Subscribe to Updates
Get the latest creative news from FooBar about art, design and business.
- ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
Author: admin
ದೆಹಲಿ: ವಾಯುವ್ಯ ದೆಹಲಿಯ ಖೇರಾ ಖುರ್ದ್ ಗ್ರಾಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೀಪಾವಳಿ ಪೂಜೆಗೆಂದು ತೆರಳಿದ್ದ ಮಹಿಳೆಯರ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಹಿಂದೆ ಆಸ್ತಿ ವಿವಾದ ಇರಬಹುದೆಂದು ಪೊಲೀಸರು ಶಂಕಿಸಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ಮಹಿಳೆಯ ಕುಟುಂಬದೊಂದಿಗೆ ಕೆಲವು ಆಸ್ತಿ ವಿವಾದವಿದ್ದು, ಇದೇ ದಾಳಿಯ ಹಿಂದೆ ಇದೆ ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. ಘಟನೆ ನಡೆದ ಸ್ಥಳದ ಸಮೀಪದ ಆಸ್ಪತ್ರೆಯಲ್ಲಿ ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಿತಿ ಗಂಭೀರವಾಗಿದೆ. ಇದುವರೆಗೆ ಯಾರನ್ನೂ ಬಂಧಿಸಿಲ್ಲ.
ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ದೂರದೃಷ್ಟಿ ನಾಯಕ ದಿ. ಅನಂತ್ ಕುಮಾರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಬೆಂಗಳೂರಿನ ಲಾಲ್ ಬಾಗ್ ಪಶ್ಚಿಮ ದ್ವಾರದಿಂದ ಅನಂತಸ್ಮೃತಿ ನಡಿಗೆ ಪಂಜಿನ ಮೆರವಣಿಗೆಯಲ್ಲಿ ಅವರು ಮಾತನಾಡಿದರು. ನಾಡಿನ ದಿಗ್ಗಜರ ಶ್ರೇಷ್ಠ ಬದುಕು ನಮಗೆಲ್ಲ ನಿತ್ಯ ನಿರಂತರ ಪ್ರೇರಣೆಯ ಚಿಲುಮೆಯಾಗಿದ್ದು, ನಾಡಿಗೆ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ದಿ. ಅನಂತ್ ಕುಮಾರ್ ಪುಣ್ಯಸ್ಮರಣೆ ಅರ್ಥಗರ್ಭಿತವಾಗಿ ಆಚರಿಸಲಾಯಿತು ಎಂದರು. ಬೆಂಗಳೂರಿನಲ್ಲಿ ಅನಂತ ಸ್ಮೃತಿ ನಡಿಗೆ ಕಾರ್ಯಕ್ರಮದಲ್ಲಿ ಆರ್ ಅಶೋಕ್ ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು, ತನ್ನ ನಾಯಕತ್ವ ಗುಣ, ಕರ್ತೃತ್ವಶಕ್ತಿ, ಮೇರು ವ್ಯಕ್ತಿತ್ವದ ಮೂಲಕ ರಾಷ್ಟ್ರ ಮಟ್ಟದ ನಾಯಕ ಕರ್ನಾಟಕಕ್ಕೆ ಅಪಾರ ಕೊಡುಗೆ ನೀಡಿದ, ಬಿಜೆಪಿಯ ಅಪ್ರತಿಮ ಸಂಘಟಕರು ಹಾಗೂ ನಮ್ಮೆಲ್ಲರ ನಾಯಕರಾಗಿದ್ದ ದಿ. ಅನಂತಕುಮಾರ್ ಪುಣ್ಯಸ್ಮರಣೆಯ ದಿನದಂದು ನಡೆದ ಪಂಜಿನ ಮೆರವಣಿಗೆ ನಡೆಸಲಾಯಿತು ಎಂದರು. ಈ ಸಂದರ್ಭದಲ್ಲಿ ಹಿರಿಯರಾದ ಪಿ. ವಿ. ಕೃಷ್ಣಭಟ್, ಶ್ರೀಮತಿ ತೇಜಸ್ವಿನಿ ಅನಂತ ಕುಮಾರ್,…
ಉತ್ತರ ಪ್ರದೇಶದ ಪಟಾಕಿ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ ಒಂಬತ್ತು ಮಂದಿ ಗಾಯಗೊಂಡಿದ್ದು, ಏಳು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಮಥುರಾ ಜಿಲ್ಲೆಯ ಗೋಪಾಲಬಾಗ್ ಪ್ರದೇಶದ ಪಟಾಕಿ ಮಾರುಕಟ್ಟೆಯಲ್ಲಿ ಈ ಅವಘಡ ಸಂಭವಿಸಿದೆ. ಪಟಾಕಿ ಅಂಗಡಿಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ ತ್ವರಿತವಾಗಿ ಇತರ ಅಂಗಡಿಗಳಿಗೂ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ತೀರ್ಮಾನಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಸುಟ್ಟ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಎಲ್ಲ ಅಂಗಡಿಗಳಿಗೂ ಪರವಾನಗಿ ನೀಡಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಅಜಯ್ ಕಿಶೋರ್ ಹೇಳಿದ್ದಾರೆ.
ಬೆಂಗಳೂರು: ಸಾಲದಿಂದ ದೇಶ ದಿವಾಳಿಯಾಗಿದೆ ಎಂಬ ಸಿಎಂ ಹೇಳಿಕೆ ವಿಚಾರ ‘ ಪ್ರಧಾನಿ ಬಗ್ಗೆ ಮಾತನಾಡುವ ನೈತಿಕತೆ ಸಿಎಂ ಸಿದ್ದರಾಮಯ್ಯಗೆ ಇಲ್ಲವೆಂದು ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ‘ನನ್ನ 20 ತಿಂಗಳ ಅವಧಿಯಲ್ಲಿ 3,500 ಕೋಟಿ ಸಾಲ ಮಾಡಿದ್ದೆ. ಹಿಂದೆ ಸಿದ್ದರಾಮಯ್ಯ ಸರ್ಕಾರ 2 ಲಕ್ಷ 45 ಸಾವಿರ ಕೋಟಿ ಸಾಲ ಮಾಡಿತ್ತು. ಈಗ 5 ಲಕ್ಷ 71 ಸಾವಿರ ಕೋಟಿಗೂ ಅಧಿಕ ಸಾಲ ಇದೆ. ನಿಮಗೆ ಪ್ರಧಾನಿ ಮೋದಿ ಬಗ್ಗೆ ಮಾತಾಡುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.
ಪತಿಯನ್ನು ಕೊಂದು ದೇಹವನ್ನು ತುಂಡರಿಸಿದ ಪತ್ನಿ ಹಾಗೂ ಪ್ರಿಯಕರನ ಬಂಧನ. ತಮಿಳುನಾಡಿನ ತಿರುಚ್ಚಿಯಲ್ಲಿ ಈ ಘಟನೆ ನಡೆದಿದೆ. 26 ವರ್ಷದ ವಿನೋದಿನಿ ತನ್ನ 23 ವರ್ಷದ ಪ್ರೇಮಿ ಭಾರತಿ ಸಹಾಯದಿಂದ ಪತಿ ಪ್ರಭುವನ್ನು ಕೊಂದಿದ್ದಾಳೆ. ಇವರಲ್ಲದೆ ಇನ್ನೂ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 5 ರಂದು ಸಹೋದರ ಹೂ ಮಾರಾಟಗಾರ ಪ್ರಭುವನ್ನು ನೋಡಲು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ತನ್ನ ಸಹೋದರ ಎಲ್ಲಿದ್ದಾನೆ ಎಂದು ಕೇಳಿದಾಗ ವಿನೋದಿನಿ ಅವರು ಹಿಂತಿರುಗಿಲ್ಲ ಎಂದು ಉತ್ತರಿಸಿದರು. ಅನುಮಾನಗೊಂಡ ಸಹೋದರ ಪ್ರಭುವನ್ನು ಹುಡುಕಲು ಹೋದರು. ಹೂವಿನ ಅಂಗಡಿಯಲ್ಲೂ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ನಂತರ ಸಮಯಪುರಂ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದಾಗ, ಭಾರತಿಯೊಂದಿಗೆ ವಿನೋದಿನಿಯ ವಿವಾಹೇತರ ಸಂಬಂಧ ಮತ್ತು ಪ್ರಭುವನ್ನು ಕೊಲ್ಲುವ ಯೋಜನೆಯನ್ನು ಪೊಲೀಸರು ಪತ್ತೆ ಮಾಡಿದರು. ಮೂರು ತಿಂಗಳ ಹಿಂದೆ ಸಂಧ್ಯಾ ಗೇಟ್ ಬಳಿ ವಿನೋದಿನಿ ಮತ್ತು ಆಕೆಯ ಗೆಳೆಯ ಭಾರತಿ ಬಾಡಿಗೆ ಮನೆ ಮಾಡಿದ್ದರು. ಭಗವಂತ ಇದನ್ನು ಆಕಸ್ಮಿಕವಾಗಿ ಕಂಡುಹಿಡಿದನು. ಭಾರತಿಯೊಂದಿಗಿನ ಸಂಬಂಧವನ್ನು…
ಬೆಳಗಾವಿ: ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಯುವಕನನ್ನು ಬೀಕರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ನಡೆದಿದೆ. ನಗರದ ಆದಿಜಾಂಬವ ನಗರದ ನಿವಾಸಿ ಸುರೇಶ ಪೂಜಾರಿ (25) ಕೊಲೆಯಾದ ಯುವಕ. ಅದೇ ಕಾಲೋನಿಯ ಐದಾರು ಜನ ಸೇರಿ ಇವನನ್ನು ಕೊಲೆಗೈದಿದ್ದು ಹಳೆ ವೈಶಮ್ಯಕ್ಕಾಗಿ ಕೃತ್ಯ ಎಸುಗಿರುವ ಅನುಮಾನ ವ್ಯಕ್ತವಾಗಿದೆ. ಹತ್ಯೆಯ ಘಟನೆಯ ನಂತರ ಮೃತನ ಸಂಬಂಧಿಕರು ಆರೋಪಿಗಳ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.
ದೀಪಾವಳಿಯನ್ನು ಸುರಕ್ಷಿತವಾಗಿ ಆಚರಿಸಲು ಬೆಂಗಳೂರಿಗರು ಕ್ರಮ ಕೈಗೊಂಡಿದ್ದರೂ ಭಾನುವಾರ ಮಧ್ಯರಾತ್ರಿಯವರೆಗೂ ನಗರದಲ್ಲಿ 20 ಪಟಾಕಿ ಅವಘಡ ಪ್ರಕರಣಗಳು ವರದಿಯಾಗಿವೆ. ಪಟಾಕಿ ಸಿಡಿತದಿಂದ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ವರದಿಯಾಗಿದೆ ಎಂದು ನಾರಾಯಣ ಹೆಲ್ತ್ ನ ಅಧ್ಯಕ್ಷ ಡಾ. ರೋಹಿತ್ ಶೆಟ್ಟಿ ಹೇಳಿದ್ದಾರೆ. ಗಾಯಾಳುಗಳ ಪೈಕಿ ಶೇ. 90 ರಷ್ಟು ಮಂದಿ ನೋಡುಗರು ಅಥವಾ ಕೆಲಸದಿಂದ ಮನೆಗೆ ಮರಳುತ್ತಿದ್ದ ಅಮಾಯಕ ನಾಗರಿಕರಾಗಿದ್ದಾರೆ. ಇದು ಆತಂಕಕ್ಕೆ ದೊಡ್ಡ ಕಾರಣ ಎಂದು ಅವರು ತಿಳಿಸಿದ್ದಾರೆ. ನರಕ ಚತುರ್ದಶಿ ದಿನವಾದ ಭಾನುವಾರ ನಗರದ ವಿವಿಧೆಡೆ ಪಟಾಕಿ ಅವಘಡಗಳು ಸಂಭವಿಸಿದ್ದು, ನಾರಾಯಣ ನೇತ್ರಾಲಯದಲ್ಲಿ 16 ಪ್ರಕರಣಗಳು ವರದಿಯಾಗಿವೆ. ಪ್ರಕರಣಗಳಲ್ಲಿ ಆರು ಮಂದಿಗೆ ಗಂಭೀರ ಗಾಯವಾಗಿದೆ. 10 ಮಂದಿಗೆ ಪಟಾಕಿ ಕಿಡಿಯಿಂದ ಸಣ್ಣ ಪುಟ್ಟ ಗಾಯಗಳಾಗಿವೆ. ಇವರಲ್ಲಿ ಶೇ 90ರಷ್ಟು ಮಂದಿ ಪಟಾಕಿ ಹಚ್ಚದಿದ್ದರೂ, ವೀಕ್ಷಿಸುವ ವೇಳೆ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಆರು ಪ್ರಕರಣಗಳಲ್ಲಿ ಮೂರು ಮಂದಿ 19 ರಿಂದ 22 ವರ್ಷದೊಳಗಿನವರು. ಇಬ್ಬರು ಹತ್ತು ವರ್ಷದ ಮಕ್ಕಳಾಗಿದ್ದಾರೆ.
ಹುಬ್ಬಳ್ಳಿ: ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲ್ಲುತ್ತೆ ಎಂದ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ ಅವರು ‘ ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸಗಡ ಮಾಹಿತಿ ಪಡೆದುಕೊಂಡಿದ್ದೇನೆ. ನಾನು ರಾಜಸ್ಥಾನದ ಚುನಾವಣೆಯ ಉಸ್ತುವಾರಿ ಇದ್ದೆ. ಈ ಹಿನ್ನಲೆ ಮೂರು ರಾಜ್ಯಗಳಲ್ಲಿ ಪೂರ್ತಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸಿಎಂ, ಡಿಸಿಎಂ ಹಾಗೂ ಮಂತ್ರಿಗಳಿಗೆ ಟಾರ್ಗೆಟ್ ಕೊಟ್ಟಿದ್ದಾರೆ. ಯಾರು ಹೆಚ್ಚಿಗೆ ಹಣ ಕೊಡುತ್ತಾರೆ ಅವರು ಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಯಾರು ಕೊಡಲ್ಲಾ ಅವರು ಮಂತ್ರಿಗಳಾಗುವುದಿಲ್ಲ. ಹೆಚ್ಚು ಹಣ ಕೊಟ್ಟು ಅವರು ಅಧಿಕಾರದಲ್ಲಿ ಇರುತ್ತಾರೆ. ಯಾವುದೆ ಪವರ್ ಶೇರಿಂಗ್ ಇಲ್ಲ. ಯಾರು ಹಣ ಕೊಡುತ್ತಾರೆ ಅವರು ಅಧಿಕಾರದಲ್ಲಿ ಇರುತ್ತಾರೆ. ಈಗಾಗಲೇ ಹೈಕಮಾಂಡ್ ಇದನ್ನೇ ಹೇಳಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದರು.
ಬೆಳಗಾವಿ: ವ್ಯಕ್ತಿತ್ವ ಪುನರುತ್ಥಾನ, ನೈತಿಕತೆ ಪುನರುತ್ಥಾನ, ಸಾಮಾಜಿಕ ಸಾಮರಸ್ಯ ಹಾಗೂ ರಾಷ್ಟ್ರೀಯ ಭಾವೈಕ್ಯತೆ – ಈ 4 ಉದ್ದೇಶವಿಟ್ಟುಕೊಂಡು ಕಳೆದ 17 ವರ್ಷಗಳಿಂದ ನಿರಂತರವಾಗಿ ಭಗವದ್ಗೀತೆ ಅಭಿಯಾನ ನಡೆಸಿಕೊಂಡು ಬರಲಾಗುತ್ತಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಹೇಳಿದ್ದಾರೆ. ಬೆಳಗಾವಿಯಲ್ಲಿ ನವೆಂಬರ್ 21ರಿಂದ ಡಿಸೆಂಬರ್ 23ರ ವರೆಗೆ ನಡೆಯಲಿರುವ ರಾಜ್ಯ ಮಟ್ಟದ ಭಗವದ್ಗೀತೆ ಅಭಿಯಾನದ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಗುರುದೇವ ರಾನಡೆ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ಸಮಾಜಗಳ ಪ್ರಮುಖರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ವೈಜ್ಞಾನಿಕವಾಗಿ ನಾವು ಮುಂದೆ ಹೋಗುತ್ತಿದ್ದೇವೆ. ಆದರೆ ಮಾನಸಿಕ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದೇವೆ. ಮಾನಸಿಕ ಒತ್ತಡಗಳಿಂದ ಅನೇಕ ರೋಗಗಳನ್ನು ಅನುಭವಿಸುತ್ತಿದ್ದೇವೆ. ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯಾಘಾತ ಮೊದಲಾದವು ಹೆಚ್ಚುತ್ತಿವೆ. ಇದಕ್ಕೆಲ್ಲ ಭಗವದ್ಗೀತೆಯಲ್ಲಿ ಪರಿಹಾರವಿದೆ. ಜನರ ಮನಸ್ಥಿತಿ ಸರಿ ಇಲ್ಲದಿದ್ದರೆ ಏನೇ ಮಾಡಿದರೂ ಪ್ರಯೋಜನವಿಲ್ಲ ಎಂದು ಶ್ರೀಗಳು ಹೇಳಿದರು. ಅಪರಾಧ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಜಾಸ್ತಿಯಾಗುತ್ತಿವೆ. ಅಪರಾಧ ನಡೆದ…