Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಮೈಸೂರು: ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ನಿಲಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಮುಖ್ಯ ಶಿಕ್ಷಕ ಮಹದೇವಯ್ಯ, ಶಿಕ್ಷಕಿ ಮೀನಾಕ್ಷಿ ಮತ್ತು ವಿದ್ಯಾರ್ಥಿಗಳಾದ ಧನುಷ್, ಪೃಥ್ವಿ, ಹಾಗೂ ಗೌತಮ್ ಗೆ ಗಂಭೀರ ಗಾಯವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಸಿಲಿಂಡರ್ ಘಟನೆ ಬಗ್ಗೆ ನರಸೀಪುರ ಪೊಲೀಸರು ಮಾಹಿತಿ ಪಡೆಯುತ್ತಿದ್ದು, ಆಸ್ಪತ್ರೆಗೆ ಬಿಇಒ ಶೋಭಾ ಭೇಟಿ ನೀಡಿದ್ದಾರೆ.
ಹಣ ಪಡೆದು ಪ್ರಶ್ನೆ ಕೇಳುತ್ತಿರುವ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಲೋಕಸಭೆಯ ನೈತಿಕ ಸಮಿತಿಯಲ್ಲಿ ಸಂವೇದನಾಶೀಲ ಹೇಳಿಕೆ ನೀಡಿದ್ದಾರೆ. ಗುರುವಾರ ಸಮಿತಿಯ ಮುಂದೆ ಹಾಜರಾದ ಲೋಕಸಭೆಯ ನೈತಿಕ ಸಮಿತಿಯ ಅಧ್ಯಕ್ಷರು ಆಕೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದರು. ಈ ಅವಮಾನವು ದ್ರೌಪದಿಯ ವಸ್ತ್ರಾಪಹರಣದಂತಿದ್ದು, ಹಾಗಾಗಿ ಸಭೆಯ ಮಧ್ಯದಲ್ಲಿಯೇ ಹೊರ ಬಂದಿರುವುದಾಗಿ ತಿಳಿಸಿರುವ ಅವರು ನಂತರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮೂರು ಪುಟಗಳ ಪತ್ರ ಬರೆದಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರದ ಅಡಿಕೆ ವ್ಯಾಪಾರಿ ಎಚ್. ಎಸ್. ಉಮೇಶ್ ಅವರಿಗೆ ಸೇರಿದ್ದ ಕೆ 1 ಕೋಟಿ ನಗದು ಕಳ್ಳತನ ಪ್ರಕರಣ ಭೇದಿಸಿರುವ ಉಪ್ಪಾರಪೇಟೆ ಠಾಣೆ ಪೊಲೀಸರು, ಕಾರಿನ ಚಾಲಕ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಹೊಳಲ್ಕೆರೆ ತಾಲ್ಲೂಕಿನ ತಾಳ್ಯ ಗ್ರಾಮದ ಸ್ವಾಮಿ ಪಿ. ಬಿ. (34), ಬೆಂಗಳೂರು ಮಹದೇವಪುರ ಲಕ್ಷ್ಮಿಸಾಗರ ಬಡಾವಣೆಯ ಅನುಪಮ ಎನ್. ಎಂ. (38), ಚಿತ್ರದುರ್ಗ ಜಿಲ್ಲೆಯ ಕೆಳಗೋಟೆಯ ಪವನ್ ಎನ್. (30) ಹಾಗೂ ಸಕಲೇಶಪುರ ಮಹೇಶ್ವರಿನಗರದ ಎಸ್. ಆರ್. ಕಾರ್ತಿಕ್ (27) ಬಂಧಿತರು.
ಬೆಂಗಳೂರು: ಧೂಮಪಾನ, ಮದ್ಯಪಾನ, ಡ್ರಗ್ ವ್ಯಸನದಿಂದ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾರ್ಶ್ವವಾಯುವಿಗೆ ಒಳಗಾಗುತ್ತಿದ್ದಾರೆ ಎಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ತಿಳಿಸಿದೆ. ವಿಶ್ವ ಪಾರ್ಶ್ವವಾಯು ದಿನದ ಪ್ರಯುಕ್ತ ಸಂಸ್ಥೆಯು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ‘ದೇಶದಲ್ಲಿ ವಾರ್ಷಿಕ ಪಾರ್ಶ್ವವಾಯು ಪೀಡಿತರಲ್ಲಿ ಶೇ. 14ರಷ್ಟು ಮಂದಿ ಯುವಜನರಾಗಿದ್ದಾರೆ ಎಂದರು. ಸಂಸ್ಥೆಯಲ್ಲಿ ಪಾರ್ಶ್ವವಾಯು ಪೀಡಿತರ ಆರೈಕೆಗೆ 24 ಹಾಸಿಗೆಗಳನ್ನು ಮೀಸಲಿಡಲಾಗಿದೆ ಎಂದು ತಿಳಿಸಿದೆ.
ಜನಪ್ರಿಯ ಸಾಮಾಜಿಕ ಮಾಧ್ಯಮ ಟ್ವಿಟರ್ (X) ಅನ್ನು ಡೇಟಿಂಗ್ ವೇದಿಕೆಯಾಗಿ ಪರಿವರ್ತಿಸಲಾಗುವುದು ಎಂದು ಕಂಪನಿಯ ಮಾಲೀಕ ಎಲೋನ್ ಮಸ್ಕ್ ಘೋಷಿಸಿದ್ದಾರೆ. ಎಕ್ಸ್ ಅನ್ನು ಉದ್ಯೋಗ ನಿಯೋಜನೆಗಳಿಗೆ ವೇದಿಕೆಯಾಗಿ ಬದಲಾಯಿಸಲಾಗುವುದು ಎಂದು ಉಲ್ಲೇಖಿಸಲಾಗಿದೆ. X CEO ಲಿಂಡಾ ಯಾಕಾರಿನೊ ಮತ್ತು ಕಂಪನಿಯ ಉದ್ಯೋಗಿಗಳೊಂದಿಗಿನ ಸಭೆಯಲ್ಲಿ, ಎಲೋನ್ ಮಸ್ಕ್ ಅವರು ಲಿಂಕ್ಸ್ ಇನ್, ಯೂಟ್ಯೂಬ್ & ಫೇಸ್ಟೈಮ್ ಸೇರಿದಂತೆ ಡೇಟಿಂಗ್ ಅಪ್ಲಿಕೇಶನ್ಗಳೊಂದಿಗೆ ಹೇಗೆ X ಸ್ಪರ್ಧಿಸಲು ಬಯಸುತ್ತದೆ ಎಂಬುದನ್ನು ವಿವರಿಸಿದರು.
ಉತ್ತರ ಪ್ರದೇಶದ ಬಂದಾ ಎಂಬಲ್ಲಿ ದಲಿತ ಮಹಿಳೆಯ ಅತ್ಯಾಚಾರ ಮಾಡಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ದಲಿತ ಮಹಿಳೆ (40) ರಾಜ್ ಕುಮಾರ್ ಶುಕ್ಲಾ ಎಂಬುವರ ಮನೆಗೆ ಹಿಟ್ಟಿನ ಗಿರಣಿಯನ್ನು ಸ್ವಚ್ಛಗೊಳಿಸಲು ಹೋಗಿದ್ದರು. ಮನೆಗೆ ಬಾರದೆ ಇದ್ದಾಗ ಸಂತ್ರಸ್ತೆಯ ಮಗಳು ಅಲ್ಲಿಗೆ ಹೋದ ವೇಳೆ ಮನೆಯ ಕೊಠಡಿಯೊಂದರಲ್ಲಿ ಕಿರುಚಾಟ ಕೇಳಿ ಬಂದಿದ್ದು, ಬಾಗಿಲು ತೆರೆದು ನೋಡಿದಾಗ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು ಎಂದು ಮಗಳು ಹೇಳಿದ್ದಾಳೆ. ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಂಗಳೂರಿನಲ್ಲಿ ಮೂರು ಬೀದಿನಾಯಿಗಳು ಕಣ್ಮರೆಯಾಗಿದ್ದು, ಕಾಣೆಯಾದ ಬೀದಿ ನಾಯಿಗಳನ್ನು ಹುಡುಕಿ ಕೊಡಬೇಕೆಂದು ಪೊಲೀಸರಿಗೆ ದೂರು ನೀಡಲಾಗಿದೆ. ಕುಮಾರ ಪಾರ್ಕ್ ಬಳಿಯ ಕಂಪನಿಯೊಂದರ ಬಳಿ ಇದ್ದ ಬೀದಿ ನಾಯಿಗಳು ಕಾಣೆಯಾದ ಕುರಿತು ನಾಯಿಗಳಿಗೆ ಊಟ ಹಾಕಿ ಯೋಗಕ್ಷೇಮ ನೋಡಿಕೊಳ್ಳುತ್ತಿದ್ದ ಪ್ರಕಾಶ್ ಎಂಬುವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯ ವ್ಯಕ್ತಿಗಳು ನಾಯಿಗಳನ್ನ ಬೇರೆಡೆ ತೆಗೆದುಕೊಂಡು ಹೋಗಿ ಬಿಟ್ಟಿರಬೇಕು ಎಂದು ಪ್ರಕಾಶ್ ಸಂಶಯ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬೆಂಗಳೂರಿನ ಕೃಷ್ಣಾರೆಡ್ಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕಳೆದ ನಾಲ್ಕು ದಿನಗಳಿಂದ ಕಾಣಿಸಿಕೊಂಡಿದ್ದ ಚಿರತೆ ರಾಜ್ಯೋತ್ಸವದ ದಿನ ಕಾರ್ಯಾಚರಣೆ ವೇಳೆ ಮೃತಪಟ್ಟಿದೆ. ಅರಣ್ಯ ಅಧಿಕಾರಿಗಳು ಹೊಡೆದ ಗುಂಡು ಚಿರತೆಯ ಮರಣಕ್ಕೆ ಕಾರಣವಾಗಿದ್ದು ಸ್ವತಃ ಅರಣ್ಯ ಅಧಿಕಾರಿಗಳೇ ಇದನ್ನು ಒಪ್ಪಿಕೊಂಡಿದ್ದಾರೆ. ಚಿರತೆ ಸಾವಿಗೀಡಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಅನೇಕ ಜನ ಚಿರತೆಗಾಗಿ ನೋವಿನಿಂದ ಬರೆದುಕೊಳ್ಳುತ್ತಿದ್ದಾರೆ. ಕೆಲವರಂತೂ ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಬೋರ್ ವೆಲ್ ಕೊರೆಯೋರ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಬ್ರೇಕ್ ಹಾಕೋ ನಿಟ್ಟಿನಲ್ಲಿ ಜಲಮಂಡಳಿ ಮಹತ್ವದ ಕ್ರಮ ಕೈಗೊಂಡಿದೆ. ಅನುಮತಿ ಪಡೆಯದೇ ಬೋರ್ ವೆಲ್ ಕೊರೆದರೆ ಅಂತವರ ವಿರುದ್ಧ ಪೊಲೀಸರಿಗೆ ದೂರು ನೀಡಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮುಂದಾಗಿದೆ. ಸಿಲಿಕಾನ್ ಸಿಟಿಯಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರೋ ಹಿನ್ನಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದೆ. ಜೊತೆಗೆ ಕಾವೇರಿ ನೀರಿನ ಸಂಕಷ್ಟ ಎದುರಾದ ಬೆನ್ನಲ್ಲೇ ಬೋರ್ ವೆಲ್ ಕೊರೆಯುತ್ತಿರೋರ ಸಂಖ್ಯೆ ಹೆಚ್ಚಾಗಿದೆ. ಮೇಡಹಳ್ಳಿಯ ಸಾಯಿ ಬಡಾವಣೆಯಲ್ಲಿ ಅನುಮತಿ ಇಲ್ಲದೆ ಬೋರ್ ವೆಲ್ ಕೊರೆಯುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಜಲಮಂಡಳಿ ಠಾಣೆಗೆ ದೂರು ನೀಡಿದೆ. ದೂರು ಕೊಟ್ಟು ಬೋರ್ವೆಲ್ ಕೊರೆಯೋದನ್ನು ನಿಲ್ಲಸಿ ಅನಧಿಕೃತವಾಗಿ ಕೊರೆಯುವವರ ವಿರುದ್ಧ ಕ್ರಮ ಕೈಗೊಳ್ಳಿ ಅಂತಾ ಆಗ್ರಹಿಸಿದೆ. ನೀರಿಗೆ ಸಂಕಷ್ಟ ಎದುರಾದ ಬೆನ್ನಲ್ಲೇ ಬೋರ್ವೆಲ್ ಕೊರೆಯುವ ಹಾವಳಿ ಜಲಮಂಡಳಿ ನಿದ್ದೆಗೆಡಿಸಿದೆ. ಅಂತರ್ಜಲದ ಸಮಸ್ಯೆಯಿಂದಾಗಿ ಬೋರ್ವೆಲ್ ಕೊರೆಯುವವರ ಸಂಖ್ಯೆಯೂ ಹೆಚ್ಚಿದೆ. ಇದರಿಂದ ಜಲಮಂಡಳಿ ಕ್ರಮ ಕೈಗೊಳ್ಳುತ್ತಿದೆ. ವರದಿ: ಆಂಟೋನಿ ಬೇಗೂರು
ಬೆಂಗಳೂರು: ವಾರಕ್ಕೆ 70 ಗಂಟೆ ಕೆಲಸ ಮಾಡುವ ಅಗತ್ಯವಿಲ್ಲ, ಬದಲಿಗೆ ಕೆಲಸ ಮಾಡುವ ಸಮಯವನ್ನು ಹೆಚ್ಚು ಉಪಯುಕ್ತವಾಗಿ ಕಳೆದು, ಉಳಿದ ಸಮಯವನ್ನು ನಿಮ್ಮ ಕುಟುಂಬದೊಂದಿಗೆ ಕಳೆಯಿರಿ ಎಂದು ನ್ಯಾ.ಸಂತೋಷ್ ಹೆಗ್ಡೆ ಸಲಹೆ ನೀಡಿದರು. ಬೆಂಗಳೂರಿನಲ್ಲಿ ಆಯೋಜಿಸಿದ್ದ ಟ್ರೇಡರ್ಸ್ ಮೀಟಪ್, ಎಜುಕೇಷನ್ ಹೀರೋಸ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಹೆಚ್ಚು ಸಮಯ ಕೆಲಸ ಮಾಡುವುದು ಹೆಚ್ಚು ಉತ್ಪಾದಕತೆ ಎನ್ನುವುದು ತಪ್ಪು ಕಲ್ಪನೆ. ಕೆಲಸ ಮಾಡುವ ಅವಧಿಯನ್ನು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುವುದಷ್ಟೇ ಮುಖ್ಯ ಎಂದರು.