Author: admin

ನಟ ದರ್ಶನ್ ಮನೆ ನಾಯಿ ಮಹಿಳೆಗೆ ಕಚ್ಚಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ಗೆ ನೋಟಿಸ್ ನೀಡಲು ಆರ್.ಆರ್.ನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಈಗಾಗಲೇ ಪೊಲೀಸರು ದರ್ಶನ್ ಅವರ ಮನೆಯಲ್ಲಿನ ವ್ಯಕ್ತಿಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ.  ನಟ ದರ್ಶನ್  ಪ್ರಕರಣದ ಎರಡನೇ ಆರೋಪಿಯಾಗಿರುವ ಹಿನ್ನೆಲೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಿದ್ದಾರೆ.

Read More

ಛತ್ತೀಸ್‌ ಗಢದಲ್ಲಿ ಬಿಜೆಪಿ ನಾಯಕ ರತನ್ ದುಬೆ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾವೋವಾದಿಗಳ ದಾಳಿಯಲ್ಲಿ ರತನ್ ದುಬೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಾರಾಯಣಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹತ್ಯೆಯ ಹಿಂದೆ ಮಾವೋವಾದಿಗಳ ದಾಳಿ ಇದೆಯೇ ಎಂಬುದು ತನಿಖೆಯ ನಂತರವಷ್ಟೇ ದೃಢಪಡಬಹುದು ಎಂದು ಬಸ್ತಾರ್ ಐಜಿ ಹೇಳಿದ್ದಾರೆ. ಬಿಜೆಪಿ ನಾಯಕ ರತನ್ ದುಬೆ ಅವರನ್ನು ಚುನಾವಣೆಗೆ ಮೂರು ದಿನಗಳ ಮೊದಲು ಹತ್ಯೆ ಮಾಡಲಾಗಿದೆ. ರತನ್ ದುಬೆ ಅವರ ಮೃತದೇಹವನ್ನು ಛತ್ತೀಸ್‌ ಗಢದ ನಾರಾಯಣಪುರದ ಜಿಲ್ಲಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

Read More

ಭಾರತ ಇಂದು ದುರ್ಬಲ ರಾಷ್ಟ್ರವಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಜಗತ್ತಿನ ಯಾವುದೇ ಶಕ್ತಿ ಭಾರತಕ್ಕೆ ಬೆದರಿಕೆ ಹಾಕಲು ಧೈರ್ಯ ಮಾಡುವುದಿಲ್ಲ. ಯಾರಾದರೂ ಯಾವುದೇ ದುಷ್ಕೃತ್ಯವನ್ನು ಮಾಡಲು ಪ್ರಯತ್ನಿಸಿದರೆ, ಭಾರತವು ಅವರನ್ನು ತೊಡೆದುಹಾಕಲು ಸಾಧ್ಯವಾಗುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿದರು. ಮಧ್ಯಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿಯ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಭಾರತವನ್ನು ವಿದೇಶಿಗರು ದುರ್ಬಲ ರಾಷ್ಟ್ರವಾಗಿ ಕಾಣುತ್ತಿದ್ದರು. ಜಗತ್ತು ನಮ್ಮ ಮಾತನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಆದರೆ ಇಂದು ಭಾರತದ ಹೆಮ್ಮೆ ಪ್ರಪಂಚದಾದ್ಯಂತ ಏರುತ್ತಿದೆ ಎಂದು ರಕ್ಷಣಾ ಸಚಿವರು ಹೇಳಿದರು. ಇಂದು, ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ಮಾತುಗಳನ್ನು ಕೇಳಲು ಜಗತ್ತು ಕಾಯುತ್ತಿದೆ. ಈಗ ಭಾರತ ದುರ್ಬಲ ರಾಷ್ಟ್ರವಲ್ಲ. ಜಗತ್ತಿನ ಯಾವುದೇ ಶಕ್ತಿ ಭಾರತಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ. ಯಾರಾದರೂ ಯಾವುದೇ ನೀಚ ಕೃತ್ಯಕ್ಕೆ ಪ್ರಯತ್ನಿಸಿದರೆ, ಭಾರತವು ಗಡಿಯನ್ನು ಲೆಕ್ಕಿಸದೆ ಅವರನ್ನು ನಿರ್ನಾಮ ಮಾಡಬಹುದು ಎಂದರು.

Read More

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ತೆಲಂಗಾಣ ಮೂಲದ 19 ವರ್ಷದ ಯುವಕನನ್ನು ಬಂಧಿಸಲಾಗಿದೆ. ಕಳೆದ ವಾರ ಅಂಬಾನಿಗೆ ಮೂರು ಬೆದರಿಕೆ ಇ-ಮೇಲ್‌ಗಳು ಬಂದಿದ್ದವು. ಪ್ರತಿ ಬಾರಿ ಬೆದರಿಕೆ ಸಂದೇಶದಲ್ಲಿ ಭಾರಿ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟಿದ್ದ. ಮುಂಬೈ ಗಾಂದೇವಿ ಪೊಲೀಸರು ಗಣೇಶ್ ರಮೇಶ್ ವನಪರ್ಧಿ (19) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನವೆಂಬರ್ 8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆತನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 28 ರಂದು ಮೊದಲ ಇಮೇಲ್ ಬಂದಿದೆ. ಅಕ್ಟೋಬರ್ 31ರಿಂದ ನವೆಂಬರ್ 1ರ ನಡುವೆ ಮತ್ತೆರಡು ಬೆದರಿಕೆ ಸಂದೇಶಗಳು ಬಂದಿದ್ದವು. ತನ್ನನ್ನು ಶಹದಾಬ್ ಖಾನ್ ಎಂದು ಗುರುತಿಸಿಕೊಂಡ ವ್ಯಕ್ತಿಯೊಬ್ಬರು ಈ ಸಂದೇಶವನ್ನು ಕಳುಹಿಸಿದ್ದಾರೆ. 20 ಕೋಟಿ ನೀಡದಿದ್ದರೆ ಮುಖೇಶ್ ಅಂಬಾನಿ ಅವರನ್ನು ಕೊಲ್ಲುವುದಾಗಿ ಮೊದಲ ಇಮೇಲ್‌ನಲ್ಲಿ ಬೆದರಿಕೆ ಹಾಕಲಾಗಿತ್ತು. ನಂತರದ ಇಮೇಲ್‌ಗಳಲ್ಲಿ ಮೊತ್ತವು 200 ಕೋಟಿ ಮತ್ತು…

Read More

ಪರೀಕ್ಷಾ ಕೊಠಡಿ ಪ್ರವೇಶಿಸುವ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಗುಜರಾತ್ ನ ರಾಜ್ ಕೋಟ್ ನಲ್ಲಿ ಈ ಘಟನೆ ನಡೆದಿದೆ. ಶಾಂತಬಾ ಗಜೇರ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾಕ್ಷಿ ರಾಜೋಸರ ಮೃತಪಟ್ಟವಳು. ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪರೀಕ್ಷಾ ಕೊಠಡಿಗೆ ಪ್ರವೇಶಿಸುತ್ತಿದ್ದಾಗ ಸಾಕ್ಷಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಉಳಿಸಲು ಸಾಧ್ಯವಾಗಲಿಲ್ಲ. ಸಾವಿಗೆ ಹೃದಯಾಘಾತ ಕಾರಣ ಎಂದು ವರದಿಯಾಗಿದೆ. ಗುಜರಾತಿನಲ್ಲಿ ಹೃದಯ ಸಂಬಂಧಿ ಸಾವಿನ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ರಾಜ್ಯ ಆರೋಗ್ಯ ಸಚಿವ ಋಷಿಕೇಶ್ ಪಟೇಲ್ ಅವರು ಪರಿಸ್ಥಿತಿಯನ್ನು ನಿರ್ಣಯಿಸಲು ವೈದ್ಯಕೀಯ ತಜ್ಞರೊಂದಿಗೆ ವಿಶೇಷವಾಗಿ ಹೃದ್ರೋಗ ತಜ್ಞರೊಂದಿಗೆ ಸಭೆ ಕರೆದಿದ್ದರು.

Read More

ಬೆಟ್ಟಿಂಗ್ ಆಪ್ ಪ್ರಕರಣದಲ್ಲಿ ಛತ್ತೀಸ್ ಗಢ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಾದೇವ್ ಗೇಮಿಂಗ್ ಆ್ಯಪ್ ಹಗರಣ ಪ್ರಕರಣದ ಆರೋಪಿಗಳೊಂದಿಗೆ ಮುಖ್ಯಮಂತ್ರಿ ಭೂಪೇಶ್ ಬಾಗಲ್ ಅವರ ಸಂಪರ್ಕವನ್ನು ವಿವರಿಸಬೇಕು. ಛತ್ತೀಸ್‌ಗಢ ಚುನಾವಣಾ ಪ್ರಚಾರಕ್ಕಾಗಿ ಬೆಟ್ಟಿಂಗ್ ಆಪ್ ಪ್ರವರ್ತಕರು ನೀಡಿದ ಹವಾಲಾ ಹಣವನ್ನು ಕಾಂಗ್ರೆಸ್ ಬಳಸುತ್ತಿದೆ ಎಂದು ಮೋದಿ ಆರೋಪಿಸಿದ್ದಾರೆ. ಛತ್ತೀಸ್‌ಗಢದ ದುರ್ಗ್‌ನಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಛತ್ತೀಸ್‌ಗಢ ಸರ್ಕಾರ ಜನರನ್ನು ಲೂಟಿ ಮಾಡಿ ವಂಚಿಸಿದೆ. ಮತ್ತು ನಿಮ್ಮನ್ನು ದೋಚಲು ಇತರರಿಗೆ ಅವಕಾಶವನ್ನು ನೀಡುವುದು. ಭ್ರಷ್ಟಾಚಾರದ ಮೂಲಕ ಬೊಕ್ಕಸ ತುಂಬಿಸುವುದೇ ಕಾಂಗ್ರೆಸ್ ಪಕ್ಷದ ಗುರಿ. ಇದಕ್ಕಾಗಿ ಅವರು ‘ಮಹಾದೇವ’ನ ಹೆಸರನ್ನೂ ಬಿಟ್ಟಿಲ್ಲ- ಮೋದಿ ಹೇಳಿದರು. ಎರಡು ದಿನಗಳ ಹಿಂದೆ ರಾಯಪುರದಲ್ಲಿ ಪ್ರಮುಖ ಕಾರ್ಯಾಚರಣೆ ನಡೆದಿದೆ. ಕರೆನ್ಸಿ ನೋಟುಗಳ ಭಾರೀ ಸಂಗ್ರಹ ಪತ್ತೆಯಾಗಿದೆ. ಈ ಹಣ ಜೂಜುಕೋರರು ಮತ್ತು ಬೆಟ್ಟಿಂಗ್‌ದಾರರಿಗೆ ಸೇರಿದ್ದು ಎಂದು ಜನರು ಹೇಳುತ್ತಾರೆ. ಈ ಲೂಟಿಯ ಹಣದಿಂದ ಕಾಂಗ್ರೆಸ್ ನಾಯಕರು ಮನೆ ತುಂಬಿಸಿಕೊಳ್ಳುತ್ತಿದ್ದಾರೆ. ಮಾಧ್ಯಮಗಳ…

Read More

ಮಣಿಪುರದಲ್ಲಿ. ಅಪರಿಚಿತ ಬಂದೂಕುಧಾರಿಗಳು ಮೈಥೆಯ್ ಸಂಘಟನೆಯ ನಾಯಕನ ಮೇಲೆ ದಾಳಿ ಮಾಡಿದ್ದಾರೆ. ಶುಕ್ರವಾರ ಬೆಳಗ್ಗೆ ಪಶ್ಚಿಮ ಇಂಫಾಲ್ ಜಿಲ್ಲೆಯಲ್ಲಿ ದಾಳಿ ನಡೆದಿದೆ ಎಂದು ವರದಿಯಾಗಿದೆ. ಮೈತೆಯ್ ಲೀಪುನ್ ಮುಖ್ಯಸ್ಥ ಮಾಯಾಂಗ್ಬಾಮ್ ಪ್ರಮೋತ್ ಸಿಂಗ್ ಮೇಲೆ ದಾಳಿ ಮಾಡಲಾಯಿತು. ಪ್ರಮೋತ್ ಸಿಂಗ್ ಮತ್ತು ಚಾಲಕ ಲಾಂಗೋಲ್‌ನಲ್ಲಿರುವ ಮೈಥೆ ಲೀಪುನ್ ಕಚೇರಿಯಲ್ಲಿ ಸಭೆಗೆ ಹೋಗುತ್ತಿದ್ದರು. ಲಾಂಗೋಲ್‌ನ ಆಸ್ಪತ್ರೆಯೊಂದರ ಬಳಿ ಕಾರಿನಲ್ಲಿ ಬಂದ ಬಂದೂಕುಧಾರಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಕೋರರು ಆರು ಬಾರಿ ಗುಂಡು ಹಾರಿಸಿದ್ದಾರೆ. ಇಬ್ಬರಿಗೂ ಗಾಯಗಳಾಗಿಲ್ಲ. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ. ಫೋರೆನ್ಸಿಕ್ ತಂಡವು ಸ್ಥಳದಿಂದ ಮಾದರಿಗಳು ಮತ್ತು ಇತರ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ದಾಳಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ

Read More

ಬಿಬಿಎಂಪಿಯ ಮುಖ್ಯ ಇಂಜಿನಿಯರಿಂಗ್ ಚೀಫ್ ಸರ್ಕಾರದ ದೊಡ್ಡ ವ್ಯಕ್ತಿಗಳ ಹೆಸರು ಹೇಳಿಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಆರೋಪ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಖಾಸಗಿಯಾಗಿ ಭೇಟಿಯಾಗಲು ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇಂಜಿನಿಯರಿಂಗ್ ಛಿಫ್ ಪ್ರಹ್ಲಾದ್ ಇರುವವರೆಗೂ ಬಿಬಿಎಂಪಿ ಉದ್ಧಾರ ಆಗಲ್ಲ. ಹಿರಿತನದ ಆಧಾರದ ಮೇಲೆ ಹಣ ಕೊಡುವಂತೆ ಮನವಿ ಮಾಡಿಕೊಂಡಿದ್ದೇನೆ. ಸ್ವಲ್ಪ ಹಣ ಬಿಡುಗಡೆ ಮಾಡಿದ್ದಾರೆ. ಇದರಿಂದ ನಮಗೆ ತೃಪ್ತಿ ಇದೆ ಎಂದು ಹೇಳುವುದಿಲ್ಲ, ಗುತ್ತಿಗೆದಾರರ ಹಣವನ್ನು ಪೂರ್ಣ ಪ್ರಮಾಣದಲ್ಲಿ ಕ್ಲಿಯರ್ ಮಾಡುವಂತೆ ಮನವಿ ಮಾಡಿದ್ದೇನೆ. ಡಿಸೆಂಬರ್‌ ಒಳಗಡೆ ಪ್ರಯತ್ನ ಮಾಡುತ್ತೇವೆಂದು ಹೇಳಿದ್ದಾರೆ. ಡಿಕೆ.ಶಿವಕುಮಾರ್ ಅವರನ್ನು ಖಾಸಗಿ ವಿಚಾರವಾಗಿ ಭೇಟಿ ಮಾಡಿದ್ದೇನೆ ಅಷ್ಟೇ” ಎಂದು  ತಿಳಿಸಿದರು. ಇದೇ ವೇಳೆ ಬಿಬಿಎಂಪಿ ಚೀಫ್ ಇಂಜಿನಿಯರ್ ಬಿ.ಎಸ್.ಪ್ರಹ್ಲಾದ್ ಮೇಲೆ ಕೆಂಪಣ್ಣ ಅಸಮಾಧಾನ ವ್ಯಕ್ತಪಡಿಸಿದರು. ಪ್ರಹ್ಲಾದ್ ಇರುವವರೆಗೂ ಬಿಬಿಎಂಪಿ ಉದ್ಧಾರ ಆಗಲ್ಲ ಎಂದು ಹೇಳಿದರು.

Read More

ನವದೆಹಲಿ: ಖ್ಯಾತ ಯೂಟ್ಯೂಬರ್ ಹಾಗೂ ಬಿಗ್ ಬಾಸ್ ಖ್ಯಾತಿಯ ಎಲ್ವಿಶ್ ಯಾದವ್ ಹಾವು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿದ್ದಾರೆ. ಡ್ರಗ್ ಕಾರ್ಟೆಲ್ ತನಿಖೆ ನಡೆಸುತ್ತಿರುವ ಸಂಸ್ಥೆ ತನ್ನ ತನಿಖೆಯಲ್ಲಿ ಹಾವುಗಳ ಕಳ್ಳಸಾಗಣೆ ಮತ್ತು ಅವುಗಳ ವಿಷದಿಂದ ತಯಾರಿಸಿದ ಮಾದಕವಸ್ತುಗಳ ಬಗ್ಗೆ ದೊಡ್ಡ ರಹಸ್ಯ ಬಹಿರಂಗಪಡಿಸಿದೆ. ಮಾದಕ ವ್ಯಸನಿಗಳು ಏಜೆನ್ಸಿಯನ್ನು ವಂಚಿಸಲು ವಿಶೇಷ ಕೋಡ್ ಪದಗಳನ್ನು ಬಳಸುತ್ತಾರೆ ಎಂದು ತನಿಖೆಯ ವೇಳೆ ಏಜೆನ್ಸಿಗಳಿಗೆ ತಿಳಿದು ಬಂದಿದೆ. ಯಾವ ಕೋಡ್‌ ವರ್ಡ್‌ಗಳನ್ನು ಬಳಸಲಾಗಿದೆ? ರಾಜ: ನಾಗರ ಹಾವು ವೈಟ್ ಕಿಂಗ್: ವಿಷದಿಂದ ಮಾಡಿದ ಪುಡಿ ಅಥವಾ ಟ್ಯಾಬ್ಲೆಟ್ ವಾಟರ್ ಕಿಂಗ್: ವಿಷದ ಹನಿ ರಾಜ: 24 ಸ್ನ್ಯಾಕ್ ಬೈಟ್ಸ್  ಥಾಯ್ಲೆಂಡ್‌ ನ ಅಂತಾರಾಷ್ಟ್ರೀಯ ರಾಕೆಟ್ ಕೂಡ ಬಯಲಾಗಿದೆ: ಥಾಯ್ಲೆಂಡ್‌ ನಿಂದ ಅಂತಾರಾಷ್ಟ್ರೀಯ ದಂಧೆ ನಡೆಸುತ್ತಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಥೈಲ್ಯಾಂಡ್‌ ನಿಂದ, ಹಾವು ಅಥವಾ ಅದರ ವಿಷವು ಬಾಂಗ್ಲಾದೇಶ ಅಥವಾ ನೇಪಾಳದ ಮೂಲಕ ಭಾರತವನ್ನು ತಲುಪುತ್ತದೆ. ಸ್ಥಳೀಯ ಜಾಲವು ಗುಜರಾತ್, ಬಂಗಾಳ ಮತ್ತು ರಾಜಸ್ಥಾನದ ಸ್ಥಳೀಯ…

Read More

ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕುರುಬರ ಹಳ್ಳಿಯ ನಾಡಪ್ರಭು ಕೆಂಪೇಗೌಡ ಕ್ರೀಡಾಂಗಣದಲ್ಲಿ ಇಂದು ಆಶಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಾರ್ಷಿಕ ಕ್ರೀಡಾಕೂಟ ಹಾಗೂ 2 km ಮ್ಯಾರಥಾನ್ ನಡಿಗೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಕೆ ಗೋಪಾಲಯ್ಯ ರವರು ಪಾಲ್ಗೊಂಡು ಕ್ರೀಡಾಕೂಟ ಉದ್ಘಾಟನೆ ಮಾಡಿ ಮ್ಯಾರಥಾನ್  ನಡಿಗೆ ಜಾಥಾಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಕೆ ಗೋಪಾಲಯ್ಯ ರವರು, ವಿಶೇಷ ಚೇತನ ಮಕ್ಕಳಲ್ಲಿ ವಿಶೇಷ ಪ್ರತಿಭೆ ಹಾಗೂ ಬುದ್ಧಿವಂತಿಕೆ ಇರಲಿದ್ದು, ಯಾರು ಕೂಡ ಪೋಷಕರು ಎದೆಗುಂದಬಾರದು. ಎಷ್ಟೋ ಜನಕ್ಕೆ ಮಕ್ಕಳೇ ಇಲ್ಲ, ದೇವರ ಮೊರೆ ಹೋಗಿ ಮಕ್ಕಳನ್ನು ಕರುಣಿಸು ಎಂದು ಪ್ರಾರ್ಥನೆ ಮಾಡುತ್ತಾರೆ. ಹೀಗಾಗಿ ಇವರು ದೇವರು ಸಮಾನ, ಇವರ ಇಟ್ಟು ಕೊಂಡು ಇದರ ಸದುಪಯೋಗ ಪಡೆದುಕೊಂಡು ಸಾಧನೆ ಗೈಯ್ಯುವ ಮೂಲಕ ತಾವು ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ತೋರಿಸಬೇಕೆಂದು ಹೇಳಿದ ಅವರು, ಯಾವುದೇ ನೂನ್ಯತೆ ಇಲ್ಲದೇ ಎಲ್ಲಾ ರೀತಿಯಲ್ಲೂ ಚೆನ್ನಾಗಿರುವ ಮಕ್ಕಳಿಗೆ ಚಂಚಲತೆ ಇರುತ್ತದೆ.…

Read More