Author: admin

ಒಮ್ಮೆ ಒಬ್ಬ ರಾಜ ಕುದುರೆ ಏರಿ ವನವಿಹಾರ ಮಾಡುತ್ತಾ, ಸೈನಿಕರಿರುವ ತನ್ನ ಬಿಡಾರದಿಂದ ಕಾಡಿನ ಸೌಂದರ್ಯ ಸವಿಯಲು ಬಹಳ ದೂರ ಒಬ್ಬನೇ ಬಂದು ಬಿಡುತ್ತಾನೆ. ಇತ್ತ ಬಿಡಾರಗಳಲ್ಲಿ ವಿಹರಿಸುತ್ತಿದ್ದ ಸೈನಿಕರು ರಾಜನಿಲ್ಲದಿರುವುದನ್ನು ಕಂಡು ರಾಜನನ್ನು ಹುಡುಕುತ್ತಾ ಹೊರಡುತ್ತಾರೆ. ಇತ್ತ ರಾಜ ಕಾಡಿನ ಒಂದು ಪ್ರದೇಶಕ್ಕೆ ಬಂದು ಒಂದು ಮರದ ಕೆಳಗೆ ಕುದುರೆ ನಿಲ್ಲಿಸುತ್ತಾನೆ. ಇದ್ದಕ್ಕಿದ್ದಂತೆ ಮರೆಯಲ್ಲಿದ್ದ ಅಡಗಿದ್ದ ಶತ್ರುಗಳು ಕುದುರೆ ಏರಿಕೊಂಡು ಬಂದು ರಾಜನನ್ನು ಮುತ್ತಿಗೆ ಹಾಕುತ್ತಾರೆ, ಆದರೆ ರಾಜ ಖತ್ತಿಯನ್ನು ಬಿಡಾರದಲ್ಲೇ ಬಿಟ್ಟು ಬಂದಿರುತ್ತಾನೆ, ಖತ್ತಿ ಹಿಡಿದ ಶತ್ರುಗಳು ಸುತ್ತಲೂ  ರಾಜನನ್ನು ಸುತ್ತುವರಿಯುತ್ತಾರೆ, ಈಗೇನು ಮಾಡುವುದು ಅಂದುಕೊಳ್ಳುವಾಗ ಅದೇ ಮರದ ಮೇಲೆ ಕಟ್ಟಿಗೆ ಕಡಿಯಲೆಂದು ಖತ್ತಿ ಹಿಡಿದು ಹತ್ತಿದ್ದ ಜವರನೆಂಬ ವ್ಯಕ್ತಿ ಮಹಾರಾಜರೇ ತೆಗೆದುಕೊಳ್ಳಿ ಎಂದು ತನ್ನ ಕೈಲಿದ್ದ ಖತ್ತಿಯನ್ನು ರಾಜನ ಎದುರು ಬೀಳುವಂತೆ ಕೆಳಗೆ ಎಸೆಯುತ್ತಾನೆ. ರಾಜ ಆ ಖತ್ತಿಯನ್ನು ತೆಗೆದುಕೊಂಡು ಶತ್ರುಗಳನ್ನು ಸದೆಬಡಿಯುತ್ತಾನೆ, ಉಳಿದ ಶತ್ರುಗಳು ಅಲ್ಲಿಂದ ಪಲಾಯನಗೈಯುತ್ತಾರೆ. ನಂತರ, ಜವರನು ಮರದಿಂದ ಕೆಳಗೆ ಇಳಿದು ಬರುತ್ತಾನೆ.…

Read More

ತುಮಕೂರು: ಜಿಲ್ಲಾ ಬಂಜಾರ (ಲಂಬಾಣಿ) ಸೇವಾಲಾಲ್ ಸೇವಾ ಸಂಘ (ರಿ) ಹಾಗೂ ತುಮಕೂರು ಶ್ರೀ ಸೇವಾಲಾಲ್ ಪತ್ತಿನ ಸಹಕಾರ ಸಂಘ (ರಿ)ಗಳ ನೂತನ ವರ್ಷದ ಕ್ಯಾಲೆಂಡರ್ ಅನ್ನು ನಗರದ ಶಾಸಕರಾದ ಜ್ಯೋತಿ ಗಣೇಶ್ ಅವರು ಬುಧವಾರ ಗಾಂಧಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಬಿಡುಗಡೆಗೊಳಿಸಿದರು. ಕ್ಯಾಲೆಂಡರ್ ಬಿಡುಗಡೆ ಸಂದರ್ಭದಲ್ಲಿ ಸಂಘದ ಚಟುವಟಿಕೆಗಳು ಹಾಗೂ ಸಮಾಜದ ಅಭಿವೃದ್ಧಿಗೆ ಕೈಗೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಸಮಾಜದ ಏಕತೆ ಹಾಗೂ ಪ್ರಗತಿಗೆ ಇಂತಹ ಸಂಘಟನೆಗಳ ಪಾತ್ರ ಮಹತ್ವದ್ದೆಂದು ಶಾಸಕರು ಈ ವೇಳೆ ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ನಾರಾಯಣ್ ನಾಯ್ಕ ಡಿ., ಪ್ರಧಾನ ಕಾರ್ಯದರ್ಶಿ ಶಂಕರ್ ಬಿ. ಉಪಾಧ್ಯಕ್ಷರಾದ ಕುಬೇಂದ್ರ ನಾಯ್ಕ, ಸಂಘಟನಾ ಕಾರ್ಯದರ್ಶಿಗಳಾದ ಸ್ವಾಮಿ ಲಾಲ್, ಶ್ರೀ ಸೇವಾಲಾಲ್ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕುಬೇಂದ್ರ ನಾಯ್ಕ, ಉಪಾಧ್ಯಕ್ಷರಾದ ಶಂಕರ್ ಆರ್. ನಾಯ್ಕ, ಹಿರಿಯ ಮುಖಂಡ ದೇನಾ ನಾಯ್ಕ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಜನಾಂಗದ ಮುಖಂಡರು ಹಾಜರಿದ್ದು, ಕಾರ್ಯಕ್ರಮಕ್ಕೆ ಶೋಭೆ…

Read More

ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಂದ ಕುಂಟೆ ನಾಗರಾಜಯ್ಯ ನುಡಿ ನಮನ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ಆಯೋಜನೆ ಮಾಡಲಾಗಿತ್ತು. ಹಿರಿಯ ದಲಿತ ಮುಖಂಡ ಹೋರಾಟಗಾರ ಕುಂದೂರು ತಿಮ್ಮಯ್ಯ ನೇತೃತ್ವದಲ್ಲಿ ನಾಗರಾಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮ ಸಲ್ಲಿಸಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ ಕುಂದೂರು ತಿಮ್ಮಯ್ಯ ಮಾತನಾಡಿ, 1972 –73 ರಲ್ಲಿ ತುಮಕೂರು ನಗರದ ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಯಾಗಿದ್ದ ಬಂದ ಕುಂಟೆ ನಾಗರಾಜಯ್ಯ ಆ ದಿನಗಳಲ್ಲಿ ಕೆಲವು ದಲಿತ ವಿದ್ಯಾರ್ಥಿಗಳೊಂದಿಗೆ ಸೇರಿ ಅಸ್ಪೃಶ್ಯತಾ ನಿವಾರಣಾ ಸಂಘ ಹಾಗೂ 1974– 75 ರಲ್ಲಿ ದಲಿತ ವಿದ್ಯಾರ್ಥಿ ಸಂಘ ಸ್ಥಾಪಿಸುವ ಮೊದಲ ಹೋರಾಟದೊಂದಿಗೆ ನಾಗರಾಜಯ್ಯನವರ ಸಾಮಾಜಿಕ ನ್ಯಾಯದ ಹೋರಾಟ ಆರಂಭವಾಯಿತು. ನಂತರದ ದಿನಗಳಲ್ಲಿ ಇವರ ಹೋರಾಟ ಶಿಖರ ಶೃಂಗ ತಲುಪಿದ್ದು , ನಮ್ಮ ತುರುವೇಕೆರೆ ತಾಲೂಕಿನಲ್ಲೂ ಸಹ ಅನೇಕ ಹೋರಾಟಗಳ ಮುಂದಾಳತ್ವವನ್ನು ವಹಿಸಿ ಹೋರಾಟಕ್ಕೆ ಮುನ್ನುಡಿ ಬರೆದ ಏಕೈಕ ವ್ಯಕ್ತಿ ಬಂದ…

Read More

ತುರುವೇಕೆರೆ: ಪಟ್ಟಣದ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ತುರುವೇಕೆರೆ ತಾಲೂಕು ಮತ್ತು ಪಶುವೈದ್ಯ ಪರೀಕ್ಷಕರ ತರಬೇತಿ ಕೇಂದ್ರ ತುಮಕೂರು ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಡಿ.7 ಮತ್ತು 8 ರಂದು ಪಟ್ಟಣದ ಪತಂಜಲಿ ಯೋಗ ಮಂದಿರದಲ್ಲಿ ತಾಲೂಕಿನ ರೈತರಿಗೆ ಉಚಿತವಾಗಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ಪಶುವೈದ್ಯರನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಲು ಕೋರಿದೆ. ತರಬೇತಿಗೆ ಬರುವ ಆಸಕ್ತ ರೈತರು 1. ಆಧಾರ್ ಕಾರ್ಡ್, 2. ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿ, 3. ಎರಡು ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ, 4. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರಿದ್ದರೆ ಜಾತಿ ಪ್ರಮಾಣ ಪತ್ರ ಇವುಗಳನ್ನು ಕಡ್ಡಾಯವಾಗಿ ತರಬೇಕಾಗಿದೆ. ಆಸಕ್ತ ರೈತರು ತರಬೇತಿಯ ಸದುಪಯೋಗವನ್ನು ಪಡೆಯಲು ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ. ರೇವಣಸಿದ್ದಯ್ಯ ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ತುಮಕೂರು: ಕಲುಷಿತ ನೀರು, ಮಾಲಿನ್ಯ ಸೇರಿದಂತೆ ಯಾವುದೇ ಪ್ರಕೃತಿ ವಿಕೋಪದಂತಹ ದೂರುಗಳಿದ್ದಲ್ಲಿ ಸಾರ್ವಜನಿಕರು ಕಂಟ್ರೋಲ್ ರೂಮ್ ನಂಬರಿಗೆ ದೂರು ನೀಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು, ಕಲುಷಿತ ನೀರು, ಮಾಲಿನ್ಯ ಸೇರಿದಂತೆ ಯಾವುದೇ ದೂರುಗಳಿದ್ದಲ್ಲಿ ಸಾರ್ವಜನಿಕರು ಜಿಲ್ಲೆಯಲ್ಲಿ ತೆರೆಯಲಾಗಿರುವ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ 7304975519 ಅಥವಾ 0816–2213400, 155304 ಈ ನಂಬರಿಗೆ ಸಾರ್ವಜನಿಕರು ದೂರು ಸಲ್ಲಿಸಬೇಕು. ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಬಹುದಾಗಿದೆ ಎಂದರು. ಮಧುಗಿರಿ, ಶಿರಾ, ಕೊರಟಗೆರೆ ಭಾಗಗಳಲ್ಲಿ ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜಾಗುತ್ತಿರುವ ಬಗ್ಗೆ ಪ್ರಯೋಗಾಲಯದ ವರದಿ ಬಂದಿದ್ದು, ಈಗಾಗಲೇ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ. ಅಲ್ಲದೆ ಬಯಲು ಶೌಚ ಇನ್ನಿತರ ಸಾಂಕ್ರಾಮಿಕ ರೋಗ ಹರಡಬಹುದಾದ ವಿಷಯಗಳ ಬಗ್ಗೆ ಗಮನ ಹರಿಸುವಂತೆ ಜಿಲ್ಲಾಧಿಕಾರಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಸಾಂಕ್ರಾಮಿಕ ರೋಗಗಳು ಹರಡಬಹುದಾದ ವಿದ್ಯಾರ್ಥಿನಿಲಯಗಳ…

Read More

ತುರುವೇಕೆರೆ: “ತುಮಕೂರು ಜಿಲ್ಲೆಯಲ್ಲಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೋರಾಟದ ರಥವನ್ನು ಮುನ್ನಡೆಸಿದ ಸಾಲಿನಲ್ಲಿ ಬಂದಕುಂಟೆ ನಾಗರಾಜುರವರು ಅಗ್ರಸ್ಥಾನದಲ್ಲಿದ್ದಾರೆ,” ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ದಂಡಿನ ಶಿವರ ಕುಮಾರ್ ನುಡಿದರು. ತುರುವೇಕೆರೆ ಪಟ್ಟಣದ ಕನ್ನಡ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ), ಆದಿ ಜಾಂಬವ ಸಂಘ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಹೋರಾಟಗಾರ ಮತ್ತು ಶಿಕ್ಷಕ ಬಂದಕುಂಟೆ ನಾಗರಾಜು ಅವರಿಗೆ ಆಯೋಜಿಸಲಾಗಿದ್ದ ‘ನುಡಿ ನಮನ’ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಬಂದಕುಂಟೆ ನಾಗರಾಜಯ್ಯನವರು ಕೇವಲ ಹೋರಾಟಗಾರರಲ್ಲದೆ, ಒಬ್ಬ ಉತ್ತಮ ಲೇಖಕರೂ ಆಗಿದ್ದರು. ತಮ್ಮ ಬದುಕಿನ ಅನುಭವಗಳನ್ನು ‘ಬಿತ್ತನೆ ಬೀಜ’ ಎಂಬ ಕೃತಿಯ ಮೂಲಕ ದಾಖಲಿಸಿ ದಲಿತ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. 70ರ ದಶಕದಲ್ಲಿ ತಳ ಸಮುದಾಯಗಳು ದಬ್ಬಾಳಿಕೆಗೆ ಒಳಗಾಗಿದ್ದಾಗ, ಪ್ರೊ. ಬಿ. ಕೃಷ್ಣಪ್ಪನವರ ಮಾರ್ಗದರ್ಶನದಲ್ಲಿ ಹೋರಾಟದ ದೀಪವನ್ನು ಹಚ್ಚಿದವರು ಇವರು  ಎಂದರು.…

Read More

ತುಮಕೂರು: ಎಂ.ಕಾಂ. ಪದವಿಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನುರಿತ ಪರಿಣಿತರಿಂದ ಕೌಶಲ್ಯ ಜ್ಞಾನ ಸಂಪಾದಿಸಿದರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪಿಒ/ಕ್ಲರಿಕಲ್ ಹುದ್ದೆಗಳಿಗೆ ವಿಪುಲ ಅವಕಾಶಗಳಿದ್ದು ನೌಕರಿ ಪಡೆಯಲು ಸುಲಭ ಎಂದು ಕೆಎಸ್‌ಎಫ್ ತುಮಕೂರು ಶಾಖೆಯ ಶೈಕ್ಷಣಿಕ ಸಮಿತಿ ಅಧ್ಯಕ್ಷ ಪ್ರೊ. ಕೆ. ಚಂದ್ರಣ್ಣ ಹೇಳಿದರು. ಶ್ರೀ ಸಿದ್ದಗಂಗಾ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಹಾಗೂ ಕೃಷಿಕ್ ಸರ್ವೋದಯ ಫೌಂಡೇಶನ್ (ರಿ). ಇವರ ಸಹಯೋಗದೊಂದಿಗೆ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ (ಐ.ಬಿ.ಪಿ.ಎಸ್.) ಅರಿವು ಮೂಡಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳು ಪದವಿ ವಿದ್ಯಾಭ್ಯಾಸದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಿರ್ದಿಷ್ಟ ಹುದ್ದೆಯ ಗುರಿಯೊಂದಿಗೆ ಮತ್ತು ಪಠ್ಯಕ್ರಮಗಳಿಗೆ ವಿಷಯವಾರು ವೇಳೆಗಳನ್ನು ನಿಗದಿಪಡಿಸಿ ಪರಿಶ್ರಮದೊಂದಿಗೆ ಕೌಶಲ್ಯ ಜ್ಞಾನವನ್ನು ಪಡೆದರೆ ಪರೀಕ್ಷೆಗಳನ್ನು ತೇರ್ಗಡೆ ಹೊಂದಲು ಸುಲಭವಾಗುತ್ತದೆ ಎಂದರು. ಇತ್ತೀಚೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಪುಲವಾದ ಅವಕಾಶಗಳಿದ್ದು, ತಮ್ಮ ವೃತ್ತಿಯನ್ನು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪ್ರಾರಂಭಿಸಿದರೆ, ಬ್ಯಾಂಕಿಂಗ್ ಕ್ಷೇತ್ರದ ಸೇವೆಯು ಎಲ್ಲಾ ಕ್ಷೇತ್ರಗಳ ಕೆಲಸಗಳಿಗಿಂತ ಅತ್ಯುತ್ತಮ ಮತ್ತು ಎಲ್ಲಾ ಸೌಲಭ್ಯದೊರೆಯುವ ಕ್ಷೇತ್ರವಾಗಿರುತ್ತದೆ ಎಂದು ತಿಳಿಸಿದರು. ಶ್ರೀ…

Read More

ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ(ರಿ) ವತಿಯಿಂದ ತುಮಕೂರು ನಗರದ ವಾರ್ಡ್ ನಂ. 34ರ ಕ್ಯಾತ್ಸಂದ್ರ ಎಳ್ಳರಬಂಡೆ ಸ್ಲಂನಲ್ಲಿ ಎ ನ್‌ಹೆಚ್–4 ಕಾಯ್ದಿರಿಸಿದ ರಸ್ತೆ ಜಾಗದಲ್ಲಿ ಅನಧಿಕೃತ ಶೆಡ್‌ ಗಳನ್ನು ನಿರ್ಮಿಸಿದ್ದು ತೆರವುಗೊಳಿಸಲು ಹಾಗೂ ಹಿಂದೂ–ಮುಸ್ಲಿಂ ಎಂದು ದ್ವೇಷ ಬಿತ್ತುವ ಸಮಾಜ ಘಾತಕ ಜಯಸಿಂಹ ಎನ್ನುವವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕರಾದ ಎ. ನರಸಿಂಹಮೂರ್ತಿ,  ತುಮಕೂರು ನಗರದ ವಾರ್ಡ್ ನಂ. 34 ರಲ್ಲಿರುವ ಕ್ಯಾತ್ಸಂದ್ರ ಎಳ್ಳರಬಂಡೆ ಸ್ಲಂ ಘೋಷಿತ ಕೊಳಚೆ ಪ್ರದೇಶವಾಗಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಹಾಗೂ ಜಿಲ್ಲಾಡಳಿತದಿಂದ ಈ ಹಿಂದೆ ಎನ್‌ಹೆಚ್–4 ಗೆ ಬಂದ 12 ಗುಡಿಸಲುಗಳಿಗೆ ಪರಿಹಾರ ಹಣವಾಗಿ 1 ಲಕ್ಷದ ವರೆವಿಗೂ ಪಡೆದುಕೊಂಡು ಪರ್ಯಾಯವಾಗಿ ಕ್ಯಾತ್ಸಂದ್ರ ಎಸ್.ಎಲ್ ನಗರದಲ್ಲಿ ಹಕ್ಕುಪತ್ರಗಳನ್ನು ಇತ್ತೀಚೆಗೆ ಪಡೆದಿರುವ ಕೆಲವೊಬ್ಬರನ್ನು ಸ್ವಯಂ ಘೋಷಿತ ಸಮಾಜ ಸೇವಕ…

Read More

ತುಮಕೂರು: ಗೊಲ್ಲರ ಹಟ್ಟಿಗಳಲ್ಲಿ ಇನ್ನೂ ಜೀವಂತವಿರುವ ಕೆಲವು ಹಿಂದಿನ ಆಚರಣೆಗಳು ಹಾಗೂ ಈಗಿನ ಸನ್ನಿವೇಶಕ್ಕೆ ಅವುಗಳ ಅಪ್ರಸ್ತುತತೆ ಬಗ್ಗೆ ಬೆಳಕು ಚೆಲ್ಲಲು ಗುಬ್ಬಿ ತಾಲ್ಲೂಕು ಸಮುದಾಯದ ಕೆಲವು ಮುಖಂಡರು ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಶ್ರೀ ಯಾದವ ಸಂಸ್ಥಾನ ಮಠದ ಭಕ್ತ ವೃಂದವು ಈ ಅಭಿಯಾನ ಆರಂಭಿಸುತ್ತಿದ್ದು ಜನವರಿ 8 ರಿಂದ 14 ರ ವರೆಗೆ ಗುಬ್ಬಿ ತಾಲ್ಲೂಕಿನ ವಿವಿಧ ಗೊಲ್ಲರಹಟ್ಟಿಗಳಲ್ಲಿ ಈ ಕಾರ್ಯಕ್ರಮ ನಡೆಸಲು ಇತ್ತೀಚೆಗೆ ಸೇರಿದ ಸಭೆಯಲ್ಲಿ ತೀರ್ಮಾನಿಸಲಾಯಿತು. ಇದರ ಜೊತೆಗೆ ಚಿತ್ರದುರ್ಗದಲ್ಲಿರುವ ಶ್ರೀ ಮಠಕ್ಕೆ ಸಹಾಯ ಹಸ್ತ ಚಾಚುವ ಉದ್ದೇಶದಿಂದ ಶ್ರೀ ಕೃಷ್ಣಯಾದವಾನಂದ ಸ್ವಾಮಿಗಳನ್ನು ಬರಮಾಡಿಕೊಂಡು ಅವರಿಗೆ ದವಸ ಧಾನ್ಯ ನೀಡುವ ಯೋಜನೆಯನ್ನೂ ಹಾಕಿಕೊಳ್ಳಲಾಗಿದೆ. ಶ್ರೀ ಮಠದಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು ಅವರಿಗೆ ಪ್ರೋತ್ಸಾಹ ನೀಡಬೇಕಿದೆ. ಅಲ್ಲಿ ಗೋ ಶಾಲೆ ತೆರೆದಿದ್ದು ಅವುಗಳ ಬಗ್ಗೆ ನಿಗಾ ವಹಿಸಬೇಕಾಗಿದೆ. ನಿತ್ಯ ಹಲವಾರು ಭಕ್ತರು ಮಠಕ್ಕೆ ಬರುತ್ತಿದ್ದು ಅವರಿಗೆಲ್ಲ ಪ್ರಸಾದ ವ್ಯವಸ್ಥೆ ಮಾಡಬೇಕಿದೆ. ಇದೇ ರೀತಿಯಲ್ಲಿ ಗುಬ್ಬಿ ತಾಲ್ಲೂಕಿನಲ್ಲಿಯೂ ಶ್ರೀ…

Read More

ತುಮಕೂರು: ನಮ್ಮ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ‘ಕರ್ನಾಟಕ ಕ್ರೀಡಾಕೂಟ 2025–26’ ಆಯೋಜನೆಯಾಗುತ್ತಿದೆ. ಜನವರಿ 16ರಿಂದ 22ರವರೆಗೆ ಒಟ್ಟು 7 ದಿನಗಳ ಕಾಲ ನಗರದ ವಿವಿಧ ಕ್ರೀಡಾಂಗಣಗಳಲ್ಲಿ ಈ ಕ್ರೀಡಾ ಹಬ್ಬ ನಡೆಯಲಿದೆ. ಉದ್ಘಾಟನೆ: ಜ. 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಸಮಾರೋಪ: ಜ. 22ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ ಚಂದ್ ಗೆಹಲೋಟ್ ಭಾಗವಹಿಸಲಿದ್ದಾರೆ. ಲಾಂಛನ: ಜಿಲ್ಲೆಯ ಹೆಮ್ಮೆಯಾದ ‘ಕೃಷ್ಣಮೃಗ’ವನ್ನು ಕ್ರೀಡಾಕೂಟದ ಅಧಿಕೃತ ಲಾಂಛನವಾಗಿ ಬಳಸಲಾಗಿದೆ. ಕ್ರೀಡಾಪಟುಗಳು: ರಾಜ್ಯದ ವಿವಿಧ ಮೂಲೆಗಳಿಂದ ಸುಮಾರು 9,000ಕ್ಕೂ ಹೆಚ್ಚು ಕ್ರೀಡಾಪಟುಗಳು ಮತ್ತು ಅಧಿಕಾರಿಗಳು ಆಗಮಿಸುವ ನಿರೀಕ್ಷೆಯಿದೆ. ಯಾವೆಲ್ಲಾ ಕ್ರೀಡೆಗಳು ನಡೆಯಲಿವೆ?: ಒಟ್ಟು 27 ಬಗೆಯ ಕ್ರೀಡೆಗಳನ್ನು ಆಯೋಜಿಸಲಾಗಿದ್ದು, ಅಥ್ಲೆಟಿಕ್, ಕಬಡ್ಡಿ, ಖೋಖೋ, ಫುಟ್‌ಬಾಲ್, ವಾಲಿಬಾಲ್, ಬ್ಯಾಡ್ಮಿಂಟನ್, ಬಾಕ್ಸಿಂಗ್ ಮುಂತಾದವುಗಳು ತುಮಕೂರಿನಲ್ಲಿ ನಡೆಯಲಿವೆ. ಹಾಕಿ ಮತ್ತು ಈಜು ಸೇರಿದಂತೆ ಕೆಲವು ಕ್ರೀಡೆಗಳು ಮಾತ್ರ ಬೆಂಗಳೂರಿನಲ್ಲಿ ನಡೆಯಲಿವೆ. ಕ್ರೀಡಾಂಗಣಗಳು: ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣವನ್ನು ಸ್ಮಾರ್ಟ್ ಸಿಟಿ…

Read More