Subscribe to Updates
Get the latest creative news from FooBar about art, design and business.
- ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
Author: admin
ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ 2ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಮುಂಬರುವ ದಿನಗಳಲ್ಲಿಯೂ ಅರ್ಹ ಕ್ರೀಡಾಪಟುಗಳಿಗೆ ಮೀಸಲಾತಿ ಒದಗಿಸಿ, ಕ್ರೀಡಾ ಚಟುವಟಿಕೆಗಳನ್ನು ಮುಂದುವರಿಸಲು ಪ್ರೋತ್ಸಾಹಿಸಲಾಗುವುದು’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಆಡುಗೋಡಿಯ ನಗರ ಸಶಸ್ತ್ರ ಮೀಡಲು ಪಡೆಯ ಮೈದಾನದಲ್ಲಿ ಆಯೋಜಿಸಿದ್ದ ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದ ಅವರು, ಪಿಎಸ್ಐ ಹುದ್ದೆಗಳನ್ನ ಖಾಲಿ ಇಟ್ಟುಕೊಳ್ಳಲು ಆಗಲ್ಲ ಎಂದು ಹೇಳಿದರು.
ಯುಪಿ ಸರ್ಕಾರವು ಹಲಾಲ್ ಟ್ಯಾಗ್ ಮಾಡಿದ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ. ವಿವಿಧ ಉತ್ಪನ್ನಗಳಿಗೆ ಹಲಾಲ್ ಪ್ರಮಾಣಪತ್ರ ನೀಡಿದ್ದಕ್ಕಾಗಿ ಲಕ್ನೋದಲ್ಲಿ ಬಿಜೆಪಿ ಕಾರ್ಯಕರ್ತನ ದೂರಿನ ಮೇರೆಗೆ ಕಂಪನಿ ಮತ್ತು ಮೂರು ಸಂಘಟನೆಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದರ ನಂತರ ಹಲಾಲ್ ಅನ್ನು ನಿಷೇಧಿಸಲಾಯಿತು. ನಿಷೇಧ ತಕ್ಷಣದಿಂದಲೇ ಜಾರಿಗೆ ಬರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಹಲಾಲ್ ಪ್ರಮಾಣೀಕೃತ ಆಹಾರ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅದರಂತೆ, ಮಾಂಸ, ಡೈರಿ ಉತ್ಪನ್ನಗಳು, ಸಕ್ಕರೆ, ಬೇಕರಿ ಉತ್ಪನ್ನಗಳು ಇತ್ಯಾದಿಗಳನ್ನು ಹಲಾಲ್ ಟ್ಯಾಗ್ನೊಂದಿಗೆ ತಯಾರಿಸಬಾರದು ಅಥವಾ ಮಾರಾಟ ಮಾಡಬಾರದು ಎಂದಿದೆ. ಆಹಾರ ಪದಾರ್ಥಗಳು ಮತ್ತು ಸೌಂದರ್ಯವರ್ಧಕಗಳಿಗೆ ಹಲಾಲ್ ಪ್ರಮಾಣಪತ್ರ ನೀಡುವುದು ಧಾರ್ಮಿಕ ಭಾವನೆಗಳ ಶೋಷಣೆ ಮತ್ತು ವಿಶೇಷ ಅಜೆಂಡಾದ ಭಾಗವಾಗಿದೆ ಎಂದು ಪ್ರಕರಣ ದಾಖಲಿಸಿದ ನಂತರ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ
ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಮಹಿಳೆ ಮತ್ತು ಆಕೆಯ ಐದು ವರ್ಷದ ಮಗಳು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯೊಳಗೆ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೃತರನ್ನು ಅನಿತಾ ದೇವಿ (29) ಮತ್ತು ಅವರ ಪುತ್ರಿ ಸೋನಿ ಕುಮಾರಿ ಎಂದು ಗುರುತಿಸಲಾಗಿದೆ. ಬಳ್ಳಾಪುರ ಗ್ರಾಮದ ನಿವಾಸದಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ ಎಂದು ಬಕ್ಸರ್ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಕುಮಾರ್ ತಿಳಿಸಿದ್ದಾರೆ. ಘಟನೆ ನಡೆದಾಗ ಅನಿತಾ ಅವರ ಪತಿ ಇರಲಿಲ್ಲ. ಮೃತದೇಹಗಳನ್ನು ಮೊದಲು ಕಂಡವರು ಪುತ್ರರು. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ನಡೆದ ಸ್ಥಳದಿಂದ ವಶಪಡಿಸಿಕೊಂಡ ವಸ್ತುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಯಾರನ್ನೂ ಬಂಧಿಸಿಲ್ಲ ಎಂದು ಎಸ್ಪಿ ತಿಳಿಸಿದ್ದಾರೆ.
ರಾಜಸ್ಥಾನದ ಕಾಂಗ್ರೆಸ್ ಸರ್ಕಾರವನ್ನು ಪ್ರಧಾನಿ ಕಟುವಾಗಿ ಟೀಕಿಸಿದರು. ಭ್ರಷ್ಟಾಚಾರ ಮತ್ತು ಬಂಡಾಯದ ವಿಷಯದಲ್ಲಿ ಕಾಂಗ್ರೆಸ್ ರಾಜ್ಯವನ್ನು ಮೊದಲ ಸ್ಥಾನದಲ್ಲಿದೆ. ವಿಧಾನಸಭೆ ಚುನಾವಣೆ ಮುಗಿದ ಮೇಲೆ ಪಕ್ಷ ರಾಜ್ಯದಿಂದ ಕಣ್ಮರೆಯಾಗಲಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಭರತ್ಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ವ್ಯಂಗ್ಯವಾಡಿದ ಅವರು, ಜನರು ‘ಜಾದೂಗಾರ’ (ಜಾದೂಗಾರ) ಗೆ ಮತ ಹಾಕದಿರಲು ನಿರ್ಧರಿಸಿದ್ದಾರೆ ಎಂದು ಹೇಳಿದರು. ವೃತ್ತಿಪರ ಜಾದೂಗಾರನ ಮಗ, ಗೆಹ್ಲೋಟ್ ರಾಜಕೀಯಕ್ಕೆ ಪ್ರವೇಶಿಸುವ ಮೊದಲು ದೇಶಾದ್ಯಂತ ಮ್ಯಾಜಿಕ್ ಶೋಗಳನ್ನು ಪ್ರದರ್ಶಿಸಿದರು. ಒಂದೆಡೆ ಭಾರತ ವಿಶ್ವಗುರುವಾಗುತ್ತಿದೆ. ಮತ್ತೊಂದೆಡೆ, ಕಳೆದ ಐದು ವರ್ಷಗಳಲ್ಲಿ ರಾಜಸ್ಥಾನದಲ್ಲಿ ಏನಾಯಿತು ಎಂಬುದನ್ನು ನೀವು ನೋಡಿದ್ದೀರಿ. ಕಾಂಗ್ರೆಸ್ ಆಡಳಿತವು ರಾಜಸ್ಥಾನವನ್ನು ಭ್ರಷ್ಟಾಚಾರ, ಗಲಭೆಗಳು ಮತ್ತು ಅಪರಾಧಗಳಲ್ಲಿ ನಾಯಕನನ್ನಾಗಿ ಮಾಡಿದೆ. ಅದಕ್ಕಾಗಿಯೇ ರಾಜಸ್ಥಾನ ಹೇಳುತ್ತಿದೆ – ಮಾಂತ್ರಿಕ ಜೀ, ನಿಮಗೆ ಯಾವುದೇ ಮತಗಳು ಬರುವುದಿಲ್ಲ’ – ಪ್ರಧಾನಿ ಹೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲೆಲ್ಲಾ ಭಯೋತ್ಪಾದಕರು, ಅಪರಾಧಿಗಳು ಮತ್ತು ಗಲಭೆಕೋರರನ್ನು ಹೊರಹಾಕುತ್ತದೆ. ಕಾಂಗ್ರೆಸ್ ಗೆ…
ತಮಿಳು ನಟ ಧನುಷ್ ಪುತ್ರನಿಗೆ ಚೆನ್ನೈ ಪೊಲೀಸರು ದಂಡ ವಿಧಿಸಿದ್ದಾರೆ. ಹೆಲ್ಮೆಟ್ ಇಲ್ಲದೇ ಪರವಾನಿಗೆ ಇಲ್ಲದೇ ಬೈಕ್ ಚಲಾಯಿಸಿದ್ದಕ್ಕೆ 1000 ರೂ. ಮಗ ರಜನಿಕಾಂತ್ ಮನೆಯಿಂದ ಧನುಷ್ ಮನೆಗೆ ಹೋಗುತ್ತಿದ್ದ. 17ರ ಹರೆಯದ ಯಾತ್ರರಾಜ್ ಕಾರು ಚಲಾಯಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದನ್ನು ಆಧರಿಸಿ ಪೊಲೀಸರು ಮಗನಿಗೆ ದಂಡ ವಿಧಿಸಿದ್ದಾರೆ. ಧನುಷ್ ಮತ್ತು ರಜನಿಕಾಂತ್ ಪುತ್ರಿ ಐಶ್ವರ್ಯ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಅವರು ರಜನಿ ಮನೆಯಿಂದ ಧನುಷ್ ಮನೆಗೆ ಹೋಗುತ್ತಿದ್ದರು. ಈ ದೃಶ್ಯಗಳು ಹರಿದಾಡಿದ್ದವು.
ರೈಲ್ವೆ ಹಳಿಗಳ ಪಕ್ಕದಲ್ಲಿ ಅಲ್ಲಲ್ಲಿ ಕಂಡುಬರುವ ಅಲ್ಯೂಮಿನಿಯಂ ಬಾಕ್ಸ್ ಅನ್ನು ಆಕ್ಸಲ್ ಕೌಂಟರ್ ಬಾಕ್ಸ್ ಎಂದು ಕರೆಯುತ್ತಾರೆ. ಈ ಅಲ್ಯೂಮಿನಿಯಂ ಬಾಕ್ಸ್ ರೈಲಿನ ಕೋಚ್ ಗಳ ಸಂಖ್ಯೆಯನ್ನು ಎಣಿಸುತ್ತದೆ. ಹಾಗೆಯೇ ರೈಲು ಯಾವ ದಿಕ್ಕಿನಲ್ಲಿ ಚಲಿಸುತ್ತದೆ? ಅದು ಎಷ್ಟು ವೇಗವಾಗಿ ಚಲಿಸುತ್ತಿದೆ? ಮುಂತಾದ ವಿವರಗಳನ್ನು ಮೌಲ್ಯಮಾಪನ ಮಾಡುತ್ತದೆ. ಅಪಘಾತಗಳನ್ನು ತಡೆಗಟ್ಟಲು ಈ ಆಕ್ಸಲ್ ಕೌಂಟರ್ ಬಾಕ್ಸ್ ಗಳನ್ನು ಬಳಸಲಾಗುತ್ತದೆ. ಈ ಪೆಟ್ಟಿಗೆಗಳು ಪ್ರತಿ ಮೂರರಿಂದ ಐದು ಕಿ.ಮೀ. ಅಂತರದಲ್ಲಿ ಸ್ಥಾಪನೆಗೊಂಡಿರುತ್ತವೆ. ಈ ಪೆಟ್ಟಿಗೆಗಳು ರೈಲ್ವೆ ಹಳಿಗಳಿಗೆ ಸಂಪರ್ಕ ಹೊಂದಿವೆ.
ಮಧುಗಿರಿ: ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ದೇಶವು ಜಯಶೀಲರಾಗುವಂತೆ ಬೆಂಬಲಿಸಿ ಕ್ರೀಡಾಭಿಮಾನಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬ್ಯಾಕ್ ಜಾಥಾವನ್ನು ಹಮ್ಮಿಕೊಂಡಿದ್ದರು. ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣ ದಲ್ಲಿ ರಾಷ್ಟ್ರ ಗೀತೆಯೊಂದಿಗೆ ಆರಂಭವಾದ ಜಾಥವು ಪಟ್ಟಣದ ಅಂಬೇಡ್ಕರ್ ವೃತ್ತ , ದಂಡೂರು ಬಾಗಿಲು ರಸ್ತೆ , ಹೈಸ್ಕೂಲ್ ರಸ್ತೆ , ಖಾಸಗಿ ಬಸ್ ನಿಲ್ದಾಣಗಳಲ್ಲಿ ಭಾರತ ಗೆಲ್ಲಲಿ ಎಂಬ ಘೋಷ ವಾಕ್ಯಗಳೊಂದಿಗೆ ಕ್ರೀಡಾಭಿಮಾನಿಗಳು ಜಾಥದಲ್ಲಿ ಭಾಗವಹಿಸಿದ್ದರು. ಪುರಸಭಾ ಸದಸ್ಯರಾದ ಚಂದ್ರಶೇಖರ್ ಬಾಬು , ಎಂ ಆರ್ ಜಗನ್ನಾಥ್ , ರುದ್ರಾರಾಧ್ಯ , ಜಗದೀಶ್ , ಜಯಣ್ಣ , ಆನಂದ ಕೃಷ್ಣ , ನಾರಾಯಣರಾಜು , ಅನಂತನಾರಾಯಣ ಬಾಬು , ಪ್ರದೀಪ್ , ಎಸ್ ಬಿ ಟಿ ರಾಮು , ಸಿದ್ದಾಪುರ ಕೃಷ್ಣಮೂರ್ತಿ ಹಾಗೂ ಮತ್ತಿತರರು ಇದ್ದರು.
ಸ್ಪೀಕರ್ ಸ್ಥಾನದ ಬಗ್ಗೆ ಸಚಿವ ಜಮೀರ್ ಅಹ್ಮದ್ ಹೇಳಿಕೆ ವಿಚಾರ ಸಂಬಂಧ ಮಂಗಳೂರಿನಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯ, ಜಾತಿ ಧರ್ಮದಿಂದ ಸ್ಪೀಕರ್ ಸ್ಥಾನ ನೋಡುವಂತಿಲ್ಲ. ನನಗೆ ಗೌರವ ಕೊಡುವುದು ಖಾದರ್ ಗೌರವ ಕೊಟ್ಟಂತೆ ಅಲ್ಲ. ಸಂವಿಧಾನ ಪೀಠ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ ಸಿಕ್ಕಂತಹ ಗೌರವ. ಯಾರ ಹೇಳಿಕೆಗೂ ನಾನು ಪ್ರತಿಕ್ರಿಯೆ ಕೊಡಲ್ಲ ಎಂದರು. ಸಂವಿಧಾನಕ್ಕೆ ಅನುಗುಣವಾಗಿ ನಾನು ಕೆಲಸ ಮಾಡುತ್ತೇನೆ. ನಾನು ಎಲ್ಲರಿಗೂ ಗೌರವ ಕೊಟ್ಟು ಗೌರವ ಪಡೆಯುತ್ತೇನೆ. ಜಾತಿ, ಧರ್ಮ ಬಿಟ್ಟು ಸ್ಪೀಕರ್ ಸ್ಥಾನ ನೋಡಬೇಕು ಎಂದರು.
ಲಿಸ್ಟ್ ಬಗ್ಗೆ ಯತೀಂದ್ರ ಮಾತನಾಡಿರುವ ವಿಡಿಯೋ ವೈರಲ್ ವಿಚಾರ ಸಂಬಂಧ ಯತೀಂದ್ರ ಅವರು ಸ್ಪಷ್ಟನೆ ನೀಡಿದ್ದಾರೆ. ಸಿಎಸ್ ಆರ್ ಫಂಡ್ ಬಗ್ಗೆ ನಾನು ಅವತ್ತು ಮಾತನಾಡಿದ್ದು ಎಂದು ಮೈಸೂರಿನಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಒಬ್ಬ ಸಿಎಂ ಮೇಲೆ ಆರೋಪ ಮಾಡಬೇಕಾದ್ರೆ ಸಾಕ್ಷ್ಯ ಇಟ್ಟುಕೊಳ್ಳಬೇಕು. ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ. ವಿವೇಕಾನಂದ ಯಾರು ಅಂತಾ ನನಗೆ ಗೊತ್ತಿಲ್ಲ ಎಂದರು. ಇನ್ಸ್ಪೆಕ್ಟರ್ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ. ನಮ್ಮ ಕ್ಷೇತ್ರದಲ್ಲಿ ವಿವೇಕಾನಂದ ಅಂತಾ ಬಿಇಒ ಕೂಡ ಇದ್ದಾರೆ. ವಿಪಕ್ಷಗಳು ಹತಾಶರಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿವೆ ಎಂದರು. ಇವರು ಅಧಿಕಾರದಲ್ಲಿದ್ದರು, ಸಿಎಂ ಆಗಿಯೂ ಕೆಲಸ ಮಾಡಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ದಂಧೆಯನ್ನೇ ಮಾಡುತ್ತಿದ್ರಾ? ಭ್ರಷ್ಟಾಚಾರ, ದಂಧೆ ಆಗ್ತಿದೆ ಎಂದು ಸುಳ್ಳು ಆರೋಪ ಮಾಡಬಾರದು ಎಂದರು.
ನವೆಂಬರ್ 24ರಿಂದ ನ.26ರವರೆಗೆ ಎಸ್ಕಾಂ ಆನ್ಲೈನ್ ಸೇವೆ ಸ್ಥಗಿತಗೊಳ್ಳಲಿದೆ. ನ.24ರಂದು ಮಧ್ಯಾಹ್ನ 12ರಿಂದ ನ.26ರ ಬೆಳಗ್ಗೆ 11.59ರವರೆಗೆ ಬಂದ್ ಆಗಿರಲಿದೆ. ರಾಜ್ಯದ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ಲ್ ಗೆ ಸಂಬಂಧಿಸಿದಂತೆ ತುರ್ತು ತಾಂತ್ರಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆ 2 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತಗೊಳಿಸಲಾಗಿದೆ. ವಿವಿಧ ಪೋರ್ಟಲ್ ಗಳಲ್ಲಿರುವ ಡಾಟಾವನ್ನು ನೂತನ ಪೋರ್ಟಲ್ ಗೆ ವರ್ಗಾವಣೆ ಮಾಡುವ ಕೆಲಸ ನಡೆಯುವ ಹಿನ್ನೆಲೆ ಆನ್ ಲೈನ್ ಸೇವೆ ಸ್ಥಗಿತಗೊಳಿಸಲಾಗಿದೆ. 2 ದಿನ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ಸೇವೆ ಇರಲ್ಲ.