Author: admin

ತುಮಕೂರು: ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಹೇಮಾವತಿ ನದಿ ನೀರು ಹರಿಸೋಕೆ ಸಂಬಂಧಪಟ್ಟಂತೆ ಕೆಡಿಪಿ ಸಭೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಶಾಸಕರ ನಡುವೆ ಭಾರೀ ಮಾತಿನ ಚಕಮಕಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಜಿ ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ಶಾಸಕರ ನಡುವೆ ಮಾತಿನ ವಾಗ್ವಾದ ನಡೆಯಿತು. ಕುಣಿಗಲ್ ಶಾಸಕ ಡಾ.ರಂಗನಾಥ್ ಹಾಗೂ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಗೌಡ ನಡುವೆ ಜಟಾಪಟಿ ನಡೆಯಿತು. ಎಕ್ಸ್ ಪ್ರೆಸ್ ಕೆನಾಲ್ ನಿರ್ಮಾಣ ಮಾಡುವ ಸಂಬಂಧಪಟ್ಟಂತೆ ಕುಣಿಗಲ್ ಶಾಸಕ ಹೇಮಾವತಿ ನೀರಿಗೆ ಎಕ್ಸ್ ಪ್ರೆಸ್ ಕೆನಾಲ್ ಮಾಡಬೇಕೆಂದು ಪಟ್ಟು ಹಿಡಿದು ಕುಳಿತರು. ಕುಣಿಗಲ್ ತಾಲ್ಲೂಕಿಗೆ ಪೈಪ್ ಲೈನ್ ಮೂಲಕ ನೀರು ಹರಿಸಿ ಎಂದರು. ಡಾ.ರಂಗನಾಥ್ ಬೇಡಿಕೆಗೆ ಬಿಜೆಪಿ ಶಾಸಕ ಸುರೇಶ್ ಗೌಡ ತೀವ್ರ ವಿರೋಧ ವ್ಯಕ್ತಪಡಿಸಿದರು.ಎಕ್ಸ್ ಪ್ರೆಸ್ ಕೆನಾಲ್ ಮೂಲಕ ಮಾಗಡಿಗೆ ನೀರು ತೆಗೆದುಕೊಂಡು ಹೋಗಲಾಗುತ್ತಿದೆ. ಮಾಗಡಿಗೆ ಹೇಮಾವತಿ…

Read More

ತುಮಕೂರು: ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಸ್ಥಳೀಯರು ದಿಢೀರ್ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕುಣಿಗಲ್ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯ ಕಾಣೆಯಾಗಿದ್ದಾರೆ ಎಂಬ ಬಿತ್ತಿಪತ್ರಗಳನ್ನು ಹಾಗೂ ಮಳೆ ನೀರಿನಿಂದ ತುಂಬಿರುವ ರಸ್ತೆ ಗುಂಡಿಗಳ ಬಿತ್ತಿ ಪತ್ರಗಳನ್ನು ಹಿಡಿದು ಜನರು ಬೀದಿಗೆ ಇಳಿದಿದ್ದರು. ಸಂಚಾರ ಅಡ್ಡಗಟ್ಟಿ ರಸ್ತೆಸರಿಪಡಿಸುವಂತೆ ಅಧಿಕಾರಿ ಮತ್ತು ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿದರು. ಹಲವು ವರ್ಷಗಳಿಂದ ಮುಖ್ಯರಸ್ತೆ ಹಾಳಾಗಿದ್ದು ಮಳೆ ಬಂದರೆ ಇನ್ನಿಲ್ಲದ ತೊಂದರೆಗಳು ಉಂಟಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕುಣಿಗಲ್ ರಸ್ತೆಯ ಹೇಮಾವತಿ ನೀರಾವರಿ ಕಚೇರಿ ಮುಂದೆ ವಾಹನಗಳನ್ನು ಅಡ್ಡಗಟ್ಟಿ ಪ್ರತಿಭಟಿಸಿದರು. ಸ್ಥಳಕ್ಕೆ ತಿಲಕ್ ಪಾರ್ಕ್ ಪೊಲೀಸರು ಆಗಮಿಸಿ ಪ್ರತಿಭಟನಾಕಾರರನ್ನು ಮನವೊಲಿಸಲು ಯತ್ನಿಸಿದರು. ಸ್ಥಳಕ್ಕೆ ಸಂಬಂಧಿಸಿದ ರಾಜಕೀಯ ಜನಪ್ರತಿನಿಧಿಗಳು ಅಧಿಕಾರಿಗಳು ಆಗಮಿಸುವಂತೆ ಪಟ್ಟು ಹಿಡಿದರು. ಇದರಿಂದಾಗಿ ಕಿ.ಮೀ. ಗಟ್ಟಲೆ ಟ್ರಾಫಿಕ್ ಜಾಮ್ನಿಂದ ಸಾರ್ವಜನಿಕರು ಪರದಾಡುವಂತಾಯಿತು. ನಂತರ ಪೊಲೀಸರ ಮಧ್ಯಪ್ರವೇಶದಿಂದ ಪ್ರತಿಭಟನಾಕಾರರು ಧರಣಿಯನ್ನು ಹಿಂದಕ್ಕೆ ಪಡೆದರು.

Read More

 ಹಾಸನ: ಹಾಸನಾಂಬ ದೇವಸ್ಥಾನದಲ್ಲಿ ನೂಕುನುಗ್ಗಲು ಸಂಭವಿಸಿದ್ದು, ವಿದ್ಯುತ್ ತಂತಿ ತುಂಡಾಗಿ ಕೆಲವರಿಗೆ ವಿದ್ಯುತ್ ಶಾಕ್ ಉಂಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಹಾಸನ ಎಸ್ಪಿ ಮೊಹಮ್ಮದ್ ಸುಜಿತಾ ಮಾತನಾಡಿ, ಮಧ್ಯಾಹ್ನ 1:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಪಕ್ಕದಲ್ಲಿಯೇ ವಿದ್ಯುತ್ ತಂತಿ ತುಂಡಾಗಿದ್ದರಿಂದ ದೌಡಾಯಿಸಲು ಪ್ರಾರಂಭಿಸಿದ ಜನರು ಭಯಭೀತರಾಗಿದ್ದರು. ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ (ಕೆಇಬಿ) ಮತ್ತು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಲು ಸ್ಥಳದಲ್ಲಿಯೇ ಇದ್ದಾರೆ. ಮೂವರನ್ನು ಆಸ್ಪತ್ರೆಗೆ ಕಳುಹಿಸಲಾಗಿದ್ದು, ಇನ್ನು ಕೆಲವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ತೆಗೆದುಕೊಳ್ಳಲಾಗಿದೆ. ಅದೃಷ್ಟವಶಾತ್ ಗಾಯಗೊಂಡಿರುವ ಎಲ್ಲಾ ವ್ಯಕ್ತಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

Read More

ತಿಪಟೂರು: ತಾಲ್ಲೂಕಿನ ಹಾಲ್ಕುರಿಕೆ ಗ್ರಾಮದ ಯೂನಿಯನ್ ಬ್ಯಾಂಕ್  ಆಫ್ ಇಂಡಿಯಾ ಶಾಖೆಯಲ್ಲಿ ಬ್ಯಾಂಕ್ ನ 105ನೇ ಸಂಸ್ಥಾಪನಾ ದಿನವನ್ನ ಸರಳ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥಾಪನಾ ದಿನದ ಅಂಗವಾಗಿ ಕೇಕ್ ಕತ್ತರಿಸಿ ಬ್ಯಾಂಕ್ ಗ್ರಾಹಕರಿಗೆ ಸಿಹಿ ವಿತರಣೆ ಮಾಡಲಾಯಿತು. ಬ್ಯಾಂಕ್ ಸಂಸ್ಥಾಪಕರಾದ ಖಾನ್ ಬಹದ್ದೂರ್ ಹಾಜಿ ಅಬ್ದುಲ್ಲಾ ಹಾಜಿ ಕಾಸಿಂ ಸಾಹೇಬ್ ಬಹಾದೂರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಯೂನಿಯನ್ ಬ್ಯಾಂಕ್ ಅಫ್ ಇಂಡಿಯಾ ಹಾಲ್ಕುರಿಕೆ ಶಾಖಾ ವ್ಯವಸ್ಥಾಪಕರಾದ ಜೆ.ಶ್ರೀನಿವಾಸ್ ಮಾತನಾಡಿ, ಕಾರ್ಪೊರೇಶನ್ ಬ್ಯಾಂಕ್,ಮದ್ರಾಸ್ ಪ್ರಾಂತ್ಯದ ಹಿಂದಿನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಳೆಯ ಬ್ಯಾಂಕಿಂಗ್ ಸಂಸ್ಥೆ ಹಾಗೂ ಭಾರತದ ಹಳೆಯ ಬ್ಯಾಂಕುಗಳಲ್ಲಿ ಒಂದು. ಮಾರ್ಚ್ 1906 ರಂದು ಖಾನ್ ಬಹದ್ದೂರ್ ಹಾಜಿ ಅಬ್ದುಲ್ಲಾ ಹಾಜಿ ಕಾಸಿಂ ಸಾಹೇಬ್ ಬಹಾದೂರ್ ನೇತೃತ್ವದಲ್ಲಿ ಉಡುಪಿಯಲ್ಲಿ ಸ್ಥಾಪಿಸಲಾಯಿತು. ಗ್ರಾಮೀಣ ಭಾಗದ ಜನರಿಗೆ ಆರ್ಥಿಕ ಸೌಲಭ್ಯಗಳು ದೊರೆಯಬೇಕು ಎಂದರು. ಭಾರತ ಆರ್ಥಿಕವಾಗಿ ಸಾಮಾಜಿಕವಾಗಿ ಮುಂದುವರೆಯ ಬೇಕೆಂದರೆ ದೇಶದ ಜನ ಆರ್ಥಿಕವಾಗಿ ಮುಂದುವರೆಯ ಬೇಕು ಎನ್ನುವ ತತ್ವದೊಂದಿಗೆ…

Read More

ಬೆಂಗಳೂರು: ಕೊನೆಗೂ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿಡಲಾಗಿದೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಕೂಡಲೇ ಜಾರಿಗೆ ಬರುವಂತೆ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಸಾರಥಿಯನ್ನಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ನೇಮಿಸಿದ್ದಾರೆ. ಈ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ನಳೀನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಬಿದ್ದಿತ್ತು.

Read More

ಪವಿತ್ರ ನಗರವಾದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ಶ್ರೀ ರಾಮಲಾಲಾ ದೇವರ ಪ್ರತಿಷ್ಠಾಪನೆ ಸಮಾರಂಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ. ಇಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ‌ನ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ಭೇಟಿಯಾಗಿ ಘಟಿಕೋತ್ಸವದ ಔಪಚಾರಿಕ ಆಹ್ವಾನವನ್ನು ನೀಡಿದರು. ತಮ್ಮ ಅಧಿಕೃತ ನಿವಾಸದಲ್ಲಿ ಈ ಸಭೆಯ ನಂತರ, ಸಿಎಂ ಯೋಗಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹೀಗೆ ಬರೆದಿದ್ದಾರೆ, ‘ಇಂದು, ನನ್ನ ಜೀವನವು ಧನ್ಯವಾಗಿದೆ. ಹೃದಯವು ಸಂತೋಷವಾಗಿದೆ.’ ‘X’ ಗೆ ತೆಗೆದುಕೊಂಡು, ಸಿಎಂ ಯೋಗಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ, “ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ‌ನ ಗೌರವಾನ್ವಿತ ಅಧಿಕಾರಿಗಳು, ಸ್ವಾಮಿ ಗೋವಿಂದದೇವ ಗಿರಿ ಜಿ ಮಹಾರಾಜ್, ಚಂಪತ್ ರಾಯ್ ಮತ್ತು ರಾಜೇಂದ್ರ ಪಂಕಜ್ ಅವರು ನೂತನ ಬಾಲ ಮೂರ್ತಿಯ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ. ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ಶ್ರೀ ರಾಮಲಾಲಾ ಸರ್ಕಾರ್. ಕೃತಜ್ಞತೆ! ಜೈ ಜೈ ಸೀತಾರಾಮ್.”

Read More

ಬೆಂಗಳೂರು: ಪಿಎಸ್ ‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌  ಸರ್ಕಾರದ ಆದೇಶ ಎತ್ತಿ ಹಿಡಿದಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌, ಪಿಎಸ್ ‌ಐ ಮರು ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ. ಅಕ್ರಮದ ಕಾರಣಕ್ಕೆ ಪರೀಕ್ಷೆ ರದ್ದು ಮಾಡಿ ಹೊಸದಾಗಿ ಪರೀಕ್ಷೆ ನಡೆಸಲು ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಹಲವು ಅಭ್ಯರ್ಥಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು. ಇಂದು ನ್ಯಾ. ದಿನೇಶ್ ಕುಮಾರ್, ನ್ಯಾ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ. ಅಕ್ರಮದಲ್ಲಿ ಭಾಗಿಯಾಗದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಕ್ಕೆ ಅರ್ಜಿದಾರರು ಮನವಿ ಮಾಡಿದ್ದರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್‌, ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್‌ ಆದೇಶ ಹೊರಡಿಸಿತು. ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸುವಂತೆ ಕೋರ್ಟ್‌ ಸೂಚನೆ ನೀಡಿದೆ.

Read More

ಬೆಂಗಳೂರು: ಅಡುಗೆ ಮನೆಯನ್ನೇ  ಡ್ರಗ್ಸ್  ತಯಾರಿಸುವ ಕಾರ್ಖಾನೆಯನ್ನಾಗಿ ಮಾಡಿಕೊಂಡಿದ್ದವನನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ನೈಜೀರಿಯಾ  ಪ್ರಜೆಯಾಗಿದ್ದು,ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ನೈಜೀರಿಯಾ ಪ್ರಜೆ ಬೆಂಜಮಿನ್ ಅವಲಹಳ್ಳಿಯ ತನ್ನ ಅಡುಗೆಮನೆಯ ಸ್ಟೌ ಮೇಲೆ ಬೆಂಕಿ ಹೊತ್ತಿಸಿ, ದೋಸೆಯ ರೀತಿ ಮಾಡಿಕೊಳ್ತಿದ್ದ. ಆ ಬಳಿಕ ಪ್ರೆಶರ್ ಕುಕ್ಕರ್‌ಗೆ ಪೈಪ್ ಅಳವಡಿಸಿ ಆವಿಯಿಂದ ಕ್ರಿಸ್ಟಲ್ ಬರುವಂತೆ ಮಾಡಿ ಎಂಡಿಎಂಎ ತಯಾರು ಮಾಡುತ್ತಿದ್ದ ಎನ್ನಲಾಗಿದೆ. ಎಂಡಿಎಂಎ ತಯಾರು ಮಾಡಲು ಬೇಕಾಗಿದ್ದ ಕಚ್ಚಾವಸ್ತುಗಳನ್ನು ಖರೀದಿಸುವ ಆರೋಪಿ ನಂತರ ಹಂತ ಹಂತವಾಗಿ ಎಂಡಿಎ ತಯಾರು ಮಾಡುತ್ತಿದ್ದಾರೆ. ಡ್ರಗ್ಸ್ ಡಿಮಾಂಡ್ ಎಷ್ಟು ಇದೆ, ಅಷ್ಟನ್ನು ತಯಾರು ಮಾಡಿ, ನಂತರ ಅದನ್ನು ನೈಜೀರಿಯಾ ಮತ್ತು ಆಫ್ರಿಕಾ ಮೂಲದವರಿಗೆ ಮಾರಾಟ ಮಾಡುತ್ತಿರುವುದು ತಿಳಿದು ಬಂದಿದೆ. ತಯಾರು ಮಾಡಿಟ್ಟಿದ್ದ ಸುಮಾರು 10 ಕೋಟಿ ರೂ. ಮೌಲ್ಯದ 5 ಕೆಜಿ ಎಂಡಿಎಂಎ ಮತ್ತು ಅದನ್ನು ತಯಾರು ಮಾಡಲು ಬೇಕಾಗಿದ್ದ 5 ಕೆಜಿ ಕಚ್ಚಾ ವಸ್ತುಗಳನ್ನು ಸಂಗ್ರಹಿಸಿದ್ದಾರೆ. ಸಿಸಿಬಿಯ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು…

Read More

ಮುಂಬೈ: ಇಲ್ಲಿನ ಬಾಂದ್ರಾ-ವರ್ಲಿ ಸೀ ಲಿಂಕ್‌ ನಲ್ಲಿ ವೇಗವಾಗಿ ಬಂದ ಟೊಯೊಟಾ ಇನ್ನೋವಾ ಬಹು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ದಿಕ್ಕಿನ ಲೇನ್ ‌ನಲ್ಲಿ ಸಮುದ್ರ ಸಂಪರ್ಕದ ಬಾಂದ್ರಾ ತುದಿಯಲ್ಲಿರುವ ಟೋಲ್ ಬೂತ್‌ ಗೆ ಸುಮಾರು 100 ಮೀಟರ್ ಮೊದಲು ಇನ್ನೋವಾ ಮೊದಲು ಮರ್ಸಿಡಿಸ್ ಬೆಂಜ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ವಲಯ 9 ರ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಕೃಷ್ಣಕಾಂತ್ ಉಪಾಧ್ಯಾಯ ಹೇಳಿದ್ದಾರೆ. “ಇನ್ನೋವಾ ಚಾಲಕ ಸ್ಥಳದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದನು ಮತ್ತು ವೇಗವಾಗಿ ಓಡಿದನು. ವಾಹನವು ಟೋಲ್ ಬೂತ್ ತಲುಪುತ್ತಿದ್ದಂತೆ, ಹಲವಾರು ಕಾರುಗಳಿಗೆ ಡಿಕ್ಕಿ ಹೊಡೆದು ಒಂಬತ್ತು ಜನರು ಗಾಯಗೊಂಡರು. ನಂತರ ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ ” ಎಂದು ಡಿಸಿಪಿ ಹೇಳಿದರು. ನಗರದಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಸಾವು.…

Read More

ಉತ್ತರ ಪ್ರದೇಶ: ಸಂಬಲ್‌ ಪುರ ಜಿಲ್ಲೆಯ ಆಘಾತಕಾರಿ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ 2 ವರ್ಷದ ಮಗುವನ್ನು ಹೊಡೆದು ಕೊಂದು ತನ್ನ ಹೆಂಡತಿ ಮತ್ತು ಇನ್ನೊಬ್ಬ ಮಗಳನ್ನು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಘಟನೆ ನಡೆದಾಗ ವ್ಯಕ್ತಿ ಪಾನಮತ್ತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಹಯಾತ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ವರದಿಯಾಗಿದೆ. ದಂಪತಿ ನಡುವೆ ಆಹಾರ ವಿಚಾರವಾಗಿ ಜಗಳ: ಪೊಲೀಸರ ಪ್ರಕಾರ ನವೆಂಬರ್ 9 ರಂದು ರಾತ್ರಿ 8:30 ರ ಸುಮಾರಿಗೆ ದಂಪತಿಗಳ ನಡುವೆ ಆಹಾರದ ವಿಚಾರವಾಗಿ ಜಗಳವಾಗಿತ್ತು. ನಂತರ ಕೋಪಗೊಂಡ ಅಶ್ರಫ್ ಎಂದು ಗುರುತಿಸಲಾದ ವ್ಯಕ್ತಿ ತನ್ನ ಹೆಂಡತಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಥಳಿಸಲು ಪ್ರಾರಂಭಿಸಿದನು. ಅದರಲ್ಲಿ ಕೇವಲ 2 ವರ್ಷ ವಯಸ್ಸಿನ ಒಬ್ಬ ಮಗು ತುಂಬಾ ಥಳಿಸಲ್ಪಟ್ಟಿತು, ಮಗುವು ಆಸ್ಪತ್ರೆಯಲ್ಲಿ ಸಾವನ್ನಪ್ಪಿತು. ವರದಿಗಳ ಪ್ರಕಾರ, ಆ ವ್ಯಕ್ತಿ ಎಷ್ಟು ಕ್ರೂರನಾಗಿದ್ದನೆಂದರೆ ಅವನು ಮಗುವನ್ನು ನೆಲದ ಮೇಲೆ ಹಲವಾರು ಬಾರಿ ಹೊಡೆದಿದ್ದಾನೆ. ಅದರಲ್ಲಿ ಒಂದು ಮಗು ಸಾವನ್ನಪ್ಪಿದ್ದರೆ, ಮತ್ತೊಬ್ಬ 3 ವರ್ಷದ ಮಗು ತನ್ನ…

Read More