Subscribe to Updates
Get the latest creative news from FooBar about art, design and business.
- ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!
- ಡಕಾಯಿತಿಗೆ ಸಂಚು: ಐವರ ಬಂಧನ
- ಪದವೀಧರರ ಮತದಾರರ ಕರಡು ಪಟ್ಟಿ ಪ್ರಕಟ
- ನ.30 ರಂದು ಅಮೋಘ ಸಂಗೀತ ಕಛೇರಿ
- ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ: ಗ್ರಾಮಸ್ಥರಿಂದ ವಿರೋಧ
- ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ
- ನವೆಂಬರ್ ಕ್ರಾಂತಿ, ಡಿಸೆಂಬರ್ ಶಾಂತಿ, ಜನವರಿ ವಾಂತಿ: ಸರ್ಕಾರದ ವಿರುದ್ಧ ಶಾಸಕ ಬಿ.ಸುರೇಶ್ ಗೌಡ ಕಿಡಿ
- ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು
Author: admin
ವಾಮಾಚಾರ ನಡೆಸಿ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಪತ್ನಿ ವಿರುದ್ಧ ಉದ್ಯಮಿಯೊಬ್ಬರು ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಉದ್ಯಮಿ ದೇವ್ ಕುಮಾರ್(39) ಅವರು ನೀಡಿದ ದೂರಿನ ಮೇರೆಗೆ ಪತ್ನಿ ಎಂ. ಪಿ. ಐಶ್ವರ್ಯ, ಅತ್ತೆ ಮಹಾಲಕ್ಷ್ಮೀ ಮತ್ತು ಮಾವ ಮಂಜುನಾಥ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಐಶ್ವರ್ಯ ಅವರು ವೈದ್ಯೆಯಾಗಿ ಕೆಲಸ ಮಾಡುತ್ತಿದ್ದಾರೆ. ‘ಪತ್ನಿ ಹಾಗೂ ಅವರ ಕುಟುಂಬದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದು ಉದ್ಯಮಿ ಮನವಿ ಮಾಡಿದ್ದಾರೆ.
ಬಾಗಲಗುಂಟೆ ಹಾಗೂ ಸಂಜಯನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರತ್ಯೇಕ ಕಳ್ಳತನ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆಯ ಶೆಟ್ಟಿಹಳ್ಳಿಯಲ್ಲಿರುವ ಮನೆಯಲ್ಲಿ ಕಳ್ಳತನ ಮಾಡಿದ್ದ ರವಿಕುಮಾರ್, ಇಮ್ರಾನ್ ಹಾಗೂ ಜೈಕುಮಾರ್ ನನ್ನು ಬಂಧಿಸಲಾಗಿದೆ. 7 6.45 ಲಕ್ಷ ಮೌಲ್ಯದ 129 ಗ್ರಾಂ ತೂಕದ ಚಿನ್ನಾಭರಣ, 1.08 ಲಕ್ಷ ನಗದು ಹಾಗೂ 2 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕುಟುಂಬಸ್ಥರೆಲ್ಲರು ಧರ್ಮಸ್ಥಳಕ್ಕೆ ತೆರಳಿದ್ದಾಗ ಮನೆಯಲ್ಲಿ ಕಳ್ಳತನ ಮಾಡಿದ್ದರು.
ತುರುವೇಕೆರೆ: ಕ್ಷೇತ್ರಕ್ಕೆ ಮಾಜಿ ಶಾಸಕರಾದ ಜಯರಾಮಣ್ಣ ನವರು ನೀರಿನ ಹೋರಾಟಕ್ಕೆ ಶಾಶ್ವತ ಪರಿಹಾರವನ್ನು ನೀಡಿದ್ದಾರೆ ಹಾಗೂ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುವಂತ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದಾರೆ ಯೋಗೀಶ್ ರವರೇ ಮೊದಲು ಕೀಳು ಮಟ್ಟದ ರಾಜಕಾರಣ ಬಿಡಿ ನಾಲಿಗೆ ಬಿಗಿ ಹಿಡಿದು ಮಾತನಾಡಿ ಯುವ ಮೋರ್ಚಾದ ಅಧ್ಯಕ್ಷ ಗೌರೀಶ್ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಘೋಷ್ಠಿಯಲ್ಲಿ ಮಾತನಾಡಿದ ತಾಲೂಕು ಯುವ ಮೋರ್ಚಾದ ಅಧ್ಯಕ್ಷ ಗೌರೀಶ್ ಅವರು, ಜೆಡಿಎಸ್ ಪಕ್ಷದ ವಕ್ತಾರಾದ ವೆಂಕಟಪುರ ಯೋಗೇಶ್ ಮಾಜಿ ಶಾಸಕರಾದ ಮಸಾಲೆ ಜಯರಾಮ್ ಅವರು ಕಮಿಷನ್ ದಂಧೆಗಾಗಿ ಕೆಲಸ ಮಾಡಿದ್ದಾರೆ ಎಂದು ನೀಡಿರುವ ಹೇಳಿಕೆಯನ್ನ ಖಂಡಿಸಿದರು. ಅವರಿಗೂ ಗೊತ್ತಿದೆ ಮತ್ತೆ ಹೇಳುತ್ತಾರೆ ತೂಬುಗಳನ್ನು ಹೊಡೆದು ನೀರು ಬಿಡುತ್ತೇವೆ ಅಷ್ಟು ಪೌರುಷ ನಮಗಿದೆ ಎಂದು ತೂಬನ್ನು ಹೊಡೆದು ಹಾಕಿ ನೀರು ಬಿಡುವ ಅವಶ್ಯಕತೆ ಇಲ್ಲ, ಇವತ್ತು ದಂಡಿನಶಿವರ ಹೋಬಳಿಯ ಕೆರೆಗಳಿಗೆ ನೀರು ಹರಿಸುವ ಡಿ 10 ತೂಬು ಆಗಿರಬಹುದು ನಮ್ಮ ಮಾಜಿ ಸಣ್ಣ ನೀರಾವರಿಯ…
ಮಧುಗಿರಿ: ಕೇಂದ್ರವು ಬಡವರ ವಿರೋಧಿ ಮತ್ತು ಬಂಡವಾಳಶಾಹಿಗಳ ಪರವಾಗಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಒಂದೇ ಒಂದು ಮತವೂ ಹೋಗದಂತೆ ನೋಡಿಕೊಳ್ಳಬೇಕು ಎಂದು ಬುಧವಾರ ಜನರಿಗೆ ಕರೆ ನೀಡಿದರು. ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ನೀಡಲು ಕರ್ನಾಟಕಕ್ಕೆ ಅಕ್ಕಿ ನೀಡುವುದನ್ನು ನಿರಾಕರಿಸಿದ ಬಿಜೆಪಿಯನ್ನು ನೀಚ ಎಂದು ಕರೆದ ಅವರು, ಕೇಂದ್ರದ ಆಡಳಿತ ಪಕ್ಷವೂ ಮಾನವ ವಿರೋಧಿಯಾಗಿದೆ ಎಂದು ಹೇಳಿದರು. ಕ್ಷೀರ ಭಾಗ್ಯ ಯೋಜನೆಗೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಹಿಂದಿನ ಅವಧಿಯಲ್ಲಿ ಸಿಎಂ ಆಗಿದ್ದಾಗ ಏಳು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದೆ. ಆದರೆ, ಹಿಂದಿನ ಬಿಜೆಪಿ ಸರ್ಕಾರ ಅದನ್ನು ನಾಲ್ಕು ಕೆ.ಜಿ ಮತ್ತು ಐದು ಕೆ.ಜಿಗೆ ಇಳಿಸಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಐದು ಕೆ.ಜಿ ನೀಡುವುದಾಗಿ ಭರವಸೆ ನೀಡಿದ್ದೆ…
ಮಧುಗಿರಿ: ಕ್ಷೀರ ಭಾಗ್ಯ ಯೋಜನೆಯು ಪೌಷ್ಟಿಕಾಂಶಗಳ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ವರದಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. 10 ವರ್ಷಗಳ ಹಿಂದೆ ನಮ್ಮ ಸರ್ಕಾರ ಪ್ರಾರಂಭಿಸಿದ್ದ ಈ ಯೋಜನೆಯು ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಶೇ.80ರಷ್ಟು ಶಾಲಾ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಪ್ರತಿ ಮಕ್ಕಳಿಗೆ 150 ಮಿಲಿ ಲೀ. ನಷ್ಟು ಹಾಲನ್ನು ವಿತರಿಸಲಾಗುತ್ತಿದೆ ಎಂದ ಅವರು, ನಮ್ಮ ಸರ್ಕಾರವು ನುಡಿದಂತೆ ನಡೆಯುತ್ತಿದ್ದು, ಸಂಕಷ್ಟದಲ್ಲಿದ್ದ ಹೈನುಗಾರಿಕೆಗೆ ಪ್ರೋತ್ಸಾಹ ನೀಡುತ್ತಿದೆ ನಷ್ಟದಲ್ಲಿದ್ದ ಒಕ್ಕೂಟಗಳಿಗೆ ಚೈತನ್ಯ ತುಂಬಿದೆ ಎಂದರು. ಎತ್ತಿನಹೊಳೆ ಯೋಜನೆ ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಪ್ರಾರಂಭಿಸಿದ್ದು, ಶೀಘ್ರದಲ್ಲೇ ಅದನ್ನು ಮುಕ್ತಾಯಗೊಳಿಸಿ ಈ ಭಾಗದ ಕೆರೆಗಳಿಗೆ ನೀರು ಹರಿಸುವುದಾಗಿ ತಿಳಿಸಿದ ಅವರು ಕೂಡ್ಲಿಗಿಯಿಂದ ಪಾವಗಡಕ್ಕೆ ಕುಡಿಯುವ ನೀರು ಒದಗಿಸುವ 2300 ಕೋಟಿ ರೂ. ಗಳ ಬೃಹತ್ ಯೋಜನೆಯನ್ನು ರೂಪಿಸಲಾಗಿದ್ದು, ಶೀಘ್ರದಲ್ಲಿ ಅನುಷ್ಠಾನಗೊಳಿಸುವುದಾಗಿ ತಿಳಿಸಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ…
ತಿಪಟೂರು: ಇಂದಿನ ಸರಕಾರ ಕೇವಲ ಡಿಗ್ರಿ ಪಾಸಾದವರನ್ನು ಪಠ್ಯಕ್ರಮ ಪರಿಷ್ಕರಣೆಗೆ ನೇಮಿಸಿದ್ದು, ಬಸವಣ್ಣನವರ ನೀಡಿದ ವಚನ ಸಾಹಿತ್ಯ ಮತ್ತು ಚಿಂತನೆಗಳನ್ನು ಬದಲಾಯಿಸಿದ್ದರು ಇದರ ಶ್ರೇಯಸ್ಸು ಆರ್ ಎಸ್ ಎಸ್ ನವರಿಗೆ ಸಲ್ಲಿಸಬೇಕು ಎಂದು ಕಾಂಗ್ರೆಸ್ ಶಾಸಕ ಕೆ ಷಡಕ್ಷರಿ ಹೇಳಿದರು. ನಗರದ ಒಕ್ಕಲಿಗರ ಭವನದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿಗೆ ಮಾದರಿಯಾಗಿ ಇರಬೇಕಾದ ಬಿಇಓ ಕಚೇರಿ ಸೋರುತ್ತಿದ್ದು, ಎಲ್ಲಾ ರೀತಿಯ ಮೂಲ ಸೌಕರ್ಯ ಉಳ್ಳ ಕಟ್ಟಡ ನಿರ್ಮಿಸಲಾಗುವುದು. ತಿಪಟೂರನ್ನು ಜಿಲ್ಲೆ ಮಾಡುವ ನಿಟ್ಟಿನಲ್ಲಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗಿದೆ ಎಂದು ಹೇಳಿದರು. ನಾನು ಸಚಿವ ರಾಜಣ್ಣನವರನ್ನು ಕೇಳಿದೆ, ನಿಮಗೆ ಮಂತ್ರಿಗಿರಿ ಬೇಕೆಂದರೆ ತಿಪಟೂರನ್ನು ಜಿಲ್ಲೆಯನ್ನಾಗಿ ಮಾಡಿ. ಇಲ್ಲ ಮಂತ್ರಿ ಗಿರಿ ಬಿಟ್ಟು ಕೊಡಲಿ. ನನಗೆ ಮಂತ್ರಿ ಗಿರಿ ಕೊಡದಿದ್ದರೂ ಪರವಾಗಿಲ್ಲ, ತಿಪಟೂರನ್ನು ಜಿಲ್ಲೆಯನ್ನಾಗಿ ಮಾಡಲಿ ಎಂದರು.…
ಬೆಂಗಳೂರು: ಇವರಿಗೆ ಭಾರತ ಎಂದು ಕರೆಯುವುದು ಅವಮಾನ ಈ ಮೂಲಕ ಇವರು ದೇಶದಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಹುಟ್ಟು ಹಾಕಿರುವ ದೇಶದ ಹೆಸರು ಬದಲಾವಣೆಯ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಅವರು, ಸಿಎಂ ಸೇರಿದಂತೆ ಇತರರು ಹೇಳಿಕೆಗಳನ್ನು ಕೊಟ್ಟಿದ್ದಾರೆ, ಪ್ರಧಾನಿಯವ್ರು ಬಂದರೆ ಭಾರತದ ಪ್ರಧಾನಿಗಳು ಬಂದರು ಎನ್ನುತ್ತೇವೆ. ಭಾರತದ ರಾಷ್ಟ್ರಪತಿಗಳು ಬಂದರು ಎನ್ನುತ್ತೇವೆ. ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುತ್ತಿದ್ದಾರೆ. ಇವರು ಎಲ್ಲವನ್ನೂ ಚುನಾವಣೆ ದೃಷ್ಟಿಯಿಂದ ಅಳೆಯುತ್ತಿದ್ದಾರೆ ಎಂದು ಅವರು ಹೇಳಿದರು. ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಖಂಡನೀಯ: ಇದೇ 8 ರಂದು ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ರೈತರ ಪರ ಹೋರಾಟ ನಡೆಯಲಿದೆ. ನಮ್ಮ ಎಲ್ಲ ಹಿರಿಯ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ. ಜಿಲ್ಲಾ, ಮಂಡಲ ಮಟ್ಟದಲ್ಲೂ ಹೋರಾಟ ನಡೆಸುತ್ತೇವೆ. ನುಡಿದಂತೆ ನಡೆದಿದ್ದೇವೆ ಎಂದು ಇವರು ಸುಳ್ಳು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ.ಈ ಸುಳ್ಳು ಪ್ರಚಾರ ಮೂಲಕ ಲೋಕಸಭೆ ಚುನಾವಣೆ ಗೆಲ್ಲುವ ಉದ್ದೇಶ ಇವರದ್ದಾಗಿದೆ.ಇದು ನುಡಿದಂತೆ…
ಹೆಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಕ್ಲಾಸಿಕ್ ಲಿಟಲ್ ಬರ್ಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಶ್ರೀ ಕೃಷ್ಣ ಮೂರ್ತಿಗೆ ಪುಷ್ಪಾರ್ಚನೆಯನ್ನು ಮಾಡಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ನರಸಿಂಹರಾಜ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಚಿಣ್ಣರಿಗೆ ಕೃಷ್ಣನ ವೇಷಧರಿಸಿ ಪೋಷಕರು ಮಕ್ಕಳು ಮತ್ತು ಶಿಕ್ಷಕರು ಸಂಭ್ರಮಿಸಿದರು. ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ದೀಪಶ್ರೀ, ಸಹಶಿಕ್ಷಕರಾದ ಅಪ್ಸನಾ, ದೀಪಾಶ್ರೀ ಕೆ.ಎನ್., ಸೌಮ್ಯ, ರಂಜಿತ, ಆರತಿ ಮಕ್ಕಳು ಪೋಷಕರು ಹಾಜರಿದ್ದರು. ವರದಿ: ಮಲಾರ ಮಹದೇವಸ್ವಾಮಿ
ಏಕದಿನ ವಿಶ್ವಕಪ್ ಗೆ ಭಾರತ ತಂಡವನ್ನು ಪ್ರಕಟಿಸುವ ವೇಳೆ ನಾಯಕ ರೋಹಿತ್ ಶರ್ಮಾ ಪತ್ರಕರ್ತನ ಮೇಲೆ ಕಿಚಾಯಿಸಿದ್ದಾರೆ. ಭಾರತದ ವಿಶ್ವಕಪ್ ಪಂದ್ಯಗಳ ಪ್ರಚಾರದ ಬಗ್ಗೆ ಕೇಳಿದ ಪ್ರಶ್ನೆಯಿಂದ ರೋಹಿತ್ ಕೆರಳಿದರು. ಅಂತಹ ಪ್ರಶ್ನೆಗಳನ್ನು ಕೇಳಬಾರದು ಮತ್ತು ಉತ್ತರಿಸುವುದಿಲ್ಲ ಎಂಬುದು ಹಿಟ್ ಮ್ಯಾನ್ ನ ಉತ್ತರವಾಗಿತ್ತು. ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಸುದ್ದಿಗೋಷ್ಠಿಯಲ್ಲಿ ಭಾರತ ತಂಡವನ್ನು ಘೋಷಿಸಿದರು. ಪ್ರತಿ ಬಾರಿ ಭಾರತ ವಿಶ್ವಕಪ್ ಆಡುವಾಗ ಪ್ರಚಾರ ಮತ್ತು ಟೀಕೆಗಳ ಬಗ್ಗೆ ವರದಿಗಾರ ರೋಹಿತ್ ಅವರನ್ನು ಕೇಳಿದರು. “ಮೈದಾನದ ಹೊರಗೆ ಜನರು ಏನು ಹೇಳುತ್ತಾರೆ ಮತ್ತು ವಿಶ್ವಕಪ್ ಮತ್ತು ಏಷ್ಯಾಕಪ್ ನಂತಹ ದೊಡ್ಡ ಪಂದ್ಯಾವಳಿಗಳಿಗೆ ಮೊದಲು ಭಾರತದ ಪಂದ್ಯಗಳು ಪಡೆಯುವ ಬೃಹತ್ ಬಿಲ್ಡ್ಅಪ್ಗೆ ಆಟಗಾರರು ಗಮನ ಕೊಡುವುದಿಲ್ಲ ಎಂದು ರೋಹಿತ್ ಉತ್ತರಿಸಿದರು. ಈ ಹಿಂದೆಯೂ ಹಲವು ಬಾರಿ ಹೇಳಿದ್ದೇನೆ. ನಾವು ಹೊರಗಿನ ಮಾತನ್ನು ಆಡುವುದಿಲ್ಲ. ಜನರ ಮಾತು ಕೇಳುವುದಲ್ಲ ನಮ್ಮ ಕೆಲಸ. ಪ್ರಚಾರದ ಬಗ್ಗೆ ಏನು? ಎಲ್ಲಾ ಆಟಗಾರರು…
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಶರ್ಮಾ ಅವರು ‘ಭಾರತ’ದ ಬಗ್ಗೆ ಕಾಂಗ್ರೆಸ್ ಬಲವಾದ ದ್ವೇಷವನ್ನು ಹೊಂದಿದೆ. ಈಗ ಅವರ ಕಾಳಜಿ ನಿಜವಾಗಿದೆ ಎಂದು ತಿರುಗುತ್ತದೆ. ಭಾರತವನ್ನು ಸೋಲಿಸುವ ಉದ್ದೇಶದಿಂದ ವಿಪಕ್ಷಗಳ ಒಕ್ಕೂಟವು ಉದ್ದೇಶಪೂರ್ವಕವಾಗಿ ‘ಇಂಡಿಯಾ’ ಹೆಸರನ್ನು ಆಯ್ಕೆ ಮಾಡಿದೆ ಎಂದು ಶರ್ಮಾ ಆರೋಪಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರ ‘X’ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಹಿಮಂತ ಶರ್ಮಾ ಅವರ ಆರೋಪ. “ಅಂದರೆ ಹರಿದಾಡುತ್ತಿರುವ ಸುದ್ದಿ ನಿಜ. ಈಗ, ಸಂವಿಧಾನದ 1 ನೇ ವಿಧಿ ಹೀಗಿದೆ: ‘ಭಾರತವಾಗಿದ್ದ ಭಾರತವು ರಾಜ್ಯಗಳ ಒಕ್ಕೂಟವಾಗಲಿದೆ’, ಆದರೆ ಈಗ ಈ ‘ರಾಜ್ಯಗಳ ಒಕ್ಕೂಟ’ ಕೂಡ ದಾಳಿಗೆ ಒಳಗಾಗಿದೆ” – ಇದು ಜೈರಾಮ್ ರಮೇಶ್ ಅವರ ಟ್ವೀಟ್. ರಾಷ್ಟ್ರಪತಿ ಭವನದಿಂದ ಜಿ20 ಔತಣಕೂಟಕ್ಕೆ ಕಳುಹಿಸಲಾದ ಆಮಂತ್ರಣದಲ್ಲಿ ‘ಭಾರತದ ರಾಷ್ಟ್ರಪತಿ’ ಬದಲಿಗೆ ‘ಭಾರತದ ಅಧ್ಯಕ್ಷ’ ಎಂದು ಬರೆಯಲಾಗಿದೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ದೇಶದ ಹೆಸರನ್ನು ‘ಭಾರತ’ದಿಂದ ‘ಭಾರತ್’ ಎಂದು ಬದಲಾಯಿಸುವ ಚಿಂತನೆ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.