Subscribe to Updates
Get the latest creative news from FooBar about art, design and business.
- ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
Author: admin
ಬೆಂಗಳೂರು: ಗೊಂಬೆ ಮಾಸ್ಕ್ ಧರಿಸಿಕೊಂಡು ರಸ್ತೆ ಬದಿ ಪಾರ್ಕ್ ಮಾಡಿದ್ದ ಕಾರು ಮತ್ತು ಬೈಕ್ಗಳನ್ನು ಧ್ವಂಸ ಮಾಡಿದ್ದ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ರಾಜಗೋಪಾಲನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏರಿಯಾದಲ್ಲಿ ಹವಾ ಇಡಲು ಲಗ್ಗೆರೆ ಬಳಿ ಬೈಕ್ ನಲ್ಲಿ ಬಂದಿದ್ದ ಪುಂಡರ ಗ್ಯಾಂಗ್, 15 ಕಾರು ಹಾಗೂ ಬೈಕ್ ಗಳನ್ನು ಪುಡಿಗೈದಿದ್ದರು. ಕಂಠ ಪೂರ್ತಿ ಕುಡಿದು ಬೈಕ್ ಗಳಲ್ಲಿ ಬಂದು ತೂರಾಡುತ್ತಾ ಮನಬಂದಂತೆ ರಾಡ್ ಮತ್ತು ಲಾಂಗ್ಗಳಿಂದ ಕಾರುಗಳ ಗ್ಲಾಸ್ ಪುಡಿ ಮಾಡಿ ಪರಾರಿಯಾಗಿದ್ದರು.
ಬಿ.ವೈ. ವಿಜಯೇಂದ್ರ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಮಿತ್ ಶಾರನ್ನು ಕರೆಸಿ ದೊಡ್ಡ ಸಮಾವೇಶಕ್ಕೆ ಚಿಂತನೆ ಮಾಡಿದ್ದೇವೆ ಎಂದು ಬಿ.ವೈ. ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಲ್ಲಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಒಂದು ಲಕ್ಷ ಜನರನ್ನು ಸೇರಿಸಿ ಕಾರ್ಯಕ್ರಮ ಮಾಡುವ ಅಪೇಕ್ಷೆ ಇದೆ. ಮೋದಿ, ಶಾ, ನಡ್ಡಾ ಆದೇಶದಂತೆ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಕಾರ್ಯಕರ್ತರಲ್ಲಿ ಉತ್ಸಾಹ ಕಾಣ್ತಿದೆ. ಎಲ್ಲಾ ನಾಯಕರು ವಿಜಯೇಂದ್ರಗೆ ಆಶೀರ್ವಾದ ಮಾಡಿದ್ದಕ್ಕೆ ಸಂತೋಷವಾಗಿದೆ ಎಂದರು.
ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಇಬ್ಬರು ಉಗ್ರರು ಹತರಾಗಿದ್ದಾರೆ. ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಕಳಪೆ ಗೋಚರತೆ ಮತ್ತು ಕೆಟ್ಟ ಹವಾಮಾನದ ಲಾಭವನ್ನು ಭಯೋತ್ಪಾದಕರು ಒಳನುಸುಳಲು ಬಳಸಿಕೊಂಡರು ಎಂದು ಭಾರತೀಯ ಸೇನೆ ಹೇಳಿದೆ. ಅಕ್ಟೋಬರ್ ನಲ್ಲಿಯೂ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯಲ್ಲಿ ಉರಿ ಸೆಕ್ಟರ್ ನಲ್ಲಿ ಎಲ್ ಒಸಿ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ್ದವು. ಇಬ್ಬರು ಭಯೋತ್ಪಾದಕರನ್ನು ಕೊಂದ ನಂತರ, ಸೇನೆಯು ಅವರಿಂದ ಎರಡು ಎಕೆ ಸರಣಿ ರೈಫಲ್ಗಳು, 6 ಪಿಸ್ತೂಲ್ ಗಳು ಮತ್ತು 4 ಚೈನೀಸ್ ಹ್ಯಾಂಡ್ ಗ್ರೆನೇಡ್ ಗಳನ್ನು ವಶಪಡಿಸಿಕೊಂಡಿದೆ.
ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಬಿ.ವೈ. ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ನನಗೆ ಕೊಟ್ಟ ಸಹಕಾರವನ್ನು ಬಿ.ವೈ. ವಿಜಯೇಂದ್ರಗೂ ಕೊಡಬೇಕು. ರಾಜ್ಯಾಧ್ಯಕ್ಷರಾದ ವಿಜಯೇಂದ್ರಗೆ ನಾವೆಲ್ಲರೂ ಜೊತೆಯಾಗಿ ನಿಲ್ತೇವೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲೂ ಗೆಲ್ಲುವ ಪ್ರಯತ್ನ ಮಾಡುತ್ತೇವೆ ಎಂದರು.
ಬೆಂಗಳೂರು:”ಕೊಳಕು ಮಂಡಲ ಎಂಬ ಟೀಕೆಯನ್ನು ಯಾರೋ ಕಾರ್ಯಕರ್ತರು ಅಥವಾ ಸಿಬ್ಬಂದಿ ಮಾಡಿರಬಹುದು. ಇಂತಹ ಟೀಕೆ ಸರಿಯಲ್ಲ. ಹತಾಶೆಯಲ್ಲಿ ಟೀಕೆ ಮಾಡಿರುತ್ತಾರೆ. ಈ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಜೆಡಿಎಸ್ ಪಕ್ಷದ ಎಕ್ಸ್ ಖಾತೆಯಲ್ಲಿ ನಿಮ್ಮನ್ನು ಕೊಳಕು ಮಂಡಲ ಹಾವು ಎಂಬ ವೈಯಕ್ತಿಕ ಟೀಕೆ ಮಾಡಲಾಗಿದೆ ಎಂದು ಮಾಧ್ಯಮಗಳು ಹೇಳಿದಾಗ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯೆ ವ್ಯಕ್ತಪಡಿಸಿದರು. “ಇದನ್ನು ಅವರ ಪಕ್ಷದ ನಾಯಕರೇ ಮಾತನಾಡಿದ್ದಾರೆ ಎಂದು ಹೇಳುವುದಿಲ್ಲ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಕರೆಂಟ್ ಅಕ್ರಮವಾಗಿ ಬಳಸಿದ್ದ ಬಗ್ಗೆ ಕುಮಾರಸ್ವಾಮಿ ಅವರು ತಪ್ಪೊಪ್ಪಿಕೊಂಡಿದ್ದಾರೆ. ಅದು ಅವರ ದೊಡ್ಡತನ” ಎಂದರು. ಬೆಸ್ಕಾಂ ಸಿಬ್ಬಂದಿ ದೂರು ದಾಖಲಿಸಿಕೊಂಡಿರುವ ಬಗ್ಗೆ ಪ್ರಶ್ನೆ ಕೇಳಿದಾಗ, “ಈ ಬಗ್ಗೆ ನನಗೆ ಗೊತ್ತಿಲ್ಲ. ಅವರು ದಂಡ ಕಟ್ಟುತ್ತೇನೆ ಎಂದು ಹೇಳಿದ ವಿಚಾರ ಮಾಧ್ಯಮಗಳ ಮೂಲಕ ತಿಳಿದಿದ್ದೇನೆ” ಎಂದು ತಿಳಿಸಿದರು.
ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರನ್ನು ಹತ್ಯೆ ಮಾಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಕರ್ನಾಟಕ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ರಂಜಿತ್ ಆರ್ ಎಂ ಎಂದು ಗುರುತಿಸಲಾಗಿದ್ದು, ಜಯನಗರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು ಸೋಷಿಯಲ್ ಮೀಡಿಯಾದಲ್ಲಿ “ಡಿಕೆ ಸಹೋದರರನ್ನು ಕೊಲ್ಲಿ’ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಹಾಕಿದ್ದ ಎನ್ನಲಾಗಿದೆ. ಆರೋಪಿ ರಂಜಿತ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ತನ್ನನ್ನು ತಾನು ಸೈಬರ್ ಕ್ರೈಂ ಡಿಟೆಕ್ಟಿವ್ ಅಟ್ ಬೆಂಗಳೂರು ಸಿಟಿ ಪೊಲೀಸ್ ಎಂದು ಡೀಟೇಲ್ಸ್ ಹಾಕಿಕೊಂಡಿದ್ದನು. ಈತ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಸಹೋದರರ ಬಗ್ಗೆ, ಕಾಂಗ್ರೇಸ್ ಪಕ್ಷ ಮುಸಲ್ಮಾನರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದನು.
ಬೆಂಗಳೂರು: ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಕಳೆದ ಮೂರು ದಿನಗಳಿಂದ ಪಟಾಕಿ ಸಿಡಿತದಿಂದ 60ಕ್ಕೂ ಹೆಚ್ಚು ಜನರ ಕಣ್ಣುಗಳಿಗೆ ಹಾನಿಯಾಗಿವೆ. ಇದರ ಜೊತೆಗೆ 50 ಮಂದಿಯ ಮೈಕೈಗಳಿಗೆ ಸುಟ್ಟ ಗಾಯಗಳಾಗಿವೆ. ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಯಲ್ಲಿ ಪಟಾಕಿ ಅವಗಢಗಳು ಸಂಭವಿಸಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ನ.12 ರಿಂದ ಪ್ರಾರಂಭವಾಗಿರುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ 60 ಕ್ಕೂ ಹೆಚ್ಚು ಪಟಾಕಿ ಸಂಬಂಧಿತ ಗಾಯಗಳ ಪ್ರಕರಣಗಳು ವರದಿಯಾಗಿವೆ.
ಬೆಂಗಳೂರು: ತಿಲಕನಗರದ ನಿವಾಸಿ ತಬ್ರೇಜ್ ಪಾಷಾ(37) ಎಂಬಾತನನ್ನು ಕೊಲೆ ಮಾಡಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಶಬೀರ್ ಕೃತ್ಯ ಎಸಗಿದ ಆರೋಪಿ, ತಬ್ರೇಜ್ ಪಾಷಾ ಮತ್ತು ಶಬೀರ್ ಸಂಬಂಧಿಗಳು. ತಬ್ರೇಜ್ ಪಾಷಾ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಶಬೀರ್ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ. ಇಬ್ಬರ ನಡುವೆ ಪ್ರಕರಣವೊಂದರ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಬುಧವಾರ ಮಧ್ಯಾಹ್ನ ಎಸ್. ಆರ್.ಕೆ. ಗಾರ್ಡನ್ ಬಳಿ ತಬ್ರೇಜ್ ಪಾಷಾನನ್ನು ಅಡ್ಡಗಟ್ಟಿದ ಆರೋಪಿ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಅಪಘಾತ. ಬಸ್ ಕಂದರಕ್ಕೆ ಬಿದ್ದು 36 ಮಂದಿ ಸಾವನ್ನಪ್ಪಿದ್ದಾರೆ. ದೋಡಾ ಜಿಲ್ಲೆಯ ಅಜರ್ ಪ್ರದೇಶದ ಟ್ರಾಂಗಲ್ ಬಳಿ ಅಪಘಾತ ಸಂಭವಿಸಿದೆ. ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಕಿಶ್ತ್ವಾರ್ ನಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ವಾಹನ 250 ಮೀಟರ್ ಆಳಕ್ಕೆ ಬಿದ್ದಿದೆ. ಗಾಯಾಳುಗಳನ್ನು ದೋಡಾ ಮತ್ತು ಕಿಶ್ತ್ವಾರ್ ನ ಸರ್ಕಾರಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಅಗತ್ಯ ಬಿದ್ದರೆ ಗಾಯಾಳುಗಳನ್ನು ಇತರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ. ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಅಪಘಾತವು ನೋವಿನಿಂದ ಕೂಡಿದೆ. ಮೃತ ಕುಟುಂಬಗಳಿಗೆ ಸಂತಾಪ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪಿಎಂಒ ಟ್ವೀಟ್ ಮಾಡಿದೆ. ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ಕೂಡ ಘೋಷಿಸಲಾಗಿದೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯ ಪ್ರಕಟಿಸಿದೆ.
ಸೂಕ್ತ ಸಮಯದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ವಿಜಯೇಂದ್ರಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದು ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಶುಭ ಹಾರೈಸಿದರು. ವಿಧಾನಸಭೆ ಚುನಾವಣೆಯ ನಂತರ ಬಿಜೆಪಿಗೆ ಶಕ್ತಿ, ಉತ್ಸಾಹ ಬಂದಿದೆ. ಎಲ್ಲರೂ ಒಟ್ಟಾಗಿ ನಡೆದರೆ ಲೋಕಸಭೆಯಲ್ಲಿ ಯಶಸ್ಸು ಸಿಗುತ್ತದೆ. ವಿಜಯೇಂದ್ರ ಸಾರಥ್ಯದಲ್ಲಿ 28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದರು.