Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಅಥಣಿ: ಭಾರತದ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವ ಮೂಡಲು ಭಗವದ್ಗೀತೆ ಕಾರಣ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತೀಯ ಸಹಸಂಘ ಚಾಲಕ ಅರವಿಂದ ರಾವ್ ದೇಶಪಾಂಡೆ ಅಭಿಪ್ರಾಯ ಪಟ್ಟಿದ್ದಾರೆ. ಸೋಂದಾ ಸ್ವರ್ಣವಲ್ಲಿ ಮಠದಿಂದ ನಡೆಸಲಾಗುತ್ತಿರುವ ಭಗವದ್ಗೀತೆ ಅಭಿಯಾನದ ಹಿನ್ನೆಲೆಯಲ್ಲಿ ಅಥಣಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಭಗವದ್ಗೀತೆ ಶ್ಲೋಕದಲ್ಲಿ ವಿಜ್ಞಾನವೂ ಇದೆ, ಮ್ಯಾನೇಜ್ ಮೆಂಟ್ ಕೂಡ ಇದೆ. ಜಾಗತಿಕವಾಗಿ ಭಗವದ್ಗೀತೆಯನ್ನು ಎಲ್ಲರೂ ಒಪ್ಪಿಕೊಂಡಿದ್ದಾರೆ, ಅದು ಸರ್ವಮಾನ್ಯವಾದದ್ದು. ಪ್ರಧಾನಿಗಳು ಯಾವುದೇ ದೇಶಕ್ಕೆ ಹೋದರೂ ಭಗವದ್ಗೀತೆ ಕೊಡುತ್ತಾರೆ. ಇಂದು ಅಮೇರಿಕಾದಲ್ಲಿ ವಿದ್ಯಾರ್ಥಿಗಳು ಭಗವದ್ಗೀತೆ ಕಂಠ ಪಾಠ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಭಗವದ್ಗೀತೆ ಕೇಳಲು ನಾವು ಅಮೇರಿಕಾಕ್ಕೆ ಹೋಗಬೇಕಾದ ಪರಿಸ್ಥಿತಿ ಬಂದೀತು ಎಂದು ಅವರು ಎಚ್ಚರಿಸಿದರು. ಭಗವದ್ಗೀತೆ ರಾಜ್ಯಮಟ್ಟದ ಸಮಿತಿಯ ಕಾರ್ಯಾಧ್ಯಕ್ಷ ಪರಮೇಶ್ವರ ಹೆಗಡೆ ಅಭಿಯಾನದ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಪ್ರತಿ ತಾಲೂಕಿನಲ್ಲೂ ನವೆಂಬರ್ 21ರಿಂದ ಡಿಸೆಂಬರ್ 23ರ ವರೆಗೆ ಭಗವದ್ಗೀತೆ ಅಭಿಯಾನ ನಡೆಯಲಿದೆ. ಅದಕ್ಕೂ ಪೂರ್ವ ಪ್ರಶಿಕ್ಷಣ ನಡೆಸಲಾಗುವುದು.…
ಬೆಂಗಳೂರು: ರಾಜ್ಯದಲ್ಲಿ ದೀಪಾವಳಿ ಹಬ್ಬವನ್ನು ನ.11 ರಿಂದ 15 ರ ವರೆಗೆ ಆಚರಿಸಲಿದ್ದು, ಹಸಿರು ಪಟಾಕಿ ಕ್ಯೂಆರ್ ಕೋಡ್ ಚಿಹ್ನೆ ಇಲ್ಲದ ಪಟಾಕಿಗಳನ್ನು ವಶಕ್ಕೆ ಪಡೆಯಬೇಕು. ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ. ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿದೆ. ಪರಿಸರ ಮತ್ತು ಶಬ್ದಮಾಲಿನ್ಯ ತಡೆಗಟ್ಟುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದು, ಸುಪ್ರೀಂ ಕೋರ್ಟ್ ಆದೇಶವನ್ನು ಯಥಾಸ್ಥಿತಿ ಪಾಲನೆ ಮಾಡಬೇಕು.ಪಟಾಕಿಯನ್ನು ರಾತ್ರಿ 8 ರಿಂದ 10 ಗಂಟೆ ವರೆಗೆ ಮಾತ್ರ ಹೊಡೆಯಲು ಅವಕಾಶ ಇರಲಿದೆ. ಅಧಿಕಾರಿಗಳು ಪರಿಶೀಲನೆ ವೇಳೆ ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಮಾರುತ್ತಿದ್ದರೆ ಇಡೀ ಗೋದಾಮು ವಶಕ್ಕೆ ಪಡೆಯಬೇಕು. ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಬೇಕು. ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು, ನಿಷೇಧಿತ ಸ್ಥಳಗಳಲ್ಲಿ ಪಟಾಕಿ ಹೊಡೆಯುವಂತಿಲ್ಲ. ಇದನ್ನು ಎಲ್ಲಾ ಸ್ಥಳೀಯ…
ಬೆಂಗಳೂರು: “ಈಗ ಯಾರ್ಯಾರು ಪಕ್ಷದ ಸೂಚನೆ ಮೀರಿ ಮಾತನಾಡಿದ್ದಾರೋ ಅವರಿಗೆಲ್ಲಾ ನೋಟಿಸ್ ನೀಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಚ್ಚರಿಕೆಯ ಸಂದೇಶ ನೀಡಿದರು. ಕೆಲವು ಶಾಸಕರು ನಿಮ್ಮ ಪರವಾಗಿ ಲಾಬಿ ಮಾತುಗಳನ್ನಾಡುತ್ತಿದ್ದಾರೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಹುಬ್ಬಳ್ಳಿಯ ಪ್ರವಾಸಿ ಮಂದಿರದ ಬಳಿ ಶುಕ್ರವಾರ ಹೀಗೆ ಪ್ರತಿಕ್ರಿಯೆ ನೀಡಿದರು. ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಿದ ನಂತರ, ಇಬ್ಬರೂ ಸೇರಿ ಪ್ರಮಾಣವಚನ ಸ್ವೀಕರಿಸಿದ್ದೇವೆ. ಆಗ ನಿಮಗೆಲ್ಲಾ ಹೇಳಿದ್ವಾ ನಾವು? ಸುಮ್ಮನೆ ಯಾಕೆ ಇಲ್ಲದ ವಿಷಯ ನೀವೇ ಸೃಷ್ಟಿ ಮಾಡಿಕೊಳ್ಳುತ್ತೀರಾ? ಇದೆಲ್ಲಾ ಅವಶ್ಯಕತೆಯಿಲ್ಲ” ಎಂದು ಹೇಳಿದರು. ಅಧಿಕಾರ ಹಂಚಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, “ಯಾವುದೇ ಆಸ್ತಿಯಿಲ್ಲ ಹಂಚಿಕೊಳ್ಳೋಕೆ” ಎಂದು ಉತ್ತರಿಸಿದರು
ಮಂಗಳೂರು: ಗೆಳತಿ ಔಟಿಂಗ್ ಬರಲಿಲ್ಲ ಎಂದು ಕೋಪಗೊಂಡ ಪಾಗಲ್ ಪ್ರೇಮಿ, ಆಕೆ ಕೆಲಸ ಮಾಡುತ್ತಿದ್ದ ಪಿಜಿಗೆ ಕಲ್ಲು ಎಸೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಸೆಂಟ್ ಆಗ್ನೇಸ್ ಕಾಲೇಜು ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಸುಳ್ಯ ನಿವಾಸಿ ವಿವೇಕ್ (18) ಸುರೇಶ್ ಶೆಟ್ಟಿ ಎಂಬುವವರ ಪಿಜಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದ. ಗುರುವಾರ ಸಂಜೆ ಔಟಿಂಗ್ ಗೆ ಬರುವಂತೆ ಯುವತಿಗೆ ಕರೆ ಮಾಡಿದ್ದಾನೆ. ಆದರೆ, ಯುವತಿ ಔಟಿಂಗ್ ಬರಲು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ವಿವೇಕ್, ಆಕೆ ಕೆಲಸ ಮಾಡುತ್ತಿದ್ದ ಪಿಜಿಗೆ ಕಲ್ಲು ಎಸೆದಿದ್ದಾನೆ. ಘಟನೆಯಲ್ಲಿ ಕಟ್ಟಡದ ಗಾಜು ಪುಡಿಯಾಗಿದ್ದು, ಸಾರ್ವಜನಿಕರು ವಿವೇಕ್ ನನ್ನು ಹಿಡಿದು ಥಳಿಸಿದ್ದಾರೆ.
ಹಾಸನ: ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ಗಲಾಟೆ ಆರಂಭವಾಗಿ ಗಲಾಟೆ ವಿಕೋಪಕ್ಕೆ ತಿರುಗಿ, ಪತಿ-ಪತ್ನಿಯನ್ನೇ ಕೊಂದು ಬಿಟ್ಟ. ಆ ನಂತರ ಮೃತದೇಹ ಯಾರಿಗೂ ತಿಳಿಯದಂತೆ ಮಣ್ಣಿನಲ್ಲಿ ಹೂತಿಟ್ಟು, ಊರು ಬಿಟ್ಟಿದ್ದ. ಆದರೆ ಮೂರು ತಿಂಗಳ ಬಳಿಕ ಬೀದಿ ನಾಯಿಗಳಿಂದ ಆರೋಪಿ ಸಿಕ್ಕಿಬಿದ್ದಿದ್ದಾನೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಂತಿವಾಸು(28) ಹತ್ಯೆಯಾದವಳು. ಪವನ್ ಕುಮಾರ್ ಆರೋಪಿಯಾಗಿದ್ದಾನೆ. ಮೂರು ತಿಂಗಳ ಹಿಂದೆ ಪವನ್ ಕುಮಾರ್ ಹಾಗೂ ಶಾಂತಿವಾಸು ನಡುವೆ ಗಲಾಟೆ ನಡೆದಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಪವನ್ ಕುಮಾರ್ ಪತ್ನಿ ಶಾಂತಿವಾಸು ಮೇಲೆ ಹಲ್ಲೆ ಮಾಡಿದ್ದ. ಗಂಭೀರ ಗಾಯಗೊಂಡಿದ್ದ ಶಾಂತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪತ್ನಿ ಮೃತಪಟ್ಟಿದ್ದಕ್ಕೆ ಹೆದರಿದ ಪವನ್ ಕುಮಾರ್ ಕೃತ್ಯ ಹೊರಗೆ ಬಂದರೆ ಜೈಲು ಸೇರುವುದು ಗ್ಯಾರಂಟಿ ಎಂದು ನೆನೆಸಿ ಆತನ ಕ್ರಿಮಿನಲ್ ಮೈಂಡ್ ಸಕ್ರಿಯವಾಗಿತ್ತು. ಹೇಗಾದರೂ ಸರಿ ಇದರಿಂದ ಬಚಾವ್ ಆಗಬೇಕು ಎಂದಕೊಂಡವನು ಮನೆಯಿಂದ ಸಮೀಪವಿರುವ ಹಳ್ಳದ ಪಕ್ಕದ ಗುಂಡಿಯಲ್ಲಿ ಮಣ್ಣು ತೆಗೆದು ಶವನ್ನು ಹೂತು…
ಹುಬ್ಬಳ್ಳಿ: ದಾಂಪತ್ಯದಲ್ಲಿ ಕಲಹ ಮೂಡಿದ್ದು, ಪೊಲೀಸರ ಸಂಧಾನಕ್ಕೆ ಒಪ್ಪದೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಿಖಲ್ (28) ಆತ್ಮಹತ್ಯೆ ಮಾಡಿಕೊಂಡ ಪತಿ. 11 ತಿಂಗಳ ಹಿಂದೆ ನಿಖಿಲ್ ಮತ್ತು ಪ್ರೀತಿ ವಿವಾಹವಾಗಿತ್ತು. ಆದರೆ ದಂಪತಿ ನಡುವೆ ಆರಂಭದಿಂದಲೂ ಸಾಮರಸ್ಯ ಮೂಡದೆ ವೈಮನಸ್ಸು ಬೆಳೆದು ನಿತ್ಯ ಜಗಳವಾಡುತ್ತಿದ್ದರು. ಇದರಿಂದಾಗಿ ಪ್ರೀತಿ ತವರು ಮನೆಗೆ ಹೋಗಿದ್ದಳು. ಪ್ರೀತಿ ಮತ್ತು ಕುಟುಂಬಸ್ಥರು ನಿಖಿಲ್ ನನ್ನು ಕೇಶ್ವಾಪುರ ಠಾಣೆಗೆ ಕರೆಯಿಸಿದ್ದರು. ಠಾಣೆಯಲ್ಲಿ ಪೊಲೀಸರು ನಿಖಲ್ ಗೆ ಮಾನಸಿಕವಾಗಿ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಕೇಶ್ವಾಪುರ ಪೊಲೀಸರು ನಿಖಲ್ ಗೆ ಒಂದೇ ದಿನದಲ್ಲಿ 2 ಲಕ್ಷ ರೂ. ನೀಡುವಂತೆ ತಾಕೀತು ಮಾಡಿದ್ದರು. ಇದರಿಂದ ಮನನೊಂದು ಮನೆಗೆ ಬಂದ ನಿಖಿಲ್, ಇಂದು ಬೆಳಗಿನ ಜಾವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮೈಸೂರು ಪೊಲೀಸ್ ಬಡಾವಣೆ ರಿಂಗ್ ರೋಡ್ ಬಳಿ ಬೈಕ್ ಹಾಗೂ ಬುಲೆರೋ ವಾಹನ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಅಪಘಾತದ ನಂತರ ಬುಲೆರೋ ವಾಹನದ ಚಾಲಕ ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿದ್ದಾರ್ಥ ನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ಸಂಬಂಧ ಸಿದ್ದಾರ್ಥ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿ ಆಗಿರುವ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.
ತೂತುಕುಡಿ: ಮೂರು ದಿನಗಳ ಹಿಂದೆಯಷ್ಟೇ ಮನೆಯವರ ಅಪೇಕ್ಷೆಗೆ ವಿರುದ್ಧವಾಗಿ ಮನೆಯಿಂದ ಓಡಿಹೋಗಿ ಮದುವೆಯಾಗಿದ್ದ ಜೋಡಿಯನ್ನು, ಗುರುವಾರ ರಾತ್ರಿ ತೂತುಕುಡಿ ಪಟ್ಟಣದ ಮುರುಗೇಶನ್ ನಗರದಲ್ಲಿ, ಐವರು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳ ತಂಡ ಹತ್ಯೆ ಮಾಡಿದೆ. ಈ ಕೊಲೆಯಲ್ಲಿ ಮಹಿಳೆಯ ಕುಟುಂಬದವರ ಕೈವಾಡವಿರಬಹುದು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಪೊಲೀಸರ ಪ್ರಕಾರ, ಒಂದೇ ಸಮುದಾಯಕ್ಕೆ ಸೇರಿದ ದಂಪತಿ, ತಿರುವಿ ಕಾ ನಗರದ ವಿ ಮರಿ ಸೆಲ್ವಂ (24) ಮತ್ತು ಕಾರ್ತಿಕಾ (20) ಎರಡು ವರ್ಷಗಳ ಪ್ರೀತಿಯ ನಂತರ ವಿವಾಹವಾದರು. ಕಾರ್ತಿಕಾ ಅಕ್ಟೋಬರ್ 30 ರಂದು ಮಾರಿ ಸೆಲ್ವಂ ಅವರೊಂದಿಗೆ ಕೋವಿಲ್ಪಟ್ಟಿಗೆ ಓಡಿಹೋದರು ಮತ್ತು ಅವರು ರಕ್ಷಣೆ ಕೋರಿ ಕೋವಿಲ್ಪಟ್ಟಿ ಪೂರ್ವ ಪೊಲೀಸ್ ಠಾಣೆಗೆ ಹೋಗಿದ್ದರು. ನಂತರ ಅದೇ ದಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹವಾದ ಅವರು ಬುಧವಾರದವರೆಗೆ ಕೋವಿಲ್ಪಟ್ಟಿಯಲ್ಲಿ ಇದ್ದರು. ಮದುವೆಗೆ ಎರಡೂ ಕುಟುಂಬಗಳಿಂದ ತೀವ್ರ ವಿರೋಧವಿತ್ತು, ಆದರೆ, ಹುಡುಗನ ಮನೆಯವರು ಮಂಗಳವಾರ ಅವರ ಮದುವೆಯನ್ನು ಒಪ್ಪಿಕೊಂಡರು. ಇದರ ಬೆನ್ನಲ್ಲೇ…
ಖ್ಯಾತ ನಟಿ ವಿಜಯಶಾಂತಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂದು ವರದಿಯಾಗಿದೆ. ತೆಲಂಗಾಣ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ನಟಿ ವಿಜಯಶಾಂತಿ ಅವರ ಹೆಸರು ಸೇರ್ಪಡೆಯಾಗಿಲ್ಲ. ಈ ಹಿನ್ನೆಲೆ ಅವರು ಮತ್ತು ಅವರ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ. ‘ಬಿಆರ್ ಎಸ್ ಕುಟುಂಬದ ರಾಜಕೀಯ ಆಡಳಿತದಿಂದ ಜನರನ್ನು ರಕ್ಷಿಸಲು ಕಾಂಗ್ರೆಸ್ ಹೋರಾಡಬೇಕು’ ಎಂದು ನಟಿ ವಿಜಯಶಾಂತಿ ಹೇಳಿಕೆ ನೀಡಿದ್ದಾರೆ. ಇವರು ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ, ಅಗ್ನಿಶಾಮಕ ದಳಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿವಿಧ ಮುನ್ಸಿಪಲ್ ಕಾರ್ಪೊರೇಶನ್ ಗಳು ವಿಭಿನ್ನ ಮಾನದಂಡಗಳನ್ನು ಅನುಸರಿಸುತ್ತಿವೆ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಜಿಎಸ್ ಕುಲಕರ್ಣಿ ಮತ್ತು ಜಿತೇಂದ್ರ ಜೈನ್ ಅವರನ್ನೊಳಗೊಂಡ ವಿಭಾಗೀಯ ಪೀಠವು ವಿವಿಧ ನಿಗಮಗಳು ಬಳಸುವ ವಿಭಿನ್ನ ಅಳತೆಗೋಲುಗಳು ತಾರತಮ್ಯದಿಂದ ಕೂಡಿದೆ ಎಂದು ಅಭಿಪ್ರಾಯಪಟ್ಟಿದೆ. ಅಕ್ಟೋಬರ್ ನಲ್ಲಿ, ಬಾಂಬೆ ಹೈಕೋರ್ಟ್ ವಿವಿಧ ನಿಗಮಗಳು ವಿಭಿನ್ನ ಮಾನದಂಡಗಳನ್ನು ಹೊಂದಿರಬಾರದು, ಇದು ಮಹಿಳಾ ಅಭ್ಯರ್ಥಿಗಳ ನಡುವೆ ತಾರತಮ್ಯವನ್ನು ಉಂಟುಮಾಡುತ್ತದೆ ಎಂದು ಹೇಳಿತ್ತು.