Subscribe to Updates
Get the latest creative news from FooBar about art, design and business.
- ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
Author: admin
ದೀಪಾವಳಿ ಆಚರಣೆಯ ನಂತರ, ದೆಹಲಿಯಲ್ಲಿ ವಾಯು ಮಾಲಿನ್ಯವು ನಿರ್ಣಾಯಕವಾಗಿದೆ. ದೀಪಾವಳಿಯಂದು ನಿಯಮಾವಳಿಗಳನ್ನು ಉಲ್ಲಂಘಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದರಿಂದ ಗಾಳಿಯ ಗುಣಮಟ್ಟ ಮತ್ತೆ ಹದಗೆಟ್ಟಿದೆ. ಮಂಗಳವಾರ ಬೆಳಗ್ಗೆ ದೆಹಲಿಯ ಹಲವೆಡೆ ದಟ್ಟ ಹೊಗೆ ಆವರಿಸಿದೆ. ಕಳೆದ ಎರಡು ವಾರಗಳಲ್ಲಿ ನಗರದ ಗಾಳಿಯ ಗುಣಮಟ್ಟ ಕುಸಿದಿದೆ. ಆದರೆ ಈ ಮಧ್ಯೆ ಮಳೆಯಿಂದಾಗಿ ದೀಪಾವಳಿಯಂದು ವಾಯು ಗುಣಮಟ್ಟ ಸೂಚ್ಯಂಕ 218ಕ್ಕೆ ಸುಧಾರಿಸಿದೆ. ಆದರೆ ಜನರು ಪಟಾಕಿ ಸಿಡಿಸಿದಾಗ ಮತ್ತೆ ಹದಗೆಟ್ಟಿದೆ. ಬವನ, ನರೇಲಾ, ರೋಹಿಣಿ, ಆರ್ ಕೆ ಪುರಂ, ದ್ವಾರಕನರೇಲಾ, ಓಖ್ಲಾನರೇಲಾ ಮುಂತಾದ ಸ್ಥಳಗಳು ವಾಯು ಗುಣಮಟ್ಟ ಸೂಚ್ಯಂಕ 400ಕ್ಕಿಂತ ಹೆಚ್ಚಿವೆ. 400ಕ್ಕಿಂತ ಹೆಚ್ಚಿನ ವಾಯು ಗುಣಮಟ್ಟ ಸೂಚ್ಯಂಕವನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಮತ್ತು 450 ಕ್ಕಿಂತ ಹೆಚ್ಚು ಮಾಲಿನ್ಯವನ್ನು ಅತ್ಯಂತ ಗಂಭೀರವೆಂದು ಪರಿಗಣಿಸಲಾಗುತ್ತದೆ.
ಆಶ್ರಮದಲ್ಲಿ ಆರ್ಥಿಕ ವಂಚನೆ ಮತ್ತು ಲೈಂಗಿಕ ಶೋಷಣೆ ಆರೋಪ ಹೊತ್ತಿರುವ ಇಬ್ಬರು ಬ್ರಹ್ಮಕುಮಾರಿಯ ಸನ್ಯಾಸಿನಿಯರ ಆತ್ಮಹತ್ಯೆ ಪ್ರಕರಣದಲ್ಲಿ ಆಗ್ರಾ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 32 ವರ್ಷದ ಶಿಖಾ ಮತ್ತು 38 ವರ್ಷದ ಏಕ್ತಾ ಆತ್ಮಹತ್ಯೆ ಮಾಡಿಕೊಂಡವರು. ಇಬ್ಬರೂ ಸಹೋದರಿಯರು. ಇಬ್ಬರೂ ಆಗ್ರಾದ ಜಗ್ನಾರ್ ನಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಆಶ್ರಮದಲ್ಲಿ ವಾಸಿಸುತ್ತಿದ್ದರು. ಮೌಂಟ್ ಅಬುವಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ನೀರಜ್ ಸಿಂಘಾಲ್, ಆತನ ತಂದೆ ತಾರಾಚಂದ್ರ ಹಾಗೂ ಗ್ವಾಲಿಯರ್ ನಲ್ಲಿರುವ ಬ್ರಹ್ಮಕುಮಾರಿಯರ ಆಶ್ರಮದ ಕೈದಿ ಪೂನಂ ಎಂಬ ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ. ಜಗ್ನಾರ್ ನಲ್ಲಿ ಆಶ್ರಮ ಸ್ಥಾಪಿಸಿದ ಆರೋಪಿಗಳು ಆಶ್ರಮಕ್ಕೆ ಸಂಬಂಧಿಸಿದ ಚಟುವಟಿಕೆಗಳ ಹೆಸರನ್ನು ಬಳಸಿಕೊಂಡು ಆರ್ಥಿಕ ವಂಚನೆ ಮಾಡಿದ್ದಾರೆ. ಪ್ರಮುಖ ಆರೋಪಿ ಮತ್ತು ಆತನ ತಂದೆ ಆತ್ಮಹತ್ಯೆ ಮಾಡಿಕೊಂಡ ಸನ್ಯಾಸಿನಿಯರ ಸಂಬಂಧಿಕರು. ಆಗ್ರಾದ ಆಶ್ರಮದ ಸದಸ್ಯರಿಂದ ಸಂಗ್ರಹಿಸಿದ್ದ 25 ಲಕ್ಷ ರೂಪಾಯಿ ಕದ್ದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು ಆರೋಪಿಸಿದ್ದರು. ಯೋಗಿ ಆದಿತ್ಯನಾಥ್ ಅವರ ಸಾವಿಗೆ…
ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ವಿ.ಮುರಳೀಧರನ್ ಅವರು ಜಪಾನ್ ನ ಶಿಂಕನ್ ಸೆನ್ ಬುಲೆಟ್ ರೈಲಿನಲ್ಲಿ ಪ್ರಯಾಣಿಸುವ ಖುಷಿಯನ್ನು ಹಂಚಿಕೊಂಡಿದ್ದಾರೆ. ಜಪಾನ್ ಪ್ರವಾಸದ ವೇಳೆ ಬುಲೆಟ್ ರೈಲಿನಲ್ಲಿ ಅವರ ಪ್ರಯಾಣ. ನಿನ್ನೆ ಅವರು X (ಟ್ವಿಟ್ಟರ್) ನಲ್ಲಿ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ಶಿಂಕನ್ ಸೆನ್ ಜಪಾನ್ ನ ಪ್ರಸಿದ್ಧ ಬುಲೆಟ್ ರೈಲುಗಳು. ವೇಗ ಗಂಟೆಗೆ 320 ಕಿ.ಮೀ. ಜಪಾನ್ ನ ಶಿಂಕನ್ ಸೆನ್ ಬುಲೆಟ್ ಟ್ರೈನ್ ನಲ್ಲಿ ಪ್ರಯಾಣಿಸಲು ತುಂಬಾ ಸಂತೋಷವಾಯಿತು. ಅದೊಂದು ವಿಶಿಷ್ಟ ಪ್ರಯಾಣದ ಅನುಭವ. ಭಾರತದಲ್ಲಿ ಅದೇ ಅನುಭವವನ್ನು ನೋಡಲು ನಾವು ಹೆಚ್ಚು ಸಮಯ ಕಾಯಲು ಸಾಧ್ಯವಿಲ್ಲ ಮತ್ತು ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಯು ವೇಗದ ಟ್ರ್ಯಾಕ್ ನಲ್ಲಿದೆ ಎಂದು ಅವರು ಗಮನಿಸಿದರು. ಭಾರತದ ಮೊದಲ ಬುಲೆಟ್ ರೈಲು ಯೋಜನೆಯಾದ ಮುಂಬೈ-ಅಹಮದಾಬಾದ್ ಮಾರ್ಗದ ನಿರ್ಮಾಣ ಪ್ರಗತಿಯಲ್ಲಿದೆ. ಬುಲೆಟ್ ರೈಲು 1964 ರಲ್ಲಿ ಜಪಾನ್ ನಲ್ಲಿ ಪ್ರಾರಂಭವಾಯಿತು. ಜಪಾನ್ ಪ್ರಸ್ತುತ 2,830.6 ಕಿಮೀ ಹೈಸ್ಪೀಡ್ ರೈಲು ಹೊಂದಿದೆ. ಮಿನಿ-ಶಿಂಕಾಸೆನ್…
ಬೆಂಗಳೂರು: ಪ್ರತಿ ಮಂಗಳವಾರ, ವಾಡಿಕೆಯಂತೆ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ವಾರದ ರಜೆ ಕೊಡಲಾಗುತ್ತದೆ. ಆದರೆ ನ.14ರ ಮಂಗಳವಾರ ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಉದ್ಯಾನವನದ ವೀಕ್ಷಣೆಗೆ ಆಗಮಿಸುವ ನಿರೀಕ್ಷೆ ಇರುವುದರಿಂದ, ಪ್ರವಾಸಿಗರ ವೀಕ್ಷಣೆಗೆ ಅನುಕೂಲವಾಗುವಂತೆ ಸದರಿ ದಿನದಂದು ಉದ್ಯಾನವನದ ಮೃಗಾಲಯ, ಸಫಾರಿ ಮತ್ತು ಚಿಟ್ಟೆ ಉದ್ಯಾನವನ ಇವುಗಳನ್ನು ತೆರೆದಿಡಲಾಗುತ್ತದೆ. ಸಾರ್ವಜನಿಕರು ಈ ಬದಲಾವಣೆ ಹಾಗೂ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬಹುದಾಗಿದೆ.
ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿರುವ ವಿಚಾರವಾಗಿ ಸಂಸದ ರಮೇಶ ಜಿಗಜಿಣಗಿ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋಮವಾರ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸೆಂಬ್ಲಿಯಲ್ಲೂ ನೋಡಿದ್ದೇವೆ, ಲೋಕಸಭೆಯಲ್ಲೂ ನೋಡಿದ್ದೇವೆ. ಕಳೆದ 75 ವರ್ಷಗಳಿಂದ ದಲಿತ ನಾಯಕರು ಮತ್ತೊಬ್ಬರ ಪರವಾಗಿ ಕೈ ಎತ್ತುತ್ತಲೇ ಬಂದವರು. ಆದರೆ, ಅವರ ಪರವಾಗಿ ಯಾರೂ ಕೈ ಎತ್ತುತ್ತಿಲ್ಲ ಅನ್ನೋದು ದುಃಖದ ಸಂಗತಿ ಎನ್ನುವ ಮೂಲಕ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರು: ನಡುರಸ್ತೆಯಲ್ಲೇ ಪುಂಡನೊಬ್ಬ ಯುವತಿಯ ಬಟ್ಟೆಯನ್ನು ಎಳೆದಾಡಿ, ಕಿರುಕುಳ ನೀಡಿರವ ಘಟನೆ ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ನಲ್ಲಿರುವ ಡಿಸಿಪಿ ಕಚೇರಿ ಎದರು ನಡೆದಿದೆ. ನವೆಂಬರ್ 6ರಂದು ರಾತ್ರಿ 10.40ರ ಸುಮಾರಿಗೆ ಯುವತಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ, ಬೈಕ್ ನಲ್ಲಿ ಬಂಡ ದುಷ್ಕರ್ಮಿ ಯುವತಿಯ ಬಟ್ಟೆಯನ್ನು ಎಳೆದಾಡಿ ಅಶ್ಲೀಲವಾಗಿ ನಿಂದಿಸಿ ಎಸ್ಕೆಪ್ ಆಗಿದ್ದಾನೆ. ಯುವತಿ ನವೆಂಬರ್ 8ರಂದು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ದುಷ್ಕರ್ಮಿಗಾಗಿ ಪೊಲೀಸರ ಶೋಧ ನಡೆಸಿದ್ದಾರೆ.
ಹಾಡಹಗಲೇ ಪುರಸಭೆ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲಾಗಿರುವ ಭಯಾನಕ ಘಟನೆ ಬಳ್ಳಾರಿ ಜಿಲ್ಲೆ ತೋರಣಗಲ್ ಪಟ್ಟಣದ ಘೋರ್ಪಡೆ ನಗರದಲ್ಲಿ ನಡೆದಿದೆ. 11ನೇ ವಾರ್ಡ್ನ ಪುರಸಭೆ ಸದಸ್ಯ ನಾಗರಾಜ ನಾಯ್ಕ(32) ಮೇಲೆ ಶಿವಕುಮಾರ್ ಎಂಬುವವರು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಚರಂಡಿ ವಿಚಾರಚಾಗಿ ಇವರಿಬ್ಬರ ನಡುವೆ ದ್ವೇಷ ಇತ್ತು ಅದೇ ದ್ವೇಷದ ಹಿನ್ನೆಲೆ ಹಲ್ಲೆ ನಡೆಸಲಾಗಿದೆ. ತೆಲೆಗೆ, ಬೆನ್ನಿಗೆ, ಕೈಗಳಿಗೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ನಾಗರಾಜ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತೋರಣಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಐಸಿಸಿ ಹಾಲ್ ಆಫ್ ಫೇಮ್ ಗೆ ಸೇರ್ಪಡೆಗೊಂಡಿದ್ದಾರೆ. ಸೆಹ್ವಾಗ್ ಜೊತೆಗೆ ಭಾರತದ ಮಾಜಿ ಮಹಿಳಾ ಕ್ರಿಕೆಟಿಗ ಡಯಾನಾ ಎಡುಲ್ಲಿ ಮತ್ತು ಶ್ರೀಲಂಕಾದ ದಿಗ್ಗಜ ಕ್ರಿಕೆಟಿಗ ಅರವಿಂದ ಡಿಸಿಲ್ವಾ ಅವರನ್ನು ಹಾಲ್ ಆಫ್ ಫೇಮ್ಗೆ ಸೇರಿಸಿಕೊಳ್ಳಲಾಗಿದೆ ಎಂದು ಐಸಿಸಿ ಸೋಮವಾರ ಪ್ರಕಟಿಸಿದೆ. ಸೆಹ್ವಾಗ್ 104 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು ಅವರ ವೃತ್ತಿಜೀವನದಲ್ಲಿ 8,586 ರನ್, 251 ODIಗಳಲ್ಲಿ 8,273 ರನ್ ಮತ್ತು 19 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 394 ರನ್ ಗಳಿಸಿದ್ದಾರೆ. ಐಸಿಸಿ ಹಾಲ್ ಆಫ್ ಫೇಮ್ ಗೆ ಸೇರ್ಪಡೆಗೊಂಡಿರುವುದಕ್ಕೆ ಸೆಹ್ವಾಗ್ ಸಂತಸ ವ್ಯಕ್ತಪಡಿಸಿದ್ದಾರೆ
ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ಮಿನಿರತ್ನ ವರ್ಗದ ಕರೆನ್ಸಿ ನೋಟು ಮುದ್ರಣ ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಅಧಿಸೂಚನೆಯ ಮೂಲಕ ಒಟ್ಟು 117 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಜೂನಿಯರ್ ಟೆಕ್ನಿಷಿಯನ್-112 ಹುದ್ದೆಗಳು, ಆರ್ಟಿಸ್ಟ್-1 ಹುದ್ದೆ, ಸೂಪರ್ ವೈಸರ್-3 ಹುದ್ದೆಗಳು, ಸೆಕ್ರೆಟರಿಯೇಟ್ ಅಸಿಸ್ಟೆಂಟ್-1 ಹುದ್ದೆಗಳಿವೆ. ಆನ್ಲೈನ್ ಅಪ್ಲಿಕೇಶನ್ ಗೆ ಕೊನೆಯ ದಿನಾಂಕವನ್ನು 18.11.2023 ಎಂದು ನಿಗದಿಪಡಿಸಲಾಗಿದೆ. ಪೂರ್ಣ ವಿವರಗಳ ವೆಬ್ಸೈಟ್: cnpnashik.spmcil.com
ಬೆಂಗಳೂರಿನಲ್ಲಿ ಸುಬ್ರಹ್ಮಣ್ಯ ಸ್ವಾಮಿ ದೇವರ ವಿಗ್ರಹ ಕಿಡಿಗೇಡಿಗಳು ಭಗ್ನಗೊಳಿಸಿರುವ ಘಟನೆ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಬಲಮುರಿ ದೇವಸ್ಥಾನದಲ್ಲಿ ನಡೆದಿದೆ. ಬಲಮುರಿ ದೇವಸ್ಥಾನದ ಕಟ್ಟಡದಲ್ಲಿ ಸುಬ್ರಹ್ಮಣ್ಯ ಸ್ವಾಮಿ ವಿಗ್ರಹವಿದ್ದು, ಗೋಪುರದ ಮೇಲ್ಬಾಗದಲ್ಲಿರುವ ಸುಬ್ರಹ್ಮಣ್ಯ ಸ್ವಾಮಿ ಹಿಡಿದಿರುವ ಆಯುಧವನ್ನ ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ. ಕಳೆದ 8 ನೇ ತಾರೀಖು ವಿಗ್ರಹ ಭಗ್ನಗೊಳಿಸಿರುವ ಕುರಿತು ಗೊತ್ತಾಗಿದೆ. ಆದ್ರೆ ದೇವಸ್ಥಾನದ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಈಗ ದೂರು ಕೊಡಲಾಗಿದೆ.