Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಬೆಂಗಳೂರಿನಲ್ಲಿ ಸರ್ಕಾರಿ ಅಧಿಕಾರಿ ಹತ್ಯೆ ಕರ್ನಾಟಕ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಉಪನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರತಿಮಾ(37) ಸುಬ್ರಮಣ್ಯ ಪೋರಾದ ಅವರ ಮನೆಯಲ್ಲಿ ಚಾಕುವಿನಿಂದ ಇರಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ ಐದು ವರ್ಷಗಳಿಂದ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದಲ್ಲಿ ಪ್ರತಿಮಾ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ಹಿಂತಿರುಗಿ ಅಂದು ರಾತ್ರಿ ಹಾಗೂ ಮರುದಿನ ಬೆಳಗ್ಗೆ ಪ್ರತಿಮಾಗೆ ದೂರವಾಣಿ ಕರೆ ಮಾಡಿದರೂ ಅಣ್ಣ ಸ್ಪಂದಿಸದ ಹಿನ್ನೆಲೆಯಲ್ಲಿ ಮನೆಗೆ ಬಂದು ಪರಿಶೀಲಿಸಿದಾಗ ಮೃತದೇಹ ಪತ್ತೆಯಾಗಿದೆ. ಫೋರೆನ್ಸಿಕ್ ಮತ್ತು ತಾಂತ್ರಿಕ ತಂಡಗಳು ಸ್ಥಳದಲ್ಲಿದ್ದು, ಮೂರು ವಿಶೇಷ ತಂಡಗಳನ್ನು ಕೂಲಂಕಷ ತನಿಖೆಗೆ ನಿಯೋಜಿಸಲಾಗಿದೆ ಎಂದು ಬೆಂಗಳೂರು ನಗರದ ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ಶಹಾಪುರವಾಡ್ ತಿಳಿಸಿದ್ದಾರೆ. ಯಾವುದೇ ಆಭರಣ ಅಥವಾ ಬೆಲೆಬಾಳುವ ವಸ್ತುಗಳು ನಷ್ಟವಾಗಿಲ್ಲ. ತನಿಖೆ ಮುಂದುವರೆದಂತೆ ಕೊಲೆಗೆ ಕಾರಣ ತಿಳಿದು ಬರಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಬಂಡೀಪುರ ಅರಣ್ಯದಲ್ಲಿ ಕಳ್ಳ ಬೇಟೆಗಾರರು ಮತ್ತು ಅರಣ್ಯಾಧಿಕಾರಿಗಳ ನಡುವೆ ಎನ್ಕೌಂಟರ್. ಅರಣ್ಯಾಧಿಕಾರಿಗಳು ಮತ್ತು ಕಳ್ಳ ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಭೀಮನಬೀಡು ಮೂಲದ ಮನು ಮೃತರು. ಅವರಿಗೆ 27 ವರ್ಷ ವಯಸ್ಸಾಗಿತ್ತು. ಹತ್ತರ ಗುಂಪು ಜಿಂಕೆ ಬೇಟೆಗೆಂದು ಕಾಡಿಗೆ ಬಂದಿತ್ತು. ಇದರಲ್ಲಿ ಮನು ಕೂಡ ಸೇರಿದ್ದನು. ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ರಾತ್ರಿ ಕಾಡಿನಲ್ಲಿ ಗುಂಡಿನ ದಾಳಿ ನಡೆದಿದೆ ಎಂಬ ಮಾಹಿತಿ ಕರ್ನಾಟಕ ಪೊಲೀಸರಿಗೆ ಇಂದು ಮುಂಜಾನೆಯೇ ಸಿಕ್ಕಿದೆ. ಪೊಲೀಸರು ಅರಣ್ಯದ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಿಗೆ ಆಗಮಿಸಿ ಅರಣ್ಯ ಇಲಾಖೆಯನ್ನು ಸಂಪರ್ಕಿಸಿದ ಬಳಿಕ ಗುಂಡಿನ ದಾಳಿ ನಡೆದಿರುವುದು ದೃಢಪಟ್ಟಿದೆ. ರಾತ್ರಿ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆ ಬೇಟೆಗೆ ತೆರಳಿದ್ದ 10 ಮಂದಿಯ ತಂಡವನ್ನು ಹಿಡಿಯಲು ಹರಸಾಹಸ ಪಡುತ್ತಿದ್ದರು. ಇದೇ ವೇಳೆ ಅರಣ್ಯಾಧಿಕಾರಿಗಳು ಕಳ್ಳ ಬೇಟೆಗಾರರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಬೇಟೆಗಾರರು ಪ್ರತಿಯಾಗಿ ಗುಂಡು ಹಾರಿಸಿದ್ದಾರೆ. ಈ ಮಧ್ಯೆ, ಮನು ಕೊಲ್ಲಲ್ಪಟ್ಟನು.…
ವಿವಾದಿತ ಮಹಾದೇವ್ ಬೆಟ್ಟಿಂಗ್ ಆಪ್ ಅನ್ನು ಕೇಂದ್ರ ಐಟಿ ಸಚಿವಾಲಯ ನಿಷೇಧಿಸಿದೆ. ಇಡಿ ಮನವಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಐಟಿ ಸಚಿವಾಲಯ ಮಾಹಿತಿ ನೀಡಿದೆ. ಇಡಿ ತನಿಖೆಯಲ್ಲಿ ಆ್ಯಪ್ ನ ಅಕ್ರಮ ಕಾರ್ಯಾಚರಣೆ ಪತ್ತೆಯಾಗಿತ್ತು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹದೇವ್ ಆ್ಯಪ್ ಮಾಲೀಕರ ವಿರುದ್ಧ ಇಡಿ ತನಿಖೆ ಪ್ರಗತಿಯಲ್ಲಿದೆ. ಛತ್ತೀಸ್ ಗಢ ಚುನಾವಣೆಯಲ್ಲಿ ಭಾರೀ ಸಂಚಲನ ಮೂಡಿಸಿದ ವಿಷಯಗಳಲ್ಲಿ ಮಹದೇವ ಬೆಟ್ಟಿಂಗ್ ಆಪ್ ಪ್ರಕರಣವೂ ಒಂದು. ಆ್ಯಪ್ ಪ್ರವರ್ತಕರು ಮುಖ್ಯಮಂತ್ರಿ ಭೂಪೇಶ್ ಬಾಗಲ್ ಅವರಿಗೆ 508 ಕೋಟಿ ರೂಪಾಯಿ ಪಾವತಿಸಿದ್ದಾರೆ ಎಂದು ಇಡಿ ಹೇಳಿಕೊಂಡಿದೆ. ಮಹದೇವ್ ಸೇರಿದಂತೆ 22 ಆಪ್ಗಳನ್ನು ಕೇಂದ್ರ ನಿಷೇಧಿಸಿದೆ. ಇಂತಹ ಪ್ಲಾಟ್ ಫಾರ್ಮ್ ಗಳನ್ನು ನಿರ್ಬಂಧಿಸುವಂತೆ ನಿರ್ದೇಶಿಸುವ ಎಲ್ಲಾ ಅಧಿಕಾರವನ್ನು ಹೊಂದಿದ್ದರೂ ಛತ್ತೀಸ್ ಗಢ ಸರ್ಕಾರವು ಆ್ಯಪ್ ಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ. reddiannaprestopro ಸೇರಿದಂತೆ 22 ಅಪ್ಲಿಕೇಶನ್ ಗಳನ್ನು…
ವಾಯು ಮಾಲಿನ್ಯವು ಹದಗೆಡುತ್ತಿರುವ ಕಾರಣ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP 4) ಜಾರಿಗೊಳಿಸಲಾಗಿದೆ. ಅಗತ್ಯ ವಸ್ತುಗಳನ್ನು ಸಾಗಿಸುವ ಟ್ರಕ್ ಗಳನ್ನು ಹೊರತುಪಡಿಸಿ ದೆಹಲಿಯ ಪ್ರವೇಶವನ್ನು ಸ್ಥಗಿತಗೊಳಿಸಲಾಗಿದೆ. ಇದು ತೀವ್ರ ಪ್ಲಸ್ ವರ್ಗದಲ್ಲಿಯೇ ಉಳಿದಿರುವುದರಿಂದ ದೆಹಲಿ ಸರ್ಕಾರ ಕಠಿಣ ನಿರ್ಬಂಧಗಳನ್ನು ವಿಧಿಸಲು ನಿರ್ಧರಿಸಿದೆ. ಗ್ರೇಟರ್ ನೋಯ್ಡಾ, ಗಾಜಿಯಾಬಾದ್, ಫರಿದಾಬಾದ್, ಗುರುಗ್ರಾಮ್ ನಲ್ಲಿ ವಾಯು ಮಾಲಿನ್ಯ ತೀವ್ರವಾಗಿದೆ. ದೆಹಲಿಯ ಪ್ರಾಥಮಿಕ ಶಾಲೆಗಳನ್ನು ನವೆಂಬರ್ 10 ರವರೆಗೆ ಮುಚ್ಚಲಾಗುವುದು ಮತ್ತು ವಾಯುಮಾಲಿನ್ಯ ಮಟ್ಟವು ಹೆಚ್ಚಿರುವುದರಿಂದ 6-12 ತರಗತಿಗಳು ಆನ್ ಲೈನ್ ನಲ್ಲಿರುತ್ತವೆ ಎಂದು ಶಿಕ್ಷಣ ಸಚಿವ ಅತಿಶಿ ಹೇಳಿದ್ದಾರೆ. ದೀಪಾವಳಿ ಹಿನ್ನೆಲೆಯಲ್ಲಿ ಹೆಚ್ಚಿನ ನಿರ್ಬಂಧಗಳನ್ನು ಹೇರಲಾಗುವುದು ಎಂದು ಸರ್ಕಾರ ಘೋಷಿಸಿದೆ. ವಾಯು ಗುಣಮಟ್ಟ ನಿರ್ವಹಣೆಗೆ ಆಯೋಗವು ಗಾಳಿಯ ಗುಣಮಟ್ಟ ಸುಧಾರಿಸಲು ಸಮಯ ತೆಗೆದುಕೊಳ್ಳುತ್ತದೆ ಎಂದು ಹೇಳಿದೆ.
ಚಿಕ್ಕಬಳ್ಳಾಫುರ: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ ಎಂಬುವ ರಮೇಶ ಜಾರಕಿಹೊಳೆ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೇಸ್ ಗೆ ಅಜೀರ್ಣವಾಗುವಷ್ಟು ಬಹುಮತ ಇದೆ. ಇದು ಸಾಲದು ಅಂತ ಬೇರೆ ಬೇರೆ ಪಕ್ಷಗಳ ಶಾಸಕರ ಸಂಪರ್ಕದಲ್ಲಿ ಇರುವುದಾಗಿ ಹೇಳಿದ್ದಾರೆ. ಕಾಂಗ್ರೇಸ್ ಗೆ ಬೇರೆಯವರ ಹಂಗು ಯಾಕೆ? ಎಂದು ಮಾಜಿ ಸಚಿವ ಸಿ.ಟಿ. ರವಿ ಪ್ರಶ್ನಿಸಿದರು.
ಬೆಂಗಳೂರು: ದೇವನಹಳ್ಳಿ ಬಳಿ ಇರುವ ಅರಣ್ಯ ಪ್ರದೇಶದಲ್ಲಿ 400 ವರ್ಷಗಳಷ್ಟು ಪುರಾತನವಾದ ಹುಣಸೆ ಮರಗಳಿದ್ದು, ಈ ಪ್ರದೇಶವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಿ, ಸಂರಕ್ಷಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ತಮ್ಮ ಕಚೇರಿಯಲ್ಲಿಂದು ನಡೆದ ಜೀವ ವೈವಿಧ್ಯ ಮಂಡಳಿಯ 54ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿಯೇ ಈ ಹುಣಸೆ ತೋಪು ಇರುವ ಕಾರಣ ಈ ವೃಕ್ಷಗಳನ್ನು ಸಂರಕ್ಷಿಸಿ ಅಭಿವೃದ್ಧಿ ಪಡಿಸಿದರೆ ಉತ್ತಮ ಪ್ರವಾಸಿ ತಾಣವಾಗುವುದರಲ್ಲಿ ಸಂದೇಹವಿಲ್ಲ ಎಂದು ಅಭಿಪ್ರಾಯಪಟ್ಟರು. ಅವಧಿ ವಿಸ್ತರಣೆ : ಕರ್ನಾಟಕದಲ್ಲಿ ಗಿಡಮೂಲಿಕೆ ಮತ್ತು ವಿವಿಧ ಜೀವಿ ವೈವಿಧ್ಯತೆಯ ಸಂಪನ್ಮೂಲವನ್ನು ಬಳಕೆ ಮಾಡಿಕೊಂಡು ಉತ್ಪನ್ನ ತಯಾರಿಸುವ ಕಂಪನಿಗಳು ಕರ್ನಾಟಕ ಜೀವ ವೈವಿಧ್ಯ ಮಂಡಳಿಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಇನ್ನೂ ಹಲವು ಕಂಪನಿಗಳು ನೋಂದಣಿ ಮಾಡಿಕೊಳ್ಳದ ಕಾರಣ, ಅವಧಿ ವಿಸ್ತರಿಸಿ 60 ದಿನಗಳ ಕಾಲಾವಕಾಶ ನೀಡಲು ತೀರ್ಮಾನಿಸಲಾಗಿದ್ದು, ಕಂಪನಿಗಳು ಇದರ ಸದುಪಯೋಗ ಪಡೆಯುವಂತೆ ಅರಿವು ಮೂಡಿಸಲು…
ಬೆಳಗಾವಿ: ವಿಶ್ವ ಖಾತ್ಯ ಹಾಗೂ ಗಿನಿಸ್ ದಾಖಲೆ ಸೃಷ್ಟಿಸಿದ ಪುಟ್ಬಾಲ್ ಆಟಗಾರ ಜಿಮ್ಮಿ ಕ್ಯಾಟ್ ಶಾಲಾ ಮಕ್ಕಳಿಗೆ ಫುಟ್ಬಾಲ್ ತರಬೇತಿ ಹಾಗೂ ಕ್ರೀಡೆಯ ಕುರಿತು ಆಸಕ್ತಿ ಮೂಡಿಸಲು ಪೋತದಾರ್ ಶಿಕ್ಷಣ ಸಂಸ್ಥೆ ಶಾಲೆ ಮಕ್ಕಳಿಗೆ ಫುಟ್ಬಾಲ್ ತರಬೇತಿ ನೀಡುತ್ತಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿನ್ಸಿಪಾಲ್ ಅವರು, ಪ್ಯಾನಿಕ್ ಇಂಡಿಯಾ 140 ಅಂತರಾಷ್ಟ್ರೀಯ ಮಟ್ಟದಲ್ಲಿ ಶಾಲೆಗಳನ್ನು ಹೊಂದಿದ್ದು, ಅದರಲ್ಲಿ ಬೆಳಗಾವಿ ಕೂಡ ಒಂದು. 1927 ರಲ್ಲಿ ಸ್ಥಾಪನೆಗೊಂಡ ಪೋತದಾರ್ ಅಂತರಾಷ್ಟ್ರೀಯ ಶಾಲೆ ಶತಮಾನೋತ್ಸವದ ಸನ್ನಿಯದಲ್ಲಿದ್ದೇವೆ, ಎಲ್ಲಾ ರಂಗದಲ್ಲಿ ನಮ್ಮ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು ಅದರಲ್ಲಿ ವಿಶೇಷವಾಗಿ ಕ್ರೀಡೆಗೆ ಹೆಚ್ಚಿನ ಆಸಕ್ತಿ ನೀಡಿದ್ದೇವೆ. ಖಾತ್ಯ ಕ್ರೀಡಾಪಟುಗಳಾದ ಜಿಮ್ಮಿ ಕ್ಯಾಟ್ಸ ಅವರಿಂದ ನಮ್ಮ ಶಾಲಾ ಮಕ್ಕಳು ಫುಟ್ಬಾಲ್ ತರಬೇತಿ ಪಡೆಯುತ್ತಿದ್ದಾರೆ ಎಂದರು. ಜಿಮ್ಮಿ ಕ್ಯಾಟ್ಸ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಮಕ್ಕಳೊಂದಿಗೆ ಫುಟ್ಬಾಲ್ ಕುರಿತು ಹೆಚ್ಚಿನ ವಿಷಯಗಳನ್ನು ಹಂಚಿಕೊಳ್ಳುತ್ತಿದ್ದೇನೆ ನನಗೆ ಇಲ್ಲಿ ಸಂತೋಷವಾಗಿದೆ ಮಕ್ಕಳೊಂದಿಗೆ ಆಟವಾಡುತ್ತಾ ಇದ್ದೇನೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಪೀಟರ್ ಐಕಿಡಿ ಬಿಲನ್ವೋ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿ ಪರಿಚಿತರಿಗೆ, ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ. ಬಂಧಿತನಿಂದ 5.15 ಲಕ್ಷ ಮೌಲ್ಯದ ಎಂಡಿಎಂಎ ಕ್ರಿಸ್ಟೆಲ್ ಮಾತ್ರೆ ವಶಕ್ಕೆ ಪಡೆಯಲಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ: 7 ವರ್ಷದ ಬಾಲಕಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಕಾಮುಕ ಶಿಕ್ಷಕನ್ನು ಬಂಧಿಸಿರುವ ಘಟನೆ ದಾವಣಗೆರೆ ನಗರದ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ಅಪ್ರಾಪ್ತೆ ಮೇಲೆ ಕಾಮುಕ ಶಿಕ್ಷಕ ನಿರಂತರ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ ತುತ್ತಾದಾಗ ಪ್ರಕರಣ ಬೆಳಕಿಗೆ ಬಂದಿದೆ. ದಾವಣಗೆರೆ ನಗರದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಹಲವು ದಿನಗಳಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಯಾರಿಗೂ ಹೇಳದಂತೆ ಆಕೆಗೆ ಬೆದರಿಕೆ ಹಾಕಿದ್ದ. ಆದ್ರೆ ಕಳೆದ ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ತಪಾಸಣೆ ವೇಳೆ ಆಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ.
ಹಾವೇರಿ: ಜಿಲ್ಲೆ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ಸ್ವಂತ ಅಣ್ಣನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿ ಮೈದುನ ಪರಾರಿಯಾದ ಘಟನೆ ನಡೆದಿದೆ. ಗೀತಾ ಮರಿಗೌಡ(32), ಮಕ್ಕಳಾದ ಅಕುಲ್(10), ಅಂಕಿತಾ(7) ಕೊಲೆಯಾದವರು. ಮೂವರನ್ನು ಕೊಲೆ ಮಾಡಿ ಮೈದುನ ಕುಮಾರಗೌಡ್(35) ಪರಾರಿಯಾಗಿದ್ದಾನೆ. ಮೃತ ಗೀತಾ ಗಂಡ ಹೊನ್ನೆಗೌಡ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ಥಳಕ್ಕೆ ಹಾನಗಲ್ ಠಾಣೆ ಸಿಪಿಐ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.