Subscribe to Updates
Get the latest creative news from FooBar about art, design and business.
- ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ: ಗ್ರಾಮಸ್ಥರಿಂದ ವಿರೋಧ
- ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ
- ನವೆಂಬರ್ ಕ್ರಾಂತಿ, ಡಿಸೆಂಬರ್ ಶಾಂತಿ, ಜನವರಿ ವಾಂತಿ: ಸರ್ಕಾರದ ವಿರುದ್ಧ ಶಾಸಕ ಬಿ.ಸುರೇಶ್ ಗೌಡ ಕಿಡಿ
- ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು
- ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ
- ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ
- ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ
- ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ
Author: admin
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2023ಕ್ಕೆ ಇಡೀ ಮೈಸೂರು ಸಜ್ಜಾಗಿದೆ. ಪೊಲೀಸ್ ಭದ್ರತೆಯಲ್ಲಿ ದೇವರಾಜ ಮೊಹಲ್ಲಾದಲ್ಲಿರುವ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ , ಮೈಸೂರು ದಸರಾ ಗಜಪಡೆಗೆ ತೂಕ ಪರೀಕ್ಷೆ ಮಾಡಲಾಗಿದೆ. ಕ್ಯಾಪ್ಟನ್ ಅಭಿಮನ್ಯು 5,160 ಕೆಜಿ, ವಿಜಯ ಆನೆ 2,830 ಕೆಜಿ ತೂಕ, ಭೀಮಾ 4,370 ಕೆಜಿ, ವರಲಕ್ಷ್ಮೀ 3,020 ಕೆಜಿ, ಕಂಜನ್ ಆನೆ 4,240 ಕೆಜಿ, ಮಹೇಂದ್ರ 4,530 ಕೆಜಿ, ಧನಂಜಯ 4,940 ಕೆಜಿ, ಗೋಪಿ 5,080 ಕೆಜಿ ತೂಕ ಇದೆ.
ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯಕಂಡ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಮಲ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಯೋಗೇಶ್ (32) ಕೊಲೆಯಾದ ದುರ್ದೈವಿ. ಪ್ರದೀಪ್ (31) ಹತ್ಯೆಗೈದ ದುಷ್ಕರ್ಮಿ. ಕೊಲೆಯಾದ ಯೋಗೇಶ್ ಹಾಗೂ ಆತನ ತಾಯಿ ಭಾಗ್ಯಮ್ಮ ಜೊತೆ ಪ್ರದೀಪ್ ಪದೇ ಪದೇ ಜಗಳ ಮಾಡುತ್ತಿದ್ದ. ಮಂಗಳವಾರ ಸಂಜೆಯೂ ಇದೇ ರೀತಿ ಜಗಳ ಶುರುವಾಗಿದ್ದು, ಕೋಪ ವಿಕೋಪಕ್ಕೆ ತಿರುಗಿದೆ. ಕೋಪದ ಭರದಲ್ಲಿ ಯೋಗೇಶ್ ತನ್ನ ಮನೆಯಲ್ಲಿದ್ದ ಚಾಕು ತಂದು ಯೋಗೇಶ್ ಗೆ ಇರಿದಿದ್ದಾನೆ. ಚಾಕು ಇರಿತಕ್ಕೊಳಗಾದ ಯೋಗೇಶ್ ನನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ತೀವ್ರ ರಕ್ತಸ್ರಾವ ಉಂಟಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಯೋಗೇಶ್ ಮೃತಪಟ್ಟಿದ್ದಾನೆ. ಸದ್ಯ ಕೊಲೆಗೈದ ಆರೋಪಿ ಪ್ರದೀಪ್ ಪರಾರಿಯಾಗಿದ್ದು, ತಲೆ ಮರೆಸಿಕೊಂಡಿರುವ ಪ್ರದೀಪ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯ ಕುರಿತು ಕೆ.ಆರ್. ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಭಾರತ ಮೈತ್ರಿಕೂಟದ ಸಭೆ ನಡೆಯಿತು. ಇದೇ 18ರಿಂದ ಆರಂಭವಾಗಲಿರುವ ಐದು ದಿನಗಳ ವಿಶೇಷ ಸಂಸತ್ ಅಧಿವೇಶನದಲ್ಲಿ ಅನುಸರಿಸಬೇಕಾದ ವಿಧಾನಗಳ ಕುರಿತು ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ನಡೆಯಲಿದೆ. ಇದೇ ವೇಳೆ ಪ್ರತಿಪಕ್ಷಗಳು ಎತ್ತಿರುವ ವಿಷಯಗಳನ್ನು ಸಂಸತ್ತಿನಲ್ಲಿ ಚರ್ಚಿಸಬೇಕು ಎಂದು ಒತ್ತಾಯಿಸಿ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಕಳುಹಿಸಲಿದ್ದಾರೆ. ಕೇಂದ್ರವು ಒಂದು ದೇಶ ಒಂದು ಚುನಾವಣೆ, ಏಕೀಕೃತ ನಾಗರಿಕ ಸಂಹಿತೆ, ಮಹಿಳಾ ಮೀಸಲಾತಿ ಮಸೂದೆ ಮತ್ತು ಸಂವಿಧಾನದಿಂದ ಭಾರತದ ಹೆಸರನ್ನು ಬದಲಾಯಿಸುವ ಪ್ರಸ್ತಾಪವನ್ನು ಪರಿಚಯಿಸಬಹುದು ಎಂಬ ಸೂಚನೆಗಳ ಆಧಾರದ ಮೇಲೆ ಇಂಡಿಯಾ ಅಲೈಯನ್ಸ್ ಸಭೆಯನ್ನು ಕರೆದಿದೆ. ದೈಹಿಕ ನ್ಯೂನತೆಯಿಂದಾಗಿ ಸೋನಿಯಾ ಗಾಂಧಿ ಸಭೆಗೆ ಹಾಜರಾಗಿರಲಿಲ್ಲ. ಇದೇ ವೇಳೆ ಕಾಂಗ್ರೆಸ್ ಪಕ್ಷದ ಸಂಸದೀಯ ನೀತಿ ನಿರೂಪಣಾ ಸಭೆ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆಯಿತು. ಸಂಸತ್ತಿನಲ್ಲಿ ಪ್ರತಿಪಕ್ಷಗಳು ಎತ್ತಿರುವ ವಿಷಯಗಳ ಬಗ್ಗೆ ಚರ್ಚೆ ನಡೆಸುವಂತೆ ಸೋನಿಯಾ…
ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಹೆದರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವು ರಿಪಬ್ಲಿಕ್ ಆಫ್ ಇಂಡಿಯಾ ಅನ್ನು ರಿಪಬ್ಲಿಕ್ ಆಫ್ ಭಾರತ ಮಾಡಲು ಹೊರಟಿದ್ದಾರೆ, ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ. ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಮುಂದಿನ ಚುನಾವಣೆಯಲ್ಲಿ ಸೋಲನ್ನು ನೋಡುತ್ತಿರುವುದನ್ನು ಈ ಸಮಯದಲ್ಲಿ ಗಮನಿಸಬಹುದು. ನಮ್ಮ ದೇಶದ ನಗದಿನ ಮೇಲೆ ಇಂಡಿಯಾ ಅಂತಾ ಇದೆ. ಇದನ್ನು ಬದಲಿಸಲು ಹೊರಟಿದ್ದಾರೆ. ನಾವೆಲ್ಲರೂ ಭಾರತೀಯರೇ. ಸೋಲಿಗೆ ಹೆದರಿ ಈ ರೀತಿ ಮಾಡುತ್ತಿರುವುದು ಸರಿಯಲ್ಲ ಎಂದರು.
ಸಂಚಾರ ಪೊಲೀಸರು ನಗರ ಪ್ರದೇಶಗಳಲ್ಲಿ, ರಾಜ್ಯ ಹೆದ್ದಾರಿಗಳಲ್ಲಿ ಸಂಚಾರ ನಿಯಮ ಮೀರಿದ್ರೆ ದಂಡ, ಕಾನೂನು ಕ್ರಮ ಕೈಗೊಳ್ಳುತ್ತಿದ್ದರು. ಆದ್ರೇ ಇದೀಗ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿಗಳಲ್ಲೂ ಖಾಕಿ ಕಣ್ಣಾವಲಿರಿಸಲಾಗಿದೆ. ರಾಜ್ಯ ರಸ್ತೆ ಮತ್ತು ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು, ರಾಜ್ಯದ ಹೆದ್ದಾರಿಗಳಲ್ಲಿ ಸಂಚಾರ ನಿಯಮ ಪಾಲಿಸದೇ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ್ರೇ ಚಾಲನಾ ಪರವಾನಗಿ (DL) ರದ್ದಾಗಲಿದೆ ಎಂದು ಹೇಳಿದರು.
ಶಾರುಖ್ ಖಾನ್ ಅವರು ಸಾಂಪ್ರಾದಾಯಿಕ ಉಡುಗೆಯನ್ನು ಧರಿಸಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರೊಂದಿಗೆ ತಿರುಪತಿಗೆ ಭೇಟಿ ನೀಡಿದರು. ಶಾರುಖ್ ಅವರೊಂದಿಗೆ ಪುತ್ರಿ ಸುಹಾನಾ ಖಾನ್ ಮತ್ತು ಪತ್ನಿ ಗೌರಿ ಇದ್ದರು. ‘ಜವಾನ್’ ಸಿನಿಮಾ ಬಿಡುಗಡೆಗೂ ಮುನ್ನವೇ ತಿರುಪತಿ ಭೇಟಿ. ಮೊನ್ನೆಯಷ್ಟೇ ಶಾರುಖ್ ‘ಜವಾನ್’ ಸಿನಿಮಾದ ಟ್ರೇಲರ್ ಲಾಂಚ ಕಾರ್ಯಕ್ರಮ ಚೆನ್ನೈ ನಲ್ಲಿ ನೆರವೇರಿತು. ಅಟ್ಲಿ ನಿರ್ದೇಶನದ ‘ಜವಾನ್’ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಇದು ನಯನತಾರಾ ಅವರ ಬಾಲಿವುಡ್ ಚೊಚ್ಚಲ ಚಿತ್ರವೂ ಹೌದು. ಇತರ ತಾರಾಗಣದಲ್ಲಿ ವಿಜಯ್ ಸೇತುಪತಿ, ಪ್ರಿಯಾಮಣಿ, ಯೋಗಿ ಬಾಬು ಮತ್ತು ಜಾಫರ್ ಸಾದಿಕ್ ಇದ್ದಾರೆ. ಜವಾನ್ ಸೆಪ್ಟೆಂಬರ್ 7 ರಂದು ಚಿತ್ರಮಂದಿರಗಳಿಗೆ ಬರಲಿದೆ. ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಜವಾನ್ ಚಿತ್ರದ ಮುಂಗಡ ಬುಕಿಂಗ್ ಇದೇ ಶುಕ್ರವಾರ ಆರಂಭವಾಗಿದೆ. ಸಂಗೀತ ತಡೆಯಲಾಗದು. ರೆಡ್ ಚಿಲ್ಲೀಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ನಿರ್ಮಿಸಿದ್ದಾರೆ.
ತಮಿಳುನಾಡು: ನಿಂತಿದ್ದ ಟ್ರಕ್ ಗೆ ಮಿನಿವ್ಯಾನ್ ಡಿಕ್ಕಿ ಹೊಡೆದು ಒಂದು ವರ್ಷದ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ ಅಪಘಾತ ಸಂಭವಿಸಿದೆ. ತಮಿಳುನಾಡಿನ ಸೇಲಂ ಜಿಲ್ಲೆಯ ಶಂಕರಿ ಬೈಪಾಸ್ ನಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈರೋಡ್ ನ ಪೆರುಂತುರೈನಲ್ಲಿರುವ ಕುಟ್ಟಂಪಾಳ್ಯಂ ಹರಿಜನ ಕಾಲೋನಿಯ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ. ಸೆಲ್ವರಾಜ್ (50), ಎಂ. ಆರುಮುಖಂ (48), ಅವರ ಪತ್ನಿ ಮಂಜುಳಾ (45), ಪಳನಿಸ್ವಾಮಿ (45), ಅವರ ಪತ್ನಿ ಪಾಪಪತಿ (40), ಆರ್. ಸಂಜನಾ (ಒಂದು ವರ್ಷ) ಮೃತರು. ವ್ಯಾನ್ ಚಾಲಕ ವಿಘ್ನೇಶ್ (25) ಮತ್ತು ಮೃತ ಪಳನಿಸ್ವಾಮಿ ಮತ್ತು ಪಾಪಾಪತಿ ಅವರ ಪುತ್ರಿ ಪ್ರಿಯಾ (21) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ನಂತರ, ವ್ಯಾನ್ ನಲ್ಲಿದ್ದವರನ್ನು ಬಹಳ ಕಷ್ಟದಿಂದ ಹೊರತೆಗೆಯಲಾಯಿತು. ವೇಗವಾಗಿ ಬಂದ ಮಿನಿ ವ್ಯಾನ್ ಲಾರಿಗೆ ಸಂಪೂರ್ಣವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ಸಿಸಿಟಿವಿ…
ವಿಶೇಷ ರಕ್ಷಣಾ ಗುಂಪಿನ (SPG) ನಿರ್ದೇಶಕ ಅರುಣ್ ಕುಮಾರ್ ಸಿನ್ಹಾ ನಿಧನರಾಗಿದ್ದಾರೆ. ಅವರು ಬೆಳಿಗ್ಗೆ ದೆಹಲಿಯಲ್ಲಿ ನಿಧನರಾದರು. 2016 ರಿಂದ ಅವರು ಎಸ್ ಪಿಜಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಕೇರಳ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, ಅವರು ಪ್ರಧಾನಿಯ ಭದ್ರತಾ ವಿಭಾಗದ ಉಸ್ತುವಾರಿ ವಹಿಸಿದ್ದರು. ಅವರು ಕೇರಳ ಕೇಡರ್ ನ 1987 ಬ್ಯಾಚ್ ನ ಐಪಿಎಸ್ ಅಧಿಕಾರಿ. ಮೇ 31 ರಂದು, ಎಸ್ಪಿಜಿ ಮುಖ್ಯಸ್ಥರು ತಮ್ಮ ಅಧಿಕಾರಾವಧಿಯನ್ನು ಇನ್ನೂ ಒಂದು ವರ್ಷ ವಿಸ್ತರಿಸಿದ್ದರು. ಮಹಾನಿರ್ದೇಶಕರ ಹುದ್ದೆಯ ನೇಮಕಾತಿಯು ಒಂದು ವರ್ಷದವರೆಗೆ ಗುತ್ತಿಗೆ ಆಧಾರದ ಮೇಲೆ ಇತ್ತು.
ಇಂದು ಶ್ರೀಕೃಷ್ಣ ಜಯಂತಿ. ಶ್ರೀಕೃಷ್ಣ ಅವರ ಜನ್ಮದಿನವಾದ ಅಷ್ಟಮಿ ರೋಹಿಣಿಯನ್ನು ಇಡೀ ದೇಶ ಆಚರಿಸುತ್ತಿದೆ. ರಾಜ್ಯಾದ್ಯಂತ ಹೆಚ್ಚು ಮಕ್ಕಳು ಕೃಷ್ಣನ ವೇಷ ಧರಿಸಲಿದ್ದಾರೆ. ಕೊಳಲಿನ ನಾದ ಮತ್ತು ನವಿಲಿನ ಮೋಹದಿಂದ ಕೂಡಿದ ಜನ್ಮಾಷ್ಟಮಿ ಇಂದು. ಜನ್ಮಾಷ್ಟಮಿಯಂದು ಭಕ್ತರ ಮನದಲ್ಲಿ ಕೃಷ್ಣನ ನೆನಪುಗಳು ತುಂಬುತ್ತವೆ. ಭೂಮಿಯ ಮೇಲಿನ ಅನಿಷ್ಟಗಳನ್ನು ನಿರ್ಮೂಲನೆ ಮಾಡಲು ಮತ್ತು ಒಳ್ಳೆಯದನ್ನು ಪುನಃಸ್ಥಾಪಿಸಲು ಭಗವಾನ್ ವಿಷ್ಣುವು ಶ್ರೀಕೃಷ್ಣನ ರೂಪದಲ್ಲಿ ಅವತರಿಸಿದನೆಂದು ನಂಬಲಾಗಿದೆ. ಶ್ರೀಕೃಷ್ಣನು ವಿಷ್ಣುವಿನ ಒಂಬತ್ತನೇ ಅವತಾರ. ಅಷ್ಟಮಿ ರೋಹಿಣಿಯ ಸಂದರ್ಭದಲ್ಲಿ ಕೇರಳದ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ಮತ್ತು ನೈವೇದ್ಯಗಳು ನಡೆಯುತ್ತವೆ. ಹೆಚ್ಚಿನ ದೇವಾಲಯಗಳಲ್ಲಿ ವಿಸ್ತಾರವಾದ ಹುಟ್ಟುಹಬ್ಬದ ಹಬ್ಬಗಳನ್ನು ಸಹ ಏರ್ಪಡಿಸಲಾಗಿದೆ.? ಶ್ರೀಕೃಷ್ಣ ಜಯಂತಿ ನಿಮಿತ್ತ ಗುರುವಾಯೂರು, ಅಂಬಲಪುಳ ಸೇರಿದಂತೆ ಶ್ರೀಕೃಷ್ಣ ದೇವಸ್ಥಾನಗಳು ಭಕ್ತರಿಂದ ತುಂಬಿ ತುಳುಕುತ್ತಿವೆ. ಉಡುಪಿ ಶ್ರೀ ಕೃಷ್ಣ ದೇವಾಲಯದಲ್ಲಿ ವಿಶಿಷ್ಟ ಪೂಜೆ ಪುರಸ್ಕಾರ ನಡೆಯಲಿದೆ. ಕರ್ನಾಟಕದ ಪ್ರತಿ ಕೃಷ್ಣ ದೇವಸ್ಥಾನದಲ್ಲಿ ಭಕ್ತರ ದಂಡೇ ಹರಿದು ಬರುತ್ತಿದೆ.
ಪ್ರಪಂಚದ ಇತಿಹಾಸದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ.. ಹಿಂದುಧರ್ಮ ಯಾವಾಗ ಹುಟ್ಟಿತು ಎಂಬುದೇ ಪ್ರಶ್ನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಹಿಂದೂಧರ್ಮ ಯಾವಾಗ ಹುಟ್ಟಿತು ಯಾರು ಹುಟ್ಟುಹಾಕಿದ್ರು ಎಂಬುದೇ ಇನ್ನೂ ಪ್ರಶ್ನೆಯಾಗಿ ಉಳಿದಿದೆ.. ನಮ್ಮ ದೇಶದಲ್ಲಿ ಬೌದ್ಧಧರ್ಮ ಮತ್ತು ಜೈನಧರ್ಮ ಹುಟ್ಟಿರುವ ಇತಿಹಾಸವಿದೆ. ವಿದೇಶದಿಂದ ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳು ನಮ್ಮ ದೇಶಕ್ಕೆ ಬಂದಿದೆ ಎಂದರು. ಪ್ರಪಂಚದ ಎಲ್ಲಾ ಧರ್ಮಗಳ ಸಾರಾಂಶ ಒಂದೇ ಮನುಕುಲಕ್ಕೆ ಒಳ್ಳೆದಾಗಲಿ ಎಂಬುದು ಅಷ್ಟೆ ಎಂದು ಗೃಹಸಚಿವ ಡಾ.ಜಿ. ಜಿ.ಪರಮೇಶ್ವರ್ ಕೊರಟಗೆರೆ ಶಿಕ್ಷಕರ ದಿನಾಚರಣೆ ವೇಳೆ ತಿಳಿಸಿದರು.