Author: admin

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮಹತ್ವದ ಘೋಷಣೆ ಮಾಡಿ, ರಾಜ್ಯದೊಳಗಿನ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣವನ್ನು ಘೋಷಿಸಿದರು. ಈ ಉಪಕ್ರಮವು ವಾರ್ಷಿಕ ಆದಾಯ ರೂ 1.80 ಲಕ್ಷವನ್ನು ಮೀರದ ಕುಟುಂಬಗಳಿಗೆ ಅನ್ವಯಿಸುತ್ತದೆ. ಕಾಲೇಜು ಶುಲ್ಕದ ಅರ್ಧದಷ್ಟು ಭಾಗವನ್ನು ಸರ್ಕಾರವು ಭರಿಸಲಿದೆ. ಇದಲ್ಲದೆ, ರಾಜ್ಯ ಸರ್ಕಾರವು 1.80 ಲಕ್ಷದಿಂದ 3 ಲಕ್ಷದವರೆಗೆ ಆದಾಯವಿರುವ ಕುಟುಂಬಗಳಿಗೆ ಸೇರಿದ ಹೆಣ್ಣುಮಕ್ಕಳಿಗೆ ಅರ್ಧದಷ್ಟು ಕಾಲೇಜು ಶುಲ್ಕವನ್ನು ಸಬ್ಸಿಡಿ ಮಾಡಲು ಬದ್ಧವಾಗಿದೆ ಎಂದು ತಿಳಿಸಿದೆ.

Read More

ಪತ್ನಿಯ ಸೋಷಿಯಲ್ ಮೀಡಿಯಾ ಹಾಗೂ ಆನ್ ಲೈನ್ ಗೆಳೆತನವನ್ನು ಇಷ್ಟಪಡದ ಪತಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ  ನಡೆದಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಜಯನಗರದ ಹರಿನಾರಾಯಣಪುರ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಪರಿಮಳ ಎಂಬ ಯುವಕ ತನ್ನ ಪತ್ನಿ ಅಪರ್ಣಾ ಬೈದ್ಯಳನ್ನು (32) ಕೊಂದಿದ್ದಾನೆ. ಶಾಲೆ ಮುಗಿಸಿ ಮನೆಗೆ ಬಂದ ಮಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವವನ್ನು ಮೊದಲು ನೋಡಿದ್ದಾನೆ. ಮಗುವಿನ ಕಿರುಚಾಟ ಕೇಳಿ ಅಕ್ಕಪಕ್ಕದವರು ಓಡಿ ಬಂದರು. ಸೋಷಿಯಲ್ ಮೀಡಿಯಾದಲ್ಲಿ ಪದೇ ಪದೇ ಮನೆಯಲ್ಲಿ ಜಗಳ ನಡೆಯುತ್ತಿತ್ತು ಎಂದು ಮಗ ಪೊಲೀಸರಿಗೆ ತಿಳಿಸಿದ್ದಾನೆ. ತಾಯಿಯನ್ನು ಕೊಂದು ತುಂಡು ತುಂಡಾಗಿ ಕತ್ತರಿಸುವುದಾಗಿ ತಂದೆ ಪದೇ ಪದೇ ಬೆದರಿಕೆ ಹಾಕುತ್ತಿದ್ದ ಎಂದು ಮಗು ಹೇಳಿಕೊಂಡಿದೆ. ಕೊಲೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಅಪರ್ಣಾ ಮೃತದೇಹವನ್ನು ಸುಡಲಾಯಿತು. ಆಯುಧ ಪತ್ತೆಯಾಗಿದೆ.

Read More

ತುಮಕೂರು:  ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಆರ್.ಅಶೋಕ್ ಇಂದು ತುಮಕೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೆಳೆ ನಷ್ಟದ ಕುರಿತು ಜಮೀನುಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಿದರು. ಮೊಬೈಲ್ ನಲ್ಲೇ ರೈತನ ಜಮೀನಿನ ಆರ್.ಟಿ.ಸಿ ಪರಿಶೀಲಿಸಿದ ಆರ್. ಅಶೋಕ್, ಬೆಳೆ ವಿವರ ದಾಖಲಿಸದ ಬಗ್ಗೆ  ಆಕ್ಷೇಪ ವ್ಯಕ್ತಪಡಿಸಿದರು. ವಿವರವಾಗಿ ಮಾಹಿತಿ ಸಂಗ್ರಹಿಸದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಆರ್.ಅಶೋಕ್, ಅಧಿಕಾರಿಗಳು ರೈತನ ಜಮೀನಿಗೆ ಹೋಗದೆ ಬೆಳೆ ಸಮೀಕ್ಷೆ ಮಾಡಲಾಗಿದೆ. ಬೆಳೆ ಸಮೀಕ್ಷೆ ನಡೆಸಿರುವ ಬಗ್ಗೆ ಕನಿಷ್ಠ ಸಂಬಂಧಪಟ್ಟ ರೈತನಿಗೆ ಯಾವುದೇ ಮಾಹಿತಿ ನೀಡಿಲ್ಲ  ಅಲ್ಲದೆ ರೈತ ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕೂಡ ಮಾಡುವಂತಹ ಮಾಹಿತಿ ಲಭ್ಯವಾಗಿಲ್ಲ. ಇದು ಬೇಜವಾಬ್ದಾರಿಯಿಂದ ಕೂಡಿದ ಕೃಷಿ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷವಾಗಿದೆ ಎಂದು ಹೇಳಿದರು. ಸರಿಯಾದ ಮಾಹಿತಿ ನೀಡದ ಪರಿಣಾಮ ಎನ್.ಡಿಆರ.ಎಫ್ ಪರಿಹಾರ ಸಿಗಲ್ಲ ಎಂದು ಹೇಳಿದರು. ಚಾಮರಾಜನಗರ, ಬೀದರ್ ನಲ್ಲಿ ಚೆಕ್ ಮಾಡಿದ್ದೆ ಎಲ್ಲಾ ಕಡೆ ಒಂದೇ ರೀತಿ ಮಾಹಿತಿ ದಾಖಲಿಸುತ್ತಾರೆ ನಾನು ರೆವಿನ್ಯೂ…

Read More

ತುಮಕೂರು: ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ಒದಗಿಸಿದೆ . ಭಾರತದ ಸಂವಿಧಾನ ದೇಶದ ಪ್ರಜೆಗಳ ಸರ್ವ ಸಮಾನತೆಗೆ ಕಾನೂನಿನ ಭದ್ರ ಅಡಿಪಾಯ ಹಾಕಿ‌ಕೊಟ್ಟಿದೆ. ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವುದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ‘ಭಾರತ ಸಂವಿಧಾನ’ ದಿನಾಚರಣೆಯ ವಿಶೇಷತೆ ಆಗಿದೆ ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಜಿಲ್ಲಾ ಗ್ರಂಥಾಲಯದ ಸಭಾಂಗಣದಲ್ಲಿ ಅಯೋಜಿಸಲಾಗಿದ್ದ ‘ಭಾರತ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಕ್ಕಳು, ಅಧಿಕಾರಿಗಳು, ಶ್ರೀಮಂತರು ಸೇರಿದಂತೆ ದೇಶದ ಎಲ್ಲಾ ಜನರಿಗೂ ಕಾನೂನು ಅನ್ವಯವಾಗುತ್ತದೆ, ನಾವೆಲ್ಲರೂ ಸಂವಿಧಾನದ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇವೆ, ನವೆಂಬರ್ ೨೬ ಸ್ವತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವದ ದಿನವಾಗಿದೆ.…

Read More

ದೇಶದಲ್ಲಿ ಹಲಾಲ್ ಉತ್ಪನ್ನಗಳ ಮಾರಾಟವನ್ನು ಕೇಂದ್ರವು ನಿಷೇಧಿಸಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ಬಂದಾಗ ಈ ಪ್ರತಿಕ್ರಿಯೆ ಬಂದಿದೆ.ನವೆಂಬರ್ 30 ರಂದು ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಡಿಸೆಂಬರ್ 3 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಎಲ್ಲಾ ಪಕ್ಷಗಳ ಕಾರ್ಯವೈಖರಿಯನ್ನು ಮೌಲ್ಯಮಾಪನ ಮಾಡಿದ ನಂತರವೇ ಮತ ಚಲಾಯಿಸಬೇಕು. ಎಲ್ಲಾ ಪಕ್ಷಗಳನ್ನು ಮೌಲ್ಯಮಾಪನ ಮಾಡಿದ ನಂತರ ನೀವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಮತ ಹಾಕುತ್ತೀರಿ ಎಂದು ನನಗೆ ವಿಶ್ವಾಸವಿದೆ. ನಿಮ್ಮ ಮತವು ಶಾಸಕ ಅಥವಾ ಸರ್ಕಾರವನ್ನು ಆಯ್ಕೆ ಮಾಡುವುದಲ್ಲದೆ ತೆಲಂಗಾಣ ಮತ್ತು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅಮಿತ್ ಶಾ ಹೇಳಿದರು. ತೆಲಂಗಾಣದಲ್ಲಿ ಬಿಆರ್ಎಸ್ ತುಷ್ಟೀಕರಣ ರಾಜಕಾರಣ ಎಂದು ಅಮಿತ್ ಶಾ ಟೀಕಿಸಿದ್ದಾರೆ. ಸಂವಿಧಾನವು ಯಾರಿಗೂ ವಿಶೇಷ ಸವಲತ್ತುಗಳನ್ನು ನೀಡುವುದಿಲ್ಲ. ಕೆ ಚಂದ್ರಶೇಖರ್ ರಾವ್ ಅವರು ಧಾರ್ಮಿಕ ಮೀಸಲಾತಿ ನೀಡುತ್ತಾರೆ. ಇದು ಸಂವಿಧಾನ ಬಾಹಿರವಾಗಿದೆ. ಅವರು ಧಾರ್ಮಿಕ ಅಲ್ಪಸಂಖ್ಯಾತರಿಗೆ ಶೇಕಡಾ ನಾಲ್ಕು…

Read More

ನಿವೃತ್ತ ಸರ್ಕಾರಿ ನೌಕರ ಸೇರಿ ಇಬ್ಬರಿಗೆ ಯುವತಿ ಸೋಗಿನಲ್ಲಿ ಪ್ರತ್ಯೇಕವಾಗಿ ವಿಡಿಯೊ ಕರೆ ಮಾಡಿದ್ದ ಸೈಬರ್ ವಂಚಕರು, ಬೆತ್ತಲೆ ವಿಡಿಯೋ ಚಿತ್ರೀಕರಿಸಿಕೊಂಡು ₹20. 56 ಲಕ್ಷ ದೋಚಿದ್ದಾರೆ. ಎರಡೂ ಕೃತ್ಯಗಳ ಸಂಬಂಧ ಪಶ್ಚಿಮ ಹಾಗೂ ಉತ್ತರ ವಿಭಾಗದ ಸೈಬರ್ ಕೈಂ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊರ ರಾಜ್ಯಗಳಲ್ಲಿರುವ ವಂಚಕರು, ಯುವತಿ ನಗ್ನ ವಿಡಿಯೊವನ್ನು ಬಳಸಿಕೊಂಡು ಕರೆ ಮಾಡಿ ವಂಚನೆ ಮಾಡಿರುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

Read More

ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಪ್ರಕರಣದ ತನಿಖೆ ಮುಂದುವರಿಸಿರುವ ಬೈಯಪ್ಪನಹಳ್ಳಿ ಠಾಣೆ ಪೊಲೀಸರು,  ಮೈಸೂರಿನ ವೈದ್ಯ ಡಾ. ಚಂದನ್ ಬಲ್ಲಾಳ್ ಹಾಗೂ ಲ್ಯಾಬ್ ಟೆಕ್ನಿಷಿಯನ್ ನಿಸಾರ್ ಅವರನ್ನು ಬಂಧಿಸಿದ್ದಾರೆ. ಮೈಸೂರಿನ ಮಾತಾ ಆಸ್ಪತ್ರೆ ಹಾಗೂ ಅಲ್ಲಿನ ರಾಜ್‌ ಕುಮಾ‌ರ್ ರಸ್ತೆಯಲ್ಲಿರುವ ಆಯುರ್ವೇದಿಕ್ ಪೈಲ್ ಡೇ ಕೇರ್ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಡಾ. ಚಂದನ್, ಇದುವರೆಗೂ 900 ಗರ್ಭಪಾತ ಮಾಡಿಸಿ, ಹೆಣ್ಣು ಭ್ರೂಣ ಹತ್ಯೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.

Read More

ತುಮಕೂರು: ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್ ಗೆ ಸಂಪುಟ ನಿರ್ಧಾರ ವಿಚಾರದಲ್ಲಿ ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಎಂ ಸಿದ್ದರಾಮಯ್ಯ ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡ್ತಾರೆ. ಅಂದು ಸಿಬಿಐ ನವರು ಅನುಮತಿ ಕೇಳಿದ್ರು.‌ ಸರ್ಕಾರ ಅನುಮತಿ ನೀಡಿತ್ತು ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೇಳಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ಡಿಸಿಎಂ ನ್ಯಾಯಾಲಯಗಳಿಗೆ ಓಡಾಡಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ ನ್ಯಾಯಾಲಯದಲ್ಲೇ ತೀರ್ಪಾಗಲಿ ಎಂದರು. ನ್ಯಾಯಾಲಯದ ಮುಂದೆಯೇ ಕ್ಲೀನ್ ಚಿಟ್ ಪಡೆದು ಜನರ ಮುಂದೆ ಹೋಗಬೇಕಿತ್ತು. ಇದೊಂದು ನ್ಯಾಯಾಲಯಕ್ಕೆ ಸವಾಲ್ ಹಾಕಿದ ರೀತಿಯಲ್ಲಿದೆ ಎಂದರು. ಸಿಬಿಐಗೆ ಸವಾಲ್ ಅಲ್ಲ, ನ್ಯಾಯಾಲಯಕ್ಕೆ ಸವಾಲ್. ಇಂತಹ ಪ್ರಕರಣಗಳನ್ನು ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವುದು ಸೂಕ್ತವಾಗಿರಲಿಲ್ಲ ಎಂದರು. ರಾಜ್ಯ ಕಾಂಗ್ರೆಸ್ ಸರ್ಕಾರದ ನಿಲುವು ಖಂಡಿಸುತ್ತೇನೆ. ಒಂದು ಸಲ ಎಫ್.ಐಆರ್ ಆದ್ಮೇಲೆ ಚಾರ್ಜ್ ಶೀಟ್ ಕೊಟ್ಟರೆ ಬದಲಾವಣೆ ಮಾಡಲು ನ್ಯಾಯಾಧೀಶರ ಅನುಮತಿ ಪಡೆಯಬೇಕು ಎಂದರು. ಪ್ರಕರಣಗಳು ಒಂದು ಸಲ ಕೋರ್ಟ್ ಗೆ ಹೋದ್ರೆ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರಾಗಿದ್ದ ನಂಜುಂಡಯ್ಯ ಅವರ ಮೊದಲನೇ ಮದುವೆ ಪಿಂಚಣಿ ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ರಾಜ್ಯ ಹೈಕೋರ್ಟ್ ರಾಜ್ಯ ಸರ್ಕಾರಿ ನೌಕರನ ಎರಡನೇ ಪತ್ನಿಗೆ ಪಿಂಚಣಿ ಪಡೆಯುವ ಅಧಿಕಾರವಿಲ್ಲ ಎಂದು ಆದೇಶಿಸಿದೆ. ರಾಜ್ಯ ಸರ್ಕಾರಿ ನೌಕರಾಗಿದ್ದ ನಂಜುಂಡಯ್ಯ ಅವರ ಮೊದಲನೇ ಮದುವೆ ಕಾನೂನು ಬದ್ಧವಾಗಿಯೇ ಉಳಿದಿದ್ದು, ಹೀಗಾಗಿ ಆತನ ಎರಡನೇ ಮದುವೆ ಕಾನೂನು ಬಾಹಿರವಾಗಿದೆ. ಹೀಗಾಗಿ ಎರಡನೇ ಪತ್ನಿ ಎಂದೆನಿಸಿಕೊಂಡವಳಿಗೆ ಪಿಂಚಣಿ ಪಡೆಯುವ ಅಧಿಕಾರವಿಲ್ಲ ಎಂದು ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್, ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ ವಿಭಾಗೀಯ ಪೀಠವು ಆದೇಶಿಸಿದ್ದು ಅವರ ಅರ್ಜಿಯನ್ನು ವಜಾಗೊಳಿಸಿದೆ. ಮರಣಿಸಿದ ನೌಕರನ ಮೊದಲ ಮದುವೆ ರದ್ದುಗೊಂಡಿಲ್ಲ. ಹೀಗಾಗಿ ಎರಡನೇ ಮದುವೆಗೆ ಕಾನೂನು ಮಾನ್ಯತೆ ಇಲ್ಲ. ಆದ್ದರಿಂದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಎರಡನೇ ಹೆಂಡತಿಯಾಗಿದ್ದರೂ ಆಕೆಗೂ ಪಿಂಚಣಿ ಪಡೆಯುವ ಅಧಿಕಾರವಿದೆ ಎಂದು ಮೇಲ್ಮನವಿದಾರರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಪೀಠವು…

Read More

ಬರ್ತ್‌ ಡೇ ಆಚರಿಸಲು ದುಬೈಗೆ ಕರೆದುಕೊಂಡು ಹೋಗಲಿಲ್ಲ ಎಂಬ ಕಾರಣಕ್ಕೆ ಪತಿಯನ್ನು ಪತ್ನಿ ಹೊಡೆದು ಕೊಂದಿದ್ದಾಳೆ. ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದಂದು ದುಬಾರಿ ಉಡುಗೊರೆ ನೀಡದಿದ್ದಕ್ಕೆ ಪತ್ನಿ ಯುವಕನ ಮೂಗಿಗೆ ಗುದ್ದಿದ್ದಾಳೆ ಎಂದು ವರದಿಯಾಗಿದೆ. ಸಾವಿಗೆ ಆಘಾತವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಪುಣೆಯ ವನವಾಡಿ ಪ್ರದೇಶದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಉದ್ಯಮಿ ನಿಖಿಲ್ ಖನ್ನಾ (36) ಮೃತರು. ಅವರ ಪತ್ನಿ ರೇಣುಕಾ (38) ಜತೆ ಪ್ರೇಮ ವಿವಾಹವಾಗಿತ್ತು. ಆರು ವರ್ಷಗಳ ಹಿಂದೆ ಇಬ್ಬರು ಮದುವೆಯಾಗಿದ್ದರು. ವನವಾಡಿ ಪ್ರದೇಶದ ಪಾಶ್ ರೆಸಿಡೆನ್ಶಿಯಲ್ ಸೊಸೈಟಿಯ ಅಪಾರ್ಟ್‌ಮೆಂಟ್‌ ನಲ್ಲಿ ವಾಸಿಸುತ್ತಿದ್ದರು. ಶುಕ್ರವಾರ ಮಧ್ಯಾಹ್ನ ಇಬ್ಬರ ನಡುವೆ ಜಗಳ ಆರಂಭವಾಗಿದೆ. ನಿಖಿಲ್ ರೇಣುಕಾಳ ಹುಟ್ಟುಹಬ್ಬ ಆಚರಿಸಲು ದುಬೈಗೆ ಕರೆದುಕೊಂಡು ಹೋಗಿರಲಿಲ್ಲ. ಅಲ್ಲದೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದಂದು ದುಬಾರಿ ಉಡುಗೊರೆಗಳನ್ನು ನೀಡದಿರುವುದು ರೇಣುಕಾ ಅವರನ್ನು ಕೆರಳಿಸಿದೆ. ಇದರಿಂದಾಗಿ ಇಬ್ಬರ ನಡುವೆ ಜಗಳವಾಗಿದೆ. ಜಗಳದ ವೇಳೆ ರೇಣುಕಾ ನಿಖಿಲ್ ಮೂಗಿಗೆ ಹೊಡೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.…

Read More