Subscribe to Updates
Get the latest creative news from FooBar about art, design and business.
- 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
- ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
- ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
- ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
- ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
- ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
- ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
Author: admin
ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದು ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ವಿಧಾನಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯೆ ಡಾ. ತೇಜಸ್ವಿನಿ ಗೌಡ ಅವರು, ಆನೆ ಹಾವಳಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆನೆಗಳು ಜನವಸತಿ ಪ್ರದೇಶಕ್ಕೆ ಬರುವುದನ್ನು ತಡೆಯಲು ಅನೆ ಕಂದಕ ನಿರ್ಮಾಣ, ರೇಲ್ವೇ ಬ್ಯಾರಿಕೇಡ್ ಗಳ ಅಳವಡಿಕೆಯನ್ನು ಮಾಡಲಾಗುವುದು ಎಂದರು.
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಳ ಚಳಿಗಾಲ ಅಧಿವೇಶನ ವೀಕ್ಷಣೆಗೆ ಆಗಮಿಸುವ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿ ವಿಶೇಷ ಆತಿಥ್ಯ ನೀಡಲಾಯಿತು. ಕಲಾಪ ವೀಕ್ಷಣೆಗೆ ತಂಡೋಪತಂಡವಾಗಿ ಆಗಮಿಸುವ ಮಕ್ಕಳನ್ನು ಸುವರ್ಣ ವಿಧಾನಸೌಧದ ಉತ್ತರ ದ್ವಾರದ ಬಳಿಯ ಆಡಿಟೋರಿಯಂನಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ಕುರಿತು ಅರಿವು ಮೂಡಿಸಲಾಗುತ್ತಿದೆ. ಇದಲ್ಲದೇ ರಾಜ್ಯದ ಕಲೆ-ಸಂಸ್ಕೃತಿ, ಪ್ರವಾಸೋದ್ಯಮ ಕುರಿತ ಕಿರುಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ. ಚಳಿಗಾಲ ಅಧಿವೇಶನದ ಮೊದಲ ದಿನವಾದ ಸೋಮವಾರ(ಡಿ.4) ಸುವರ್ಣ ವಿಧಾನಸೌಧದ ಆಡಿಟೋರಿಯಂನಲ್ಲಿ ಮಕ್ಕಳಿಗೆ ಸಂವಿಧಾನ ಪೀಠಿಕೆ ಓದಿಸಲಾಯಿತು. ಇದಾದ ಬಳಿಕ ಸಂಪನ್ಮೂಲ ವ್ಯಕ್ತಿಗಳು ಸಂವಿಧಾನದಲ್ಲಿ ತಿಳಿಸಿರುವಂತಹ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳ ಕುರಿತು ತಿಳಿಸಿಕೊಟ್ಟರು. ಮಕ್ಕಳು ದೇಶದ ಭವಿಷ್ಯ. ಆದ್ದರಿಂದ ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವ, ಶಾಸಕಾಂಗ ಮತ್ತಿತರ ವಿಷಯಗಳ ಬಗ್ಗೆ ತಿಳಿಸಿಕೊಡಬೇಕು ಎಂಬುದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರ ಆಶಯ ಆಗಿದೆ. ಅವರ ಆಶಯದಂತೆ ಕಾರ್ಯರೂಪಕ್ಕೆ ತರಲಾಗಿರುತ್ತದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅತ್ಯಂತ ಮುತುವರ್ಜಿಯಿಂದ ಮಕ್ಕಳಿಗೆ ಉತ್ತಮ ವ್ಯವಸ್ಥೆಯನ್ನು ಕಲ್ಪಿಸುವ…
ಹಾಸನ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೀಡಾಗಿದೆ. ರೆಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ, ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿದ್ದರಿಂದ ಸಾಕಾನೆ ಅರ್ಜುನ ಮೃತಪಟ್ಟಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ದಾಳಿ ಮಾಡಿದೆ. ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿ ಮಾಡುತ್ತಿದ್ದಂತೆ ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ. ಕೊನೆಗೆ ಒಂಟಿಸಲಗದ ಜೊತೆ ಅರ್ಜುನ ಆನೆಯು ಒಂಟಿಯಾಗಿ ಹೋರಾಟ ನಡೆಸಿದೆ. ಈ ಕಾಳಗ ಆರಂಭವಾಗುತ್ತಿದ್ದಂತೆ ಅರ್ಜುನನ ಮೇಲಿನಿಂದ ಮಾವುತ ಇಳಿದು ಓಡಿದ್ದಾರೆ. ಅರ್ಜುನ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. 22 ವರ್ಷಗಳ ಕಾಲ ದಸರಾದಲ್ಲಿ ಭಾಗವಹಿಸಿದ್ದ ಸಾಕಾನೆ…
ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಜೆಪಿ ನಗರದ ಪಬ್ ನಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದ ವೇಳೆ ಪಾಕ್ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಗುರಪ್ಪನಪಾಳ್ಯ ನಿವಾಸಿಗಳಾದ ಇನಾಯತ್ ಉಲ್ಲಾ, ಸೈಯದ್ ಮುಬಾರಕ್ ಬಂಧಿತ ಆರೋಪಿಗಳು. ಜೆ.ಪಿ. ನಗರ ಮೊದಲನೇ ಹಂತದಲ್ಲಿರುವ ಮೋಖಹಾಲಿಕ್ ಪಬ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮ್ಯಾಚ್ ವೀಕ್ಷಿಸುತ್ತಿದ್ದಾಗ ಆರೋಪಿಗಳು ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದಾರೆ. ಇದಕ್ಕೆ ಅಲ್ಲಿದ್ದ ಕೆಲವರು ಆಕ್ಷೇಪಿಸಿದ್ದಾರೆ. ಆದರೂ ಅವರು ಕೂಗಾಡಿದ್ದಾರೆ. ಹೀಗಾಗಿ ಅಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಜೆ.ಪಿ ನಗರ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮದ್ಯಪಾನದ ನಶೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದೇವೆ ಎಂದು ಆರೋಪಿಗಳು ವಿಚಾರಣೆ ವೇಳೆ ಹೇಳಿದ್ದಾರೆ.
ಬೆಂಗಳೂರು: ಕನ್ನಡದ ಜನಪ್ರಿಯ ಹಿರಿಯ ನಟಿ ಲೀಲಾವತಿ ವಯೋ ಸಹಜ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಸೋಲದೇವನಹಳ್ಳಿಯಲ್ಲಿ ಇರುವ ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಲೀಲಾವತಿ ಅವರ ಚಿಕಿತ್ಸೆಯ ಅಗತ್ಯ ಕಂಡುಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು. ಲೀಲಾವತಿ ಅವರು ಆರೋಗ್ಯವಂತರಾಗಿದ್ದಾಗ ಜಮೀನು ವಿಚಾರವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಭೇಟಿಯಾಗುತ್ತಿದ್ದರು. ಈಗ ವಯೋಸಹಜವಾಗಿ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಅವರು ಒಬ್ಬ ನೈಜ ಪ್ರತಿಭೆಯ ಕಲಾವಿದೆ. ಅವರ ಮಗ ವಿನೋದ್ ರಾಜ್ ಕೂಡ ತಾಯಿಯನ್ನು ಕಾಳಜಿಯಿಂದ ಆರೈಕೆ ಮಾಡುತ್ತಿದ್ದಾರೆ. ಸರ್ಕಾರದಿಂದ ಏನೇ ಸಹಾಯದ ಅಗತ್ಯವಿದ್ದರು ಅದನ್ನು ಒದಗಿಸಲಾಗುವುದು ಎಂದು ಹೇಳಿದರು. ಇದೇ ವೇಳೆ ಪ್ರತಿಕ್ರಿಯಿಸಿದ ವಿನೋದ್ ರಾಜ್, ಸಿದ್ದರಾಮಯ್ಯ ಅವರ ತಾಯಿ ಆರೋಗ್ಯದ ಬಗ್ಗೆ ಪ್ರೀತಿಯಿಂದ ವಿಚಾರಿಸಿದ್ದಾರೆ ಎಂದು ತಿಳಿಸಿದರು. ಅಲ್ಲದೇ, ಅರಣ್ಯಾಧಿಕಾರಿಯಿಂದ ತೊಂದರೆ ವಿಚಾರವನ್ನು ಸಿಎಂ ಗಮನಕ್ಕೆ ತಂದಿದ್ದೇನೆ. ನಮ್ಮದು…
ಬೆಂಗಳೂರು: ಅತ್ತೆಯ ಕಿರುಕುಳ ತಾಳಲಾರದೆ ನವವಿವಾಹಿತ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ. ಅನುಷಾ(23) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಗದೂರು ಗ್ರಾಮದ ಅನುಷಾ, ಪಕ್ಕದ ಊರಿನ ಪ್ರವೀಣ್ ಎಂಬುವವರೊಂದಿಗೆ 2 ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಒಂದು ವರ್ಷದಿಂದ ಅನುಷಾ ಹಾಗೂ ಪ್ರವೀಣ್ ಪರಿಚಯವಾಗಿ ಪರಸ್ಪರ ಪ್ರೀತಿಸುತ್ತಿದ್ದರು. ಈಕೆ ಪಾಲಕರ ವಿರೋಧದ ನಡುವೆಯೂ 2 ತಿಂಗಳ ಹಿಂದೆ ಮನೆ ಬಿಟ್ಟು ಬಂದು ಪ್ರವೀಣ್ ಜತೆ ಮದುವೆ ಆಗಿ ಸಿಂಗಯ್ಯನಪಾಳ್ಯದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಇವರ ಜತೆಗೆ ಪ್ರವೀಣ್ ತಾಯಿ ನಾಗಮ್ಮ ಇದ್ದರು. ಅನುಷಾ ಮನೆಯಲ್ಲೇ ಇದ್ದಳು. ಆದರೆ ಅತ್ತೆಯ ಅತಿಯಾದ ಕಿರುಕುಳದಿಂದಾಗಿ ಅನುಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಅರಿಶಿಣವು ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ದೇಹದಿಂದ ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತವನ್ನು ತೆಗೆದುಹಾಕಲು ಇದು ಅತ್ಯಂತ ಪರಿಣಾಮಕಾರಿ ಮಾರ್ಗವೆಂದು ಪರಿಗಣಿಸಲಾಗಿದೆ. ಸಂಧಿವಾತದಂತಹ ದೀರ್ಘಕಾಲದ ಜಂಟಿ ನೋವನ್ನು ಕಡಿಮೆ ಮಾಡಲು ಅರಿಶಿಣವನ್ನು ಸಹ ಉಪಯುಕ್ತವೆಂದು ಪರಿಗಣಿಸಲಾಗುತ್ತದೆ. ಪ್ರತಿ ಭಾರತೀಯ ಅಡುಗೆಮನೆಯಲ್ಲಿ ನೀವು ಸುಲಭವಾಗಿ ಅರಿಶಿಣವನ್ನು ಕಾಣಬಹುದು. ಇದನ್ನು ಬಹುತೇಕ ಎಲ್ಲಾ ಆಹಾರಗಳಲ್ಲಿ ಬಳಸಲಾಗುತ್ತದೆ, ಇದರ ಹೊರತಾಗಿ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ. ಪ್ರೋಟೀನ್, ಕ್ಯಾಲ್ಸಿಯಂ, ಫೈಬರ್, ಕಬ್ಬಿಣ, ತಾಮ್ರ, ಸತು ಮುಂತಾದ ಅನೇಕ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ. ಆದರೆ ಆಹಾರದಲ್ಲಿ ಅತಿಯಾದ ಅರಿಶಿಣವನ್ನು ಬಳಸುವುದರಿಂದ ಹಲವಾರು ಅನಾನುಕೂಲತೆಗಳಿವೆ ಎಂದು ನಿಮಗೆ ತಿಳಿದಿದೆಯೇ? ಇದರ ದುಷ್ಪರಿಣಾಮಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳೋಣ: ಹೊಟ್ಟೆಯ ಸಮಸ್ಯೆಗಳು: ಅರಿಶಿಣವು ಹೊಟ್ಟೆಗೆ ತುಂಬಾ ಹಾನಿಕಾರಕವೆಂದು ಪರಿಗಣಿಸಲಾಗಿದೆ. ನಿಮ್ಮ ಆಹಾರದಲ್ಲಿ ನೀವು ಹೆಚ್ಚಿನ ಪ್ರಮಾಣದಲ್ಲಿ ಅರಿಶಿಣವನ್ನು ಬಳಸಿದರೆ, ಅದು ಹೊಟ್ಟೆ ನೋವು ಮತ್ತು ಸೆಳೆತವನ್ನು ಉಂಟು ಮಾಡಬಹುದು. ಮೂತ್ರಪಿಂಡದ…
ನವದೆಹಲಿ: ಭಾರತೀಯ ವಾಯುಪಡೆಯ ಪಿಲಾಟಸ್ ಪಿಸಿ 7 ಎಂಕೆ -2 ತರಬೇತಿ ವಿಮಾನವು ತೆಲಂಗಾಣದ ಮೇಡಕ್ ಜಿಲ್ಲೆಯ ತೂಪ್ರಾನ್ ನ ರಾವೆಲ್ಲಿ ಗ್ರಾಮದಲ್ಲಿ ಅಪಘಾತಕ್ಕೀಡಾಗಿದ್ದು, ಇಬ್ಬರು ಪೈಲಟ್ ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಮಾನವು ದುಂಡಿಗಲ್ ವಾಯುಪಡೆ ಅಕಾಡೆಮಿಯಿಂದ ಹೊರಟಿತ್ತು. ಐಎಎಫ್ ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ ನಲ್ಲಿ ಈ ಘಟನೆಯ ಬಗ್ಗೆ ಪೋಸ್ಟ್ ಮಾಡಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪೈಲಟ್ ಗಳ ಸಾವಿಗೆ ಸಂತಾಪ ಸೂಚಿಸಿದ್ದು, “ಹೈದರಾಬಾದ್ ಬಳಿ ನಡೆದ ಈ ಅಪಘಾತದಿಂದ ದುಃಖಿತನಾಗಿದ್ದೇನೆ. ಇಬ್ಬರು ಪೈಲಟ್ಗಳು ಪ್ರಾಣ ಕಳೆದುಕೊಂಡಿರುವುದು ತೀವ್ರ ದುಃಖ ತಂದಿದೆ. ಈ ದುರಂತದ ಸಮಯದಲ್ಲಿ, ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ” ಎಂದು ಟ್ವೀಟ್ ಮಾಡಿದ್ದಾರೆ. ವರದಿಗಳ ಪ್ರಕಾರ, ಕೆಲವೇ ನಿಮಿಷಗಳಲ್ಲಿ ವಿಮಾನವು ಸುಟ್ಟು ಬೂದಿಯಾಯಿತು. ಏತನ್ಮಧ್ಯೆ, ಐಎಎಫ್ ವಿಮಾನದಲ್ಲಿ ಎಷ್ಟು ಜನರು ಇದ್ದರು ಎಂದು ಸ್ಥಳೀಯರಿಗೆ ಖಚಿತವಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಧುಗಿರಿ: ತಾಲೂಕಿನ ಕಸಬಾ ಸಿದ್ದಾಪುರ ಗೇಟ್ ಬಳಿ ಇರುವ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನದ ಹುಂಡಿ ಹಣವನ್ನು ತಡರಾತ್ರಿ ಕಳ್ಳರು ದೋಚಿ ಪರಾರಿಯಾಗಿರುವ ಘಟನೆಯು ಮಧುಗಿರಿ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ. ಮಧ್ಯರಾತ್ರಿ 12:50 ಆಸು ಪಾಸು ಕಳ್ಳರು ದೇವಸ್ಥಾನದ ಬೀಗ ಮುರಿದು ಒಳ ನುಗ್ಗಿ ದೇವಸ್ಥಾನದ ಹುಂಡಿಯಲ್ಲಿದ್ದ ಸಂಪೂರ್ಣ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ದೇವಸ್ಥಾನದಲ್ಲಿ ಭವ್ಯ ಬೆಳೆಬಾಳುವ ಮೂರ್ತಿಗಳಿದ್ದು, ಕಳ್ಳರು ಕೇವಲ ಹುಂಡಿಯಲ್ಲಿದ್ದ ಹಣವನ್ನು ಮಾತ್ರ ದೋಚಿದ್ದಾರೆ. ಇಂದು ಸೇರಿ ಮೂರನೇ ಬಾರಿ ದೇವಸ್ಥಾನದಲ್ಲಿ ಕಳ್ಳತನ ಆಗಿರುವುದು, ಇದೇ ದಿನ ಗ್ರಾಮದ ನಾಲ್ಕು ಮನೆಗಳಲ್ಲಿ ಕಳ್ಳತನಕ್ಕೆ ಪ್ರಯತ್ನಿಸಿ ಕಳ್ಳರು ಮನೆಗಳ ಬಾಗಿಲು ಕಿಟಕಿಗಳನ್ನು ಹೊಡೆದಿರುವುದು ಕಂಡು ಬಂದಿದೆ ಈ ವಿಚಾರವಾಗಿ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಲು ಸಾಲಾಗಿ ಕಳ್ಳತನ ಆಗುತ್ತಿದ್ದು ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಪೊಲೀಸರು ಸೂಕ್ತ ಕ್ರಮ ವಹಿಸಿ ರಕ್ಷಣೆ ನೀಡಬೇಕೆಂದು ಗ್ರಾಮಸ್ಥರು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಿದ್ದಾಪುರ ಗ್ರಾಮದ ವಾಸಿ…
ಚಂಡಮಾರುತ ಚಂಡಮಾರುತದ ಪ್ರಭಾವದ ಅಡಿಯಲ್ಲಿ ತಮಿಳುನಾಡು ರಾಜಧಾನಿ ಮತ್ತು ನೆರೆಯ ರಾಜ್ಯದ ಹತ್ತಿರದ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಸೋಮವಾರ ಚೆನ್ನೈನಿಂದ ಮೂವತ್ತಮೂರು ವಿಮಾನಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ತಿರುಗಿಸಲಾಯಿತು. ಕೆಐಎ ನಿರ್ವಹಿಸುವ ಬೆಂಗಳೂರು ಇಂಟರ್ ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್ (ಬಿಐಎಎಲ್) ಅಧಿಕಾರಿಗಳ ಪ್ರಕಾರ, ಇಂಡಿಗೋ, ಸ್ಪೈಸ್ಜೆಟ್, ಇತಿಹಾದ್, ಲುಫ್ಥಾನ್ಸಾ ಮತ್ತು ಗಲ್ಫ್ ಏರ್ ಸೇರಿದಂತೆ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳನ್ನು ಚೆನ್ನೈನಿಂದ ನಗರಕ್ಕೆ ತಿರುಗಿಸಲಾಗಿದೆ. ಅಲ್ಲಿ ಅನೇಕ ವಿಮಾನಗಳನ್ನು ಸಹ ರದ್ದುಗೊಳಿಸಲಾಗಿದೆ. . ಹವಾಮಾನ ವೈಪರೀತ್ಯದಿಂದಾಗಿ ಚೆನ್ನೈ ವಿಮಾನ ನಿಲ್ದಾಣವನ್ನು ಸೋಮವಾರ ರಾತ್ರಿ 11 ಗಂಟೆಯವರೆಗೆ ಆಗಮನ ಮತ್ತು ನಿರ್ಗಮನ ಕಾರ್ಯಾಚರಣೆಗಾಗಿ ಮುಚ್ಚಲಾಗಿದೆ. ನಿರಂತರ ಮಳೆಯಿಂದಾಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ಹೊರಡುವ 70 ವಿಮಾನಗಳನ್ನು ರದ್ದುಗೊಳಿಸಲಾಗಿದೆ. “ಹಲವು ವಿಮಾನಗಳನ್ನು ಚೆನ್ನೈನಿಂದ ಕೆಐಎಗೆ ತಿರುಗಿಸಲಾಗಿದೆ. ಚೆನ್ನೈ ವಿಮಾನ ನಿಲ್ದಾಣವು ನಿರ್ದಿಷ್ಟ ಅವಧಿಗೆ ಆಗಮನದ ಕಾರ್ಯಾಚರಣೆಗಾಗಿ ಮುಚ್ಚಲಾಗುವುದು ಎಂದು ಘೋಷಿಸಿದೆ. ಚೆನ್ನೈ ಮಾತ್ರವಲ್ಲದೆ ತಿರುಪತಿ, ವಿಶಾಖಪಟ್ಟಣಂ ಈ ಎಲ್ಲಾ…