Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ದಾಸವಾಳದ ಹೂವುಗಳನ್ನು ಕೂದಲಿನ ಆರೋಗ್ಯಕ್ಕಾಗಿ ಬಳಸಲಾಗುತ್ತದೆ. ಕೂದಲಿನ ಹೊರತಾಗಿ, ದಾಸವಾಳವು ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಈ ಹೂವಿನಿಂದ ತಯಾರಿಸಿದ ಟೀ ಕುಡಿಯುವುದರಿಂದ ಶುಗರ್, ಆತಂಕ ಮತ್ತು ಅಧಿಕ ಬಿಪಿ ಕಡಿಮೆಯಾಗುತ್ತದೆ. ಮೈಗ್ರೇನ್, ಮೊಡವೆ ಮತ್ತು ವಸಡು ಸಮಸ್ಯೆಗಳು ದೂರವಾಗುತ್ತವೆ. ಒಂದು ಲೋಟ ನೀರಿಗೆ ಒಂದು ದಾಸವಾಳದ ಹೂವು, ಒಂದು ಚಮಚ ಕರಿಮೆಣಸಿನ ಪುಡಿ, ಗ್ರಾಂ ದಾಲ್ಟಿನ್ನಿ ಪುಡಿಯನ್ನು ಸೇರಿಸಿ ಮತ್ತು ಅರ್ಧ ಗ್ಲಾಸ್ ಆಗುವವರೆಗೆ ಕುದಿಸಿ ದಾಸವಾಳದ ಚಹಾವನ್ನು ತಯಾರಿಸಲಾಗುತ್ತದೆ.
ಅಮೆರಿಕದ ಲಾರೆನ್ಸ್ ಫಾಸೆಟ್ ಅವರು ಈ ವರ್ಷದ ಸೆಪ್ಟೆಂಬರ್ ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಹಂದಿ ಹೃದಯವನ್ನು ಅಳವಡಿಸಿದರು. ಹಂದಿಯ ಹೃದಯವು ಒಂದು ತಿಂಗಳು ಚೆನ್ನಾಗಿ ಕೆಲಸ ಮಾಡಿತು ಮತ್ತು ನಂತರ ನಿಧಾನವಾಗಿ ಸಹಕರಿಸುವುದನ್ನು ನಿಲ್ಲಿಸಿತು. ಹಂದಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ವ್ಯಕ್ತಿ 40 ದಿನಗಳ ನಂತರ ಸಾವನ್ನಪ್ಪಿದ್ದಾನೆ. ಹಿಂದೆ, ಮೊದಲ ಕಸಿ ಮಾಡಿದ ಹಂದಿ ಹೃದಯವೂ 2 ತಿಂಗಳ ನಂತರ ಸತ್ತಿತು. ಈ ಶಸ್ತ್ರಚಿಕಿತ್ಸೆಗೆ ಒಳಗಾದ ಎರಡನೇ ವ್ಯಕ್ತಿ ಲಾರೆನ್ಸ್ ಈಗ ಸಾವನ್ನಪ್ಪಿದ್ದಾರೆ.
ಬೆಂಗಳೂರು: ಸಿದ್ದರಾಮಯ್ಯಗೆ ಸರ್ಕಾರದ ಮೇಲೆ ಹಿಡಿತ ಇಲ್ಲ. ಸಿದ್ದರಾಮಯ್ಯ ವಿಚಿತ್ರ ಪರಿಸ್ಥಿತಿಯಲ್ಲಿ ಇದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಆರು ತಿಂಗಳಾದರೂ ಮುಂದೆ ಹೋಗುತ್ತಿಲ್ಲ . ಸರ್ಕಾರದ ಚಕ್ರಗಳಲ್ಲಿ ಗಾಳಿ ಇಲ್ಲ, ಮುಂದೆ ಹೋಗುತ್ತಿಲ್ಲ. ಸಿದ್ದರಾಮಯ್ಯಗೆ ಸರ್ಕಾರದ ಮೇಲೆ ಹಿಡಿತ ಇಲ್ಲ. ಸಿದ್ದರಾಮಯ್ಯ ವಿಚಿತ್ರ ಪರಿಸ್ಥಿತಿಯಲ್ಲಿ ಇದ್ದಾರೆ .ದಿನ ಬೆಳಿಗ್ಗೆಯಾದರೆ ಕಾಂಗ್ರೆಸ್ ನಾಯಕರು ಕಚ್ಚಾಡುತ್ತಾರೆ .ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ ಆಗಿದೆ. ಉಚಿತ ವಿದ್ಯುತ್ ಕೊಡ್ತೀವಿ ಅಂತ ಹೇಳಿ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಬರ ಪೀಡಿತ ಪ್ರದೇಶಗಳಿಗೆ ಸಿಎಂ, ಸಚಿವರು ಹೋಗಿಲ್ಲ. ಶಾಸಕರಿಗೆ ಕೇವಲ 50 ಲಕ್ಷ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಎಸ್ಸಿ, ಎಸ್ಟಿ ನಿಗಮಗಳಿಗೆ ಹಣ ಕೊಟ್ಟಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕದ ಖರ್ಚು ರೈತನೇ ಭರಿಸಬೇಕು ಎಂಬ ಆದೇಶ ಹೊರಡಿಸಲು ಸರ್ಕಾರ ಹೊರಟಿದೆ. ಉಚಿತ…
ತುರುವೇಕೆರೆ: ಗ್ರಾಮೀಣ ಪ್ರದೇಶಗಳಲ್ಲಿ ತುರ್ತು ಚಿಕಿತ್ಸೆಗಳು ಅಗತ್ಯವಾಗಿದೆ ಎಂದು ಶಾಸಕ ಎಂ ಟಿ ಕೃಷ್ಣಪ್ಪ ಹೇಳಿದರು. ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ಬೆಂಗಳೂರು ಕ್ಲಿನಿಕ್ ಮಾಲೀಕತ್ವದ ಡಾ. ಶಶಿಧರ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಆಸ್ಪತ್ರೆಗಳ ಸೇವೆಗಳು ಉತ್ತಮವಾಗಿದ್ದರೂ ಸಹ, ಕೆಲವೊಮ್ಮೆ ಖಾಸಗಿ ಆಸ್ಪತ್ರೆಗಳ ತುರ್ತು ಸೇವೆಗಳು ಸಹ ಅಗತ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ಖಾಸಗಿ ಆಸ್ಪತ್ರೆಗಳು ತೆರೆದಿದ್ದು, ಎಲ್ಲರೂ ಸಹ ಬಡವರಿಗೆ, ಸಾರ್ವಜನಿಕರಿಗೆ, ರೈತರಿಗೆ, ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಬೇಕು ಎಂದು ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಮತ್ತು ಬೆಂಗಳೂರು ಕ್ಲಿನಿಕ್ ಡಿ. ಶಶಿಧರ್ ರವರಿಗೆ ಶುಭ ಹಾರೈಸುವ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಡಾ. ಶ್ರೀನಿವಾಸ್. ಡಾ.ವೀಣಾ ಯೋಗೇಶ್. ಮಂಜುನಾಥ್ ಗ್ರಾ.ಪಂ. ಅಧ್ಯಕ್ಷರು. ಹೆಡಗಿಹಳ್ಳಿ ವಿಶ್ವನಾಥ್ ತಾಲೂಕು…
ಮುಂಬೈನ ವಾಂಖೆಡೆ ಮತ್ತು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ಮತ್ತು ಸೋಮವಾರದಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಗಳಲ್ಲಿ ಗೆಲುವಿನ ಸಂಭ್ರಮಾಚರಣೆಗೆ ಪಟಾಕಿ ಬಳಸುವುದನ್ನು ಬಿಸಿಸಿಐ ನಿಷೇಧಿಸಿದೆ. ಬಾಂಬೆ ಹೈಕೋರ್ಟ್ ಮುಂಬೈನ ವಾಯು ಗುಣಮಟ್ಟವನ್ನು ಗಮನಿಸಿ ಸ್ವಯಂಪ್ರೇರಿತವಾಗಿ ವಿಚಾರಣೆ ಪ್ರಾರಂಭಿಸಿದ ಬಳಿಕ ಬಿಸಿಸಿಐ ಈ ನಿರ್ಧಾರ ಪ್ರಕಟಿಸಿದೆ. ಮುಂಬೈ ಮತ್ತು ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಓರ್ವ ಗಾಯಗೊಂಡ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಳ್ಳಾರಿ ರಸ್ತೆಯ ಬಿಎಸ್ ಎಫ್ ಗೇಟ್-2ರ ಮುಂಭಾಗ ನಡೆದಿದೆ. ಬಿಎಸ್ ಎಫ್ ಯೋಧ ಸುಧಾಕರ್ (41) ಹಾಗೂ ಕೋಲಾರ ಮೂಲದ ಗಿರೀಶ್ (ಗಣಿ) (32) ಮೃತರು. ಬಿಎಸ್ ಎಫ್ ಯೋಧ ಸುಧಾಕರ್ ಗೇಟ್-2ರ ಮೂಲಕ ಸರ್ವಿಸ್ ರಸ್ತೆಗೆ ಬಂದು ಬಾಗಲೂರು ಕಡೆಗೆ ತೆರಳಲು ದ್ವಿಚಕ್ರ ವಾಹನವನ್ನು ಮುಖ್ಯರಸ್ತೆ ಕಡೆಗೆ ತಿರುಗಿಸಿದ್ದಾರೆ. ಈ ವೇಳೆ ಎರಡೂ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಬೆಂಗಳೂರು: ಜಾಲಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಎಚ್ ಎಂಟಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ, ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯೊಂದರ ಎಂಜಿನಿಯರ್ ಮೃತಪಟ್ಟಿದ್ದಾರೆ. ಪೀಣ್ಯ 2ನೇ ಹಂತದ ನಿವಾಸಿ ಸುಭಾಷ್(26) ಮೃತರು. ಮಂಗಳವಾರ ಬೆಳಿಗ್ಗೆ ಎಲೆಕ್ಟ್ರಿಕ್ ಬೈಕ್ ನಲ್ಲಿ ಎಚ್ ಎಂಟಿ ರಸ್ತೆಯಲ್ಲಿ ತೆರಳುತ್ತಿದ್ದರು. ಆಗ ಅತೀ ವೇಗವಾಗಿ ಬಂದ ವಾಹನಕ್ಕೆ ಡಿಕ್ಕಿಯಾಗಿದೆ. ರಕ್ತಸ್ರಾವದಿಂದ ಬಿದ್ದಿದ್ದ ಸುಭಾಷ್, ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಮೃತಪಟ್ಟರು.
ಬೆಂಗಳೂರು: ಬೆಂಗಳೂರಿನ ಲುಲು ಮಾಲ್ ನಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ವ್ಯಕ್ತಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಸವೇಶ್ವರನಗರ ನಿವಾಸಿ ಅಶ್ವಥ್ ನಾರಾಯಣ್ ಎಂದು ಗುರುತು ಪತ್ತೆಯಾಗಿದೆ. ಆದರೆ ಅಶ್ವಥ್ ನಾರಾಯಣ್ ಮನೆಗೆ ಬೀಗ ಹಾಕಿಕೊಂಡು ನಾಪತ್ತೆಯಾಗಿದ್ದಾನೆ. ಆರೋಪಿ ಪ್ರತಿಷ್ಠಿತ ಮಠಕ್ಕೆ ಸೇರಿದ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ನಿವೃತ್ತನಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಮಾಗಡಿ ರೋಡ್ ಪೊಲೀಸರು ಆರೋಪಿಯ ಪತ್ತೆಗೆ ಹುಡುಕಾಟ ಮುಂದುವರೆಸಿದ್ದಾರೆ.
ಕರ್ನಾಟಕ ಕಲಾವಿದರ ಸಂಘದ ಸದಸ್ಯ, ಗಾಯಕ, ಸಂಗೀತ ಸಂಯೋಜಕ ಮನೋಜ್ ವಸಿಷ್ಠ ಅವರು ನಿಧನರಾಗಿದ್ದಾರೆ. ಅವರಿಗೆ ಸುಮಾರು 35 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಗಾಯಕ ಮನೋಜ್ ವಸಿಷ್ಠ ಅವರು, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಕರ್ನಾಟಕ ಕಲಾವಿದರ ಸಂಘದ ಸದಸ್ಯರೂ ಆಗಿದ್ದ ಮನೋಜ್ ವಸಿಷ್ಠ ಅವರು ಬಹು ಅಂಗಾಂಗ ವೈಫಲ್ಯದಿಂದ ನಿಧನ ಹೊಂದಿದ್ದಾರೆ ಎನ್ನಲಾಗಿದೆ. ಪಾರ್ಥೀವ ಶರೀರವನ್ನು ಜಯನಗರದ ಆಮಿಟಿ ದೇವಸ್ಥಾನ ಬೇ ಅಪಾರ್ಟೆಂಟ್ ನಲ್ಲಿ ಇಡಲಾಗಿದೆ.
ಸಾದಹಳ್ಳಿ ಗೇಟ್ ಸಮೀಪದ ಐಟಿಸಿ ಕಾರ್ಖಾನೆ ಎದುರು ಬುಧವಾರ ಬೆಳಿಗ್ಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ದಿನಪತ್ರಿಕೆ ವಿತರಣೆಗೆ ತೆರಳುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಸೊಣ್ಣಪ್ಪನಹಳ್ಳಿ ಗ್ರಾಮದ ಮನೋಜ್(18) ಮೃತಪಟ್ಟವರು. ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮುಖ್ಯರಸ್ತೆಯ ಪಕ್ಕದಲ್ಲಿರುವ ಸೇವಾ ರಸ್ತೆಯಲ್ಲಿ ಬೆಳಿಗ್ಗೆ 6.30ರ ಸುಮಾರಿಗೆ ಮನೋಜ್ ಪತ್ರಿಕೆ ವಿತರಿಸಲು ಉತ್ತನಹಳ್ಳಿ ಕಡೆಗೆ ತೆರಳುತ್ತಿದ್ದ ಎನ್ನಲಾಗಿದೆ.