Subscribe to Updates
Get the latest creative news from FooBar about art, design and business.
- ಬಳ್ಳಾರಿ: ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು
- “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು
- ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
- ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
- ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
- ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
- ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
- ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
Author: admin
ಕುದುರೆ ವ್ಯಾಪಾರದಿಂದ ತಪ್ಪಿಸ್ಕೊಳ್ಳಲು ಬೇರೆ ರಾಜ್ಯದ ಶಾಸಕರನ್ನು ರಾಜ್ಯಕ್ಕೆ ಕರೆತರುವ ಬಗ್ಗೆ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಕೆಲ ರಾಜ್ಯಗಳಲ್ಲಿ ನೇರಹಣಾಹಣಿ ಇದ್ದು, ಆ ರಾಜ್ಯಗಳ ಶಾಸಕರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆ ಡಿಕೆಶಿಗೆ ಪತ್ರಕರ್ತರಿಂದ ಎದುರಾಯಿತು. ಇದಕ್ಕೆ ಉತ್ತರಿಸಿದ ಅವರು, “ಈ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ರಾಜಸ್ಥಾನ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಪಕ್ಷ ಹೇಳಿದ ಕೆಲಸ ಮಾಡಬೇಕಾಗುತ್ತದೆ. ನಮ್ಮ ಮುಂದೆ ಬೇರೆ ಆಯ್ಕೆಗಳಿಲ್ಲ” ಎಂದು ತಿಳಿಸಿದರು. ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗಳ ಎಕ್ಸಿಟ್ ಪೋಲ್ಗಳ ಮೇಲೆ ವೈಯಕ್ತಿಕವಾಗಿ ನನಗೆ ಮೇಲೆ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಯಾವ ರೀತಿ ಎಕ್ಸಿಟ್ ಪೋಲ್ ಗಳು ಬಂದವು ಎಂಬುದು ನನಗೆ ಗೊತ್ತಿದೆ. ಯಾರು ಕ್ಷೇತ್ರಗಳಲ್ಲಿ ಸುತ್ತಾಡಿರುತ್ತಾರೋ ಅವರಿಗೆ ಮಾತ್ರ ವಾಸ್ತವಾಂಶ ತಿಳಿದಿರುತ್ತದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ತೆಗೆದುಕೊಳ್ಳುವ ಮಾದರಿಗಳು ಅಲ್ಪಪ್ರಮಾಣದ್ದಾಗಿರುತ್ತದೆ. ಅದು ಇಡೀ ರಾಜ್ಯದ…
ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ತವರು ಜಿಲ್ಲೆ ಬೆಳಗಾವಿಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಿರುವುದು ಗಮನಾರ್ಹ. ಜಿಲ್ಲೆಯಲ್ಲಿ ಹಲವು ಹೆಣ್ಣುಮಕ್ಕಳು 18 ವರ್ಷ ತುಂಬುವ ಮುನ್ನವೇ ಗರ್ಭಿಣಿಯಾಗುತ್ತಿದ್ದಾರೆ. ಜಿಲ್ಲೆಯಲ್ಲಿ ಕಳೆದ 19 ತಿಂಗಳಲ್ಲಿ 361 ಹೆಣ್ಣು ಮಕ್ಕಳು ಗರ್ಭಿಣಿಯಾಗಿದ್ದಾರೆ ಎಂದು ಆರ್ ಸಿಎಚ್ ಪೋರ್ಟಲ್ ನ ಅಂಕಿ ಅಂಶಗಳು ತಿಳಿಸಿವೆ. ಇದರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಏಪ್ರಿಲ್ 2022ರಿಂದ ಮಾರ್ಚ್ 2023ರ ನಡುವೆ 208 ಹುಡುಗಿಯರು, ಏಪ್ರಿಲ್ 1ರಿಂದ ಅಕ್ಟೋಬರ್ 31ರ ಅವಧಿಯಲ್ಲಿ 153 ಹುಡುಗಿಯರು ಬಾಲ್ಯ ವಿವಾಹ ಆಗಿದ್ದಾರೆ ಎಂದು ಆರ್ ಸಿಎಚ್ ತಿಳಿಸಿದೆ.
ಬೀದರ್: ಜಿಲ್ಲೆಯ ಔರಾದ ತಾಲೂಕಿನ ವನಮಾರಪಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹೊಸದಾಗಿ ನಿರ್ಮಿಸಲಾದ ಹೆಚ್ಚುವರಿ ತರಗತಿ ಕೋಣೆಗಳನ್ನು ಮಾಜಿ ಸಚಿವ, ಔರಾದ ತಾಲೂಕಿನ ಶಾಸಕ ಪ್ರಭು ಬಿ ಚವ್ಹಾಣ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಅವರು, ಮಕ್ಕಳಿಗೆ ಸರಿಯಾಗಿ ಪಾಠ ಮಾಡಬೇಕೆಂದು ಶಿಕ್ಷಕರಿಗೆ ಮಾರ್ಗದರ್ಶನ ನೀಡಿದರು. ಬಳಿಕ ಖಾನಾಪೂರ ಗ್ರಾಮದಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಲಿಂಗದಳ್ಳಿ (ಕೆ) ಗ್ರಾಮದ ಅಂಗನವಾಡಿ ಕೆಂದ್ರಕ್ಕೆ ಭೇಟಿ ನೀಡಿದ ಅವರು, ಶಾಲೆಯ ಎಲ್ಲಾ ಕೋಣೆಗಳು ಆವರಣವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು, ಮಕ್ಕಳಿಗೆ ಸರಿಯಾಗಿ ಬೋಧನೆ ಮಾಡಬೇಕು ಶಿಕ್ಷಕರು ಗೈರಾಗದೆ, ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಬೇಕೆಂದು ಸೂಚಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್
ಡಿಸೆಂಬರ್ 4 ರಂದು ಪ್ರಾರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಸರ್ಕಾರವು ಡಿಸೆಂಬರ್ 2 ರಂದು ಸರ್ವಪಕ್ಷ ಸಭೆಯನ್ನು ಕರೆಯಲಿದೆ. ಸಂಸತ್ತಿನ ಚಳಿಗಾಲದ ಅಧಿವೇಶನ 2023 ಡಿಸೆಂಬರ್ 22 ರಂದು ಮುಕ್ತಾಯಗೊಳ್ಳಲಿದೆ. ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಇಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಸಾಮಾನ್ಯವಾಗಿ ಅಧಿವೇಶನ ಆರಂಭವಾಗುವ ಒಂದು ದಿನ ಮೊದಲು ಸರ್ವಪಕ್ಷ ಸಭೆ ಕರೆಯಲಾಗುತ್ತಿದ್ದು, ಈ ಬಾರಿ ಮತ ಎಣಿಕೆಯಿಂದಾಗಿ ಒಂದು ದಿನ ಮುಂದೂಡಲಾಗಿದೆ. ಡಿಸೆಂಬರ್ 3 ರಂದು ನಾಲ್ಕು ರಾಜ್ಯಗಳಿಗೆ ಮತದಾನ. ಡಿಸೆಂಬರ್ 4 ರಂದು ಸಂಸತ್ ಅಧಿವೇಶನ ಆರಂಭ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಗಢ ಮತ್ತು ತೆಲಂಗಾಣ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಚಳಿಗಾಲದ ಅಧಿವೇಶನ ನಡೆಯಲಿದೆ. ಚುನಾವಣೆಯ ಫಲಿತಾಂಶವು ಅಧಿವೇಶನದಲ್ಲಿ ಪ್ರತಿಧ್ವನಿಸುವ ನಿರೀಕ್ಷೆಯಿದೆ. IPC, CrPC ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬದಲಿಸಲು ಬಯಸುವ ಮೂರು ಪ್ರಮುಖ ಮಸೂದೆಗಳನ್ನು ಅಧಿವೇಶನದಲ್ಲಿ ಪರಿಗಣನೆಗೆ ತೆಗೆದುಕೊಳ್ಳಬಹುದು.…
ರೈಲಿನಲ್ಲಿ ಗುಂಡಿನ ದಾಳಿ ಪ್ರಕರಣ: ವಜಾಗೊಂಡ ಆರ್ ಪಿಎಫ್ ಕಾನ್ ಸ್ಟೆಬಲ್ ಜಾಮೀನು ಅರ್ಜಿ ವಿಚಾರಣೆ ಡಿ.8ಕ್ಕೆ ಮುಂದೂಡಿಕೆ
ಮುಂಬೈ: ವಜಾಗೊಂಡ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ಕಾನ್ ಸ್ಟೆಬಲ್ ಚೇತನ್ ಸಿಂಗ್ ಅವರ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ಪ್ರಾಸಿಕ್ಯೂಷನ್ ಸಮಯ ಕೋರಿದ್ದರಿಂದ ಮುಂಬೈ ನ್ಯಾಯಾಲಯವು ಡಿಸೆಂಬರ್ 8 ಕ್ಕೆ ಜಾಮೀನು ಅರ್ಜಿಯನ್ನು ಶುಕ್ರವಾರ ಮುಂದೂಡಿದೆ. ಈ ವರ್ಷ ಜುಲೈ 31 ರಂದು ಮುಂಬೈ-ಜೈಪುರ ಎಕ್ಸ್ ಪ್ರೆಸ್ ಚಲಿಸುತ್ತಿದ್ದ ರೈಲಿನಲ್ಲಿ ತನ್ನ ಹಿರಿಯ ಸಹೋದ್ಯೋಗಿ ಮತ್ತು ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಕೊಂದ ಆರೋಪ ಅವರ ಮೇಲಿದೆ. ಜಾಮೀನು ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ರೈಲ್ವೆ ಪೊಲೀಸರು ಸಮಯ ಕೋರಿದ್ದು, ವಕೀಲ ಅಮಿತ್ ಮಿಶ್ರಾ ಅವರ ಪ್ರಕಾರ ದಿಂಡೋಶಿ ನ್ಯಾಯಾಲಯವು ಡಿಸೆಂಬರ್ 8 ಕ್ಕೆ ಮುಂದೂಡಿದೆ. ವಕೀಲ ಅಮಿತ್ ಮಿಶ್ರಾ, “ಆರೋಪಿಯು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದನು. ಅವನು ಕಾಲ್ಪನಿಕ ಮತ್ತು ಭ್ರಮೆಯ ಜಗತ್ತಿನಲ್ಲಿ ವಾಸಿಸುತ್ತಿದ್ದನು ಮತ್ತು ನರವೈಜ್ಞಾನಿಕ ಮತ್ತು ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದನು.” ಎಂದು ಉಲ್ಲೇಖಿಸಿ ಅವರ ಜಾಮೀನು ಅರ್ಜಿಯನ್ನು ಸಲ್ಲಿಸಲಾಯಿತು. ಅರ್ಜಿಗೆ ಉತ್ತರ ನೀಡುವಂತೆ ನ್ಯಾಯಾಲಯವು ಪ್ರಾಸಿಕ್ಯೂಷನ್ ಗೆ ಸೂಚಿಸಿತ್ತು. ವಿಚಾರಣೆಯನ್ನು ಡಿಸೆಂಬರ್ 1…
ಪ್ರಧಾನಿ ನರೇಂದ್ರ ಮೋದಿ ಅವರ ಇಟಲಿಯ ಕೌಂಟರ್ ಪಾರ್ಟ್ ಜಾರ್ಜಿಯಾ ಮೆಲೋನಿ ಅವರೊಂದಿಗಿನ ಸೆಲ್ಫಿ ಶನಿವಾರ ಬೆಳಿಗ್ಗೆ 52.3K ಪೋಸ್ಟ್ ಗಳೊಂದಿಗೆ ಎಕ್ಸ್ ನಲ್ಲಿ ‘ಮೆಲೋಡಿ’ ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ಟ್ರೆಂಡಿಂಗ್ ನೊಂದಿಗೆ ಇಂಟರ್ನೆಟ್ ಅನ್ನು ಮುರಿದಿದೆ. COP28 ಎಂದು ಕರೆಯಲ್ಪಡುವ ಹವಾಮಾನದ ಕುರಿತು ವಿಶ್ವಸಂಸ್ಥೆಯ ‘ಪಕ್ಷಗಳ ಸಮ್ಮೇಳನ’ದ ಸಂದರ್ಭದಲ್ಲಿ ಇಬ್ಬರೂ ದುಬೈನಲ್ಲಿ ಭೇಟಿಯಾದರು. ಅಲ್ಲಿ 46 ವರ್ಷ ವಯಸ್ಸಿನ ಇಟಾಲಿಯನ್ ನಾಯಕ – ಸಾಮಾಜಿಕ ಮಾಧ್ಯಮದ ಪ್ರವೃತ್ತಿಯನ್ನು ಚೆನ್ನಾಗಿ ತಿಳಿದಿರುವಂತೆ ತೋರುತ್ತಿದೆ – ಚಿತ್ರಕ್ಕೆ ‘#Melodi’ ಎಂದು ಶೀರ್ಷಿಕೆ ನೀಡಿದ್ದಾರೆ. ಇಬ್ಬರು ನಾಯಕರ ಉಪನಾಮವನ್ನು ಸಂಯೋಜಿಸಿ ಹ್ಯಾಶ್ಟ್ಯಾಗ್ ಅನ್ನು ಪಡೆಯಲಾಗಿದೆ. ಮೆಲೊನಿ ಅವರ ಚಿತ್ರವು ಇಲ್ಲಿಯವರೆಗೆ 10.7 ಮಿಲಿಯನ್ ವೀಕ್ಷಣೆಗಳು ಮತ್ತು 169k ಗಿಂತ ಹೆಚ್ಚು ಲೈಕ್ಸ್ ಪಡೆದಿದೆ. ಕೆಲವರು ಯಶರಾಜ್ ಮುಖಾಟೆ ಅವರ ‘ಜಸ್ಟ್ ಲುಕಿಂಗ್ ಲೈಕ್ ಎ ವಾವ್’ ಎಂಬ ವೈರಲ್ ಟ್ರೆಂಡಿಂಗ್ ಹಾಡನ್ನು ಬಳಸಿದ್ದಾರೆ ಮತ್ತು ಅದನ್ನು ಮೆಲೋನಿಯ ವಿಭಿನ್ನ ಚಿತ್ರಗಳೊಂದಿಗೆ ಮ್ಯಾಶ್ ಮಾಡಿದ್ದಾರೆ,…
ತುಮಕೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್ ರವರ ಹುಟ್ಟು ಹಬ್ಬವನ್ನು ಮಿಡಿಗೇಶಿ ಹೋಬಳಿ ನೇರಳೇಕೆರೆ ಗ್ರಾಮದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಎಂ.ಎನ್.ಶಿವಕುಮಾರ್ ಹಾಗೂ ಧನಂಜಯ ರವರು ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಪಿಡಿಒ ಎಂ ಎನ್ ಶಿವಕುಮಾರ್ ಹಾಗೂ ಧನಂಜಯ್ ರವರು ಸಾಹಸಸಿಂಹ ವಿಷ್ಣುವರ್ಧನ್ ಅವರ ಸಾಧನೆಯ ಗುಣಗಾನ ಮಾಡಿದರು. ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ದ್ರಾಕ್ಷಾಯಣಮ್ಮ, ಸದಸ್ಯರುಗಳಾದ ರಮೇಶ್, ಬಿಲ್ ಕಲೆಕ್ಟರ್ ಗೋವಿಂದರಾಜ್, ನಿವೃತ್ತ ಇಂಜಿನಿಯರ್ ಬಸವರಾಜ್, ಪತ್ರಿಕೆ ಬರಹಗಾರರಾದ ಎನ್ಎಸ್ ಈಶ್ವರ್ ಪ್ರಸಾದ್ ಹಾಗೂ ಅಂಬೇಡ್ಕರ್ , ಬ್ಯಾಂಕ್ ರಮೇಶ್ ಬಾಬು, ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳಾದ ಎನ್. ನಟರಾಜ್, ಮೌರ್ಯ ಎನ್ ಜಿ , ನಾಗರಾಜು ಆಟೋ ಕರಿಯಣ್ಣ, ಅಶ್ವತ್ ಕುಮಾರ್, ವಾಟರ್ ಮ್ಯಾನ್ ಗೋವಿಂದರಾಜು, ನಾಗರಾಜು ಇನ್ನು ಮುಂತಾದ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
ತುಮಕೂರು: ಕೈಸೆಟ್ಸ್ ಅಟ್ ಬೀಬಲ್ ಡಾಟ್ ಕಾಮ್ ಎಂಬ ಮೇಲ್ ಐಡಿ ಇಂದ ಬೆಂಗಳೂರಿನ 15 ಶಾಲೆಗಳಲ್ಲಿ ಬಾಂಬನ್ನು ಇಡಲಾಗಿದೆ ನಿಮ್ಮನ್ನು ಹಾಗೂ ನಿಮ್ಮ ಮಕ್ಕಳನ್ನು ಕೊಂದು ಹಾಕುತ್ತೇವೆ ಎಂದು ಬಂದಿ̧ದೆ ಇದನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲಿಸಲಾಗುಗುತ್ತಿದೆ ಎಂದು ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಕೊರಟಗೆರೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇ-ಮೇಲ್ ಬಂದಿರುವ ಮೂಲವನ್ನು ಪತ್ತೆಹಚ್ಚಲು ಈಗಾಗಲೇ ಪೊಲೀಸ್ ಇಲಾಖೆ ಅಧಿಕಾರಿಗಳು ಸಕ್ರಿಯರಾಗಿದ್ದಾರೆ. ಅಲ್ಲದೆ 15 ಶಾಲೆಗಳಿಗೆ ತೆರಳಿ ಸ್ಪೋಟಕಗಳು ಇರುವ ಕುರಿತಂತೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಶಾಲೆಗಳಲ್ಲಿ ಬಾಂಬು ಇಲ್ಲದಿರುವ ಬಗ್ಗೆ ನಾನು ಕೂಡ ಬಯಸುತ್ತೇನೆ. ಆಕಸ್ಮಾತ್ ಇದ್ದರೆ ಅದನ್ನು ಯಾವ ರೀತಿ ನಿಷ್ಕ್ರಿಯಗೊಳಿಸಬೇಕು ಎಂಬ ಕುರಿತಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಅವರು ಕೂಡ ಸಕ್ರಿಯರಾಗಿದ್ದಾರೆ. ಅಕಸ್ಮಾತ್ ರಾಜ್ಯದಲ್ಲಿ ಉಗ್ರ ಸಂಘಟನೆಗಳು ಚಟುವಟಿಕೆ ನಡೆಸುತ್ತಿವೆ ಎಂಬ ಬಗ್ಗೆ ಮಾಹಿತಿ ಇದ್ದರೆ ಅದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕಿದೆ ಎಂದು…
ತುಮಕೂರು: ಮಣ್ಣು ಸಂರಕ್ಷಣೆ ಮತ್ತು ಸುಸ್ಥಿರ ಪರಿಸರಕ್ಕಾಗಿ ಹೋರಾಟ ಮಾಡಿದ ಊರ್ಡಿಗೆರೆಯ ಲಕ್ಷ್ಮೀಶ್ ಹಾಗೂ ಕದರನಹಳ್ಳಿ ಗೊಲ್ಲರಹಟ್ಟಿಯ ಭೈರಲಿಂಗಯ್ಯ ಅವರನ್ನು ಗುರುತಿಸಿ ‘ಇನಿಶಿಯೇಟಿವ್ ಫಾರ್ ಸಸ್ಟೇನಬಲ್ ಅಗ್ರಿಕಲ್ಚರ್ ಅಂಡ್ ಎನ್ವಿರಾನ್ಮೆಂಟ್ – ಚಾಂಪಿಯನ್ ಆಫ್ ಸಾಯಿಲ್’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ರಮೇಶ್ ನಾಯಕ್ ಎಲ್. ಅವರ ನೇತೃತ್ವದಲ್ಲಿ ಪ್ರಸಕ್ತ ವರ್ಷದಿಂದ ಆರಂಭಗೊಂಡ ಪ್ರಶಸ್ತಿ ಪ್ರದಾನವು ಕಾರ್ಯಕ್ರಮವು ಮುಂದೆ ಪ್ರತೀ ವರ್ಷವೂ ನಡೆಸಲು ತೀರ್ಮಾನಿಸಲಾಗಿದೆ. ಪ್ರಶಸ್ತಿಯು ಸ್ಮರಣಿಕೆ, 10 ಸಾವಿರ ರೂ ನಗದು ಒಳಗೊಂಡಿದೆ. ಶ್ರೀ ಸಿದ್ಧಗಂಗಾ ಮಠದಲ್ಲಿ ಸಾಮೂಹಿಕ ಪ್ರಾರ್ಥನೆ ಸಂದರ್ಭದಲ್ಲಿ ಶ್ರೀ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾಜಿ ಸಚಿವೆ, ಸಾಹಿತಿ ಬಿ.ಟಿ.ಲಲಿತಾ ನಾಯಕ್, ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ, ಹೈಕೋರ್ಟ್ ಸರಕಾರಿ ವಕೀಲ ಹರೀಶ್ ಎ.ಎಸ್., ವಕೀಲ ಹಾಲೇಶ ಎ.ಎಸ್., ವಿದ್ಯೋದಯ ಕಾನೂನು ಕಾಲೇಜಿನ ಪ್ರಾಂಶುಪಾಲ ಎ.ನಾರಾಯಣಸ್ವಾಮಿ, ಪ್ರಾಧ್ಯಾಪಕ ಶಿವರಾಜ್ ಮತ್ತಿತರರು ಉಪಸ್ಥಿತರಿದ್ದರು.
ತೂಕವನ್ನು ಕಳೆದುಕೊಳ್ಳಲು ಮತ್ತು ಹೊಟ್ಟೆಯ ಕೊಬ್ಬನ್ನು ಕರಗಿಸಲು ವ್ಯಾಯಾಮವು ಪ್ರಮುಖವಾಗಿದೆ ಎಂದು ತಜ್ಞರು ಹೇಳುತ್ತಾರೆ. ಆದರೆ ಕೊಬ್ಬು ಕರಗಿಸುವ ಮುಖ್ಯ ಕೇಂದ್ರವೆಂದರೆ ಅಡುಗೆಮನೆ. ನೆನೆಸಿದ ಬಾದಾಮಿ ಮತ್ತು ಗೋಡಂಬಿಯಂತಹ ಬೀಜಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಪ್ರೋಟೀನ್ ದಾಲ್ ಬೆಳಗಿನ ಉಪಾಹಾರ, ತುಪ್ಪ, ಮೊಸರು, ರಾಗಿ ರೊಟ್ಟಿ, ದಾಲ್ಟಿನ್ನಿ ಚಹಾ, ಹಿಮಾಲಯನ್ ಉಪ್ಪು, ರಾತ್ರಿ 8 ಗಂಟೆಯ ಮೊದಲು ಊಟ, ರಾತ್ರಿ ಊಟದ ನಂತರ 20 ನಿಮಿಷಗಳ ಕಾಲ ನಡೆದರೆ ಸಾಕು ಕೊಬ್ಬನ್ನು ಸಲೀಸಾಗಿ ಕರಗಿಸಬಹುದು. ಕೆಮ್ಮು ಕಡಿಮೆ ಆಗ್ತಿಲ್ವ? ಹಾಗಿದ್ರೆ ಅಡುಗೆ ಮನೆಯಲ್ಲೇ ಇದೆ ಪರಿಹಾರ ಚಳಿಗಾಲದ ಸಂದರ್ಭದಲ್ಲಿ ಶೀತ ಮತ್ತು ಕೆಮ್ಮು ಸಾಕಷ್ಟು ಸಾಮಾನ್ಯವಾಗಿದೆ. ಕೆಮ್ಮು ಮತ್ತು ಶೀತದಿಂದ ಆರಾಮ ಪಡೆಯಲು ಅಡುಗೆ ಮನೆಯಲ್ಲೇ ಇರುವ ಕೆಲವು ವಸ್ತುಗಳನ್ನು ಬಳಸಬಹುದು. ನೀರನ್ನು ಕುದಿಸಿದ ಮೇಲೆ ಅದಕ್ಕೆ ತಾಜಾ ಶುಂಠಿ ಮತ್ತು ಅದರ ಪುಡಿಯನ್ನು ಸೇರಿಸಿ ಕುಡಿಯಿರಿ ಕೆಮ್ಮು ಕಡಿಮೆ ಆಗುತ್ತೆ. ಮೊದಲು ನೀರನ್ನು ಕುದಿಸಿ ಮತ್ತು ಅದಕ್ಕೆ ಅರಿಶಿನ…