Author: admin

IVನೇ ತರಗತಿ ವಿದ್ಯಾರ್ಥಿಯ ಮೇಲೆ ಸಹಪಾಠಿಗಳು ಕಂಪಾಸ್‌ ನಿಂದ ಹಲ್ಲೆ ನಡೆಸಿದ್ದಾರೆ. ಮಕ್ಕಳ ನಡುವಿನ ಜಗಳದ ವೇಳೆ ಈ ದಾಳಿ ನಡೆದಿದೆ. ಮೂವರು ಸಹಪಾಠಿಗಳು ನಡೆಸಿದ ದಾಳಿಯಲ್ಲಿ ವಿದ್ಯಾರ್ಥಿಗೆ 108 ಬಾರಿ ಇರಿದಿದೆ. ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಏರೋಡ್ರೋಮ್ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನವೆಂಬರ್ 24 ರಂದು ಈ ಘಟನೆ ನಡೆದಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಕ್ಕಳ ನಡುವೆ ನಡೆದ ಜಗಳದಲ್ಲಿ ಸಹಪಾಠಿಗಳು ಜ್ಯಾಮಿತೀಯ ಕಂಪಾಸ್‌ ನಿಂದ 108 ಬಾರಿ ಇರಿದಿದ್ದಾರೆ ಎಂದು ತಂದೆ ಹೇಳಿದ್ದಾರೆ. ಮಗ ಅಳುತ್ತಾ ಮನೆಗೆ ಬಂದ. ಮಗನ ದೇಹದ ತುಂಬ ಗಾಯ, ಗಾಯದ ಗುರುತುಗಳಿವೆ ಎಂದು ಆರೋಪಿಸಿದರು. ತನ್ನ ಮಗ ಮನೆಗೆ ಮರಳಿದ ನಂತರ, ಅವನು ತನ್ನ ದುಃಖವನ್ನು ಕಣ್ಣೀರಿನಿಂದ ವಿವರಿಸಿದನು. ನನ್ನ ಸಹಪಾಠಿಗಳು ನನ್ನ ಮಗನನ್ನು ಏಕೆ ಕ್ರೂರವಾಗಿ ನಡೆಸಿಕೊಂಡರು ಎಂದು ನನಗೆ ತಿಳಿದಿಲ್ಲ. ‘ಕೋಣೆಯಿದ್ದರೂ ತರಗತಿಯ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡಲು ಶಾಲಾ ಆಡಳಿತ…

Read More

ತನ್ನ ಏಳು ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಳು ತನ್ನ ಲಿವ್-ಇನ್ ಮಿತ್ರನಿಗೆ ಪ್ರೋತ್ಸಾಹಿಸಿದ್ದಕ್ಕಾಗಿ ಕೇರಳದ ಮಹಿಳೆಯೊಬ್ಬರಿಗೆ 40 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ 6 ತಿಂಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ತಿರುವನಂತಪುರಂ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಆ‌ರ್. ರೇಖಾ ಈ ಶಿಕ್ಷೆಯನ್ನು ಘೋಷಿಸಿದ್ದಾರೆ. ಮಾರ್ಚ್‌ 2018 ಮತ್ತು ಸೆಪ್ಟೆಂಬರ್ 2019 ರ ನಡುವೆ ಏಳು ವರ್ಷದ ಬಾಲಕಿಯ ಮೇಲೆ ಶಿಶುಪಾಲನ್ ಎಂಬ ವ್ಯಕ್ತಿ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ನ್ಯಾಯಾಲಯವು ಈ ತೀರ್ಪು ಪ್ರಕಟಿಸಿದೆ.

Read More

ಬೆಂಗಳೂರು: ಬಿ.ವೈ. ವಿಜಯೇಂದ್ರ ಹಾಗೂ ಕುಮಾರಸ್ವಾಮಿ ತಮ್ಮನ್ನು ಸೋಲಿಸಲು ಸಾಧ್ಯವಿಲ್ಲ. ಅದನ್ನ ತೀರ್ಮಾನ ಮಾಡಬೇಕಾಗಿರೋದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನ  ಎಂದು  ಸಂಸದ ಡಿ.ಕೆ.ಸುರೇಶ್  ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ-ವಿಜಯೇಂದ್ರ  28ಕ್ಕೆ 28 ಕ್ಷೇತ್ರ ಗೆಲ್ಲುತ್ತೇವೆ. ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಅನ್ನ ಸೋಲಿಸುತ್ತೇವೆ ಎಂಬ ವಿಜಯೇಂದ್ರ ಹೇಳಿಕೆ ನೀಡಿದ ವಿಚಾರಕ್ಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸಬೇಕು ಎನ್ನುವುದನ್ನು ನಾವೇ ತೀರ್ಮಾನ ಮಾಡುವುದಕ್ಕೆ ಆಗುವುದಿಲ್ಲ. ಅದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಅವರೆಲ್ಲಿ ಸ್ಪರ್ಧಿಸಿ ಎಂದು ಟಿಕೇಟ್ ನೀಡುತ್ತಾರೋ ಅಲ್ಲಿ ಸ್ಪರ್ಧಿಸುತ್ತೇನೆ ಎಂದು ಸುದ್ದಿಗಾರರ ಪ್ರಶ್ನೆಗೆ ಡಿಕೆಶಿ ಉತ್ತರಿಸಿದರು.

Read More

ಬೆಂಗಳೂರು: ಪಿಎಸ್ ಐ ಹುದ್ದೆ ಆಕಾಂಕ್ಷಿಗಳ ಬೇಡಿಕೆ ನ್ಯಾಯಸಮ್ಮತವಾಗಿದ್ದು, ಸರ್ಕಾರ ಈ ಕೂಡಲೇ ಪರೀಕ್ಷೆಯನ್ನು ಮುಂದೂಡಿ ಸೂಕ್ತ ಕಾಲಾವಕಾಶ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ. 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಮರು ಪರೀಕ್ಷೆಗೆ ಅತ್ಯಂತ ಕಡಿಮೆ ಕಾಲಾವಕಾಶವನ್ನು ನಿಗದಿಪಡಿಸಿರುವ ಸರ್ಕಾರದ ಅವೈಜ್ಞಾನಿಕ ನಿರ್ಧಾರವನ್ನು ಪ್ರತಿಭಟಿಸಿ, ಪರೀಕ್ಷಾ ದಿನಾಂಕವನ್ನು ಮುಂದೂಡಿ ಸಮಯ ವಿಸ್ತರಿಸುವಂತೆ ಜನತಾ ದರ್ಶನದಲ್ಲಿ ಮನವಿ ಮಾಡಲು ಮುಖ್ಯಮಂತ್ರಿಗಳ ಬಳಿಗೆ ತೆರಳಿದ್ದ ಪರೀಕ್ಷಾರ್ಥಿ ನಿರುದ್ಯೋಗಿಗಳನ್ನು ಅಮಾನವೀಯವಾಗಿ ನಡೆಸಿಕೊಂಡು ಪೊಲೀಸ್‌ ಬಂಧನಕ್ಕೆ ಒಳಪಡಿಸಿರುವುದು ಅತ್ಯಂತ ಖಂಡನೀಯ ಕ್ರಮವಾಗಿದೆ. ಪರೀಕ್ಷಾ ಹಗರಣದಿಂದ ಈ ಮೊದಲೇ ಹೈರಾಣಾಗಿ ಹೋಗಿದ್ದ ಪಿಎಸ್‌ ಐ ಹುದ್ದೆ ಆಕಾಂಕ್ಷಿಗಳ ಮನವಿ ಅತ್ಯಂತ ನ್ಯಾಯ ಸಮ್ಮತವಾಗಿದ್ದು ಇದನ್ನು ಮುಖ್ಯಮಂತ್ರಿಗಳು ಸಹಾನುಭೂತಿಯಿಂದ ಪರಿಶೀಲಿಸಬೇಕಿತ್ತು. ಆದರೆ ಪೊಲೀಸರನ್ನು ಬಿಟ್ಟು ಬಂಧಿಸಿದ ಕ್ರಮ ಕಾಂಗ್ರೆಸ್ ಸರ್ಕಾರಕ್ಕೆ, ಅಮಾಯಕ ನಿರುದ್ಯೋಗಿಗಳ ಮೇಲೆ ಇರುವ ತಾತ್ಸಾರ ಧೋರಣೆಯನ್ನು ಪ್ರತಿಬಿಂಬಿಸಿದೆ. ಪಿಎಸ್‌ ಐ ಹುದ್ದೆ ಪರೀಕ್ಷಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ರಾಜ್ಯ ಬಿಜೆಪಿ ಬೆಂಬಲಿಸಿದೆ ಎಂದು…

Read More

ಬೆಂಗಳೂರು: ಯುವಕನೋರ್ವ ನೂರಾರು ಯುವತಿಯರ ಜೊತೆ ಚಾಟಿಂಗ್ ಮಾಡಿ, ನಕಲಿ ಖಾತೆ ಸೃಷ್ಟಿಸಿ ಸಿಕ್ಕಿಬಿದ್ದಿದ್ದಾನೆ. ಈ ಖದೀಮನ ಹೆಸರು ರಾಘವೇಂದ್ರ. ಉತ್ತರಹಳ್ಳಿಯ  ನಿವಾಸಿಯಾಗಿರುವ ರಾಘವೇಂದ್ರ ನೋಡಲು ಡೀಸೆಂಟ್ ಹುಡುಗನ ಥರ ಕಾಣಿಸಿದರೂ ಮಹಾನ್ ಕಿಲಾಡಿ. ಅಲ್ಲದೇ ಸೈಬರ್ ಕಳ್ಳ ಕೂಡ. ಇನ್ಸ್ಟಾಗ್ರಾಂನಲ್ಲಿ ಯುವತಿಯರ ಫೋಟೋ, ರೀಲ್ಸ್ ವೀಡಿಯೋಗಳನ್ನು ಕದ್ದು, ಫೇಸ್‌ ಬುಕ್‌ ನಲ್ಲಿ  ನಕಲಿ ಖಾತೆ ಸೃಷ್ಟಿಸಿ ನೂರಾರು ಜನರಿಂದ ಹಣ ಹಾಕಿಸಿಕೊಂಡು ಮೋಸ ಮಾಡುತ್ತಿದ್ದ ಖತರ್ನಾಕ್ ಸೈಬರ್ ಕಳ್ಳ ಇದೀಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಯುವತಿಯರ ಫೋಟೋಗಳನ್ನ ಬಳಸಿಕೊಂಡು ರಾಘವೇಂದ್ರ ಬ್ಲಾಕ್ ಮೇಲ್ ಮಾಡುತ್ತಿದ್ದ. ವೇಶ್ಯಾವಾಟಿಕೆ ದಂಧೆಗೂ ಈ ಫೋಟೋಗಳನ್ನು ಶೇರ್ ಮಾಡುತ್ತಿದ್ದ. ಇಂತಹ ಖದೀಮನ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟರೇ ಸಂತ್ರಸ್ತ ಯುವತಿಗೆ ಕಾಂಪ್ರಮೈಸ್ ಮಾಡಿಕೊಳ್ಳಿ ಎಂದು ಒತ್ತಡ ಹಾಕುತ್ತಿದ್ದಾರೆ. ಕೃತ್ಯವೆಸಗಿದ ರಾಘವೇಂದ್ರನ ಮೊಬೈಲ್ ಫೋನ್ ಪೊಲೀಸರು ವಶ ಪಡಿಸಿಕೊಂಡು ಪರಿಶೀಲನೆ ಮಾಡಿದಾಗ ನೂರಾರು ಯುವತಿಯರಿಗೆ ಚಾಟಿಂಗ್ ಮಾಡಿದ್ದು, ಹಣ ಹಾಕಿಸಿಕೊಂಡಿರುವುದು, ನಕಲಿ…

Read More

ಸಂವಿಧಾನ ದಿನಾಚರಣೆಯ ಅಂಗವಾಗಿ ಮಲ್ಲೇಶ್ವರದ ಯಶವಂತಪುರದಲ್ಲಿರುವ ಸಂವಿಧಾನ ವೃತ್ತದ ಬಳಿ ಇರುವ ಡಾ. ಬಿ. ಆ‌ರ್. ಅಂಬೇಡ್ಕ‌ರ್ ಅವರ ಪ್ರತಿಮೆಗೆ ಶಾಸಕ ಅಶ್ವಥ್ ನಾರಾಯಣ ಮಾಲಾರ್ಪಣೆ ಮಾಡಿದರು. ಇದೇ ವೇಳೆ, ನೆರೆದಿದ್ದ ಜನತೆಯೊಂದಿಗೆ ಸಂವಿಧಾನದ ಮಹತ್ವದ ಕುರಿತು ವಿಶೇಷ ಮಾಹಿತಿ ಹಂಚಿಕೊಂಡರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾಜಿ ವಿಧಾನಸಭಾ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಎಲ್ಲರಿಗೂ ಹೃತ್ತೂರ್ವಕ ಧನ್ಯವಾದ ತಿಳಿಸಿದರು. ಬೆಂಗಳೂರಿನ ಯಶವಂತಪುರ ಸಂವಿಧಾನ ವೃತ್ತದ ಬಳಿ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕ‌ರ್ ಅವರ ಸಹಿತ ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಆಧುನಿಕ ಭಾರತದ ಕನಸು ಕಂಡ ಎಲ್ಲರನ್ನು ಗೌರವಪೂರ್ವಕವಾಗಿ ಸ್ಮರಿಸೋಣ ಎಂದು ಕರೆ ನೀಡಿದರು.

Read More

ಬೆಂಗಳೂರು: ನಕಲಿ ಟಿಕೆಟ್ ತೋರಿಸಿ ಮಹಿಳೆಯೊಬ್ಬಳು ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ ಘಟನೆ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಕ್ರಮವಾಗಿ ವಿಮಾನ ನಿಲ್ದಾಣ ಪ್ರವೇಶಿಸಿದ್ದ ಮಹಿಳೆಯನ್ನು ಹರ್ಪಿತ್ ಕೌರ್ ಸೈನಿ ಎಂದು ಗುರುತಿಸಲಾಗಿದೆ. ಮಹಿಳೆ ಆಯುಷ್ ಶರ್ಮ ಎಂಬಾತನನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಬಂದಿದ್ದಳು. ಈ ವೇಳೆ ನಕಲಿ ಟಿಕೆಟ್ ತೋರಿಸಿ ಪಿಇಎಸ್‍ಸಿವರೆಗೂ ಹೋಗಿದ್ದಳು. ಬಳಿಕ ಲ್ಯಾಪ್‍ಟಾಪ್ ಕಳೆದುಹೋಗಿದೆ ಎಂದು ಹೊರಗೆ ಬಂದಿದ್ದಳು. ಈ ವೇಳೆ ಅನುಮಾನಗೊಂಡ ಸಿಬ್ಬಂದಿ ಟಿಕೆಟ್ ಪರಿಶೀಲನೆ ನಡೆಸಿದಾಗ ನಕಲಿ ಟಿಕೆಟ್ ಎನ್ನುವುದು ತಿಳಿದು ಬಂದಿದೆ.ಈ ಸಂಬಂಧ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಬೆಂಗಳೂರು: ಕಳೆದರಡು‌ ದಿನಗಳ‌ ಹಿಂದೆ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಪತ್ತೆ ಮಾಡಿದ್ದ ಭ್ರೂಣಹತ್ಯೆ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಕಳೆದ ಎರಡು ವರ್ಷದ ಆರೋಪಿಗಳ ಹತ್ಯೆ (ಗರ್ಭಪಾತ) ನಡೆಸಿ 5 ಕೋಟಿ ಹಣ ಸಂಪಾದನೆ ಮಾಡಿದ್ದರಂತೆ. ಭ್ರೂಣ ಯಾವುದು ಎಂದು  ಪತ್ತೆ ಮಾಡಲು 20 ರಿಂದ 25 ಸಾವಿರ ರೂ. ಭ್ರೂಣ ಹೊರ ತೆಗೆಯಲು 20 ರಿಂದ 25 ಸಾವಿರ ಚಾರ್ಜ್ ಮಾಡಲಾಗಿತ್ತು. 100% ನಿಖರ ರಿಸಲ್ಟ್ ಕೊಡ್ತಾರೆ ಎಂಬ ಆಧಾರದ ಮೇಲೆ  ಇವರಿಗೆ ಕಸ್ಟಮರ್ಸ್ ಕೂಡ ಹೆಚ್ಚಾಗುತ್ತಿದ್ದಾರಂತೆ. ಕಳೆದ ಎರಡು ವರ್ಷಗಳಲ್ಲಿ 5 ಕೋಟಿಗೂ ಹೆಚ್ಚು ವಹಿವಾಟು ನಡೆಸಿದ್ದಾರಂತೆ. ಈ ಬಗ್ಗೆ ಸುಳಿವು ಪಡೆದ ಪೊಲೀಸರು  ಗರ್ಭಿಣಿಯ ಜೊತೆ ಹೋಗಿ ಸ್ಟಿಂಗ್ ಆಪರೇಷನ್  ಮಾಡಿದ್ದು, ಭ್ರೂಣ ಪತ್ತೆ ಜಾಗ ಪತ್ತೆ ಮಾಡಲು ಜಿಪಿಎಸ್ ಸಹ ಬಳಸಿ, ಗರ್ಭಿಣಿಯರಿದ್ದ ಕಾರಿಗೆ ಜಿಪಿಎಸ್ ಅಳವಡಿಸಿ ನಿಖರ ಲೊಕೇಶನ್ ಪತ್ತೆ ಮಾಡಿದ್ದರು. ಆರೋಪಿ ನವೀನ್ ಪ್ರತೀ ಬಾರಿ ಆಲೆ ಮನೆಗಳು, ತೋಟದ ಮನೆಗಳ ಸ್ಥಳವನ್ನು ಚೇಂಜ್…

Read More

ಮೂರನೇ ಹಡಗು ಇಂಫಾಲ್ ಅನ್ನು ವಿತರಿಸಲಾಗಿದ್ದು, ನಾಲ್ಕನೇ ಹಡಗು ಸೂರತ್ ಸಜ್ಜುಗೊಳಿಸುವ ಸುಧಾರಿತ ಹಂತದಲ್ಲಿದೆ. ಹಡಗನ್ನು ಸ್ಥಳೀಯ ಉಕ್ಕಿನ DMR 249A ಬಳಸಿ ನಿರ್ಮಿಸಲಾಗಿದೆ ಮತ್ತು ಇದು ಭಾರತದಲ್ಲಿ ನಿರ್ಮಿಸಲಾದ ಅತಿದೊಡ್ಡ ಡೆಸ್ಟ್ರಾಯರ್‌ ಗಳಲ್ಲಿ ಒಂದಾಗಿದೆ, ಒಟ್ಟಾರೆ ಉದ್ದ 164 ಮೀಟರ್ ಮತ್ತು 7500 ಟನ್‌. ನೌಕೆಯು 312 ವ್ಯಕ್ತಿಗಳ ಸಿಬ್ಬಂದಿಗೆ ಅವಕಾಶ ಕಲ್ಪಿಸುತ್ತದೆ, 4000 ನಾಟಿಕಲ್ ಮೈಲ್‌ಗಳ ಸಹಿಷ್ಣುತೆಯನ್ನು ಹೊಂದಿದೆ ಮತ್ತು ಪ್ರದೇಶದ ಕಾರ್ಯಾಚರಣೆಯ ಹೊರಗೆ ವಿಸ್ತೃತ ಮಿಷನ್ ಸಮಯದೊಂದಿಗೆ ವಿಶಿಷ್ಟವಾದ 42 ದಿನಗಳ ಕಾರ್ಯಾಚರಣೆಯನ್ನು ಕೈಗೊಳ್ಳಬಹುದು. ಕಡಲ ಸಂಪ್ರದಾಯಗಳು ಮತ್ತು ನೌಕಾ ಪದ್ಧತಿಗಳ ಪ್ರಕಾರ, ಭಾರತೀಯ ನೌಕಾ ಹಡಗುಗಳು ಮತ್ತು ಜಲಾಂತರ್ಗಾಮಿಗಳಿಗೆ ಪ್ರಮುಖ ನಗರಗಳು, ಪರ್ವತ ಶ್ರೇಣಿಗಳು, ನದಿಗಳು, ಬಂದರುಗಳು ಮತ್ತು ದ್ವೀಪಗಳ ಹೆಸರನ್ನು ಇಡಲಾಗಿದೆ. ಭಾರತೀಯ ನೌಕಾಪಡೆಯು ತನ್ನ ಇತ್ತೀಚಿನ ಮತ್ತು ತಾಂತ್ರಿಕವಾಗಿ ಸುಧಾರಿತ ಯುದ್ಧನೌಕೆಗೆ ಐತಿಹಾಸಿಕ ನಗರವಾದ ಇಂಫಾಲ್ ಹೆಸರನ್ನು ಇಡುವುದರ ಬಗ್ಗೆ ಅಪಾರವಾಗಿ ಹೆಮ್ಮೆಪಡುತ್ತದೆ. ಇದು ಭಾರತದ ಈಶಾನ್ಯ ಪ್ರದೇಶದ ನಗರಕ್ಕೆ ಹೆಸರಿಸಲಾದ ಮೊದಲ…

Read More

ಉತ್ತರ ಪ್ರದೇಶದಲ್ಲಿ 12ನೇ ತರಗತಿ ವಿದ್ಯಾರ್ಥಿಯ ಮುಖದ ಮೇಲೆ ಯುವಕರ ಗುಂಪೊಂದು ಮೂತ್ರ ವಿಸರ್ಜನೆ ಮಾಡಿರುವ ಘಟನೆ ನಡೆದಿದೆ. ಸಂಬಂಧಿಕರ ಮನೆಯಿಂದ ಹಿಂತಿರುಗುವಾಗ ಯುವಕನನ್ನು ಅಪಹರಿಸಿದ ನಂತರ ಹಿಂಸಾಚಾರ ನಡೆಸಲಾಗಿದೆ. ವಿದ್ಯಾರ್ಥಿಗೆ ಯುವಕರು ಮಾರಣಾಂತಿಕವಾಗಿ ಥಳಿಸಿದ್ದಾರೆ. ಘಟನೆಯ ಬಳಿಕ ಪೊಲೀಸರು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 13 ರಂದು ಉತ್ತರ ಪ್ರದೇಶದ ಮೀರತ್ ನಲ್ಲಿ ಈ ಘಟನೆ ನಡೆದಿದೆ. ಯುವಕರು ವಿದ್ಯಾರ್ಥಿಗೆ ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ವಿಡಿಯೋ ಇದೀಗ ಹೊರಬಿದ್ದಿದೆ. ಮೊದಲ ವಿಡಿಯೋದಲ್ಲಿ ಆರೋಪಿಗಳಲ್ಲಿ ಒಬ್ಬ ವಿದ್ಯಾರ್ಥಿಯ ತಲೆ ಮತ್ತು ಬೆನ್ನಿಗೆ ಪದೇ ಪದೇ ಹೊಡೆಯುತ್ತಿರುವುದನ್ನು ಕಾಣಬಹುದು. ಇತರರು ಬಾಲಕನ ಸುತ್ತಲೂ ನಿಂತು ವಿದ್ಯಾರ್ಥಿಗೆ ಹೊಡೆಯದಂತೆ ಮನವಿ ಮಾಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಇದೇ ಕೃತ್ಯದ ಮುಂದುವರಿದ 2ನೇ ವಿಡಿಯೋ ಅತ್ಯಂತ ಆಘಾತಕಾರಿಯಾಗಿ ಕಂಡು ಬಂದಿದ್ದು, ವಿದ್ಯಾರ್ಥಿ ಮುಖದ ಮೇಲೆ ಪಾಪಿಗಳು ಮೂತ್ರ ವಿಸರ್ಜನೆ ಮಾಡುತ್ತಿರುವುದು ಕಂಡು ಬಂದಿದೆ. ವಿದ್ಯಾರ್ಥಿಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು…

Read More