Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಉಡುಪಿ: ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ನಂಬಿಸಿ ಐದು ಲಕ್ಷ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಡಿ ವಾರೆಂಟ್ ಮೂಲಕ ಕುಂದಾಪುರ ಮೂಲದ ಚೈತ್ರಾಳನ್ನು ವಿಚಾರಣೆಗಾಗಿ ಮಂಗಳವಾರ ಬ್ರಹ್ಮಾವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪೊಲೀಸರು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೇಳಿದ್ದು ಕೋರ್ಟ್ ಒಂದು ದಿನ ಮಾತ್ರ ಕಸ್ಟಡಿಗೆ ನೀಡಿದ್ದರಿಂದ ವಿಚಾರಣೆ ನಡೆಸಿ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಚೈತ್ರಾಳನ್ನು ಪೊಲೀಸ್ ಕಸ್ಟಡಿಗೆ ಪಡೆದ ಕೋಟ ಪೊಲೀಸರು ಮಂಗಳವಾರ ಬೆಂಗಳೂರಿನಿಂದ ಕೋಟಕ್ಕೆ ಕರೆತಂದಿದ್ದರು. ಬ್ರಹ್ಮಾವರ ಸಿಪಿಐ ದಿವಾಕರ್ ಪಿಎಂ ನೇತೃತ್ವದಲ್ಲಿ ಕೋಟ ಪಿಎಸ್ಐ ಶಂಭುಲಿಂಗಯ್ಯ ತಂಡ ವಿಚಾರಣೆ ನಡೆಸಿದ್ದು ಆಕೆಯಿಂದ ಹೇಳಿಕೆ ಪಡೆಯಲಾಗಿದೆ. ಕೋಟ ಠಾಣೆಯಲ್ಲಿ ಈ ಹಿಂದೆ ಸುಧೀನ ಎನ್ನುವರು ನೀಡಿದ ದೂರಿನ ಕುರಿತಂತೆ ದಿನವಿಡೀ ವಿಚಾರಣೆ ನಡೆಸಲಾಗಿದೆ. ವಿಚಾರಣೆ ಪೂರ್ಣಗೊಂಡ ಬಳಿಕ ಚೈತ್ರಾಳನ್ನು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಕ ದಂಡಾಧಿಕಾರಿ ನ್ಯಾಯಾಲಯ ಸಂಚಾರಿಪೀಠ…
ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು. ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು. ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ…
ಕಡಲೆಕಾಯಿ (ಶೇಂಗಾ) ಎಷ್ಟು ಆರೋಗ್ಯಕ್ಕೆ ಒಳ್ಳೆಯದೋ, ಅಷ್ಟೇ ಆರೋಗ್ಯಕ್ಕೆ ಹಾನಿಯೂ ಹೌದು. ಇವುಗಳನ್ನು ಹೆಚ್ಚು ತಿನ್ನುವುದರಿಂದ ಕಬ್ಬಿಣ, ಮ್ಯಾಂಗನೀಸ್, ಸತು ಮತ್ತು ಕ್ಯಾಲ್ಸಿಯಂನಂತಹ ಇತರ ಖನಿಜಗಳ ಹೀರಿಕೊಳ್ಳುವಿಕೆಗೆ ಅಡ್ಡಿಯಾಗಬಹುದು. ಅವು ತೂಕ ನಷ್ಟಕ್ಕೂ ಅಡ್ಡಿಯಾಗುತ್ತವೆ. ಜೀರ್ಣಕಾರಿ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅದರಲ್ಲೂ ಅಲರ್ಜಿ ಸಮಸ್ಯೆ ಇರುವವರು ಇವುಗಳನ್ನು ತಿನ್ನಬಾರದು. ತಿಂದರೆ ಗಂಟಲು ನೋವು, ಚರ್ಮದ ಸಮಸ್ಯೆ, ಮೂಗು ಸೋರುವಿಕೆ, ಜೀರ್ಣಕ್ರಿಯೆ, ಉಸಿರಾಟದ ತೊಂದರೆ ಮುಂತಾದ ಸಮಸ್ಯೆಗಳು ಬರುತ್ತವೆ.
ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ಡಿಕೆಶಿ ತಿಹಾರ್ ಜೈಲಿನಲ್ಲಿ ಸೋನಿಯಾಗೆ ಧಮ್ಕಿ ಹಾಕಿದ್ದಾನೆ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಸಿಡಿ ವಿಚಾರವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಸರ್ಕಾರ ನಮ್ಮ ಅರ್ಜಿ ನೆಗ್ಲೆಟ್ ಮಾಡಿದ್ರೆ, ಹೈಕೋರ್ಟ್, ಸುಪ್ರೀಂ ಕೋರ್ಟ್ ಹೋಗುತ್ತೇನೆ ಎಂದರು.
ರಾಧನಾಥ್ ಸಿಕ್ಸರ್ ಅವರು 1852ರಲ್ಲಿ ಮೌಂಟ್ ಎವರೆಸ್ಟ್ ನ ಎತ್ತರವನ್ನು ಕಂಡುಹಿಡಿದ ವ್ಯಕ್ತಿ. ದಕ್ಷಿಣ ಕೊರಿಯಾದಲ್ಲಿ 20 ರಿಂದ 28 ವರ್ಷದೊಳಗಿನ ಪ್ರತಿಯೊಬ್ಬ ಪುರುಷನೂ ಕೂಡ ಸೇನೆಯಲ್ಲಿ 20 ತಿಂಗಳ ಕಾಲ ತೊಡಗಿಸಿಕೊಂಡಿರಬೇಕು. ಅಂದರೆ ಕೆ-ಪೋಪ್ ಸ್ಟಾರ್ ಗಳು ಸಹ ಸೇನೆಗೆ ಸೇರಬೇಕು. ಜಪಾನ್ ದೇಶದಲ್ಲಿ ಕೈತೊಳೆಯಲು ಬಳಸಿದ ನೀರನ್ನೇ ಟಾಯ್ಲೆಟ್ ಫ್ರೆಶ್ ಮಾಡಲು ಬಳಸುತ್ತಾರೆ. ಕರ್ನಾಟಕದಲ್ಲಿ ಹಣದ ನೋಟು ಮುದ್ರಣಾಲಯವನ್ನು ಹೊಂದಿರುವ ಏಕೈಕ ನಗರ ಮೈಸೂರು.
ಕುವೆಂಪು ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಲ್ಲಿ ತಾಲೂಕಿನ ಕುಪ್ಪಳ್ಳಿಯಲ್ಲಿ ಜನಿಸಿದರು. ತಂದೆ ವೆಂಕಟಪ್ಪ ತಾಯಿ ಸೀತಮ್ಮ. ಇವರು ಭಾರತೀಯ ಕವಿ, ನಾಟಕಕಾರ, ಕಾದಂಬರಿಕಾರ ಮತ್ತು ವಿಮರ್ಶಕ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ, ಕರ್ನಾಟಕ ರಾಜ್ಯ ಗೀತೆ ‘ಜಯ ಭಾರತ ಜನನಿಯ ತನುಜಾತೆ’ ಬರೆದ ಕೀರ್ತಿಗೆ ಕುವೆಂಪು ಭಾಜನರಾಗಿದ್ದಾರೆ. ಪ್ರಸಿದ್ಧ ಹಿಂದೂ ಮಹಾಕಾವ್ಯ ರಾಮಾಯಣವನ್ನು ಆಧರಿಸಿದ ಮಹಾಕಾವ್ಯ ‘ಶ್ರೀ ರಾಮಾಯಣ ದರ್ಶನಂ’ ಮತ್ತು ‘ಕಾನೂರು ಹೆಗ್ಗಡಿತಿ’ (ಕಾನೂರಿನ ಮಾಲೀಕ) ನಂತಹ ಕಾದಂಬರಿಗಳು ಅವರ ಅತ್ಯುತ್ತಮ ಕೃತಿಗಳಲ್ಲಿ ಸೇರಿವೆ. ಕುವೆಂಪು ಅವರು ನವೆಂಬರ್ 11 ರಂದು 1994 ರಲ್ಲಿ ನಿಧನರಾದರು.
ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅಂದರೆ ಕನ್ನಡ ಸಾಹಿತ್ಯದ ನಿಜವಾದ ಸಾಕ್ಷಿ ಪ್ರಜ್ಞೆ, ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು. ಶ್ರೇಷ್ಠ ಗ್ರಾಮೀಣ ಸೊಗಡಿನ ಕುಂದಾನಗರಿಯ ವರಕವಿ ಬೇಂದ್ರೆಯವರು ಜೀವನದಲ್ಲಿ ನೊಂದು, ಬೆಂದು ಬಳಲಿದವರಾದರೂ ಕಾವ್ಯದ ಮೂಲಕವಾಗಿ ಮಿಂಚಿದ ರತ್ನ. ಜೀವನದಲ್ಲಿ ಮಕ್ಕಳ ಸಾವು, ಪತ್ನಿಯ ಸಾವು ಬೆಂದ್ರೆಯವರಿಗೆ ಅತೀವ ದುಃಖವನ್ನುಂಟು ಮಾಡಿದವು. ಆದರೂ ಇದಾವುದಕ್ಕೂ ಧೃತಿಗೆಡದೆ ಕೊರತೆಯ ಬದುಕಿನಲ್ಲಿಯೇ ಅಪಾರವಾದ ಶ್ರೇಷ್ಠ ಸಾಹಿತ್ಯ ಸಂಪತ್ತನ್ನು ನಿರ್ಮಾಣ ಮಾಡಿದ ಹೆಗ್ಗಳಿಕೆ ಬೇಂದ್ರಯವರಿಗೆ ಸಲ್ಲುತ್ತದೆ. ತಾವು ಬರೆಯುವುದಕ್ಕೂ, ಬದುಕುವುದಕ್ಕೂ ಸಂಬಂಧವೇ ಇಲ್ಲದಂತಿರುವ ಅನೇಕ ಕವಿ ಸಾಹಿತಿಗಳಿಗೆ ಬೇಂದ್ರೆಯವರ ಜೀವನ ಒಂದು ಪಾಠ. ಬೇಂದ್ರೆಯವರ ಜೀವನವೇ ಕಾವ್ಯ, ಕಾವ್ಯವೇ ಜೀವನ.
ದೇಶದಲ್ಲಿ ಇತ್ತೀಚೆಗೆ ರೈಲು ಅಪಘಾತಗಳು ಆತಂಕ ಮೂಡಿಸುತ್ತಿವೆ. ವಿಜಯನಗರದಲ್ಲಿ ಎರಡು ರೈಲುಗಳು ಡಿಕ್ಕಿ ಹೊಡೆದು ಸಂಭವಿಸಿದ ದುರಂತವನ್ನು ಮರೆಯುವ ಮುನ್ನವೇ ಇತ್ತೀಚೆಗೆ ಮತ್ತೊಂದು ರೈಲು ಅಪಘಾತ ಸಂಭವಿಸಿದೆ. ಸುಹೈಲ್ ದೇವ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಉತ್ತರ ಪ್ರದೇಶದ ಪ್ರಯಾಗರಾಜ್ ರೈಲು ನಿಲ್ದಾಣದ ಬಳಿ ಹಳಿತಪ್ಪಿದೆ. ನಿನ್ನೆ ರಾತ್ರಿ ನಡೆದ ಈ ಅವಘಡದಲ್ಲಿ ಎಂಜಿನ್ ಸೇರಿದಂತೆ ಇನ್ನೂ ಎರಡು ಬೋಗಿಗಳು ಹಳಿ ತಪ್ಪಿವೆ. ಆದರೆ ಯಾವುದೇ ಪ್ರಾಣ ಹಾನಿಯಾಗಿಲ್ಲ. ಅಪಘಾತಕ್ಕೆ ಕಾರಣ ತನಿಖೆ ನಡೆಸಲಾಗುತ್ತಿದೆ.
ಹಣದುಬ್ಬರದ ಬೇಗೆಯಲ್ಲಿ ಬಳಲಿದ್ದ ಜನತೆಗೆ ಬಿಗ್ ಶಾಕ್ ಸಿಕ್ಕಂತಾಗಿದೆ. ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ತಿಂಗಳ ಮೊದಲ ದಿನಾಂಕದಂದು ಗ್ಯಾಸ್ ಸಿಲಿಂಡರ್ ಬೆಲೆಗಳನ್ನು ಪರಿಷ್ಕರಿಸುತ್ತವೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 100 ರಿಂದ 103 ರೂಪಾಯಿವರೆಗೆ ಏರಿಕೆಯಾಗಿದ್ದು, ಇದು ಗೃಹ ಬಳಕೆ ಸಿಲಿಂಡರ್ ಬಳಕೆದಾರರಿಗೆ ಅನ್ವಯ ಆಗಲ್ಲ. ಇಂದಿನಿಂದಲೇ ಈ ಬೆಲೆ ಜಾರಿಗೆ ಬರಲಿದ್ದು, ಬೆಂಗಳೂರಿನಲ್ಲಿ 1,813 ರೂ. ಇದ್ದ ಗ್ಯಾಸ್ ಬೆಲೆ 1,914.50ರೂ.ಗೆ ತಲುಪಿದೆ.
ಬೆಂಗಳೂರು: ಹೊರರಾಜ್ಯ, ಹೊರದೇಶಗಳಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವ ಪರಭಾಷೆ ಮಾತನಾಡುವವರಿಗೆ ನಾವು ಕನ್ನಡ ಕಲಿಸಬೇಕು ಎಂದು ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಅವರು ವಿನಂತಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು “ಕನ್ನಡ ರಾಜ್ಯೋತ್ಸವ”ದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ದಿನದಿನವೂ ನಾವು ಕನ್ನಡದ ಒಂದಷ್ಟು ಪದಗಳನ್ನು ಕಳಕೊಳ್ಳುವ ಪರಿಸ್ಥಿತಿ ಇದೆ. ಬೆಂಗಳೂರಿನ ಕನ್ನಡಿಗರು ವಿಶಾಲ ಹೃದಯಿಗಳು. ಯಾರಾದರೂ ಕನ್ನಡ ಅಲ್ಪಸ್ವಲ್ಪ ಕಲಿತು ಮಾತನಾಡುತ್ತಿದ್ದರೂ ಅವರು ಕನ್ನಡದಲ್ಲಿ ಮಾತನಾಡಲು ಅವಕಾಶ ಕೊಡದೆ ಅವರ ಭಾಷೆಯಲ್ಲೇ ಮಾತನಾಡುತ್ತೇವೆ. ಅದನ್ನು ನಿಲ್ಲಿಸಿ ಕನ್ನಡದಲ್ಲೇ ಮಾತನಾಡಿ ಎಂದು ಮನವಿ ಮಾಡಿದರು. ಕಳೆದ ವರ್ಷ ಯಥೇಚ್ಛವಾಗಿ ಮಳೆ ಬಂದಿತ್ತು. ಈ ವರ್ಷ ಮಳೆಯ ಕೊರತೆ ಆಗಿದೆ. ಕೊರತೆಯ ಸಂದರ್ಭದಲ್ಲೂ ಕಾವೇರಿ ನದಿಯಲ್ಲಿ ನೀರಿಲ್ಲ. ನೀರಿನ ಪ್ರಮಾಣ ಅರ್ಧಕ್ಕೂ ಕಡಿಮೆಯಾಗಿದೆ. ಈ ನಡುವೆ ಸುಪ್ರೀಂ ಕೋರ್ಟಿನ ಸೂಚನೆಯಂತೆ ನಾವು 2600 ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು. ಸರಕಾರ ಕಾವೇರಿ…