Author: admin

ಗುಜರಾತ್ ‌ನಲ್ಲಿ ಬಿಜೆಪಿ ಮಹಿಳಾ ನಾಯಕಿಯ ಹತ್ಯೆ ಅಮ್ರೇಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಮಧುಬನ್ ಜೋಶಿ ನಿಧನರಾಗಿದ್ದಾರೆ. ನೆರೆಹೊರೆಯವರ ಜತೆಗಿನ ಜಗಳ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಬಿಜೆಪಿ ಮುಖಂಡನ ಪುತ್ರನೂ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಮ್ರೇಲಿ ಜಿಲ್ಲೆಯ ಧಾರಿಯಲ್ಲಿ ವಾಸಿಸುತ್ತಿರುವ ಬಿಜೆಪಿ ಮುಖಂಡ ಮಧುಬನ್ ಜೋಶಿ, ಅವರ ಪತಿ ಮತ್ತು ಮಗಳ ಮೇಲೆ ಅವರ ನೆರೆಹೊರೆಯವರು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ವಿವಾದದ ವೇಳೆ ನಡೆದ ದಾಳಿಯಲ್ಲಿ ಬಿಜೆಪಿ ಮಹಿಳಾ ಮುಖಂಡರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಜೋಶಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರ ಜೀವ ಉಳಿಸಲಾಗಲಿಲ್ಲ. ಬಿಜೆಪಿ ಮುಖಂಡನ ಮಗನೂ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾನೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕೆಲವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಮಹಿಳಾ ನಾಯಕಿಯ ಹತ್ಯೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿತ್ತು.

Read More

ಬಳ್ಳಾರಿಯ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ ಕೇಳಿ ಬಂದಿದೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ವಂಚನೆ ದೂರು ದಾಖಲಾಗಿದೆ. ಹೌದು, ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಿಸಿಕೊಂಡು ಇದೀಗ ಮೋಸ ಮಾಡಿದ್ದಾರೆ ಎಂದು ಬೆಂಗಳೂರು ಮೂಲದ ಯುವತಿ ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಎಫ್ ‌ಐಆರ್ ದಾಖಲಾಗಿದೆ.

Read More

ಸಾರಿಗೆ ಇಲಾಖೆಯ ವೆಬ್‌ ಸೈಟ್‌ ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿರುವುದರಿಂದ ಕೆಲವು ದಿನಗಳಿಂದ ವಾಹನ ನೋಂದಣಿ ಸ್ಥಗಿತಗೊಂಡಿದೆ. ಸೋಮವಾರದಿಂದಲೇ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ದೀಪಾವಳಿ ಹಬ್ಬದ ಸಮಯದಲ್ಲಿ ಹೊಸ ವಾಹನ ನೋಂದಣಿ ಮಾಡಲು ಉತ್ಸಾಹ ತೋರಿದವರಿಗೆ ನಿರಾಸೆ ಉಂಟಾಗಿದೆ. ರಾಜ್ಯದ ವಾಹನ ವಿತರಕರು ನಾಲ್ಕು ದಿನಗಳಿಂದ ಪ್ರಯತ್ನಿಸುತ್ತಿದ್ದಾರೆ. ವಾಹನ ಖರೀದಿಗೆ ಹಬ್ಬದ ದಿನಗಳು ಮಂಗಳಕರ ಎಂದು ತಿಳಿದು ವಾಹನ ಖರೀದಿಗೆ ಮುಂದಾಗಿದ್ದ ನಮ್ಮ ಅನೇಕ ಗ್ರಾಹಕರಿಗೆ ನಿರಾಸೆಯಾಗಿದೆ.

Read More

ಸೋಂಪುರ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತಿರುವ ಪೆಮ್ಮನಹಳ್ಳಿ ಬಳಿ ಪಿಕೋರಿಯಸ್ ಬಯೋ ಫರ್ಟಿಲೈಸರ್ಸ್ ಕಂಪನಿ ತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಅಧಿಕಾರಿಗಳು ಕಂಪನಿಗೆ ನೋಟಿಸ್ ನೀಡಿ ಬೀಗ ಹಾಕಿದ್ದಾರೆ. ಕಂಪನಿಯಿಂದ ಹೊರ ಬರುತ್ತಿರುವ ತ್ಯಾಜ್ಯದ ನೀರು ದುರ್ವಾಸನೆ ಬೀರುತ್ತಿದ್ದು, ಸಾರ್ವಜನಿಕರ ದೂರು ಶಾಸಕರ ಸೂಚನೆ ಮೇರೆಗೆ, ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಒಂದು ವರ್ಷದಿಂದ ಈ ಕಂಪನಿ ರಾತ್ರಿ ವೇಳೆ ಕೋಳಿ ತ್ಯಾಜ್ಯವನ್ನು ಸಂಸ್ಕರಿಸಿ, ಮೀನಿನ ಆಹಾರ ತಯಾರಿಸುತ್ತಿತ್ತು. ಈ ಪ್ರಕ್ರಿಯೆಯಲ್ಲಿ ಹೊರಬರುತ್ತಿದ್ದ ತ್ಯಾಜ್ಯದ ನೀರನ್ನು ಸಂಸ್ಕರಿಸದೆ ಹೊರಬಿಡಲಾಗುತ್ತಿತ್ತು. ಇದರಿಂದ ಪೆಮ್ಮನಹಳ್ಳಿ, ನಿಡವಂದ, ತಿಮ್ಮನಾಯಕನಹಳ್ಳಿ, ನಿಡವಂದ ಕಾಲೊನಿ ಹಾಗೂ ದಾಬಸ್‌ ಪೇಟೆ ಸುತ್ತಮುತ್ತ ದುರ್ವಾಸನೆ ಬೀರುತ್ತಿತ್ತು. ಜನರು ಮೂಗು ಮುಚ್ಚಿಕೊಂಡು ಓಡಾಡುವ ದುಃಸ್ಥಿತಿ ನಿರ್ಮಾಣವಾಗಿತ್ತು ಎಂದು ಇಲ್ಲಿನ ಜನರು ದೂರಿದ್ದರು. ನೆಲಮಂಗಲ ಶಾಸಕ ಎನ್. ಶ್ರೀನಿವಾಸ್ ಇತ್ತೀಚೆಗೆ ಕಾಮಗಾರಿ ಶಂಕುಸ್ಥಾಪನೆಗಾಗಿ ಪೆಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯರು ತ್ಯಾಜ್ಯ ದುರ್ವಾಸನೆ ಬೀರುತ್ತಿರುವ ವಿಚಾರವನ್ನು ಅವರ…

Read More

ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ಹಾಗೂ ಕೇಳಿದ ಸ್ಥಳಕ್ಕೆ ವರ್ಗಾವಣೆ ಮಾಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿ ಮೋಹನ್‌ ಕುಮಾರ್(53) ಅವರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ನಿವಾಸಿ ಮೋಹನ್ ಕುಮಾರ್, ಹಲವರಿಂದ ಹಣ ಪಡೆದು ಮೋಜು- ಮಸ್ತಿಗೆಂದು ಬ್ಯಾಂಕಾಕ್‌ ಗೆ ಹೋಗಿದ್ದ. ಬೆಂಗಳೂರಿಗೆ ವಾಪಸು ಬರುತ್ತಿದ್ದಂತೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈತನನ್ನು ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

Read More

ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಿಸಲು ಮುಂದಿನ ತಿಂಗಳಿನಿಂದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ರಾಗಿ ಮಾಲ್ಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಡಿಡಿಪಿಐ, ಬಿಇಒಗಳು, ನೋಡಲ್ ಅಧಿಕಾರಿಗಳು ಮತ್ತು ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಮೊದಲ ಪರಿಶೀಲನಾ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದರು. ಮುಂದಿನ ಮೂರು ವರ್ಷಗಳಲ್ಲಿ 3,000 ಕರ್ನಾಟಕ ಸಾರ್ವಜನಿಕ ಶಾಲೆಗಳನ್ನು (ಕೆಪಿಎಸ್) ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು. ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಇದಕ್ಕಾಗಿ ಕಾರ್ಪೊರೇಟ್ ಸಾಮಾಜಿಕ ನಿಧಿ ಬಳಸಲಾಗುವುದು ಮತ್ತು ಇಲಾಖೆಯು ಅಜೀಂ ಪ್ರೇಮ್‌ಜಿ ಫೌಂಡೇಶನ್‌ನೊಂದಿಗೆ ಮಾತುಕತೆ ನಡೆಸುತ್ತಿದೆ. ಈ ಶಾಲೆಗಳ ಮೂಲಸೌಕರ್ಯಕ್ಕಾಗಿ 600 ಕೋಟಿ ರೂಪಾಯಿ ವೆಚ್ಚವನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

Read More

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಕಲಿ ವೈದ್ಯರ ತಂಡವೊಂದು ಶಸ್ತ್ರಚಿಕಿತ್ಸೆ ಮಾಡಿರುವ ಘಟನೆ ಸಂಚಲನ ಮೂಡಿಸುತ್ತಿದೆ. ಇಬ್ಬರು ರೋಗಿಗಳು ಪ್ರಾಣ ಕಳೆದುಕೊಂಡ ಈ ಪ್ರಕರಣದಲ್ಲಿ ಇಬ್ಬರು ನಕಲಿ ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ನೀರಜ್ ಅಗರ್ವಾಲ್ ಎಂಬ ವೈದ್ಯರು ಗ್ರೇಟರ್ ಕೈಲಾಶ್‌ನಲ್ಲಿ ಅಗರ್ವಾಲ್ ವೈದ್ಯಕೀಯ ಕೇಂದ್ರವನ್ನು ನಡೆಸುತ್ತಿದ್ದಾರೆ. ನೀರಜ್ ಅವರು ಮಾಜಿ ಲ್ಯಾಬ್ ಟೆಕ್ನಿಷಿಯನ್ ಮಹೇಂದರ್ ಅವರ ಸಹಾಯದಿಂದ ಅಕ್ರಮವಾಗಿ ಶಸ್ತ್ರಚಿಕಿತ್ಸೆ ನಡೆಸುತ್ತಿರುವುದು ಕಂಡುಬಂದಿದೆ. ಈ ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಬೆಂಗಳೂರು: ಮನುಷ್ಯನ ಎಲ್ಲ ಪ್ರಶ್ನೆಗಳಿಗೂ ವಚನದಲ್ಲಿ ಉತ್ತರ ಇದೆ. ಕಳಬೇಡ ಕೊಲಬೇಡ ಎನ್ನುವುದು ನಮ್ಮ ಧ್ಯೇಯವಾಗಬೇಕು. ಅದನ್ನು ಪಾಲಿಸಿದರೆ ಮನುಷ್ಯ ಸಂತೋಷ ಮತ್ತು ಸಮಾಧಾನದಿಂದ ಸರಳ ಜೀವನ ನಡೆಸಬಹುದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಬೆಂಗಳೂರಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಹಾಗೂ ಎಸ್.ಷಡಕ್ಷರಿ ಅವರ “ಕ್ಷಣ ಹೊತ್ತು ಅಣಿಮುತ್ತು” ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶರಣ ಸಾಹಿತ್ಯ ವಚನದ ರೂಪದಲ್ಲಿ ಬರದೇ ಇದ್ದರೆ ಕನ್ನಡ ಸಾಹಿತ್ಯ ಎಷ್ಟು ಬಡವಾಗುತ್ತಿತ್ತು ಎಂದು ಎಲ್ಲರೂ ಯೋಚನೆ ಮಾಡಬೇಕಿದೆ. ಮಾತಿಗೆ ಅರ್ಥ ಬರಬೇಕಾದರೆ ನಡೆ ನುಡಿ ಬಹಳ ಮುಖ್ಯ, ಜ್ಞಾನ, ವಿಜ್ಞಾನ ತಂತ್ರಜ್ಞಾನ ಎಲ್ಲವೂ ಇದೆ. ಅದರಲ್ಲಿ ನಮ್ಮ ತನದ ಭಾವ ಮೂಡಬೇಕಿರುವುದು ಮುಖ್ಯವಾಗಿದೆ. ವಚನಗಳು ಶುದ್ದ ಕನ್ನಡದಲ್ಲಿ ಶರಣರು ಕರ್ನಾಟಕಕ್ಕೆ  ಕೊಟ್ಟಿರುವ ಶಾಸ್ವತ ಕೊಡುಗೆಯಾಗಿದೆ ಎಂದು ಹೇಳಿದರು. ಇವನಾರವ ಇವನಾರವ…

Read More

ತಮಿಳುನಾಡು: ತಮಿಳುನಾಡಿನ ಜಾವಡಿ ಬೆಟ್ಟದಲ್ಲಿ ಭಾರೀ ದುರಂತವೊಂದು ನಡೆದಿದೆ. ದೀಪಾವಳಿ ಹಬ್ಬದಂದು ಬೇಟೆಗೆ ಹೋಗಿ ಜಿಂಕೆಯನ್ನು ಹೊಡೆಯುವ ಬದಲು ಗುರಿ ತಪ್ಪಿ ತನ್ನ ಸ್ನೇಹಿತನಿಗೆ ಗುಂಡು ಹೊಡೆದಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಜಮುನಾಮರತೂರಿನ ಶಕ್ತಿವೇಲ್, ಪ್ರಕಾಶ್ ಮತ್ತು ಶಕ್ತಿವಾಸನ್ ಬೇಟೆಗೆ ತೆರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Read More

ಬೆಂಗಳೂರು: ರೈಲ್ವೆಯ ಮಹತ್ವದ ಯೋಜನೆಯಾದ ಬೆಂಗಳೂರು ಉಪನಗರ ರೈಲು ಯೋಜನೆಯ (ಬಿಎಸ್ ಆರ್‌ ಪಿ) ಕಾರಿಡಾರ್-2ರಲ್ಲಿ ಎತ್ತರಿಸಿದ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪಿಯರ್ (ಪಿಲ್ಲರ್) ನಿರ್ಮಾಣ ಕಾರ್ಯ ಆರಂಭವಾಗಿದೆ. ಚಿಕ್ಕಬಾಣಾವರ-ಬೈಯಪ್ಪನಹಳ್ಳಿ ಮಾರ್ಗವು ಕಾರಿಡಾರ್-2 (ಮಲ್ಲಿಗೆ ಮಾರ್ಗ) ಆಗಿದ್ದು, 25 ಕಿ. ಮೀ. ದೂರವನ್ನು ಹೊಂದಿದೆ. ಅದರಲ್ಲಿ 16.5 ಕಿ. ಮೀ. ನೆಲಮಟ್ಟದಲ್ಲಿ ಇರಲಿದೆ. ಹೆಬ್ಬಾಳದಿಂದ ಯಶವಂತಪುರದವರೆಗೆ 8.5 ಕಿ. ಮೀ. ನಷ್ಟು ಎತ್ತರಿಸಿದ (ಎಲಿವೇಟೆಡ್) ಮಾರ್ಗ ನಿರ್ಮಾಣಗೊಳ್ಳಲಿದೆ.

Read More