Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಬೆಂಗಳೂರು: ಬೆಂಗಳೂರಿನ ಹಲಸೂರು ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿ, ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ ಮಾಡಲಾಗಿದೆ. ಬಂಧಿತರಿಂದ 3 ದ್ವಿಚಕ್ರ ವಾಹನ, ಲೆನೋವಾ ಲ್ಯಾಪ್ ಟಾಪ್, ವಿವಿಧ ಕಂಪನಿಯ 9 ಮೊಬೈಲ್ ಫೋನ್ ಗಳು ಹಾಗೂ ಒಟ್ಟು 15,50,000/- ಮೌಲ್ಯದ ಒಂದು ಸ್ಮಾರ್ಟ್ ವಾಚ್ ವಶಪಡಿಸಿಕೊಂಡಿದ್ದಾರೆ. ಕಳೆದ ಅ.17 ರಂದು ಹಲಸೂರು ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡ ಹಲಸೂರು ಪೊಲೀಸರು ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು, ವಿಚಾರಣೆ ಮಾಡಿದಾಗ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ 15,50,000/- ಮೌಲ್ಯದ 3 ದ್ವಿಚಕ್ರ ವಾಹನ, ಲೆನೋವಾ ಲ್ಯಾಪ್ ಟಾಪ್, ವಿವಿಧ ಕಂಪನಿಯ 9 ಮೊಬೈಲ್ ಫೋನ್ ಗಳು ಹಾಗೂ ಒಂದು ಸ್ಕಾರ್ಟ್ ವಾಡ್ ನ್ನು ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ವಶಕ್ಕೆ ಪಡೆದ ವ್ಯಕ್ತಿಗಳನ್ನು, ಹೆಚ್ಚಿನ ವಿಚಾರಣೆಗೊಳಪಡಿಸಿದಾಗ, ಹಲಸೂರು ಪೊಲೀಸ್ ಠಾಣೆಯು ಒಟ್ಟು ಮೂರು ಪ್ರಕರಣಗಳು, ಕೋರಮಂಗಲ ಪೊಲೀಸ್ ಠಾಣೆಯ ಒಂದು ಪ್ರಕರಣ ಮತ್ತು ರಾಮಮೂರ್ತಿ…
ಬೆಂಗಳೂರು: ಕನ್ನಡ ನಾಡಿನ ಪ್ರಸಿದ್ಧ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯವಾಗಿದ್ದು, ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿರುವುದಾಗಿ ಅವರ ಆಪ್ತ ವಲಯ ತಿಳಿಸಿದೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಶೂಟಿಂಗ್ ನಲ್ಲಿ ಮಳೆಯಲ್ಲಿ ನೆನೆದಿದ್ದರಿಂದ ಹೆಚ್ಚು ಸುಸ್ತು ಕಂಡು ಬಂದಿತ್ತು. ಅವರಿಗೆ ಸುಸ್ತಾಗುತ್ತಿದ್ದಂತೆಯೇ ಕೂಡಲೇ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರು ಅವರಿಗೆ ನಿನ್ನೆಯೇ ಚಿಕಿತ್ಸೆ ನೀಡಿ, ಮನೆಗೆ ಕಳುಹಿಸಿದ್ದಾರೆ. ಸದ್ಯ ಮನೆಯಲ್ಲಿ ಶಿವಣ್ಣ ವಿಶ್ರಾಂತಿ ಪಡೆಯುತ್ತಿದ್ದಾರೆ. ವೈದ್ಯರ ತಪಾಸಣೆ ನಂತರ ಆತಂಕ ಪಡುವಂಥಹದ್ದೇನಿಲ್ಲ ಎನ್ನಲಾಗಿದೆ. ಈ ಹಿಂದೆ ಶಿವಣ್ಣಗೆ ಹೃದಯ ಸಂಬಂಧಿ ಸಮಸ್ಯೆ ಎದುರಾಗಿತ್ತು. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳಿಗೆ ಆತಂಕ ಮೂಡಿತ್ತು.
ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಮಾಡುತ್ತಲೇ ಅಭಿವೃದ್ಧಿ ಸಾಧಿಸುವುದೇ ಸುಸ್ಥಿರ ಅಭಿವೃದ್ಧಿಯಾಗಿದ್ದು, ಜೀವರಾಶಿಯೂ ಉಳಿಯಬೇಕು, ಜೀವನೋಪಾಯವೂ ಇರಬೇಕು, ಇದರ ಜೊತೆಗೆ ಪ್ರಗತಿ ಸಾಧಿಸಬೇಕು ಎಂಬುದು ಸರ್ಕಾರದ ನಿಲುವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿಂದು ನಡೆದ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಬೆಂಗಳೂರು ಘೋಷಣೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರಕೃತಿ ಮತ್ತು ಪರಿಸರ, ಅರಣ್ಯ ಉಳಿದಾಗ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ. ಹೀಗಾಗಿ ನಾವು ನೀವೆಲ್ಲರೂ ಭೂಗ್ರಹದ ರಕ್ಷಕರಾಗಬೇಕು ಎಂದು ಕರೆ ನೀಡಿದರು. ಭಾರತದ ಸಿಲಿಕಾನ್ ವ್ಯಾಲಿ ಎಂದೇ ಖ್ಯಾತವಾದ ಬೆಂಗಳೂರು, ತಾಂತ್ರಿಕ ನಾವೀನ್ಯತೆಯ ಕೇಂದ್ರ ಮಾತ್ರವಲ್ಲ, ಸುಸ್ಥಿರ ಅಭಿವೃದ್ಧಿಯ ಅನ್ವೇಷಣೆಯಲ್ಲಿಯೂ ಮುಂಚೂಣಿಯಲ್ಲಿದೆ. ಜಗತ್ತು ಇಂದು ಎದುರಿಸುತ್ತಿರುವ ಸವಾಲುಗಳಿಗೆ ಕರ್ನಾಟಕ ಅದರಲ್ಲೂ ಬೆಂಗಳೂರಿನ ಉದ್ಯಮಿಗಳು ಪರಿಹಾರ ಸಂಶೋಧಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು. ಈ ಶೃಂಗಸಭೆ ಸಕಲ ಜೀವರಾಶಿಗಳೂ ಬದುಕಲು ಇರುವ ಏಕೈಕ ಭೂಗ್ರಹ ಮತ್ತು ಅದರ ಎಲ್ಲಾ…
ಗುಟ್ಕಾ (ತಂಬಾಕು) ಸೇವಿಸಿದ್ದಕ್ಕೆ ಶಿಕ್ಷಕರಿಂದ ಛೀಮಾರಿ ಹಾಕಿಸಿಕೊಂಡ 17 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಉತ್ತರ ಪ್ರದೇಶದ ಮಹೋಬಾದಲ್ಲಿ ಈ ಘಟನೆ ನಡೆದಿದೆ. ತಂದೆಯ ಮುಂದೆ ಅವಮಾನಿತನಾದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಘಟನೆ ಬುಧವಾರ ನಡೆದಿದೆ. ಮಹೋಬಾದ ಕಬ್ರಾಯ್ ಪ್ರದೇಶದ ಬದ್ರಿ ಸಿಂಗ್ ಕನ್ಯಾ ಇಂಟರ್ ಕಾಲೇಜಿನ 11 ನೇ ತರಗತಿ ವಿದ್ಯಾರ್ಥಿ ಸಾಹು (17) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಕ ಗುಟ್ಕಾ ಬಳಸುತ್ತಿದ್ದುದನ್ನು ಶಾಲೆಯ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಕನ ತಂದೆಯನ್ನು ಶಾಲೆಗೆ ಕರೆಸಲಾಗಿತ್ತು. ಬಹಳ ಹೊತ್ತಾದರೂ ಬಾಲಕ ಹೊರಗೆ ಬಾರದೆ ಇದ್ದಾಗ ಮನೆಯವರು ಬಾಗಿಲು ಒಡೆದು ಒಳ ನುಗ್ಗಿ ನೋಡಿದಾಗ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬಾಲಕನನ್ನು ಕೆಳಗಿಳಿಸಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆತನ ಪ್ರಾಣ ಉಳಿಸಲಾಗಲಿಲ್ಲ.
ಬಿಬಿಎಂಪಿ ವ್ಯಾಪ್ತಿಯ ಮಹದೇವಪುರ ವಲಯ ವ್ಯಾಪ್ತಿಯ ಹೊರ ವರ್ತುಲ ರಸ್ತೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಒಎಫ್ ಸಿ ಕೇಬಲ್ ತೆರವು ಪ್ರಾರಂಭಿಸಲಾಗಿದೆ. ಅನಧಿಕೃತ ಓಎಫ್ ಸಿ ಕೇಬಲ್ ಗಳ ತೆರವು ಕಾರ್ಯಾಚರಣೆ ನಡೆಸಲು ಆಯುಕ್ತ ತುಷಾರ್ ಗಿರಿ ನಾಥ್ ಸೂಚನೆ ನೀಡಿದ್ದಾರೆ. ಹೀಗಾಗಿ ವಲಯ ಆಯುಕ್ತ ಇಬ್ರಾಯಿಮ್ ಮೈಗುರ್ ಹಾಗೂ ವಲಯ ಜಂಟಿ ಆಯುಕ್ತರಾದ ಡಾ. ದಾಕ್ಷಾಯಿಣಿ ರವರ ನೇತೃತ್ವದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅನಧಿಕೃತವಾಗಿ ಅಳವಡಿಸಿರುವ ಓ. ಎಫ್ ಸಿ ಕೇಬಲ್ ಗಳ ತೆರವು ಕಾರ್ಯಾಚರಣೆ ನಡೆಯಲಿದೆ.
ತನ್ನ ಪತ್ನಿಗೆ ಹಲ್ಲೆ ಮಾಡುವ ದೃಶ್ಯ ಕಂಡು, ಪತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚಂದ್ರಲೇಔಟ್ ನ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಮುದಾಸೀರ್ ಖಾನ್ ಮೃತ ವ್ಯಕ್ತಿ. ನನ್ನ ಮೇಲೆ ವಾಹಿದ್ ಅಹ್ಮದ್ ಎಂಬಾತ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾದರು. ಇದನ್ನ ನೋಡಿದ ನನ್ನ ಪತಿ ಮುದಾಸೀರ್ ಖಾನ್ ಗೆ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ಗಂಡನ ಸಾವಿನ ಬಗ್ಗೆ ಮಹಿಳೆ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವಾಹಿದ್ ಹಾಗೂ ಆತನ ಸಹೋದರ ಮತಿನ್ ಎಂಬುವವರನ್ನು ಬಂಧಿಸಲಾಗಿದೆ.
ಸುರಕ್ಷಿತ ಪಟಾಕಿ ಮಾರಾಟ ಮಾಡುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ಬಾರಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, 70 ಆಟದ ಮೈದಾನಗಳಲ್ಲಿ 426 ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಆಟದ ಮೈದಾನ ಮತ್ತು ಅಲ್ಲಿ ತೆರೆಯಲಿರುವ ತಾತ್ಕಾಲಿಕ ಮಳಿಗೆಗಳ ಪಟ್ಟಿಯನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮತ್ತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ರವಾನಿಸಿದೆ. ಅತ್ತಿಬೆಲೆಯಲ್ಲಿ ಸಂಭವಿಸಿದ ಭೀಕರ ಪಟಾಕಿ ದುರಂತದಿಂದ ಎಚ್ಚೆತ್ತುಕೊಂಡ ಪಾಲಿಕೆ ಈ ನಿರ್ಧಾರಕ್ಕೆ ಬಂದಿದೆ.
ಶಿವಾಜಿನಗರ ಠಾಣೆ ವ್ಯಾಪ್ತಿಯ ಕಂಟೋನ್ಮಂಟ್ ರೈಲು ನಿಲ್ದಾಣ ಬಳಿ ಪತ್ರಿಕಾ ವಿತರಕ ಆಂಥೋನಿ ಸಿ. (75) ಅವರನ್ನು ಅಡ್ಡಗಟ್ಟಿ ತೊಡೆಗೆ ಚಾಕುವಿನಿಂದ ಇರಿಯಲಾಗಿದ್ದು, ತೀವ್ರ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲಸೂರು ಠಾಣೆ ವ್ಯಾಪ್ತಿಯ ಸರಸ್ವತಿಪುರದಲ್ಲಿ ಪತ್ರಿಕಾ ವಿತರಕರೊಬ್ಬರನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಪ್ರಕರಣದ ಬೆನ್ನಲ್ಲೇ ಈ ಘಟನೆ ನಡೆದಿದ್ದು, ಪೊಲೀಸರು ಸಮರ್ಪಕವಾಗಿ ಗಸ್ತು ತಿರುಗುತ್ತಿಲ್ಲವೆಂಬ ಆರೋಪ ವ್ಯಕ್ತವಾಗಿದೆ.
ಒಡಿಶಾದಿಂದ ರೈಲಿನಲ್ಲಿ ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರುತ್ತಿದ್ದ ಆರೋಪಿ ಹರ್ಷವರ್ಧನ್(25) ನನ್ನು ಆಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಹರ್ಷವರ್ಧನ್, ಸರಕು ಸಾಗಣೆ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ, ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಈತನಿಂದ 12 ಕೆ. ಜಿ 50 ಗ್ರಾಂ ಗಾಂಜಾ ಹಾಗೂ ಸರಕು ಸಾಗಣೆ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
ರಾಜ್ಯ ರಾಜಧಾನಿಯಲ್ಲಿ ಕ್ವಾರ್ಟರ್ ಎಣ್ಣೆಗಾಗಿ ಬೈಕ್ ಕದಿಯುತ್ತಿದ್ದ ಕುಡುಕ ಕಳ್ಳನ ಬಂಧನವಾಗಿದೆ. ಲಕ್ಷ್ಮಣ್ ಬಂಧಿತ ಆರೋಪಿಯಾಗಿದ್ದಾನೆ. ದಿನ ಮದ್ಯ ಸೇವಿಸಬೇಕೆಂದು ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದ ಒಂದು ಕ್ವಾರ್ಟರ್ ಎಣ್ಣೆಗಾಗಿ ಕಳ್ಳತನ ಮಾಡಿದ್ದ ಅಪಾಚಿ ಬೈಕ್ ಮಾರಿದ್ದ ಮದ್ಯ ಸೇವಿಸಲು ಬೈಕ್ ಕದ್ದು ಬ್ಯಾಟರಿ ಮಾರುತ್ತಿದ್ದ ಆಸಾಮಿ, ಒಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕದ್ದು ಮತ್ತೊಂದು ಠಾಣಾ ವ್ಯಾಪ್ತಿಯಲ್ಲಿ ಬೈಕ್ ಬಿಟ್ಟು ಹೋಗುತ್ತಿದ್ದ.