Subscribe to Updates
Get the latest creative news from FooBar about art, design and business.
- ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು
- ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ
- ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ
- ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ
- ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ 14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!
- ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ವಾಜಪೇಯಿ ಅವರ 101ನೇ ಜಯಂತಿ: ವಾಜಪೇಯಿ ನಡೆದು ಬಂದ ಹಾದಿ ಸದಾ ಪ್ರೇರಣೆ: ವಿಹೆಚ್ ಪಿ ಜಿಲ್ಲಾಧ್ಯಕ್ಷರಾದ ಪ್ರದೀಪ್
- “ಧಂ ಹೋಡಿಯೋದ್ ಕಮ್ಮಿ ಮಾಡ್ಬೇಕಲೈ…!” | ಒಂದು ಸಿಗರೇಟ್ ಬೆಲೆ ಎಷ್ಟು ಏರಲಿದೆ? 72 ರೂ. ಆಗೋದು ಸತ್ಯನಾ?
Author: admin
ತಿಪಟೂರು: ಆರ್ಯವೈಶ್ಯ ಸಮಾಜಕ್ಕೆ ಮುಂದುವರೆದ ಜನಾಂಗ ಎಂದು ಸರ್ಕಾರದ ಯಾವುದೇ ನೆರವು ಸಿಗುತ್ತಿಲ್ಲ, ನಮ್ಮ ಸಮಾಜದ ಕಡುಬಡವರಿಗೂ ಒಂದು ಮನೆ ಸಿಗುತ್ತಿಲ್ಲ, ಜಾತಿ ಆಧಾರಿತವಾದ ಈ ಕಾರ್ಯಕ್ರಮದಿಂದ ನಮ್ಮ ಸಮಾಜದ ಬಡವರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆರ್ಯವೈಶ್ಯ ಸಮಾಜದ ರಾಜ್ಯಾಧ್ಯಕ್ಷ ಆರ್.ಪಿ.ರವಿಶಂಕರ್ ತಿಳಿಸಿದರು. ನಮ್ಮ ಸಮಾಜದ ಬಡವರಿಗೆ ನಮ್ಮ ಸಮಾಜದ ಮೂಲಕವೇ ನೆರವು ನೀಡುತ್ತಿದೆ. ಇದರ ಭಾಗವಾಗಿ ತಿಪಟೂರಿನಲ್ಲಿ ತುಮಕೂರು ಜಿಲ್ಲಾ ಆರ್ಯವೈಶ್ಯ ಸಮಾಜದ ನಡೆಯುತ್ತಿದೆ. ಸಮಾಜದ ಕುಂದುಕೊರತೆ ತಿಳಿದು ಸಮಾಜದ ಈ ಕಾರ್ಯಕ್ರಮವನ್ನ ಮನೆ ಮನೆಗೆ ತಲುಪಿಸುತ್ತಿದ್ದೇನೆ ಎಂದರು. ನಮ್ಮ ಸಮಾಜದಿಂದ ಕಳೆದ ಆರು ವರ್ಷಗಳಲ್ಲಿ ಸಾವು 400 ಲ್ಯಾಪ್ ಟಾಪ್ ವಿತರಿಸಿದ್ದು, ಲ್ಯಾಪ್ ಟಾಪ್ ಗಳನ್ನು ಇತರೆ ಸಮಾಜಕ್ಕೆ ನೀಡಿದ್ದೇವೆ. ಆರ್ಯ ವೈಶ್ಯರಿಗಷ್ಟೇ ಅಲ್ಲ ಎಲ್ಲಾ ಸಮಾಜದವರಿಗೂ ನೀಡುತ್ತಾ ಬಂದಿದ್ದೇವೆ ಎಂದರು. ದಾಬಸ್ಪೇಟೆ ಹತ್ತಿರ ಸುಮಾರು ಎಂಟು ಎಕ್ಕರೆ ಭೂಮಿಯನ್ನು 70 ಕೋಟಿ ವೆಚ್ಚದಲ್ಲಿ ಎಲ್ ಕೆ ಜಿಯಿಂದ ಉನ್ನತ ಪದವಿವರೆಗೂ ವಿದ್ಯಾಭ್ಯಾಸಕ್ಕೆ ರೆಸಿಡೆನ್ಸಿಯಲ್ ಶಾಲೆ ವಾಸವಿ…
ಮುಂಬೈ: ಕೊಚ್ಚಿಯಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆ ಸ್ಕಿಡ್ ಆಗಿರುವ ಘಟನೆ ಮುಂಬೈ ಏರ್ ಪೋರ್ಟ್ನಲ್ಲಿ ನಡೆದಿದೆ. ವಿಮಾನಯಾನ ಸಂಸ್ಥೆಯ ಪ್ರಕಾರ, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಯಾವುದೇ ಅಪಾಯವಿಲ್ಲದೇ ಪರಾರಾಗಿದ್ದಾರೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ವಿಮಾನವನ್ನು ಹೆಚ್ಚಿನ ಬಳಕೆಗೆ ಅನುಮತಿಸುವ ಮೊದಲು ಅಗತ್ಯ ತಪಾಸಣೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಶಿವಮೊಗ್ಗ: ಅಬ್ಬಿ ಫಾಲ್ಸ್ ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗನೊಬ್ಬ ನೀರುಪಾಲಾಗಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಮೇಶ್ (35) ಮೃತಪಟ್ಟವರು ಎಂದು ತಿಳಿದು ಬಂದಿದೆ. ಇವರು ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ತಮ್ಮ ಐವರು ಸ್ನೇಹಿತರೊಂದಿಗೆ ಅಬ್ಬಿ ಫಾಲ್ಸ್ನಲ್ಲಿ ಫೋಟೋಗೆ ಪೋಸ್ ನೀಡುವಾಗ ಫಾಲ್ಸ್ಗೆ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಫಾಲ್ಸ್ನಲ್ಲಿ ರಮೇಶ್ ಕಣ್ಮರೆಯಾಗುವ 20 ಸೆಕೆಂಡ್ನ ವಿಡಿಯೋ ವೈರಲ್ ಆಗಿದೆ. ಘಟನೆಯ ಬಳಿಕ ರಮೇಶ್ ಮೃತದೇಹವು ಫಾಲ್ಸ್ನ ಕೆಳಭಾಗದಲ್ಲಿ ಪತ್ತೆಯಾಗಿದೆ. ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಬೆಳಗಾವಿ: ತಂದೆ ಮಗ ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ. ತಂದೆ ಬಸವರಾಜ್ ಕೆಂಗೇರಿ (40), ಮಗ ಧರೆಪ್ಪ ಕೆಂಗೇರಿ (14) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬಸವರಾಜ್ ಕೆಂಗೇರಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿಯಾಗಿದ್ದು, ಹೆಂಡತಿ ಊರಲ್ಲಿರುವ ಜಮೀನಿಗೆ ಕೀಟನಾಶಕ ಹೊಡೆಯಲು ಹೋಗಿದ್ದ. ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದ ಮಗ ಧರೆಪ್ಪ ಮತ್ತೋರ್ವ ಬಾಲಕ ಬಾಗಪ್ಪ ಸಣ್ಣಕ್ಕಿಯನ್ನು ರಕ್ಷಣೆ ಮಾಡಲು ಬಸವರಾಜ್ ಧಾವಿಸಿದ್ದ. ಈ ವೇಳೆ ಕೃಷಿ ಹೊಂಡದಲ್ಲಿ ಮುಳುಗಿ ಬಸವರಾಜ್ ಮತ್ತು ಧರೆಪ್ಪ ಸಾವನ್ನಪ್ಪಿದ್ದಾರೆ. ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರು ಬಾಗಪ್ಪನ ರಕ್ಷಣೆ ಮಾಡಿದ್ದಾರೆ. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸರಗೂರು: ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಯೂಥ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಕೀಲ ಕಂದೇಗಾಲ ಶಿವರಾಜು ಹಾಗೂ ಪಕ್ಷದ ಜಾಲತಾಣ ಅಧ್ಯಕ್ಷ ಹಾಗೂ ಗ್ರಾಪಂ ಸದಸ್ಯ ಯಶವಂತಪುರ ಶಿವಲಿಂಗಯ್ಯರವರ ಹುಟ್ಟು ಹಬ್ಬವನ್ನು ವಿವಿಧ ಸೇವಾ ಕಾರ್ಯಗಳನ್ನು ನಡೆಸುವ ಮೂಲಕ ವಿಶಿಷ್ಟವಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಚರಿಸಿದರು. ತಾಲೂಕಿನ ಚಿಕ್ಕ ದೇವಮ್ಮ ಬೆಟ್ಟಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷವಾಗಿ ಪೂಜೆ ಸಲ್ಲಿಸಿದ ಬಳಿಕ ನಿರ್ಗತಿಕರಿಗೆ ಹಣ್ಣು ಹಂಪಲು ವಿತರಿಸಲಾಯಿತು. ನಂತರ ಸರಗೂರಿನ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ವಿವಿಧ ಸಮಾಜದ ಮುಖಂಡರೊಂದಿಗೆ ಕೇಕ್ ಕತ್ತರಿಸಿ, ಗಿಡ ನೆಡುವುದರ ಮೂಲಕ ಜನ್ಮ ದಿನವನ್ನು ಆಚರಿಸಿಕೊಂಡರು. ಬಳಿಕ ಮಾತನಾಡಿದ ಕಂದೇಗಾಲ ಶಿವರಾಜು ಅವರು, ಸರಗೂರು ತಾಲೂಕಿನ ಜನತೆಯು ಬಹಳ ವಿಶಿಷ್ಟ, ವಿಜೃಂಭಣೆಯಿಂದ ವಿವಿಧ ಸೇವಾ ಕಾರ್ಯಗಳ ಮೂಲಕ ಹುಟ್ಟು ಹಬ್ಬ ಆಚರಣೆ ಮಾಡಿರುವುದು ಬಹಳ ಸಂತಸ ತಂದಿದೆ. ಜನತೆಯ ಅಭಿಮಾನಕ್ಕೆ ಸದಾ ಚಿರ ಋಣಿಯಾಗಿರುತ್ತೇನೆ. ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ಮಾಡಿದ ನನ್ನ ಯುವಕರಿಗೆ…
ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಸಿದ್ದಲಿಂಗ ಸಿಂಗಶೆಟ್ಟೆ ಇವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಪಿಎಸ್ ಐ ಚಂದ್ರಶೇಖರ ನಿರ್ಣೆ ಅವರಿಗೆ ಸ್ವಾಗತ ಸಮಾರಂಭವನ್ನು ಆಯೋಜಿಸಲಾಗಿತ್ತು. ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಸಿದ್ದಲಿಂಗ ಕಾರ್ಯ ನಿರ್ವಹಿಸಿ ಜನರ ಮನಸ್ಸನ್ನು ಗೆದ್ದಿದ್ದು ಹಾಗೂ ಅಪರವಾದ ಸೇವೆಯನ್ನು ಸಲ್ಲಿಸಿದ ಸಿದ್ದಲಿಂಗ ಅವರು ಚಿಂತಾಕಿ ಠಾಣೆಯಿಂದ ವರ್ಗಾವಣೆಗೊಂಡಿದ್ದಾರೆ. ಅವರು ಎಲ್ಲೇ ಇರಲಿ ಪ್ರಾಮಾಣಿಕವಾದ ಸೇವೆಯನ್ನ ಮಾಡಲು ಆ ದೇವರು ಅವರಿಗೆ ಶಕ್ತಿಯನ್ನು ಕೊಡಲಿ, ಸಮಾಜಕ್ಕೆ ಒಳ್ಳೆಯ ನ್ಯಾಯ ಸಿಗುವಂತಾಗಲಿ ಎಂದು ಹಾರೈಸಲಾಯಿತು. ಈ ಸಂದರ್ಭದಲ್ಲಿ ಡಿವೈಎಸ್ಪಿ ಶಿವಾನಂದ ಪವಾಡ ಶೆಟ್ಟಿ, ಪಿಎಸ್ ಐ ಶೇಕಶಾಹ ಪಟೇಲ್ ಹಾಗೂ ಪೊಲೀಸ್ ಸಿಬ್ಬಂದಿ ಚಿಂತಾಕಿ ಗ್ರಾಮಸ್ಥರು ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ನನ್ನ ಮಗನ ಜೊತೆ ನಿಶ್ಚಿತಾರ್ಥವಾದ ಹುಡುಗಿ ಇನ್ನೊಬ್ಬ ಹುಡುಗನ ಜೊತೆ ಚಾಟ್, ವಿಡಿಯೋ ಕಾಲ್ ಮಾಡುತ್ತಿದ್ದಳು. ಇದರಿಂದ ನಿಶ್ಚಿತಾರ್ಥ ಮುರಿದು ಬಿದ್ದಿದೆ. ಆ ಹುಡುಗಿಯ ಅಪ್ಪ, ಅಮ್ಮ ಹಾಗೂ ಹಿರಿಯರೆಲ್ಲ ಸೇರಿಯೇ ನಿಶ್ಚಿತಾರ್ಥವನ್ನು ಮುರಿಯುವ ನಿರ್ಧಾರ ಮಾಡಲಾಗಿದೆ. ಆದರೆ ಇದೇ ವಿಷಯವನ್ನಿಟ್ಟುಕೊಂಡು ಮಾಜಿ ಸಂಸದ ಭಗವಂತ್ ಖುಬಾ ಅವರು ನನ್ನ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಔರಾದ್ ನ ಶಾಸಕ ಪ್ರಭು ಚೌವ್ಹಾಣ್ ಅವರು ಆರೋಪಿಸಿದರು. ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ವಿರುದ್ಧ ಒಂದು ತಂಡ ಇದೆ. ಆ ತಂಡದ ನಾಯಕ ಮಾಜಿ ಸಂಸದ ಭಗವಂತ್ ಖುಬಾ ಅವರು. ಈ ತಂಡ ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದು ನಿರ್ಧಾರ ಮಾಡಿದೆ. ಆದ್ದರಿಂದ ನನ್ನ ವೈಯಕ್ತಿಕ ವಿಷಯದಲ್ಲಿಯೂ ಕೂಡ ಭಾಗವಹಿಸಿ ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು. ನನ್ನ ಮಗ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿರುವುದಾಗಿ ಯುವತಿಯು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಳೆ. ಇದರ ಹಿಂದೆ ನನ್ನ…
ಸರಗೂರು: ತಾಲ್ಲೂಕು ಚಿಕ್ಕದೇವಮ್ಮನ ಬೆಟ್ಟದ ಸುತ್ತಮುತ್ತಲು ಕಳೆದ ಅನೇಕ ವರ್ಷಗಳಿಂದ ಕಾಡಾನೆಗಳ ಹಾವಳಿ ಹಾಗೂ ಕಾಡು ಪ್ರಾಣಿಗಳಿಂದ ರೈತರು ಬೆಳೆದಂತಹ ಬೆಳೆಗಳು ಸಂಪೂರ್ಣವಾಗಿ ನಾಶವಾಗುತ್ತಿದ್ದರೂ, ಅರಣ್ಯಾಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ ಎಂದು ಗ್ರಾ.ಪಂ. ಸದಸ್ಯ ಪುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಸುತ್ತಮುತ್ತಲ ಗ್ರಾಮಗಳಾದ ಲಂಕೆ, ಮನುಗನಹಳ್ಳಿ, ಹುಣಸಹಳ್ಳಿ, ಹೂವಿನಕೊಳ, ಅಲ್ಲಯ್ಯನಪುರ, ಬಸಾಪುರ, ಚಂದ್ರವಾಡಿ, ನಲ್ಲಿತಾಳಪುರ, ರಾಜೂರು, ಕಟ್ಟೆಹುಣಸೂರು, ನಂಜೀಪುರ, ಕುಂದೂರು, ಕಲ್ಲಂಬಾಳು ಹಾಗೂ ದಡದಹಳ್ಳಿ ಗ್ರಾಮದ ರೈತರು ಬೆಳೆದಂತಹ ಬೆಳೆ ಕಾಡುಪ್ರಾಣಿಗಳಿಂದಾಗಿ ನಾಶವಾಗುತ್ತಿದೆ. ಇತ್ತ ಅರಣ್ಯಾಧಿಕಾರಿಗಳು ಬೆಳೆನಾಶಕ್ಕೆ ಸಂಬಂಧಿಸಿದಂತೆ ಸೂಕ್ತ ರೀತಿಯಲ್ಲಿ ಬೆಳೆ ನಷ್ಟ ನೀಡದೆ ಪರಿಹಾರವೂ ವರ್ಷಾನುಗಟ್ಟಲೆ ಕಾಯಿಸಿದ ನಂತರ ಬೆಳೆ ನಷ್ಟದ ಶೇ. 5% ನಷ್ಟನ್ನು ಮಾತ್ರ ಪರಿ ರೈತರಿಗೆ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಅರಣ್ಯಾಧಿಕಾರಿಗಳ ಈ ಬೇಜವಬ್ದಾರಿತನ ಹಾಗೂ ನಿರ್ಲಕ್ಷವನ್ನು ಖಂಡಿಸಿ ಎಲ್ಲಾ ಗ್ರಾಮಗಳ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಗ್ರಾಪಂ ಸದಸ್ಯ ಪುಟ್ಟು ಎಚ್ಚರಿಕೆ ನೀಡಿದರು. ವರದಿ: ಹಾದನೂರು ಚಂದ್ರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಸರಗೂರು: ಪಟ್ಟಣ 11 ವಾರ್ಡಿನ ಬಿಡಗಲು ಗ್ರಾಮದ ಪಡವಲು ವೀರಕ್ತ ಮಠದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಘಟಕದಿಂದ ಅಭಾವೀಲಿಂ ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ ರವರ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಂಡು, ಪೋಟೋಗೆ ಪುಷ್ಪಾರ್ಚನೆ ಶ್ರದ್ಧಾಂಜಲಿ ಗೌರವ ಸಲ್ಲಿಸಲಾಯಿತು. ನಂತರ ಮಾತನಾಡಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪ್ರದಾನ ಕಾರ್ಯದರ್ಶಿ ಮನುಗನಹಳ್ಳಿ ಗುರುಸ್ವಾಮಿ, ಎನ್.ತಿಪ್ಪಣ್ಣನವರು ರಾಷ್ಟ್ರೀಯ ಮಹಾಸಭಾ ಉಪಾಧ್ಯಕ್ಷರಾಗಿ ಮಹಾಸಭಾಕ್ಕೆ ಕೆಲಸ ಕಾರ್ಯಗಳು ಮಾಡಿಕೊಂಡು ಬಂದರು. ಅವರು ಇಲ್ಲ ಎಂದು ತಾಲ್ಲೂಕು ಘಟಕದಿಂದ ಸಂತಾಪ ಸೂಚಿಸಿದ್ದಾರೆ. ಶ್ರದ್ಧಾಂಜಲಿ ಸಭೆಯನ್ನು ಸಮಾಜದ ಕಚೇರಿಯಲ್ಲಿ ಮಾಡಲಾಗಿತ್ತು. ಇವರು ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಜ್ಯ ಅಧ್ಯಕ್ಷರಾಗಿ ಸೇವಿಸಲ್ಲಿಸಿದ್ದು, ಸೇವೆ ಸಲ್ಲಿಸಿ ನಮ್ಮನ್ನು ಅಗಲಿದ್ದಾರೆ ಎಂದರು ಪಡವಲು ಮಠ ಮಹಾದೇವಸ್ವಾಮಿಗಳು, ಹಂಚಿಪುರ ಕಿರಿಯ ತೋಂಟದಾರ್ಯ ಶ್ರೀಗಳು, ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ನಿರ್ದೇಶಕರ ಸಮ್ಮುಖದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಹಾಸಭಾದ ಅಧ್ಯಕ್ಷ ವೀರಭದ್ರಪ್ಪ, ಕೋಶಾಧ್ಯಕ್ಷ ಸಿ.ಕೆ.ಗಿರೀಶ್, ಟೌನ್ ಅಧ್ಯಕ್ಷ ಮೋಹನ್ ಕುಮಾರ್, ನಿರ್ದೇಶಕರು…
ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್ ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್ಐಟಿಯನ್ನು ರಚಿಸಿದೆ. ಎಸ್ ಐಟಿಯ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿಕೊಂಡಿದ್ದಾರೆ. SIT ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒದಗಿಸಲಾಗುತ್ತದೆ ಎಂದು ಆದೇಶದಲ್ಲಿ ಸೇರಿಸಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತ (BNS) ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಾಖಲಾಗಿರುವ ಅಪರಾಧ ಮತ್ತು “ಕರ್ನಾಟಕದಾದ್ಯಂತ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ/ದಾಖಲಾಗಲಿರುವ ಎಲ್ಲಾ ಇತರ ಕ್ರಿಮಿನಲ್ ಪ್ರಕರಣಗಳನ್ನು” ತನಿಖೆ ಮಾಡಲು “ವಿಶೇಷ ತನಿಖಾ ತಂಡವನ್ನು ರಚಿಸುವುದು ಸೂಕ್ತ” ಎಂದು ಶನಿವಾರ ಹೊರಡಿಸಲಾದ ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…