Author: admin

ಬೆಂಗಳೂರಿನಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ನಗರಕ್ಕೆ ಪ್ರತ್ಯೇಕ ಸಮರ್ಪಿತ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಸೂಚಿಸಿದ್ದಾರೆ.

Read More

ರೈತರ ವಿರುದ್ಧ ಅಪಾಯಕಾರಿ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ. ರೈತ ಕಾಯ್ದೆಯನ್ನ ರದ್ದುಪಡಿಸದೆ, ಹಿಂದಿನ ಸರ್ಕಾರ ತಂದ ಕಾಯ್ದೆಗಳನ್ನ ಜಾರಿ ಮಾಡುತ್ತಿದೆ. ಯಾವ ಕಾರ್ಪೋರೇಟ್ ಕಂಪನಿ ನಿಮ್ಮೊಂದಿಗೆ ಇದ್ದಾರೆ? ಇಂತಹ ಅಪಾಯದ ಕೆಲಸಕ್ಕೆ ಕೈ ಹಾಕಬೇಡಿ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ಕೋಲಾರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಕಾಯ್ದೆ ರದ್ದಿಪಡಿಸಬೇಕೆಂದು ಚಳುವಳಿ ಮಾಡಿದಾಗ, ಕಾಯ್ದೆ ರೈತರಿಗೆ ವಿರುದ್ದ ಇದೆ ಎಂದು ಹೇಳಿದ್ರಿ. ಆಗ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರು ಚಳುವಳಿಯಲ್ಲಿ ಭಾಗವಹಿಸಿದ್ರು. ಜಾಹಿರಾತು ನೀಡುವ ಮೂಲಕ ರೈತರನ್ನ ಹರಾಜಿಗೆ ಇಟ್ಟಿದ್ದೀರಿ ಎಂದರು.

Read More

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ  ಡಿ.ಬಿ.ಚಂದ್ರೇಗೌಡರು(87 ವರ್ಷ) ಇಂದು ಮುಂಜಾನೆ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು. ಮಾಹಿತಿಗಾಗಿ ಡಿ.ಬಿ.ಚಂದ್ರೇಗೌಡರ ಅಣ್ಣನ ಮಗ ಡಿ.ಬಿ. ಜಯಪ್ರಕಾಶ್ ದಾರದಹಳ್ಳಿ ಮೊ :9448004945 ಸಂಪರ್ಕಿಸಬಹುದು.

Read More

ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಮೇಲಿನ ಸೇಡಿನಿಂದ ಪ್ರಾಣ ತೆಗೆದು ಕಿರಣ್ ಪರಾರಿ ಆಗಿದ್ದ. ಈಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದು, ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕನನ್ನು ಬಂಧಿಸಲಾಗಿದೆ. 4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡಿಸುತ್ತಿದ್ದನು. ಗುತ್ತಿಗೆ ಆಧಾರದ ಮೇಲೆ ಚಾಲಕ ವೃತ್ತಿ ಮಾಡುತ್ತಿರುವ ಕಿರಣ್ ಕಳೆದ ತಿಂಗಳು ಹೊಸ ಸರ್ಕಾರಿ ಕಾರು ಅಪಘಾತ ಮಾಡಿದ್ದನು. ಅಪಘಾತದ ನಂತರ ಕಚೇರಿಯಲ್ಲಿಯೇ ಕಾರು ಬಿಟ್ಟು ತೆರಳಿದ್ದನು. ಪ್ರತಿಮಾ ರೈಡ್ ಹೋಗುವ ವಿಚಾರ ಲೀಕ್ ಮಾಡುತ್ತಿರುವ ಬಗ್ಗೆ ಮಾಹಿತಿ ಇತ್ತು. ಈ ಕಾರಣಕ್ಕೆ ಪ್ರತಿಮಾ ವಾರ್ನ್ ಕೂಡ ಮಾಡಿದ್ದರು. ಈ ವೇಳೆ ಬೈದಾಗ ತಪ್ಪಾಗಿದೆ ಕೆಲಸದಿಂದ ತೆಗೆಯಬೇಡಿ ಎಂದು ಕೇಳಿದ್ದನಂತೆ.ಆದರೆ ಆಕೆ ಅದನ್ನು ತಿರಸ್ಕರಿಸಿದರು ಶನಿವಾರ ಮನೆ ಬಳಿಯೇ ಕಾದು ಕುಳಿತು ಹೊಂಚು ಹಾಕಿ ಕೊಲೆ ಮಾಡಿ ಕಿರಣ್ ಎಸ್ಕೇಪ್ ಆಗಿದ್ದರು. ಇದೀಗ ಆತನನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

Read More

ಯುವಕನೊಬ್ಬ ತನ್ನ ಸೋದರ ಸಂಬಂಧಿಯನ್ನು ಮದುವೆಯಾಗುವ ಆಸೆಯಲ್ಲಿ ಆಕೆಯ ಪತಿಯನ್ನು ಕೊಲೆ ಮಾಡಿದ್ದಾನೆ. ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ಕೊಲೆ ನಡೆದಿರುವುದಾಗಿ ವರದಿಯಾಗಿದೆ. ಆರೋಪಿ ವಾಹಿದ್ ಅಹಮದ್ ತನ್ನ ಸಹೋದರ, ಗಂಗೊಂಡನಹಳ್ಳಿ ನಿವಾಸಿಗಳಾದ ಮಥೀನ್ ಅಹಮದ್ (24) ಎಂಬಾತನೊಂದಿಗೆ ಗುರುವಾರ ರಾತ್ರಿ ಗಂಗೊಂಡನಹಳ್ಳಿಯ ಓಂ ಶಕ್ತಿ ದೇವಸ್ಥಾನದ ಬಳಿ ಮುದಸ್ಸಿರ್ ಖಾನ್ ಎಂಬಾತನ ಮೇಲೆ ಸಾರ್ವಜನಿಕರ ಎದುರೇ ಹಲ್ಲೆ ನಡೆಸಿದ್ದಾನೆ.

Read More

ಸಾರ್ವಜನಿಕ ಕಣ್ಣಿನಿಂದ ಕಣ್ಮರೆಯಾದ ಅನೇಕ ಹಿಂದಿನ ನಟರಲ್ಲಿ ರಾಜ್ ಕಿರಣ್ ಕೂಡ ಒಬ್ಬರು. 1949ರಲ್ಲಿ ಜನಿಸಿದ ಅವರು 1975ರಲ್ಲಿ ಕಾಗಜ್ ಕಿ ನಾವೋ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದರು. 80ರ ದಶಕದಲ್ಲಿ ಕಾರ್ಜ್, ಬಸೇರಾ, ಅರ್ಥ್ ಹೀಗೆ ಎಂಟು ಬ್ಯಾಕ್-ಟು-ಬ್ಯಾಕ್ ಹಿಟ್ ಚಿತ್ರ ನೀಡಿದರು. ಆದರೆ 90ರ ದಶಕದ ಅಂತ್ಯದ ವೇಳೆಗೆ ಅವರ ವೃತ್ತಿಜೀವನವು ಬಹುತೇಕ ಅಂತ್ಯಗೊಂಡಿತು. ನಂತರ ರಾಜ್ ಖಿನ್ನತೆಗೆ ಒಳಗಾದರು. 2000ರಲ್ಲಿ ಅವರನ್ನು ಮುಂಬೈನ ಬೈಕುಲ್ಲಾ ಮಾನಸಿಕ ಆಶ್ರಯಕ್ಕೆ ಸೇರಿಸಲಾಗಿದ್ದು, ಅಂದಿನಿಂದ ಕಣ್ಮರೆಯಾಗಿದ್ದಾರೆ. ಆತನ ಪುತ್ರಿ ಮನೆಯವರು ಅವರನ್ನು ಹುಡುಕುತ್ತಿದ್ದಾರೆ ಎಂದು ಹೇಳಿದ್ದು, ನಟನ ಸ್ಥಳವು ಸದ್ಯಕ್ಕೆ ತಿಳಿದಿಲ್ಲ.

Read More

ವಿಪಕ್ಷ ನಾಯಕರಾಗುವುದಕ್ಕೆ ಬಿಜೆಪಿಯವರೆಲ್ಲಾ ಅಸಮರ್ಥರಾ? ಬಸವರಾಜ ಬೊಮ್ಮಾಯಿ, ಆರ್. ಅಶೋಕ್, ಅಶ್ವತ್ಥ ನಾರಾಯಣ, ಸುನೀಲ್ ಕುಮಾರ್, ಯತ್ನಾಳ್ ಇವರೆಲ್ಲರೂ ಅಸಮರ್ಥರಾ? ಇವರಿಗೆ ವಿರೋಧ ಪಕ್ಷದ ನಾಯಕನಾಗುವ ಸಾಮರ್ಥ್ಯ ಇಲ್ವಾ? ಈಗ ಹೆಚ್. ಡಿ. ಕುಮಾರಸ್ವಾಮಿ ವಿಪಕ್ಷ ನಾಯಕ ಅಂತ ಬಿಂಬಿಸಿದ್ದಾರೆ ಎಂದುಸಚಿವ ಎಂ. ಬಿ. ಪಾಟೀಲ್ ಪ್ರಶ್ನಿಸಿದ್ದಾರೆ. ಹಾಗೆ ಡಿ.ಕೆ. ಶಿವಕುಮಾರ್ ಸಿಎಂ ಆದರೆ ನಾವು ಬೆಂಬಲ ಕೊಡುತ್ತೇವೆ ಎಂಬ ಹೆಚ್. ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ಎಂ. ಬಿ. ಪಾಟೀಲ್ ಟಾಂಗ್ ಕೊಟ್ಟಿದ್ದಾರೆ.

Read More

ತನಿಖೆಯಲ್ಲಿ ಪ್ರಗತಿ ಕಾಣದೇ ತೆರೆಗೆ ಸರಿದಿದ್ದ ಹಳೇ ಪ್ರಕರಣಗಳಿಗೆ ಮರುಜೀವ ನೀಡಲಾಗಿದ್ದು, ಒಂದೇ ವಾರದಲ್ಲಿ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಪರಾಧ ಕೃತ್ಯಗಳು ನಡೆದರೂ ಆರೋಪಿಗಳು ಪತ್ತೆಯಾಗಿರಲಿಲ್ಲ. ಹಲವು ವರ್ಷಗಳ ಹಳೇ ಪ್ರಕರಣಗಳ ಮರು ತನಿಖೆ ನಡೆಸಲು ಕಮಿಷನರ್ ಅವರು ಸೂಚಿಸಿದ್ದರು. ‘ಅದರಂತೆ, ಮರು ತನಿಖೆ ನಡೆಸಲಾಗುತ್ತಿದೆ. ಇದೇ ವಾರದಲ್ಲಿ 20 ಪ್ರಕರಣಗಳನ್ನು ಭೇದಿಸಲಾಗಿದೆ. ಈ ಪೈಕಿ 10 ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

Read More

ರೈಲಿನಿಂದ ಹಿಂತಿರುಗುವಾಗ ಪ್ಲಾಟ್‌ ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿ ತಂದೆ ದುರಂತ ಅಂತ್ಯ ಕಂಡಿದ್ದಾರೆ. ಆಗ್ರಾದ ರಾಜಾ ಕಿ ಮಂಡಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಆಗ್ರಾದ ಖ್ಯಾತ ಲ್ಯಾಪರೊಸ್ಕೋಪಿಕ್ ಸರ್ಜನ್ ಡಾ. ಲಖನ್ ಸಿಂಗ್ ಗಲಾವ್ ನಿಧನರಾದರು. ಡಾ. ಲಖನ್ ತಮ್ಮ ಮಗಳನ್ನು ರೈಲು ಹತ್ತಿಸಿ ಬಿಡಲು ನಿಲ್ದಾಣಕ್ಕೆ ಬಂದಿದ್ದರು. ಮಗಳನ್ನು ಹತ್ತಿಸಿಕೊಂಡು ರೈಲು ಚಲಿಸುತ್ತಿದ್ದಾಗ, ಚಲಿಸುತ್ತಿದ್ದ ರೈಲಿನಿಂದ ಹೊರಬರಲು ಯತ್ನಿಸಿದಾಗ ತಂದೆಗೆ  ಅವಘಡ ಸಂಭವಿಸಿದೆ. ಪ್ಲಾಟ್‌ ಫಾರ್ಮ್ ಮತ್ತು ರೈಲಿನ ನಡುವೆ ಲಖನ್ ಸಿಕ್ಕಿ ಹಾಕಿಕೊಂಡಿದ್ದರು. ಈ ದುರಂತ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಹೊರ ಬಂದಿವೆ.

Read More

ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನೂನ್ ಏರ್ ಇಂಡಿಯಾ ವಿಮಾನಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಸದಂತೆ ಸಿಖ್ಖರು ಎಚ್ಚರಿಸಿದ್ದಾರೆ ಏರ್ ಇಂಡಿಯಾ ಹೊಸ ವೀಡಿಯೋ ಬಿಡುಗಡೆ ಮಾಡಿದ್ದು, ಕಾರ್ಯಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ನವೆಂಬರ್ 19 ರಂದು ಏರ್ ಇಂಡಿಯಾ ಮೂಲಕ ಪ್ರಯಾಣಿಸದಂತೆ ನಾವು ಸಿಖ್ ಜನರನ್ನು ವಿನಂತಿಸುತ್ತೇವೆ. ಜಾಗತಿಕ ಮಟ್ಟದಲ್ಲಿ ನಿರ್ಬಂಧಗಳು ಇರುತ್ತವೆ. ನವೆಂಬರ್ 19 ರಂದು ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ, ಇಲ್ಲದಿದ್ದರೆ ನಿಮ್ಮ ಜೀವಕ್ಕೆ ಅಪಾಯವಿದೆ ಎಂದು ಪನ್ನೂನ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ. ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣವನ್ನು ನವೆಂಬರ್ 19 ರಂದು ಮುಚ್ಚಲಾಗುವುದು ಮತ್ತು ಮರುನಾಮಕರಣ ಮಾಡಲಾಗುವುದು ಎಂದು ಪನ್ನುನ್ ಹೇಳಿದ್ದಾರೆ. ಅದೇ ದಿನ ವಿಶ್ವಕಪ್ ಕ್ರಿಕೆಟ್‌ ನ ಫೈನಲ್ ಪಂದ್ಯ ನಡೆಯಲಿದೆ ಎಂದು ಪನ್ನುನ್ ಉಲ್ಲೇಖಿಸಿರುವುದು ಗಮನಾರ್ಹ. ಪಂಜಾಬ್ ವಿಮೋಚನೆಗೊಂಡಾಗ ಐಜಿಐ…

Read More