Subscribe to Updates
Get the latest creative news from FooBar about art, design and business.
- ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
- ಪಾರ್ಟ್ಟೈಮ್ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
- ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
- ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
- ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
- ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
- ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
- ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
Author: admin
ಭಾರತೀಯ ಜನತಾ ಪಕ್ಷದ ವಿಚಾರವಾಗಿ ಹೆಚ್ಚು ತಲೆಕೆಡಿಸಿಕೊಳ್ಳಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ಬಿಜೆಪಿಯ ಪ್ರತಿಯೊಬ್ಬ ನಾಯಕರೂ ನಮ್ಮ ಬಗ್ಗೆ ಮಾತನಾಡುತ್ತಾರೆ. ಬಿಜೆಪಿಯವರಿಗೆ ನಮ್ಮ ಪಕ್ಷದ ಮೇಲೆ ಹೆಚ್ಚು ಆಸಕ್ತಿ ಇದ್ದಂತೆ ಕಾಣ್ತಿದೆ. ಅವರೆಲ್ಲರೂ ನಮ್ಮ ಪಕ್ಷಕ್ಕೆ ಬರ್ತಾರೇನೋ. ಅದಕ್ಕಾಗಿ ನಮ್ಮ ಪಕ್ಷದ ಬಗ್ಗೆ ಹೆಚ್ಚು ಚರ್ಚೆ ನಡೆಸುತ್ತಿದ್ದಾರೇನೋ? ಎಂದು ಬೆಂಗಳೂರಿನಲ್ಲಿ ಬಿಜೆಪಿ ವಿರುದ್ಧ ಸಚಿವ ಡಾ.ಜಿ. ಪರಮೇಶ್ವರ್ ಕಿಡಿಕಾರಿದರು.
ಬೆಳಗಾವಿ: ಡಿಕೆ ಶಿವಕುಮಾರ್ ಆದಷ್ಟು ಬೇಗನೆ ಮಾಜಿ ಮಂತ್ರಿ ಆಗುತ್ತಾರೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರ ‘ಕೆಲವೊಬ್ಬರು ಕೆಲಸ ಇಲ್ಲದಕ್ಕೆ ಇಂತಹ ಉಸಾಬರಿ ಮಾಡುತ್ತಿರುತ್ತಾರೆ ಎನ್ನುವ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ‘ಮೈ ತುಂಬಾ ಕೆಲಸ ಇದ್ದಾಗ ಯಾವುದೂ ನೆನಪು ಆಗುವುದಿಲ್ಲ. ಕೆಲಸ ಇಲ್ಲದ ಸಮಯದಲ್ಲಿ ಇಂತಹ ವಿಚಾರಗಳು ಬರುತ್ತಿರುತ್ತವೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲು ಹೋಗಲ್ಲ ಎಂದರು.
ಕರ್ನಾಟಕ ರಾಜ್ಯಕ್ಕೆ ಡಾ|| ಅಂಬೇಡ್ಕರ್ ನಾಮಕರಣ ಮಾಡಬೇಕೆಂದು ಮಾಜಿ ಸಚಿವ ಶಾಸಕ ರಮೇಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ಇಂದು ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ವಿಜಯಪುರ ಜಿಲ್ಲೆಯ ಹೆಸರನ್ನು ಜಗದ್ಗುರು ಬಸವೇಶ್ವರ ಹೆಸರಿನಲ್ಲಿ ಬದಲಾವಣೆ ಮಾಡಬೇಕೆಂದು ಸರ್ಕಾರ ಆಲೋಚನೆಯಲ್ಲಿದೆ ಎಂಬ ಪ್ರಶ್ನೆಗೆ, ಉತ್ತರಿಸಿದ ಮಾಜಿ ಸಚಿವ “ಇತಿಹಾಸ ಓದಿದ್ದೇವೆ. ಆದರೆ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮ್ಮ ಮಧ್ಯದಲ್ಲಿ ಇದ್ದು, ಸಮಾಜ ಬದಲಾವಣೆ ಮಾಡಿರುವಂತಹ ಮಹಾನ್ ಮಾನವತವಾದಿ ಆದ್ದರಿಂದ, ಕರ್ನಾಟಕ ರಾಜ್ಯಕ್ಕೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ನಾಡು ಎಂದು ನಾಮಕರಣ ಮಾಡಲು ನನ್ನ ಆಗ್ರಹ ಇದೆ.” ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕೋಲಾರದಲ್ಲಿ ಶ್ವೇತ ಬಣದ ನಾಗರಹಾವು (ಬಿಳಿ ನಾಗರಹಾವು) ಪತ್ತೆಯಾಗಿದೆ. ಕೋಲಾರದ ಮುನೇಶ್ವರ ನಗರದ ರವೀಂದ್ರ ಮನೆಯಲ್ಲಿ 6 ಅಡಿ ಉದ್ಧದ ಶ್ವೇತ ಬಣ್ಣದ ನಾಗರಹಾವು ಕಾಣಿಸಿಕೊಂಡಿತ್ತು. ಅಪರೂಪದ ಬಿಳಿನಾಗರ ಹಾವನ್ನು ನೋಡಲು ಜನ ಮುಗಿಬಿದ್ದಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಉರುಗರಕ್ಷಕ ರವಿ ನಾಗರವನ್ನು ಸುರಕ್ಷಿತವಾಗಿ ರಕ್ಷಿಸಿ, ಕೋಲಾರದ ಅಂತರಗಂಗೆ ಅರಣ್ಯಪ್ರದೇಶದಲ್ಲಿ ಬಿಟ್ಟಿದ್ದಾರೆ.
ಈ ಭಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಪ್ರಕಟ ಮಾಡಿದೆ. ಈಗಾಗಲೇ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿತ್ತು. ಈ ಬಾರಿ 68 ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿ ಸೇರಿ ಕರ್ನಾಟಕ ಸಂಭ್ರಮ 50 ವರ್ಷ ಎಂಬ 10 ಪ್ರಶಸ್ತಿ ನೀಡಲು ನಿರ್ಧರಿಸಿದೆ. ರಂಗಭೂಮಿ ಕ್ಷೇತ್ರದ ಆರು ಕಲಾವಿದರಿಗೆ ರಾಜ್ಯೊತ್ಸವ ಪ್ರಶಸ್ತಿ ನೀಡಲಾಗಿದ್ದು, ಎ.ಜಿ. ಚಿದಂಬರ ರಾವ್ ಜಂಬೆ ಪಿ. ಗಂಗಾಧರ ಸ್ವಾಮಿ, ಹೆಚ್.ಬಿ.ಸರೋಜಮ್ಮ, ತಯ್ಯಬಖಾನ್ ಎಂ.ಇನಾಮದಾರ, ಡಾ.ವಿಶ್ವನಾಥ್ ವಂಶಾಕೃತ ಮಠ ಹಾಗೂ ಪಿ.ತಿಪ್ಪೇಸ್ವಾಮಿ ಅವರಿಗೆ ನೀಡಲು ನಿರ್ಧರಿಸಿದೆ. ಚಲನಚಿತ್ರ ಕ್ಷೇತ್ರದಲ್ಲಿ ಇಬ್ಬರಿಗೆ ರಾಜ್ಯೊತ್ಸವ ಪ್ರಶಸ್ತಿ ಪ್ರಕಟವಾಗಿದೆ. ಡಿಂಗ್ರಿ ನಾಗರಾಜ್ ಮತ್ತು ಬಿ.ಜನಾರ್ಧನ್ (ಬ್ಯಾಂಕ್ ಜನಾರ್ಧನ್) ಅವರಿಗೆ ಪ್ರಶಸ್ತಿ ದೊರೆತಿದೆ. ಸಮಾಜಸೇವೆ ಕ್ಷೇತ್ರದಲ್ಲಿ 5 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ಹುಚ್ಚಮ್ಮ ಬಸಪ್ಪ ಚೌದ್ರಿ, ಚಾರ್ಮಾಡಿ ಹಸನಬ್ಬ, ಕೆ.ರೂಪಾ ನಾಯಕ್, ನಿಜಗುಣಾನಂದ ಸ್ವಾಮೀಜಿ…
ಕನ್ನಡ ದಿನವನ್ನು ಪ್ರತಿ ವರ್ಷ ನವೆಂಬರ್ 1 ರಂದು ಆಚರಿಸಲಾಗುತ್ತದೆ. 1956ರಲ್ಲಿ ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಕರ್ನಾಟಕ ರಾಜ್ಯವನ್ನು ರೂಪಿಸಿದ ದಿನ. ಇನ್ನು ರಾಜ್ಯೋತ್ಸವ ಪ್ರಶಸ್ತಿ ಬಗ್ಗೆ ತಿಳಿದುಕೊಳ್ಳುವುದಾದರೆ, ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯೋತ್ಸವದಂದು ಪ್ರಶಸ್ತಿಯನ್ನು ಪ್ರಕಟಿಸಲಾಗುವುದು. ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ಸರ್ಕಾರದಿಂದ ನೀಡಲಾಗುವ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಆಯ್ದು ಅವರಿಗೆ ಈ ಪ್ರಶಸ್ತಿ ನೀಡಲಾಗುವುದು. 1966ರಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊಡಲು ಪ್ರಾರಂಭಿಸಲಾಯಿತು. ಈ ಪ್ರಶಸ್ತಿಯನ್ನು ನವೆಂಬರ್ 1ರಂದು ರಾಜ್ಯದ ಮುಖ್ಯಮಂತ್ರಿಗಳು ಪ್ರದಾನ ಮಾಡುತ್ತಾರೆ. ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಗೌರವಧನ, 25 ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.
ನವೆಂಬರ್ 1 ಕನ್ನಡ ರಾಜ್ಯೋತ್ಸವದ ಸಂಭ್ರಮದ ದಿನ. ನವೆಂಬರ್ ಬಂತೆಂದರೆ ಕರ್ನಾಟಕದ ಮನೆ ಮನಗಳಲ್ಲಿ ಕನ್ನಡದ ಕಹಳೆ ಮೊಳಗುತ್ತದೆ. ಕರ್ನಾಟಕ ಹೇಗೆ ರೂಪುಗೊಂಡಿತು ಎನ್ನುವುದಕ್ಕೆ ಒಂದು ಇತಿಹಾಸವಿದೆ. ಹೌದು, ಏಕೀಕರಣ ಚಳುವಳಿ 19ನೇ ಶತಮಾನದ ಎರಡನೇ ಭಾಗದಲ್ಲಿ ಪ್ರಾರಂಭವಾಗಿ 1956ರ ರಾಜ್ಯ ಪುನರ್ ವಿಂಗಡಣೆ ಕಾಯಿದೆಯೊಂದಿಗೆ ಮುಕ್ತಾಯವಾಯಿತು. ಕರ್ನಾಟಕ ಏಕೀಕರಣದ ಕನಸನ್ನು ಬಿತ್ತಿ ಕನ್ನಡವನ್ನು ಸಮರ್ಥವಾಗಿ ಕಟ್ಟುವಲ್ಲಿ ಸರ್ ವಾಲ್ಟರ್ ಎಲಿಯಟ್, ಸರ್ ಥಾಮಸ್ ಮನೋ, ಗ್ರೀನ್ ಹಿಲ್ ಆರ್. ಗ್ರಾಂಟ್, ಡಬ್ಲ್ಯು. ಎ. ರಸೆಲ್, ಜೆ. ಎಫ್. ಪ್ಲೇಟ್ ರಂತಹ ಬ್ರಿಟಿಷ್ ಅಧಿಕಾರಿಗಳೂ ಕೂಡ ಕೆಲಸ ಮಾಡಿದರು. 1924ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ನೇತೃತ್ವದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಮಹಾಧಿವೇಶನ ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ಏಕೀಕರಣಕ್ಕೆ ಚಾಲನೆ ದೊರೆಯಿತು. ಹುಬ್ಬಳ್ಳಿಯ ಸಮೀಪದ ಅದರಗುಂಚಿಯಲ್ಲಿ ಶಂಕರಗೌಡ ಪಾಟೀಲರು 1953ರಂದು ಕರ್ನಾಟಕ ಏಕೀಕರಣಕ್ಕೆ ಆಗ್ರಹಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದರು. ಇದಾದ ಬಳಿಕ ಕರ್ನಾಟಕ ಏಕೀಕರಣಕ್ಕಾಗಿ ಜನಾಂದೋಲನ ಹೆಚ್ಚಿ, ನವೆಂಬರ್ 1, 1956ರಂದು…
ವಿಜಯಪುರ: ಒಂದೆಡೆ ಬರ ಮತ್ತೊಂದೆಡೆ ಸಾಲಬಾಧೆ ತಾಳಲಾರದೆ, ಬರ ಮತ್ತು ಸಾಲಬಾಧೆಯಿಂದ ಕಂಗೆಟ್ಟಿದ್ದ ರೈತನೊಬ್ಬ ನೇಣು ಬಿಗಿದುಕೊಂಡಘಟನೆ ನಡೆದಿದೆ. ಸಿಂದಗಿ ತಾಲೂಕಿನ ಸಿದ್ದನಗೌಡ ಬಿರಾದಾರ್ (32) ಮೃತ ದುರ್ದೈವಿ. ನಂದಗೇರಿ ಗ್ರಾಮದಲ್ಲಿ ಜಮೀನು ಹೊಂದಿದ್ದ ಈತ ಬೆಳೆಗಾಗಿ ಸಾಲ ಮಾಡಿದ್ದ. ಬೆಳೆಯೂ ಕೈಕೊಟ್ಟಿದ್ದರಿಂದ ತೀವ್ರವಾಗಿ ಖಿನ್ನತೆಗೀಡಾಗಿದ್ದ. ಖಾಸಗಿ ವ್ಯಕ್ತಿಗಳ ಬಳಿ ಮಾಡಿದ್ದ ಸುಮಾರು 6 ಲಕ್ಷ ರೂ. ಸಾಲವನ್ನು ಹಿಂದಿರುಗಿಸುವಂತೆ ಈತನನ್ನು ಪೀಡಿಸುತ್ತಿದ್ದರು. ಇದರಿಂದ ಬೇಸತ್ತ ರೈತ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಸಿಂದಗಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭೋಪಾಲ್: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವಂತೆಯೇ ರಾಜ್ಯದಲ್ಲಿಯೂ ಅಕ್ರಮ ಮದ್ಯ ಸಾಗಾಟ ಆರಂಭವಾಗಿದೆ. ಭಾನುವಾರ ರಾತ್ರಿ ರಾಜ್ ಗಢ ಜಿಲ್ಲೆಯ ಮಚಲ್ ಪುರ ಪೊಲೀಸರು 80 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳಸಾಗಣೆದಾರರು ಪಂಜಾಬ್ ಮತ್ತು ಹರಿಯಾಣದಿಂದ ಇಂದೋರ್ ಗೆ ಮದ್ಯವನ್ನು ಸಾಗಿಸುತ್ತಿದ್ದರು. ತೆಲುಗಿನ ‘ಪುಷ್ಪ’ ಚಿತ್ರದಿಂದ ಪ್ರೇರಿತರಾದ ಕಳ್ಳಸಾಗಾಣಿಕೆದಾರರು,‘ಪುಷ್ಪ’ ಸಿನಿಮಾದ ಶೈಲಿಯಲ್ಲಿಯೇ ಇಡೀ ಮದ್ಯದ ಕಳ್ಳಸಾಗಣೆ ನಡೆಯುತ್ತಿತ್ತು. ಹುಲ್ಲು ತುಂಬಿದ ಲಾರಿಯಲ್ಲಿ ಹಿಂಬದಿಯಲ್ಲಿ ಪ್ರತ್ಯೇಕವಾಗಿ ಕಬ್ಬಿಣದ ಜಾಲರಿ ಬೆಸೆದು ಅದರಲ್ಲಿ ಮದ್ಯದ ಬಾಕ್ಸ್ ಗಳನ್ನು ಇಟ್ಟು ಸಾಗಿಸಲಾಗುತ್ತಿತ್ತು. ಇವುಗಳನ್ನು ಒಣಹುಲ್ಲಿನ ಚೀಲಗಳ ಹಿಂದೆ ಮರೆಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಟ್ರಕ್ ಚಾಲಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಚಾಲಕನನ್ನು ವಿಚಾರಣೆಗೊಳಪಡಿಸಿದ ಬಳಿಕವಷ್ಟೇ ಈ ಅಕ್ರಮ ಮದ್ಯ ದಂಧೆಯಲ್ಲಿ ತೊಡಗಿರುವ ಇತರ ಆರೋಪಿಗಳನ್ನು ಹಿಡಿಯಲು ಸಾಧ್ಯವಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮದ್ಯವು ಮಧ್ಯಪ್ರದೇಶದ ಒಂದು ಅಥವಾ…
ಮುಂದಿನ ತಿಂಗಳಿನಿಂದ ಮೇ 2024 ರವರೆಗೆ ಭಾರತ ಮತ್ತು ತೈವಾನ್ ನ ಪ್ರಯಾಣಿಕರಿಗೆ ವೀಸಾ ಅವಶ್ಯಕತೆಗಳನ್ನು ಮನ್ನಾ ಮಾಡುವ ಮೂಲಕ ಹೆಚ್ಚಿನ ಪ್ರವಾಸಿಗರನ್ನು ಸ್ವಾಗತಿಸಲು ಥೈಲ್ಯಾಂಡ್ ಯೋಜಿಸುತ್ತಿದೆ. ಈ ನಿರ್ಧಾರವು ಹೆಚ್ಚಿನ ಋತುವಿನ ಸಮೀಪಿಸುತ್ತಿರುವಂತೆ ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಏನಾಯಿತು: ಥೈಲ್ಯಾಂಡ್ ಈ ಹಿಂದೆ ಸೆಪ್ಟೆಂಬರ್ ನಲ್ಲಿ ಚೀನೀ ಪ್ರವಾಸಿಗರಿಗೆ ವೀಸಾ ಅವಶ್ಯಕತೆಗಳನ್ನು ತೆಗೆದುಹಾಕಿತು. ಇದು ಸಾಂಕ್ರಾಮಿಕ ರೋಗದ ಮೊದಲು ಚೀನಾ ಥೈಲ್ಯಾಂಡ್ ನ ಪ್ರಾಥಮಿಕ ಪ್ರವಾಸೋದ್ಯಮ ಮಾರುಕಟ್ಟೆಯಾಗಿದ್ದು, 2019 ರಲ್ಲಿ ದಾಖಲೆಯ 39 ಮಿಲಿಯನ್ ಆಗಮನಗಳಲ್ಲಿ 11 ಮಿಲಿಯನ್ ಕೊಡುಗೆಯನ್ನು ನೀಡಿದ ಮಹತ್ವದ ಹೆಜ್ಜೆಯಾಗಿದೆ. ಜನವರಿಯಿಂದ ಅಕ್ಟೋಬರ್ 29 ರವರೆಗೆ, ಥಾಯ್ಲೆಂಡ್ 22 ಮಿಲಿಯನ್ ಸಂದರ್ಶಕರನ್ನು ಸ್ವಾಗತಿಸಿದೆ. ಭಾರತ ಮತ್ತು ತೈವಾನ್ನಿಂದ ಆಗಮಿಸುವವರು ವೀಸಾ ಅಗತ್ಯವಿಲ್ಲದೇ 30 ದಿನಗಳವರೆಗೆ ಥೈಲ್ಯಾಂಡ್ಗೆ ಪ್ರವೇಶಿಸಬಹುದು ಎಂದು ಥೈಲ್ಯಾಂಡ್ ನ ಸರ್ಕಾರದ ವಕ್ತಾರ ಚೈ ವಾಚರೋಂಕೆ ಹೇಳಿದ್ದಾರೆ.