Author: admin

ಬೆಂಗಳೂರು ನಗರದ ವಿವಿಧ ಪೊಲೀಸ್ ವಿಭಾಗಗಳ ವ್ಯಾಪ್ತಿಯ ರೌಡಿಶೀಟರ್ ‌ಗಳ ಮನೆಯ ಮೇಲೆ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ತಡರಾತ್ರಿ ದಾಳಿ ನಡೆಸಿ ಬಿಸಿ ಮುಟ್ಟಿಸಿದರು. ರೌಡಿಶೀಟರ್‌ ಗಳಾದ ರಮೇಶ್, ಜಗದೀಶ್ ಅಲಿಯಾಸ್ ಟಾಮಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಹೇಳಿದರು. ‘ಮಾರಕಾಸ್ತ್ರಗಳು ಹಾಗೂ ಕೆಲವು ದಾಖಲೆ ಪತ್ರಗಳನ್ನು ಜಪ್ತಿ ಮಾಡಲಾಗಿದೆ. ಕೆಲವು ರೌಡಿಗಳ ಮನೆಯಲ್ಲಿ ಚೆಕ್, ಸಹಿ ಪಡೆದಿರುವ ಚಾಪಾ ಕಾಗದಗಳು ಪತ್ತೆಯಾಗಿವೆ’ ಎಂದು ಪೊಲೀಸರು ಹೇಳಿದರು.

Read More

ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ 13 ಆರೋಪಿಗಳನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಆ್ಯಪ್ ಮೂಲಕ ಪಂದ್ಯಗಳ ಸೋಲು-ಗೆಲುವು ಲೆಕ್ಕಾಚಾರದಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ 11 ಸ್ಥಳಗಳ ಮೇಲೆ ದಾಳಿ ಮಾಡಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ಚಿನ್ನಸ್ವಾಮಿ ಕ್ರೀಡಾಂಗಣ ಒಳಭಾಗದ ಪ್ರೇಕ್ಷಕರ ಗ್ಯಾಲರಿಯಲ್ಲೂ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

Read More

ಮಧ್ಯಪ್ರದೇಶದ ಚಂದ್ವಾರ ಜಿಲ್ಲೆಯ ಕೊತ್ವಾಲಿ ಪೊಲೀಸರು ಇತ್ತೀಚೆಗೆ ತಪಾಸಣೆ ವೇಳೆ 60 ಅಕ್ರಮ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ನಡುವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದರು. ಆದರೆ ವಶಪಡಿಸಿಕೊಂಡ ಮದ್ಯದ ಬಾಟಲಿಗಳು ಏಕಾಏಕಿ ನಾಪತ್ತೆಯಾಗಿದ್ದು, ನ್ಯಾಯಾಲಯ ಇದಕ್ಕೆ ಕಾರಣ ಕೇಳಿದಾಗ ಇಲಿಗಳು ಮದ್ಯದ ಬಾಟಲಿಗಳನ್ನು ಕುಡಿದಿವೆ. ಈ ಪೈಕಿ ಒಂದನ್ನು ಸೆರೆ ಹಿಡಿಯಲಾಗಿದ್ದು ಉಳಿದ ಇಲಿಗಳು ತಪ್ಪಿಸಿಕೊಂಡವು ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು.

Read More

ಚುನಾವಣಾ ರಾಜಕೀಯದಿಂದ ಡಿ.ವಿ. ಸದಾನಂದಗೌಡ ನಿವೃತ್ತಿ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದಗೌಡ ನಿವೃತ್ತಿ ಘೋಷಣೆ ಮಾಡಿದ್ದಾರೆ. ಸಂಸದ ಡಿ.ವಿ. ಸದಾನಂದಗೌಡಗೆ ಹೈಕಮಾಂಡ್ ಸೂಚನೆ ಕೊಟ್ಟಿದೆ. ಪಕ್ಷದ ಕೆಲಸಗಳಲ್ಲಿ ಸಕ್ರಿಯರಾಗಿ ಇರಲು ಹೈಕಮಾಂಡ್ ಹೇಳಿದೆ. ಚುನಾವಣೆಗೆ ನಿಲ್ಲದಂತೆ ಸದಾನಂದಗೌಡಗೆ ಹೈಕಮಾಂಡ್ ಸೂಚಿಸಿದೆ ಎಂದು ತಿಳಿಸಿದರು.

Read More

ಬೆಂಗಳೂರು: ಬಿಜೆಪಿಯಿಂದ ಮತ್ತೆ ಆಪರೇಷನ್ ಕಮಲ ಪ್ರಯತ್ನ ವಿಚಾರವಾಗಿ ಮಾತನಾಡಿದ ಸಂಸದ ಡಿಕೆ ಸುರೇಶ್, ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೆ ಏನಾದರೂ ಗೊತ್ತಿದೆಯಾ? ಜನರಿಗೆ ಏನು ಬೇಕೋ ಅದನ್ನು ಮಾಡುವುದು ಬಿಜೆಪಿಗೆ ಗೊತ್ತಿಲ್ಲ. ಭ್ರಷ್ಟಾಚಾರದಲ್ಲಿ ಮುಳುಗಿದ್ದರಿಂದ ಇವತ್ತು ಕೆಲಸ ಇಲ್ಲದೆ ಕೂತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಯವರಿಗೆ ಆಘಾತ ಆಗಿದೆ. ಆಘಾತ ತಪ್ಪಿಸಿಕೊಳ್ಳಲು ಆಪರೇಷನ್ ಕಮಲದ ಹೆಸರು ಹೇಳುತ್ತಿದ್ದಾರೆ ಎಂದರು. ವಿಪಕ್ಷ ನಾಯಕರು ಇದ್ದಾರೋ ಇಲ್ವೋ ಅವರಿಗೆ ಬಿಟ್ಟಿದ್ದು. ಆದರೆ ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದು ನಮ್ಮ ತಟ್ಟೆಯಲ್ಲಿ ಜಿರಳೆ ಹುಡಿಕಿದೇ ನಾವೇನು ಮಾಡಲು ಆಗುತ್ತದೆ ಎಂದರು.

Read More

ಕರ್ನಾಟಕದಲ್ಲಿ ಇರುವುದು ಅಸಮರ್ಥ ಸರ್ಕಾರ ಎಂದು ಶಿವಮೊಗ್ಗದಲ್ಲಿ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬರ ಇದ್ದರೂ ಯಾವುದೇ ಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿಲ್ಲ. ಗ್ಯಾರಂಟಿ ಯೋಜನೆಯ ಜಾಹೀರಾತಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 41,630 ಹೆಕ್ಟೇರ್ ಭತ್ತ ಒಣಗಿ ಹೋಗಿದೆ. ಬರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ 192 ಕೋಟಿ ನಷ್ಟ ಉಂಟಾಗಿದೆ. ರಾಜ್ಯ ಸರ್ಕಾರ ಈ ಬಾರಿ ಪರಿಹಾರ ಮೊತ್ತವನ್ನೂ ಕಡಿತಗೊಳಿಸಿದೆ ಎಂದು ವಾಗ್ದಾಳಿ ನಡೆಸಿದರು.

Read More

ತುಮಕೂರು: ಕೋಟ್ಯಾಂತರ ರೂ ಮೌಲ್ಯದ ಜಾಗ್ವಾರ್ ಕಾರಿಗೆ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ಮದುವೆಗೆಂದು ಬಂದಿದ್ದ ವರನ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕುಣಿಗಲ್ ನ ನಕ್ಷತ್ರ ಪ್ಯಾಲೇಸ್ ಕಲ್ಯಾಣ ಮಂಟಪಕ್ಕೆ ಬಂದಿದ್ದ ಕಾರು ಇದಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಅಗ್ನಿ ಶಾಮಕದಳದಿಂದ ಬೆಂಕಿ‌ನಂದಿಸಲಾಯಿತು. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು: ಹೆಚ್‌ ಡಿ ಕೋಟೆ ತಾಲೂಕಿನ ತೆಲಗುಮಸಳ್ಳಿ ಗ್ರಾಮದಲ್ಲಿ ದಿಢೀರ್‌ ಕುಸಿದ ಅಂಗನವಾಡಿ ಮೇಲ್ಛಾವಣಿಯಿಂದಾಗಿ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಅಂಗನವಾಡಿಯಲ್ಲಿ ಊಟ ಮುಗಿಸಿ ಆರು ಮಕ್ಕಳು ನಿದ್ರಿಸುತ್ತಿದ್ದ ವೇಳೆ ಈ ಅವಘಡ ನಡೆದಿದೆ. ಘಟನೆಯಲ್ಲಿ ಪೂರ್ಣಿಮಾ ಮತ್ತು ದಿಶಾಂತ ಎಂಬ ಮಕ್ಕಳ ತಲೆಗೆ ಪೆಟ್ಟಾಗಿದ್ದು ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ಛಾವಣಿ ಕುಸಿದ ವಿಷಯ ತಿಳಿಯುತ್ತಿದ್ದಂತೆ ಅಂಗನವಾಡಿಗೆ ಶಾಸಕ ಅನಿಲ ಚಿಕ್ಕಮಾದು, ಶಿಶು ಅಭಿವೃದ್ಧಿ ಇಲಾಖೆಯ ಡಿ ಡಿ ಬಸವರಾಜು ಹಿರಿಯ ಅಧಿಕಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಚಾಮರಾಜನಗರ: ಪ್ರಮುಖ ಯಾತ್ರಸ್ಥಳವಾದ ಚಾಮರಾಜನಗರದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರದಿಂದ ದೀಪಾವಳಿ ಜಾತ್ರೆ ಆರಂಭಗೊಳ್ಳಲಿದ್ದು ಸಹಸ್ರಾರು ಮಂದಿ ಪಾದಯಾತ್ರೆ ಮೂಲಕ ಬೆಟ್ಟಕ್ಕೆ ತೆರಳುತ್ತಿದ್ದಾರೆ. ಚಾಮರಾಜನಗರ, ನಂಜನಗೂಡು, ಮಂಡ್ಯ ಸೇರಿದಂತೆ ಹತ್ತಾರು ಜಿಲ್ಲೆಗಳಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ನೂರಾರು ಕಿಮೀ ಪಾದಯಾತ್ರೆ ಮೂಲಕ ಭಕ್ತರು ಬರುತ್ತಿದ್ದು ಬೆಟ್ಟದಲ್ಲಿ ಭಕ್ತ ಸಾಗರ ಸೇರಿದೆ. ಶುಕ್ರವಾರದಿಂದ ದೀಪಾವಳಿ ಜಾತ್ರೆ ಆರಂಭವಾಗಲಿದ್ದು 14 ರ ಮಂಗಳವಾರದಂದು ಬೆಳಗ್ಗೆ 8.50ಕ್ಕೆ ರಥೋತ್ಸವ ನಡೆಯಲಿದೆ. ಇನ್ನು, ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ಹನೂರಿನಲ್ಲಿ ಮಹಿಳಾ ಭಕ್ತರು ತಮಟೆ ಸದ್ದಿಗೆ ಹೆಜ್ಜೆ ಹಾಕುತ್ತಾ ತೆರಳುವ ಮೂಲಕ ಗಮನ ಸೆಳೆದಿದ್ದಾರೆ. ನಡೆದು ಹೋಗುವುದೇ ಕಷ್ಟ ಎಂಬ ಸ್ಥಿತಿಯಲ್ಲಿ ಮಹಿಳಾ ಭಕ್ತರು ಕುಣಿದು ಕುಪ್ಪಳಿಸಿ ಮಹದೇಶ್ವರನಿಗೆ ಘೋಷಣೆ ಕೂಗುತ್ತಾ ತೆರಳುವ ಮೂಲಕ ಭಕ್ತಿ ಪರಾಕಷ್ಟೆ ಮೆರೆದಿದ್ದಾರೆ.

Read More

ಯೋಜನೆಗಾಗಿ ಭೂಮಿ ಕಳೆದುಕೊಂಡ ನಿರ್ವಸಿತರಿಗೆ ಉದ್ಯೋಗ ನೀಡಿ ಮುಂದುವರಿಸುವ ಬಗ್ಗೆ ಡಿಸೆಂಬರ್ 1ರೊಳಗೆ ಕ್ರಮ ಕೈಗೊಳ್ಳುವಂತೆ ಗೈಲ್ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‍ಗೆ (ಹಿಂದಿನ ಜೆಬಿಎಫ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್) ಸೂಚನೆ ನೀಡಲಾಗಿದೆ. ಎಂ.ಎಸ್.ಇ.ಝಡ್ ಯೋಜನೆಗಾಗಿ ಸ್ಥಳಾಂತರಗೊಂಡ ಕುಟುಂಬಗಳಿಗೆ ಉದ್ಯೋಗ ನೀಡುವ ಕುರಿತು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ನಡೆದ ವರ್ಚುವೆಲ್ ಸಭೆಯಲ್ಲಿ ಈ ಬಗ್ಗೆ ನಿರ್ದೇಶಿಸಲಾಗಿದೆ. ಗೈಲ್ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಜಿಎಂಪಿಎಲ್) ನಲ್ಲಿ ನಿರ್ವಸಿತರಿಗೆ ಉದ್ಯೋಗದ ಮುಂದುವರಿಕೆಯ ಬಗ್ಗೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿತು, ನಿರ್ವಸಿತರಿಗೆ ಉದ್ಯೋಗ ನೀಡುವುದು ಜಿಎಂಪಿಎಲ್ ಸಂಸ್ಥೆಯ ಬಾಧ್ಯತೆಯಾಗಿದೆ. ಭೂಸ್ವಾಧೀನ ಸಂದರ್ಭದಲ್ಲಿ ಭೂಮಿ ಕಳೆದುಕೊಳ್ಳುವವರಿಗೆ ಯೋಜನೆಯಲ್ಲಿ ಉದ್ಯೋಗ ನೀಡುವ ಬಗ್ಗೆ ಕರ್ನಾಟಕ ಸರಕಾರವು ಭರವಸೆ ನೀಡಿತ್ತು. ನೇಮಕಾತಿ ನಿಯಮಗಳನ್ನು ಮುಂದಿಟ್ಟು ಉದ್ಯೋಗ ನಿರಾಕರಿಸುವುದು ಸರಿಯಲ್ಲ. ಎಂ.ಆರ್.ಪಿ.ಎಲ್ ಮತ್ತು ಐ.ಎಸ್.ಪಿ.ಆರ್.ಎಲ್. ನಂತಹ ಸಾರ್ವಜನಿಕ ಉದ್ಯಮಗಳು ಯಾವುದೇ ಆಯ್ಕೆ ಮಾನದಂಡಗಳಿಲ್ಲದೆ ನಿರ್ವಸಿತರಿಗೆ ಉದ್ಯೋಗ ನೀಡಿವೆ. ಇದೇ ಆಧಾರದಲ್ಲಿ ನಿರ್ವಸಿತರ ಉದ್ಯೋಗ ಸಮಸ್ಯೆ ಬಗೆಹರಿಸಲು ಸಭೆ ಗೈಲ್…

Read More