Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ದಿಲ್ಲಿ ಹೈಕಮಾಂಡ್ ಭೇಟಿಯ ಹಿನ್ನೆಲೆಯಲ್ಲಿ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಸದ್ಯದಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳು ಕುರಿತು ಮಾತುಕತೆ ನಡೆಸಿದ್ದಾರೆ. ಈ ಬೆಳವಣಿಗೆಯಿಂದ ಬೆಳಗಾವಿ ರಾಜಕಾರಣದಲ್ಲಿ ಕೆಲವೊಂದು ಬದಲಾವಣೆಗಳು ಆಗುವುದು ನಿಶ್ಚಿತ ಬೆಳಗಾವಿ ಸೂಪರ್ ಪವರ್ ಆಗಿರುವ ಸಚಿವ ಸತೀಶ್ ಜಾರಕಿಹೊಳಿ ರಾಜಕೀಯ ಚದುರಂಗದ ಆಟದಲ್ಲಿ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ತಮ್ಮ ಆಪ್ತ ವಲಯದಲ್ಲಿ ಇರುವ ನಾಯಕರಗಳಿಗೆ ಪಕ್ಷದಲ್ಲಿ ಉನ್ನತ ಹುದ್ದೆಗಳನ್ನು ನೀಡಿ ಪಕ್ಷದಲ್ಲಿ ತನ್ನ ಬಲ ಮತ್ತು ಹಿಡಿತವನ್ನು ಸಾಧಿಸಲು ಮುಂದಾಗಿದ್ದಾರೆ. ಅದರ ಮೊದಲನೇ ಹೆಜ್ಜೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಖಾನಾಪುರ್ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಇದರಿಂದಾಗಿ ಒಂದೇ ಕಲ್ಲಿಂದ ಎರಡು ಹಣ್ಣುಗಳನ್ನು ಬೀಳಿಸಲು ಸಚಿವರು ಯೋಜನೆಯ ರೂಪಿಸಿದಂತಾಗಿದೆ ಎಂದು ಸ್ಪಷ್ಟವಾಗಿದೆ ಮುಂದೆ ಬರುವ ದಿನಗಳಲ್ಲಿ ಬದಲಾವಣೆಯ ಪರ್ವ ಪ್ರಾರಂಭವಾಗಲಿದೆ.
ತುಮಕೂರು: ಜಾನುವಾರುಗಳಿಗೆ ಮೇವುಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಈ ವಾರ ಜಿಲ್ಲೆಯ ರೈತರಿಗೆ ಮೇವು ಬೀಜಗಳನ್ನು ವಿತರಿಸಲು ಸೂಚಿಸಲಾಗಿದ್ದು ,ಜಿಲ್ಲೆಯಿಂದ ಬೇರೆ ಸ್ಥಳಗಳಿಗೆ ಮೇವು ಮಾರಾಟ ಮಾಡುವದನ್ನು ನಿಷೇಧಿಸಲಾಗವುದು, ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ರವರು ಹೇಳಿದರು. ಮಧುಗಿರಿ ತಾಲೂಕಿನ ನಿರೀಕ್ಷಣಾ ಮಂದಿರದ ಸಭಾಂಗಣದಲ್ಲಿ ನಡೆದ ‘ಬರ ಪರಿಸ್ಥಿತಿ ಹಾಗೂ ಕಂದಾಯ ವಿಷಯಗಳ ಕುರಿತ ಪತ್ರಿಕಾಗೋಷ್ಠಿಯ ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನೀರಿರುವ ಕೆರೆಗಳ ಸದ್ಬಳಕೆ ಮಾಡಿಕೊಂಡು, ಪಶುಗಳಿಗಾಗಿ ಮೇವುಗಳನ್ನು ಬೆಳೆಸಿ , ಮುಂದಿನ ಬೇಸಿಗೆಯಲ್ಲಿ ಪಶುಗಳಿಗೆ ಮೇವು ಕೊರತೆಯಾಗದಂತೆ ವಿವಿಧ ಹಂತಗಳಲ್ಲಿ ಮೇವು ಸಂಗ್ರಹಿಸಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ, ಜಿಲ್ಲೆಯಲ್ಲಿ ಸಮರ್ಪಕ ಕುಡಿಯುವ ನೀರು ಸರಬರಾಜುಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿಲ್ಲ . ರಾಜ್ಯದ 223 ತಾಲೂಕಗಳನ್ನು ಬರ ಪೀಡಿತ ತಾಲೂಕುಗಳನ್ನಾಗಿ ಘೋಷಿಸಲಾಗಿದೆ, ಇಡೀ ರಾಜ್ಯ ಬರ ಪೀಡಿತವಾಗಿದೆ, ಬೆಳೆ ನಷ್ಟ, ಜಾನುವಾರು ನಷ್ಟ ಸೇರಿದಂತೆ ಒಟ್ಟು 37 ಸಾವಿರ ಕೋಟಿ ನಷ್ಟವಾಗಿದ್ದರೂ, ಕೇಂದ್ರ ಸರ್ಕಾರ ದಿಂದ 17…
ಬೆಂಗಳೂರು: ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಚಿತ್ರದುರ್ಗ ಮುರುಘಾ ರಾಜೇಂದ್ರ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಜಾಮೀನು ನೀಡಿದೆ. ಪ್ರಕರಣದ ವಿಚಾರಣೆ ಮುಗಿಯುವರೆಗೆ ಚಿತ್ರದುರ್ಗ ಜಿಲ್ಲೆಯ ಪ್ರವೇಶ ಮಾಡಬಾರದು. ಎರಡು ಲಕ್ಷ ರು. ವೈಯಕ್ತಿ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ಸಾಕ್ಷಿಗಳನ್ನು ಸಂಪರ್ಕಿಸಬಾರದು ಹಾಗೂ ಅವರನ್ನು ಬೆದರಿಸಬಾರದು. ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು. ಜಾಮೀನು ಮಂಜೂರಾತಿ ಆದೇಶವನ್ನು ದುರ್ಬಳಕೆ ಮಾಡಿಕೊಳ್ಳಬಾರದು. ನ್ಯಾಯಾಲಯದ ವಿಧಿಸಿದ ಯಾವುದೇ ಷರತ್ತು ಉಲ್ಲಂಘಿಸಿದರೆ, ಜಾಮೀನು ತನ್ನಿಂದ ತಾನೇ ರದ್ದಾಗಲಿದೆ ಎಂದು ಕೋರ್ಟ್ ಆದೇಶಿಸಿದೆ. ಸ್ವಾಮೀಜಿ ವಿರುದ್ಧ ಇನ್ನೊಂದು ಪ್ರಕರಣ ಬಾಕಿ ಇರುವ ಕಾರಣ ಸದ್ಯಕ್ಕೆ ಬಿಡುಗಡೆ ಇಲ್ಲ ಎಂದು ಹೇಳಿದೆ.
ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟಿ ಮೇಘಾ ಶೆಟ್ಟಿ ಈಗ ‘ಚೀತಾ’ ಚಿತ್ರತಂಡ ಸೇರಿಕೊಂಡಿದ್ದಾರೆ. ನಟ ಪ್ರಜ್ವಲ್ ದೇವರಾಜ್ ಸದ್ಯ ನೃತ್ಯ ಸಂಯೋಜಕ-ನಿರ್ದೇಶಕ ರಾಜಾ ಕಲೈ ಕುಮಾರ್ ಅವರ ಚೊಚ್ಚಲ ಸಿನಿಮಾ ‘ಚೀತಾ’ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರವು ಈ ವಾರವಷ್ಟೇ ಸೆಟ್ಟೇರಿದೆ. ಜೊತೆ ಜೊತೆಯಲಿ ಧಾರಾವಾಹಿ ಮೂಲಕ ಮನೆ ಮಾತಾದ ಮೇಘಾ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಟ್ರಿಬಲ್ ರೈಡಿಂಗ್’ ಮೂಲಕ ತಮ್ಮ ಸಿನಿ ಜರ್ನಿಯನ್ನು ಪ್ರಾರಂಭಿಸಿದರು. ನಂತರ ದಿಲ್ ಪಸಂದ್ ಚಿತ್ರದಲ್ಲೂ ಕಾಣಿಸಿಕೊಂಡರು. ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಅಡಿ ಪ್ರತಿಭಾ ನರೇಶ್ ನಿರ್ಮಿಸಿದ ಈ ಚಿತ್ರದಲ್ಲಿ ನಟ ವಿನಯ್ ರಾಜ್ಕುಮಾರ್ ಮತ್ತು ಯೋಗಿ ಸಹ ನಟಿಸಿದ್ದಾರೆ. ತೆಲುಗು ನಟ ಸುನೀಲ್ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರೊಂದಿಗೆ ನಟಿ ಶ್ರುತಿ ಹರಿಹರನ್ ಕೂಡ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಬೆಂಗಳೂರು: ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಯಾವ ಸಮಸ್ಯೆಯೂ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ರಾಜಕೀಯ ಸಮಸ್ಯೆಗಳು ಮುಗಿಯಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ ಎಂದು ಮಾಧ್ಯಮದವರು ಕೇಳಿದಾಗ, ಸತೀಶ್ ಜಾರಕಿಹೊಳಿ ಅವರು ಹಾಗೆ ಹೇಳೋಕೆ ಸಾದ್ಯವೇ ಇಲ್ಲ. ಕಥೆಯೇ ಇಲ್ಲ ಮುಗಿಯೋದು ಏನಿದೆ? ಎಂದು ಪ್ರಶ್ನಿಸಿದರು. ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ನಾನು ಗಮನಿಸಲ್ಲ. ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯವಾಗಿ ಯಾವುದೇ ಸಮಸ್ಯೆಯೂ ಇಲ್ಲ. ನನ್ನ ಜೊತೆಯೂ ಯಾವ ಸಮಸ್ಯೆ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು.
ಬಾಗಲಕೋಟೆ: ಖಾಸಗಿ ಸುದ್ದಿ ವಾಹಿನಿಯ ವರದಿಗಾರನೊಬ್ಬ ಅಶ್ಲೀಲ ವಿಡಿಯೋ ತಯಾರಿಸಿ ಬಿಜೆಪಿ ಕಾರ್ಯಕರ್ತೆಗೆ ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಪ್ರಕರಣ ಸಂಬಂಧ ಜಮಖಂಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂದೆನವಾಜ್ ಸರಕಾವಸ್ ಎಂಬುವವನು ಕೃತ್ಯ ಎಸಗಿದ್ದಾನೆ. ಖಾಸಗಿ ಸುದ್ದಿ ವಾಹನಿ ವರದಿಗಾರ ಎಂದು ಹೇಳಿಕೊಂಡು ತಿರುಗಾಡುವ ಬಂದೆನವಾಜ್ ಸರಕಾವಸ್ ಜಮಖಂಡಿ ಬಿಜೆಪಿ ನಗರಮಂಡಳ ಅಧ್ಯಕ್ಷೆ, ಖಾಸಗಿ ಶಾಲಾ ಶಿಕ್ಷಕಿ ಗೀತಾ ಸೂರ್ಯವಂಶಿ ಅವರ ಅಶ್ಲೀಲ ವೀಡಿಯೊ ತಯಾರಿಸಿದ್ದಾನೆ. ಗೀತಾ ಸೂರ್ಯವಂಶಿ ಅವರ ಭಾವಚಿತ್ರದ ಕಣ್ಣಿಗೆ ಕಪ್ಪು ಪಟ್ಟಿ ಅಂಟಿಸಿದ್ದಾನೆ. ಬಳಿಕ ಅವರದ್ದೇ ಅಶ್ಲೀಲ ವಿಡಿಯೋ ಎಂಬಂತೆ ಬಿಂಬಿಸಲು ಯಾವುದೋ ಪೋರ್ನ್ ದೃಶ್ಯವನ್ನು ಎಡಿಟ್ ಮಾಡಿ ವಿಡಿಯೋ ತಯಾರಿಸಿದ್ದಾನೆ. ಅದಕ್ಕೆ ಬಿಜೆಪಿ ಕಾರ್ಯಕರ್ತೆಯ ರಾಸಲೀಲೆ ಎಂದು ಬರಹ ಹಾಕಿದ್ದು, ಎಮ್ಮೊ ಎಮ್ಮೊ ನೋಡ್ದೆ ನೋಡ್ದೆ ಹಾಡು ಅಳವಡಿಸಿದ್ದಾನೆ. ಈ ಸಂಬಂಧ ಗೀತಾ ಸೂರ್ಯವಂಶಿ ಅವರು ಜಮಖಂಡಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮುಂಬೈ: ಸೇತುವೆ ಮೇಲಿನಿಂದ ಉರುಳಿದ ಕಾರು ಚಲಿಸುತ್ತಿದ್ದ ರೈಲಿನ ಮೇಲೆ ಬಿದ್ದ ಪರಿಣಾಮ ಸ್ಥಳೀಯ ಆರ್ ಪಿಐ ಕಾರ್ಯಕರ್ತ ಸೇರಿದಂತೆ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮೃತರನ್ನು ಧರ್ಮಾನಂದ ಗಾಯಕ್ವಾಡ್ (41) ಮತ್ತು ಅವರ ಸಂಬಂಧಿಕರಾದ ಮಂಗೇಶ್ ಜಾಧವ್ (46) ಮತ್ತು ನಿತೀನ್ ಜಾಧವ್ (48) ಎಂದು ಗುರುತಿಸಲಾಗಿದೆ. ಗಾಯಕ್ವಾಡ್ ಅವರು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಳೆ ಗುಂಪು) ಕಾರ್ಯಕರ್ತರಾಗಿದ್ದರು ಎಂದು ತಿಳಿದುಬಂದಿದೆ. ಮಂಗಳವಾರ ಮುಂಜಾನೆ 3:30 ರಿಂದ 4 ಗಂಟೆಯ ವೇಳೆಗೆ ಕಿನವಲಿ ಬಳಿಯ ಸೇತುವೆಯ ಮೇಲೆ ಕಾರು ಮುಂಬೈ-ಪನ್ವೇಲ್ ರಸ್ತೆಯಲ್ಲಿ ನೇರಲ್ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪನ್ವೇಲ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸರಕು ಸಾಗಣೆ ರೈಲು ರಾಯಗಢ ಜಿಲ್ಲೆಯ ಪನ್ವೇಲ್ ನಿಂದ ಕರ್ಜತ್ ಗೆ ತೆರಳುತ್ತಿತ್ತು. ಘಟನೆಯಿಂದಾಗಿ ಅದರ ಕೆಲವು ವ್ಯಾಗನ್ ಗಳು ಬೇರ್ಪಟ್ಟಿವೆ ಎಂದು ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಶಿವರಾಜ್ ಮನಸ್ ಪುರೆ…
ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಯಿಂದ ಮತ್ತೋರ್ವ ರೈತ ಪ್ರಾಣ ಕಳೆದುಕೊಂಡಿದ್ದಾನೆ. ರೈತ ಬಾಲಾಜಿ ನಾಯಕ್ (42) ಹುಲಿ ದಾಳಿಗೆ ಬಲಿಯಾಗಿದ್ದು ಹುಲಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಬಿ.ಮಟಕೆರೆ-ಹೊಸಕೋಟೆ ರಸ್ತೆಯಲ್ಲಿ ನಿನ್ನೆ ದನ ಮೇಯಿಸುವಾಗ ಹುಲಿ ದನಗಳ ಮೇಲೆ ದಾಳಿ ಮಾಡಿತ್ತು. ಆಗ ದನಗಳು ಹುಲಿಗೆ ಸಿಗದೆ ಚೆಲ್ಲಾ ಪಿಲ್ಲಿಯಾಗಿ ಓಡಿದವು. ದನಗಳು ಸಿಗದ ಹಿನ್ನೆಲೆ ಬಾಲಾಜಿ ಮೇಲೆ ಹುಲಿ ದಾಳಿ ನಡೆಸಿತ್ತು. ಬಳಿಕ ಮೃತದೇಹ ಕಾಡಿಗೆ ಎಳೆದುಕೊಂಡು ಹೋಗಿತ್ತು. ಇದನ್ನು ಗಮನಿಸಿದ ಅಕ್ಕ ಪಕ್ಕದ ಜಮೀನಿನವರು ಕೂಗಾಡಿದ್ದು ಶಬ್ದ ಕೇಳಿ ಮೃತದೇಹ ಬಿಟ್ಟು ಹುಲಿ ಓಡಿ ಹೋಗಿತ್ತು. ಹುಲಿಯು ರೈತನ ಒಂದು ಕಾಲು, ದೇಹದ ಕೆಲ ಭಾಗ ತಿಂದು ಹಾಕಿದೆ. ಮತ್ತೆ ಅದೇ ಸ್ಥಳಕ್ಕೆ ಹುಲಿ ಬರುವ ಸಾಧ್ಯತೆ ಹಿನ್ನೆಲೆ ಅರಣ್ಯ ಇಲಾಖೆ ಅಲರ್ಟ್ ಆಗಿದೆ. ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದೆ.
ರಾಜಸ್ಥಾನದ ನಾಗೌರ್ನಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಯಾಣಿಸುತ್ತಿದ್ದ ರಥಕ್ಕೆ ವಿದ್ಯುತ್ ತಂತಿ ತಗುಲಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ರಾಜಸ್ಥಾನದ ನಾಗೌರ್ ನಲ್ಲಿ ಅಮಿತ್ ಶಾ ಅವರು ಪ್ರಯಾಣಿಸುತ್ತಿದ್ದ ರಥವೊಂದು ವಿದ್ಯುತ್ ತಂತಿಗೆ ತಗುಲಿತು. ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಅಮಿತ್ ಶಾ ಅವರು ಬಿದಿಯಾದ್ ಗ್ರಾಮದಿಂದ ಪರ್ಬತ್ ಸರ್ಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಪರ್ಬತ್ ಸರ್ ನಲ್ಲಿ ಎರಡೂ ಬದಿಗಳಲ್ಲಿ ಅಂಗಡಿಗಳು ಮತ್ತು ಮನೆಗಳಿರುವ ಲೇನ್ ಮೂಲಕ ಹಾದು ಹೋಗುವಾಗ, ವಿಶೇಷವಾಗಿ ವಿನ್ಯಾಸಗೊಳಿಸಲಾದ ಅವರ ವಾಹನದ (ರಥ) ಮೇಲಿನ ಭಾಗವು ವಿದ್ಯುತ್ ಲೈನ್ ಗೆ ಸ್ಪರ್ಶಿಸಲ್ಪಟ್ಟಿತು. ಕೂಡಲೇ ಸ್ಪಾರ್ಕ್ ಉಂಟಾಗಿ ಕಿಡಿ ಹುಟ್ಟಿಕೊಂಡಿತು. ಷಾ ಅವರ ‘ರಥ’ದ ಹಿಂದೆ ಇದ್ದ ಇತರ ವಾಹನಗಳನ್ನು ತಕ್ಷಣವೇ ನಿಲ್ಲಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು. ತಕ್ಷಣ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ವಾಹನ ನಿಲ್ಲಿಸಿ ಸಂಭವಿಸಲಿದ್ದ ಅನಾಹುತವನ್ನು ತಪ್ಪಿಸಿದ್ದಾರೆ. ಘಟನೆಯ ನಂತರ ಕೇಂದ್ರ ಗೃಹ ಸಚಿವರು ರೋಡ್…
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಅಪರಿಚತ ವ್ಯಕ್ತಿಗಳು ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಸೇರಿ 10 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಅಪರಿಚತ ವ್ಯಕ್ತಿಗಳು ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಸೇರಿ 10 ಮಂದಿ ಗಾಯಗೊಂಡಿದ್ದಾರೆ. ಇಂಫಾಲ್ ಪಶ್ಚಿಮ ಜಿಲ್ಲೆಯ ಸಿಂಗ್ಡಾ ಮತ್ತು ಕಾಂಗ್ಚುಪ್ ನಡುವಿನ ಹಳ್ಳಿಯಲ್ಲಿ ಗುಂಡು ಹಾರಿಸಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಗಾಯಗೊಂಡವರಲ್ಲಿ ಏಳು ಮಂದಿಯನ್ನು ಲ್ಯಾಂಫೆಲ್ನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಮೂವರು ಇಂಫಾಲ್ನ ರಾಜ್ ಮೆಡಿಸಿಟಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.