತಮಿಳು ಮಹಿಳೆಯೊಬ್ಬರಿಗೆ ಗೋವಾ ವಿಮಾನ ನಿಲ್ದಾಣದಲ್ಲಿ ಹಿಂದಿ ಗೊತ್ತಿಲ್ಲ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಅವಮಾನ ಮಾಡಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗುರುವಾರ ಆರೋಪಿಸಿದ್ದಾರೆ. ಹಿಂದಿ ಮಾತನಾಡಲು ಬರಲ್ಲ ಎಂದು ತಿಳಿದ ನಂತರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಕಾನ್ ಸ್ಟೇಬಲ್ ಮಹಿಳೆಗೆ ಕಿರುಕುಳ ನೀಡಿದ್ದಾರೆ. ಹಿಂದಿಯಲ್ಲಿ ಮಾತನಾಡುವಂತೆ ಪೊಲೀಸ್ ಹೇಳಿದಾಗ ಆ ಭಾಷೆ ನನಗೆ ಗೊತ್ತಿಲ್ಲ ಎಂದು ಮಹಿಳೆ ಹೇಳಿದ್ದಾರೆ. ನಂತರ ಇದೇ ವಿಚಾರದಲ್ಲಿ ಆಕೆಗೆ ಬೆದರಿಕೆಯೊಡ್ಡಲಾಗಿದೆ ಎಂದು ಎಂದು ಅವರು ದೂರಿದ್ದಾರೆ. ಈ ಘಟನೆಯನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ತಮಿಳುನಾಡು ಭಾರತದಲ್ಲಿದ್ದು, ದೇಶದ ಎಲ್ಲಾ ಜನರು ಹಿಂದಿ ಕಲಿಯಬೇಕು ಎಂದು ಸಿಐಎಸ್ಎಫ್ ವ್ಯಕ್ತಿ ಉಪನ್ಯಾಸ ನೀಡಿದ್ದಾರೆ. ಇದು ತೀವ್ರ ಖಂಡನೀಯ ಎಂದಿದ್ದಾರೆ.
ಬೆಳಗಾವಿ: ಸರ್ಕಾರಿ ಜಮೀನು ಒತ್ತುವರಿ ಗುರುತಿಸಲು ರಾಜ್ಯ ಸರ್ಕಾರ ತಂತ್ರಜ್ಞಾನ ಬಳಸಲಿದ್ದು, ಜಿಪಿಎಸ್ ಬಳಸಿ ಜಮೀನುಗಳ ಮಾಲೀಕತ್ವವನ್ನು ಗುರುತಿಸಲು ಸಹಾಯ ಮಾಡುವ ಮೊಬೈಲ್ ಆ್ಯಪ್ ‘Beat’ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿದೆ. ವಿಧಾನ ಪರಿಷತ್ ನಲ್ಲಿ ಬುಧವಾರ ಕೇಳಿದ ಪ್ರಶ್ನೆಗೆ ಈ ಬಗ್ಗೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಒಟ್ಟು 63,32,486 ಎಕರೆ ಸರ್ಕಾರಿ ಭೂಮಿಯಲ್ಲಿ 14,72,493 ಎಕರೆ ಒತ್ತುವರಿಯಾಗಿದೆ. ಅತಿಕ್ರಮಿತ ಭೂಮಿಯಲ್ಲಿ 10,82,752 ಎಕರೆಯನ್ನು ಅಕ್ರಮ-ಸಕ್ರಮ ಯೋಜನೆಯಡಿ ಪರಿಗಣಿಸಲಾಗುತ್ತಿದೆ. ಇನ್ನುಳಿದ 3,89,741 ಎಕರೆಯಲ್ಲಿ 2,73,778 ಎಕರೆ ಒತ್ತುವರಿ ತೆರವು ಮಾಡಲಾಗಿದ್ದು, 1,15,963 ಎಕರೆ ಒತ್ತುವರಿ ತೆರವು ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು. ಮುಂದಿನ ತಿಂಗಳಿನಿಂದ ಗ್ರಾಮ ಲೆಕ್ಕಿಗರು ಭೂಮಿ ಪ್ರಮಾಣೀಕರಣಕ್ಕೆ ಆ್ಯಪ್ ಬಳಸಲಿದ್ದಾರೆ. ಅತಿಕ್ರಮಣ ಕಂಡುಬಂದಲ್ಲಿ ತಹಶೀಲ್ದಾರ್ ಗೆ ಆನ್ ಲೈನ್ ನಲ್ಲಿ ವರದಿ ಕಳುಹಿಸಲಾಗುತ್ತದೆ. ಪ್ರಕ್ರಿಯೆಯನ್ನು ನಿಖರವಾಗಿ ಮಾಡಲು ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ರಾಜ್ಯದಲ್ಲಿ ಘೋಷಣೆಯಾಗಿರುವ ಹೊಸ ತಾಲ್ಲೂಕು ಕೇಂದ್ರ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಮಾಹಿತಿ ನೀಡಿದ ಸಚಿವರು, ಹೊಸದಾಗಿ ಘೋಷಣೆಯಾದ ತಾಲ್ಲೂಕು ಕೇಂದ್ರಗಳ ಬಹಳಷ್ಟು ಆಸ್ಪತ್ರೆಗಳು ತಾಲ್ಲೂಕು ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ ಏರಿಯಾಗಿಲ್ಲ. ಇದರೊಂದಿಗೆ ರಾಜ್ಯದಲ್ಲಿ 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಹ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರುವ ಅರ್ಹತೆ ಹೊಂದಿವೆ ಎಂದು ತಿಳಿಸಿದರು. ಶಾಸಕರ ಬೇಡಿಕೆಗಳಿಗೆ ಸ್ಪಂದಿಸಿ ಹಣಕಾಸಿನ ಲಭ್ಯತೆ ನೋಡಿಕೊಂಡು ಮೇಲ್ದರ್ಜೆಗೆ ಏರಿಸುವ ಕಾರ್ಯವನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ಅವರು ಹೇಳಿದರು.
ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ವನ್ಯಜೀವಿ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆಯೊಂದು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ಹುಣಸೂರು ವ್ಯಾಪ್ತಿಯ ಕುಗ್ರಾಮವೊಂದರ ಬಳಿಯ ಕೃಷಿ ಭೂಮಿಯ ಬೇಲಿಗೆ ಅಳವಡಿಸಿದ್ದ ಹೈಟೆನ್ಷನ್ ತಂತಿ ತಗುಲಿ ಆನೆ ಮೃತಪಟ್ಟಿದೆ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ, ಗುರುವಾರ ಬೆಳಗ್ಗೆ ಆನೆಯ ಶವ ಪತ್ತೆಯಾಗಿದೆ. ವಿಚಾರ ತಿಳಿದ ಕೂಡಲೇ ನಮ್ಮ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಪ್ರಾಥಮಿಕ ತನಿಖೆಯ ಪ್ರಕಾರ ಆನೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ ಎಂದು ತಿಳಿಸಿದ್ದಾರೆ.
ತುಮಕೂರು: ಕರ್ನಾಟಕ ರಾಜ್ಯ ಗೃಹ ಸಚಿವರ ತವರು ಜಿಲ್ಲೆ ಹಾಗೂ ಸಹಕಾರ ಸಚಿವ ರಾಜಣ್ಣನವರ ಕ್ಷೇತ್ರಗಳಲ್ಲಿ ಇರುವ ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸಲು ಮತ್ತು ಇತರೆ ವೈದ್ಯಕೀಯ ಸೇವೆಗೆ ದೀನ ದುರ್ಬಲರು ಬಡವರು ಲಂಚ ನೀಡದೆ ಇದ್ದರೆ ಸೇವೆಯೇ ಇಲ್ಲ ಎಂಬಂತಾಗಿದೆ. ಗುರುವಾರ ಬೆಂಗಳೂರಿನ ಆರೋಗ್ಯ ಸೌಧದಿಂದ ಮಧುಗಿರಿ ತಾಲೂಕ್ ಮತ್ತು ಕೊರಟಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಒಳ ಪಡುವ ಪುರವರ ಹೋಬಳಿ ಬ್ಯಾಲ್ಯ ಆಸ್ಪತ್ರೆಗಳಿಗೆ ಮುಖ್ಯ ಜಾಗೃತಾ ಅಧಿಕಾರಿ ಕುಪ್ಪೆ ಶ್ರೀನಿವಾಸ್ ಅವರು ಭೇಟಿ ನೀಡುವ ಮುನ್ಸೂಚನೆ ತಿಳಿದ ತುಮಕೂರು ಘಟಕದ ನೈಜ ಹೋರಾಟಗಾರರ ವೇದಿಕೆಯ ಸದಸ್ಯರಾದ ಹಂದ್ರಾಳ್ ನಾಗಭೂಷಣ್, ಮಧುಗಿರಿ ಮಹೇಶ್, ಸತೀಶ್ ಟಿ.ಪಿ. ಅರಳಾಪುರ ರಮೇಶ್, ಅವರು ಮಧುಗಿರಿ ಮತ್ತು ಕೊರಟಗೆರೆ ವಿಧಾನಸಭಾ ವ್ಯಾಪ್ತಿಯ ವ್ಯಾಪ್ತಿಯ ಬ್ಯಾಲ್ಯ ಆಸ್ಪತ್ರೆಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮುಖ್ಯ ಜಾಗೃತ ದಳದ ಅಧಿಕಾರಿಗೆ ಲಂಚದ ಹಣ ಸಮೇತ ವಾಸ್ತವ ಸ್ಥಿತಿಗಳನ್ನು ಕಣ್ಣೆದುರೇ ಬಿಚ್ಚಿಟ್ಟರು. ಬ್ಯಾಲ್ಯ ಪ್ರಾಥಮಿಕ ಆಸ್ಪತ್ರೆಯ ವ್ಯಾಪ್ತಿಯ ವಡ್ಡರಹಟ್ಟಿ ಕಾವೇರಿ…
ಬೆಳಗಾವಿ: ಅರಣ್ಯ ಭೂಮಿ ಗಡಿ ಗುರುತಿಸಿ ನಿಖರ ನಕ್ಷೆ ಮಾಡಲು ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೆ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಯಲ್ಲಿಂದು ಹೇಳಿದರು. ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಸಚಿವರು, ಕರ್ನಾಟಕ ಅರಣ್ಯ ನಿಯಮದ ಪ್ರಕಾರ ಜಿಲ್ಲಾ ಅರಣ್ಯ ಅಥವಾ ರಕ್ಷಿತ ಅರಣ್ಯಕ್ಕೆ ಹೊಂದಿಕೊಂಡತೆ ಹಾಗೂ 100 ಮೀಟರ್ ವ್ಯಾಪ್ತಿಯಲ್ಲಿನ ಭೂಮಿ ಮಂಜೂರಾತಿ ಪೂರ್ವದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಸಮ್ಮತಿ ಪಡೆಯುವುದು ಕಡ್ಡಾಯವಾಗಿದೆ. ಅಧಿಸೂಚಿತ ಹಾಗೂ ಡೀಮ್ಡ್ ಅರಣ್ಯ ಅರಣ್ಯ ಪ್ರದೇಶಗಳಿಗೆ ಸರ್ವೆ ನಂಬರ್ ಅನ್ವಯ ವಿವರವಾದ ಮಾಹಿತಿ ಇಲ್ಲದಂತಹ ಸಂದರ್ಭದಲ್ಲಿ ನಿರಾಕ್ಷೇಪಣ ಪತ್ರ ನೀಡಲು ಕಂದಾಯ ಇಲಾಖೆಯೊಂದಿಗೆ ಜಂಟಿ ಮೋಜಣಿ ಮಾಡಲಾಗುವುದು ಎಂದರು. ಆನೆಗಳ ನಿಯಂತ್ರಣಕ್ಕೆ ಕ್ರಮ: ರಾಜ್ಯದಲ್ಲಿ 6995 ಆನೆಗಳು ಇವೆ. ಒಟ್ಟು 7 ಆನೆ ಕಾರ್ಯಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಓಳಪಡುವ ಆಲ್ಡಾರಾ ಶಾಖೆಯ ಅರಣ್ಯ ಗಡಿ ಪ್ರದೇಶದಲ್ಲಿ ರೈಲ್ವೇ ಬ್ಯಾರಿಕೇಡ್…
ಘಾಟ್ಕೋಪರ್ ಪ್ರದೇಶದಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಬುಧವಾರ 30 ಲಕ್ಷ ರೂಪಾಯಿ ಮೌಲ್ಯದ ಎಂಡಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಎಎನ್ ಸಿಯ ವರ್ಲಿ ಘಟಕವು ಡ್ರಗ್ಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿಸಲಾಗಿದೆ. ಘಾಟ್ಕೋಪರ್ ಪ್ರದೇಶದಲ್ಲಿ ಇಬ್ಬರು ಮಾದಕ ವ್ಯಸನಿಗಳನ್ನು ಬಂಧಿಸಿ 30 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಇಬ್ಬರ ವಿರುದ್ಧವೂ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅವರನ್ನು ಡಿಸೆಂಬರ್ 14ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ತಿಳಿಸಿದ್ದಾರೆ.
ಅಲಹಾಬಾದ್: ಜ್ಞಾನವ್ಯಾಪಿ ಪ್ರಕರಣದಂತೆಯೇ ಹಿಂದೂ-ಮುಸ್ಲಿಂ ಸಮುದಾಯಗಳ ತಿಕ್ಕಾಟಕ್ಕೆ ಕಾರಣವಾಗಿರುವ ಮತ್ತೊಂದು ಪುಣ್ಯಕ್ಷೇತ್ರ ಕೃಷ್ಣ ಜನ್ಮಭೂಮಿ ಮಥುರಾದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಸಮೀಕ್ಷೆ ವಿಧಾನಗಳನ್ನು ಡಿಸೆಂಬರ್ 18 ರಂದು ನಿರ್ಧರಿಸಲಾಗುವುದು. ಶಾಹಿ ಈದ್ಗಾ ಮಸೀದಿಯ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ. ನಮ್ಮ ಬೇಡಿಕೆಯು ಶಾಹಿ ಈದ್ಗಾ ಮಸೀದಿ ಸರ್ವೆಯಾಗಿತ್ತು. ಶಾಹಿ ಈದ್ಗಾ ಸಂಕೀರ್ಣದಲ್ಲಿ ಹಿಂದೂ ದೇವಾಲಯದ ಸಾಕಷ್ಟು ಚಿಹ್ನೆಗಳು ಇವೆ. ಮತ್ತು ನಿಜವಾದ ಸ್ಥಾನವನ್ನು ತಿಳಿಯಲು, ವಕೀಲ ಕಮಿಷನರ್ ಅಗತ್ಯವಿದೆ. ಇದು ನ್ಯಾಯಾಲಯದ ಮಹತ್ವದ ತೀರ್ಪು ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು, “ತೀರ್ಪು ಬರುವುದು ಒಳ್ಳೆಯದು. ಸಮೀಕ್ಷೆ ಮುಖ್ಯವಾಗಿದೆ. ಸಮೀಕ್ಷೆಯು ಸತ್ಯಗಳನ್ನು ಸ್ಪಷ್ಟವಾಗಿ ತೋರಿಸುತ್ತದೆ…” ಎಂದು ಹೇಳಿದರು.
ಬೀಟ್ರೂಟ್ ದೈಹಿಕ ಮತ್ತು ಮೆದುಳಿನ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ ಮತ್ತು ಹೆಚ್ಚು ಚುರುಕಾದ ಚಲನೆಗೆ ಸಹಾಯ ಮಾಡುತ್ತದೆ. ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ಪ್ರಿಫ್ರಂಟಲ್ ಕಾರ್ಟೆಕ್ಸ್ನಲ್ಲಿ ರಕ್ತದ ಹರಿವು ಸುಧಾರಿಸುತ್ತದೆ, ಇದರಿಂದಾಗಿ ಮೆದುಳಿನ ಕಾರ್ಯಕ್ಷಮತೆ ಹೆಚ್ಚಾಗುತ್ತದೆ. ಬೀಟ್ರೂಟ್ ನೈಟ್ರೇಟ್ಗಳಿಂದ ತುಂಬಿದೆ. ಇದು ಅದರ ಮಾಂತ್ರಿಕ ಗುಣಲಕ್ಷಣಗಳ ಹಿಂದಿನ ದೊಡ್ಡ ರಹಸ್ಯವಾಗಿದೆ. ರಕ್ತದೊತ್ತಡವನ್ನು ಕಡಿಮೆ ಮಾಡುವುದು: ಬೀಟ್ರೂಟ್ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಫ್ರಾಂಟಿಯರ್ಸ್ ಇನ್ ನ್ಯೂಟ್ರಿಷನ್ನ ಅಧ್ಯಯನದ ಪ್ರಕಾರ, ಇದು ಅದರ ಶ್ರೀಮಂತ ನೈಟ್ರೇಟ್ ಅಂಶಕ್ಕೆ ಕಾರಣವಾಗಿದೆ, ಇದು ದೇಹದ ನೈಟ್ರಿಕ್ ಆಕ್ಸೈಡ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ನೈಟ್ರಿಕ್ ಆಕ್ಸೈಡ್, ದೇಹದಲ್ಲಿ ಸ್ವಾಭಾವಿಕವಾಗಿ ಸಂಭವಿಸುವ ಅನಿಲ, ರಕ್ತನಾಳಗಳನ್ನು ವಿಸ್ತರಿಸಲು ಸಂಕೇತಿಸುತ್ತದೆ, ಹೆಚ್ಚಿದ ರಕ್ತದ ಹರಿವನ್ನು ಉತ್ತೇಜಿಸುತ್ತದೆ ಮತ್ತು ರಕ್ತದೊತ್ತಡದಲ್ಲಿ ನಂತರದ ಕಡಿತವನ್ನು ಉತ್ತೇಜಿಸುತ್ತದೆ. ಅಂತೆಯೇ, ಬೀಟ್ರೂಟ್ ಅನ್ನು ಒಬ್ಬರ ಆಹಾರದಲ್ಲಿ ಸೇರಿಸುವುದು ಕೆಲವು ಹೃದಯರಕ್ತನಾಳದ ಪರಿಸ್ಥಿತಿಗಳನ್ನು ತಡೆಗಟ್ಟಲು ಮತ್ತು ನಿರ್ವಹಿಸಲು ಪರಿಣಾಮಕಾರಿ ಪೂರಕವಾಗಿ ಕಾರ್ಯನಿರ್ವಹಿಸುತ್ತದೆ. ಹೃದಯ ಆರೋಗ್ಯ ಬೆಂಬಲ: ಹೃದಯ ಸಮಸ್ಯೆಗಳಿರುವ ವ್ಯಕ್ತಿಗಳಿಗೆ ಬೀಟ್ರೂಟ್ ಅಮೂಲ್ಯವಾದ…
ಕೆಲಸಕ್ಕೆ ಹೋಗುವ ಮುಟ್ಟಾದ ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆ ಕೊಡಬೇಕು ಎಂಬ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿಕೆಗೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರುಗೇಟು ನೀಡಿದ್ದಾರೆ. ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಮೃತಿ ಇರಾನಿ, ಮಹಿಳೆಯರ ಕೆಲಸಕ್ಕೆ ಮುಟ್ಟು ಎಂದಿಗೂ ಅಡ್ಡಿಯಾಗುವುದಿಲ್ಲ. ಅದು ಮಹಿಳೆಯರ ಜೀವನದ ಒಂದು ಭಾಗ ಮತ್ತು ಸಹಜ ಕ್ರಿಯೆ. ಇದಕ್ಕೆಲ್ಲ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೇ, ವೇತನ ಸಹಿತ ಮುಟ್ಟಿನ ರಜೆ ನೀಡಬೇಕು ಎಂದು ಎಲ್ಲಿಂದಲೂ ಸರ್ಕಾರದ ಪರಿಗಣನೆಗೆ ಬಂದಿಲ್ಲ. ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವ ಯೋಜನೆಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ, ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.