Author: admin

ತೆಲಂಗಾಣ ವಿಧಾನಸಭೆ ಚುನಾವಣೆ ನಿಮಿತ್ಯ ವನಪರ್ತಿ ಜಿಲ್ಲೆಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ  ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೇಘಾ ರಡ್ಡಿ ಅವರ ಪರವಾಗಿ ನಡೆದ ಪ್ರಮೂಖ ಮುಖಂಡರ ಸಭೆಯಲ್ಲಿ  ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವರಾದ ಎನ್ಎಸ್ ಬೋಸರಾಜು ಅವರು ಭಾಗವಹಿಸಿ ಚುನಾವಣೆಯ ಸಿದ್ದತೆ ಕುರಿತಯ ಸುಧೀರ್ಘ ಚರ್ಚಿಸಿದರು‌. ಟಿಆರ್ ಎಸ್ ಪಕ್ಷ ಹಣದ ಆಮಿಷದಿಂದ ಚುನಾವಣೆ ಮಾಡುತ್ತಿದೆ. ತೆಲಂಗಾಣದಲ್ಲಿ ಹಣ ಮತ್ತು ಸ್ವಾಭಿಮಾನದ ನಡುವೆ ಚುನಾವಣೆ ನಡೆದಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೇಘಾ ರಡ್ಡಿ ಗೆಲ್ಲಿಸುವ ಮೂಲಕ ಸ್ವಾಭಿನವನ್ನು ಕಾಪಾಡಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು. ಕರ್ನೂಲು ಜಿಲ್ಲಾ ಕಾಂಗ್ರೆಸ್ ಮುಖಂಡರು ಅಭೂತಪೂರ್ವವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ, ಎಐಸಿಸಿ ಕಾರ್ಯದರ್ಶಿ ಚಿನ್ನಾ ರಡ್ಡಿ,  ಎಐಸಿಸಿ ಕಾರ್ಯದರ್ಶಿ ಮೋಹನ್ ರಡ್ಡಿ, ನಾಗರ ಕರ್ನೂಲ್ ಮಾಜಿ ಸಂಸದ ಮಲ್ಲು ರವಿ,  ಕೆ ಶಾಂತಪ್ಪ, ಶ್ರೀಕಾಂತ ವಕೀಲ್, ಜಿ  ಶಿವಮೂರ್ತಿ, ಶ್ರೀ ಲತಾ ರಡ್ಡಿ, ರಾಜೇಂದ್ರ ಪ್ರಸಾದ ಸೇರಿ…

Read More

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಬಗ್ಗೆ ಗಮನಹರಿಸಲು ಡಿಸಿಎಂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ‌. ಶಿವಕುಮಾರ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರುಗಳಿಗೆ ಕಿವಿಮಾತು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜವಾಹರಲಾಲ್ ನೆಹರೂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ  ಡಿಸಿಎಂ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಸಾಮಾಜಿಕ, ಆರ್ಥಿಕ ಶಕ್ತಿಗೆ ಅಡಿಪಾಯ ಹಾಕಿದವರು. ಬೆಂಗಳೂರಿನಲ್ಲಿನ ಮಾನವ ಶಕ್ತಿಯನ್ನು ಗಮನದಲ್ಲಿಟ್ಟುಕೊಂಡು ನೆಹರೂ ಅವರು ಆ ಕಾಲದಲ್ಲೇ ಎಚ್ ಎಎಲ್, ಹೆಚ್ ಎಂಟಿ, ಬಿಇಎಲ್, ಬಿಎಚ್ ಇಎಲ್, ಇಸ್ರೋ ಸೇರಿದಂತೆ ಅನೇಕ ಸಂಸ್ಥೆಗಳನ್ನು ಇಲ್ಲಿ ಸ್ಥಾಪಿಸಿದರು. ಈ ಸಂಸ್ಥೆಗಳಿಂದ ನಮ್ಮ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯಕ್ಕೆ ಶಕ್ತಿ ಬಂದಿದೆ. ಅವರ ಕಾಲದಲ್ಲಿನ ಪಂಚವಾರ್ಷಿಕ ಯೋಜನೆ, ಅಂಬೇಡ್ಕರ್ ಅವರಿಗೆ ಕೊಟ್ಟ ಜವಾಬ್ದಾರಿ ಮಹತ್ವದ್ದಾಗಿದೆ. ಅವರ ಪ್ರತಿಯೊಂದು ನಿಲುವು ನೀತಿಗಳು ದೇಶದ ಅಭಿವೃದ್ಧಿಗೆ ಭದ್ರ ಬುನಾದಿಯಾಗಿತ್ತು. ಅವರ ವಿದೇಶಾಂಗ ನೀತಿಯನ್ನು ವಿಶ್ವದ ಅನೇಕ ರಾಷ್ಟ್ರಗಳು ಅನುಸರಿಸಿದವು.ನೆಹರೂ…

Read More

ಬೆಂಗಳೂರು: ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ. ಮುಂದಿನ ಪೀಳಿಗೆಯವರೂ ಅನುಭವಿಸುತ್ತಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 134 ನೇ ಜನ್ಮ ದಿನೋತ್ಸವದ ಅಂಗವಾಗಿ ವಿಧಾನಸೌಧದಲ್ಲಿರುವ ಪ್ರತಿಮೆಗೆ ಹೂಮಾಲೆ ಹಾಕಿ ಗೌರವ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು. ಈ ಮೌಲ್ಯಗಳನ್ನು ಪ್ರಧಾನಮಂತ್ರಿಯಾಗಿ ಭಾರತದಲ್ಲಿ ನೆಲೆಯೂರಿಸಲು ಶ್ರಮಿಸಿದರು. ಈ ಮೌಲ್ಯಗಳನ್ನು  ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನೆಹರೂ ಅವರಿಗೆ ನಾವು ಸಲ್ಲಿಸುವ ಅರ್ಥಪೂರ್ಣ ಶ್ರದ್ಧಾಂಜಲಿ ಎಂದರು. ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಕಾರಣಕ್ಕೇ ದೇಶದ ಮಕ್ಕಳ ಪಾಲಿಗೆ ಚಾಚಾ ನೆಹರೂ ಆದರು. ಸ್ವಾತಂತ್ರ್ಯ ಹೋರಾಟದಲ್ಲಿ 9 ವರ್ಷಗಳ ಕಾಲ ಜೈಲುವಾಸ ಅನುಭಸಿದ್ದರು. ಸ್ವಾತಂತ್ರ್ಯಾ ನಂತರದಲ್ಲಿ ದೇಶದ ಪ್ರಧಾನಿಯಾಗಿ ಆಧುನಿಕ ಭಾರತದ ಶಿಲ್ಪಿ ಎನ್ನಿಸಿಕೊಂಡರು ಎಂದು ವಿವರಿಸಿದರು. ನೆಹರೂ ಅವರು ಪ್ರಧಾನಿ ಆಗಿ ವಿರೋಧ ಪಕ್ಷದವರು ಮಾತಾಡುವಾಗ ಸಹನೆಯಿಂದ ಕೇಳಿಸಿಕೊಳ್ಳುತ್ತಿದ್ದರು.…

Read More

ನಿರ್ಮಾಣ ಹಂತದಲ್ಲಿರುವ ಸುರಂಗದೊಳಗೆ ಸಿಲುಕಿರುವ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದು, ಇಂದು ಅವರೊಂದಿಗೆ ಸಂವಹನವನ್ನು ಸ್ಥಾಪಿಸಲಾಗಿದೆ ಎಂದು ಉತ್ತರಕಾಶಿ ಸಿಡಿಒ ಗೌರವ್ ಕುಮಾರ್ ತಿಳಿಸಿದ್ದಾರೆ. “ನಾನು ಸುರಂಗದ ಒಳಗೆ ಹೋದೆ ಮತ್ತು ನಾವು ಒಳಗೆ ಸಿಕ್ಕಿಬಿದ್ದ ಕಾರ್ಮಿಕರೊಂದಿಗೆ ಮಾತನಾಡುತ್ತಿದ್ದೇವೆ. ಬೆಳಿಗ್ಗೆ 10 ಗಂಟೆಗೆ ಅವರೊಂದಿಗೆ ಸಂವಹನವನ್ನು ಸ್ಥಾಪಿಸಲಾಯಿತು. ಅವರು ಸುರಕ್ಷಿತವಾಗಿ ಮತ್ತು ಸದೃಢರಾಗಿದ್ದಾರೆ. ಅವರಿಗೆ ಖಾದ್ಯ ವಸ್ತುಗಳು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ ಮತ್ತು ಸಿಎಂಒ ಕೆಲವು ಔಷಧಿಗಳನ್ನು ಸಹ ವ್ಯವಸ್ಥೆಗೊಳಿಸಿದೆ, ಎಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹೇಳಿದರು. ರಕ್ಷಣಾ ಕಾರ್ಯಾಚರಣೆ ಕುರಿತು ಸಿಡಿಒ ಕುಮಾರ್, “ಪೈಪ್ ತಳ್ಳುವಿಕೆಯು ಪ್ರಾರಂಭವಾಗಲಿದೆ. ಅದಕ್ಕೆ ತಯಾರಿ ನಡೆಯುತ್ತಿದೆ ಮತ್ತು ನಾವು ವೇಳಾಪಟ್ಟಿಯಂತೆ ಮುಂದುವರಿಯುತ್ತೇವೆ” ಎಂದು ಅವರು ಹೇಳಿದರು.

Read More

ಬೆಂಗಳೂರು: “ಅಚಾತುರ್ಯವೋ, ಕಳ್ಳತನವೋ ಒಟ್ಟಿನಲ್ಲಿ ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಅವರು ಒಪ್ಪಿಕೊಂಡು, ದಂಡ ಕಟ್ಟುತ್ತೇನೆ ಎಂದು ಹೇಳಿರುವುದು ಅಭಿನಂದನೀಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. “ಕುಮಾರಸ್ವಾಮಿ ಅವರು ಮನೆಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಮಾಡಿಕೊಂಡಿದ್ದಾರೆ” ಎಂಬ ಬಗ್ಗೆ ಮಾಧ್ಯಮಗಳ ವರದಿ ಹಾಗೂ ಕಾಂಗ್ರೆಸ್ ಪಕ್ಷದ ‘ಎಕ್ಸ್’ ಖಾತೆಯಲ್ಲಿ ಮಾಡಿರುವ ಆರೋಪ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ವಿಧಾನಸೌಧ ಹಾಗೂ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಡಿಸಿಎಂ ಡಿ‌.ಕೆ.ಶಿವಕುಮಾರ್ ಅವರು ಮಂಗಳವಾರ ಈ ರೀತಿ ಉತ್ತರಿಸಿದರು. “ಕುಮಾರಸ್ವಾಮಿ ಮನೆಗೆ ವಿದ್ಯುತ್ ಕಳವು ವಿಚಾರವನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅವರ ನೆರೆಹೊರೆಯವರೇ ಅಕ್ರಮ ವಿದ್ಯುತ್ ಸಂಪರ್ಕದ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡಿದ್ದಾರೆ. ಆನಂತರ ನಮ್ಮ ಪಕ್ಷದ ಸಾಮಾಜಿಕ ಜಾಲತಾಣ ಘಟಕ ಏನು ಕೆಲಸ ಮಾಡಬೇಕೊ ಅದನ್ನು ಮಾಡಿದೆ. ಅವರ ಪಕ್ಷದ ಸೋಶಿಯಲ್ ಮೀಡಿಯಾದಲ್ಲಿ ಬೇಕಾದಷ್ಟು ಬರೆದಂತೆ, ನಮ್ಮ ಪಕ್ಷದವರು ಏನು ಕೆಲಸ ಮಾಡಬೇಕೋ ಅದನ್ನು ಮಾಡಿದ್ದಾರೆ. ಅವರು ಮಾಡೋದನ್ನು ನೋಡಿಕೊಂಡು ಸುಮ್ಮನೆ…

Read More

ಬೆಂಗಳೂರು: ಬಿಗ್ ಬಾಸ್ ಹಾಲಿ ಸ್ಪರ್ಧಿ ತನಿಷಾ ವಿರುದ್ಧ  ದೂರು ದಾಖಲಾಗಿದೆ. ಬಿಗ್‌ ಬಾಸ್ ರಿಯಾಲಿಟಿ ಕಾರ್ಯಕ್ರಮದಲ್ಲಿ ಬೋವಿ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂಬ ಆರೋಪದಡಿ ನಟಿ ತನಿಷಾ ವಿರುದ್ಧ ಕುಪ್ಪಂಡ ವಿರುದ್ಧ ದೂರು ದಾಖಲಾಗಿದೆ. 8/11/2023ರಂದು ಪ್ರಸಾರವಾದ ಕಾರ್ಯಕ್ರಮದಲ್ಲಿ ಡೆ ಪ್ರತಾಪ್ ವಿರುದ್ಧ ನಡೆಸಿದ ಸಂಭಾಷಣೆಯಲ್ಲಿ’ ನೀನು ವಡ್ಡನ ತರ ಆಡುತ್ತಿದ್ದೀಯಾ’ ಎಂಬ ಪದ ಬಳಕೆ ಮಾಡಲಾಗಿದೆ ಎಂದು ವಿರೋಧಿಸಿ ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ. ಪದ್ಮಾ ಇವರು, ತನಿಷಾ ವಿರುದ್ಧ ಕುಂಬಳ ಗೋಡು ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

Read More

ಹೊಸದಿಲ್ಲಿ: ಮಕ್ಕಳು ದೇಶದ ಭವಿಷ್ಯ ಮತ್ತು ಅವರನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅಧ್ಯಕ್ಷೆ ದ್ರೌಪದಿ ಮುರ್ಮು ಹೇಳಿದ್ದಾರೆ. ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಇಲ್ಲಿನ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ (ಆರ್‌ ಬಿಸಿಸಿ) ವಿವಿಧ ಶಾಲೆಗಳು ಮತ್ತು ಸಂಸ್ಥೆಗಳ ಮಕ್ಕಳು ಅಧ್ಯಕ್ಷರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷರು, ಮಕ್ಕಳು ದೇಶದ ಭವಿಷ್ಯ ಎಂದು ನಾವು ಆಗಾಗ್ಗೆ ಹೇಳುತ್ತೇವೆ. “ಈ ಭವಿಷ್ಯವನ್ನು ಕಾಪಾಡುವುದು ಮತ್ತು ಅವರ ಸರಿಯಾದ ಪಾಲನೆಯನ್ನು ಖಚಿತಪಡಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ” ಎಂದು ಮುರ್ಮು ಅವರು ರಾಷ್ಟ್ರಪತಿ ಭವನ ಹೊರಡಿಸಿದ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ. ಇಂದಿನ ಮಕ್ಕಳಲ್ಲಿ ತಂತ್ರಜ್ಞಾನ ಮತ್ತು ಸಾಕಷ್ಟು ಮಾಹಿತಿ ಮತ್ತು ಜ್ಞಾನವಿದೆ ಎಂದು ಅವರು ಹೇಳಿದರು. ದೇಶ-ವಿದೇಶಗಳಲ್ಲಿ ತಮ್ಮ ಪ್ರತಿಭೆ ತೋರುತ್ತಿದ್ದು, ಮಕ್ಕಳ ಪ್ರತಿಭೆಗೆ ಸರಿಯಾದ ದಿಕ್ಕು ತೋರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮುರ್ಮು ಅವರು ತಮ್ಮ ಸಾಮರ್ಥ್ಯವನ್ನು ಗುರುತಿಸಿ ಸಂಪೂರ್ಣ ಸಮರ್ಪಣೆ ಮತ್ತು ಕಠಿಣ ಪರಿಶ್ರಮದಿಂದ ತಮ್ಮ ಗುರಿಯತ್ತ ಸಾಗಿದರೆ, ಅವರು ತಮ್ಮ ಗುರಿಯನ್ನು…

Read More

ಯುನೆಸ್ಕೋ(UNESCO) ವಿಶ್ವ ಪರಂಪರೆಯ ತಾಣವಾಗಿರುವ ಹಂಪಿಯ ವಿರೂಪಾಕ್ಷ ದೇವಾಲಯದಲ್ಲಿ ಐತಿಹಾಸಿಕ ಸ್ತಂಭವನ್ನು ಕೊರೆದ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಕರ್ನಾಟಕದ ದತ್ತಿ ಇಲಾಖೆಗೆ ನೋಟಿಸ್ ನೀಡಿದೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜ ಕಟ್ಟಲು ಸ್ತಂಭವನ್ನು ಕೊರೆಯಲಾಗಿದೆ. ಐತಿಹಾಸಿಕ ಸ್ತಂಭಗಳಲ್ಲಿ ರಂಧ್ರಗಳನ್ನು ಮಾಡುವ ಮೊದಲು ರಾಜ್ಯ ಸರ್ಕಾರವು ಯಾವುದೇ ಅನುಮತಿಗಳನ್ನು ಪಡೆದಿಲ್ಲ ಎಂದು ಎಎಸ್ ಐ ಆರೋಪಿಸಿದೆ.

Read More

ಇಂದು ನವೆಂಬರ್ 14 – ಮಕ್ಕಳ ದಿನ. ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ 134ನೇ ಜನ್ಮ ದಿನಾಚರಣೆ. ಮಕ್ಕಳನ್ನು ಜೀವದಂತೆ ಪ್ರೀತಿಸಿದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನವಾದ ನವೆಂಬರ್ 14 ರಂದು ಭಾರತದಲ್ಲಿ ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಪಂಡಿತ್ ಜವಾಹರಲಾಲ್ ನೆಹರು ಅವರು 1889 ರಲ್ಲಿ ಅಲಹಾಬಾದ್ ನಲ್ಲಿ ಜನಿಸಿದರು. ಸ್ವಾತಂತ್ರ್ಯ ಹೋರಾಟಗಾರ, ಬರಹಗಾರ, ವಾಗ್ಮಿ ಮತ್ತು ರಾಜಕಾರಣಿಯಾಗಿ ವಿವಿಧ ಸಾಮರ್ಥ್ಯಗಳಲ್ಲಿ ಪ್ರಸಿದ್ಧರಾಗಿರುವ ನೆಹರೂ ಅವರು ಆಧುನಿಕ ಭಾರತವನ್ನು ನಿರ್ಮಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದ್ದಾರೆ ಎಂದು ಪರಿಗಣಿಸಲಾಗಿದೆ. 1964 ರಲ್ಲಿ ಜವಾಹರಲಾಲ್ ನೆಹರು ಅವರ ಮರಣದ ನಂತರ ಸಂಸತ್ತು ಅವರ ಜನ್ಮದಿನವಾದ ನವೆಂಬರ್ 14 ಅನ್ನು ಮಕ್ಕಳ ದಿನವೆಂದು ಘೋಷಿಸುವ ನಿರ್ಣಯವನ್ನು ಅಂಗೀಕರಿಸಿತು. ಜವಾಹರಲಾಲ್ ನೆಹರೂ ಅವರ ಮರಣದ ಮೊದಲು, ಭಾರತವು ನವೆಂಬರ್ 20 ರಂದು ಮಕ್ಕಳ ದಿನವನ್ನು ಆಚರಿಸಿತು. ವಿಶ್ವಸಂಸ್ಥೆಯು ವಿಶ್ವ ಮಕ್ಕಳ ದಿನವನ್ನಾಗಿ ಆಚರಿಸಿದ ದಿನವಾಗಿತ್ತು. ಆದರೆ ಅವರ ಮರಣದ ನಂತರ ಅವರ ಜನ್ಮದಿನವನ್ನು…

Read More

ಮಂಗಳೂರಿನಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. 20 ವರ್ಷದ ಪ್ರಕೃತಿ ಶೆಟ್ಟಿ ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ. ಈಕೆ ಮಂಗಳೂರಿನ ‌ಎ.ಜೆ. ಆಸ್ಪತ್ರೆ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದಳು. ಮುಂಜಾನೆಯೇ ತಾನಿದ್ದ ಮೆಡಿಕಲ್ ಕಾಲೇಜ್ ನ ಹಾಸ್ಟೆಲ್‌ ನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಹಲವು ಪುಟಗಳ ಸುದೀರ್ಘ ಡೆತ್‌ ನೋಟ್ ಬರೆದಿಟ್ಟಿದ್ದಾಳೆ. ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ ನಾನು ದಪ್ಪ ಇರೋದ್ರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಅಂತ ಡೆತ್‌ ನೋಟ್‌ ನಲ್ಲಿ ಬರೆದಿದ್ದಾಳೆ ಎನ್ನಲಾಗಿದೆ. ನಾನು ತುಂಬಾ ದಪ್ಪ ಇದ್ದೀನಿ. ನೋಡೋಕೆ ಚೆನ್ನಾಗಿ ಕಾಣುತ್ತಾ ಇಲ್ಲ ಅಂತ ಬರೆದಿದ್ದಾಳೆ. ನನಗೆ ಎಂಬಿಬಿಎಸ್ ಮುಗಿಸಬೇಕು ಅಂತಾ ತುಂಬಾ ಆಸೆ ಇತ್ತು. ಅದ್ರೆ ನನ್ನ ಸೌಂದರ್ಯಕ್ಕೆ ದಪ್ಪ ಅನ್ನೋದು ಅಡ್ಡಿಯಾಗಿತ್ತು. ತೂಕ ಇಳಿಸಲು ಸಾಕಷ್ಟು ಪ್ರಯತ್ನ ಪಟ್ಟರೂ ಆಗಲಿಲ್ಲ. ಇದ್ರಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದೇನೆ‌. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಅಂತ ಡೆತ್ ನೋಟ್‌ನಲ್ಲಿ ಬರೆದಿದ್ದಾಳೆ. ಇನ್ನು ಈ…

Read More