Author: admin

2023 ರ ಬೂಕರ್ ಪ್ರಶಸ್ತಿಯು ಐರಿಶ್ ಬರಹಗಾರ ಪೌಲ್ ಲಿಂಚ್ ಅವರ ಕಾದಂಬರಿ ‘ಪ್ರೊಫೆಟ್ ಸಾಂಗ್’ ಗೆ ಸಂದಿದೆ. ಪೌಲ್ ಲಿಂಚ್ ಅವರ ಡಿಸ್ಟೋಪಿಯನ್ ಕಾದಂಬರಿಯನ್ನು 6 ಶಾರ್ಟ್‌ಲಿಸ್ಟ್ ಮಾಡಿದ ಪುಸ್ತಕಗಳಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ‘ಪ್ರವಾದಿ ಗೀತೆ’ 46 ವರ್ಷದ ಪಾಲ್ ಲಿಂಚ್ ಅವರ ಐದನೇ ಕೃತಿ. ಪೌಲ್ ಲಿಂಚ್ ಅವರು ಬುಕರ್ ಪ್ರಶಸ್ತಿಯನ್ನು ಗೆದ್ದ ಐದನೇ ಐರಿಶ್ ಲೇಖಕರಾಗಿದ್ದಾರೆ. ಕಾದಂಬರಿಯ ಕಥಾವಸ್ತುವು ದೇಶವು ನಿರಂಕುಶಾಧಿಕಾರ ಮತ್ತು ಗಲಭೆಗಳಿಗೆ ಇಳಿದಾಗ ಕುಟುಂಬವು ಎದುರಿಸುವ ಸಮಸ್ಯೆಗಳ ಸುತ್ತ ಸುತ್ತುತ್ತದೆ. ಲಿಂಚ್ ಅವರ ಭಾವನಾತ್ಮಕ ಕಥೆ ಹೇಳುವಿಕೆ ಮತ್ತು ಶಕ್ತಿಯುತ ಭಾಷೆ ಅವರನ್ನು ಪ್ರಶಸ್ತಿ ವಿಜೇತರನ್ನಾಗಿ ಮಾಡಿತು. ಈ ಬರವಣಿಗೆಯು ಸಿರಿಯನ್ ಯುದ್ಧ ಮತ್ತು ನಿರಾಶ್ರಿತರ ಬಿಕ್ಕಟ್ಟಿನಿಂದ ಪ್ರೇರಿತವಾಗಿದೆ ಎಂದು ಪೌಲ್ ಲಿಂಚ್ ಹೇಳಿದ್ದಾರೆ. ಈ ಪ್ರಶಸ್ತಿಯನ್ನು ತನ್ನ ದೇಶಕ್ಕೆ ಮರಳಿ ತಂದಿರುವುದಕ್ಕೆ ಹೆಮ್ಮೆಯಾಗುತ್ತಿದೆ. ಡಬ್ಲಿನ್‌ನಲ್ಲಿನ ಗಲಭೆಗಳು ಎಚ್ಚರಿಕೆ ಮತ್ತು ದಿಗ್ಭ್ರಮೆಯನ್ನು ಉಂಟುಮಾಡಿದವು. ಆದರೆ ಕಾದಂಬರಿಗೂ ಇತ್ತೀಚಿನ ನಾಗರಿಕ ಅಶಾಂತಿಗೂ ಯಾವುದೇ ಸಂಬಂಧವಿಲ್ಲ.…

Read More

ಈ ಪದಾರ್ಥಗಳು ನಿಮ್ಮ ಆಹಾರದಲ್ಲಿ ಇದ್ದರೆ… ಕಿಡ್ನಿಗಳು ಸುರಕ್ಷಿತ..! ಪ್ರತಿಯೊಬ್ಬರೂ ತಮ್ಮ ಮೂತ್ರಪಿಂಡಗಳನ್ನು ರಕ್ಷಿಸಿಕೊಳ್ಳುವುದು ಅತ್ಯಂತ ಮುಖ್ಯ ಕೆಲಸ. ಮೂತ್ರಪಿಂಡಗಳು ದೇಹದಲ್ಲಿ ದ್ರವಗಳ ಸಮತೋಲನವನ್ನು ಕಾಪಾಡಿಕೊಳ್ಳುತ್ತವೆ. ಇದಲ್ಲದೆ, ಮೂತ್ರಪಿಂಡಗಳು ದೇಹದಿಂದ ವಿಷ ಮತ್ತು ತ್ಯಾಜ್ಯವನ್ನು ನಿಯಮಿತವಾಗಿ ಹೊರಹಾಕಲು ಸಹಾಯ ಮಾಡುತ್ತವೆ. ನಮ್ಮ ಆಹಾರದಲ್ಲಿ ಉದ್ದಿನ ಬೇಳೆ, ಖಿಚಡಿ, ಪರೋಟ, ದೋಸೆ, ಇಡ್ಲಿ, ಉಷ್ಮಾ, ಬೆಂಡೆಕಾಯಿ ಕರಿಬೇವುಗಳನ್ನು ಹೆಚ್ಚು ಸೇವಿಸಿದರೆ ಕಿಡ್ನಿಗಳು ಆರೋಗ್ಯವಾಗಿರುತ್ತವೆ. ಈ ಆಹಾರಗಳಿಂದ ಕಿಡ್ನಿಗಳನ್ನು ಯಾವುದೇ ಸಮಸ್ಯೆಗಳಿಂದ ರಕ್ಷಿಸಬಹುದು. ನಿಮ್ಮ ಹೃದಯ ಆರೋಗ್ಯವಾಗಿರಲು ಸಮಯಕ್ಕೆ ಸರಿಯಾಗಿ ಊಟ ಮಾಡಿ… ಸರಿಯಾದ ಸಮಯಕ್ಕೆ ಪ್ರತಿ ದಿನ ಊಟ ಮಾಡುವ ಅಭ್ಯಾಸ ಇದ್ದವರಿಗೆ ದೇಹದಲ್ಲಿ ಇನ್ಸುಲಿನ್ ಸೂಕ್ಷ್ಮತೆ ಹೆಚ್ಚಾಗಿರುತ್ತದೆ. ಹೀಗಾಗಿ ಒಂದು ವೇಳೆ ನೀವು ಸಕ್ಕರೆ ಕಾಯಿಲೆ ಹೊಂದಿರುವ ರೋಗಿಯಾಗಿದ್ದು, ಪ್ರತಿದಿನ ಒಂದೇ ಸಮಯಕ್ಕೆ ಊಟ ಮಾಡುವ ಅಭ್ಯಾಸ ಮಾಡಿಕೊಳ್ಳದಿದ್ದರೆ ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಇರುತ್ತದೆ. ಸಮಯಕ್ಕೆ ಸರಿಯಾಗಿ ಆದಷ್ಟು ಬೇಗನೆ ರಾತ್ರಿ ಹೊತ್ತು ಊಟ ಮಾಡುವುದರಿಂದ ನಿಮ್ಮ…

Read More

IVನೇ ತರಗತಿ ವಿದ್ಯಾರ್ಥಿಯ ಮೇಲೆ ಸಹಪಾಠಿಗಳು ಕಂಪಾಸ್‌ ನಿಂದ ಹಲ್ಲೆ ನಡೆಸಿದ್ದಾರೆ. ಮಕ್ಕಳ ನಡುವಿನ ಜಗಳದ ವೇಳೆ ಈ ದಾಳಿ ನಡೆದಿದೆ. ಮೂವರು ಸಹಪಾಠಿಗಳು ನಡೆಸಿದ ದಾಳಿಯಲ್ಲಿ ವಿದ್ಯಾರ್ಥಿಗೆ 108 ಬಾರಿ ಇರಿದಿದೆ. ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಏರೋಡ್ರೋಮ್ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನವೆಂಬರ್ 24 ರಂದು ಈ ಘಟನೆ ನಡೆದಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಕ್ಕಳ ನಡುವೆ ನಡೆದ ಜಗಳದಲ್ಲಿ ಸಹಪಾಠಿಗಳು ಜ್ಯಾಮಿತೀಯ ಕಂಪಾಸ್‌ ನಿಂದ 108 ಬಾರಿ ಇರಿದಿದ್ದಾರೆ ಎಂದು ತಂದೆ ಹೇಳಿದ್ದಾರೆ. ಮಗ ಅಳುತ್ತಾ ಮನೆಗೆ ಬಂದ. ಮಗನ ದೇಹದ ತುಂಬ ಗಾಯ, ಗಾಯದ ಗುರುತುಗಳಿವೆ ಎಂದು ಆರೋಪಿಸಿದರು. ತನ್ನ ಮಗ ಮನೆಗೆ ಮರಳಿದ ನಂತರ, ಅವನು ತನ್ನ ದುಃಖವನ್ನು ಕಣ್ಣೀರಿನಿಂದ ವಿವರಿಸಿದನು. ನನ್ನ ಸಹಪಾಠಿಗಳು ನನ್ನ ಮಗನನ್ನು ಏಕೆ ಕ್ರೂರವಾಗಿ ನಡೆಸಿಕೊಂಡರು ಎಂದು ನನಗೆ ತಿಳಿದಿಲ್ಲ. ‘ಕೋಣೆಯಿದ್ದರೂ ತರಗತಿಯ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡಲು ಶಾಲಾ ಆಡಳಿತ…

Read More

ತನ್ನ ಏಳು ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಳು ತನ್ನ ಲಿವ್-ಇನ್ ಮಿತ್ರನಿಗೆ ಪ್ರೋತ್ಸಾಹಿಸಿದ್ದಕ್ಕಾಗಿ ಕೇರಳದ ಮಹಿಳೆಯೊಬ್ಬರಿಗೆ 40 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ 6 ತಿಂಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ತಿರುವನಂತಪುರಂ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಆ‌ರ್. ರೇಖಾ ಈ ಶಿಕ್ಷೆಯನ್ನು ಘೋಷಿಸಿದ್ದಾರೆ. ಮಾರ್ಚ್‌ 2018 ಮತ್ತು ಸೆಪ್ಟೆಂಬರ್ 2019 ರ ನಡುವೆ ಏಳು ವರ್ಷದ ಬಾಲಕಿಯ ಮೇಲೆ ಶಿಶುಪಾಲನ್ ಎಂಬ ವ್ಯಕ್ತಿ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ನ್ಯಾಯಾಲಯವು ಈ ತೀರ್ಪು ಪ್ರಕಟಿಸಿದೆ.

Read More

ಬೆಂಗಳೂರು: ಬಿ.ವೈ. ವಿಜಯೇಂದ್ರ ಹಾಗೂ ಕುಮಾರಸ್ವಾಮಿ ತಮ್ಮನ್ನು ಸೋಲಿಸಲು ಸಾಧ್ಯವಿಲ್ಲ. ಅದನ್ನ ತೀರ್ಮಾನ ಮಾಡಬೇಕಾಗಿರೋದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನ  ಎಂದು  ಸಂಸದ ಡಿ.ಕೆ.ಸುರೇಶ್  ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ-ವಿಜಯೇಂದ್ರ  28ಕ್ಕೆ 28 ಕ್ಷೇತ್ರ ಗೆಲ್ಲುತ್ತೇವೆ. ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಅನ್ನ ಸೋಲಿಸುತ್ತೇವೆ ಎಂಬ ವಿಜಯೇಂದ್ರ ಹೇಳಿಕೆ ನೀಡಿದ ವಿಚಾರಕ್ಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸಬೇಕು ಎನ್ನುವುದನ್ನು ನಾವೇ ತೀರ್ಮಾನ ಮಾಡುವುದಕ್ಕೆ ಆಗುವುದಿಲ್ಲ. ಅದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಅವರೆಲ್ಲಿ ಸ್ಪರ್ಧಿಸಿ ಎಂದು ಟಿಕೇಟ್ ನೀಡುತ್ತಾರೋ ಅಲ್ಲಿ ಸ್ಪರ್ಧಿಸುತ್ತೇನೆ ಎಂದು ಸುದ್ದಿಗಾರರ ಪ್ರಶ್ನೆಗೆ ಡಿಕೆಶಿ ಉತ್ತರಿಸಿದರು.

Read More

ಬೆಂಗಳೂರು: ಪಿಎಸ್ ಐ ಹುದ್ದೆ ಆಕಾಂಕ್ಷಿಗಳ ಬೇಡಿಕೆ ನ್ಯಾಯಸಮ್ಮತವಾಗಿದ್ದು, ಸರ್ಕಾರ ಈ ಕೂಡಲೇ ಪರೀಕ್ಷೆಯನ್ನು ಮುಂದೂಡಿ ಸೂಕ್ತ ಕಾಲಾವಕಾಶ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ. 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಮರು ಪರೀಕ್ಷೆಗೆ ಅತ್ಯಂತ ಕಡಿಮೆ ಕಾಲಾವಕಾಶವನ್ನು ನಿಗದಿಪಡಿಸಿರುವ ಸರ್ಕಾರದ ಅವೈಜ್ಞಾನಿಕ ನಿರ್ಧಾರವನ್ನು ಪ್ರತಿಭಟಿಸಿ, ಪರೀಕ್ಷಾ ದಿನಾಂಕವನ್ನು ಮುಂದೂಡಿ ಸಮಯ ವಿಸ್ತರಿಸುವಂತೆ ಜನತಾ ದರ್ಶನದಲ್ಲಿ ಮನವಿ ಮಾಡಲು ಮುಖ್ಯಮಂತ್ರಿಗಳ ಬಳಿಗೆ ತೆರಳಿದ್ದ ಪರೀಕ್ಷಾರ್ಥಿ ನಿರುದ್ಯೋಗಿಗಳನ್ನು ಅಮಾನವೀಯವಾಗಿ ನಡೆಸಿಕೊಂಡು ಪೊಲೀಸ್‌ ಬಂಧನಕ್ಕೆ ಒಳಪಡಿಸಿರುವುದು ಅತ್ಯಂತ ಖಂಡನೀಯ ಕ್ರಮವಾಗಿದೆ. ಪರೀಕ್ಷಾ ಹಗರಣದಿಂದ ಈ ಮೊದಲೇ ಹೈರಾಣಾಗಿ ಹೋಗಿದ್ದ ಪಿಎಸ್‌ ಐ ಹುದ್ದೆ ಆಕಾಂಕ್ಷಿಗಳ ಮನವಿ ಅತ್ಯಂತ ನ್ಯಾಯ ಸಮ್ಮತವಾಗಿದ್ದು ಇದನ್ನು ಮುಖ್ಯಮಂತ್ರಿಗಳು ಸಹಾನುಭೂತಿಯಿಂದ ಪರಿಶೀಲಿಸಬೇಕಿತ್ತು. ಆದರೆ ಪೊಲೀಸರನ್ನು ಬಿಟ್ಟು ಬಂಧಿಸಿದ ಕ್ರಮ ಕಾಂಗ್ರೆಸ್ ಸರ್ಕಾರಕ್ಕೆ, ಅಮಾಯಕ ನಿರುದ್ಯೋಗಿಗಳ ಮೇಲೆ ಇರುವ ತಾತ್ಸಾರ ಧೋರಣೆಯನ್ನು ಪ್ರತಿಬಿಂಬಿಸಿದೆ. ಪಿಎಸ್‌ ಐ ಹುದ್ದೆ ಪರೀಕ್ಷಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ರಾಜ್ಯ ಬಿಜೆಪಿ ಬೆಂಬಲಿಸಿದೆ ಎಂದು…

Read More

ಬೆಂಗಳೂರು: ಯುವಕನೋರ್ವ ನೂರಾರು ಯುವತಿಯರ ಜೊತೆ ಚಾಟಿಂಗ್ ಮಾಡಿ, ನಕಲಿ ಖಾತೆ ಸೃಷ್ಟಿಸಿ ಸಿಕ್ಕಿಬಿದ್ದಿದ್ದಾನೆ. ಈ ಖದೀಮನ ಹೆಸರು ರಾಘವೇಂದ್ರ. ಉತ್ತರಹಳ್ಳಿಯ  ನಿವಾಸಿಯಾಗಿರುವ ರಾಘವೇಂದ್ರ ನೋಡಲು ಡೀಸೆಂಟ್ ಹುಡುಗನ ಥರ ಕಾಣಿಸಿದರೂ ಮಹಾನ್ ಕಿಲಾಡಿ. ಅಲ್ಲದೇ ಸೈಬರ್ ಕಳ್ಳ ಕೂಡ. ಇನ್ಸ್ಟಾಗ್ರಾಂನಲ್ಲಿ ಯುವತಿಯರ ಫೋಟೋ, ರೀಲ್ಸ್ ವೀಡಿಯೋಗಳನ್ನು ಕದ್ದು, ಫೇಸ್‌ ಬುಕ್‌ ನಲ್ಲಿ  ನಕಲಿ ಖಾತೆ ಸೃಷ್ಟಿಸಿ ನೂರಾರು ಜನರಿಂದ ಹಣ ಹಾಕಿಸಿಕೊಂಡು ಮೋಸ ಮಾಡುತ್ತಿದ್ದ ಖತರ್ನಾಕ್ ಸೈಬರ್ ಕಳ್ಳ ಇದೀಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಯುವತಿಯರ ಫೋಟೋಗಳನ್ನ ಬಳಸಿಕೊಂಡು ರಾಘವೇಂದ್ರ ಬ್ಲಾಕ್ ಮೇಲ್ ಮಾಡುತ್ತಿದ್ದ. ವೇಶ್ಯಾವಾಟಿಕೆ ದಂಧೆಗೂ ಈ ಫೋಟೋಗಳನ್ನು ಶೇರ್ ಮಾಡುತ್ತಿದ್ದ. ಇಂತಹ ಖದೀಮನ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟರೇ ಸಂತ್ರಸ್ತ ಯುವತಿಗೆ ಕಾಂಪ್ರಮೈಸ್ ಮಾಡಿಕೊಳ್ಳಿ ಎಂದು ಒತ್ತಡ ಹಾಕುತ್ತಿದ್ದಾರೆ. ಕೃತ್ಯವೆಸಗಿದ ರಾಘವೇಂದ್ರನ ಮೊಬೈಲ್ ಫೋನ್ ಪೊಲೀಸರು ವಶ ಪಡಿಸಿಕೊಂಡು ಪರಿಶೀಲನೆ ಮಾಡಿದಾಗ ನೂರಾರು ಯುವತಿಯರಿಗೆ ಚಾಟಿಂಗ್ ಮಾಡಿದ್ದು, ಹಣ ಹಾಕಿಸಿಕೊಂಡಿರುವುದು, ನಕಲಿ…

Read More

ಸಂವಿಧಾನ ದಿನಾಚರಣೆಯ ಅಂಗವಾಗಿ ಮಲ್ಲೇಶ್ವರದ ಯಶವಂತಪುರದಲ್ಲಿರುವ ಸಂವಿಧಾನ ವೃತ್ತದ ಬಳಿ ಇರುವ ಡಾ. ಬಿ. ಆ‌ರ್. ಅಂಬೇಡ್ಕ‌ರ್ ಅವರ ಪ್ರತಿಮೆಗೆ ಶಾಸಕ ಅಶ್ವಥ್ ನಾರಾಯಣ ಮಾಲಾರ್ಪಣೆ ಮಾಡಿದರು. ಇದೇ ವೇಳೆ, ನೆರೆದಿದ್ದ ಜನತೆಯೊಂದಿಗೆ ಸಂವಿಧಾನದ ಮಹತ್ವದ ಕುರಿತು ವಿಶೇಷ ಮಾಹಿತಿ ಹಂಚಿಕೊಂಡರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾಜಿ ವಿಧಾನಸಭಾ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಎಲ್ಲರಿಗೂ ಹೃತ್ತೂರ್ವಕ ಧನ್ಯವಾದ ತಿಳಿಸಿದರು. ಬೆಂಗಳೂರಿನ ಯಶವಂತಪುರ ಸಂವಿಧಾನ ವೃತ್ತದ ಬಳಿ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕ‌ರ್ ಅವರ ಸಹಿತ ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಆಧುನಿಕ ಭಾರತದ ಕನಸು ಕಂಡ ಎಲ್ಲರನ್ನು ಗೌರವಪೂರ್ವಕವಾಗಿ ಸ್ಮರಿಸೋಣ ಎಂದು ಕರೆ ನೀಡಿದರು.

Read More

ಬೆಂಗಳೂರು: ನಕಲಿ ಟಿಕೆಟ್ ತೋರಿಸಿ ಮಹಿಳೆಯೊಬ್ಬಳು ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ ಘಟನೆ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಕ್ರಮವಾಗಿ ವಿಮಾನ ನಿಲ್ದಾಣ ಪ್ರವೇಶಿಸಿದ್ದ ಮಹಿಳೆಯನ್ನು ಹರ್ಪಿತ್ ಕೌರ್ ಸೈನಿ ಎಂದು ಗುರುತಿಸಲಾಗಿದೆ. ಮಹಿಳೆ ಆಯುಷ್ ಶರ್ಮ ಎಂಬಾತನನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಬಂದಿದ್ದಳು. ಈ ವೇಳೆ ನಕಲಿ ಟಿಕೆಟ್ ತೋರಿಸಿ ಪಿಇಎಸ್‍ಸಿವರೆಗೂ ಹೋಗಿದ್ದಳು. ಬಳಿಕ ಲ್ಯಾಪ್‍ಟಾಪ್ ಕಳೆದುಹೋಗಿದೆ ಎಂದು ಹೊರಗೆ ಬಂದಿದ್ದಳು. ಈ ವೇಳೆ ಅನುಮಾನಗೊಂಡ ಸಿಬ್ಬಂದಿ ಟಿಕೆಟ್ ಪರಿಶೀಲನೆ ನಡೆಸಿದಾಗ ನಕಲಿ ಟಿಕೆಟ್ ಎನ್ನುವುದು ತಿಳಿದು ಬಂದಿದೆ.ಈ ಸಂಬಂಧ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಬೆಂಗಳೂರು: ಕಳೆದರಡು‌ ದಿನಗಳ‌ ಹಿಂದೆ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಪತ್ತೆ ಮಾಡಿದ್ದ ಭ್ರೂಣಹತ್ಯೆ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಕಳೆದ ಎರಡು ವರ್ಷದ ಆರೋಪಿಗಳ ಹತ್ಯೆ (ಗರ್ಭಪಾತ) ನಡೆಸಿ 5 ಕೋಟಿ ಹಣ ಸಂಪಾದನೆ ಮಾಡಿದ್ದರಂತೆ. ಭ್ರೂಣ ಯಾವುದು ಎಂದು  ಪತ್ತೆ ಮಾಡಲು 20 ರಿಂದ 25 ಸಾವಿರ ರೂ. ಭ್ರೂಣ ಹೊರ ತೆಗೆಯಲು 20 ರಿಂದ 25 ಸಾವಿರ ಚಾರ್ಜ್ ಮಾಡಲಾಗಿತ್ತು. 100% ನಿಖರ ರಿಸಲ್ಟ್ ಕೊಡ್ತಾರೆ ಎಂಬ ಆಧಾರದ ಮೇಲೆ  ಇವರಿಗೆ ಕಸ್ಟಮರ್ಸ್ ಕೂಡ ಹೆಚ್ಚಾಗುತ್ತಿದ್ದಾರಂತೆ. ಕಳೆದ ಎರಡು ವರ್ಷಗಳಲ್ಲಿ 5 ಕೋಟಿಗೂ ಹೆಚ್ಚು ವಹಿವಾಟು ನಡೆಸಿದ್ದಾರಂತೆ. ಈ ಬಗ್ಗೆ ಸುಳಿವು ಪಡೆದ ಪೊಲೀಸರು  ಗರ್ಭಿಣಿಯ ಜೊತೆ ಹೋಗಿ ಸ್ಟಿಂಗ್ ಆಪರೇಷನ್  ಮಾಡಿದ್ದು, ಭ್ರೂಣ ಪತ್ತೆ ಜಾಗ ಪತ್ತೆ ಮಾಡಲು ಜಿಪಿಎಸ್ ಸಹ ಬಳಸಿ, ಗರ್ಭಿಣಿಯರಿದ್ದ ಕಾರಿಗೆ ಜಿಪಿಎಸ್ ಅಳವಡಿಸಿ ನಿಖರ ಲೊಕೇಶನ್ ಪತ್ತೆ ಮಾಡಿದ್ದರು. ಆರೋಪಿ ನವೀನ್ ಪ್ರತೀ ಬಾರಿ ಆಲೆ ಮನೆಗಳು, ತೋಟದ ಮನೆಗಳ ಸ್ಥಳವನ್ನು ಚೇಂಜ್…

Read More