Subscribe to Updates
Get the latest creative news from FooBar about art, design and business.
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
- ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
- ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
- ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
- ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
- ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
Author: admin
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಗ್ರಾಮದಲ್ಲಿ ಶುಕ್ರವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್, ಕುಮುಟಾದಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಲಿವ್ ಇನ್ ರಿಲೇಶನ್ ಶಿಪ್ ವಿರುದ್ಧ ಬಿಜೆಪಿ ಸಂಸದ ಧರ್ಮೀರ್ ಸಿಂಗ್. ಇಂತಹ ಸಂಬಂಧಗಳು ಸಮಾಜದಿಂದ ನಿರ್ಮೂಲನೆ ಮಾಡಬೇಕಾದ ಅಪಾಯಕಾರಿ ಕಾಯಿಲೆಯಾಗಿದೆ. ಇದರ ವಿರುದ್ಧ ಕೇಂದ್ರ ಸರ್ಕಾರ ಕಾನೂನು ತರಬೇಕು ಎಂದು ಒತ್ತಾಯಿಸಿದರು. ಧರ್ಮಬೀರ್ ಸಿಂಗ್ ಹರಿಯಾಣದ ಮಹೇಂದ್ರಗಢದಿಂದ ಬಿಜೆಪಿ ಸಂಸದರಾಗಿದ್ದಾರೆ. ಧರ್ಮಬೀರ್ ಸಿಂಗ್ ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದರು. ಪ್ರೇಮ ವಿವಾಹಗಳಲ್ಲಿ ವಿಚ್ಛೇದನ ಪ್ರಮಾಣ ಹೆಚ್ಚಿದ್ದು, ಪ್ರೇಮ ವಿವಾಹಕ್ಕೆ ವಧುವರರ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಬೇಕು ಎಂದು ಧರಂಭೀರ್ ಸಿಂಗ್ ಹೇಳಿದ್ದಾರೆ. ಭಾರತೀಯ ಸಂಸ್ಕೃತಿಯು ವಸುಧೈವ ಕುಟುಂಬ ಮತ್ತು ಸಹೋದರತ್ವದ ತತ್ವಶಾಸ್ತ್ರಕ್ಕೆ ಹೆಸರುವಾಸಿಯಾಗಿದೆ. ನಮ್ಮ ಸಾಮಾಜಿಕ ರಚನೆಯು ಪ್ರಪಂಚದ ಇತರ ಭಾಗಗಳಿಗಿಂತ ಭಿನ್ನವಾಗಿದೆ. ವಿವಿಧತೆಯಲ್ಲಿ ನಮ್ಮ ಏಕತೆ ಇಡೀ ಜಗತ್ತನ್ನು ಮೆಚ್ಚಿಸುತ್ತದೆ. ಭಾರತದಲ್ಲಿ ವಿಚ್ಛೇದನ ಪ್ರಮಾಣವು USA (40%) ಗೆ ಹೋಲಿಸಿದರೆ 1.1% ಮಾತ್ರ ಎಂದು ಅವರು ಹೇಳಿದರು.
ತುಮಕೂರು: ಕಲ್ಬುರ್ಗಿಯಲ್ಲಿ ನಡೆದ ವಕೀಲರಾದ ಈರಣ್ಣ ಗೌಡ ಅವರ ಹತ್ಯೆ ಹಾಗೂ ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸರ ಹಲ್ಲೆಯನ್ನು ಖಂಡಿಸಿ ತುಮಕೂರು ಜಿಲ್ಲಾ ವಕೀಲರ ಸಂಘ ಪ್ರತಿಭಟನೆ ನಡೆಸಿತು. ಶುಕ್ರವಾರ ನಡೆದ ಕಾರ್ಯಕಾರಿ ಮಂಡಳಿ ಸಭೆಯ ನಿರ್ಣಯದಂತೆ ಕಾರ್ಯಕಲಾಪಗಳಿಂದ ಹೊರಗುಳಿದು ವಕೀಲರ ರಕ್ಷಣಾ ಕಾಯ್ದೆಯನ್ನು ತ್ವರಿತವಾಗಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ಶಿಫಾರಾಸು ಮಾಡಬೇಕೆಂಬ ಒತ್ತಾಯವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಕೀಲರ ಸಂಘ ನೀಡಿತು. ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯ, ಉಪಾಧ್ಯಕ್ಷರಾದ ಶಿವಶಂಕರಯ್ಯ, ಪ್ರಧಾನ ಕಾರ್ಯದರ್ಶಿ ಆರ್.ತಿಪ್ಪೇಸ್ವಾಮಿ, ಜೊತೆ ಕಾರ್ಯದರ್ಶಿ ಪಾಲಾಕ್ಷಯ್ಯ ಸಿ., ಖಜಾಂಚಿ ಕೆ.ಎಲ್.ಭಾರತಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಪಿ.ಎಸ್.ಸಂದೀಪ್, ಎಂ.ಬಿ.ನವೀನ್ ಕುಮಾರ್, ಎಂ.ಬಿ.ಗುರುಪ್ರಸಾದ್, ಶಿವಕುಮಾರ ಸ್ವಾಮಿ ಸಿ., ಜನಾರ್ಧನ ಟಿ.ಎಸ್., ಮಂಜುಳ ಟಿ.ಎಸ್., ಮಂಜುಳಾ ಹೆಚ್.ಎನ್., ಮೋಹನ್ ಎಸ್., ಹಿಮಾನಂದ್, ಚಂದ್ರಣ್ಣ, ಮಲ್ಲಿಕಾರ್ಜುನ್, ಗಣೇಶ್ ಎಂ. ಎಸ್.ಪದ್ಮನಾಭ್ ಇನ್ನಿತರೇ ಅನೇಕ ವಕೀಲರು ಭಾಗವಹಿಸಿದ್ದರು.
ಕಳೆದ ಐದು ವರ್ಷಗಳಲ್ಲಿ ವಿದೇಶದಲ್ಲಿ ಮೃತಪಟ್ಟ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. 2018 ರಿಂದ 403 ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ಸಾವನ್ನಪ್ಪಿದ್ದಾರೆ. ಕೇಂದ್ರ ಸಚಿವ ವಿ ಮುರಳೀಧರನ್ ರಾಜ್ಯಸಭೆಯಲ್ಲಿ ವರದಿ ಮಂಡಿಸಿದರು. 34 ದೇಶಗಳಲ್ಲಿ ಕೆನಡಾ ಅತಿ ಹೆಚ್ಚು ಸಾವುಗಳನ್ನು ಹೊಂದಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, 2018 ರಿಂದ ಕೆನಡಾದಲ್ಲಿ 91 ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಯುನೈಟೆಡ್ ಕಿಂಗ್ ಡಮ್ (48), ರಷ್ಯಾ (40), ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ (36), ಆಸ್ಟ್ರೇಲಿಯಾ (35), ಉಕ್ರೇನ್ (21), ಜರ್ಮನಿ (20), ಸೈಪ್ರಸ್ (14), ಇಟಲಿ ಮತ್ತು ಫಿಲಿಪೈನ್ಸ್ (ತಲಾ 10) ನಂತರದ ಸ್ಥಾನದಲ್ಲಿವೆ. . ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕಲ್ಯಾಣವನ್ನು ಕೇಂದ್ರ ಸರ್ಕಾರ ಖಚಿತಪಡಿಸುತ್ತದೆ. ಇದು ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವರು ಹೇಳಿದರು. ವೈಯಕ್ತಿಕ ಪ್ರಕರಣಗಳನ್ನು ವ್ಯವಹರಿಸಲಾಗುವುದು ಮತ್ತು ಭವಿಷ್ಯದಲ್ಲಿ ಅಹಿತಕರ…
ಭಯೋತ್ಪಾದನೆ ನಿಧಿ ಪ್ರಕರಣದ ಆರೋಪಿ ವಿದ್ಯಾರ್ಥಿಗೆ ಜೈಲಿಗೆ ಹಾಜರಾಗಲು ಅವಕಾಶ. ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮೊಹಮ್ಮದ್ ಮೊಹ್ಸಿನ್ ಅಹ್ಮದ್ ಗೆ ತಿಹಾರ್ ಜೈಲಿನಲ್ಲಿ ಬಿಟೆಕ್ ಪರೀಕ್ಷೆಗೆ ಹಾಜರಾಗಲು ದೆಹಲಿಯ ವಿಶೇಷ ಎನ್ ಐಎ ನ್ಯಾಯಾಲಯ ಅನುಮತಿ ನೀಡಿದೆ. ಅಹಮದ್ ಅವರು ಏಳನೇ ಸೆಮಿಸ್ಟರ್ ಪರೀಕ್ಷೆ ಬರೆಯಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಪಟಿಯಾಲ ಹೌಸ್ ಕೋರ್ಟ್ನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಂಜಯ್ ಗರ್ಗ್ ಮೊಹಮ್ಮದ್ ಅವರು ಅರ್ಜಿಯ ವಿಚಾರಣೆ ನಡೆಸಿದರು. ಪರೀಕ್ಷೆಯನ್ನು ವೇಳಾಪಟ್ಟಿಯಂತೆ ನಡೆಸಲಾಗುವುದು ಮತ್ತು ಅದಕ್ಕಾಗಿ ಜೈಲು ಸಂಕೀರ್ಣದಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದು ವಿಶ್ವವಿದ್ಯಾಲಯದ ಪರ ವಾದ ಮಂಡಿಸಿದ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಕಳೆದ ವರ್ಷ ಅಹ್ಮದ್ ನನ್ನು ಎನ್ ಐಎ ಬಂಧಿಸಿತ್ತು. ಐಸಿಸ್ಗೆ ನಿಧಿ ಸಂಗ್ರಹಿಸುತ್ತಿರುವ ಆರೋಪ. ಭಾರತೀಯ ದಂಡ ಸಂಹಿತೆ, 1860 ರ ಸೆಕ್ಷನ್ 153 ಎ ಮತ್ತು 153 ಬಿ ಮತ್ತು ಯುಎಪಿಎ 1967 ರ ಸೆಕ್ಷನ್ 18,…
ಸೀಮಿತ ಅವಧಿಯ ಉದ್ಯೋಗಗಳ ಹೆಸರಿನಲ್ಲಿ ನಿರುದ್ಯೋಗಿಗಳನ್ನು ವಂಚಿಸುತ್ತಿರುವ 100ಕ್ಕೂ ಹೆಚ್ಚು ವೆಬ್ ಸೈಟ್ ಗಳನ್ನು ಮುಚ್ಚಿರುವುದಾಗಿ ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ. ಈ ವೆಬ್ ಸೈಟ್ ಗಳು ಹಣಕಾಸು ಅಕ್ರಮಗಳಿಗೆ ದಾರಿ ಮಾಡಿಕೊಡುತ್ತಿದೆ. ಈ ವೆಬ್ ಸೈಟ್ ಗಳನ್ನು ವಿದೇಶದಿಂದ ನಡೆಸಲಾಗುತ್ತಿದೆ. ಈ ವೆಬ್ ಸೈಟ್ ಗಳನ್ನು ಗುರುತಿಸಲು ಮತ್ತು ತಕ್ಷಣವೇ ಅವುಗಳನ್ನು ತೆಗೆದು ಹಾಕುವಂತೆ ಕೇಂದ್ರ ಸರ್ಕಾರ ಗೃಹ ಸಚಿವಾಲಯದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರಕ್ಕೆ ನಿರ್ದೇಶನ ನೀಡಿದೆ. ವಂಚನೆಯ ವೆಬ್ ಸೈಟ್ ಗಳನ್ನು ಗುರುತಿಸಿ ಮುಚ್ಚಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಶಾಲೆಯಿಂದ ದೂರ ಉಳಿದ ಮಕ್ಕಳನ್ನು ಮರಳಿ ಶಾಲೆಗೆ ಸೆಳೆಯಲು & ವಿದ್ಯಾಭ್ಯಾಸಕ್ಕಾಗಿ ಅವರಿಗೆ ಅನುಕೂಲ ಕಲ್ಪಿಸುವ ಸಲುವಾಗಿ 2006-07ರಲ್ಲಿ ರಾಜ್ಯ ಸರ್ಕಾರವು ಉಚಿತ ಬೈಸಿಕಲ್ ಯೋಜನೆಯನ್ನು ತಂದಿತ್ತು. ಶಾಲೆಗೆ ಕಿಲೋ ಮೀಟರ್ ಗಟ್ಟಲೇ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಇದು ಆಸರೆಯಾಗಿತ್ತು. ಆದರೆ, ಸದ್ಯ ಈ ಯೋಜನೆ ಸ್ಥಗಿತಗೊಂಡಿದ್ದು ಸರ್ಕಾರ ಈ ಬಗ್ಗೆ ಚಿಂತಿಸುತ್ತಿಲ್ಲ. ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಪಾಲಕರು ಆರೋಪಿಸಿದ್ದಾರೆ. ಈ ನಡುವೆ ಈ ಯೋಜನೆಯನ್ನು ಆರಂಭಿಸುವುದಾಗಿ ಅಧಿವೇಶನದಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಬೆಂಗಳೂರು: ತನ್ನ ಸೆಲ್ ಫೋನ್ ಒಡೆದ ಎಂಬ ಕಾರಣಕ್ಕೆ ಪತಿಯ ಮೇಲೆ ಸೇಡು ತೀರಿಸಿಕೊಳ್ಳಲು ಪತಿಯ ಮೊಬೈಲ್ ಸಂಖ್ಯೆಯಿಂದ ಬೆದರಿಕೆ ಸಂದೇಶ ಕಳುಹಿಸಿದ 32 ವರ್ಷದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿದ್ಯಾರಾಣಿ (36) ಬಂಧಿತ ಮಹಿಳೆಯಾಗಿದ್ದು, ಆಕೆ ಬಿಹಾರದ ಮೂಲದವನ ಪರಿಚಯವಾಗಿ ಸ್ನೇಹ ಮೂಡಿತ್ತು. ಈ ವಿಚಾರವಾಗಿ ಗಂಡ-ಹೆಂಡತಿ ಜಗಳ ನಡೆದಾಗ ಪತಿ ಸಿಟ್ಟಿಗೆದ್ದು ಮೊಬೈಲ್ ಹೊಡೆದು ಹಾಕಿದ್ದ. ಇದಕ್ಕೆ ಪ್ರತಿಕಾರ ತೀರಿಸಿಕೊಳ್ಳಲು ಪತ್ನಿ ತನ್ನ ಸ್ನೇಹಿತನ ಜತೆಗೂಡಿ ಉಪಾಯ ಮಾಡಿದ್ದರು ಎನ್ನಲಾಗಿದೆ.
ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಆಸ್ಪತ್ರೆಯಲ್ಲಿ. ಕೆ. ಚಂದ್ರಶೇಖರ ರಾವ್ ಅವರು ಬಿದ್ದು ಸೊಂಟಕ್ಕೆ ಪೆಟ್ಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈದರಾಬಾದ್ ನ ಯಶೋದಾ ಆಸ್ಪತ್ರೆಗೆ ದಾಖಲಾಗಿರುವ ಕೆಸಿಆರ್ ಅವರ ಆರೋಗ್ಯ ಸುಧಾರಿಸಿದೆ. ವರದಿಗಳ ಪ್ರಕಾರ, ಕೆಸಿಆರ್ ತಮ್ಮ ಫಾರ್ಮ್ಹೌಸ್ ನಲ್ಲಿ ಜಾರಿ ಬಿದ್ದರು. ಗುರುವಾರ ಮಧ್ಯರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಸಿಆರ್ ಅವರ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಲಾಗಿದೆ ಎಂದು ವೈದ್ಯರ ತಂಡ ಮಾಹಿತಿ ನೀಡಿದೆ.
ಬಿಗ್ ಬಾಸ್ ಮನೆಯಲ್ಲಿ ಈ ವಾರ ರಕ್ಕಸ ಹಾಗೂ ಗಂಧರ್ವರು ಎಂಬ ಟಾಸ್ಕ್ ನಡೆಯುತ್ತಿದೆ. ನಿನ್ನೆ ಹಾಗೂ ಮೊನ್ನೆ ಟೆಲಿಕಾಸ್ಟ್ ಆದ ಎಪಿಸೋಡ್ ನಲ್ಲಿ ಸಂಗೀತಾ ಅಂಡ್ ಟೀಂ ರಾಕ್ಷಸರಾಗಿ ಕಾಣಿಸಿಕೊಂಡಿದ್ದರು. ವರ್ತೂರ್ ಸಂತೋಷ್ ಅಂಡ್ ಟೀಂ ಗಂಧರ್ವರಾಗಿ ಇದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಈ ಟಾಸ್ಕ್ ಆಡುವಾಗ ತೊಂದರೆಯಾಗಿ ಬಿಗ್ ಬಾಸ್ ಮನೆಯಿಂದ ಸಂಗೀತಾ ಹಾಗೂ ಡೋನ್ ಪ್ರತಾಪ್ ಆಸ್ಪತ್ರೆಗೆ ದಾಖಲಾಗಿದ್ದಾರಂತೆ. ನಿಜಕ್ಕೂ ಇವರಿಗೆ ಏನಾದರೂ ಆಗಿದೆಯಾ ಎಂಬುದನ್ನು ತಿಳಿಯಲು ಇಂದಿನ ಎಪಿಸೋಡ್ ವರೆಗೂ ಕಾದು ನೋಡಬೇಕಿದೆ.