Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಬೆಂಗಳೂರು: ಆರ್ಗಾನಿಕ್ ಚೀಲದ ಹೆಸರಲ್ಲಿ ಕೋಟಿ ಕೋಟಿ ವಂಚನೆ ಮಾಡಿರುವ ಆರೋಪದ ಮೇಲೆ ಎನ್ವಿ ಗ್ರೀನ್ ಕಂಪೆನಿ ಮಾಲೀಕನ ವಿರುದ್ಧ ಎಫ್ಐಆ ದಾಖಲು ಮಾಡಲಾಗಿದೆ. ಎನ್ವಿ ಗ್ರೀನ್ ಮಾಲೀಕ ಅಶ್ವತ್ ಹೆಗ್ಡೆ ವಿರುದ್ಧ ಈಗ ಆಶೋಕ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಶ್ವಥ್ ಹೆಗ್ಡೆ ವಿರುದ್ಧ ಉದ್ಯಮಿ ನಿಲಿಮಾ ಅವರು ದೂರು ನೀಡಿದ್ದಾರೆ. ಪ್ಲಾಸ್ಟಿಕ್ ಬದಲು ಆರ್ಗಾನಿಕ್ ಬ್ಯಾಗ್ ಕಂಡು ಹಿಡಿದಿರುವುದಾಗಿ ಹೇಳಿಕೊಂಡಿದ್ದ ಅಶ್ವತ್ ಹೆಗ್ಡೆ ಈ ಬಗ್ಗೆ ಸಾಕಷ್ಟು ಪ್ರಚಾರವನ್ನು ಪಡೆದುಕೊಂಡಿದ್ದರು.
ವನ್ಯಜೀವಿಗಳನ್ನು ಬೇಟೆ ಆಡೋದು, ಸ್ವಾಧೀನ ಪಡಿಸಿಕೊಳ್ಳೋದು, ಇಟ್ಟು ಕೊಳ್ಳೋದು ಸೇರಿದಂತೆ ಖರೀದಿಸೋದು, ಸಾಗಾಣೆ ಮಾಡೋದು ಅಲ್ಲದೇ ಮಾಂಸ ಮಾರಾಟ, ಭಕ್ಷಣೆ ಕೂಡ ಅಪರಾಧವೆಂದು ರಾಜ್ಯ ಸರ್ಕಾರ ತಿಳಿಸಿದೆ. ವನ್ಜೀವಿಗಳ ವಸ್ತುಗಳಾದಂತ ಕೊಂಬು, ಚರ್ಮ, ಟ್ರೋಫಿಗಳು, ಹಲ್ಲು, ಗೊರಸು ಅಥವಾ ಇವುಗಳಿಂದ ತಯಾರಾದಂತ ಆಲಂಕಾರಿಕ ವಸ್ತುಗಳ ವ್ಯಾಪಾರ, ಉಡುಗೋರೆ ನೀಡೋದು, ಪಡೆಯೋದು, ಖರೀದಿಸೋದು, ಸಾಗಾಟ ಮಾಡೋದು, ಇನ್ನೊಬ್ಬರಿಗೆ ವರ್ಗಾಯಿಸೋದು ಕೂಡ ಅಪರಾಧ ಎಂದು ರಾಜ್ಯ ಅರಣ್ಯ ಇಲಾಖೆ ನೀಡಿದೆ.
ಕಬ್ಬನ್ ಉದ್ಯಾನವನ್ನು ಸಂರಕ್ಷಿಸುವ ಉದ್ದೇಶದಿಂದ ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಂರಕ್ಷಣಾ ಸಮಿತಿಯನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಮಿತಿಯು 33 ಸದಸ್ಯರನ್ನು ಒಳಗೊಂಡಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು, ತಜ್ಞರು, ವಾಯುವಿಹಾರಿಗಳು ಮತ್ತು ಪರಿಸರವಾದಿ ಇದ್ದಾರೆ. ಉದ್ಯಾನದ ಆವರಣದಲ್ಲಿ ನಡೆಯುವ ಚಟುವಟಿಕೆಗಳ ಸಾಧಕ-ಬಾಧಕಗಳನ್ನು ಪರಿಶೀಲಿಸಿ ತೆಗೆದುಕೊಳ್ಳುವ ನಿರ್ಣಯಗಳಿಗೆ ಸಂಬಂಧಪಟ್ಟ ಎಲ್ಲ ಇಲಾಖೆಗಳ ಸಂಸ್ಥೆಗಳು ಬದ್ಧರಾಗಬೇಕು ಎಂದು ತಿಳಿಸಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಮನನೊಂದು ಗೃಹಿಣಿ ಆತ್ಮಹತ್ಯೆ ಪ್ರಕರಣ ಸಂಬಂಧ ಮೃತ ಐಶ್ವರ್ಯ ಪತಿ ರಾಜೇಶ್ ಸೇರಿ ಐವರು ಆರೋಪಿಗಳನ್ನ ಗೋವಿಂದರಾಜನಗರ ಪೊಲೀಸರು ಬಂಧನ ಮಾಡಿದ್ದಾರೆ. ಮಾವ ಗಿರಿಯಪ್ಪ, ಅತ್ತೆ ಸೀತಾ, ಪತಿ ರಾಜೇಶ್, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಿನ್ ರನ್ನ ಬಂಧನ ಮಾಡಿದ್ದಾರೆ. ಸೊಸೆ ಸುಸೈಡ್ ಬಳಿಕ ಗೋವಾ, ಮುಂಬೈನಲ್ಲಿ ಪತಿ ಮನೆಯ ಸದಸ್ಯರು ಪಾರ್ಟಿ ಮಾಡ್ತಿದ್ರು. ಮನೆಯಲ್ಲಿ ಯಾರು ಇಲ್ಲದ ವೇಳೆ ಪ್ಯಾನಿಗೆ ನೇಣು ಬಿಗಿದುಕೊಂಡು ಗೃಹಿಣಿ ಸುಸೈಡ್ ಮಾಡಿಕೊಂಡಿದ್ದಾಳೆ.
ತುಮಕೂರಿನ ಇಪಿಎಫ್ ಒ, ಪ್ರಾದೇಶಿಕ ಕಚೇರಿ ನೂತನ ಕಚೇರಿ ಕಟ್ಟಡವನ್ನು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ರಾಮೇಶ್ವರ ತೇಲಿ ಅವರು ನವೆಂಬರ್ 1ರಂದು ನಡೆದ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತುಮಕೂರು ನಗರ ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್ ಅವರು ಉಪಸ್ಥಿತರಿದ್ದರು ಎಂದು ತುಮಕೂರು ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ಕರ್ನಾಟಕ ಗ್ರಾಮೀಣ ಮೂಲಭೂತ ಅಭಿವೃದ್ಧಿ ಸಂಸ್ಥೆಗೆ (ಕೆ.ಆರ್.ಐ.ಡಿ.ಎಲ್) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಆಯ್ಕೆಗೊಂಡಿರುವ 74 ಮಂದಿ ಅಭಿಯಂತರರು ಹಾಗೂ ಸಹಾಯಕರಿಗೆ ಇಂದು ನಡೆದ ಸರಳ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರೂ ಆದ ಸಂಸ್ಥೆಯ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ನೇಮಕಾತಿ ಆದೇಶಗಳನ್ನು ವಿತರಿಸಿದರು. ನೂತನವಾಗಿ ಆಯ್ಕೆಗೊಂಡಿರುವ ಅಭ್ಯರ್ಥಿಗಳಿಗೆ ಗ್ರಾಮೀಣ ಜನರ ಸೇವೆ ಮಾಡುವ ಅವಕಾಶಗಳಿದ್ದು ಅಭ್ಯರ್ಥಿಗಳು ಶ್ರದ್ಧೆ, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಲು ಈ ಸಂದರ್ಭದಲ್ಲಿ ಸಚಿವರು ಕರೆ ನೀಡಿದರು. ಆಯ್ಕೆಗೊಂಡ ಅಭ್ಯರ್ಥಿಗಳಲ್ಲಿ ಮಹಿಳೆಯರ ಸಂಖ್ಯೆಯೇ ಹೆಚ್ಚಿದೆ, ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಮುಂದೆ ಬರುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಸರ್ಕಾರದ ಅನುಮತಿಯಂತೆ ಸಂಸ್ಥೆಯ 16 ವಿವಿಧ ವೃಂದದ 76 ಹುದ್ದೆಗಳನ್ನು ಭರ್ತಿ ಮಾಡಲು ಸಂಸ್ಥೆ ಕ್ರಮ ಕೈಗೊಂಡಿತ್ತು. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಲಾಗಿತ್ತು. ಪ್ರಾಧಿಕಾರ ನೇಮಕಾತಿ…
ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವಲ್ಲಿ ಮಹಿಳೆಯರ ಕೊಡುಗೆ ಅಪಾರ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು: ಯಾವುದೇ ದೇಶ ಮತ್ತು ಸಮಾಜದ ಅಭಿವೃದ್ಧಿಯು ಮಹಿಳೆಯರ ಅಭಿವೃದ್ಧಿಗೆ ನೇರವಾಗಿ ಸಂಬಂಧಿಸಿದೆ, ಮಹಿಳೆಯರಿಲ್ಲದೆ ವೈಯಕ್ತಿಕ, ಕುಟುಂಬ ಮತ್ತು ಸಮಾಜದ ಅಭಿವೃದ್ಧಿಯನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ನಗರದ ಸೆಂಟ್ರಲ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಮೊದಲನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಭಾರತವು ತನ್ನ ಇತಿಹಾಸ ಮತ್ತು ಸಂಸ್ಕೃತಿಯಿಂದಾಗಿ ಇಡೀ ಪ್ರಪಂಚದಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ನಮ್ಮ ದೇಶವು ಸಾಂಸ್ಕೃತಿಕ, ರಾಜಕೀಯ, ಆರ್ಥಿಕ, ಮಿಲಿಟರಿ ಶಕ್ತಿ ಇತ್ಯಾದಿಗಳಲ್ಲಿ ವಿಶ್ವದ ಪ್ರಮುಖ ದೇಶಗಳಲ್ಲಿ ಸೇರಿದೆ. ಭಾರತೀಯ ಇತಿಹಾಸದಲ್ಲಿ ಮತ್ತು ನಮ್ಮ ಧರ್ಮಗ್ರಂಥಗಳು ಮತ್ತು ಪುರಾಣಗಳಲ್ಲಿ ಮಹಿಳೆಯರಿಗೆ ಗೌರವ ನೀಡುವ ಉಲ್ಲೇಖವಿದೆ. ಲಿಂಗ ಸಮಾನತೆಯ ತತ್ವವನ್ನು ಭಾರತೀಯ ಸಂವಿಧಾನದ ಪೀಠಿಕೆ, ಮೂಲಭೂತ ಹಕ್ಕುಗಳು, ಮೂಲಭೂತ ಕರ್ತವ್ಯಗಳು ಮತ್ತು ನಿರ್ದೇಶನ ತತ್ವಗಳಲ್ಲಿ ಪ್ರತಿಪಾದಿಸಲಾಗಿದೆ. ಸಂವಿಧಾನವು ಮಹಿಳೆಯರಿಗೆ ಸಮಾನ ಸ್ಥಾನಮಾನವನ್ನು ಒದಗಿಸುತ್ತದೆ ಮತ್ತು ಮಹಿಳೆಯರ ಪರವಾಗಿ ‘ದೃಢೀಕರಣ’ ಕ್ರಮಗಳನ್ನು ಕೈಗೊಳ್ಳಲು ರಾಜ್ಯಗಳಿಗೆ ಅಧಿಕಾರ ನೀಡುತ್ತದೆ ಎಂದು…
ಚಾಮರಾಜನಗರ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕದ ಮೇಲೆ ದ್ವೇಷ ಇಟ್ಟುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದರು. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ,ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕದ ಮೇಲೆ ದ್ವೇಷ ಇಟ್ಟುಕೊಂಡಿದೆ, ಯಾವಾಗಲೂ ತಮಿಳುನಾಡಿಗೆ ನೀರು ಬಿಡಿ ಅಂತ ಹೇಳುತ್ತಿದೆ, ಪ್ರಾಧಿಕಾರ ನಮ್ಮ ಅಫೀಲ್ ಕೇಳ್ತಾನೆ ಇಲ್ಲ ಪ್ರಾಧಿಕಾರ ನಮ್ಮ ಪರ ಇಲ್ಲ ಅಂತ ನನಗೆ ಅನಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮೊದಲಿಂದಲೂ ಸಹ ಪ್ರಾಧಿಕಾರ ನಮ್ಮ ಪರ ನಿಂತಿಲ್ಲ, ಇದನ್ನೆಲ್ಲ ನೋಡಿದರೆ ಕರ್ನಾಟಕದ ಮೇಲೆ ಪ್ರಾಧಿಕಾರ ದ್ವೇಷ ಸಾಧಿಸುತ್ತಿದೆ ಎನಿಸುತ್ತದೆ, ನಮಗೆ ನೀರಿಲ್ಲ ಇನ್ನೂ ತಮಿಳುನಾಡಿಗೆ ಎಲ್ಲಿಂದ ನೀರು ಬಿಡುವುದು, ಸಿಎಂ ಕೂಡ ಅದನ್ನೇ ಹೇಳಿದ್ದಾರೆ.ನಮ್ಮ ರೈತರನ್ನ ಬಲಿ ಕೊಡಲ್ಲ ಅಂತ ಸಿಎಂ ಹೇಳಿದ್ದಾರೆ ಎಂದು ತಿಳಿಸಿದರು. ಸಚಿವ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಅವರ ಅನಿಸಿಕೆ ಹೇಳಿದ್ದಾರೆ. ನನಗೇನು ಗೊತ್ತಿಲ್ಲ, ಹೈ ಕಮಾಂಡ್ ಇದೆ ತೀರ್ಮಾನ ಮಾಡುತ್ತೆ, ಕಾಂಗ್ರೆಸ್…
ಉಡುಪಿ : ಗೃಹ ಲಕ್ಷ್ಮಿ ಯೋಜನೆಯ ಹಣ ವಿತರಣೆಯಲ್ಲಿ ದೊಡ್ಡ ಸಮಸ್ಯೆ ಏನಿಲ್ಲ. ಬ್ಯಾಂಕಿನಲ್ಲಿ ಸಮಸ್ಯೆ ಇದ್ದಲ್ಲಿ ಅಂಚೆ ಇಲಾಖೆಯಲ್ಲಿ ಉಳಿತಾಯ ಖಾತೆ ತೆರೆಯಲು ಸಲಹೆ ನೀಡಲಾಗಿದೆ. ರಾಜ್ಯದಲ್ಲಿ ಈಗಾಗಲೇ ಶೇ. 88 ಜನರಿಗೆ ಹಣ ತಲುಪಿದೆ. ಸಮಸ್ಯೆಯನ್ನು ಬಗೆಹರಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭದ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು. ಎರಡನೇ ರಾಜಧಾನಿಯಾಗಲು ಬೆಳಗಾವಿ ಎಲ್ಲ ಮೂಲಭೂತ ಸೌಕರ್ಯ ಹಾಗೂ ಅರ್ಹತೆಗಳನ್ನು ಹೊಂದಿದ್ದು, ಆ ದಿಸೆಯಲ್ಲಿ ಸರಕಾರ ಇನ್ನಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಿದೆ. ಬೆಳಗಾವಿಯಲ್ಲಿ ಈಗಾಗಲೆ ಸುವರ್ಣ ವಿಧಾನಸೌಧವಿದೆ. ವಿಮಾನ ನಿಲ್ದಾಣವಿದೆ. ಬಹು ವಿಶಾಲವಾದ ಜಿಲ್ಲೆಯಾಗಿದ್ದು, 18 ಶಾಸಕರನ್ನು ಹೊಂದಿದೆ. ಹಾಗಾಗಿ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ಧಿ ಮಾಡಲಾಗುವುದು. ಎರಡನೇ ರಾಜಧಾನಿಯಾಗಿ ಬೆಳಗಾವಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದರು. ಮಹಾರಾಷ್ಟ್ರ ಏಕೀಕರಣ ಸಮಿತಿಯ ಪ್ರತಿಭಟನೆ ಹಾಗೂ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ…
ಬೆಂಗಳೂರು: ಅಂತಾರಾಜ್ಯ ಅಡಿಕೆ ವ್ಯಾಪಾರಿಯ 1 ಕೋಟಿ ರೂ. ಹಣ ಕಳವು ಪ್ರಕರಣ ಆರೋಪಿಗಳನ್ನು ಬೆಂಗಳೂರಿನ ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕ ಸಂತೋಷ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಅ.7 ರಂದು ಅಂತಾರಾಜ್ಯ ಅಡಿಕೆ ವ್ಯಾಪಾರಿ ಹೆಚ್.ಎಸ್. ಉಮೇಶ್ ಚಿತ್ರದುರ್ಗದಿಂದ ವಿವಿಧ ಜಿಲ್ಲೆಗಳ ಅಡಿಕೆ ಖರೀದಿಗಾಗಿ ಕಾರಿನಲ್ಲಿನೀಲಿ ಬಣ್ಣದ ಬ್ಯಾಗಿನಲ್ಲಿ ಬರೋಬ್ಬರಿ 1 ಕೋಟಿ ರೂ. ಹಣವನ್ನು ಕಾರಿನ ಡಿಕ್ಕಿಯಲ್ಲಿ ತಂದಿದ್ದರು. ಊಟಕ್ಕೆಂದು ಗಾಂಧೀನಗರದ ಹೋಟೆಲ್ ಮುಂಭಾಗ ಕಾರು ನಿಲ್ಲಿಸಿದ್ದರು. ನಂತರ ಚಂದ್ರಾಲೇಔಟ್, ದಾಬಸ್ ಪೇಟೆ ಬಳಿಯೂ ಕಾರು ನಿಲ್ಲಿಸಿದ್ದರು. ಸಂಜೆ 7:45 ರ ವೇಳೆಗೆ ಚಿತ್ರದುರ್ಗದ ಭೀಮಸಮುದ್ರದ ಅಂಗಡಿಗೆ ತೆರಳಿ ಕಾರಿನ ಡಿಕ್ಕಿ ಪರಿಶೀಲಿಸಿದಾಗ ಕಳವು ಬೆಳಕಿಗೆ ಬಂದಿತ್ತು. ಘಟನೆ ಸಂಬಂಧ ಉಪ್ಪಾರಪೇಟೆ ಪೊಲೀಸರಿಗೆ ದೂರು ನೀಡಲಾಗಿತ್ತು. ಶಿರಾ, ತುಮಕೂರು ಮಾರ್ಗವಾಗಿ ಬೆಂಗಳೂರಿನ ಗಾಂಧೀನಗರಕ್ಕೆ ಬಂದಿದ್ದ ವೇಳೆ ಅಡಿಕೆ ವ್ಯಾಪಾರಿ ಉಮೇಶ್ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಹಿನ್ನಲೆ ಉಪ್ಪಾರಪೇಟೆ ಠಾಣೆಯಲ್ಲಿ ಎಫ್ಐಆರ್…