Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಇಂದು 60ನೇ ದಿನದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಹಳೇ ಬಟ್ಟೆ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು. ಚಾಮರಾಜನಗರದ ಚಾಮರಾಜೇಶ್ವರ ದೇವಾಲಯದಿಂದ ಚಿಂದಿ ಬಟ್ಟೆಗಳನ್ನು ಹಿಡಿದು ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದ ತನಕ ಪ್ರತಿಭಟನಾ ರ್ಯಾಲಿ ನಡೆಸಿ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು ಕಾವೇರಿ ನೀರನ್ನು ಹರಿಸುತ್ತಿರುವ ಸರ್ಕಾರ ಹಳೇ ಬಟ್ಟೆ ಸರ್ಕಾರವಾಗಿದೆ, ಅನ್ಯಾಯದ ಆದೇಶ ಕೊಡುತ್ತಿರುವ ಕಾವೇರಿ ನೀರು ನಿರ್ವಹಣಾ ಮಂಡಲಿ ಚಿಂದಿ ಸಮಿತಿಯಾಗಿದೆ ಎಂದು ಆಕ್ರೋಶ ಹೊರಹಾಕಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕ್ರಮವನ್ನು ಖಂಡಿಸಿ 60 ದಿನಗಳಿಂದ ಹೋರಾಟ ಮಾಡಿಕೊಂಡು ಬದಲಾಗುತ್ತಿದೆ, ಕಾವೇರಿ ನೀರು ಹರಿಸುವುದನ್ನು ನಿಲ್ಲಿಸುವ ತನಕ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಭಟನಾಕಾರರು ಹೆದ್ದಾರಿಯಲ್ಲಿ ಚಿಂದಿ ಬಟ್ಟೆ ಸುರಿದು ಆಕ್ರೋಶ ಹೊರಹಾಕಿದರು.…
ಬೆಂಗಳೂರು: ಫಿಟ್ನೆಸ್ ಸೆಂಟರ್ ನಲ್ಲಿ ಕಾಮುಕ ಕೋಚ್ ಒಬ್ಬ ನೀಚ ಕೆಲಸ ಮಾಡಿದ್ದಾನೆ. ವರ್ಕ್ಔಟ್ ಮುಗಿಸಿ ಮಹಿಳೆ ಸ್ನಾನ ಮಾಡುವುದನ್ನು ಕಾಮುಕ ಕೋಚ್ ವೀಡಿಯೊ ಮಾಡಿದ್ದಾನೆ. ಬಾಣಸವಾಡಿ ಎನ್ ಆರ್ ಐ ಲೇಔಟ್ ನಲ್ಲಿರುವ ಫಿಟ್ನೆಸ್ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ. ಬಾಣಸವಾಡಿ ಪೊಲೀಸರು ಜಿಮ್ ಕೋಚ್ ಸಿಬಿಯಾಚನ್ ಎಂಬಾತನನ್ನು ಬಂಧಿಸಿದ್ದಾರೆ. ಮಹಿಳಾ ಟೆಕ್ಕಿಯೊಬ್ಬರು ವರ್ಕ್ ಔಟ್ ಮುಗಿಸಿ ಸ್ನಾನ ಮಾಡಲು ಬಾತ್ ರೂಂಗೆ ತೆರಳಿದ್ದರು. ಈ ವೇಳೆ ಸಿಬಿಯಾಚನ್ ನ ಕಿಟಕಿಯ ಮೂಲಕ ಮೊಬೈಲ್ ಹಿಡಿದು ರೆಕಾರ್ಡಿಂಗ್ ಮಾಡುತ್ತಿದ್ದ. ಈ ವೇಳೆ ಟೆಕ್ಕಿಗೆ ಸಣ್ಣದೊಂದು ಅನುಮಾನ ಬಂದಿದೆ. ಕೂಡಲೇ ಹೊರಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ಆದರೂ ಯಾರೋ ಲೇಡಿಸ್ ಟಾಯ್ಲೆಟ್ ಬಳಿ ಬಂದು ಹೋಗಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿ ಜಿಮ್ ಮ್ಯಾನೇಜರ್ಗೆ ದೂರು ನೀಡಿದ್ದಾರೆ. ಈ ವೇಳೆ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದಾಗ ಆರೋಪಿ ಕೃತ್ಯ ಬೆಳಕಿಗೆ ಬಂದಿದೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನ ಕಥೋಹಾಲನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ಫ್ರಂಟ್ನೊಂದಿಗೆ ಸಂಪರ್ಕ ಹೊಂದಿದ್ದ ಭಯೋತ್ಪಾದಕನೊಬ್ಬ ಸಾವನ್ನಪ್ಪಿದ್ದಾನೆ. ಹತ್ಯೆಗೀಡಾದ ಭಯೋತ್ಪಾದಕನನ್ನು ಮೈಸರ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ. ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ ನೊಂದಿಗೆ ಸಂಬಂಧ ಹೊಂದಿದ್ದನು ಎಂದು ಕಾಶ್ಮೀರ ವಲಯ ಪೊಲೀಸರನ್ನು ಉಲ್ಲೇಖಿಸಿ ವರದಿ ಮಾಡಿದೆ. ಹತ್ಯೆಯಾದ ಭಯೋತ್ಪಾದಕನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ಇನ್ನಿತರ ಭಯೋತ್ಪಾದನೆ ನಡೆಸಲು ಸಂಚು ರೂಪಿಸಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂಬ ಮಾಹಿತಿಯನ್ನು ಅಧಿಕಾರಿ ನೀಡಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಕಥೋಹಲನ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ನೀಡಿದ ನಂತರ ಭದ್ರತಾ ಪಡೆಗಳ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಮೊದಲು ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದರು, ಬಳಿಕ ನಡೆದ ಪ್ರತಿದಾಳಿಯಲ್ಲಿ ಓರ್ವ ಉಗ್ರನನ್ನು ಸದೆಬಡಿಯಲಾಗಿದೆ.
ನವದೆಹಲಿ: ಈ ದೀಪಾವಳಿಯಲ್ಲಿ ಸ್ಥಳೀಯವಾಗಿ ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ನಂತರ ಆ ಉತ್ಪನ್ನ ಅಥವಾ ಅದರ ತಯಾರಕರೊಂದಿಗೆ ಸೆಲ್ಫಿಯನ್ನು ಕ್ಲಿಕ್ಕಿಸಿ, ನಮೋ ಆಯಪ್ ನಲ್ಲಿ ಪೋಸ್ಟ್ ಮಾಡಿ ಎಂದು ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಈ ಸಂದೇಶವನ್ನು ಪ್ರಧಾನಿ ಪ್ರಕಟಿಸಿದ್ದಾರೆ. ಈ ದೀಪಾವಳಿಯಲ್ಲಿ ನಮೋ ಅಪ್ಲಿಕೇಷನ್ ನಲ್ಲಿ #VocalForLocal ಥ್ರೆಡ್ ಗಳೊಂದಿಗೆ ನಿಮ್ಮ ಸೆಲ್ಫಿಯನ್ನು ಪೋಸ್ಟ್ ಮಾಡಿ. ಭಾರತದ ಉದ್ಯಮಶೀಲತೆ ಮತ್ತು ಸೃಜನಶೀಲ ಮನೋಭಾವ ಹಬ್ಬದ ಸಂದರ್ಭದಲ್ಲಿ ಎತ್ತಿ ಹಿಡಿಯೋಣ ಎಂದು ಮೋದಿ ಹೇಳಿದ್ದಾರೆ. ಈ ಅಭಿಯಾನ ಗಟ್ಟಿಗೊಳಿಸಲು, ಸಕಾರಾತ್ಮಕ ಮನೋಭಾವವನ್ನು ಹರಡಲು ನಿಮ್ಮ ಸ್ನೇಹಿತರು ಮತ್ತು ಕುಟುಂಬವನ್ನು ಆಹ್ವಾನಿಸಿ ಎಂದೂ ಕರೆ ನೀಡಿದ್ದಾರೆ. ಸ್ಥಳೀಯ ಪ್ರತಿಭೆಗಳನ್ನು ಬೆಂಬಲಿಸಲು ಡಿಜಿಟಲ್ ಮಾಧ್ಯಮದ ಶಕ್ತಿಯನ್ನು ಬಳಸೋಣ. ನಮ್ಮ ಜತೆಗಿನ ಭಾರತೀಯರ ಸೃಜನಶೀಲತೆಯನ್ನು ಪ್ರೋತ್ಸಾಹಿಸೋಣ ಮತ್ತು ನಮ್ಮ ಸಂಪ್ರದಾಯಗಳನ್ನು ಪ್ರವರ್ಧಮಾನಕ್ಕೆ ತರೋಣ ಎಂದು ಅವರು ಸಲಹೆ ನೀಡಿದ್ದಾರೆ. ಅಕ್ಟೋಬರ್ನ ಮನ್ ಕಿ ಬಾತ್ ಕಾರ್ಯಕ್ರಮದಲ್ಲೂ…
ಇಂದಿನ ದಿನಮಾನಗಳಲ್ಲಿ ಮಹಿಳೆಯರ ಶೋಷಣೆ, ಹಲ್ಲೆಯಂತಹ ಹಲವಾರು ಘಟನೆಗಳು ಜರುಗುತ್ತಲೇ ಇವೆ. ಸದ್ಯ, ಸಹ ಪ್ರಯಾಣಿಕನೊಬ್ಬ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಪ್ರಾಂಕ್ ಫರ್ಟ್ ನಿಂದ ಆಂಧ್ರಪ್ರದೇಶದ ತಿರುಪತಿ ಮೂಲದ ಮಹಿಳೆ ಲುಪ್ತಾನ್ನ ಏರ್ಲೈನ್ಸ್ ನ LH 0754 ವಿಮಾನ ಮೂಲಕ ಬೆಂಗಳೂರಿಗೆ ಬರುತ್ತಿದ್ದರು. ರಂಗನಾಥ(50) ಎಂಬುವನೇ ಕೃತ್ಯ ಎಸಗಿದ ಆರೋಪಿಯಾಗಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು: ಲೋಕಾಯುಕ್ತ ದಾಳಿಯಲ್ಲಿ ಅಧಿಕಾರಿ ಹಾಗೂ ಚಾಲಕನ ಬಂಧನವಾಗಿದೆ. ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿಯಲ್ಲಿ ಚೆಕ್ ನಲ್ಲಿ 3.5 ಲಕ್ಷ ರೂ. ಲಂಚ ಪಡೆಯುತ್ತಿದ್ದ ವಸಂತ್ ದಾಸನಪುರದ ಕಂದಾಯ ನಿರೀಕ್ಷಕ ಮತ್ತು ಖಾಸಗಿ ಚಾಲಕ ಬಂಧನಕ್ಕೊಳಗಾಗಿದ್ದಾರೆ. ಬುಧವಾರ ಖಾಸಗಿ ಹೋಟೆಲ್ ನಲ್ಲಿ 3.5 ಲಕ್ಷ ರೂ. ಪಡೆಯುತ್ತಿದ್ದ ವೇಳೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಖಾತೆ ಪೋಡಿ ಮಾಡಿ ಕೊಡಲು 28 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಎಂದು ತಿಳಿದು ಬಂದಿದೆ. ವಿಚಾರಣೆ ವೇಳೆ ಹಣವನ್ನು ಮನೆಯಲ್ಲಿ ಇಟ್ಟಿರುವುದಾಗಿ ವಸಂತ್ ಹೇಳಿದ್ದಾನೆ. ಲೋಕಾಯುಕ್ತ ಅಧಿಕಾರಿಗಳು ಆರ್ ಐ ಮನೆಯಲ್ಲಿ ಶೋಧ ನಡೆಸಿದ ವೇಳೆ 9 ಲಕ್ಷ ರೂ. ಹಣ ಪತ್ತೆಯಾಗಿದೆ. ಆ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು: ಬಿಜೆಪಿಯವರಿಗೆ ಈ ದೇಶದ ಇತಿಹಾಸವೇ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಈ ದೇಶದ ಇತಿಹಾಸವನ್ನು ಗೌರವಿಸಿ, ಕಾಪಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಅರಮನೆ ಮೈದಾನದಲ್ಲಿ ಗುರುವಾರ ನಡೆದ ಭಾರತ ಸೇವಾದಳದ ಶತಮಾನೋತ್ಸವ ಸಂಭ್ರಮದಲ್ಲಿ ಮಾತನಾಡಿದ ಅವರು, “ಈ ದೇಶದ ಇತಿಹಾಸ ಗೊತ್ತಿಲ್ಲದವರು ಈಗ ಭಾರತ ಎಂದು ಹೆಸರು ಬದಲಾಯಿಸಲು ಹೊರಟಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬರುವ ಮುಂಚಿತವಾಗಿಯೇ, ಪಕ್ಷದ ಸಂಸ್ಥೆಗೆ ʼಭಾರತʼ ಸೇವಾದಳ ಎಂದು ಹೆಸರಿಟ್ಟವರು ನಾವು ಎಂದು ಅಭಿಮಾನ ವ್ಯಕ್ತಪಡಿಸಿದರು. ಸೇವಾದಳದವರು ಹೋರಾಟದ ಹಾದಿಯಲ್ಲಿ ಹೆಚ್ಚು ತೊಡಗಿಸಿಕೊಂಡು, ಮುನ್ನುಗ್ಗಬೇಕು. ಹೋರಾಟದ ಹಾದಿಯಲ್ಲಿ ಬಂದವರು ಎಂದಿಗೂ ಮಾರಾಟವಾಗುವುದಿಲ್ಲ. ಕಾಂಗ್ರೆಸ್ ಪಕ್ಷದ ಅಡಿಪಾಯವೇ ಸೇವಾದಳ ಎಂದು ಹೇಳಿದರು. ನಂಬಿಕೆ ಇಲ್ಲದ ಕಡೆ ವಾದ ಮಾಡಲು, ಇಷ್ಟ ಇಲ್ಲದ ಕಡೆ ತಲೆ ತಗ್ಗಿಸಲು, ಬೆಲೆ ಇಲ್ಲದ ಕಡೆ ಪ್ರೀತಿ ಬಯಸಲು ಹೋಗಬೇಡಿ. ಕಾಯಕ ನಿರತರಾಗಿ ಸಂಸ್ಥೆಯ ಏಳಿಗೆಗೆ ದುಡಿಯಿರಿ, ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಸದಾ ಮುಖ್ಯ ಎಂದು ಸಲಹೆ…
ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ“ಕಟ್ಟಡ ಮತ್ತು ಇತರೆ ನಿಮಾಣ ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಧನಸಹಾಯ ಬಿಡುಗಡೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ 9,60,000 ಮಕ್ಕಳಿಗೆ ಶೈಕ್ಷಣಿಕ ಧನಸಹಾಯ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಎಸ್. ಹೊರಟ್ಟಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ, ಕಾರ್ಮಿಕ ಇಲಾಖೆ ಸಚಿವ ಸಂತೋಪ್ ಎಸ್. ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ಶ್ರೀನಿವಾಸ್, ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಮೊಹರಮ್ ಮೊಹಿಸಿನ್, ಆಯುಕ್ತ ಡಾ. ಎಚ್.ಎನ್. ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಭಾರತಿ.ಡಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
ರಾಜಸ್ಥಾನ: ರೈಲ್ವೇ ಹಳಿಯಲ್ಲಿ ಪಟಾಕಿ ಸಿಡಿಸಿದ ಯೂಟ್ಯೂಬರ್ ಗಾಗಿ ರೈಲ್ವೆ ರಕ್ಷಣಾ ಪಡೆ ಹುಡುಕಾಟ ನಡೆಸುತ್ತಿದೆ ರಾಜಸ್ಥಾನದ ಫುಲೇರಾ-ಅಜ್ಮೀರ್ ಪ್ರದೇಶದ ದಂತ್ರಾ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಯೂಟ್ಯೂಬರ್ನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಆರ್ಪಿಎಫ್ ಈ ವಿಷಯವನ್ನು ಗಮನಿಸಿ ದೃಶ್ಯದಲ್ಲಿರುವ ವ್ಯಕ್ತಿಯನ್ನು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಿತು. ಮಾರ್ಗ ಮಧ್ಯೆ ಪಟಾಕಿ ಸಿಡಿಸಲಾಯಿತು. ಆಗ ಭಾರೀ ಹೊಗೆ ಕಾಣಿಸಿಕೊಂಡಿದೆ. ಬೂದಿ ಹಾವಿನ ಆಕಾರದಲ್ಲಿತ್ತು. ಯೂಟ್ಯೂಬರ್ ವಿರುದ್ಧ ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರೈಲ್ವೇ ಸಂರಕ್ಷಣಾ ಪಡೆಯ ವಾಯುವ್ಯ ವಿಭಾಗಕ್ಕೆ ಕರೆಗಳನ್ನು ಮಾಡಲಾಗಿತ್ತು. ಇದರೊಂದಿಗೆ ಆ ವಿಡಿಯೋದಲ್ಲಿರುವ ಯುವಕನ ಗುರುತು ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ರೈಲ್ವೆ ಕಾಯಿದೆಯ ಸೆಕ್ಷನ್ 145, 147 ರೈಲ್ವೆ ಹಳಿಗಳು ಮತ್ತು ಪ್ಲಾಟ್ ಫಾರ್ಮ್ಗಳಲ್ಲಿ ವೀಡಿಯೊ ಚಿತ್ರೀಕರಣವನ್ನು ಕಟ್ಟುನಿಟ್ಟಾಗಿ ನಿಷೇಧಿಸುತ್ತದೆ. ಈ ನಿಯಮವನ್ನು ಉಲ್ಲಂಘಿಸಿದರೆ ರೂ 1000 ದಂಡ ಅಥವಾ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ.
ದೆಹಲಿಯಲ್ಲಿ ಶಾಲೆಗಳಿಗೆ ಆರಂಭಿಕ ಚಳಿಗಾಲದ ರಜೆ. ನವೆಂಬರ್ 9 ರಿಂದ 19 ರವರೆಗೆ ಶಾಲೆಗಳಿಗೆ ರಜೆ ಘೋಷಿಸಲು ದೆಹಲಿ ಸರ್ಕಾರ ಸೂಚನೆ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ ತೀವ್ರ ವಾಯು ಮಾಲಿನ್ಯದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಿರ್ಬಂಧ ಹೇರಿದ್ದರೂ ಗಾಳಿಯ ಗುಣಮಟ್ಟ ಸುಧಾರಣೆಯಾಗದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಾಲಿನ್ಯದ ಹಿನ್ನೆಲೆಯಲ್ಲಿ ಶಾಲೆಗಳಿಗೆ ಇದೇ ತಿಂಗಳ 10ರವರೆಗೆ ರಜೆ ಘೋಷಿಸಲಾಗಿತ್ತು. ಇದು ವಿಸ್ತರಣೆಯಾಗಿದೆ. ಉಳಿದ ಭಾಗದ ಚಳಿಗಾಲದ ರಜೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ. ಇದೇ ವೇಳೆ ಬೇರೆ ರಾಜ್ಯಗಳಿಂದ ದೆಹಲಿಗೆ ಬರುವ ಆಪ್ ಆಧಾರಿತ ಕ್ಯಾಬ್ ಗಳ ಮೇಲೆ ನಿಷೇಧ ಹೇರಲಾಗಿದೆ. ಅಂದರೆ ನೋಯ್ಡಾ ಅಥವಾ ಗುರುಗ್ರಾಮದಿಂದ ಓಲಾ-ಉಬರ್ ಮೂಲಕ ದೆಹಲಿಗೆ ಬರಲು ಸಾಧ್ಯವಿಲ್ಲ. ಸದ್ಯ ದೆಹಲಿಯಲ್ಲಿ ಸೇವೆ ಮುಂದುವರಿದಿದೆ.