Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಬೆಂಗಳೂರು: ಜಾತಿ ನಿಂದನೆ ಆರೋಪದಡಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಪುನೀತ್ ಕೆರೆಹಳ್ಳಿ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ರಣಧೀರ ಪಡೆಯ ಮುಖಂಡ ಬೈರಪ್ಪ ಹರೀಶ್ ಕುಮಾರ್ ಅವರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು. ಫೇಸ್ ಬುಕ್ ನಲ್ಲಿ ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾರೆ. ಅಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಪುನೀತ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೂರು ನೀಡಿದ್ದಾರೆ.
ಬೆಂಗಳೂರು: ಕರ್ತವ್ಯನಿರತ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯ ಎಎಸ್ ಐ ಒಬ್ಬರಿಗೆ ನಿಂದಿಸಿದ ಆರೋಪದಡಿ ವಸ್ತ್ರ ವಿನ್ಯಾಸಕ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಸೋಮನ ಬಿದ್ದಪ್ಪ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಪೊಲೀಸ್ ಅಧಿಕಾರಿಗೆ ನಿಂದನೆ ಆರೋಪದಡಿ ಈ ಪ್ರಕರಣ ದಾಖಲಾಗಿದೆ. ಈ ಹಿಂದೆ ಇದೇ ಪೊಲೀಸ್ ಠಾಣೆಯಲ್ಲಿ ಅತೀ ವೇಗದ ಕಾರು ಚಾಲನೆ ಹಾಗೂ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ ಆರೋಪದಡಿ ಅವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.
ಸಾಮಾಜಿಕ ಮಾಧ್ಯಮದಲ್ಲಿ ಮಹಾತ್ಮ ಗಾಂಧೀಜಿ ಅವರನ್ನು ಅವಮಾನಿಸಿ ಪೋಸ್ಟ್ ಹಾಕಿದ್ದಾರೆ. ಎಂಬ ಆರೋಪದಡಿ ಬೆಳಗಾವಿ ಜಿಲ್ಲೆ ಸವದತ್ತಿಯ ರತನ್ ಸನಾತನಿ ಎಂಬುವರ ವಿರುದ್ಧ ಎಚ್ ಎಸ್ಆರ್ ಬಡಾವಣೆ ಸೈಬರ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಆರೋಪಿ, ನಾಥರಾಂ ಗೋಡ್ರೆ ಫೋಟೊ ಬಳಸಿ ಗಾಂಧೀಜಿ ಅವಮಾನಿಸಿದ್ದಾರೆ ಎಂದು ಬೊಮ್ಮನಹಳ್ಳಿ ಕಾಂಗ್ರೆಸ್ ಮುಖಂಡ ಅನಿಲ್ ರೆಡ್ಡಿ ದೂರು ನೀಡಿದ್ದರು. ‘ಸಮಾಜದಲ್ಲಿ ಸಾಮರಸ್ಯ ಕದಡುವ ಪ್ರಯತ್ನ ನಡೆಸಿದ್ದಾರೆ. ಅವರ ಬರಹ ಕೋಮು ಗಲಭೆಗೆ ಪ್ರಚೋದನಕಾರಿ ಆಗಿದೆ. ರತನ್ ಸನಾತನಿ ಅವರನ್ನು ಬಂಧಿಸಬೇಕು’ ಎಂದು ಕೋರಿದ್ದಾರೆ.
ಭಾರತದ ಕಥೋಲಿಕ ಕ್ರೈಸ್ತರು ಆಚರಿಸುವ ಹಬ್ಬಗಳಲ್ಲಿ ಸಕಲ ಆತ್ಮಗಳ ಹಬ್ಬ ಅಥವಾ ಸಮಾಧಿಗಳ ಹಬ್ಬವೆಂದು ಪ್ರತಿ ವರ್ಷ ನವೆಂಬರ್ ಎರಡರಂದು ಬಹಳ ವಿಶಿಷ್ಟವಾಗಿ ಆಚರಿಸುತ್ತಾರೆ. ಬನ್ನಿ ಈ ಹಬ್ಬದ ಮಹತ್ವವನ್ನು ತಿಳಿಯೋಣ. ಸಾಮಾನ್ಯವಾಗಿ ನಮ್ಮನ್ನಗಲಿರುವ ನಮ್ಮವರು, ಸತ್ತ ನಂತರ ನಮ್ಮಿಂದ ದೂರ ಉಳಿದಿರುವ ಆತ್ಮಗಳು, ಮತ್ತೆ ಹುಟ್ಟಿಬರುತ್ತಾರೆ ಎನ್ನುವ ನಂಬಿಕೆ ಇದೆ. ಮತ್ತೆ ಹುಟ್ಟದಿದ್ದರು ನಾವು ಅವರನ್ನು ಸೇರುತ್ತೇವೆ ಎನ್ನುವ ವಿಶ್ವಾಸ ಮಾತ್ರ ಇನ್ನು ಉಳಿದಿದೆ. ಹೀಗೆ ಅಗಲಿದವರ ಆತ್ಮಗಳನ್ನು ಪೂಜಿಸುವ ವಿಶೇಷ ಆಚರಣೆಯೊಂದು ಮಾಡುತ್ತಾರೆ .ಅದುವೇ ಸಮಾಧಿಗಳ ಹಬ್ಬ ಅಥವಾ ಆಲ್ ಸೋಲ್ಸ್ ಡೇ. ಈ ದಿನದ ವಿಶೇಷದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಸಮಾಧಿ ಹಬ್ಬ: ಸತ್ತಾಗ ಸಮಾಧಿಗೆ ಹೂವಿನ ಅಲಂಕಾರ ಮಾಡುವುದು ಸಹಜ. ಜೊತೆಗೆ ಮಹಾಲಯ ಅಮಾವಾಸ್ಯೆ ದಿನ ಮೃತರ ಸಮಾಧಿಗೆ ಪೂಜೆ ಮಾಡಿ ಬರುವುದು ಹಿಂದೂ ಸಂಪ್ರದಾಯ ಹಾಗೂ ನಂಬಿಕೆ. ಆದರೆ ಇಡೀ ಸ್ಮಶಾನಕ್ಕೆ ಅಲಂಕಾರ ಮಾಡಿ, ಸಮಾಧಿಗಳನ್ನು ಸಿಂಗಾರ ಮಾಡಿ ಪೂಜೆ ಮಾಡುವ ವಿಶಿಷ್ಟ…
ಬೆಂಗಳೂರು ನಗರದ ಗಂಗಮ್ಮನ ಗುಡಿ ಬಳಿ ಕಾರ್ಖಾನೆಯೊಂದರ ಕೌಂಪೌಂಡ್ ನಲ್ಲಿದ್ದ ಸ್ಪಾಂಜ್ ತ್ಯಾಜ್ಯಕ್ಕೆ ಬುಧವಾರ ಸಂಜೆ ಬೆಂಕಿ ತಗುಲಿ ಕ್ಷಣಕಾಲ ಆತಂಕ ಸೃಷ್ಟಿಯಾಗಿತ್ತು. ಅಪಾರ ಪ್ರಮಾಣದ ತ್ಯಾಜ್ಯವನ್ನು ಸ್ಥಳದಲ್ಲಿ ಸಂಗ್ರಹಿಸಲಾಗಿತ್ತು. ಬೆಂಕಿ ಎತ್ತರಕ್ಕೆ ಹೊತ್ತಿ ಉರಿಯಿತು. ದಟ್ಟಿಸಿದ ಹೊಗೆಯೂ ಆತಂಕ ಸೃಷ್ಟಿಸಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಮೂರು ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದವು. ಸ್ಥಳೀಯರೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಗೆ ನೆರವು ನೀಡಿದರು.
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾರದರ್ಶಕ ಗಾಜಿಗೆ ಗುದ್ದಿಕೊಂಡು ಗಾಯಗೊಂಡಿದ್ದ ಮಹಿಳೆಯ ಮೂಗಿನ ಮೂಳೆ ಮುರಿತಗೊಂಡಿದ್ದು, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆಂದು ತಿಳಿದು ಬಂದಿದೆ. ನೇಪಾಳ ರಾಜಧಾನಿ ಕಲ್ಮಂಡುವಿನಿಂದ 33 ವರ್ಷದ ನಿಶಾ ಮಿತ್ತಲ್ ಅಗರ್ವಾಲ್ ಅವರು ಕುಟುಂಬದೊಂದಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಟರ್ಮಿನಲ್ 2 ನಲ್ಲಿ ಗಾಜಿನ ಬಾಗಿಲನ್ನು ಗಮನಿಸದ ನಿಶಾ ಅವರು ಗುದ್ದಿಕೊಂಡಿದ್ದರು.
ಮಾನವ ಕಳ್ಳಸಾಗಣೆ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, 14 ಜನರನ್ನು ಬಂಧಿಸಿದ್ದಾರೆ. ನೊಂದ 20 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಗಲಗುಂಟೆ, ವರ್ತೂರು, ಕೆ. ಆರ್. ಪುರಂ, ವಿದ್ಯಾರಣ್ಯಪುರ, ಅಮೃತಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಉಡುಪಿಯ ಶ್ರೀಕೃಷ್ಣ ಮಠದ ಶ್ರೀ ಪುತ್ತಿಗೆ ಪರ್ಯಾಯ ಸಮಿತಿಯ ಮಹಾ ಪೋಷಕರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರನ್ನು ನೇಮಿಸಲಾಗಿದೆ. ಪುತ್ತಿಗೆ ಮಠದಲ್ಲಿ ಬುಧವಾರ ನಡೆದ ಪರ್ಯಾಯೋತ್ಸವ ಪೂರ್ವಭಾವಿ ಸಭೆಯಲ್ಲಿ ಸಚಿವರನ್ನು ಪರ್ಯಾಯ ಸಮಿತಿಯ ಮಹಾಪೋಷಕರನ್ನಾಗಿ ಘೋಷಿಸಲಾಯಿತು. ಬಳಿಕ ಮಾತನಾಡಿದ ಸಚಿವರು, ಮುಂದಿನ ಜನವರಿಯಲ್ಲಿ ನಡೆಯಲಿರುವ ಶ್ರೀ ಪುತ್ತಿಗೆ ಪರ್ಯಾಯೋತ್ಸವಕ್ಕೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಪೂರ್ಣ ಪ್ರಮಾಣದ ಸಹಕಾರ ನೀಡಲಾಗುವುದು ಎಂದರು. ಮುಂದಿನ ಉಡುಪಿ ಭೇಟಿ ವೇಳೆ ಜಿಲ್ಲಾಡಳಿತದ ವತಿಯಿಂದ ಪರ್ಯಾಯೋತ್ಸವ ಸಂಬಂಧ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗುವುದು ಎಂದರು. ಪುತ್ತಿಗೆ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಶ್ರೀ ಕೃಷ್ಣ ಪರಮಾತ್ಮ ನನಗೆ ಕರುಣಿಸಿದ್ದಾನೆ. ಪುತ್ತಿಗೆ ಮಠ ದೇಶ, ವಿದೇಶಗಳಲ್ಲೂ ಪ್ರಸಿದ್ಧಿ ಪಡೆದಿದೆ. ಹಿಂದೂ ಸಂಸ್ಕೃತಿ ಶ್ರೇಷ್ಠ ಸಂಸ್ಕೃತಿ, ಇದನ್ನು ಉಳಿಸಿ, ಬೆಳಸುವ ಕರ್ತವ್ಯ ನಮ್ಮದು. ನಮ್ಮ ಸಂಸ್ಕೃತಿಯನ್ನು ಪುತ್ತಿಗೆ ಶ್ರೀಗಳು ವಿದೇಶಿ…
ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?: ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು +91 8310880814 ಈ ನಂಬರ್ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಏನಿದು ಬ್ರೈಟ್ ಭಾರತ್!?: ಬ್ರೈಟ್ ಭಾರತ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮವಾಗಿ ಆರಂಭವಾಗಿರುವ, ನಾಲ್ಕು ಮನೆಗಳು ಹಾಗು ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್, ನಗದು, ಹೀಗೆ ಲಕ್ಷಾಂತರ ಬಹುಮಾನಗಳ ಸುರಿಮಳೆಯೇ ಇರುವ ಒಂದು ವಿಭಿನ್ನ ಸ್ಕೀಮ್ ಯೋಜನೆಯ ಹೆಸರೇ ಬ್ರೈಟ್ ಭಾರತ್. ಈ…
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕನ್ನಡಪರ ಹೋರಾಟಗಾರರು ಚಾಮರಾನಗರದಲ್ಲಿ ಕಳೆದ 50 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ ಬೇವಿನಸೊಪ್ಪು, ಸಿಹಿ ತಿಂಡಿ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಭುವನೇಶ್ವರಿ ವೃತ್ತದ ತನಕ ರ್ಯಾಲಿ ನಡೆಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಬೇವಿನಸೊಪ್ಪು, ಸಿಹಿ ಪ್ರದರ್ಶಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ನಿರ್ವಹಣಾ ಮಂಡಳಿ ತಮಿಳುನಾಡಿಗೆ ಸಿಹಿ ಕೊಟ್ಟು, ಕರ್ನಾಟಕದ ಪಾಲಿಗೆ ಕಹಿ ಕೊಟ್ಟು ಅನ್ಯಾಯ ಮಾಡಿದೆ ಎಂದು ಹೋರಾಟಗಾರರು ಆಕ್ರೋಶ ಹೊರಹಾಕಿದರು. ಕನ್ನಡ ರಾಜ್ಯೋತ್ಸವ ಸುವರ್ಣ ಮಹೋತ್ಸವದ ಸಿಹಿ ಒಂದೆಡೆಯಾದರೇ ತಮಿಳುನಾಡಿಗೆ ನೀರು ಹರಿಯುತ್ತಿರುವುದು ಕನ್ನಡಿಗರ ಪಾಲಿಗೆ ಕಹಿಯಾಗಿದೆ ಎಂದು ಕಿಡಿಕಾರಿದರು.