Author: admin

ಹಾಸಿಗೆ ಹಿಡಿದಿರುವ ಲೀಲಾವತಿ ಅವರನ್ನು ನೋಡಿ ಅರ್ಜುನ್ ಸರ್ಜಾ ಭಾವುಕರಾದರು. ಲೀಲಾವತಿ ಅವರ ಆರೋಗ್ಯಕ್ಕಾಗಿ ಆಂಜನೇಯ ಸ್ವಾಮಿ ದೇವರ ಬಳಿ ಪ್ರಾರ್ಥನೆ ಮಾಡುತ್ತೇನೆ ಎಂದು ಅರ್ಜುನ್ ಸರ್ಜಾ ಹೇಳಿದರು. ಬಳಿಕ ಹಾಸಿಗೆ ಹಿಡಿದ ಲೀಲಾವತಿ ಅವರಿಗೆ ಮುತ್ತಿಟ್ಟು ಅರ್ಜುನ್ ಸರ್ಜಾ ನಮಿಸಿದರು. ಲೀಲಾವತಿ ಪುತ್ರ ವಿನೋದ್‌ ರಾಜ್ ಜತೆಗೂ ಸಮಾಲೋಚನೆ ನಡೆಸಿದರು. ಕನ್ನಡದ ಹಿರಿಯ ನಟಿ ಲೀಲಾವತಿ. ಡಾ. ರಾಜ್ ಕುಮಾರ್ ಸೇರಿದಂತೆ ಹಲವು ಮೇರು ಕಲಾವಿದರ ಜತೆ ಅವರು ಅಭಿನಯಿಸಿದ್ದಾರೆ. ನೂರಾರು ನೆನಪಿನಲ್ಲಿ ಉಳಿಯುವಂತಹ ಪಾತ್ರ ನಿರ್ವಹಿಸಿದ್ದಾರೆ. ಸದ್ಯ ಅವರು ವಯೋಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದು, ನೆಲಮಂಗಲ ತಾಲೂಕಿನಲ್ಲಿರುವ ಅವರ ತೋಟದ ಮನೆಗೆ ಬಹುಭಾಷಾ ನಟ ಅರ್ಜುನ್ ಸರ್ಜಾ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಆಶೀರ್ವಾದ ಪಡೆದು ಬಹಳ ನೋವಿನಿಂದ ತೆರೆಳಿದ್ದಾರೆ.

Read More

ಖ್ಯಾತ ಬಾಲಿವುಡ್ ನಿರ್ದೇಶಕ ಸಂಜಯ್ ಗಧ್ವಿ ನಿಧನರಾಗಿದ್ದಾರೆ. ಅವರು ತಮ್ಮ 57 ನೇ ಹುಟ್ಟುಹಬ್ಬದ ಮೂರು ದಿನಗಳ ಮೊದಲು ನಿಧನರಾದರು. ಸಂಜಯ್ ಗಧ್ವಿ ಧೂಮ್, ಧೂಮ್ 2 ಮೂಲಕ ಪ್ಯಾನ್ ಇಂಡಿಯಾ ಖ್ಯಾತಿಯನ್ನು ಗಳಿಸಿದ ನಿರ್ದೇಶಕ. ಅವರ ಪುತ್ರಿ ಸಂಜಿನಾ ಗಧ್ವಿ ಸಾವನ್ನು ಖಚಿತಪಡಿಸಿದ್ದಾರೆ. ತನ್ನ ತಂದೆಗೆ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲ ಮತ್ತು ಸಾವಿಗೆ ಪ್ರಾಥಮಿಕ ಕಾರಣ ಹೃದಯಾಘಾತ ಎಂದು ಸಂಜಿನಾ ಗಧ್ವಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಬಾಲಿವುಡ್ ತಾರೆಯರಾದ ಅಭಿಷೇಕ್ ಬಚ್ಚನ್, ಬಿಪಾಶಾ ಬಸು ಮತ್ತು ಇತರರು ಸಂಜಯ್ ಗಧ್ವಿಯ ಸಾವಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ತಮ್ಮ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಿದ್ದಾರೆ. ಸಂಜಯ್ 2000ನೇ ಇಸವಿಯಲ್ಲಿ ತೆರೆ ಲಿಯೇ ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದರು. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಹಲವಾರು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಅವುಗಳಲ್ಲಿ ಪ್ರಸಿದ್ಧವಾದವು ಧೂಮ್, ಧೂಮ್ 2 ಮತ್ತು 2002 ರ ಚಲನಚಿತ್ರ ಮೇರೆ ಯಾರ್ ಕಿ ಶಾದಿ…

Read More

ಮಹಿಳೆ ಮತ್ತು ಆಕೆಯ ಒಂಬತ್ತು ತಿಂಗಳ ಮಗಳು ತುಂಡಾದ ವಿದ್ಯುತ್ ತಂತಿಯನ್ನು ತುಳಿದು ದಾರುಣ ಅಂತ್ಯ ಕಂಡಿದ್ದಾರೆ. ಬೆಂಗಳೂರು ಮೂಲದ ಮಹಿಳೆ ಮತ್ತು ಆಕೆಯ ಮಗು ಆಘಾತದಿಂದ ಸಾವನ್ನಪ್ಪಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 23 ವರ್ಷದ ಸೌಂದರ್ಯ ಮತ್ತು ಆಕೆಯ ಮಗಳು ಸುವಿಕ್ಸ್ಲಿಯಾ ತಮಿಳುನಾಡಿನಿಂದ ಬೆಂಗಳೂರಿಗೆ ಮನೆಗೆ ಮರಳುತ್ತಿದ್ದರು. ವೈಟ್ ಫೀಲ್ಡ್ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ಮುರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದಿದ್ದಾರೆ. ಕತ್ತಲಾಗಿದ್ದರಿಂದ ಮಹಿಳೆಗೆ ವಿದ್ಯುತ್ ತಂತಿ ಕಾಣಿಸಲಿಲ್ಲ ಎಂದು ತೀರ್ಮಾನಿಸಲಾಗಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾಟುಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಅಧಿಕಾರಿಗಳು ಮತ್ತು ಉದ್ಯೋಗಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಭಾರತಕ್ಕೆ ತೆರಳುತ್ತಿದ್ದ ಸರಕು ಸಾಗಣೆ ಹಡಗನ್ನು ಹೌತಿಗಳು ವಶಪಡಿಸಿಕೊಂಡಿದ್ದಾರೆ ಎಂದು ಇಸ್ರೇಲ್ ಹೇಳಿದೆ. ಭಾರತದ ಪೀಪವಾವ್ ಬಂದರಿನಿಂದ ಹೊರಡುವಾಗ ಹೌತಿಗಳು ಕೆಂಪು ಸಮುದ್ರದಲ್ಲಿ ಹಡಗನ್ನು ವಶಪಡಿಸಿಕೊಂಡರು. ಹಡಗಿನಲ್ಲಿ ಬಲ್ಗೇರಿಯಾ, ಫಿಲಿಪೈನ್ಸ್, ಮೆಕ್ಸಿಕೊ ಮತ್ತು ಉಕ್ರೇನ್ ಸೇರಿದಂತೆ ವಿವಿಧ ದೇಶಗಳ 25 ಸಿಬ್ಬಂದಿ ಇದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಸರಕು ಹಡಗನ್ನು ವಶಪಡಿಸಿಕೊಳ್ಳುವುದಾಗಿ ಘೋಷಿಸಿತು. ಬ್ರಿಟಿಷ್ ಒಡೆತನದ ಹಡಗು ಜಪಾನಿನ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಈ ಹಡಗು ಕೊನೆಯದಾಗಿ ಟರ್ಕಿಯ ಕೊರ್ಫೆಸ್ ಬಳಿ ಇತ್ತು ಎಂದು ವರದಿಯಾಗಿದೆ.

Read More

ವಿಶ್ವಕಪ್‌ –2023ಯನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿದೆ.  ಮಾರ್ನಸ್‌ ಲಾಬುಶೇನ್‌ ಹಾಗೂ ಟ್ರಾವಿಸ್‌ ಹೆಡ್‌ ಅವರ ಜೊತೆಯಾಟ ಆಸ್ಟ್ರೇಲಿಯ ಗೆಲುವಿಗೆ ಸಹಕಾರಿಯಾಯಿತು. ಕೇವಲ ನಾಲ್ಕು ವಿಕೆಟ್‌ ಗಳ ನಷ್ಟದೊಂದಿಗೆ ಆಸ್ಟ್ರೇಲಿಯಾ ಭರ್ಜರಿ ಮುನ್ನಡೆ ಸಾಧಿಸಿತು. ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಟೀಮ್‌ ಇಂಡಿಯಾ ಬೌಲರ್ಸ್‌ ಮೂರು ವಿಕೆಟ್‌ ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಮೊದಲು ಬ್ಯಾಟಿಂಗ್‌ ಮಾಡಿದ್ದ ಟೀಮ್‌ ಇಂಡಿಯಾ, 10 ವಿಕೆಟ್‌ ಗಳ ನಷ್ಟಕ್ಕೆ 241 ರನ್‌ ಗಳ ಗುರಿಯನ್ನು ಆಸ್ಟ್ರೇಲಿಯಾ ತಂಡಕ್ಕೆ ನೀಡಿತು. ಮಾರ್ನಸ್‌ ಲಾಬುಶೇನ್‌ ಹಾಗೂ ಟ್ರಾವಿಸ್‌ ಹೆಡ್‌ ಅವರ ಅಬ್ಬರದ ಬ್ಯಾಟಿಂಗ್‌ ಆಸ್ಟ್ರೇಲಿಯಾದ ಗೆಲುವಿಗೆ ಸಹಕಾರಿಯಾಯಿತು.

Read More

ಆಸ್ಟ್ರೇಲಿಯಾ ತಂಡಕ್ಕೆ  240ರನ್‌ ಗಳ ಸವಾಲು ನೀಡಿರುವ ಟೀಮ್‌ ಇಂಡಿಯಾ ಇದೀಗ 2 ವಿಕೆಟ್‌ ಗಳನ್ನು ಪಡೆದುಕೊಂಡಿದೆ. ಆಸ್ಟ್ರೇಲಿಯಾ 3 ವಿಕೆಟ್‌ ಗಳ ನಷ್ಟಕ್ಕೆ 47 ರನ್‌ ಗಳನ್ನು ಗಳಿಸಿದೆ. ಮೊಹಮ್ಮದ್‌ ಶಮಿ ಎಸೆದ 2ನೇ ಓವರ್‌ ನ 2ನೇ ಎಸೆತದಲ್ಲಿ ಸ್ಲಿಪ್‌ ನಲ್ಲಿದ್ದ ವಿರಾಟ್‌ ಕೊಹ್ಲಿಗೆ ಡೇವಿಡ್‌ ವಾರ್ನರ್‌ ಕ್ಯಾಚ್‌ ನೀಡಿದರು. 3 ಎಸೆತಗಳಲ್ಲಿ 7 ರನ್ ಪಡೆದುಕೊಂಡ ವಾರ್ನರ್‌ ಆಟ ಮುಗಿಸಿದರು. ಜಸ್‌ ಪ್ರೀಸ್‌ ಬುರ್ಮಾ ಎಸೆದ 5ನೇ ಓವರ್‌ ನ 3ನೇ ಎಸೆತದಲ್ಲಿ ವಿಕೆಟ್‌ ಕೀಪರ್‌ ಕೆ.ಎಲ್.ರಾಹುಲ್‌ ಗೆ ಕ್ಯಾಚ್‌ ನೀಡಿದ ಮಿಚೆಲ್‌ ಮಾರ್ಷ್ ಮೈದಾನದಿಂದ ಹೊರ ನಡೆದರು. ಮಿಚೆಲ್‌ ಮಾರ್ಷ್‌ 15 ಎಸೆತಗಳಲ್ಲಿ 15 ರನ್‌ ಪಡೆದುಕೊಂಡು ಆಟ ಮುಗಿಸಿದರು. ಜಸ್‌ ಪ್ರೀಸ್‌ ಬುರ್ಮಾ ಎಸೆದ 7ನೇ ಓವರ್‌ ನ ಕೊನೆಯ ಎಸೆತದಲ್ಲಿ ಎಲ್‌ ಬಿಡಬ್ಲ್ಯೂ ಆಗಿ ಸ್ಮಿತ್‌ ಮೈದಾನದಿಂದ ನಿರ್ಗಮಿಸಿದರು. ಸ್ಮಿತ್‌ ಕೇವಲ 4 ರನ್‌ ಗಳೊಂದಿಗೆ ಮೈದಾನದಿಂದ ತೆರಳಿದರು.

Read More

ನಾನು ನೀಲಿ ಚಿತ್ರಗಳನ್ನು ಪ್ರದರ್ಶನ ಮಾಡುತ್ತಿದ್ದೆ ಎಂದು ಆರೋಪ ಮಾಡಿರುವ ಕುಮಾರಣ್ಣ ಬುದ್ದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ನಾನು ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಟೂರಿಂಗ್ ಟಾಕೀಸ್‌ ಗಳನ್ನು ಇಟ್ಟಿದ್ದೇ. ಒಂದಲ್ಲ ಮೂರ್ನಾಲ್ಕು ಕಡೆ ಟೆಂಟ್‌ಗಳನ್ನು ಇಟ್ಟಿದ್ದೆ. ದೊಡ್ಡಆಲಹಳ್ಳಿ, ಹಾರೋಬೆಲೆ, ಕೋಡಿಹಳ್ಳಿಗಳಲ್ಲಿ ನಡೆಸುತ್ತಿದ್ದೆ. ಹುಣಸೇಹಳ್ಳಿಯಲ್ಲಿ ಈಗಲೂ ಟೆಂಟ್ ಇದೆ. ಈ ಊರುಗಳಿಗೆ ಹೋಗಿ ಮಾದ್ಯಮದವರೇ ಸಮೀಕ್ಷೆ ನಡೆಸಿ, ನಾನು ಯಾವ ಚಿತ್ರಗಳ ಪ್ರದರ್ಶನ ಮಾಡಿಸುತ್ತಿದ್ದೆ ಎಂದು ಜನರ ಬಳಿ ಕೇಳಿ.  ಕುಮಾರಸ್ವಾಮಿ ಅವರಿಗೆ ನೀವೆ ಉತ್ತರಿಸಿ ಎಂದರು. ಕುಮಾರಸ್ವಾಮಿ ಪದೇ, ಪದೇ ನಿಮ್ಮ ಮೇಲೆ ಸರಣಿ ಆರೋಪಗಳನ್ನು ಮಾಡುತ್ತಿರುವುದರ ಹಿಂದಿನ ಕಾರಣವೇನು ಎಂದು ಕೇಳಿದಾಗ “ಅವರು ದೊಡ್ಡವರು, ಏನೇ ಹೇಳಿದರು ನಾವು ವೈಯಕ್ತಿಕವಾಗಿ ತೆಗೆದುಕೊಳ್ಳುವುದಿಲ್ಲ. ಅವರು ಬಳಸುತ್ತಾರೆ ಎಂದು ನಾನು ಏಕವಚನ ಬಳಸುವುದಿಲ್ಲ  ಎಂದರು.

Read More

ತಿಪಟೂರು:  ತಾಲೂಕಿನ ಹೊನ್ನವಳ್ಳಿ ವಲಯದ ಹೊನ್ನವಳ್ಳಿ ಗ್ರಾಮದ  ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ‌ ಸಮುದಾಯ ಅಭಿವೃದ್ಧಿಯ ವಿಭಾಗದ ವತಿಯಿಂದ 1,50,000/ರೂ ಅನುದಾನದ ಡಿ ಡಿಯ ಮೊತ್ತವನ್ನು ಯೋಜನಾಧಿಕಾರಿಯವರು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸದಸ್ಯರಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಯೋಜನಾಧಿಕಾರಿಯವರು ಮಾರ್ಗದರ್ಶನ ನೀಡುತ್ತಾ, ಈಗಿನ ಅತ್ಯಾಧುನಿಕ ಆಧುನಿಕತೆಯಿಂದ ಜನ ಸಾಮಾನ್ಯರು ಪಾಶ್ಚಿಮಾತ್ಯ ಜೀವನ ಶೈಲಿಗೆ ಮಾರುಹೋಗಿದ್ದು ಭಕ್ತಿಯ ಶ್ರದ್ಧಾ ಕೇಂದ್ರಕ್ಕೆ  ಸಮಯ ನೀಡದೇ ಇರುವುದು ಅತ್ಯಂತ ಶೋಚನೀಯವಾಗಿದೆ. ಹಾಗಾಗಿ  ಶ್ರೀ ಕ್ಷೇತ್ರ ಧರ್ಮಸ್ಥಳ ಪೂಜ್ಯ  ಧರ್ಮಾಧಿಕಾರಿಗಳಾದ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಸನಾತನ ಶ್ರದ್ಧಾ ಕೇಂದ್ರಗಳನ್ನ ಜೀರ್ಣೋದ್ದಾರ  ಮಾಡುವ ಪುಣ್ಯದ ಕಾಯಕದಲ್ಲಿ ತೊಡಗಿದ್ದು ಮುಂದಿನ ಯುವ ಪೀಳಿಗಿಗೆ ಅತ್ಯಮೂಲ್ಯ  ಕೊಡುಗೆಗಳನ್ನು ನೀಡುತ್ತಿದ್ದಾರೆಂದರು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಪರಶಿವ ಮೂರ್ತಿ, ಸೇವಾ ಪ್ರತಿನಿಧಿಗಳು, ದೇವಸ್ಥಾನ ಜೀರ್ಣೋಧ್ಧಾರ ಸಮಿತಿಯ ಸದಸ್ಯರು, ಯೋಜನೆಯ ಫಲಾನುಭವಿಗಳು ಇದ್ದರು. ವರದಿ: ಆನಂದ್ ತಿಪ್ಟೂರ್

Read More

ತುಮಕೂರು: ದೇಶದ ಮೊದಲ ಮಹಿಳಾ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮ ದಿನಾಚರಣೆಯನ್ನು ವಿಭಿನ್ನವಾಗಿ ಆಚರಣೆ ಮಾಡಲಾಗಿದ್ದು ತುಮಕೂರಿನ ಇಂದಿರಾ ಕ್ಯಾಂಟೀನ್ನಲ್ಲಿ ಜನರಿಗೆ ಹೋಳಿಗೆ ಊಟ ಹಾಕಲಾಯಿತು. ದೇಶದ ಮೊದಲ ಮಹಿಳಾ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ಅವರು ಜನ್ಮ ದಿನವನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ರಾಜಣ್ಣ ಅವರ ನೇತೃತ್ವದಲ್ಲಿ ನಗರದ ಪಾಲಿಕೆ ಆವರಣದಲ್ಲಿರುವ ಇಂದಿರಾ ಕ್ಯಾಟೀನ್‌ನಲ್ಲಿ ಆಚರಿಸಲಾಯಿತು. ದಿ.ಇಂದಿರಾಗಾAಧಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ,ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರು,ಕಚೇರಿ ಕಾರ್ಯಕ್ರಮಕ್ಕೆ ಬದಲಾಗಿ,ಸಾವಿರಾರು ಬಡ ಜನರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಟೀನ್ ಬಳಿ ಕಾರ್ಯಕ್ರಮ ಆಯೋಜಿಸಿ,ಇಂದು ಊಟಕ್ಕೆ ಬರುವ ಎಲ್ಲರಿಗೂ ಹೊಳಿಗೆ ಊಟದ ವ್ಯವಸ್ಥೆ ಮಾಡಿ,ಕಾಂಗ್ರೆಸ್ ಪಕ್ಷ ಎಂದಿಗೂ ಬಡವರ ಪರ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದ್ದಾರೆ ಎಂದರು. ಮಹಿಳೆ ಎಂದಿಗೂ ಅಬಲೆಯಲ್ಲ.ಸಬಲೆ, ತೊಟ್ಟಿಲು ತೂಗುವ ಕೈ ದೇಶವನ್ನು ಆಳಬಲ್ಲದು ಎಂಬುದನ್ನು ಸುಮಾರು…

Read More

ಬೆಂಗಳೂರು : ಕೆ. ಆರ್. ಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಆರೋಪದಡಿ ಬಾಲಕ ಸೇರಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ್ದಕ್ಕಾಗಿ ಆತನ ಪೋಷಕರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಟಿಐ ಗೇಟ್ ಮುಖ್ಯರಸ್ತೆ ಹಾಗೂ ಕೆ. ಆರ್. ಪುರ ರೈಲ್ವೆ ನಿಲ್ದಾಣ ಬಳಿಯ ಕೆಳ ಸೇತುವೆ ರಸ್ತೆಯಲ್ಲಿ ಇಬ್ಬರು ಪ್ರತ್ಯೇಕವಾಗಿ ವೀಲೆ ಮಾಡುತ್ತಿದ್ದರು. ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆಯಲಾಯಿತು’ ಎಂದು ಪೊಲೀಸ್ ಮೂಲಗಳು ಹೇಳಿವೆ.

Read More