Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಬೆಂಗಳೂರು: ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ವರಿಷ್ಠ ಅಮಿತ್ ಶಾ ಈ ಎಲ್ಲರೂ ತಮ್ಮ ಪುತ್ರ ಬಿ.ವೈ. ವಿಜಯೇಂದ್ರನಿಗೆ ಪಕ್ಷದ ರಾಜ್ಯಾಧ್ಯಕ್ಷ ನೀಡಿ ಸೂಕ್ತ ಸಮಯಕ್ಕೆ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರ್ಧಾರ ತೆಗೆದುಕೊಂಡ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಲೋಕಸಭೆ ಗೆಲ್ಲುವುದು ನಮ್ಮ ಗುರಿಯಾಗಿದೆ. 25 ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಲೋಕಸಭಾ ಚುನಾವಣೆ ಗೆಲ್ಲುವ ಗುರಿ ಮುಟ್ಟಲು ಕಷ್ಟವಿಲ್ಲ. ಈ ನಿಟ್ಟಿನಲ್ಲಿ ನಾನು ಕೂಡ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ. ನಾವು ಪ್ರವಾಸ ಮಾಡಿದ ಮೇಲೆ ಜನರ ಪ್ರತಿಕ್ರಿಯೆ ನೋಡಿದ ಮೇಲೆ ಕಾಂಗ್ರೆಸ್ ನವರಿಗೆ ತಿಳಿಯಲಿದೆ. ನಮಗೆಲ್ಲ ಮೋದಿಯಂತಹ ಮಹಾನ್ ವ್ಯಕ್ತಿ ಪ್ರಧಾನಿಯಾಗಿದ್ದಾರೆ ಎಂದರು.
ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದ ಸರಕಾರಿ ಪ್ರೌಢ ಶಾಲಾ ಶಾಲೆಯಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದ್ರೆ, ಇಲ್ಲಿನ ಶಾಲೆಗೆ ಸರಿಯಾದ ನೀರಿನ ವ್ಯವಸ್ಥೆ ಮಾಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಎ.ಡಿ. ನಯೀಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ನೀರಿಗಾಗಿ ಪರದಾಡುತ್ತಿರುವ ಬಗ್ಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಔರಾದ ತಾಲ್ಲೂಕಾ ಪಂಚಾಯಿತಿ ಇ. ಓ. ಅಧಿಕಾರಿಗಳು ಗಮನ ಹರಿಸಬೇಕು ಎಂದು ಅವರು ಒತ್ತಾಯಿಸಿದರು. ನಿರ್ಲಕ್ಷ್ಯವಹಿಸಿರುವ ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಇದೇ ವೇಳೆ ಗ್ರಾಮಸ್ಥರು ಒತ್ತಾಯಿಸಿದರು. ಈ ವೇಳೆ ಮುಖಂಡರಾದ ಜಾಮೀದ ಸರ್ಫುದ್ದೀನ್, ಪಾಷಾಮಿಯಾ. ಮೌಲಾನಾ ಶೌ. ಮಹಮೂದ್ ಸಾಹಿಬ್ ಇದ್ದರು. ವರದಿ: ಅರವಿಂದ ಮಲ್ಲಿಗೆ
ಹೈದರಾಬಾದ್: ತೆಲಂಗಾಣ ವಿಧಾನ ಸಭೆ ಚುನಾವಣೆಯಲ್ಲಿ ಕರ್ನಾಟಕದ ಫಲಿತಾಂಶವೇ ಮರುಕಳಿಸಲಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಶನಿವಾರ ಹೈದರಾಬಾದ್ ನ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಹತ್ತು ವರ್ಷಗಳ ಕೆ ಸಿ ಆರ್ ಆಡಳಿತದಿಂದ ಜನ ಬೇಸರಗೊಂಡಿದ್ದು ಎ ಬಾರಿ ಬದಲಾವಣೆ ಬಯಸಿದ್ದಾರೆ. ಕರ್ನಾಟಕ ದ ಮಾದರಿಯಲ್ಲೇ ಇಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ತೆಲಂಗಾಣ ದಲ್ಲಿ ಅಲ್ಪಸಂಖ್ಯಾತ ಸಮುದಾಯ ಹಾಗೂ ಜಾತ್ಯತೀತ ಮನೋಭಾವದ ಎಲ್ಲ ವರ್ಗ ಕಾಂಗ್ರೆಸ್ ಪರ ವಿಶ್ವಾಸ ಹೊಂದಿದೆ. ಕೆ ಸಿ ಆರ್ ಕೊಟ್ಟ ಭರವಸೆ ಈಡೇರಿಸಿಲ್ಲ, ಆಡಳಿತ ವಿರೋಧಿ ಅಲೆ ತೀವ್ರವಾಗಿದೆ ಎಂದು ತಿಳಿಸಿದರು. ಕರ್ನಾಟಕ ದಲ್ಲಿ ನಾವು ಕೊಟ್ಟ ಗ್ಯಾರಂಟಿ ಈಡೇರಿಸಿದ್ದೇವೆ. ಕೋಟ್ಯಂತರ ಕುಟುಂಬಗಳಿಗೆ ನಮ್ಮ ಗ್ಯಾರಂಟಿ ಯೋಜನೆಯ ಫಲ ದೊರಕುತ್ತಿದೆ. ತೆಲಂಗಾಣದಲ್ಲೂ ನಾವು ಆರು ಗ್ಯಾರಂಟಿ ನೀಡಿದ್ದು ಅದರ ಜಾರಿ ಮಾಡಿಯೇ ತೀರುತ್ತೇವೆ ಎಂದು ಹೇಳಿದರು. ಕರ್ನಾಟಕದಲ್ಲಿ…
ರಾಜಕೀಯದಲ್ಲಿ ಯಾರೂ ಶಾಶ್ವತವಾಗಿರಲು ಸಾಧ್ಯವಿಲ್ಲ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಬೇರು ಮಟ್ಟದಿಂದ ಪಕ್ಷವನ್ನು ಸದೃಢವಾಗಿ ಕಟ್ಟಬಹುದು, ಕಾರ್ಯಕರ್ತರು ಬಲಿಷ್ಠರಾಗಿದ್ದರೆ ಪಕ್ಷ ಸದೃಢವಾಗಿರುತ್ತದೆ. ರಾಜಕೀಯದಲ್ಲಿ ಯಾರೂ ಕೂಡಾ ಶಾಶ್ವತವಾಗಿರಲು ಸಾಧ್ಯವಿಲ್ಲ ಎಂದರು. ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸವಿದೆ. ತೆಲಂಗಾಣದಲ್ಲಿ ಬದಲಾವಣೆ, ಹೊಸ ಸರ್ಕಾರ ರಚನೆ ಬಗ್ಗೆ ದೊಡ್ಡ ಅಲೆ ಇದೆ. ಎಲ್ಲಾ ರಾಜಕೀಯ ಪಕ್ಷಗಳ ಮೂಲ ಬೇರು ಕಾಂಗ್ರೆಸ್ ಪಕ್ಷವೇ ಆಗಿದೆ. ಅವರು ಬೇರೆ ಏನನ್ನೇ ಹೇಳಲಿ. ವೈಎಸ್ ಆರ್ ಕಾಂಗ್ರೆಸ್ ಕೂಡಾ ಏಕೆ ಕಾಂಗ್ರೆಸ್ ಅಂತಾ ಹೆಸರು ಇಟ್ಟುಕೊಂಡಿದ್ದಾರೆ ಎಂದು ಪ್ರಶ್ನಿಸಿದ ಅವರು, ಈ ದೇಶವನ್ನು ಒಗ್ಗೂಡಿಸಿದ ಪಕ್ಷ ಕಾಂಗ್ರೆಸ್ ಎಂದು ತಿಳಿಸಿದರು.
ಬೆಂಗಳೂರು: ಜನರ ಸಮಸ್ಯೆಗಳನ್ನು ಆಲಿಸಲು ಜೊತೆಯಾಗಿ ಹೋಗೋಣ; ನೀವೂ ಬನ್ನಿ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಡಿಸಿಎಂ ಡಿ.ಕೆ. ಶಿವಕುಮಾರರಿಗೆ ಆಹ್ವಾನ ನೀಡಿದರು. ದಾಸರಹಳ್ಳಿ ಕ್ಷೇತ್ರದಲ್ಲಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮತ್ತು ಬರಗಾಲ ಪರಿಸ್ಥಿತಿ ಅಧ್ಯಯನ ನಡೆಸಿದ ಅವರು, ಈಗ ತಾನೇ ದಾಸರಹಳ್ಳಿ ಕ್ಷೇತ್ರದ ಪರಿಶೀಲನೆ ಮಾಡಿ, ರಸ್ತೆ ಕೆಲಸ ನೋಡಿದ್ದೇವೆ. ಚಿಕ್ಕಬಾಣಾವರ ಕೆರೆ ಯಾವ ಸ್ಥಿತಿಯಲ್ಲಿದೆ ಎಂದು ನೋಡಿದ್ದೇನೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ಅವರು ಬೆಂಗಳೂರು ನೋಡುತ್ತಿರುತ್ತಾರೆ. ರಸ್ತೆ ಹಾಳಾಗಿದೆ, ಕುಡಿಯುವ ನೀರಿನ ಸಮಸ್ಯೆ ಇದೆ. ಕೆರೆ ಹೂಳು ತುಂಬಿದೆ. ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಲ್ಲ. ಈ ಕುರಿತು ಶಿವಕುಮಾರ್ ಅವರನ್ನು ಪ್ರಶ್ನಿಸುವುದಾಗಿ ತಿಳಿಸಿದರು. ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ. ಮುಖ್ಯಮಂತ್ರಿ ನಗರೋತ್ಥಾನ ಅಭಿವೃದ್ಧಿ ಅಡಿಯಲ್ಲಿ 110 ಹಳ್ಳಿಗೆ ಬಿಡುಗಡೆ ಆಗಿದ್ದ ಹಣ ವಾಪಸ್ ಪಡೆದಿದ್ದಾರೆ ಎಂದು ಆಕ್ಷೇಪಿಸಿದರು.…
ತುಮಕೂರು: ಇತ್ತೀಚೆಗೆ ಬಾಲಕಿಯ ಮೇಲೆ ದಾಳಿ ನಡೆಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ತುಮಕೂರು ತಾಲೂಕಿನ ಚಿಕ್ಕಬೆಳ್ಳಾವಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ದಾಳಿ ನಡೆಸಿದ್ದ ಚಿರತೆಯು ಸ್ಥಳದಿಂದ ಪರಾರಿಯಾಗಿತ್ತು. ಚಿರತೆಯನ್ನು ಬಂಧಿಸುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಗ್ರಾಮದ ಹೊರವಲಯದ ಕೋಳಿ ಫಾರ್ಮ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿದ್ದರು. ಇಂದು ಬೆಳಗಿನ ಜಾವ ಸುಮಾರು ಮೂರು- ನಾಲ್ಕು ವರ್ಷದ ಗಂಡು ಚಿರತೆಯಾಗಿದೆ. ಬೆಳ್ಳಾವಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನಿರಂತರ ದಾಳಿ ನಡೆಸುತ್ತಾ ಸಾರ್ವಜನಿಕರನ್ನು ಕಂಗೆಡಿಸಿದ್ದ ಚಿರತೆಯನ್ನು ಆರ್ ಎಫ್ಓ ಪವಿತ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದೆ.
ತುಮಕೂರು: ತುಮಕೂರು ನಗರದಲ್ಲಿ ಹೆಚ್ಚಿದ ಪುಂಡರ ಹಾವಳಿ ಹೆಚ್ಚಾಗಿದ್ದು, ಬ್ಲೇಡ್ ಮಚ್ಚಿನಿಂದ ದಾಳಿ ಮಾಡಲಾಗುತ್ತಿದೆ. ಇದೀಗ ಹಿಡಿಯಲು ಹೋದ ಪೊಲೀಸರ ಮೇಲೆಯೂ ಪುಂಡರು ಹಲ್ಲೆ ಯತ್ನ ನಡೆಸಿದ್ದಾರೆ. ತುಮಕೂರು ನಗರದ ಪಿ.ಎಚ್ ಕಾಲೋನಿಯ ಅಜಾದ್ ಪಾರ್ಕ್ ಬಳಿ ಘಟನೆ ನಡೆದಿದ್ದು ಗುರುವಾರ ರಾತ್ರಿ 8.30ರ ಸಮಯದಲ್ಲಿ ಆರೋಪಿ ಸಾಜಿದ್ ಹಾಗೂ ಸ್ನೇಹಿತರಿಂದ ಹಲ್ಲೆ ಮಾಡಲಾಗಿದೆ. ಮಹಮದ್ ರಫೀಕ್ ಎಂಬುವರ ಮೇಲೆ ಬ್ಲೇಡಿನಿಂದ ಹಲ್ಲೆ ನಡೆಸಿದ ಆರೋಪಿಗಳು. ಪಾರ್ಕ್ ನಲ್ಲಿ ವಾಕ್ ಮಾಡುತ್ತಿದ್ದ ಮಹಮದ್ ರಫೀಕ್ ಎಂಬುವರ ಮೇಲೆ ದಾಳಿಯಾಗಿದ್ದು, ಏಕಾಏಕಿ ದಾಳಿ ನಡೆಸಿ ಬ್ಲೇಡಿನಿಂದ ಹಲ್ಲೆ ಮಾಡಿದ ಪುಂಡರ ಗುಂಪು ಸ್ಥಳದಿಂದ ಪರಾರಿಯಾಗಿದೆ. ಕೂಡಲೇ ತಿಲಕ್ ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು, ಈ ವೇಳೆ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೂ ಹಲ್ಲೆಗೆ ಯತ್ನಿಸಿದ್ದಾರೆ. ನಂತರ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಈ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುರುವೇಕೆರೆ ಪಟ್ಟಣದಲ್ಲಿರುವ ಆದಿ ಜಾಂಬವ ಕ್ಷೇಮಾಭಿವೃದ್ಧಿ ಸಮಿತಿಯ ಕಚೇರಿಯಲ್ಲಿ ವೀರ ವನಿತೆ ಓಬವ್ವಳ ಜಯಂತಿಯನ್ನು ಆಚರಿಸಲಾಯಿತು. ಕಚೇರಿಯಲ್ಲಿ ಓಬವ್ವಳ ಭಾವಚಿತ್ರ ಇರಿಸಿ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ನಮನಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಿನ ದಬ್ಬೇಘಟ್ಟ ಗ್ರಾಮದ ತಮಟೆ ಕಲಾವಿದೆ ಭಾಗ್ಯಮ್ಮ ರವರನ್ನು ಆದಿಜಾಂಭವ ಕ್ಷೇಮಾಭಿವೃದ್ಧಿ ಸಮಿತಿಯ ಸಂಸ್ಥಾಪಕರಾದ ಸಿ ಎಸ್ ಮೂರ್ತಿ ಹಾಗೂ ಗಣ್ಯರು ನೀಲಿಯ ಪೇಟವನ್ನು ತೊಡಿಸಿ ಶಾಲು ಹಾರ ಹಾಕಿ ಸನ್ಮಾನಿಸಿದರು. ಡಿಎಸ್ಎಸ್ ತಾಲೂಕು ಸಂಚಾಲಕರಾದ ಕುಣಿಕೆನಹಳ್ಳಿ ಜಗದೀಶ್ ರವರು ಒನಕೆ ಓಬವ್ವ ರವರ ಕಿರುಪರಿಚಯನ್ನು ಮಾಡಿಕೊಟ್ಟರು ಮತ್ತು ಚಲವಾದಿ ಮಹಾಸಭಾ ತಾಲೂಕು ಅಧ್ಯಕ್ಷರಾದ , ಡೊಂಕಿಹಳ್ಳಿ ರಾಮಯ್ಯನವರು ಓಬವ್ವಳ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ, ಪ್ರಗತಿ ಪರ ಹೋರಾಟಗಾರ ತುರುವೇಕೆರೆ ಸತೀಶ್ ,ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಾರುತಿ ,ಆದಿ ಜಾಂಬವ ಕ್ಷೇಮಾಭಿವೃದ್ಧಿ ಸೇವಾ ಸಮಿತಿಯ ಕಾರ್ಯದರ್ಶಿಗಳಾದ ಚನ್ನಕೇಶವ, ಆದಿ ಜಾಂಬವ ಕ್ಷೇಮಾಭಿವೃದ್ಧಿ ಸಮಿತಿಯ ಕಚೇರಿಯ ಸಹಾಯಕರಾದ ಕುಮಾರಿ ಅಮೃತ ,ಪುರ ರಾಮಚಂದ್ರು ಸೇರಿದಂತೆ…
ಚಾಮರಾಜನಗರ: ಬೆಳಕಿನ ಹಬ್ಬ ದೀಪಾವಳಿ ಇಡೀ ದೇಶಾದ್ಯಂತ ಆಚರಣೆ ಮಾಡಲು ಜನರು ಕಾತರದಿಂದ ಕಾಯುತ್ತಿದ್ದರೇ ಈ 6 ಊರುಗಳು ಮಾತ್ರ ಹಬ್ಬವನ್ನು ಒಂದು ವಾರ ಮುಂದಕ್ಕೆ ಹಾಕಿದ್ದಾರೆ. ಹೌದು…, ಅಚ್ಚರಿಯಾದರೂ ಸತ್ಯ. ದೀಪಾವಳಿ ಬಂತೆಂದರೆ ಸಡಗರ-ಸಂಭ್ರಮ, ಚಿಣ್ಣರಿಗೆ ಪಟಾಕಿ ಹಚ್ಚುವ ಖುಷಿ, ಹಿರಿಯರಿಗೆ ದೀಪ ಬೆಳುಗುವ ಸಂತಸ. ಆದರೆ ಮಂಗಳವಾರ ದೇಶಾದ್ಯಂತ ಆಚರಿಸುವ ಸಂಭ್ರಮದ ಬೆಳಕಿನ ಹಬ್ಬವನ್ನು ಗುಂಡ್ಲುಪೇಟೆ ತಾಲೂಕಿನ 6 ಊರುಗಳು ಹಬ್ಬದ ನಂತರ ವಾರದಲ್ಲಿ ಬುಧವಾರ ಆಚರಿಸುತ್ತವೆ. ಗುಂಡ್ಲುಪೇಟೆ ತಾಲೂಕಿನ 6 ಗ್ರಾಮಗಳಲ್ಲಿ ಹಬ್ಬದ ಸಂತಸವೇ ಇಲ್ಲ. ಕಾರಣ ಈ ಬಾರಿ ಹಬ್ಬ ಮಂಗಳವಾರ ಬಂದಿರುವುದು. ಗುಂಡ್ಲುಪೇಟೆ ತಾಲೂಕಿನ ವೀರನಪುರ, ಬನ್ನಿತಾಳಪುರ, ಇಂಗಲವಾಡಿ, ಮಾಡ್ರಹಳ್ಳಿ, ಮಳವಳ್ಳಿ ಹಾಗೂ ನೇನೆಕಟ್ಟೆ ಗ್ರಾಮಗಳಲ್ಲಿ ದೀಪಾವಳಿಯ ಬಲಿ ಪಾಡ್ಯಮಿ ಬುಧವಾರ ಬಂದರೆ ಮಾತ್ರ ಹಬ್ಬ ಆಚರಿಸಲಿದ್ದು, ಇಲ್ಲದಿದ್ದರೆ ಮುಂದಿನ ಬುಧವಾರವೇ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ. ದೀಪಾವಳಿ ಹಬ್ಬದ ಸಂಭ್ರಮ, ಹೊಸ ಬಟ್ಟೆ ತೊಡುವುದು, ಪಟಾಕಿ ಸಿಡಿಸುವುದು, ಮನೆಯಲ್ಲಿ ಸಿಹಿ ಊಟ ಎಲ್ಲವೂ ಬುಧವಾರವೇ…
ಐಸ್ ಲೆಂಡ್: ಕಳೆದ 14 ಗಂಟೆಗಳ ಅವಧಿಯಲ್ಲಿ 800 ಬಾರಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪನದಲ್ಲಿ 5.2ರಷ್ಟಿದ್ದ ತೀವ್ರತೆಯಿಂದಾಗಿ ಜ್ವಾಲಾಮುಖಿ ಸ್ಪೋಟಿಸುವ ಭೀತಿ ಎದುರಾಗಿದೆ. ಇದರಿಂದಾಗಿ ತುರ್ತು ಪರಿಸ್ಥಿತಿಯನ್ನು ದೇಶದಲ್ಲಿ ಹೇರಲಾಗಿದೆ. ‘ದೇಶದ ನೈರುತ್ಯ ಭಾಗದ ರೆಕ್ಯಾಜೇನ್ಸ್ ಭಾಗದಲ್ಲಿ ಭೂಮಿ ಕಂಪಿಸಿದೆ. ಉತ್ತರದ ಗ್ರಿಂಡ್ವಿಕ್ನಲ್ಲಿ ಭೂಕಂಪದ ಕೇಂದ್ರ ಬಿಂದುವಿದೆ. ಈ ಸರಣಿ ಭೂಕಂಪದಿಂದ ಜ್ವಾಲಾಮುಖಿ ಸ್ಪೋಟಿಸುವ ಸಾಧ್ಯತೆ ಇದೆ’ ಎಂದು ನಾಗರಿಕ ರಕ್ಷಣೆ ಹಾಗೂ ತುರ್ತು ನಿರ್ವಹಣಾ ಇಲಾಖೆ ತಿಳಿಸಿದೆ. ‘ಗ್ರಿಂಡ್ ವಿಕ್ ಪ್ರದೇಶದಲ್ಲಿ ಸುಮಾರು ನಾಲ್ಕು ಸಾವಿರ ಜನರು ವಾಸಿಸುತ್ತಿದ್ದಾರೆ. ಇವರನ್ನು ಸ್ಥಳಾಂತರಿಸುವ ಕಾರ್ಯ ನಡೆಸಲಾಗುತ್ತಿದೆ. ಶುಕ್ರವಾರ ಸಂಜೆ 5.30ರಿಂದ ಭೂಮಿ ಕಂಪಿಸಲು ಪ್ರಾರಂಭಿಸಿತು. ಕಳೆದ ಅಕ್ಟೋಬರ್ ನಿಂದ ಇಲ್ಲಿಯವರೆಗೆ ಸುಮಾರು 24 ಸಾವಿರ ಬಾರಿ ಭೂಮಿ ಕಂಪಿಸಿದ ಅನುಭವ ಇಲ್ಲಿನ ಜನರಿಗೆ ಆಗಿದೆ. ಅದರಲ್ಲೂ ಕಳೆದ 14 ಗಂಟೆಗಳಲ್ಲಿ 800 ಬಾರಿ ಭೂಮಿ ಕಂಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ಭೂಮಿಯ 5 ಕಿ.ಮೀ. ಆಳದಲ್ಲಿ ಭೂಕಂಪ ಉಂಟಾಗಿದೆ. ಇಂಥ…