Author: admin

ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ ಮಾಡಿದ್ದಕ್ಕೆ ಯಾರಿಗೂ ಅಸಮಾಧಾನವಿಲ್ಲ. ಭಿನ್ನಾಭಿಪ್ರಾಯ ಇದ್ದರೆ ಎಲ್ಲರೂ ಮಾತನಾಡಿ ಸರಿ ಮಾಡುತ್ತೇವೆ. ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ನಾವು ಎಲ್ಲರೂ ಸೇರಿ ಸರಿ ಮಾಡುತ್ತೇವೆ. ಬಿ.ವೈ. ವಿಜಯೇಂದ್ರ ಎಲ್ಲರನ್ನೂ ಭೇಟಿಯಾಗುತ್ತಿದ್ದಾರೆ. ಪಕ್ಷದ ಮೇಲೆ ಜನರಿಗೆ ನೀರಿಕ್ಷೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

Read More

ಆಮ್ ಆದ್ಮಿ ಪಕ್ಷಕ್ಕೆ ಚುನಾವಣಾ ಆಯೋಗ ನೋಟಿಸ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ದೂರಿನ ಅನ್ವಯ ನೋಟಿಸ್ ನೀಡಲಾಗಿದೆ. ಬಿಜೆಪಿ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಧಾನಿಯವರು ಜನರಿಗಾಗಿ ಕೆಲಸ ಮಾಡುತ್ತಿಲ್ಲ, ಕೈಗಾರಿಕೋದ್ಯಮಿಗಳಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. ಎಎಪಿ ಉದ್ಯಮಿ ಗೌತಮ್ ಅದಾನಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡ ‘X’ ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದೆ. ಬಳಿಕ ಅದಾನಿ ಮತ್ತು ಮೋದಿಯವರ ಚಿತ್ರವನ್ನೂ ಹಾಕಲಾಗಿತ್ತು. ಪ್ರಧಾನಿ ಜನರಿಗಾಗಿ ಕೆಲಸ ಮಾಡುತ್ತಿಲ್ಲ, ಉದ್ಯಮಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಎಎಪಿ ಟೀಕೆ ಮಾಡಿದೆ. ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಅನಿಲ್ ಬಲುನಿ ಮತ್ತು ಪಕ್ಷದ ನಾಯಕ ಓಂ ಪಾಠಕ್ ಅವರನ್ನೊಳಗೊಂಡ ಬಿಜೆಪಿ ನಿಯೋಗವು ಈ ವಿಷಯದ ಬಗ್ಗೆ ಚುನಾವಣಾ ಸಮಿತಿಯನ್ನು ಸಂಪರ್ಕಿಸಿದೆ.

Read More

ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ತುಮಕೂರು : ಜನರು ತಮ್ಮ ಕಷ್ಟಗಳನ್ನು ಪರಿಹರಿಸಲು ದೇವರ ಮೇಲೆ ನಂಬಿಕೆ ಇಟ್ಟು ದೇವಸ್ಥಾನಗಳಿಗೆ ಹೋಗುವುದು ಸಹಜ ಆದರೆ ಇಲ್ಲೊಬ್ಬ ಉಡಾಳ ಪೂಜಾರಿ ದೇವಸ್ಥಾನಕ್ಕೆ ಬರುವ ಮುಗ್ಧ ಜನರನ್ನ ಯಾಮರಿಸಿ ಅವರಿಂದ ಹಣ ಪಿಕುವ ಕೆಲಸದಲ್ಲಿ ತೊಡಗಿದ್ದಾನೆ. ಕುಟುಂಬಗಳನ್ನ ಹೊಡೆಯುವ ಕೆಲಸ ಮಾಡಿ ದೇವರ ಹೆಸರಿನಲ್ಲಿ ಜನರ ಮೂಢನಂಬಿಕೆಯನ್ನು ಬಂಡವಾಳ ಮಾಡಿಕೊಂಡು ಜನರನ್ನು ಯಾಮಾರಿಸುವ ಆರೋಪ ಕೇಳಿ ಬಂದಿದೆ.. ತುಮಕೂರು ತಾಲ್ಲೂಕು ಕೋರ ಹೋಬಳಿಯ ಚಿಕ್ಕತೊಟ್ಲುಕೆರೆಯಲ್ಲಿ ಇರುವ ಆದಿಶಕ್ತಿ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದ ಹೆಸರಿನಲ್ಲಿ ದೇವಸ್ಥಾನ ನಿರ್ಮಾಣ ಮಾಡಿರುವ  ಶಿವಣ್ಣ ಎಂಬ ಹೆಸರಿನ ಪೂಜಾರಿ ಮನೆಯಲ್ಲೇ ದೇವಸ್ಥಾನ ನಿರ್ಮಾಣ ಮಾಡಿಕೊಂಡು ಬೆಂಗಳೂರು ಮೂಲದ ಯುವಕ ರಂಜಿತ್ ರ ಮನ ಪರಿವರ್ತನೆ ಮಾಡಿ ಕುಟುಂಬದಿಂದ ಬೇರ್ಪಡಿಸಿ ಆತನನ್ನ ಅಕ್ರಮವಾಗಿ ದೇವಸ್ಥಾನದಲ್ಲಿ ಇಟ್ಟು ಕೊಂಡಿರುವ ಆರೋಪ ಕೇಳಿ ಬಂದಿತ್ತು.. ಅದರ ಮಾಹಿತಿಯ ಮೇರೆಗೆ  ನೆಲಮಂಗಲ ಮೂಲದ ಕುಮಾರ್ ಕುಟುಂಬ ಹಾಗೂ ಕರ್ನಾಟಕ ರಣಧೀರರ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷ ಶಂಕರ್…

Read More

ಬೆಂಗಳೂರು: ಬಿಜೆಪಿಯವರು ಕೇವಲ ಸ್ವಾತಂತ್ರ್ಯದ ಫಲಾನುಭವಿಗಳು ಅಷ್ಟೇ. ಸ್ವಾತಂತ್ರ್ಯ ಹೋರಾಟಕ್ಕೆ ಬಿಜೆಪಿಯವರ ಕೊಡುಗೆ ಏನೂ ಇಲ್ಲ. ಬಿಜೆಪಿಯ ಒಬ್ಬ ನಾಯಕರಾದರೂ ಜೈಲಿಗೆ ಹೋಗಿದ್ದಾರಾ? ನೆಹರು ಟೀಕೆ ಮಾಡುವುದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ಬಿಜೆಪಿಗರು ಪ್ರಜಾಪ್ರಭುತ್ವ, ಸಂವಿಧಾನಕ್ಕೆ ವಿರೋಧವಾಗಿದ್ದವರು. ನನ್ನ ಪ್ರಕಾರ ದೇಶ ಆಳುವುದಕ್ಕೆ ಬಿಜೆಪಿಗೆ ಅರ್ಹತೆಯೇ ಇಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

Read More

ರಾಣಿ ಎರಡನೇ ಎಲಿಜಬೆತ್ ಅವರ ಮೊದಲ ವರ್ಷದ ಜಯಂತಿಯ ಅಂಗವಾಗಿ ಲಕ್ಸುರಿ ಉತ್ಪನ್ನಗಳ ತಯಾರಿಕಾ ಸಂಸ್ಥೆಯಾದ ಈಸ್ಟ್ ಇಂಡಿಯಾ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಭಾರತ ಮೂಲದ ಸಂಜೀವ್ ಮೆಹ್ರಾ ಅವರು 191 ಕೋಟಿ ಮೌಲ್ಯದ ಚಿನ್ನ ಮತ್ತು ವಜ್ರ ಖಚಿತ ನಾಣ್ಯವನ್ನು ಬಿಡುಗಡೆ ಮಾಡಿದರು. ಇದರಲ್ಲಿ ಆಯ್ದ ಮತ್ತು ಬೆಲೆ ಬಾಳುವ 6,426 ವಜ್ರಗಳಿವೆ ಹಾಗೂ 24 ಕ್ಯಾರೆಟ್ ಚಿನ್ನದ 11 ನಾಣ್ಯಗಳಿವೆ. ಭಾರತ, ಸಿಂಗಪುರ, ಜರ್ಮನಿ, ಬ್ರಿಟನ್ ಮತ್ತು ಶ್ರೀಲಂಕಾದ ಕುಶಲಕರ್ಮಿಗಳು ಈ ನಾಣ್ಯವನ್ನು ರೂಪಿಸಿದ್ದಾರೆ.

Read More

ಕರ್ನಾಟಕದಲ್ಲಿ ಕಳೆದ 4 ವರ್ಷಗಳಲ್ಲಿ 6,810 ಮಕ್ಕಳು ಅಸಹಜ ಸಾವು ಕಂಡಿದ್ದಾರೆ. 2022ರಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಮಕ್ಕಳು ಅಸಹಜ ಸಾವು ಕಂಡಿದ್ದಾರೆ. ಬೆಂಗಳೂರಿನಲ್ಲಿ ಹೆಚ್ಚು ಮಕ್ಕಳು ಮೃತಪಟ್ಟಿದ್ದಾರೆ, ನಂತರದ ಸ್ಥಾನಗಳಲ್ಲಿ ಬೆಳಗಾವಿ ಮತ್ತು ತುಮಕೂರು ಜಿಲ್ಲೆಗಳಿವೆ. ಮೈಸೂರಿನ ಒಡನಾಡಿ ಸೇವಾ ಸಂಸ್ಥೆಗೆ ಮಾಹಿತಿ ಹಕ್ಕು ಕಾಯ್ದೆಯಡಿ ಈ ಮಾಹಿತಿ ದೊರೆತಿದ್ದು, ಬಾಕಿ ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಮೂರಂಕಿಯಷ್ಟಿದೆ. ಬಡತನ, ಅಪೌಷ್ಠಿಕತೆ, ಬಡ್ಡಿ ದಂಧೆ, ಮೊಬೈಲ್ ಗೀಳು ಈ ಸಾವುಗಳಿಗೆ ಪ್ರಮುಖ ಕಾರಣಗಳು.

Read More

ಉಡುಪಿಯಲ್ಲಿ ಮೊನ್ನೆ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಯನ್ನ ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬೆಳಗಾವಿಯ ಕುಡುಚಿಯಲ್ಲಿ ಬಂಧಿಸಿದ್ದಾರೆ. ಈತ ಮಂಗಳೂರು ಏರ್ ಏರ್‌ ಪೋರ್ಟ್‌ ಸೆಕ್ಯೂರಿಟಿಯಲ್ಲಿಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಿಆರ್ ಪಿಎಫ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎನ್ನಲಾಗಿದೆ.

Read More

ನಾಗಾಲ್ಯಾಂಡ್ ನ ದಿಮಾಪುರ ಜಿಲ್ಲೆಯ ನಹರಬಾರಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿದ್ದಾರೆ. ರಾತ್ರಿ ಸುಮಾರು 10:45ಕ್ಕೆ ನಾಗಾಯೇತರ ಸಮುದಾಯದ ಜನರು ವಾಸವಾಗಿರುವ ಹುಲ್ಲಿನ ಗುಡಿಸಲುಗಳ ಸಾಲುಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ದೀಪಾವಳಿ ಸಂಭ್ರಮದಲ್ಲಿ ಪಟಾಕಿಗಳನ್ನು ಸಿಡಿಸಿದ್ದರಿಂದ ಬೆಂಕಿಯು ಹೊತ್ತಿಕೊಂಡಿರುವ ಸಾಧ್ಯತೆಯಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೋರ್ವರು ತಿಳಿಸಿದರು. ಆದಾಗ್ಯೂ ತನಿಖೆಯ ಬಳಿಕವೇ ಬೆಂಕಿಗೆ ನಿಖರ ಕಾರಣ ಗೊತ್ತಾಗಲಿದೆ ಎಂದರು.

Read More

ತಂಡದ ಪ್ರದರ್ಶನದ ಬಗ್ಗೆ ಪಾಕ್ ಮಾಜಿ ಆಲ್ ರೌಂಡರ್ ಅಬ್ದುಲ್ ರಜಾಕ್ ಹೇಳಿಕೆ ವಿವಾದಕ್ಕೀಡಾಗಿದೆ. ಟಿವಿ ಕಾರ್ಯಕ್ರಮವೊಂದರಲ್ಲಿ, ವಿಶ್ವಕಪ್‌ ನಲ್ಲಿ ತಂಡದ ನೀರಸ ಪ್ರದರ್ಶನಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಟೀಕಿಸುವ ಸಂದರ್ಭದಲ್ಲಿ ರಜಾಕ್ ಬಾಲಿವುಡ್ ನಟಿ ಐಶ್ವರ್ಯಾ ರೈ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದರು. ಐಶ್ವರ್ಯಾ ರೈ ಅವರನ್ನು ಮದುವೆಯಾದ ಮಾತ್ರಕ್ಕೆ ಸುಂದರ ಮಗು ಹುಟ್ಟುವುದಿಲ್ಲ ಎಂಬುದು ತಾರೆಯರ ಮಾತು. ಮಾಜಿ ಆಟಗಾರರಾದ ಶಾಹಿದ್ ಅಫ್ರಿದಿ ಮತ್ತು ಉಮರ್ ಗುಲ್ ಕೂಡ ಭಾಗವಹಿಸಿದ ಚರ್ಚೆಯಲ್ಲಿ ಉಲ್ಲೇಖವಾಗಿದೆ. ರಜಾಕ್ ಮಾತು ಕೇಳಿ ಅಫ್ರಿದಿ ಮತ್ತು ಗುಲ್ ಚಪ್ಪಾಳೆ ತಟ್ಟಿದರು. ನಾನು ಪಿಸಿಬಿಯ ಉದ್ದೇಶದ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಆಡುವಾಗ, ಯೂನಿಸ್ ಖಾನ್ ನಾಯಕನಾಗಿ ಸ್ಪಷ್ಟ ಗುರಿ ಮತ್ತು ಮಹತ್ವಾಕಾಂಕ್ಷೆಗಳನ್ನು ಹೊಂದಿದ್ದ ವ್ಯಕ್ತಿ. ಇದು ನನಗೆ ಆತ್ಮವಿಶ್ವಾಸ ಮತ್ತು ಉತ್ತಮ ಪ್ರದರ್ಶನ ನೀಡಲು ಪ್ರೇರಣೆ ನೀಡಿತು. ಇಲ್ಲಿ ಎಲ್ಲರೂ ಪಾಕಿಸ್ತಾನ ಕ್ರಿಕೆಟ್ ತಂಡ ಮತ್ತು ಆಟಗಾರರ ಪ್ರದರ್ಶನದ ಬಗ್ಗೆ ಮಾತನಾಡುತ್ತಿದ್ದಾರೆ. ವಾಸ್ತವವಾಗಿ, ಶ್ರೇಷ್ಠ ಆಟಗಾರರನ್ನು…

Read More

ಬೆಳಗಾವಿ: ಉಚಗಾಂವ ಗ್ರಾಮದ ಶ್ರೀ ಹನುಮಾನ ಯುವಕ ಮಂಡಳದವರು ದೀಪಾವಳಿಯ ಪ್ರಯುಕ್ತವಾಗಿ ನಿರ್ಮಾಣ ಮಾಡಿದ್ದ ಕಿಲ್ಲಾವನ್ನು ಸಾಂಕೇತಿಕವಾಗಿ ಉದ್ಘಾಟಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಗ್ರಾಮಸ್ಥರು ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಯುವರಾಜ ಕದಂ, ಗ್ರಾಮ ಪಂಚಾಯತ್ ಅಧ್ಯಕ್ಷೆ ಮಧುರಾ ತೇರ್ಸೆ, ಉಪಾಧ್ಯಕ್ಷ ಬಾಳು ತೇರ್ಸೆ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಯೋಗಿತಾ ದೇಸಾಯಿ, ಹನುಮಾನ ಯುವಕ ಮಂಡಳದ ಪದಾಧಿಕಾರಿಗಳು, ಲಕ್ಷ್ಮಣ ಚೌಗುಲೆ, ಬಾಬು ಫರ್ನಾಂಡೀಸ್, ವಾಯ್ ಬಿ ಚೌಗುಲೆ, ಅಶೋಕ ಹುಕ್ಕೇರಿಕರ್, ಸುನಿಲ ದೇಸಾಯಿ, ವಕೀಲರಾದ ಶರದ್ ದೇಸಾಯಿ, ಶರದ್ ದೇಸಾಯಿ, ಪತ್ರಕರ್ತರಾದ ಎನ್ ಒ ಚೌಗುಲೆ ಹಾಗೂ ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.

Read More